Author: admin
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಡಳಿತ ಮಂಡಳಿಗೆ ಅಧಿಕಾರೇತರ ಸದಸ್ಯರನ್ನಾಗಿ ಕೋಡಿಂಬಾಡಿ ಗ್ರಾಮದ ಜಗನ್ನಾಥ ಶೆಟ್ಟಿ ನಡುಮನೆ ಅವರನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರ ನಾಮನಿರ್ದೇಶನ ಮಾಡಿ ಆದೇಶಿಸಿದೆ. ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ರ ಪ್ರಕರಣ 28 ಎ ಉಪ ಪ್ರಕರಣ (4ಬಿ) (1)ರ ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರಕಾರ ಈ ಆದೇಶ ಹೊರಡಿಸಿದೆ. ನಾಮನಿರ್ದೇಶನವು ಕೂಡಲೇ ಜಾರಿಗೆ ಬರಲಿದ್ದು, ಸರಕಾರದ ಮುಂದಿನ ಆದೇಶದವರೆಗೆ ಮುಂದುವರೆಯಲಿದೆ. ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸಹಕಾರ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ- 3 ರಂಗನಾಥ ಜಿ ಅವರು ಮೇ 30ರಂದು ಅಧಿಸೂಚನೆ ಹೊರಡಿಸಿದ್ದಾರೆ. ಜಗನ್ನಾಥ ಶೆಟ್ಟಿ ಅವರು ಎರಡು ಬಾರಿ ಕೋಡಿಂಬಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ ಚುನಾಯಿತರಾಗಿದ್ದು, ಪ್ರಸ್ತುತ ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿದ್ದಾರೆ. ವಲಯ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ,…
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಹಾಗೂ ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ. ಉದಯ್ ಶೆಟ್ಟಿ ಮುನಿಯಾಲು ಮಾತನಾಡಿ, ‘ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಉಳಿವು ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರಕಾರದ ವತಿಯಿಂದ ತುಳು ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಬೇಕೆಂದು ಸಿ.ಎಂಗೆ ಮನವಿ ಸಲ್ಲಿಸಿದ್ದೇನೆ’ ಎಂದರು. ತುಳು ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಪ್ರಾಚೀನ ದ್ರಾವಿಡ ಭಾಷೆಯಾಗಿದ್ದು, ಲಕ್ಷಾಂತರ ಜನರ ಮಾತೃ ಭಾಷೆಯಾಗಿದೆ. ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಜೀವನ ಶೈಲಿಯ ಅವಿಭಾಜ್ಯ ಅಂಗ ತುಳು. ಜಾಗತೀಕರಣದ ಪರಿಣಾಮ ಪ್ರಾದೇಶಿಕ ಭಾಷೆಗಳ ಬಳಕೆ ಕಡಿಮೆಯಾಗುತ್ತಿರುವ ಸಂದರ್ಭ ತುಳು ಭಾಷೆಯ ಸಂರಕ್ಷಣೆ ಮತ್ತು ಅಭಿವೃದ್ಧಿಯ ಅಗತ್ಯತೆ ಹೆಚ್ಚಾಗಿದೆ ಎಂದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ, ಪ್ರಸಿದ್ಧ ಸಮಾಜಸೇವಕ ಹಾಗೂ ಉದ್ಯಮಿ ಬರೋಡ ಶಶಿಧರ್ ಶೆಟ್ಟಿ ಅವರ ವತಿಯಿಂದ ದೇವನಾರಿ ಬಂಗಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 60 ವಿದ್ಯಾರ್ಥಿಗಳಿಗೆ ಉಚಿತ ಯೂನಿಫಾರ್ಮ್ (ಟಿ-ಶರ್ಟ್ ಮತ್ತು ಪ್ಯಾಂಟ್) ವಿತರಿಸಲಾಯಿತು. ತಮ್ಮ ಪ್ರೀತಿಯ ತಾಯಿ ದಿವಂಗತ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ ಶಶಿಧರ್ ಶೆಟ್ಟಿ ಅವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಈ ಯೂನಿಫಾರ್ಮ್ಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಉದ್ಯಮಿಯ ಈ ಸಮಾಜಮುಖಿ ಕಾರ್ಯವು ವಿದ್ಯಾರ್ಥಿಗಳಲ್ಲಿ ಹರ್ಷ ಮೂಡಿಸಿದೆ. ಈ ಉಚಿತ ಯೂನಿಫಾರ್ಮ್ ವಿತರಣೆಯ ಸಂಪೂರ್ಣ ಉಸ್ತುವಾರಿ ಮತ್ತು ವ್ಯವಸ್ಥೆಯನ್ನು ಕುವೆಟ್ಟು ಗ್ರಾಮ ಪಂಚಾಯತ್ನ ಮಾಜಿ ಉಪಾಧ್ಯಕ್ಷರಾದ ಪ್ರದೀಪ್ ಶೆಟ್ಟಿ ಅವರು ಅಚ್ಚುಕಟ್ಟಾಗಿ ಮಾಡಿಕೊಟ್ಟರು. ದಾನಿಗಳ ಪರವಾಗಿ ಅವರೇ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಯೂನಿಫಾರ್ಮ್ಗಳನ್ನು ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ (SDMC) ಸದಸ್ಯರು ದಾನಿ ಬರೋಡ ಶಶಿಧರ್ ಶೆಟ್ಟಿ ಅವರ…
ಪ್ರತಿಭೆ, ಸಾಮರ್ಥ್ಯ ಹಾಗೂ ಕಲಿಯುವ ಆಸಕ್ತಿ ಹೊಂದಿರುವವರಿಗೆ ಇಂದಿನ ಸಮಾಜದಲ್ಲಿ ಆರ್ಥಿಕ ಹಿನ್ನೆಲೆ ಅಡ್ಡಿಯಾಗುವುದಿಲ್ಲ. ಸಾರ್ವಜನಿಕ ಜೀವನದಲ್ಲಿ ಉತ್ತಮ ಕೆಲಸ ಮಾಡುವವರನ್ನು ಗುರುತಿಸಿ, ಗೌರವಿಸಿ, ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕೋಟೇಶ್ವರದ ಯುವ ಮೆರಿಡಿಯನ್ ಗ್ರ್ಯಾಂಮಿ ಬಾಲ್ರೂಮ್ನಲ್ಲಿ ಭಾನುವಾರ ನಡೆದ ‘ಸೇವಾ ಸಂಕಲ್ಪ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಕಾರ್ಯಕ್ರಮವನ್ನು ಶ್ರೀ ಕೃಷ್ಣಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಹಾಗೂ ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್, ವಂಡಾರು-ಬ್ರಹ್ಮಾವರ ವತಿಯಿಂದ ಆಯೋಜಿಸಲಾಗಿತ್ತು. ಸಮಾಜದ ಅಭಿವೃದ್ಧಿಗೆ ದೂರದೃಷ್ಟಿಯ ನಾಯಕತ್ವ ಅಗತ್ಯವಾಗಿದ್ದು, ಟಿ.ಎ. ಪೈ, ಶ್ರೀನಿವಾಸ ಮಲ್ಯ ಹಾಗೂ ಜಾರ್ಜ್ ಫೆರ್ನಾಂಡಿಸ್ ಅವರಂತಹ ನಾಯಕರು ರೂಪಿಸಿದ ದಾರಿಯ ಫಲವಾಗಿ ಇಂದು ಕರಾವಳಿ ಭಾಗವು ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದೆ ಎಂದು ಅವರು ಹೇಳಿದರು. ಜಿಲ್ಲೆಯಲ್ಲಿ ಪ್ರತಿಭಾವಂತರ ಸಂಖ್ಯೆ ಹೆಚ್ಚಿದ್ದು, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಜನರು ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು. ಶ್ರೀ ಕೃಷ್ಣಪ್ರಸಾದ್ ಗ್ರೂಪ್ ಆಫ್…
ಬಂಟ ಸಮಾಜದ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳನ್ನು ಹೊರತರಲು ಹಾಗೂ ಅವರಿಗೆ ಸೂಕ್ತ ಅವಕಾಶಗಳನ್ನು ಒದಗಿಸಿ ಸ್ಫೂರ್ತಿ ನೀಡಲು ಕಳೆದ 18 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬಂಟ್ಸ್ ನೌ ಮಾಧ್ಯಮ ಸಂಸ್ಥೆಯು ಮೇ 16 ರಂದು 100 ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಮಾಧ್ಯಮ ಸಂಸ್ಥೆಯ ಕಚೇರಿಯಲ್ಲಿ ನಡೆಯಲಿದೆ. ಬಡ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದ್ದು, ಶಾಲಾ ಶುಲ್ಕ, ಸಮವಸ್ತ್ರ, ಪುಸ್ತಕಗಳು ಮತ್ತು ಇತರ ಶೈಕ್ಷಣಿಕ ಸಾಮಗ್ರಿಗಳನ್ನು ದಾನಿಗಳ ಮುಖಾಂತರ ನಿಧಿ ಸಂಗ್ರಹಿಸಿ ಸಂಸ್ಥೆ ಭರಿಸಲಿವೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಸಂಪೂರ್ಣ ಶೈಕ್ಷಣಿಕ ಜವಾಬ್ದಾರಿಯನ್ನು ಹೊರುವ ವ್ಯವಸ್ಥೆಯೂ ಇದೆ.
ಉತ್ತಮ ಆರೋಗ್ಯ ಸೇವೆ ಪ್ರತಿಯೊಬ್ಬರಿಗೂ ಲಭ್ಯವಾಗಿ ಆರೋಗ್ಯವಂತ ಸಮಾಜ ನಿರ್ಮಾಣವಾಗಬೇಕು. ಆರೋಗ್ಯ, ಶಿಕ್ಷಣ, ಪರಿಸರ ಮೂಲ ಸೌಕರ್ಯ ಒದಗಿಸಲು ಎಂ.ಆರ್.ಪಿ.ಎಲ್ ಆದ್ಯತೆ ನೀಡುತ್ತಿದೆ ಎಂದು ಎಮ್.ಆರ್.ಪಿ.ಎಲ್ ವಿಭಾಗದ ಜನರಲ್ ಮ್ಯಾನೇಜರ್ ಮಂದಾರ ಕಾಳೆ ಹೇಳಿದರು. ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂ.ಆರ್.ಪಿ.ಎಲ್ ಸಿ.ಎಸ್.ಆರ್ ಅನುದಾನದಲ್ಲಿ ಸುರತ್ಕಲ್ ರೋಟರಿ ಕ್ಲಬ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮತ್ತು ಸುರತ್ಕಲ್ ರೋಟರಿ ಕ್ಲಬ್ ರೂಪಿಸಿರುವ ನವೀಕೃತ ಮೆಡಿಸಿನ್ ಸ್ಟೋರೇಜ್ ಕೊಠಡಿಯನ್ನು ಅವರು ಉದ್ಘಾಟಿಸಿ ಮಾತನಾಡಿದರು. ರೋಟರಿ ಕ್ಲಬ್ 3181 ವಲಯ 2ರ ಅಸಿಸ್ಟೆಂಟ್ ಗವರ್ನರ್ ಸಿಎ ಶಾಂತರಾಮ ಶೆಟ್ಟಿ ಮಾತನಾಡಿ, ಬಾಲ್ಯ ಮತ್ತು ವೃದ್ಧಾಪ್ಯದಲ್ಲಿ ಕಾಳಜಿ ಅಗತ್ಯ. ಹಿರಿಯ ನಾಗರಿಕರಿಗೆ ಆರೋಗ್ಯ ಸೇವಾ ಕೇಂದ್ರಗಳ ಅವಶ್ಯಕತೆ ಇದೆ. ಸುಸಜ್ಜಿತ ಔಷಧ ಶೇಖರಣ ಕೊಠಡಿಯಿಂದ ಉತ್ತಮ ಸೇವೆ ಸಾಧ್ಯ ಎಂದರು. ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಡಾ. ಭಾಸ್ಕರ ಕೋಟ್ಯಾನ್ ಮಾತನಾಡಿ, ಉದ್ಯಮ ಹಾಗೂ ಸಾಮಾಜಿಕ ಸಂಸ್ಥೆಗಳ ಸಹಯೋಗದಿಂದ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ ಎಂದರು. ಫಾರ್ಮಸಿಸ್ಟ್…
ಅಲಯನ್ಸ್ ಕ್ಲಬ್ ಮಂಗಳೂರಿನ ಸಭೆಯು ಇತ್ತೀಚೆಗೆ ಹೋಟೆಲ್ ಶಂಕರ್ ಭವನ ಹೋಟೆಲಿನಲ್ಲಿ ಅಲಯನ್ಸ್ ಕ್ಲಬ್ ಮಂಗಳೂರಿನ ಅಧ್ಯಕ್ಷರಾದ ಅಲೈ ಸನ್ಮತ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. 2026 -27ರ ಸಾಲಿನ ನೂತನ ಅಧ್ಯಕ್ಷರಾಗಿ ಅಲೈ ಜಿ.ಕೆ ಹರಿಪ್ರಸಾದ ರೈ ಕಾರಮೊಗರು ಗುತ್ತುರವರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು. ನೂತನ ಕಾರ್ಯದರ್ಶಿಯಾಗಿ ಅಲೈ ವಿಶ್ವನಾಥ ಶೆಟ್ಟಿ, ಉಪಾಧ್ಯಕ್ಷರಾಗಿ ಅಲೈ ಪ್ರಶಾಂತ್ ಆಳ್ವ, ಕೋಶಾಧಿಕಾರಿಯಾಗಿ ಅಲೈ ಮಾಧವ ಉಲ್ಲಾಳ, ಜೊತೆ ಕಾರ್ಯದರ್ಶಿಯಾಗಿ ಅಲೈ ಸುಧಾಕರ್ ಬಿ, ಸಾರ್ವಜನಿಕ ಮಾರ್ಕೆಟಿಂಗ್ ಸಂಪರ್ಕ ಅಧಿಕಾರಿಯಾಗಿ ಅಲೈ ಸಂತೋಷ ಆಳ್ವ, ಸದಸ್ಯತ್ವ ಅಧಿಕಾರಿಯಾಗಿ ಅಲೈ ರಂಜಿತ್ ಶೆಟ್ಟಿ, ಲೀಡರ್ ಶಿಪ್ ಅಧಿಕಾರಿಯಾಗಿ ಅಲೈ ಡಾ| ರಾಜೇಶ್ ಆಳ್ವ, ಸಾಮಾಜಿಕ ಅಧಿಕಾರಿಯಾಗಿ ಅಲೈ ಡಾ. ಶರತ್ ಶೆಟ್ಟಿ, ಬೋರ್ಡ್ ಆಫ್ ನಿರ್ದೇಶಕರಾಗಿ ಅಲೈ ಅಲಿಸ್ಟನ್, ಅಲೈ ಅಭಿಷೇಕ್, ಅಲೈ ಆಶೀಶ್, ಅಲೈ ವಿಜಯಕುಮಾರ್ ಶೆಟ್ಟಿ, ಅಲೈ ಸತೀಶ್ ಭಂಡಾರಿ, ಅಲೈ ರೂಪೇಶ, ಅಲೈ ಪ್ರವೀಣ್ ಮುಂತಾದವರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಗೊಂಡರು ಎಂದು ಅಲಯನ್ಸ್…
ಬಂಟರ ಸಂಘ (ರಿ) ಸುರತ್ಕಲ್ ಇದರ 26ನೇ ವಾರ್ಷಿಕ ಮಹಾಸಭೆ, ಅಭಿನಂದನೆ, ಸಹಾಯಹಸ್ತ, ವಿದ್ಯಾರ್ಥಿ ವೇತನ, ದತ್ತಿ ನಿಧಿ ಹಾಗೂ ಸಮೂಹ ನೃತ್ಯ ಸ್ಪರ್ಧೆ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ. ಅಜಿತ್ ಕುಮಾರ್ ರೈ ಮಾಲಾಡಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿ, ‘ಬಂಟ ಸಮಾಜ ಇಂದು ಬಹಳಷ್ಟು ಮುಂದುವರಿದಿದೆ. ಮಕ್ಕಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ಇಂದು ಅದೇ ವಿದ್ಯೆ ನಮ್ಮ ಸಮಾಜಕ್ಕೆ ಶಾಪ ಆಗುತ್ತಿದೆಯಾ ಅನ್ನುವ ಸಂಶಯ ಕಾಡುತ್ತಿದೆ. ಯಾಕೆಂದರೆ ಮಕ್ಕಳು ವಿದ್ಯೆ ಪಡೆದು ವಿದೇಶ ಸೇರಿದರೆ ಮನೆ ನಿರ್ವಹಣೆ ಇಲ್ಲದೇ ಪಾಳು ಬೀಳುತ್ತಿದೆ. ಹೆತ್ತವರು ಒಂಟಿಯಾಗುತ್ತಿದ್ದಾರೆ. ಇದು ಸರಿಯಲ್ಲ. ನಮ್ಮ ಸಮಾಜ ಈ ಬಗ್ಗೆ ತುರ್ತು ಗಮನಿಸಬೇಕು. ಮಕ್ಕಳಿಗೆ ಶಿಕ್ಷಣದ ಜೊತೆ ಉತ್ತಮ ಸಂಸ್ಕಾರವನ್ನು ನೀಡಬೇಕು. ಹುಟ್ಟಿ ಬೆಳೆದ ಮನೆ, ಹೆತ್ತವರು ಮತ್ತು ಊರನ್ನು ಮಕ್ಕಳು ಮರೆಯಬಾರದು. ತಾವು ದುಡಿದ ಒಂದಂಶವನ್ನು ಸಮಾಜಕ್ಕೆ…
ಭಾರತೀಯ ಮಾಸ್ಟರ್ಸ್ ವೇಟ್ ಲಿಫ್ಟಿಂಗ್ ಫೆಡರೇಶನ್ ಜರ್ಮನಿಯಲ್ಲಿ ನಡೆದ ಜರ್ಮನಿ ಓಪನ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ದೇಶವನ್ನು ಹೆಮ್ಮೆಯಿಂದ ಪ್ರತಿನಿಧಿಸಿ ಗಮನಾರ್ಹ ಸಾಧನೆ ಮಾಡಿದೆ. ಭಾರತೀಯ ತಂಡವು ಒಟ್ಟು ಎಂಟು ಪದಕಗಳನ್ನು ಗೆದ್ದು ರಾಷ್ಟ್ರದ ಕೀರ್ತಿಯನ್ನು ಹೆಚ್ಚಿಸಿದೆ. ಈ ಅದ್ಭುತ ಸಾಧನೆಯನ್ನು ಗುರುತಿಸಿ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವಿಯ ಅವರು ಭಾರತೀಯ ಮಾಸ್ಟರ್ಸ್ ವೇಟ್ ಲಿಫ್ಟಿಂಗ್ ತಂಡವನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಫೆಡರೇಶನ್ ನ ಪ್ರಧಾನ ಕಾರ್ಯದರ್ಶಿ ಉದಯ ಶೆಟ್ಟಿ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು. ಕ್ರೀಡಾಪಟುಗಳೊಂದಿಗೆ ನಡೆದ ಸಂವಾದದಲ್ಲಿ ಡಾ. ಮಾಂಡವಿಯ ಅವರು ಭವಿಷ್ಯದ ಸ್ಪರ್ಧೆಗಳಿಗೆ ಶುಭ ಹಾರೈಸಿ ಭಾರತದಲ್ಲಿ ಮಾಸ್ಟರ್ಸ್ ವೇಟ್ ಲಿಫ್ಟಿಂಗ್ ಕ್ರೀಡೆಯ ಅಭಿವೃದ್ಧಿ ಮತ್ತು ಉತ್ತೇಜನಕ್ಕಾಗಿ ಕೇಂದ್ರ ಸರ್ಕಾರದಿಂದ ನಿರಂತರ ಬೆಂಬಲ ದೊರೆಯಲಿದೆ ಎಂದು ಭರವಸೆ ನೀಡಿದರು. ಭಾರತೀಯ ತಂಡವು ಇದೇ ವರ್ಷ ಸೆಪ್ಟೆಂಬರ್ 17ರಿಂದ 26ರವರೆಗೆ ಗ್ರೀಸ್ ನಲ್ಲಿ ನಡೆಯಲಿರುವ ವಿಶ್ವ ಮಾಸ್ಟರ್ಸ್ ವೇಟ್ ಲಿಫ್ಟಿಂಗ್…
ಜುಲೈ 01 ರಿಂದ 10 ರವರೆಗೆ ಚೀನಾದ ಶಾಂಗ್ಲುಓದಲ್ಲಿ ನಡೆಯುವ U-18 ವರ್ಲ್ಡ್ ಸ್ಕೂಲ್ ಗೇಮ್ಸ್ ನ ಭಾರತೀಯ ವಾಲಿಬಾಲ್ ತಂಡಕ್ಕೆ ನೈಜಾ ರಾಜೇಶ್ ಹೆಗ್ಡೆಯವರು ಆಯ್ಕೆಯಾಗಿದ್ದಾರೆ. ಕರ್ನಾಟಕದಿಂದ ಆಯ್ಕೆಯಾದ ಏಕೈಕ ಆಟಗಾರ್ತಿ ಎಂಬುದು ನೈಜಾಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಸಾಕ್ಷಿ. ಶೇಷಾದ್ರಿಪುರಂ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿನಿಯಾಗಿರುವ ನೈಜಾಳನ್ನು ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಗುರುತಿಸಿದೆ. ಈ ಸಾಧನೆಯ ಹಿಂದೆ ಪೋಷಕರಾದ ರಾಜೇಶ್ ಹೆಗ್ಡೆ ದಂಪತಿಗಳ ತ್ಯಾಗ ಮತ್ತು ಪ್ರೋತ್ಸಾಹವಿದ್ದು, ಬಂಟ ಸಮುದಾಯಕ್ಕೆ ಇದು ಭಾವನಾತ್ಮಕ ಕ್ಷಣವಾಗಿದೆ. ಯುವ ಪೀಳಿಗೆ ಸಮುದಾಯ ಚಟುವಟಿಕೆಗಳಿಂದ ದೂರ ಸರಿಯುತ್ತಿರುವ ಕಾಲದಲ್ಲಿ ನೈಜಾಳ ಯಶಸ್ಸು ಸಮುದಾಯವನ್ನು ಒಗ್ಗೂಡಿಸಿದೆ. U-18 ವರ್ಲ್ಡ್ ಸ್ಕೂಲ್ ಗೇಮ್ಸ್ ಕೇವಲ ಆರಂಭವಾಗಿದ್ದು, ಸರಿಯಾದ ತರಬೇತಿ ಮತ್ತು ಪ್ರೋತ್ಸಾಹ ಸಿಕ್ಕರೆ ನೈಜಾ ಮುಂದೊಂದು ದಿನ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುವ ಸಾಮರ್ಥ್ಯ ಹೊಂದಿದ್ದಾಳೆ. ಅದು ಬಂಟ ಸಮುದಾಯಕ್ಕೆ ಐತಿಹಾಸಿಕ ಹೆಮ್ಮೆಯ ಕ್ಷಣವಾಗಲಿದೆ.















