Author: admin

ಕ್ಯಾಂಪ್ಕೊ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಎಸ್.ಆರ್ ಸತೀಶ್ಚಂದ್ರರವರಿಗೆ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ ಅಭಿನಂದನಾ ಸಮಾರಂಭವನ್ನು ಬ್ಯಾಂಕಿನ ಸಭಾಂಗಣದಲ್ಲಿ ಗೌರವಪೂರ್ವಕವಾಗಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಎನ್. ಕಿಶೋರ್ ಕೊಳತ್ತಾಯ ಅವರು ಅಧ್ಯಕ್ಷತೆ ವಹಿಸಿ, ವಿಶೇಷ ಅಭಿನಂದನಾ ಭಾಷಣದ ಮೂಲಕ ಪುತ್ತೂರು ಟೌನ್ ಬ್ಯಾಂಕ್ ಮತ್ತು ಸತೀಶ್ಚಂದ್ರರವರ ನಡುವಿನ ಅವಿನಾಭಾವ ಬಾಂಧವ್ಯವನ್ನು ಸ್ಮರಿಸಿದರು. ಬ್ಯಾಂಕಿನ ಅಭಿವೃದ್ಧಿ ಹಾಗೂ ಪ್ರಗತಿಪರ ಚಟುವಟಿಕೆಗಳಲ್ಲಿ ಅವರು ನೀಡಿರುವ ಮಾರ್ಗದರ್ಶನವನ್ನು ವಿಶೇಷವಾಗಿ ಉಲ್ಲೇಖಿಸಿ, ಬ್ಯಾಂಕಿನ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಅರ್ಪಿಸಿದರು. ಮುಂದುವರೆದು ಮಾತನಾಡಿದ ಅವರು, ನೂತನ ಕ್ಯಾಲೆಂಡರ್ ವರ್ಷದಲ್ಲಿ ಬ್ಯಾಂಕ್ ಹಲವು ವಿನೂತನ ಕಾರ್ಯಕ್ರಮಗಳನ್ನು ಜಾರಿಗೆ ತರುವ ಉದ್ದೇಶವಿದ್ದು, ಬ್ಯಾಂಕಿನ ಡಿಜಿಟಲೀಕರಣಕ್ಕೆ ವಿಶೇಷ ಪ್ರಾಧಾನ್ಯತೆ ನೀಡಲಾಗುತ್ತಿದೆ ಎಂದರು. ಈ ವರ್ಷಾಂತ್ಯದೊಳಗೆ ಬ್ಯಾಂಕಿನ ಸಂಪೂರ್ಣ ಡಿಜಿಟಲೀಕರಣ ಕಾರ್ಯ ಪೂರ್ಣಗೊಳ್ಳುವ ವಿಶ್ವಾಸವನ್ನೂ ವ್ಯಕ್ತಪಡಿಸಿದರು. ಅಭಿನಂದನೆ ಸ್ವೀಕರಿಸಿದ ಎಸ್.ಆರ್. ಸತೀಶ್ಚಂದ್ರರು, ತಮ್ಮ ಬಾಲ್ಯದಿಂದಲೂ ಪುತ್ತೂರು ಟೌನ್ ಬ್ಯಾಂಕಿನೊಂದಿಗೆ ಹೊಂದಿರುವ ಭಾವನಾತ್ಮಕ ಹಾಗೂ ನಿಕಟವಾದ ಸಂಬಂಧವನ್ನು ನೆನೆದು ಸಂತಸ ವ್ಯಕ್ತಪಡಿಸಿದರು.…

Read More

ಆಳ್ವಾಸ್ ಸ್ವಾಯತ್ತ ಕಾಲೇಜಿನ ಮಾನವ ಹಕ್ಕುಗಳ ಕೋಶ ಹಾಗೂ ಸಮಾಜ ಕಾರ್ಯ ವಿಭಾಗ, ಮಾನವಿಕ ವಿಭಾಗ, ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗ, ಎನ್‌ಸಿಸಿ ಹಾಗೂ ಎನ್‌ಎಸ್‌ಎಸ್ ಘಟಕಗಳ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಖ್ಯಾತ ಚಿಂತಕ ಹಾಗೂ ಬರಹಗಾರ ಅರವಿಂದ ಚೊಕ್ಕಾಡಿ ಮಾತನಾಡಿ, ಮಾನವ ಹಕ್ಕುಗಳ ದಿನಾಚರಣೆ ಎಲ್ಲೆಡೆ ನಡೆಯುತ್ತಿದ್ದರೂ ಅದರ ಗಂಭೀರತೆಯನ್ನು ಮನಸ್ಸಿನಲ್ಲಿ ಇಟ್ಟು ಕಾರ್ಯಕ್ರಮ ಕೈಗೊಳ್ಳುವುದು ಕಡಿಮೆ. ಜಾತಿ, ಧರ್ಮ, ವರ್ಣ, ವರ್ಗ, ಲಿಂಗ ಭೇದಗಳು ಸಮಾಜದಲ್ಲಿ ಇನ್ನೂ ಮುಂದುವರಿದಿವೆ ಎಂದು ಸೂಚಿಸಿದ ಅವರು, ತಾರತಮ್ಯ ಇದೆ ಎಂದು ಹೇಳುವುದಕ್ಕಿಂತಲೂ ಅದು ಎಲ್ಲಿ, ಹೇಗೆ ಇದೆ ಎನ್ನುವುದನ್ನು ಪತ್ತೆ ಹಚ್ಚಿದಾಗ ಮಾತ್ರ ಮಾನವ ಹಕ್ಕುಗಳ ಚರ್ಚೆ ಫಲಪ್ರದವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಸುನ್ನತ್, ಹೆಣ್ಣು ಶಿಶು ಹತ್ಯೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳಂತಹ ಗಂಭೀರ ಸಾಮಾಜಿಕ ಸಮಸ್ಯೆಗಳನ್ನು ಉದಾಹರಿಸಿ ಮಾನವ ಹಕ್ಕುಗಳು ಜಾರಿಗೊಂಡ ಸನ್ನಿವೇಶವನ್ನು ತಿಳಿಸಿದರು. ಕಾನೂನಿನ ಮುಂದೆ ಸಮಾನತೆ ಎನ್ನುವುದೇ ಮಾನವ…

Read More

ಚಾರ್ಕೋಪ್ ಕನ್ನಡ ಬಳಗದ ಮಹಿಳಾ ವಿಭಾಗದ ವತಿಯಿಂದ ಮಹಾರಾಷ್ಟ್ರದಲ್ಲಿರುವ “ಅಷ್ಟವಿನಾಯಕ” ದೇಗುಲಗಳ ಯಾತ್ರೆಯನ್ನು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪದ್ಮಾವತಿ ಶೆಟ್ಟಿಯವರ ನೇತೃತ್ವದಲ್ಲಿ ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ​ಸುಮಾರು ಮೂವತ್ತಾರು ಮಂದಿ ಮಹಿಳೆಯರನ್ನು ಒಳಗೊಂಡ ಈ ಧಾರ್ಮಿಕ ಪಯಣವು ಬೆಳಗಿನ ಶುಭ ಮುಹೂರ್ತದಲ್ಲಿ ಪ್ರಾರಂಭವಾಯಿತು. ಅಷ್ಟವಿನಾಯಕ ದೇಗುಲಗಳಲ್ಲಿ ಮೊದಲನೆಯದಾದ, ಖಾಪೋಲಿಯ ಮಹಾಡ್‌ನಲ್ಲಿರುವ “ವರದವಿನಾಯಕ” ದೇವರ ಸನ್ನಿಧಿಯಲ್ಲಿ ತೆಂಗಿನಕಾಯಿ ಒಡೆದು, ಆರತಿ ಬೆಳಗಿಸುವ ಮೂಲಕ ಯಾತ್ರೆಗೆ ಶುಭಾರಂಭ ಮಾಡಲಾಯಿತು. ಅಲ್ಲಿಂದ, ಪಾಲಿಯಲ್ಲಿರುವ ನಂದಿ ಆಕಾರದ ಬೆಟ್ಟದ ಅಡಿಯಲ್ಲಿನ “ಬಲ್ಲಾಳೇಶ್ವರ” ದೇವಾಲಯ ಮತ್ತು ಥೇವೂರಿನ “ಚಿಂತಾಮಣಿ” ಗಣಪತಿಯ ದರ್ಶನ ಪಡೆದು, ಆ ರಾತ್ರಿ ಅಲ್ಲೇ ತಂಗಲಾಯಿತು. ​ಮರುದಿನ ಬ್ರಾಹ್ಮೀ ಮುಹೂರ್ತದಲ್ಲಿ “ಪ್ರತಿ ಬಾಲಾಜಿ” ಎಂದೇ ಪ್ರಸಿದ್ಧವಾಗಿರುವ ಪುಣೆಯ ಸಮೀಪದ ಬಾಲಾಜಿ ಮಂದಿರದ ದರ್ಶನ ಮತ್ತು ಬೆಳಗಿನ ಆರತಿಯು ಎಲ್ಲರ ಮನಸ್ಸನ್ನು ಪ್ರಸನ್ನಗೊಳಿಸಿತು. ಬಳಿಕ, ಜೇಜೂರಿನಲ್ಲಿರುವ “ಖಂಡೋಬಾ” ದೇವಾಲಯಕ್ಕೆ ಸುಮಾರು 250ಕ್ಕೂ ಅಧಿಕ ಮೆಟ್ಟಿಲುಗಳನ್ನು ಏರಿ ಖಂಡೋಬಾ (ಮಲ್ಹಾರಿ ಮಾರ್ತಾಂಡ) ದೇವರ ದರ್ಶನ ಪಡೆಯಲಾಯಿತು. ಹಳದಿ ಹುಡಿಯಿಂದ ದೇವರಿಗೆ…

Read More

ವಸತಿ ಹಾಗೂ ವಸತಿಯೇತರ ಉದ್ದೇಶಗಳಿಗೆ ಜಮೀನಿನ ಭೂಪರಿವರ್ತನೆಗಾಗಿ ಭೂ ಮಾಲೀಕರು ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ ನಂತರ, ಅದು ತಾಂತ್ರಿಕ ಅನುಮೋದನೆಗಾಗಿ ನಗರ ಮತ್ತು ಗ್ರಾಮಾಂತರ ಯೋಜನಾ ಕಚೇರಿಗೆ ಕಳುಹಿಸಲಾಗುತ್ತಿತ್ತು. ಆ ಹಂತಕ್ಕೆ ಮುನ್ನ ಲೋಕೋಪಯೋಗಿ, ಕರಾವಳಿ ನಿಯಂತ್ರಣ, ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳ ನಿರಾಪೇಕ್ಷಣ ಪತ್ರಗಳನ್ನು ಪಡೆಯಬೇಕಾಗಿ ಬರುವುದು ವಿಳಂಬಕ್ಕೆ ಕಾರಣವಾಗುತ್ತಿತ್ತು. ವಿಶೇಷವಾಗಿ, ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿರುವ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳು ಸಿಟಿ ಮುನ್ಸಿಪಲ್ ಕೌನ್ಸಿಲ್, ಟೌನ್ ಮುನ್ಸಿಪಲ್ ಕೌನ್ಸಿಲ್, ಟೌನ್ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಹಾದು ಹೋಗುವುದರಿಂದ ‘ರಸ್ತೆ ಭೂ ಗಡಿ’ ಮತ್ತು ‘ಕಟ್ಟಡ ರೇಖೆ’ಗಳ ಮಧ್ಯೆಯ ಅಂತರವನ್ನು ನಿಖರವಾಗಿ ನಿಗದಿಪಡಿಸುವಲ್ಲಿ ಗೊಂದಲಗಳು ಉಂಟಾಗುತ್ತಿದ್ದು, ಅರ್ಜಿಗಳ ಅನುಮೋದನೆ ವಿಳಂಬವಾಗುತ್ತಿತ್ತು. ಈ ಸಮಸ್ಯೆಯನ್ನು ಮನಗಂಡ ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೋ ಹಾಗೂ ಆನಗಳ್ಳಿ ಗ್ರಾಮದ ಮಾಜಿ ಪಂಚಾಯತ್ ಅಧ್ಯಕ್ಷ ಸುರೇಶ್ ನಾಯ್ಕ್‌ ಅವರು ಮಾಜಿ ಸಂಸದ ಜೆ.ಪಿ ಹೆಗ್ಡೆಯವರ ಗಮನಕ್ಕೆ…

Read More

ಗಣಿತನಗರ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ‘ಮೌಲ್ಯಸುಧಾ’ ಜರುಗುತ್ತಾ ಬರುತ್ತಿದೆ. ಡಿಸೆಂಬರ್ ತಿಂಗಳ ಮೌಲ್ಯಸುಧಾ ಮಾಲಿಕೆ-೪೩ ತಾರೀಕು ೧೮, ಗುರುವಾರ ಸಂಜೆ ೬ ಗಂಟೆಗೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ನಾಡಿನ ಪ್ರಸಿದ್ಧ ಮೈಸೂರಿನ ಜೆ. ಎಸ್. ಎಸ್ ಸಂಸ್ಥೆಗಳು ಸುತ್ತೂರು ಇಲ್ಲಿನ ಸಂಯೋಜನಾಧಿಕಾರಿ, ಲೇಖಕರು ಹಾಗೂ ವಾಗ್ಮಿಗಳು ಆಗಿರುವ ಶ್ರೀ ಜಿ. ಎಲ್. ತ್ರಿಪುರಾಂತಕರವರು ಆಗಮಿಸಲಿದ್ದು ‘ಆಕಾಂಕ್ಷೆಗಳು ಮತ್ತು ಕನಸುಗಳು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಾರ್ವಜನಿಕರಿಗೆ ಬಾಗವಹಿಸಲು ಮುಕ್ತ ಅವಕಾಶವಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಪರ‍್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠ, ಉಡುಪಿ, ಪರ್ಯಾಯ ಪೀಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗಣೇಂದ್ರ ತೀರ್ಥ ಶ್ರೀಪಾದರು ಹಾಗೂ ಅವರ ಶಿಷ್ಯ ಪರಮಪೂಜ್ಯ ಸುಶ್ರೀಂದ್ರ ತೀರ್ಥ ಶ್ರೀಪಾದಂಗಳವರ ಶುಭಾಶೀರ್ವಾದದೊಂದಿಗೆ ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ ಉಡುಪಿಯ ಶ್ರೀ ಕೃಷ್ಣ ಮಠ ರಾಜಾಂಗಣ ಸಮೀಪದ ವಾಹನ ನಿಲುಗಡೆ ಆವರಣದ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದ ವೇದಿಕೆಯಲ್ಲಿ ದಶಂಬರ್ 13, ಶನಿವಾರದಂದು ಸಂಜೆ 5:45 ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಮೇಳೈಹಿಸಲಿದೆ ಎಂದು ಸಂಘಟನಾ ಕಾರ್ಯದರ್ಶಿ ಮುರುಳಿ ಕಡೆಕಾರ್ ತಿಳಿಸಿದರು. ಅವರು ಉಡುಪಿ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಆರಂಭದಲ್ಲಿ 45 ನಿಮಿಷಗಳ ಕಾಲ ನಡೆಯುವ ಸಭಾ ಕಾರ‍್ಯಕ್ರಮವನ್ನು ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗಣೇಂದ್ರ ತೀರ್ಥ ಶ್ರೀಪಾದರು ಹಾಗೂ ಪರಮಪೂಜ್ಯ ಸುಶ್ರೀಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿದರೆ, ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿರುವ ಯಶಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜದ ಎಲ್ಲಾ ಸ್ತರಗಳ ಪ್ರಮುಖರು ಸಭಾ ಕರ‍್ಯಕ್ರಮದಲ್ಲಿ…

Read More

ಬ್ರಹ್ಮಾವರ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ಡಿಸೆಂಬರ್ ೧೨ ರಂದು ಚಿಣ್ಣರ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ರಾಷ್ಟçಮಟ್ಟದ ಚೆಸ್ ಆಟಗಾರ ಪೂರ್ಣೇಶ್‌ರವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಜಿ ಎಮ್ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಕ್ರೀಡಾಕ್ಷೇತ್ರದಲ್ಲಿ ಅಮೋಘ ಸಾಧನೆಯನ್ನು ಮಾಡಿರುತ್ತಾರೆ. ಪೋಷಕರು ತಮ್ಮ ಮಕ್ಕಳು ಯಾವುದಾದರೂ ಒಂದು ಕ್ರೀಡೆಯಲ್ಲಿ ಸಾಧನೆ ಮಾಡುವಂತೆ ಪ್ರೋತ್ಸಾಹಿಸಬೇಕೆ0ದು ಕರೆ ನೀಡಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಎಲ್ಲಾ ಪುಟಾಣಿ ಮಕ್ಕಳಿಗೆ ಶುಭಹಾರೈಸಿ ಮಾತನಾಡಿ ಪೋಷಕರು ಚಿಕ್ಕ ಮಕ್ಕಳ ಶಾಲಾ ಚಟುವಟಿಕೆಗಳನ್ನು ವೀಕ್ಷಿಸಲು, ಪ್ರೋತ್ಸಾಹಿಸಲು ಎಲ್ಲಾ ಕಾರ್ಯಕ್ರಮಗಳಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸುತ್ತಾರೆ ಆದರೆ ಅದೇ ಮಕ್ಕಳು ದೊಡ್ಡವರಾದಾಗ ಪೋಷಕರು ಮೊದಲಿನ ಆಸಕ್ತಿಯನ್ನು ತೋರಿಸುವುದಿಲ್ಲ. ವಿದ್ಯಾರ್ಥಿಗಳ ಜೀವನದಲ್ಲಿ ಅಂಕಗಳ ಜೊತೆಗೆ ಕ್ರೀಡೆ ಕೂಡ ತುಂಬಾ ಮುಖ್ಯ. ಜಿ ಎಮ್ ಸಂಸ್ಥೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಹಲವಾರು ಚಟುವಟಿಕೆಗಳನ್ನು ಆಯೋಜಿಸಿಕೊಂಡು ಬರುತ್ತಿದೆ, ಇದಕ್ಕೆ ಪೋಷಕರು ನಿರಂತರ ಪ್ರೋತ್ಸಾಹಿಸಬೇಕೆಂದರು.ಶಾಲಾ ಪ್ರಾಂಶುಪಾಲರಾದ ಜಾರ್ಜ್…

Read More

ಮಂಗಳೂರು ವಿಶ್ವವಿದ್ಯಾಲಯ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ಜಂಟಿ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಖೋ-ಖೋ ಟೂರ್ನಮೆಂಟ್ 2025-26ರಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡ ಜಾಕೆ ಪರಮೇಶ್ವರ್ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಪಿಯನ್ನು ಸತತ 19ನೇ ಬಾರಿ ಹಾಗೂ ಮಹಿಳೆಯರ ತಂಡ ಹೆಚ್.ವಿ ಕಮಲೇಶ್ ರೋಲಿಂಗ್ ಟ್ರೋಫಿಯನ್ನು ಸತತ 16ನೇ ಬಾರಿ ಪಡೆದು ಅವಳಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಪುರುಷರ ವಿಭಾಗದಲ್ಲಿ ಆಳ್ವಾಸ್ ಪುರುಷರ ಖೋ-ಖೋ ತಂಡ 17-3 ಅಂಕಗಳ ಅಂತರದಿಂದ ಬ್ರಹ್ಮಾವರದ ಎಸ್.ಎಮ್.ಎಸ್ ಕಾಲೇಜಿನ ವಿರುದ್ಧ 14 ಅಂಕ ಹಾಗೂ ಇನ್ನಿಂಗ್ಸ್ ನೊಂದಿಗೆ ಗೆಲುವು ಸಾಧಿಸಿದರೆ, ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ತಂಡ 17-2 ಅಂಕಗಳ ಅಂತರದಲ್ಲಿ ಬೆಳ್ತಂಗಡಿಯ ಜಿ.ಎಫ್.ಜಿ.ಸಿ ಕಾಲೇಜು ವಿರುದ್ಧ 15 ಅಂಕ ಹಾಗೂ ಇನ್ನಿಂಗ್ಸ್ ನೊಂದಿಗೆ ಗೆಲುವು ಸಾಧಿಸಿ ಎರಡು ವಿಭಾಗದಲ್ಲಿ “ಸಮಗ್ರ ಪ್ರಶಸ್ತಿ”ಗೆ ಭಾಜನವಾಯಿತು. ವೈಯಕ್ತಿಕ ಪುರುಷರ ಚಾಂಪಿಯನ್‌ಶಿಪ್ ನಲ್ಲಿ “ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ”ಯನ್ನು ಆಳ್ವಾಸ್ ಕಾಲೇಜಿನ…

Read More

ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಸ್ಥಾಪಿಸಲ್ಪಟ್ಟ ಯಕ್ಷಧ್ರುವ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ದೇರಳಕಟ್ಟೆ ಕಂಫರ್ಟ್ಸ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು, ಈ ಶಾಖೆಯನ್ನು ದೇರಳಕಟ್ಟೆಯ ಮುಖ್ಯಪೇಟೆಗೆ ಸ್ಥಳಾಂತರಿಸಲಾಯಿತು. ಶಾಖೆಯ ಉದ್ಘಾಟನೆಯನ್ನು ಕಂಫರ್ಟ್ಸ್ ಬಿಲ್ಡಿಂಗ್ ಮಾಲಕರಾದ ಲ| ಚಂದ್ರಹಾಸ ಶೆಟ್ಟಿ ನೆರವೇರಿಸಿದರು. ದೇರಳಕಟ್ಟೆಯಲ್ಲಿ ಪ್ರಥಮ ಶಾಖೆಯನ್ನು ತೆರೆದು ಮಂಗಳೂರಿನ ಪಂಪ್ ವೆಲ್ ನಲ್ಲಿ ಎರಡನೇ ಶಾಖೆಯನ್ನು ಸ್ಥಾಪಿಸಿ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿರುವ ಯಕ್ಷಧ್ರುವ ಸೌಹಾರ್ದ ಸೊಸೈಟಿಗೆ ಶುಭವನ್ನು ಹಾರೈಸಿದರು. ಚಲನಚಿತ್ರ ಹಾಗೂ ರಂಗಭೂಮಿ ಕಲಾವಿದ, ಪಟ್ಲ ಫೌಂಡೇಶನ್ನಿನ ಸಂಘಟನಾ ಕಾರ್ಯದರ್ಶಿಯಾಗಿರುವ ಪ್ರದೀಪ್ ಆಳ್ವ ಕದ್ರಿ ದೀಪ ಬೆಳಗಿಸಿದರು. ಅಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಅವರು ಸಂಸ್ಥೆಯು ಕಳೆದ ಒಂದು ವರ್ಷದ ಅವಧಿಯಲ್ಲಿ ನಮ್ಮ ನಿರೀಕ್ಷೆಯನ್ನು ಮೀರಿ ಲಾಭವನ್ನು ಗಳಿಸಿರುತ್ತದೆ. ಇದಕ್ಕೆ ಸಂಘದ ಸದಸ್ಯರು, ಗ್ರಾಹಕರು ಹಾಗೂ ಸಿಬ್ಬಂದಿ ವರ್ಗದವರು ಕಾರಣಕರ್ತರಾಗಿರುತ್ತಾರೆ. ಮುಂದಕ್ಕೂ ಸರ್ವ ಸಹಕಾರವು ಇದೇ ರೀತಿ ಮುಂದುವರೆಯಲಿ ಎಂದರು. ಕರ್ನಾಟಕ ಸರಕಾರದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಇದರ…

Read More

ಪ್ರಪಂಚದಾದ್ಯಂತ ನಿರೀಕ್ಷೆ ಮೂಡಿಸಿರುವ ಬಂಟ್ಸ್ ನೌ ಚಾನೆಲ್‌ ಗುರುವಾರ (ಡಿಸೆಂಬರ್ 11) ಲೋಕಾರ್ಪಣೆಗೊಂಡಿತು. ನಿವೃತ್ತ ನ್ಯಾಯಮೂರ್ತಿ ಎನ್‌. ಸಂತೋಷ್‌ ಹೆಗ್ಡೆ ಅವರು ಚಾನೆಲ್‌ ಲೋಕಾರ್ಪಣೆ ಮಾಡಿದರು. ಬಂಟ್ಸ್ ನೌ ದೇಶಾದ್ಯಂತ ಮನೆ ಮಾತಾಗಿರುವ ಸಂಸ್ಥೆ. ಸುದ್ದಿ ಜಗತ್ತಿನಲ್ಲಿ ಹೊಸ ಹೊಸ ಪ್ರಯೋಗಗಳು, ವಿಭಿನ್ನ ಮತ್ತು ವಿಶೇಷ ವಸ್ತುನಿಷ್ಠ ಕಾರ್ಯಕ್ರಮಗಳ ಮೂಲಕ ಜನರ ನಂಬಿಕೆಗೆ ಪಾತ್ರವಾಗಿದೆ. ಈಗಾಗಲೇ ಮಂಗಳೂರಿನಲ್ಲಿ ಬಂಟ್ಸ್ ನೌ ಡಿಜಿಟಲ್‌ ಮಾಧ್ಯಮ ಆರಂಭವಾಗಿ ಹದಿನಾರು ವರ್ಷ ಕಳೆದಿದ್ದು, ಬಂಟ ಸಮಾಜದ ಮೂವರು ಮಹಾನ್ ದಾನಿಗಳ ಸಹಕಾರದಿಂದ ಈಗ ಚಾನೆಲ್‌ ಲೋಕಾರ್ಪಣೆಯಾಗಿ ಎಲ್ಲರ ಮನೆಮನಗಳಿಗೆ ಬರಲಿವೆ. ಚಾನೆಲ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾಧ್ಯಮ ಸಂಸ್ಥೆಯ ಸ್ಥಾಪಕ ಆರ್ ವಿ ಶೆಟ್ಟಿ, ಸುಕೇಶ್ ಭಂಡಾರಿ, ಉಮೇಶ್ ಶೆಟ್ಟಿ, ಮೋಹನ್ ಶೆಟ್ಟಿ, ರವಿರಾಜ್ ರೈ, ನೇಮಿರಾಜ್ ಶೆಟ್ಟಿ, ದಿನಕರ್ ರೈ ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

Read More