Author: admin
ಬಂಟರ ಸಂಘ ಮುಂಬಯಿಯ ಗೌರವ ಪ್ರಧಾನ ಕಾರ್ಯದರ್ಶಿ, ಸಂಜೀವಿನಿ ಟ್ರಸ್ಟ್ ಸಂಸ್ಥಾಪಕ, ಇಸ್ಸಾರ್ ಫೈನಾನ್ಸಿಯಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕ ಡಾ| ಆರ್.ಕೆ ಶೆಟ್ಟಿ ಅವರು ಆಗಸ್ಟ್ 24 ರ ರವಿವಾರದಂದು ಚೀನಾದ ಮಾಕಾವ್ ನಲ್ಲಿ ನಡೆಯಲಿರುವ ಎಮ್.ಡಿ.ಆರ್.ಟಿ ಗ್ಲೋಬಲ್ ಮಿಲಿಯನ್ ಡಾಲರ್ ರೌಂಡ್ ಟೇಬಲ್ ಜಗತ್ತಿನ ಅತ್ಯುತ್ತಮ ವಿಮಾ ಮತ್ತು ಹಣಕಾಸು ತಜ್ಞರನ್ನು ಪ್ರತಿನಿಧಿಸುವ ಪ್ರಖ್ಯಾತ ಜಾಗತಿಕ ಸಂಘಟನೆ ಆಯೋಜಿಸಿರುವ ಸಭೆಯಲ್ಲಿ ಸ್ವೀಕರ್ ಆಗಿ ಮಾತನಾಡಲಿದ್ದಾರೆ. ಪ್ರತಿಯೊಬ್ಬ ಕ್ರಿಕೆಟ್ ಆಟಗಾರನಿಗೂ ಲಾರ್ಡ್ಸ್ನಲ್ಲಿ ಆಡುವುದು ಕನಸು ಇದ್ದಂತೆ. ಪ್ರತಿಯೊಬ್ಬ ವಿಮಾ ಸಲಹೆಗಾರನಿಗೂ ಎಮ್.ಡಿ.ಆರ್.ಟಿ ಸದಸ್ಯರಾಗುವುದು ಶ್ರೇಷ್ಠತೆ, ನೈತಿಕತೆ ಮತ್ತು ಸಾಧನೆಯ ಸಂಕೇತವಾಗಿದೆ. ಅಂತಹ ಸದಸ್ಯತನದಲ್ಲಿ ನಿರಂತರವಾಗಿ 21 ವರ್ಷಗಳಲ್ಲಿ ಎಂ.ಡಿ.ಆರ್.ಟಿ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ| ಆರ್ ಕೆ ಶೆಟ್ಟಿಯವರು ವಿಮಾ ಮತ್ತು ಹಣಕಾಸು ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಟ್ಟ ಸಾಧಕರು. ಡಾ| ಆರ್.ಕೆ ಶೆಟ್ಟಿ ಅವರ ವೃತ್ತಿಪರ ಸಾಧನೆಗಳನ್ನು ಹೆಸರಿಸುವುದಾದರೆ, ಎಮ್.ಡಿ.ಆರ್.ಟಿ ಸದಸ್ಯತ್ವ 28 ಬಾರಿ (USA), ಕೋರ್ಟ್…
ಆಳ್ವಾಸ್ ಹಾಗೂ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಗ್ರಂಥಪಾಲಕರ ಸಂಘ : ರಾಜ್ಯ ಮಟ್ಟದ ಒಂದು ದಿನದ ಕಾರ್ಯಗಾರ
ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಗ್ರಂಥಪಾಲಕರ ಸಂಘ ಮತ್ತು ಆಳ್ವಾಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ ಅಂಗವಾಗಿ ‘ಗ್ರಂಥಾಲಯ ಸೇವೆಗಳ ನಾವಿನ್ಯತೆ ಹಾಗೂ ಪರಿಣಾಮಕಾರಿ ಬಳಕೆಯಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆ’ ಎಂಬ ವಿಷಯದ ಕುರಿತು ರಾಜ್ಯಮಟ್ಟದ ಒಂದು ದಿನದ ಕಾರ್ಯಾಗಾರ ಶನಿವಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಜರುಗಿತು. ಮಂಗಳೂರು ವಿವಿ ಕಾಲೇಜಿನ ಡಾ. ಮಾಧವ ಎಂಕೆ ಮಾತನಾಡಿ, ಗ್ರಂಥಾಲಯ ವಿಭಾಗದಲ್ಲಿ ಕೆಲಸ ಮಾಡುವವರು ಸರಸ್ವತಿಯ ದಾಸೋಹಿಗಳು. ಅವರ ಸೇವೆ ಅಕ್ಷರಶಃ ಮಾನವ ಸಮಾಜದ ಬೆಳಕಿನ ದೀಪ. ಜ್ಞಾನ ಹಂಚುವ ಕಾರ್ಯದಲ್ಲಿ ತೊಡಗಿರುವ ಅವರು ನಿಜಕ್ಕೂ ಪುಣ್ಯವಂತರು ಎಂದರು. ಈ ಜಗತ್ತಿನಲ್ಲಿ ಭಗವಂತನು ಮಾನವನಿಗೆ ನೀಡಿರುವ ಅತ್ಯಂತ ಅಮೂಲ್ಯವಾದ ವರವೇ ಸಮಯ. ಧನ, ಪದವಿ, ಸ್ಥಾನಮಾನದಲ್ಲಿ ವ್ಯತ್ಯಾಸಗಳಿರಬಹುದು. ಆದರೆ ಸಮಯ ಮಾತ್ರ ಎಲ್ಲರಿಗೂ ಸಮಾನವಾಗಿ ಹಂಚಲ್ಪಟ್ಟಿದೆ. ಈ ಸಮಯವನ್ನು ಹೇಗೆ ಬಳಸುತ್ತೇವೆ ಎಂಬುದರ ಮೇಲೆಯೇ ಜೀವನದ ಸಾಧನೆ ನಿರ್ಧಾರವಾಗುತ್ತದೆ ಎಂದರು. ಕಲಿಕೆಯ ದೇಗುಲವಾದ ಗ್ರಂಥಾಲಯದಲ್ಲಿ ಸಮಯ ಕಳೆಯುವವರು…
ಬಂಟರ ಸಂಘ ಕೇಪು ಇದರ ನೂತನ ಸಮಿತಿಯ ಪದಗ್ರಹಣ ಸಮಾರಂಭವು ಇತ್ತೀಚೆಗೆ ವಿಟ್ಲ ಗಾರ್ಡನ್ ಆಡಿಟೋರಿಯಂ ಕರವೀರ ಮೈರದಲ್ಲಿ ನಡೆಯಿತು. ಬೆಳಗ್ಗೆ 10 ಗಂಟೆಗೆ ದೀಪ ಪ್ರಜ್ವಲನೆಯೊಂದಿಗೆ ನೃತ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ 10.45 ರಿಂದ ಪದಗ್ರಹಣ ಮತ್ತು ಸಭಾ ಕಾರ್ಯಕ್ರಮ ಸಂಪನ್ನಗೊಂಡಿತು. ಸಮಾರಂಭದ ಅಧ್ಯಕ್ಷತೆಯನ್ನು ಕೇಪು ಬಂಟರ ಸಂಘದ ಅಧ್ಯಕ್ಷ ಜಗಜೀವನ್ ರಾಮ್ ಶೆಟ್ಟಿ ಬೇಡೆಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಯರಾಮ್ ರೈ ಅವರು ಮಾತನಾಡಿ, ಸಂಘದ ಪದಾಧಿಕಾರಿಗಳು ಸದಾ ಕ್ರಿಯಾಶೀಲರಾಗಿದ್ದಾಗ ಸಂಘದ ಚಟುವಟಿಕೆಗಳು ವೇಗ ಪಡೆದುಕೊಳ್ಳುತ್ತದೆ. ಇದರಿಂದ ಅಭಿವೃದ್ಧಿ ಕಾರ್ಯಗಳು ಸಾಧ್ಯ ಎಂದು ನುಡಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ಶೆಟ್ಟಿ ವಿಟ್ಲ, ವಿಟ್ಲ ವಲಯ ಬಂಟರ ಸಂಘದ ಗೌರವಾಧ್ಯಕ್ಷ ರಾಧಕೃಷ್ಣ ಶೆಟ್ಟಿ ಚೆಲ್ಲಡ್ಕ, ವಿಟ್ಲ ವಲಯ ಬಂಟರ ಸಂಘದ ಅಧ್ಯಕ್ಷ ರಾಜೀವ ಭಂಡಾರಿ ಕುಂಡಕೋಳಿ, ಕೇಪು ಗ್ರಾಮ ಬಂಟರ ಸಂಘದ ನಿಯೋಜಿತ ಅಧ್ಯಕ್ಷ ತಾರಾನಾಥ ಆಳ್ವ, ಬಂಟ್ವಾಳ…
ನಮ್ಮನ್ನು ಎಲ್ಲರೂ ಮೆಚ್ಚಿಕೊಳ್ಳಲಿ ಎಂದು ಹಪಹಪಿಸುವ ಬದಲು ನಮಗೆ ಬೆಲೆ ಕೊಡುವವರನ್ನು ಸದಾ ಪ್ರೀತಿಯಿಂದ ಗೌರವಿಸಿಕೊಳ್ಳಬೇಕು.
ವಯಸ್ಸಾಗಿ ಹಾಸಿಗೆ ಹಿಡಿದಿದ್ದ ತಂದೆ ತನ್ನ ಮಗಳನ್ನು ಕರೆದು ಮಗಳೇ, ನಾನು ನಿನ್ನನ್ನು ಕಷ್ಟಪಟ್ಟು ಓದಿಸಿ ವಿದ್ಯಾವಂತೆ ಮಾಡಿದೆ. ನಾನು ಸತ್ತರೆ ನಿನ್ನ ಜೀವನಕ್ಕಾಗಿ ಯಾವ ಆಸ್ತಿಯನ್ನೂ ಮಾಡಲಿಲ್ಲ. ದುಡಿದ ಹಣವೆಲ್ಲಾ ನಿನ್ನನ್ನು ಓದಿಸಲು ಖರ್ಚಾಯಿತು. ಆದರೆ ನನ್ನ ಬಳಿ ಉಳಿದದ್ದು ಮಾತ್ರ ಮನೆಯ ಹೊರಗೆ ಮೂಲೆಯಲ್ಲಿ ನಾನು ನಿಲ್ಲಿಸಿರುವ ಆ ಹಳೆಯ ಕಾರು ಮಾತ್ರ. ಅದು ಸ್ವಲ್ಪ ಹಳೆಯದ್ದು. ನೀನು ಅದನ್ನು ಮಾರಾಟ ಮಾಡುವ ಮೊದಲು ಆ ಕಾರನ್ನು ತೆಗೆದುಕೊಂಡು ಹೋಗಿ ಹೊರಗೆ ಜನರಿಗೆ ನೀನು ಆ ಕಾರನ್ನು ಮಾರಲು ತಂದಿರುವುದಾಗಿ ಹೇಳು. ನೋಡೋಣ ಜನರು ಆ ಕಾರಿಗೆ ಎಷ್ಟು ಬೆಲೆ ಕಟ್ಟುತ್ತಾರೆ?” ಎಂದು ತಂದೆ ಮಗಳಿಗೆ ಹೇಳಿದ. ತಂದೆಯ ಮಾತಿನಂತೆ ಆ ಹಳೆಯ ಕಾರನ್ನು ತೆಗೆದುಕೊಂಡು ಮಗಳು ಪೇಟೆಗೆ ಬಂದಳು. ಹಳೆಯ ಕಾರುಗಳ ಡೀಲರುಗಳು ಎಲ್ಲಿದ್ದಾರೆ ಎಂದು ವಿಚಾರಿಸುತ್ತಾ ಒಬ್ಬ ಕಾರ್ ಡೀಲರ್ ಬಳಿಗೆ ಬಂದು, ತನ್ನ ತಂದೆಯ ಆ ಹಳೆಯ ಕಾರಿನ ಈಗಿನ ಬೆಲೆಯನ್ನು ವಿಚಾರಿಸಿ, ಮನೆಗೆ…
ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ನಾಗವೃಜ ಕ್ಷೇತ್ರ ಪಾವಂಜೆ ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇವರ ಸಹಯೋಗದೊಂದಿಗೆ ಶ್ರೀ ಸುಬ್ರಾಯ ಹೊಳ್ಳ ಕಾಸರಗೋಡು ಮತ್ತು ಪಟ್ಲ ಸತೀಶ ಶೆಟ್ಟಿ ನೇತೃತ್ವದಲ್ಲಿ ‘ಯಕ್ಷಾಂತರಂಗ’ ಯಕ್ಷಗಾನ ಪ್ರಸಂಗ ಸಾಹಿತ್ಯ ಮತ್ತು ರಂಗ ನಡೆಗಳ ಮಾಹಿತಿ ಕಾರ್ಯಾಗಾರವನ್ನು ಶ್ರೀ ಕ್ಷೇತ್ರ ಪಾವಂಜೆಯಲ್ಲಿ ಹಿರಿಯ ಯಕ್ಷಗಾನ ಕಲಾವಿದ ಸುಬ್ರಾಯ ಹೊಳ್ಳ ಕಾಸರಗೋಡು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಆಗಸ್ಟ್ 20 ರಿಂದ ರಿಂದ 23 ರವರೆಗೆ ಪ್ರತಿದಿನ ಸಂಜೆ 5.30 ರಿಂದ ರಾತ್ರಿ 8.30 ರ ವರೆಗೆ ನಡೆಯುವ ಈ ಕಾರ್ಯಾಗಾರದಲ್ಲಿ ಯಕ್ಷಗಾನ ಪ್ರಸಂಗ ಸಾಹಿತ್ಯ, ರಂಗನಡೆ, ಪುರಾಣ ಕಥನಗಳ ಬಗ್ಗೆ ವಿಚಾರ ಮಂಥನ ಮಾಡಲಾಗುವುದು. ಕಾರ್ಯಾಗಾರದ ಮೊದಲ ದಿನ ಅಜಪುರ ವಿಷ್ಣು ಭಾಗವತ ವಿರಚಿತ ಕಿರಾತಾರ್ಜುನ ಪ್ರಸಂಗದ ಆರಂಭದ ಭಾಗದ ಪ್ರಸಂಗ ಪಠ್ಯ ಮತ್ತು ರಂಗನಡೆಗಳ ಬಗ್ಗೆ ಪ್ರಾತ್ಯಕ್ಷಿಕೆ ಸಹಿತ ಕಾರ್ಯಾಗಾರ ನಡೆಯಿತು. ಪ್ರಸಂಗ ಸಾಹಿತ್ಯವನ್ನು ಓದುವ ಬಗೆ, ಅರ್ಥವಿಸ್ತರಣೆಗೆ…
ವಿವಿಧ ಹೆಸರಿನಲ್ಲಿ ಕರೆಯಲ್ಪಡುವ ಬಂಟರ ಸಂಘಟನೆಗಳು ಸೌಹಾರ್ದದ ಕೂಡು ಕುಟುಂಬವಾಗಿದೆ. ಅಲ್ಲಿ ಪರಸ್ಪರ ಸಹಕಾರ, ಸಹಬಾಳ್ವೆ, ಹೊಂದಾಣಿಕೆ, ಕೂಡಿ ಬಾಳುವ ಕಲೆ ಕರಗತವಾಗಿರಲಿ. ಬಂಟ ಸಮಾಜದ ಕಟ್ಟ ಕಡೆಯ ಮಗು ಕೂಡಾ ಆರ್ಥಿಕ ಅಡಚಣೆಯಿಂದ ವಿದ್ಯಾಭ್ಯಾಸ ಸ್ಥಗಿತಗೊಳಿಸಬಾರದು. ಅವರಿಗೆ ಸಂಪೂರ್ಣ ನೆರವು ನೀಡಲು ಬಂಟ್ಸ್ ಫೋರಂ ಮೀರಾ ಭಾಯಂದರ್ ಸಿದ್ಧವಾಗಿದೆ ಎಂದು ಬಂಟ್ಸ್ ಫೋರಂ ಮೀರಾ ಭಾಯಂದರ್ ಅಧ್ಯಕ್ಷ ಉದಯ ಎಂ ಶೆಟ್ಟಿ ಮಲಾರಬೀಡು ತಿಳಿಸಿದರು. ಮಹಿಳಾ ವಿಭಾಗ ಆಗಸ್ಟ್ 10 ರಂದು ಸಂಜೆ ಮೀರಾ ರೋಡ್ ಪೂರ್ವದ ನಿತ್ಯಾನಂದ ನಗರ ಸ್ವಸ್ತಿಕ್ ಅಂಬರ್ ಪ್ಲಾಜಾ ಸಭಾಂಗಣದಲ್ಲಿ ಆಯೋಜಿಸಿದ ಆಟಿದ ಕೂಟ ತುಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬಂಟರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್ ಕೆ ಶೆಟ್ಟಿಯವರು ಸಂಜೀವಿನಿ ಟ್ರಸ್ಟ್ ಸಹಯೋಗದಲ್ಲಿ ಟಾಟಾ ಐಐಎಸ್ ಸಂಸ್ಥೆಯ ಮೂಲಕ ಕೌಶಲ ಮತ್ತು ಉದ್ಯೋಗ ಕಲ್ಪಿಸುವ ಯೋಜನೆ ಕೈಗೊಂಡಿದ್ದಾರೆ. ಬಂಟ ಸಮಾಜದ ಯುವಜನಾಂಗ ಇದರ ಪ್ರಯೋಜನ ಪಡೆಯಲು…
ಚಿಣ್ಣರಬಿಂಬ ಮುಂಬಯಿ ಇದರ ಮೀರಾ ರೋಡ್ ಶಿಬಿರದ ಮಕ್ಕಳ ಉತ್ಸವ ಹಾಗೂ ಪ್ರತಿಭಾ ಸ್ಪರ್ಧೆಯು ಆಗಸ್ಟ್ 24 ರಂದು ರವಿವಾರ ಮಧ್ಯಾಹ್ನ 1 ಗಂಟೆಯಿಂದ ಭಾಯಂದರ್ ಪೂರ್ವದ ನ್ಯೂ ಸೈಂಟ್ ಆಗ್ನೆಸ್ ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಲಿದೆ. ಮಕ್ಕಳ ಪ್ರತಿಭಾ ಸ್ಪರ್ಧೆ ಕಾರ್ಯಕ್ರಮವನ್ನು ರೈ ಸುಮತಿ ಎಜುಕೇಷನಲ್ ಟ್ರಸ್ಟ್ ಇದರ ಕಾರ್ಯಾಧ್ಯಕ್ಷ ಡಾ| ಅರುಣೋದಯ ರೈ ಬಿಳಿಯೂರು ಗುತ್ತು ಇವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟರ ಸಂಘ ಮುಂಬಯಿಯ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಜೊತೆ ಕಾರ್ಯದರ್ಶಿ, ಉದ್ಯಮಿ ರಮೇಶ ಎಂ ಶೆಟ್ಟಿ ಸಿದ್ಧಕಟ್ಟೆಯವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಂಟ್ಸ್ ಫೋರಂ ಅಧ್ಯಕ್ಷ ಉದಯ ಎಮ್ ಶೆಟ್ಟಿ ಮಲಾರಬೀಡು, ಮೀರಾರೋಡ್ ಶಿಬಿರದ ಹಿರಿಯ ವಿದ್ಯಾರ್ಥಿಗಳಾದ ಸಿಎ ಶ್ರೀರಕ್ಷಾ ಶೆಟ್ಟಿ, ಇಂಜಿನಿಯರ್ ನಿರೀಕ್ಷಾ ಶೆಟ್ಟಿ, ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕೃಷ್ಣವೇಷ ಸ್ಪರ್ಧೆ ಕಾರ್ಯಕ್ರಮವನ್ನು ಮೊಟ್ಟಮೊದಲ ಬಾರಿಗೆ ಚಿಣ್ಣರಬಿಂಬ ವತಿಯಿಂದ ಪರಿಸರದ ತುಳು ಕನ್ನಡಿಗರ ಮಕ್ಕಳಿಗೆ ಆಯೋಜಿಸಲಾಗಿದೆ. ಬಳಿಕ ಶಿಬಿರ ಮಟ್ಟದಲ್ಲಿ ಭಾವಗೀತೆ, ಜಾನಪದ ಗೀತೆ,…
ಪುಣೆ ತುಳು ಕೂಟದ 26ನೇ ವಾರ್ಷಿಕೋತ್ಸವ ಸಮಾರಂಭವು ಆಗಸ್ಟ್ 15 ರಂದು ಪುಣೆಯ ಬಾಣೇರ್ ನಲ್ಲಿಯ ಬಂಟರ ಭವನದ ಓಣಿ ಮಜಲು ಜಗನ್ನಾಥ್ ಶೆಟ್ಟಿ ಸಾಂಸ್ಕ್ರತಿಕ ಭವನದಲ್ಲಿ ಜರಗಿತು. ತುಳುವರು ದೇಶ ಜೋಡಿಸುವ ಕಾರ್ಯವನ್ನು ದೇಶ ವಿದೇಶದಲ್ಲಿ ಮಾಡುತ್ತಿದ್ದಾರೆ. ಗುಣದಲ್ಲಿ, ಜ್ಞಾನದಲ್ಲಿ, ಕಠಿನ ಪರಿಶ್ರಮದಲ್ಲಿ ದುಡಿದು ಸಮಾಜ ಸೇವೆಯಲ್ಲಿರುವ ತುಳುವರು ಎಲ್ಲೇ ಇದ್ದರೂ ತುಳು ಬಾಷೆಯ ಜೀವಂತಿಕೆಯನ್ನು ಉಳಿಸಿ ಬೆಳೆಸಿದವರು. ನಮ್ಮ ಹಿರಿಯರ ಕಟ್ಟು ಕಟ್ಟಲೆ, ಸಂಸ್ಕತಿ, ಸಂಸ್ಕಾರ, ಆಚಾರ ವಿಚಾರವನ್ನು ಬಿಟ್ಟು ಕೊಡದೆ ತುಳುವ ಮಣ್ಣಿನ ಮಕ್ಕಳಾದ ತುಳುವರು ಘನತೆ ಗೌರವವನ್ನು ಉಳಿಸಿಕೊಂಡು ನಡೆದವರು ಎಂಬ ಹೆಮ್ಮೆ ನಮ್ಮದು. ತುಳುವರ ಸಂಸ್ಕಾರ ಏನು ಎಂಬುದನ್ನು ಜಗತ್ತಿಗೆ ತೋರಿಸಿ ಕೊಟ್ಟಿದ್ದೇವೆ. ನಮ್ಮ ಜಲ ಮಣ್ಣು ಬಾಷೆಯ ಜೊತೆಯಲ್ಲಿ ನಿರಂತರ ಸಂಬಂಧವನ್ನಿಟ್ಟುಕೊಂಡು ತುಳು ಸಂಘಟನೆಯನ್ನು ಕಟ್ಟಿ ತುಳುವರನ್ನು ಚಾವಡಿಯಲ್ಲಿ ಒಟ್ಟು ಸೇರಿಸಿಕೊಂಡು ಪುಣೆಯ ತುಳುವರು ಮಾಡುವ ಸೇವೆಯ ಉದ್ದೇಶವೇ ತುಳುವರ ಒಗ್ಗಟ್ಟು, ತುಳುನಾಡಿನ ಸಂಸ್ಕ್ರತಿಯ ಬೆಳವಣಿಗೆ ಹಾಗೂ ತುಳು ಸಂಸ್ಕ್ರತಿಯ ಮೌಲ್ಯದ ಅರಿವು…
ಕರ್ನಾಟಕ ಸಂಘ ಕತಾರ್ : ಹಾಸಿಗೆ ಹಿಡಿದಿದ್ದ ಕುಂದಾಪುರದ ಜಯರಾಮ ಶೆಟ್ಟಿಯವರಿಗೆ ‘ಮನೋಬಲದ ಜಯವೀರ’ ಬಿರುದಿನೊಂದಿಗೆ ಗೌರವ, ಸಹಾಯಹಸ್ತ
ಕರ್ನಾಟಕ ಸಂಘ ಕತಾರ್ (ಕೆಎಸ್ಕ್ಯೂ) 2025 ರ ಆಗಸ್ಟ್ 10 ರಂದು ಬೆಂಗಳೂರಿನ ಬಸವೇಶ್ವರ ನಗರದ ಕರ್ನಾಟಕ ಎಂಜಿನಿಯರ್ಸ್ ಅಕಾಡೆಮಿಯಲ್ಲಿ ಸಂಸ್ಥಾಪಕರಿಗೆ, ರಜತಪಥದ ಹರಿಕಾರರಿಗೆ ಅಭಿವಂದನಾ ಕಾರ್ಯಕ್ರಮವನ್ನು ಆಯೋಜಿಸಿ, ತನ್ನ ಬೆಳ್ಳಿಹಬ್ಬದ ಸಂಭ್ರಮವನ್ನು ತವರು ನೆಲಕ್ಕೆ ತರುವುದರ ಮೂಲಕ ರಜತ ವರ್ಷಕ್ಕೆ ಇನ್ನಷ್ಟು ಮೆರುಗನ್ನು ನೀಡಿತು. ಈ ಸುಸಂಧರ್ಭದಲ್ಲಿ “25 ವರ್ಷ – 25 ನೊಂದ ಮುಖಗಳಲ್ಲಿ ಹರ್ಷ” ಎಂಬ ಧ್ಯೇಯದೊಂದಿಗೆ, ಸದಸ್ಯರು ಮತ್ತು ಹಿತೈಷಿಗಳಿಂದ ಸಂಗ್ರಹಿಸಿದ ನಿಧಿಯ ಮೂಲಕ, ರಾಜ್ಯದ ಬೇರೆ ಬೇರೆ ಕಡೆ ಅನಾಥರಿಗೆ, ವಿಶೇಷ ಚೇತನರಿಗೆ, ಏಡ್ಸ್ ಕ್ಯಾನ್ಸರಿನಂಥಹ ಭೀಕರ ಕಾಯಿಲೆಗಳಿಂದ ಬಳಲುವರಿಗೆ ಆಶ್ರಮಗಳನ್ನು ಸ್ಥಾಪಿಸಿ ನಡೆಸುವ 12 ನಿಸ್ವಾರ್ಥ ಸಮಾಜಸೇವಕರನ್ನು ಬಿರುದಿನೊಂದಿಗೆ ಗೌರವ ಧನವನ್ನು ನೀಡಿ ಸನ್ಮಾನಿಸಲಾಯಿತು. ಕೊಂಕಣ್ ರೈಲ್ವೆಯಲ್ಲಿ ಕೆಲಸ ಮಾಡುವಾಗ ಅಪಘಾತಕ್ಕೊಳಗಾಗಿ 34 ವರ್ಷಗಳಿಂದ ಹಾಸಿಗೆಯಲ್ಲಿರುವ ಕುಂದಾಪುರದ ಜಯರಾಮ ಶೆಟ್ಟಿಯವರನ್ನು ‘ಮನೋಬಲದ ಜಯವೀರ’ ಬಿರುದಿನೊಂದಿಗೆ ಸ್ಮರಣಿಕೆ, ರಜತ ವರ್ಷದ ವಿಶೇಷ ಶಾಲು, ಗೌರವ ಧನದೊಂದಿಗೆ ಸನ್ಮಾನಿಸಲಾಯಿತು. ಕರ್ನಾಟಕ ಸಂಘ ಕತಾರ್ ಅಧ್ಯಕ್ಷ ಡಾ|…
ಮಡಿಬೆಟ್ಟು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಣಂಜಾರಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬ್ರಹ್ಮಲಿಂಗೇಶ್ವರ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಶಿವಪ್ರಸಾದ್ ಹೆಗ್ಡೆಯವರು ಧ್ವಜಾರೋಹಣ ನೆರವೇರಿಸುವುದರೊಂದಿಗೆ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ನಂತರ ಸಭಾ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಉಪಾಧ್ಯಕ್ಷರಾದ ಮಂಜುನಾಥ ನಾಯಕ್, ಟ್ರಸ್ಟಿಗಳಾದ ವಿಕ್ರಂ ಹೆಗ್ಡೆ, ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸುಧೀರ್ ಹೆಗ್ಡೆ, ಶಾಲಾ ಸಂಚಾಲಕರಾದ ಸಿಎ ಚಂದನ್ ಹೆಗ್ಡೆ, ಟ್ರಸ್ಟ್ ನ ಕೋಶಾಧಿಕಾರಿ ಪ್ರಕಾಶ್ ಪ್ರಭು, ಮೇಲ್ಬಂಟ ಫ್ರೆಂಡ್ಸ್ ಅಧ್ಯಕ್ಷರಾದ ಮಹೇಶ್ ಹೆಗ್ಡೆ, ಪೆಲತ್ತೂರು ಫ್ರೆಂಡ್ಸ್ ನ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯರಾದ ಹರಿದಾಸ್ ನಾಯಕ್ ಹಾಗೂ ದಿನೇಶ್ ಯು.ಎಸ್, ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ರಾವ್, ಊರಿನ ಹಿರಿಯರು, ಸ್ಥಳೀಯರು, ಹಳೆ ವಿದ್ಯಾರ್ಥಿಗಳು ಹಾಗೂ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಈ ಹಿಂದಿನ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಶಾಲಾ ಹಳೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಲಾಯಿತು. ಶಾಲಾ ಪ್ರಭಾರ…