Author: admin

ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಬಂಟರ ಕ್ರೀಡೋತ್ಸವ ಸುರತ್ಕಲ್ ಗೋವಿಂದ ದಾಸ್ ಕಾಲೇಜ್ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಮುಂಬೈ ಬಂಟರ ಸಂಘದ ಮಾಜಿ ಅಧ್ಯಕ್ಷ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಡಾ. ಪಿ.ವಿ ಶೆಟ್ಟಿ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು, ಸುರತ್ಕಲ್ ಬಂಟರ ಸಂಘ ನನ್ನ ಮನೆಯಿದ್ದಂತೆ. ಸಂಘದ ಕಾರ್ಯ ಚಟುವಟಿಕೆಗಳನ್ನು ಗಮನಿಸುತ್ತಾ ಬಂದಿದ್ದೇನೆ. ಇದು ಇತರ ಸಂಘಟನೆಗಳಿಗೆ ಮಾದರಿಯಾಗಿದೆ. ಕ್ರೀಡೆಯಷ್ಟೇ ಶಿಕ್ಷಣವೂ ಮುಖ್ಯ. ಮಕ್ಕಳು ಕ್ರೀಡೆಗೆ ಮಾತ್ರ ಮಹತ್ವ ಕೊಟ್ಟರೆ ಸಾಲದು. ಕ್ರೀಡಾ ಕ್ಷೇತ್ರದಲ್ಲಿ ಏನಾದರೂ ಸಾಧನೆ ಮಾಡಲು ಅನಾನುಕೂಲಗಳಿದ್ದರೆ ನನ್ನನ್ನು ಸಂಪರ್ಕಿಸಿ. ನಿಮ್ಮ ಜೊತೆಗೆ ನಾನಿದ್ದೇನೆ ಎಂದರು. ಬಳಿಕ ಮಾತಾಡಿದ…

Read More

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹೆಗ್ಗೂಡು ಗ್ರಾಮದಲ್ಲಿ ಜನಾನುರಾಗಿ ವೈದ್ಯರಾಗಿ ಸುಮಾರು 45 ವರ್ಷಗಳ ಕಾಲ ನಿಸ್ವಾರ್ಥವಾಗಿ ಸೇವೆ ಸಲ್ಲಿಸಿದ ದಿವಂಗತ ಡಾಕ್ಟರ್ ಸುರೇಶ್ ಹೆಗ್ಡೆಯವರ 10 ನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಜನವರಿ 8 ರಂದು ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಹೆಗ್ಗೂಡಿನ ಡಾ. ಸುರೇಶ್ ಹೆಗ್ಡೆ ಸ್ವಗೃಹ ಸರಸ್ವತಿ ನಿಲಯದಲ್ಲಿ ಅವರ ಕುಟುಂಬ ವರ್ಗದವರು ಮತ್ತು ಡಾಕ್ಟರ್ ಸುರೇಶ್ ಹೆಗ್ಡೆ ಅಭಿಮಾನಿ ಬಳಗದ ವತಿಯಿಂದ ಅತ್ಯಂತ ಯಶಸ್ವಿಯಾಗಿ ರಕ್ತದಾನ ಶಿಬಿರ ಜರುಗಿತು. ಈ ಸಂದರ್ಭದಲ್ಲಿ ಆಗಮಿಸಿದ್ದ ಅತಿಥಿಗಳು ದಿವಂಗತರು ಖಾಸಗಿ ವೈದ್ಯರಾಗಿ 45 ವರ್ಷಗಳ ಕಾಲ ಯಾವುದೇ ಫಲಾಪೇಕ್ಷೆ ಬಯಸದೇ ಜನಸೇವೆಯೇ ಜನಾರ್ಧನ ಸೇವೆ ಎನ್ನುವ ಧ್ಯೇಯ ವಾಕ್ಯದಂತೆ ಹೆಗ್ಗೋಡು ಗ್ರಾಮ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಜನರಿಗೆ ಹಗಲು ರಾತ್ರಿ ಅವಿಶ್ರಾಂತವಾಗಿ ನೀಡಿದ ವೈದ್ಯಕೀಯ ಹಾಗೂ ಸಾಮಾಜಿಕ ಸೇವೆಯನ್ನು ಹೃದಯಾಂತರಾಳದಿಂದ ಸ್ಮರಿಸಿದರು. ರಕ್ತದಾನ ಶಿಬಿರದಲ್ಲಿ ಸಾಗರ ರೋಟರಿ ಮತ್ತು ರೆಡ್ ಕ್ರಾಸ್ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ…

Read More

“ಆದಿ ಪರ್ಮಲೆ ಅಂತ್ಯ ಪುತ್ಯೆ” ಪನ್ಪಿ ದೈವೊ ನುಡಿತ ಪೆರ್ಮೆದಂಚನೇ ಪರ್ಮಲೆ ಪನ್ನಗನೇ ಅವ್ವೊಂಜಿ ಪೊಸ ಬಗೆತ ಪರಿಮಳ.. ಪರ್ಮಲೆ ಮಣ್ಣ ಪೆರ್ಮೆನೇ ಅಂಚಿನವು. ಮೂಡಾಯಿ ಮಲೆ, ಪಡ್ಡಾಯಿ ಕಡಲ ನಡುತ ತುಳುವ ನಾಡ್‌ಡ್ ಪಡ್ಡೆಯಿಡ್ ಪೆರಿಯ ಮಲೆ ದಿಂಜಿ ಪಚ್ಚೆ ಪಜಿರ ನಿಲೆ ಈ ಪರ್ಮಲೆದ ಪೊರ್ಲು ತಿರ್ಲ್ ಪಿಂದ್‌ದ್ ಮುಗಿಯಂದ್, ಪಂಡ್‌ದ್ ತೀರಂದ್, ತೂಯಿನಾತ್ ಬೊಡಿಯಂದ್. ಅಮರ್ ದೈವೊಲೆ ನಿಲೆ, ಅಮರ್ ದೇಬೆರೆ ಕಲೆ, ಅಮರ್ ಬೊಲ್ಲಿಲೆ ತಿಬಿಲೆ ಬೆಳಗಿನ ಮಣ್ಣ್, ಸತ್ಯೊ ದರ್ಮೊಲು ಮೆರೆಯಿ ಕಣ್ಣ್ ಉಂದು. ಪುದರ್‌ಗ್ ಸರಿಯಾದ್ ಪರ್ಮಲೆ ಮಲೆತ್ತ ನಾಡ್. ಮರೆತ್ತ ಬೂಡು! ಓಲು ಮರೆ (ಬರ್ಸ) ಎಚ್ಚನೋ ಅಲ್ಪ ಮಲೆ ಪೆರ್ಚು, ಓಲು ಮಲೆ ಎಚ್ಚನೋ ಅಲ್ಪ ಮರೆ ಪೆರ್ಚು. ಬರ್ಸೊಡ್ದು ಬುಲೆ, ಬುಲೆತ್ತ ನಿಲೆ ಪಚ್ಚೆ ಪಜಿರ ಸೆಲೆ, ಪಚ್ಚೆದೈಸಿರೊಡು ಪುಡೆಮಿದಪ್ಪೆನ ಸೇಲೆ. ಅಂಚಾದ್ ಪರ್ಮಲೆಡ್ ಬುಲೆ ಸೆಳೆ ಒರಿಪುಗಾದ್, ಪಿದಯಿ ರಾಜ್ಯೊದ ದಂಡ್ ಬರಂದಿಲೆಕೊ ಕಾಪುಗಾದ್ ದಟ್ಟಿದುಂತಿ ಮಲೆ,…

Read More

ಗಣಿತನಗರ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-೪೪, ಜನವರಿ ೧೩ರ ಮಂಗಳವಾರದ0ದು ಸ0ಜೆ ೦೬.೧೫ಕ್ಕೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ೯೨.೭ ಬಿಗ್ ಎಫ್‌ಎಂನ ರೆಡಿಯೋ ಜಾಕಿ ಆರ್.ಜೆ. ನಯನರವರು ‘ಯುವಮನಸ್ಸುಗಳಿಗೆ ಒಂದಿಷ್ಟು ಮಾತು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಸಕ್ತರು ಭಾಗವಹಿಸಬಹುದೆಂದು ಸAಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

Read More

ಭಾರತವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಈಗಾಗಲೆ ಮುಂಚೂಣಿಯಲ್ಲಿದೆ. ಜ್ಞಾನಸುಧಾದಂತಹ ಸAಸ್ಥೆಗಳು ಈ ರೀತಿಯ ಉತ್ತಮ ಸಾಧನೆಯನ್ನು ಮಾಡುತ್ತಿರುವುದರಿಂದ ಎಲ್ಲಾ ಕ್ಷೇತ್ರಗಳಲ್ಲಿ ಮುಂದಿನ ದಿನಗಳಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಸಾಧಿಸುವುದರಲ್ಲಿ ಸಂಶಯವಿಲ್ಲ. ನಾವು ಮಾಡುವ ಕೆಲಸದ ಅರಿವಿರಲಿ ಮತ್ತು ಅದನ್ನು ಸಂತೋಷದಿAದ ಮಾಡಬೇಕು ಆಗ ಎಲ್ಲ ಸಾಧನೆಯು ಸುಲಭ ಸಾಧ್ಯವಾಗುವುದು ಎಂದು ಶ್ರೀ ಟಿ ಸುಧಾಕರ ಪೈಯವರು ಹೇಳಿದರು. ಇವರು ಮಣಿಪಾಲದ ವಿದ್ಯಾನಗರ ಗ್ರೀನ್ಸ್ ನಲ್ಲಿ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಆಯೋಜಿಸಿರುವ ಜ್ಞಾನಸುಧಾ ಸಂಸ್ಥಾಪಕರ ದಿನಾಚರಣೆಯ ಎರಡನೇ ಹಂತದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಮಾತನಾಡಿ ಸಮರ್ಥ, ಶಕ್ತಿಶಾಲಿ ದೇಶ ನಿರ್ಮಾಣವಾಗುತ್ತಿರುವುದು ಭಾರತೀಯರಾದ ನಮಗೆ ಅಭಿಮಾನದ ವಿಷಯ. ಅಂದು ದೇಶದ ಸಾಲಕ್ಕಾಗಿ ಚಿನ್ನವನ್ನು ಅಡವಿಟ್ಟ ಭಾರತ ಇಂದು ಜಗತ್ತಿನ ೭೦ ರಾಷ್ಟçಗಳಿಗೆ ಸಾಲ ನೀಡುವ ದೇಶವಾಗಿ ಬೆಳೆದು ನಿಂತಿದೆ.ಅದರಂತೆ ಒಂದೇ ವರ್ಷದಲ್ಲಿ ದೇಶಕ್ಕೆ…

Read More

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ನಿಟ್ಟೆ ವಿನಯ ಹೆಗ್ಡೆ ಅವರ ಜೀವನ ಶೈಲಿ ಎಲ್ಲರಿಗೂ ಆದರ್ಶ, ಅವರ ಕೊಡುಗೆ ಸಮಾಜಕ್ಕೆ ದೊಡ್ಡದು, ಅವರ ನೆನಪು ಶಾಶ್ವತ. ಸರಳ ಸಜ್ಜನಿಕೆಯ ವ್ಯಕ್ತಿತ್ವದ ವಿನಯ ಹೆಗ್ಡೆ ಅವರು ನಮ್ಮೆಲ್ಲರ ಮನಸ್ಸಿನಲ್ಲಿ ಚಿರಕಾಲ ಉಳಿಯುತ್ತದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು. ಬಂಟ್ಸ್ ಹಾಸ್ಟೇಲ್ ಶ್ರೀ‌ ರಾಮಕೃಷ್ಣ ಕಾಲೇಜ್ ಬಳಿ ಇರುವ ಶ್ರೀಮತಿ ಗೀತಾ ಎಸ್ ಎಂ ಶೆಟ್ಟಿ ಸಭಾಂಗಣದಲ್ಲಿ ಇತ್ತೀಚೆಗೆ ಅಗಲಿದ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯ ಹೆಗ್ಡೆಯವರಿಗೆ ಸಲ್ಲಿಸಿದ ಶ್ರದ್ದಾಂಜಲಿ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಿನಯ ಹೆಗ್ಡೆಯವರ ಜೀವನ ಶೈಲಿ ನಮಗೆಲ್ಲರಿಗೂ ಮಾದರಿ. ಅವರಂತೆ ಇನ್ನೋರ್ವ ಬಂಟ ಇಲ್ಲ. ವಿನಯ ಹೆಗ್ಡೆಯವರ ನೆನಪು ನಮ್ಮ ಮನಸ್ಸಿನಲ್ಲಿ ಚಿರಕಾಲ ಉಳಿಯುತ್ತದೆ. ಅವರು ನಡೆದ ಹಾದಿಯಲ್ಲಿ ನಾವು ಮುನ್ನಡೆಯೋಣ ಎಂದರು. ಕರ್ನಲ್ ಶರಶ್ಚಂದ್ರ ಭಂಡಾರಿ…

Read More

ಕ್ಯಾನ್ಸರ್ ರೋಗಿಗಳಿಗೆ ಸೇವೆ ನೀಡುತ್ತಿರುವ ತಪಸ್ಯ ಫೌಂಡೇಶನ್ ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಹಯೋಗದಲ್ಲಿ ಮಂಗಳೂರು ಟ್ರಯಥ್ಲಾನ್ ಮತ್ತು ಆಲ್ ಕಾರ್ಗೋ ಮಂಗಳೂರು ಇದರ ವತಿಯಿಂದ ನಡೆಯುತ್ತಿರುವ ಬೀಚ್ ಫೆಸ್ಟಿವಲ್‌ಗೆ ಶುಕ್ರವಾರ ತಣ್ಣೀರುಬಾವಿಯಲ್ಲಿ ಚಾಲನೆ ನೀಡಲಾಯಿತು. ಶರವು ಶ್ರೀ ಮಹಾಗಣಪತಿ ದೇವಳದ ಮ್ಯಾನೇಜಿಂಗ್ ಟ್ರಸ್ಟಿ ಶರವು ರಾಘವೇಂದ್ರ ಶಾಸ್ತ್ರಿ ಅವರು ಮುಖ್ಯ ಅತಿಥಿಯಾಗಿದ್ದರು. ಸಮಾಜದಲ್ಲಿ ನೊಂದವರಿಗೆ ಸಹಾಯ ಮಾಡಿದರೆ ದೇವರು ಮೆಚ್ಚುತ್ತಾರೆ. ತಪಸ್ಯ ಫೌಂಡೇಶನ್ ಮೂಲಕ ಸಬಿತಾ ಶೆಟ್ಟಿ ಅವರು ಕ್ಯಾನ್ಸರ್ ಪೀಡಿತರಿಗೆ ಸಹಾಯ ಮಾಡುವ ದೊಡ್ಡ ಗುಣವನ್ನು ಅಳವಡಿಸಿಕೊಂಡಿದ್ದಾರೆ. ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲು ಬೀಚ್ ಫೆಸ್ಟಿವಲ್ ಹಮ್ಮಿಕೊಂಡಿದ್ದಾರೆ. ಆದರ್ಶ ಮಹಿಳೆಯಾಗಿರುವ ಅವರ ಸಮಾಜಮುಖಿ ಕೆಲಸಗಳಿಗೆ ಬೆನ್ನೆಲುಬಾಗಿ ನಿಲ್ಲೋಣ ಎಂದರು. ಜಮಾಅತೆ ಇಸ್ಲಾಮಿ ಹಿಂದ್‌ನ ಕಾರ್ಯದರ್ಶಿ ಮೊಹಮ್ಮದ್ ಕುಂಞಿ ಎಂ.ಎಚ್., ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ರೆ.ಫಾ.ವಿಲ್ಪ್ರೆಡ್ ಡಿಸೋಜ, ಯುವಜನ ಮತ್ತು ಕ್ರೀಡಾ ಸಬಲೀಕರಣ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿಸೋಜ, ಪಶ್ಚಿಮ ಬಂಗಾಳದ ನಿವೃತ್ತ ಡಿಜಿಪಿ ಡಾ.…

Read More

ತುಳುನಾಡಿನ ಸಮೃದ್ಧ ಸಂಸ್ಕೃತಿ, ಆರಾಧನಾ ಪರಂಪರೆ ಮತ್ತು ಭಾಷಾ ವೈಭವವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಮಹತ್ವಾಕಾಂಕ್ಷೆಯೊಂದಿಗೆ, ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ‘ರಾಷ್ಟ್ರೀಯ ತುಳು ವಿಚಾರ ಸಂಕಿರಣ’ಕ್ಕೆ ಶುಕ್ರವಾರದಂದು ಪ್ರಮೋದ್ ಸಪ್ರೇ ಇವರ ನಾಡಗೀತೆ ಹಾಡಿನೊಂದಿಗೆ ಅದ್ಧೂರಿ ಚಾಲನೆ ದೊರೆಯಿತು. ತುಳುವರ್ಲ್ಡ್ ಫೌಂಡೇಶನ್ (ಕಟೀಲು- ಮಂಗಳೂರು) ಮತ್ತು ತುಳುವ ಮಹಾಸಭೆ (ಬೆಂಗಳೂರು), ಅಲಯನ್ಸ್ ಯೂನಿವರ್ಸಿಟಿಯ ‘ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಇಂಡಿಯನ್ ನಾಲೆಡ್ಜ್ ಸಿಸ್ಟಮ್ಸ್’ ಹಾಗೂ ‘ಸ್ಕೂಲ್ ಆಫ್ ಪರ್ಫಾರ್ಮಿಂಗ್ ವಿಶುವಲ್ ಅಂಡ್ ಕ್ರಿಯೇಟಿವ್ ಆರ್ಟ್ಸ್’ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಿವೆ. ಕಾರ್ಯಕ್ರಮದ ಸ್ವಾಗತ ಭಾಷಣ ಮಾಡಿದ ಸಿ.ಒ.ಇ.ಐ.ಕೆ.ಎಸ್ ಡೈರೆಕ್ಟರ್ ಡಾ. ಎ.ಎಂ. ಶ್ರೀಧರನ್, “ನಮ್ಮ ಭಾಷೆಯನ್ನು ನಾವು ಪ್ರೀತಿಸಿದಾಗ ಮಾತ್ರ ದೇಶ ಸಮೃದ್ಧವಾಗಿ ಬೆಳೆಯಲು ಸಾಧ್ಯ. ತುಳು ಭಾಷೆಯು ಅತ್ಯಂತ ಪ್ರಾಚೀನ ಹಾಗೂ ಶ್ರೀಮಂತವಾದುದು. ತುಳುವ ಸಮಾಜದ ಆರಾಧನಾ ಪದ್ಧತಿ ಮತ್ತು ಜನಪದ ಪರಂಪರೆಯನ್ನು ಯುವ ಜನಾಂಗಕ್ಕೆ ಪರಿಚಯಿಸುವ ಅವಶ್ಯಕತೆ ಇದೆ,” ಎಂದು ಆಶಯ ವ್ಯಕ್ತಪಡಿಸಿದರು. ​ಅಲಯನ್ಸ್ ವಿಶ್ವವಿದ್ಯಾಲಯದ…

Read More

ಭಾರತೀಯ ಸೇನೆಯಲ್ಲಿ ನ್ಯಾಷನಲ್ ಸೆಕ್ಯೂರಿಟಿ ಗಾರ್ಡ್ (NSG) ಒಂದು ಸ್ಪೆಷಲ್ ಫೋರ್ಸ್. ಇವರನ್ನು ಬ್ಲ್ಯಾಕ್ ಕ್ಯಾಟ್ ಕಮಾಂಡೊ ಎಂದು ಕರೆಯುತ್ತಾರೆ. ಕೆಲವೇ ಆಯ್ದ ಸೈನಿಕರಿಗೆ ಮಾತ್ರ ದೊರೆಯುವ ಅತೀ ಕಠಿಣ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ NSG BLACK CAT COMMANDO ಆಗಿ ಸಚಿನ್ ಶೆಟ್ಟಿ ನೇಮಕಗೊಂಡಿದ್ದಾರೆ. ಸಚಿನ್ ಶೆಟ್ಟಿ ಹೆಬ್ರಿಯ ದಿ. ಜಗದೀಶ್ ಶೆಟ್ಟಿ ಮತ್ತು ಸತ್ಯವತಿ ಶೆಟ್ಟಿ ದಂಪತಿಯ ಪುತ್ರ. 2012ರಲ್ಲಿ ಸೇನೆಗೆ ಸೇರ್ಪಡೆಗೊಂಡ ಇವರು 1 ವರ್ಷ ಮಧ್ಯಪ್ರದೇಶದ ಜಬಲ್ಪುರ್ ನಲ್ಲಿ ತರಬೇತಿ ಪಡೆದು ಬಳಿಕ ರಾಜಸ್ತಾನ್, ಜಮ್ಮು ಕಾಶ್ಮೀರ, ಪಂಜಾಬ್ ಹಾಗೂ ಜಮ್ಮು ರಾಷ್ಟ್ರೀಯ ರೈಪಲ್ಸ್ ನಲ್ಲಿ ಕರ್ತವ್ಯ ಸಲ್ಲಿಸಿದ್ದಾರೆ. ಪ್ರಸ್ತುತ 60 ದಿನಗಳ NSG Commando ತರಬೇತಿ ಮುಗಿಸಿ ದೆಹಲಿಯಲ್ಲಿ ಕರ್ತವ್ಯಕ್ಕೆ ನೇಮಕಗೊಂಡಿದ್ದಾರೆ.

Read More

ಸೂರಿಂಜೆ ಮೂಲದ ಉದ್ಯಮಿ ಡಿ.ಕೆ ಶೆಟ್ಟಿ ಮಾಲಕತ್ವದ ಇನ್ನಾ ಹಾಸ್ಪಿಟಾಲಿಟಿ ಸಂಸ್ಥೆ ಮುಂಬೈನಲ್ಲಿ ತನ್ನ ಪ್ರಧಾನ ಕಚೇರಿಯನ್ನು ಹೊಂದಿದ್ದು, ದೇಶದ ವಿವಿಧ ಭಾಗಗಳಲ್ಲಿ ತನ್ನ ಸೇವೆಯನ್ನು ವಿಸ್ತರಿಸುತ್ತಿರುವ ಪ್ರಮುಖ ಹಾಸ್ಪಿಟಾಲಿಟಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಪ್ರಸ್ತುತ ಸಂಸ್ಥೆಯಲ್ಲಿ 500ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು, ಗುಣಮಟ್ಟದ ಸೇವೆ ಮತ್ತು ವೃತ್ತಿಪರ ನಿರ್ವಹಣೆಯ ಮೂಲಕ ವಿಶಿಷ್ಟ ಸ್ಥಾನವನ್ನು ಪಡೆದುಕೊಂಡಿದೆ. ವ್ಯವಹಾರ ವಿಸ್ತರಣೆಯ ಉದ್ದೇಶದಿಂದ ಹಾಗೂ ವೇಗವಾಗಿ ಬೆಳೆಯುತ್ತಿರುವ ವ್ಯಾಪಾರ ಕೇಂದ್ರವಾಗಿರುವ ಸುರತ್ಕಲ್ ನಗರದಲ್ಲಿ ಇನ್ನಾ ಹಾಸ್ಪಿಟಾಲಿಟಿ ಸಂಸ್ಥೆಯ ನೂತನ ಶಾಖೆಯನ್ನು ಆರಂಭಿಸಲಾಗಿದೆ. ಇದರ ಅಂಗವಾಗಿ ಜನವರಿ 1, 2026 ಗುರುವಾರ ಸಂಜೆ 4 ಗಂಟೆಗೆ ಸುರತ್ಕಲ್‌ನ ಅಭಿಷ್ ಬ್ಯುಸಿನೆಸ್ ಸೆಂಟರ್ ಕಟ್ಟಡದಲ್ಲಿ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ನೂತನ ಶಾಖೆಯನ್ನು ವಿಶ್ವಕಪ್ ಮಹಿಳಾ ಕಬಡ್ಡಿ ವಿಜೇತ ತಂಡದ ಸದಸ್ಯೆ ಕುಮಾರಿ ಧನಲಕ್ಷ್ಮಿ ಅವರು ರಿಬ್ಬನ್ ಕತ್ತರಿಸುವ ಮೂಲಕ ಅಧಿಕೃತವಾಗಿ ಉದ್ಘಾಟಿಸಿದರು. ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದ ಸಾಧನೆ ಮಾಡಿದ ಯುವ ಪ್ರತಿಭೆಯ ಕೈಯಿಂದ ಶಾಖೆ ಉದ್ಘಾಟನೆಯಾಗಿದ್ದು,…

Read More