Author: admin
ತುಳು ಕನ್ನಡ ವೆಲ್ಫೇರ್ ಅಸೋಸಿಯೇಷನ್ ಮೀರಾ ಭಯಂದರ್ : ಮಾರ್ಚ್ 22 ರಂದು ವಿಶ್ವ ಮಹಿಳಾ ದಿನಾಚರಣೆ, ಹಳದಿ ಕುಂಕುಮ ಕಾರ್ಯಕ್ರಮ
ತುಳು ಕನ್ನಡ ವೆಲ್ಫೇರ್ ಅಸೋಸಿಯೇಶನ್ ಮೀರಾ ಭಯಂದರ್ ಇದರ ಸಾಹಿತ್ಯ ಮತ್ತು ಕಲೆ ವಿಭಾಗದ ವತಿಯಿಂದ ಮಾರ್ಚ್ 22 ರವಿವಾರದಂದು ಸಂಜೆ 3.30 ರಿಂದ ದಿ. ರವಿ ರಾ ಅಂಚನ್ ರವರ ನೆನಪಿಗಾಗಿ ದತ್ತಿ ನಿಧಿ ಸಂಸ್ಮರಣಾ ಪ್ರಶಸ್ತಿ ಪ್ರದಾನ, ಸನ್ಮಾನ ಮತ್ತು ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮೀರಾರೋಡ್ ಪೂರ್ವದ ಬಾಲಾಜಿ ಇಂಟರ್ ನ್ಯಾಶನಲ್ ಹೊಟೇಲ್ ಸಭಾಂಗಣ ಭಾರತಿ ಪಾರ್ಕ್ ಇಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಜೆ 3.30 ರಿಂದ ಭಜನೆ, ವಿಶ್ವ ಮಹಿಳಾ ದಿನಾಚರಣೆ ಹಾಗೂ ಹಳದಿ ಕುಂಕುಮ ಕಾರ್ಯಕ್ರಮಗಳು ನಡೆಯಲಿದ್ದು, 4.30 ರಿಂದ ಮುಂಬೈಯ ಖ್ಯಾತ ಸಾಹಿತಿಗಳಿಂದ ವಿಚಾರಗೋಷ್ಠಿ, ಸಂಜೆ 5:30 ರಿಂದ ಸಂಸ್ಥೆಯ ಮಹಿಳಾ ವಿಭಾಗದ ವತಿಯಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮಹಿಳೆಯರಿಂದ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮಗಳು ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಖ್ಯಾತ ರಂಗ ತಜ್ಞ ಹಾಗೂ ಸಾಹಿತಿ ಉಡುಪಿ ಗುಣಪಾಲ್, ವೀರ ಕೇಸರಿ ಸಂಘ ಮೀರಾ ಭಯಂದರ್ ಇದರ ಅಧ್ಯಕ್ಷರಾದ ಹರೀಶ್ ರೈ…
ಕೊಪ್ಪ ತಾಲೂಕು ಮೇಗುಂದ ಹೋಬಳಿ ರವಿನಗರ ನಿವಾಸಿಯಾದ ರಮೇಶ್ ಅವರು ಕಳೆದ ಎರಡು ತಿಂಗಳುಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಾ ಹಾಸಿಗೆಯಲ್ಲೇ ಜೀವನ ಸಾಗಿಸುತ್ತಿದ್ದರು. ಅವರ ಸಂಕಷ್ಟದ ಸ್ಥಿತಿಯನ್ನು ಗಮನಿಸಿದ ಸ್ಥಳೀಯ ಅಮ್ಮ ಫೌಂಡೇಶನ್ ಪೂರ್ಣಾವಧಿ ಕಾರ್ಯಕರ್ತರು ಈ ವಿಷಯವನ್ನು ಅಮ್ಮ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಸುಧಾಕರ್ ಶೆಟ್ಟಿ ಅವರಿಗೆ ತಿಳಿಸಿದರು. ಮಾನವೀಯತೆಗೆ ಮೊದಲ ಆದ್ಯತೆ ನೀಡುವ ಸುಧಾಕರ್ ಶೆಟ್ಟಿ ಅವರು ತಕ್ಷಣವೇ ಸ್ಪಂದಿಸಿ, ರಮೇಶ್ ಅವರಿಗೆ ಅಗತ್ಯವಾದ ವೀಲ್ ಚೇರ್ ಒದಗಿಸುವಂತೆ ಸೂಚಿಸಿದರು. ಅದರಂತೆ ಮಾರ್ಚ್ 7ರಂದು, ಅಮ್ಮ ಫೌಂಡೇಶನ್ ವತಿಯಿಂದ ಸುಧಾಕರ್ ಶೆಟ್ಟಿ ಅವರ ಅನುಪಸ್ಥಿತಿಯಲ್ಲಿ ರಮೇಶ್ ಅವರಿಗೆ ವೀಲ್ ಚೇರ್ ವಿತರಿಸಲಾಯಿತು. ಈ ನೆರವು ರಮೇಶ್ ಅವರ ಜೀವನದಲ್ಲಿ ಹೊಸ ಆಶಯವನ್ನು ಮೂಡಿಸಿದೆ. ಹಾಸಿಗೆಯಲ್ಲೇ ಸೀಮಿತವಾಗಿದ್ದ ಅವರ ಜೀವನದಲ್ಲಿ ಈ ಸಹಾಯವು ಚಲನೆ ಹಾಗೂ ಸ್ವಾಭಿಮಾನವನ್ನು ನೀಡಿದಂತಾಗಿದೆ. ಆ ಕ್ಷಣದಲ್ಲಿ ಅವರ ಕಣ್ಣುಗಳಲ್ಲಿ ಕಾಣಿಸಿಕೊಂಡ ಆನಂದದ ಕಣ್ಣೀರು ಹಾಗೂ ಮುಖದ ಮಂದಹಾಸ ಈ ಸೇವೆಯ ಮಹತ್ವವನ್ನು ಸ್ಪಷ್ಟಪಡಿಸಿತು. ಈ…
ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ : ಏಪ್ರಿಲ್ 23 ರಿಂದ ಮೇ 4 ರವರೆಗೆ ಪುನಃ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ
ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ| ಕೆ ಪ್ರಕಾಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಹಾಗೂ ಭಕ್ತರ ಸಭೆಯಲ್ಲಿ ಏಪ್ರಿಲ್ 23 ರಿಂದ ಮೊದಲ್ಗೊಂಡು ಮೇ 3 ರ ಪರ್ಯಂತ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪುನಃ ಪ್ರತಿಷ್ಣೆ ಹಾಗೂ ಬ್ರಹ್ಮಕಲಶಾಭಿಷೇಕ ನೆರವೇರಿಸುವುದೆಂದು ನಿಶ್ಚಯಿಸಲಾಗಿದೆ. ಶ್ರೀ ದೇವಳದ ಅನುವಂಶಿಕ ಮೊಕ್ತೇಸರರಾದ ಶ್ರೀ ರತ್ನಾಕರ ರಾಜ ಕಿನ್ಯಕ್ಕ ಬಳ್ಳಾಲ್, ಪೇಟೆಮನೆ ಶ್ರೀ ಭವಾನಿ ಶಂಕರ ಹೆಗ್ಡೆ ಮತ್ತು ಶ್ರೀ ಕೊರ್ನಾಯ ಶ್ರೀಪತಿ ರಾವ್ ಈ ಸಂಧರ್ಭ ಉಪಸ್ಥಿತರಿದ್ದರು. ಶ್ರೀ ಕ್ಷೇತ್ರದ ತಂತ್ರಿಗಳಾದ ಕಂಬಳಕಟ್ಟೆ ಶ್ರೀ ರಾಧಾಕೃಷ್ಣ ಉಪಾಧ್ಯಾಯರ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.
ತುಳುಕೂಟ ಫೌಂಡೇಶನ್ ನಾಲಾಸೋಪಾರ ಮತ್ತು ಶ್ರೀದೇವಿ ಯಕ್ಷಕಲಾ ನಿಲಯ : ವಿಶ್ವ ಮಹಿಳಾ ದಿನಾಚರಣೆ, ಹಳದಿ ಕುಂಕುಮ ಕಾರ್ಯಕ್ರಮ
ತುಳುಕೂಟ ಫೌಂಡೇಶನ್ (ರಿ) ನಾಲಾಸೋಪಾರ ಇದರ ಮಹಿಳಾ ವಿಭಾಗ ಮತ್ತು ಶ್ರೀದೇವಿ ಯಕ್ಷಕಲಾ ನಿಲಯ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹಳದಿ ಕುಂಕುಮ ಕಾರ್ಯಕ್ರಮ ಮಾರ್ಚ್ 19 ರಂದು ನಾಲಾಸೋಪಾರ ಪಶ್ಚಿಮದ ಹೋಟೆಲ್ ಗ್ಯಾಲಕ್ಸಿ ಸಭಾಂಗಣದಲ್ಲಿ ತುಳುಕೂಟದ ಅಧ್ಯಕ್ಷ ಶಶಿಧರ ಕೆ ಶೆಟ್ಟಿ ಇನ್ನಂಜೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆ ಯಶೋಧಾ ಎಸ್ ಕೋಟ್ಯಾನ್ ಮತ್ತು ಪದಾಧಿಕಾರಿಗಳು ಶ್ರೀ ದೇವರಿಗೆ ಆರತಿ ಬೆಳಗಿಸಿ ಪ್ರಾರ್ಥನೆಯನ್ನು ಮಾಡಿ ಹಳದಿ ಕುಂಕುಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆ ಬಳಿಕ ವೇದಿಕೆಯಲ್ಲಿ ಸಂಸ್ಥೆಯ ಸದಸ್ಯರಿಂದ ಭಜನೆ, ಸ್ವಾಗತ ನೃತ್ಯ, ಸಂಗೀತ ಕಾರ್ಯಕ್ರಮಗಳು ನಡೆಯಿತು. ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ತುಳುಕೂಟ ಫೌಂಡೇಶನ್ನ ಅಧ್ಯಕ್ಷ ಶಶಿಧರ ಕೆ ಶೆಟ್ಟಿ ಇನ್ನಂಜೆಯವರ ಅಧ್ಯಕ್ಷತೆಯಲ್ಲಿ ಪ್ರತೀ ವರ್ಷ ನೀಡುವ ಡಾ| ಸುನೀತಾ ಎm ಶೆಟ್ಟಿ ಪ್ರಾಯೋಜಕತ್ವದ ‘ತುಳುನಾಡ ಐಸಿರಿ’ ಪ್ರಶಸ್ತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಗೆ…
ಇತಿಹಾಸ ಪ್ರಸಿದ್ಧ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಾರ್ಚ್ 20 ರಂದು ಸಂಜೆ ಮುಂಬಯಿ, ನವಿ ಮುಂಬಯಿಯ ಪ್ರಸಿದ್ಧ ಭಜನೆ ಗಾಯಕಿ ಹೇಮಲತಾ ಸುರೇಂದ್ರ ಶೆಟ್ಟಿ ಅವರಿಂದ ಪ್ರತಿ ಶುಕ್ರವಾರದ ಶ್ರೀ ದುರ್ಗಾ ರಾಘವೇಂದ್ರ ಭಜನಾ ಮಂಡಳಿಯ ಭಜನೆಯ ಸಂದರ್ಭ ಭಕ್ತಿ ಭಜನೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ ಕೋರಿಬೆಟ್ಟುಗುತ್ತು ಸುರೇಂದ್ರ ಶೆಟ್ಟಿ, ಹೇಮಲತಾ ಸುರೇಂದ್ರ ಶೆಟ್ಟಿ, ಸುಜಾತ ಶೆಟ್ಟಿ, ಉಷಾ ಶೆಟ್ಟಿ, ಸುಹಾಸಿನಿ ಶೆಟ್ಟಿ ಮತ್ತು ಇತರ ಭಜಕರೊಂದಿಗೆ ಶ್ರೀ ದುರ್ಗಾ ರಾಘವೇಂದ್ರ ಭಜನಾ ಮಂಡಳಿಗಳ ರೂವಾರಿ ಗುರುದತ್ ಪೂಂಜ ಮುಂಡ್ಕೂರು ಉಪಸ್ಥಿತರಿದ್ದರು.
ಅಜೆಕಾರ್ ಪದ್ಮ ಗೋಪಾಲ್ ಎಜುಕೇಶನ್ ಟ್ರಸ್ಟ್ (ರಿ) ಇದರ ಐದನೇ ಅಂಗಸAಸ್ಥೆ ಅಜೆಕಾರ್ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪದ್ಮನಗರ, ಅಜೆಕಾರು. ಇದು ೨೦೨೬-೨೭ನೇ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ ಮಾಡಲು ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರದಿಂದ ಅನುಮೋದನೆಯನ್ನು ಪಡೆದಿರುತ್ತದೆ. ಅಜೆಕಾರಿನ ಪದ್ಮನಗರದಲ್ಲಿ ಟ್ರಸ್ಟ್ನ ೪ನೇ ಕ್ಯಾಂಪಸ್ ನಿರ್ಮಾಣಗೊಂಡಿದ್ದು, ಟ್ರಸ್ಟಿನ ಸಮಾಜಸೇವಾ ಮತ್ತು ಶೈಕ್ಷಣಿಕ ಕಾಳಜಿಯ ಭಾಗವಾಗಿ ಅಜೆಕಾರಿನ ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ೯ನೇ ತರಗತಿಯಿಂದ ಉಚಿತ ಶಿಕ್ಷಣವನ್ನು ನೀಡುವುದಾಗಿ ನಿರ್ಧರಿಸಿರುತ್ತದೆ. ಟ್ರಸ್ಟ್ ಕಳೆದ ೧೫ ವರ್ಷಗಳಿಂದ ಮೌಲ್ಯಾಧಾರಿತ ಶಿಕ್ಷಣ ನೀಡುವುದರೊಂದಿಗೆ ಅನೇಕ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಿದ್ಯಾರ್ಥಿ ವೇತನಗಳನ್ನು ನೀಡುತ್ತಾ ಬಂದಿದೆ. ಇದರ ಮುಂದುವರಿದ ಭಾಗವಾಗಿ ಪ್ರಸ್ತುತ ಎಂಟನೇ ತರಗತಿ ಪೂರ್ಣಗೊಳಿಸಿ ೯ನೇ ತರಗತಿಗೆ ಅಜೆಕಾರ್ ಜ್ಞಾನಸುಧಾ ಸಂಸ್ಥೆಯಲ್ಲಿ ದಾಖಲಾತಿ ಬಯಸುವ ವಿದ್ಯಾರ್ಥಿಗಳು ಎಂಟನೇ ತರಗತಿಯ ಅಂಕಪಟ್ಟಿ, ಆಧಾರ್ ಕಾರ್ಡ್ ಪ್ರತಿ ಹಾಗೂ ಪೋಷಕರೊಂದಿಗೆ ಶಾಲಾ ಕಛೇರಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು ಸಂಸ್ಥೆಯ…
ಭಾರತ ಸರ್ಕಾರದ ಆಯುಷ್ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠದ 29ನೇ ಪದವಿ ಪ್ರದಾನ ಸಮಾರಂಭವು ಉತ್ತರ ಪ್ರದೇಶದ ವಾರಣಾಸಿಯ ಬನಾರಸ್ ಹಿಂದೂ ವಿವಿಯಲ್ಲಿ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಖ್ಯಾತ ಆಯುರ್ವೇದ ಹಾಗೂ ಶಿಕ್ಷಣ ತಜ್ಞ ಡಾ. ಎಂ ಮೋಹನ್ ಆಳ್ವರಿಗೆ ‘ಫೆಲೋ ಆಫ್ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠ’ (FRAV) ಎಂಬ ಪ್ರತಿಷ್ಠಿತ ಗೌರವ ಪ್ರದಾನಿಸಲಾಯಿತು. ಈ ಗೌರವವನ್ನು ಆಯುರ್ವೇದ ಕ್ಷೇತ್ರದಲ್ಲಿ ದೀರ್ಘಕಾಲ ಸೇವೆ, ಸಂಶೋಧನೆ, ಶಿಕ್ಷಣ ಹಾಗೂ ಪರಂಪರೆಯ ಸಂರಕ್ಷಣೆಯಲ್ಲಿ ವಿಶೇಷ ಸಾಧನೆ ಮಾಡಿದ ಗಣ್ಯರಿಗೆ ನೀಡಲಾಗುತ್ತದೆ. ಡಾ. ಆಳ್ವರು ಈ ಎಲ್ಲಾ ಕ್ಷೇತ್ರಗಳಲ್ಲಿ ಸಲ್ಲಿಸಿದ ಮಹತ್ವದ ಕೊಡುಗೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಡಾ. ಆಳ್ವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮೂಲಕ ಆಯುರ್ವೇದ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಿ, ಅನೇಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ತರಬೇತಿ ನೀಡುತ್ತಿದ್ದಾರೆ. ಆಯುರ್ವೇದ ಆರೋಗ್ಯ ಸೇವೆಯನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ…
ದಾನ ಮತ್ತು ಧರ್ಮ ಇವೆರಡೂ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಶಿವಾಯ ಫೌಂಡೇಶನ್ ದಾನ ಮಾಡುವುದರ ಜೊತೆಗೆ ಸಾಮಾಜಿಕ ಕರ್ತವ್ಯವನ್ನು ನಿಭಾಯಿಸಿ ತಮ್ಮ ಧರ್ಮವನ್ನು ಕಾಪಾಡಿಕೊಂಡು ಬಂದಿವೆ. ನಿರ್ಗತಿಕರಿಗೆ, ಸಂಕಷ್ಟದಲ್ಲಿರುವವರಿಗೆ ಸಹಾಯ, ದಾನ ಮಾಡುವುದು ನಮ್ಮ ಧರ್ಮ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ‘ಸಬ್ ಕಾ ಸಾತ್’ ‘ಸಬ್ ಕಾ ವಿಕಾಸ್’ ಎಂಬ ಯೋಚನೆಗೆ ಪೂರಕವಾಗಿ ಶಿವಾಯ ಫೌಂಡೇಶನ್ ಸಮಾಜಕ್ಕೆ ಸೇವೆಯನ್ನು ಸಲ್ಲಿಸುತ್ತಿದೆ ಎನ್ನಲು ತುಂಬಾ ಸಂತೋಷವಾಗುತ್ತದೆ. ಸೇವಾ ಮನೋಭಾವನೆಯುಳ್ಳ ಯುವ ತಂಡ ರಚನೆ ಮಾಡಿ ಶಿವಾಯ ಫೌಂಡೇಶನ್ ಬಡ ಜನರಿಗೆ, ಕಷ್ಟದಲ್ಲಿರುವವರಿಗೆ ವಿವಿಧ ರೀತಿಯಲ್ಲಿ ಸೇವೆಯನ್ನು ಮಾಡುತ್ತಿರುವುದು ಎಲ್ಲರಿಗೂ ಮಾದರಿ. ಮಾನವೀಯತೆಯಿಂದ ಶಿವಾಯ ಫೌಂಡೇಶನ್ ಮಾಡುತ್ತಿರುವ ದಾನ ಧರ್ಮದ ಕಾರ್ಯಕ್ಕೆ ನಾವೆಲ್ಲಾ ಜೊತೆಯಾಗೋಣ ಎಂದು ನವಿಮುಂಬಯಿ ಕಾರ್ಪೊರೇಟರ್ ಸುರೇಶ್ ಜಿ ಶೆಟ್ಟಿ ನುಡಿದರು. ಅವರು ಮಾರ್ಚ್ 15 ರಂದು ನವಿಮುಂಬಯಿ ಬಂಟ್ಸ್ ಸೆಂಟರ್ ಸಭಾಗೃಹದಲ್ಲಿ ನಿರ್ಮಿತ ಶ್ಯಾಮ ಎನ್ ಶೆಟ್ಟಿ ಮತ್ತು ಶಾರದಾ ಎಸ್ ಶೆಟ್ಟಿ ವೇದಿಕೆಯಲ್ಲಿ ಜರಗಿದ…
ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಬಂಟರ ಸಂಘ ಪುತ್ತೂರು ತಾಲೂಕು ಇವರ ಮಾರ್ಗದರ್ಶನದೊಂದಿಗೆ ಪುತ್ತೂರು ಬಂಟರ ಮಹಿಳಾ ವಿಭಾಗ ಇವರ ಸಾರಥ್ಯದಲ್ಲಿ ಯುವ ಬಂಟರ ವಿಭಾಗ, ವಿದ್ಯಾರ್ಥಿ ಬಂಟರ ವಿಭಾಗ ಇವರ ಸಹಯೋಗದೊಂದಿಗೆ ‘ಐಸಿರಿ -2026’, ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಮಾರ್ಚ್ 22 ರಂದು ಪುತ್ತೂರು ಕೊಂಬೆಟ್ಟು ಎಂ ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರುಗಲಿದ್ದು, ಪೂರ್ವಾಹ್ನ ಗಂಟೆ 10:30 ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕಿ ಭಾರತಿ ಶೆಟ್ಟಿ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ ವಹಿಸಲಿದ್ದಾರೆ. ಆಸರೆ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷೆ ಆಶಾಜ್ಯೋತಿ ರೈ ಅವರು ಸನ್ಮಾನ ಸಮಾರಂಭವನ್ನು ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಮಾಜಿ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು, ಬಂಟರ ಯಾನೆ…
ಕೇಂದ್ರ ಹಣಕಾಸು ಸಚಿವರಾದ ಗೌರವಾನ್ವಿತ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಭೇಟಿ ಮಾಡಿದರು. ಈ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ವಿಕಾಸಿತ್ ಭಾರತ್ 2047 ಕನಸಿನ ಭಾಗವಾಗಿ, 2026ರ ಕೇಂದ್ರ ಬಜೆಟ್ನಲ್ಲಿ ಘೋಷಿಸಲಾದ ‘ಸಿಟಿ ಎಕನಾಮಿಕ್ ರೀಜನ್’ (CER) ಯೋಜನೆಯ ವ್ಯಾಪ್ತಿಗೆ ಮಂಗಳೂರನ್ನು ಸೇರಿಸುವಂತೆ ಮನವಿ ಸಲ್ಲಿಸಲಾಯಿತು. ಈ CER ಯೋಜನೆಯು ಕರಾವಳಿ ಕರ್ನಾಟಕದ ಆರ್ಥಿಕ ಶಕ್ತಿಯನ್ನು ವೃದ್ಧಿಸಲು ಒಂದು ಉತ್ತಮ ಅವಕಾಶವಾಗಿದೆ.















