Author: admin

ಬಂಟರ ಯಾನೆ ನಾಡವರ ಸಂಘ ಕೊಪ್ಪ (ರಿ) ಇದರ 41ನೇ ವಾರ್ಷಿಕೋತ್ಸವ ಸಮಾರಂಭವು ಇತ್ತೀಚಿಗೆ ಅನನ್ಯ ವಿಜಯ ಅಜಿಲ ಸ್ಮಾರಕ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರಗಿತು. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೊಪ್ಪ ಬಂಟರ ಸಂಘದ ಅಧ್ಯಕ್ಷ ಸುಬ್ರಮಣ್ಯ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶೃಂಗೇರಿ ಶಾಸಕ ಟಿಡಿ ರಾಜೇಗೌಡ, ಸುಧಾಕರ ಶೆಟ್ಟಿ ತುಮಾಖಾನೆ, ಮಾಜಿ ಶಾಸಕ ಸುಕುಮಾರ್ ಶೆಟ್ಟಿ, ಮೋಹನ್ ಶೆಟ್ಟಿ, ನರೇಂದ್ರ ಶೆಟ್ಟಿ, ಉದ್ಯಮಿ ವಿಜಯ ಹೆಗ್ಡೆ, ಶ್ರೀಮತಿ ಗೀತಾ ವಿಜಯ ಅಜಿಲ, ಸತೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Read More

ವೃತ್ತಿ, ಪ್ರವೃತ್ತಿ ಹಾಗೂ ಜೀವನದ ಜೊತೆಯಲ್ಲಿ ಸಮಾಜದ ಬಗ್ಗೆ ತುಡಿತವಿರುವ ಸಮಾಜಮುಖಿಗಳಾಗಿರುವುದೇ ಬದುಕಿನ ನಿಜವಾದ ಶ್ರೇಷ್ಠತನ ಎಂದು ಟೆಲಿಕಾಂ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿ ಶ್ರೀಧರ ಶೆಟ್ಟಿ ನುಡಿದರು. ಮೇ. 31 ರಂದು ಕೋಟೇಶ್ವರದ ಸಹನಾ ಕನ್ವೆನ್ಷನ್ ಹಾಲ್‌ನಲ್ಲಿ ನಡೆಯಲಿರುವ ಜಿ. ಕುಶಲ ಹೆಗ್ಡೆ ಜನ್ಮ ಶತಮಾನೋತ್ಸವ ಕಾರ್ಯಕ್ರಮ ‘ಕುಶಲ ಹೆಗ್ಡೆ 100’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ಸಮಾಜದ ಕಟ್ಟಕಡೆಯ ಮಕ್ಕಳಿಗೂ ಶಿಕ್ಷಣ ದೊರಕಬೇಕು ಎನ್ನುವ ಕಾಳಜಿಯಲ್ಲಿ ಸ್ಥಾಪನೆಗೊಂಡಿದ್ದ ಕುಂದಾಪುರದ ಬಂಟ್ಸ್ ಹಾಸ್ಟೆಲ್ ನಿರ್ವಹಣೆ ವೇಳೆ, ಸ್ವಂತಕ್ಕೆ ಬಂದಿದ್ದ ಗೇಣಿ ಅಕ್ಕಿಯನ್ನು ನಿಲಯವಾಸಿಗಳಿಗೆ ನೀಡುವ ಔದಾರ್ಯತೆ ಜಿ. ಕುಶಲ ಹೆಗ್ಡೆ ಅವರಿಗೆ ಇತ್ತು ಎಂದರು. ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಯು.ಎಸ್ ಶೆಣೈ ಪ್ರಾಸ್ತಾವಿಕವಾಗಿ ಮಾತನಾಡಿ, ದಶಕಗಳ ಕಾಲ ಕುಂದಾಪುರದ ನಿತ್ಯ ಕಾರ್ಯ ಕಲಾಪಗಳ ಅವಿಭಾಜ್ಯವಾಗಿದ್ದ ಕುಶಲ ಹೆಗ್ಡೆ ಅವರಲ್ಲಿ ಸಾಮಾಜಿಕ ಚಿಂತನೆಗಳಿದ್ದವು. ಶೈಕ್ಷಣಿಕ, ಧಾರ್ಮಿಕ,‌ ಸಹಕಾರಿ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ…

Read More

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಇವರ ಸಹಯೋಗದಲ್ಲಿ ನಡೆದ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕೃತಿ ಉತ್ಸವದಲ್ಲಿ ಯುವ ಉದ್ಯಮಿ, ಕ್ರೀಡಾ ಪೋಷಕ, ಚಿತ್ರನಟ ಹಾಗೂ ಸಮಾಜಸೇವಕರಾದ ಸಂದೀಪ್ ಪುರಂದರ ಶೆಟ್ಟಿಯವರಿಗೆ ‘ದತ್ತಿನಿಧಿ ಪ್ರಶಸ್ತಿ’ ಪ್ರದಾನ ನೀಡಿ ಗೌರವಿಸಿತು. ಮೇ 16 ರಂದು ನಡೆದ ಅಭೂತಪೂರ್ವ ಕಾರ್ಯಕ್ರವನ್ನು ಕರ್ನಾಟಕ ಸರಕಾರದ ಸಣ್ಣ ನೀರಾವರಿ ಸಚಿವರಾದ ಎನ್ ಎಸ್ ಭೋಸರಾಜು ಉದ್ಘಾಟಿಸಿದರೆ, ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅರಿಬೈಲು ಗೋಪಾಲ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಪುಷ್ಪರಾಜ ಶೆಟ್ಟಿ ಬಿ.ಎನ್, ಶ್ರೀನಿವಾಸ ನಾಯಕ್ ಇಂದಾಜೆ, ರಾಧಾಕೃಷ್ಣ ಕೆ ಉಳಿಯತ್ತಡ್ಕ, ಶಿವಾನಂದ ಕೋಟ್ಯಾನ್, ಶಿವ ರೆಡ್ಡಿ ಖ್ಯಾಡೆದ್, ಎನ್ ಚನಿಯಪ್ಪ ನಾಯ್ಕ, ಗಡಿ ಪ್ರದೇಶಾಭಿವೃದ್ಧಿ…

Read More

ಬಂಟರ ಸಂಘ ಪಳ್ಳಿ ನಿಂಜೂರು ವಲಯ (ರಿ) ವತಿಯಿಂದ ಕಾರ್ಕಳ, ಕಾಪು ಹಾಗೂ ಹೆಬ್ರಿ ತಾಲೂಕು ಬಂಟರ ಸಂಘಗಳ ಸಹಯೋಗದೊಂದಿಗೆ ಮೇ 16 ರಂದು ನಡೆದ ಹೊನಲು ಬೆಳಕಿನ ಬಂಟರ ಕ್ರೀಡೋತ್ಸವ -2026 ಕಾರ್ಯಕ್ರಮವನ್ನು ಮಾನ್ಯ ಶಾಸಕರಾದ ಮಂಜುನಾಥ ಭಂಡಾರಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಳ್ಳಿ ನಿಂಜೂರು ವಲಯ ಬಂಟರ ಸಂಘದ ಬಂಟರ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು, ಉಡುಪಿ ಜಿಲ್ಲಾ ಅತ್ಲೇಟಿಕ್ಸ್ ಸಂಸ್ಥೆಯ ಅಧ್ಯಕ್ಷ ಹರಿಪ್ರಸಾದ್ ರೈ, ಕಾರ್ಕಳ ಬಂಟರ ಸಂಘದ ಸಂಚಾಲಕ ವಿಜಯ ಶೆಟ್ಟಿ, ಅಂತಾರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲು, ಬೆಳ್ಮಣ್ ಬಂಟರ ಸಂಘದ ಅಧ್ಯಕ್ಷ ಶೋಧನ್ ಶೆಟ್ಟಿ, ಗೋವಾ ಬಂಟರ ಸಂಘದ ಸ್ಥಾಪಕಾಧ್ಯಕ್ಷ ಜಯಕರ ಶೆಟ್ಟಿ, ತುಳು ಕೂಟ ಗೋವಾದ ಅಧ್ಯಕ್ಷ ಗಣೇಶ್ ಶೆಟ್ಟಿ ಇರ್ವತ್ತೂರು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ…

Read More

ಕುಂದಾಪುರ ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೇ 16 ರಂದು ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮಂಡಳಿಯ ವತಿಯಿಂದ ನಡೆದ ‘ಸಂಸ್ಕೃತಿ’ ಸಾಂಪ್ರದಾಯಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪಂಜುರ್ಲಿ ಗ್ರೂಪ್ ಹೋಟೆಲ್ಸ್ ನ ಸಿಎಂಡಿ ರಾಜೇಂದ್ರ ವಿ ಶೆಟ್ಟಿ ದಂಪತಿಗಳನ್ನು ಸನ್ಮಾನಿಸಿ ಗೌರವಿಸಿದರು. ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ಡಾ| ಕೆ ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂಧರ್ಭ ಡಾ| ಚೇತನ್ ಶೆಟ್ಟಿ ಕೋವಾಡಿ, ರಕ್ಷಿತ್ ರಾವ್, ರೇಷ್ಮಾ ಶೆಟ್ಟಿ, ಆಕಾಶ್ ಬಿ ಶೆಟ್ಟಿ, ನಿರೀಕ್ಷಾ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Read More

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಸಹಕರಿಸಿದ ಸಮಾಜ ಸೇವಕ, ಆಸ್ಪೆನ್ ಕಂಪನಿ ಮುಖ್ಯಸ್ಥ ಹಾಗೂ ಉಡುಪಿ ಕುಂತಳನಗರ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿಯವರನ್ನು ಶ್ರೀ ಕ್ಷೇತ್ರ ಗುರುಪುರದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹಾಗೂ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ| ಕೆ ಪ್ರಕಾಶ್ ಶೆಟ್ಟಿಯವರು ಮತ್ತಿತರ ಗಣ್ಯರ ಸಮಕ್ಷಮ ಸನ್ಮಾನಿಸಿ ಅಭಿನಂದಿಸಿದರು. ಅಶೋಕ್ ಕುಮಾರ್ ಶೆಟ್ಟಿಯವರು ತಮ್ಮ ಆಸ್ಪೆನ್ ಸಂಸ್ಥೆಯಿಂದ 25 ಲಕ್ಷ ರೂ ದೇಣಿಗೆ ನೀಡಿದ್ದಲ್ಲದೇ, ಎಸ್.ಇ.ಝಡ್ ನ ವಿವಿಧ ಕಂಪನಿಗಳಿಂದ ಹಾಗೂ ಸ್ಟೀಲ್ ಸ್ಟ್ರಾಂಗ್ ಕಂಪನಿಯ ಸಿಎಂಡಿ ರಮೇಶ್ ಶೆಟ್ಟಿಯವರಿಂದ ರೂ. 5 ಲಕ್ಷ, ಜೈ ಹಿಂದ್ ಕಂಪನಿಯ ಎಂಡಿ ದಿವ್ಯ ಜೈನ್ ರವರಿಂದ ರೂ. 5 ಲಕ್ಷ, ಎಂ11 ಕಂಪನಿಯ ಅನಿಲ್ ಅವರಿಂದ ರೂ. 2 ಲಕ್ಷ ದೇಣಿಗೆ ಸಂಗ್ರಹಿಸಿ ದೇವಸ್ಥಾನಕ್ಕೆ ಹಸ್ತಾಂತರಿಸಿದ್ದಾರೆ.

Read More

ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ರಕ್ತದಾನ, ವಿಪತ್ತು ನಿರ್ವಹಣೆಯಂತಹ ಉದಾತ್ತ ಕಾರ್ಯಗಳಲ್ಲಿ ತೊಡಗಿರುವ ರೆಡ್ ಕ್ರಾಸ್ ಸಂಸ್ಥೆ ಮಾನವೀಯ ಸೇವೆಯಲ್ಲಿ ತೊಡಗಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮತ್ತು ಯುವ ಜನತೆಗೆ ಪ್ರೇರಣೆಯಾಗಿದೆ ಎಂದು ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದರು. ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ಯೂತ್ ರೆಡ್ ಕ್ರಾಸ್ ಮಂಗಳೂರು ವಿ.ವಿ ಸಹಯೋಗದಲ್ಲಿ ರೆಡ್ ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಛೇರ್ಮನ್ ಸಿಎ ಶಾಂತರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾದ ರೆಡ್ ಕ್ರಾಸ್ ವಿಚಾರ ಸಂಕಿರಣದಲ್ಲಿ ಸುರತ್ಕಲ್ ಎನ್ಐಟಿಕೆಯ ಸಹ ಪ್ರಾಧ್ಯಾಪಕಿ ಡಾ| ರಶ್ಮಿ ಸುಧೀರ್ ಉಚ್ಚಿಲ್ ಮತ್ತು ಡಿ ಅಡಿಕ್ಷನ್ ಸಮಲೋಚಕಿ ಡಾ| ಕುಸುಮ್ ತಂತ್ರಿ ಡೆಸಾ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ರೆಡ್ ಕ್ರಾಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ. ಬಿ ಸಚ್ಚಿದಾನಂದ…

Read More

ಮೊಗರು ಗುತ್ತು ರಾಜೇಶ್ ಕುಮಾರ್ ಹೆಗ್ಡೆ ಮತ್ತು ಮೂಡಂಬೈಲು ಶುಭಾ ರಾಜೇಶ್ ಹೆಗ್ಡೆ ದಂಪತಿಗಳ ಸುಪುತ್ರಿ ರಾಶಿ ಹೆಗ್ಡೆ ಭರತನಾಟ್ಯ ಕಲೆಯನ್ನು ಕದ್ರಿಯ ನಾಟ್ಯಾಲಯದಲ್ಲಿ ಗುರು ಮುಖೇನ ಅಭ್ಯಸಿಸಿ ಈಗ ರಂಗ ಪ್ರವೇಶಕ್ಕೆ ಅಣಿಯಾಗುತ್ತಿದ್ದಾಳೆ. ಮೇ 17 ರಂದು ಪುರಭವನದಲ್ಲಿ ಸಂಜೆ 4.30 ಕ್ಕೆ ಕಾರ್ಯಕ್ರಮವನ್ನು ಶರವು ಶ್ರೀ ಮಹಾಗಣಪತಿ ದೇವಾಲಯದ ಧರ್ಮದರ್ಶಿ ರಾಘವೇಂದ್ರ ಶಾಸ್ತ್ರಿಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಲಿರುವರು. ಆಳ್ವಾಸ್ ಎಜುಕೇಶನ್ ಟ್ರಸ್ಟ್ ನ ಛೇರ್ಮನ್ ಡಾ. ಮೋಹನ್ ಆಳ್ವ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರೆ, ಅತಿಥಿಗಳಾಗಿ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಡಾ. ಮಿತ್ರಾ ಎನ್ ಹೆಗ್ಡೆ, ಜೀವವಿಮಾ ವಿಭಾಗ ಉಡುಪಿ ವಲಯದ ಡಿವಿಜನಲ್ ಮ್ಯಾನೇಜರ್ ಗಣಪತಿ ಎನ್ ಭಟ್ ಮೊದಲಾದವರು ಭಾಗವಹಿಸಲಿದ್ದಾರೆ. ವಿದ್ವಾನ್ ಯು.ಕೆ ಪ್ರವೀಣ್ ಅವರು ಕದ್ರಿ ನೃತ್ಯ ವಿದ್ಯಾಲಯ ಚಾರಿಟೇಬಲ್ ಟ್ರಸ್ಟ್ ಇದರ ನಿರ್ದೇಶಕರಾಗಿದ್ದು, ನೃತ್ಯ ಕಲಾತಿಲಕ ಬಿರುದಾಂಕಿತ ಯು.ಕೆ ಕೃಷ್ಣ ಮತ್ತು ನಾಟ್ಯರಾಣಿ ಶಾಂತಲಾ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ಜಯಲಕ್ಷ್ಮಿಯವರ ಸುಪುತ್ರರಾಗಿದ್ದು,…

Read More

ಸಮಾಜಮುಖಿ ಚಿಂತನೆ ಹಾಗೂ ಸಾಂಸ್ಕೃತಿಕ ಸೌಹಾರ್ದತೆಯ ಸಾರ್ಥಕ ಉದಾಹರಣೆಯಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಮಂಗಳೂರಿನ ನಿರಾಶ್ರಿತ ಮಕ್ಕಳ ಆಶ್ರಯತಾಣ ‘ಚಿಣ್ಣರ ತಂಗುದಾಣ’ಕ್ಕೆ ಭೇಟಿ ನೀಡಿ ರೂ. 50,000ಕ್ಕೂ ಅಧಿಕ ಮೊತ್ತದ ದೈನಂದಿನ ಅಗತ್ಯ ವಸ್ತುಗಳು, ಆಹಾರ ಸಾಮಗ್ರಿಗಳು, ಕ್ರೀಡಾ ಉಪಕರಣಗಳು ಹಾಗೂ ಶೈಕ್ಷಣಿಕ ಸಾಮಗ್ರಿಗಳನ್ನು ಹಸ್ತಾಂತರಿಸಿದರು. ಇತ್ತೀಚೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಸಂಪ್ರದಾಯ ದಿನಾಚರಣೆಯನ್ನು ವೈವಿಧ್ಯತೆಯಲ್ಲಿ ಏಕತೆ ಎಂಬ ಸಂದೇಶದೊಂದಿಗೆ ಅದ್ದೂರಿಯಾಗಿ ಆಚರಿಸಲಾಗಿತ್ತು. ಕಾರ‍್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಸ್ಪರ್ಧೆಗಳು, ಸಾಂಪ್ರದಾಯಿಕ ಆಹಾರ ಮೇಳ ಹಾಗೂ ವಿವಿಧ ರಾಜ್ಯಗಳ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗಿತ್ತು. ಕೇರಳ ರಾಜ್ಯದ ವಿದ್ಯಾರ್ಥಿಗಳ ತಂಡವು ಅತ್ಯುತ್ತಮ ಪ್ರದರ್ಶನ ಹಾಗೂ ಸಮೃದ್ಧ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಮೂಲಕ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತ್ತು. ಕೇವಲ ಸಾಂಸ್ಕೃತಿಕ ಸಂಭ್ರಮಕ್ಕೆ ಸೀಮಿತವಾಗದೆ, ಸಮಾಜದ ಒಳಿತಿಗೂ ಕೈಜೋಡಿಸುವ ಉದ್ದೇಶದಿಂದ ಆಹಾರ ಮೇಳದಿಂದ ಸಂಗ್ರಹವಾದ ಮೊತ್ತವನ್ನು ಪ್ರತೀ ವರ್ಷದಂತೆ ಸಮಾಜಮುಖಿ ಕಾರ್ಯಕ್ಕೆ ಬಳಸಲು ನಿರ್ಧರಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ…

Read More

ಬಸ್ರೂರು ಶ್ರೀ ತುಳುವೇಶ್ವರ ದೇವಸ್ಥಾನದ ಅಷ್ಟಮಂಗಲ ಪ್ರಶ್ನೆ ಚಿಂತನೆಯ ಮುಂದುವರಿದ ಭಾಗವಾಗಿ, ಬಸ್ರೂರಿನ ತುಳುವೇಶ್ವರಿ (ಮುಳಲ) ಸಾನಿಧ್ಯದಲ್ಲಿ ಜೂನ್ 14ರಂದು (ಆದಿತ್ಯವಾರ) ಅಷ್ಟಮಂಗಲ ಪ್ರಶ್ನೆ ಮುಂದುವರಿಯಲಿದೆ ಎಂದು ದೇವಸ್ಥಾನ ಸಮಿತಿ ಹಾಗೂ ತುಳುವರ್ಲ್ಡ್ ಫೌಂಡೇಶನ್ ತಿಳಿಸಿವೆ. ದೈವಜ್ಞ ಜ್ಯೋತಿಷ್ಯ ತಿಲಕಂ ಶಶಿಧರ ಮಾಂಗಡ್ ಅವರ ಸಮ್ಮುಖದಲ್ಲಿ ನಡೆದ ಪ್ರಶ್ನೆ ಚಿಂತನೆಯ ವೇಳೆ ದೊರೆತ ದೈವ ಸಂದೇಶದ ಪ್ರಕಾರ, ಶ್ರೀಚಕ್ರ ಸಾನಿಧ್ಯ ಹೊಂದಿರುವ ಮೂಲಳ ದೇವಿ ತುಳುವೇಶ್ವರಿ ಸಾನಿಧ್ಯದ ಜೀರ್ಣೋದ್ದಾರ ಮತ್ತು ಅಭಿವೃದ್ಧಿ ನಡೆದ ನಂತರವೇ ತುಳುವೇಶ್ವರ ದೇವರ ಪುನರ್ವೈಭವೀಕರಣ ಕಾರ್ಯಗಳು ಪೂರ್ಣ ಫಲಪ್ರದವಾಗಲಿವೆ ಎಂಬ ಸೂಚನೆ ದೊರೆತ ಹಿನ್ನೆಲೆಯಲ್ಲಿ ಈ ಮಹತ್ವದ ತಿರುವು ಉಂಟಾಗಿದೆ. ಈ ಹಿನ್ನೆಲೆಯಲ್ಲಿ, ತುಳುವೇಶ್ವರಿ (ಮುಳಲ) ಸಾನಿಧ್ಯದ ಪ್ರಸ್ತುತ ವಾರಿಸುದಾರರಾದ ಪ್ರಶಾಂತ ಪ್ರಭು ಹಾಗೂ ಸುಭಾಷ್ ಚಂದ್ರ ಶೆಟ್ಟಿಯವರ ಉಪಸ್ಥಿತಿಯಲ್ಲಿ ಜೂನ್ 14 ಆದಿತ್ಯವಾರದಂದು ಅಷ್ಟಮಂಗಲ ಪ್ರಶ್ನೆ ಚಿಂತನೆಯನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ. ಪ್ರಾಚೀನ ತುಳುನಾಡಿನ ಶಕ್ತಿಸ್ವರೂಪಿಣಿಯಾದ ತುಳುವೇಶ್ವರಿ ದೇವಿಯ ಮೂಲ ಸಾನಿಧ್ಯ, ಶ್ರೀಚಕ್ರ ಆರಾಧನೆ, ಶ್ರೀಚಕ್ರ ನೇಪಾಳಕ್ಕೆ…

Read More