Author: admin

ಒಂದು ಸಂಸ್ಥೆಯ ಬೆಳವಣಿಗೆಗೆ ವಿಶ್ವಾಸ, ಪ್ರಾಮಾಣಿಕತೆ ಹಾಗೂ ಸಮನ್ವಯ ಅತ್ಯಗತ್ಯ. ಕುಲಪತಿಯಾಗಿ ಡಾ| ಎಂ ಜಯಕರ ಶೆಟ್ಟಿಯವರು ಈ ಮೂರೂ ಗುಣಗಳನ್ನು ಅಳವಡಿಸಿಕೊಂಡು ವಿಶ್ವವಿದ್ಯಾಲಯವನ್ನು ಮುನ್ನಡೆಸಿದ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ ಎಂದು ಮಾಜಿ ಸಚಿವ ಡಾ. ಸಿ.ಎನ್ ಅಶ್ವತ್ಥ ನಾರಾಯಣ ತಿಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯ ಶಿಕ್ಷಕರ ಪರಿಷತ್ ವತಿಯಿಂದ ಜ್ಞಾನಭಾರತಿ ಆವರಣದ ಎಚ್. ನರಸಿಂಹಯ್ಯ ಸಭಾಂಗಣದಲ್ಲಿ ಬೆಂ.ವಿ.ವಿ ಕುಲಪತಿ ಡಾ| ಎಂ ಜಯಕರ ಶೆಟ್ಟಿ ಅವರ ಅವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಡಾ| ಜಯಕರ ಶೆಟ್ಟಿಯವರ ನಾಯಕತ್ವದಲ್ಲಿ ಬೆಂ.ವಿ.ವಿ ನ್ಯಾಕ್ ಎ++ ಮಾನ್ಯತೆ ಹಾಗೂ ಪಿಎಂ ಉಷಾ ಯೋಜನೆ ಸೇರಿ ಮಹತ್ತರ ಸಾಧನೆಗಳ ಮೂಲಕ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯವಾಗಿದೆ. ಅವರು ಎಂದಿಗೂ ಅಧಿಕಾರದ ಹಿಂದೆ ಹೋಗದೆ ಪ್ರತಿ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಮತ್ತು ಯಶಸ್ವಿಯಾಗಿ ನಿಭಾಯಿಸಿದ್ದಾರೆ ಎಂದರು. ಅಭಿನಂದನಾ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್ ರವಿ, ಡಾ| ಜಯಕರ ಶೆಟ್ಟಿಯವರು…

Read More

ರಾಜ್ಯದ ಪ್ರತಿಷ್ಠಿತ ಕ್ರೆಡಿಟ್ ಸಹಕಾರ ಸಂಸ್ಥೆಗಳಲ್ಲೊAದಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರ ಮಾಣಿಕ್ಯ ಪ್ರಶಸ್ತಿ ವಿಜೇತ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯು ೨೦೨೬-೨೭ನೇ ಸಾಲಿನ ವಿತ್ತೀಯ ವರ್ಷದ ಮೊದಲನೇ ತ್ರೈಮಾಸಿಕ ಅವಧಿ ದಿನಾಂಕ ೩೦.೦೬.೨೦೨೬ಕ್ಕೆ ರೂ.೭೨೧ ಕೋಟಿ ಠೇವಣಿ, ರೂ.೬೪೧ ಕೋಟಿ ಸಾಲ, ರೂ.೧೩೬೨ ಕೋಟಿ (ಠೇವಣಿ ಮತ್ತು ಸಾಲ) ವ್ಯವಹಾರವನ್ನು ಹೊಂದಿದೆ. ೨೦೨೫ನೇ ಜೂನ್ ೩೦ಕ್ಕೆ ಹೋಲಿಸುವಾಗ ಠೇವಣಾತಿಯಲ್ಲಿ ರೂ.೧೧೫ ಕೋಟಿ ೧೯% ವೃದ್ಧಿ, ಹೊರಬಾಕಿ ಸಾಲದಲ್ಲಿ ರೂ.೧೨೦ ಕೋಟಿ ಹೆಚ್ಚಳ ೨೩% ವೃದ್ಧಿಯೊಂದಿಗೆ, ಒಟ್ಟು ವ್ಯವಹಾರದಲ್ಲಿ ರೂ.೨೩೫ ಕೋಟಿ ವೃದ್ಧಿಯಿಂದ ೨೧% ಹೆಚ್ಚಳವನ್ನುಸಾಧಿಸಿದೆ. ೩೦.೦೬.೨೦೨೬ಕ್ಕೆ ನಿವ್ವಳ ಲಾಭವು ರೂ.೩.೭೪ ಕೋಟಿ ದಾಖಲಿಸಿದ್ದು, ಇದು ೨೦೨೫ನೇ ಜೂನ್ ೩೦ಕ್ಕೆ ಹೋಲಿಸುವಾಗ ರೂ.೧.೧೦ ಕೋಟಿ ಹೆಚ್ಚಳವಾಗಿ ೪೨% ದ್ಧಿಯಾಗಿರುತ್ತದೆ. ಸ್ಥಾಪನೆಯಾದನಿಂದ ನಿರAತರ ಡಿವಿಡೆಂಡನ್ನು ನೀಡುತ್ತಾ ಬಂದ ಸೊಸೈಟಿ, ೨೦೨೪-೨೫ನೇ ಸಾಲಿಗೆ ಶೇ.೨೫ ಡಿವಿಡೆಂಡನ್ನು ನೀಡಿದ್ದು, ಕಳೆದ ಏಳು ವರ್ಷಗಳಿಂದ ಗರಿಷ್ಟ ೨೫% ಡಿವಿಡೆಂಡನ್ನು ನೀಡುತ್ತಿದೆ.…

Read More

ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಭವಾಗಿರುವ ಪತ್ರಿಕೋದ್ಯಮದ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯಲು ಮತ್ತು ಸಮಾಜಕ್ಕೆ ಮಾಧ್ಯಮಗಳು ನೀಡುವ ಕೊಡುಗೆಯನ್ನು ಗೌರವಿಸಲು ಪತ್ರಿಕಾ ದಿನಾಚರಣೆ ಆಚರಿಸಲಾಗುತ್ತದೆ. ಸಮಾಜದಲ್ಲಿ ನಡೆಯುವ ಒಳಿತು ಹಾಗೂ ಕೆಡುಕುಗಳನ್ನು ಮತ್ತು ತಪ್ಪುಗಳನ್ನು ಎತ್ತಿ ತೋರಿಸುವ ಮೂಲಕ ಸರಿಪಡಿಸಲು ಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳು ಕನ್ನಡಿಯಂತೆ ಕಾರ್ಯ ನಿರ್ವಹಿಸಿ ಮುಂಚೂಣಿಯಲ್ಲಿದೆ ಎಂದು ದ.ಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಬಿ.ಎನ್ ಹೇಳಿದರು. ಅವರು ಮೂಲ್ಕಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಿಲ್ಪಾಡಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದ ಸಹಯೋಗದಲ್ಲಿ ಮೂಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಪತ್ರಿಕೋದ್ಯಮದ ಬೆಳವಣಿಗೆಯ ಬಗ್ಗೆ ದಿಕ್ಸೂಚಿ ಮಾತುಗಳನ್ನಾಡಿದರು. ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ.ಸಾ.ಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ| ಹರಿಕೃಷ್ಣ ಪುನರೂರು ಮಾತನಾಡಿ, ಸತ್ಯ ಮತ್ತು ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವುದು ಹಾಗೂ ಪ್ರಜೆಗಳಲ್ಲಿ ಜಾಗೃತಿ ಮೂಡಿಸುವ ಹೊಣೆಗಾರಿಕೆ ಪತ್ರಕರ್ತರದ್ದು. ಮುಕ್ತ ಪತ್ರಿಕಾ ಮಾಧ್ಯಮ ಪ್ರಜಾಪ್ರಭುತ್ವದ ಯಶಸ್ವಿಗೆ…

Read More

ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಂತ ಪ್ಯಾಟ್ರಿಕ್ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಆಚರಣಾ ಸಮಿತಿ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಪೋಡುಂಬ ಆಯ್ಕೆಯಾಗಿದ್ದಾರೆ. ಸಂದೀಪ್ ಶೆಟ್ಟಿಯವರು ಸಿದ್ದಕಟ್ಟೆ ಕೊಡಂಗೆ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಸಮಿತಿ ಮತ್ತು ಸಿದ್ದಕಟ್ಟೆ ವಲಯ ಬಂಟರ ಸಂಘದಲ್ಲಿ ಅಧ್ಯಕ್ಷರಾಗಿ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಾರ್ಯದರ್ಶಿಯಾಗಿ ರತೀಶ್ ಶೆಟ್ಟಿ ಕೊನೆರಬೆಟ್ಟು ಮತ್ತು ಕೋಶಾಧಿಕಾರಿಯಾಗಿ ಶಾಲಾ ಮುಖ್ಯ ಶಿಕ್ಷಕಿ ರೀಟಾ ಆಯ್ಕೆಯಾಗಿದ್ದಾರೆ. ಶತಮಾನೋತ್ಸವ ಆಚರಣೆ ಯಶಸ್ವಿಯಾಗಲು ವಿವಿಧ ಪದಾಧಿಕಾರಿಗಳನ್ನು ಈ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು.

Read More

ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ 2026ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾ ದೀವಿಗೆ ಯೋಜನೆಗಳಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರತಿಭಾ ಪುರಸ್ಕಾರ ಯೋಜನೆಗೆ, ಪ್ರಸ್ತುತ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 95% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ನಮೂನೆ–ಬಿ (Form-B) ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾ ದೀವಿಗೆ ಯೋಜನೆಗೆ, ಪ್ರಸ್ತುತ 10ನೇ ತರಗತಿಯಲ್ಲಿ 60% ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಸರ್ಕಾರಿ ಅಥವಾ ಸರ್ಕಾರಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ನಮೂನೆ–ಸಿ (Form-C) ಮೂಲಕ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯವಿರುವ ಎಲ್ಲಾ ಮೂಲ ದಾಖಲೆಗಳನ್ನು ಪಿಡಿಎಫ್ ರೂಪದಲ್ಲಿ ಸಿದ್ಧಪಡಿಸಿ ಇ-ಮೇಲ್ ಮೂಲಕ ಕಳುಹಿಸಬೇಕು. ಇ-ಮೇಲ್: youthbunts.scholarship@gmail.com ಪ್ರತಿಭಾ ಪುರಸ್ಕಾರ ಯೋಜನೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ವಿದ್ಯಾ ದೀವಿಗೆ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ಸಂಘವು…

Read More

ಬಂಟರ ಸಂಘ ಮುಂಬಯಿ ಇದರ ಕುರ್ಲಾ ಭಾಂಡುಪ್ ಪ್ರಾದೇಶಿಕ ಸಮಿತಿಯ ವತಿಯಿಂದ ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿಯವರಿಗೆ ಗುರುವಂದನೆಯನ್ನು ಜೂನ್ 28 ರಂದು ಬಂಟರ ಭವನದ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಂಟರ ಸಂಘ ಮುಂಬಯಿಯ ಕುರ್ಲಾ ಭಾಂಡುಪ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಗಿರೀಶ್ ಶೆಟ್ಟಿ ಇನ್ನಾ ಮಾತನಾಡುತ್ತಾ, ಗುರುವಿನ ಗುರುವಂದನೆ ಶಿಷ್ಯನಿಗೆ ಸಾವಿರ ಯಶಸ್ಸಿನ ಮಾರ್ಗವನ್ನು ತೋರಿಸುತ್ತದೆ. ಆದ್ದರಿಂದ ಇವತ್ತಿನ ದಿವಸ ಕುರ್ಲಾ ಭಾಂಡುಪ್ ಪ್ರಾದೇಶಿಕ ಸಮಿತಿಯ 15ನೇ ವರ್ಷದ ವಾರ್ಷಿಕೋತ್ಸವದ ಪರವಾಗಿ ಹಮ್ಮಿಕೊಳ್ಳಲಾದ ‘ಅಮರಶಿಲ್ಪಿ ವೀರ ಶಂಭು ಕಲ್ಕುಡ’ ಎನ್ನುವ ಯಕ್ಷಗಾನ ನಿರ್ದೇಶನ ಮಾಡಿ ಎಲ್ಲಾ ಕುರ್ಲಾ ಭಾಂಡೂಪ್ ನ ಹವ್ಯಾಸಿ ಕಲಾವಿದರಿಗೆ ಈ ಪ್ರಸಂಗವನ್ನು ಕಲಿಸಿ ಯಶಸ್ವಿಯಾಗಿ ಯಕ್ಷಗಾನ ಪ್ರದರ್ಶನವನ್ನು ಮಾಡಿಸಿದ್ದಾರೆ. ಈ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿದ್ದು, ಎಲ್ಲರ ಹೆಗ್ಗಳಿಕೆಗೆ ಪಾತ್ರವಾಗಿದೆ. ಅದೆಷ್ಟೋ ಕಲಾವಿದರು ಮೊದಲ ಬಾರಿ ವೇಷ ಹಾಕಿದರೂ ಕೂಡ ಅವರನ್ನು ಸಮರ್ಪಕವಾಗಿ ತಯಾರು ಮಾಡಿದಂತಹ ಹೆಗ್ಗಳಿಕೆ ಗುರುವಿಗೆ ಸಲ್ಲುತ್ತದೆ. ಅದಕ್ಕಾಗಿ ವಿಶೇಷವಾಗಿ…

Read More

ಗಣಿತನಗರ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲ್ಯಸುಧಾ ಕಾರ್ಯಕ್ರಮದ ೫೦ನೇ ಮಾಲಿಕೆಯ ಸುವರ್ಣ ಸಂಭ್ರಮವು ಜುಲೈ ೧೧ರ ಶನಿವಾರದಂದು ಸಂಜೆ ೦೬:೧೫ಕ್ಕೆ ನಡೆಯಲಿದೆ. ಈ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕçತ ‘ರಾಷ್ಟçದೇವೋಭವ’ ಖ್ಯಾತಿಯ ಸನಾತನ ನಾಟ್ಯಾಲಯ, ಮಂಗಳೂರು ಇವರಿಂದ “ಸನಾತನ ರಾಷ್ಟ್ರಾಂಜಲಿ” ಎಂಬ ವಿಶೇಷ ಕಾರ್ಯಕ್ರಮವು ಪ್ರಸ್ತುತಗೊಳ್ಳಲಿದೆ. ಕಲಾಸಕ್ತರೂ ಭಾಗವಹಿಸಬಹುದೆಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

Read More

ಸಾರ್ವಜನಿಕ ಗಣೇಶೋತ್ಸವ ಓಂಕಾರನಗರ ಬಂಟ್ಸ್ ಹಾಸ್ಟೇಲ್ ಮಂಗಳೂರು ಇಲ್ಲಿ ನಡೆಯುವ ಗಣೇಶೋತ್ಸವ ಆಚರಣೆಯ ಪ್ರಯುಕ್ತ ಜುಲೈ 15 ರಂದು ಬುಧವಾರ ಬೆಳಿಗ್ಗೆ 7.30 ಕ್ಕೆ ಮಂಗಳೂರು ಶರವು ದೇವಸ್ಥಾನದ ಹತ್ತಿರವಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ (ಬಾಲಮ್ ಭಟ್ ರವರ ಮನೆ) ಗಣಪತಿ ವಿಗ್ರಹದ ಮುಹೂರ್ತ ನಡೆಯಲಿದೆ. ಸಮಾಜ ಬಾಂಧವರೆಲ್ಲರೂ ಆಗಮಿಸಿ ಶ್ರೀ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಸಿದ್ದಿವಿನಾಯಕ ಪ್ರತಿಷ್ಠಾನ (ರಿ) ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ನ ಗೋವಾ ರಾಜ್ಯ ಅಧ್ಯಕ್ಷರಾಗಿ ಖ್ಯಾತ ಸಮಾಜಸೇವಕ ಹಾಗೂ ತುಳುಕೂಟ ಗೋವಾದ ಅಧ್ಯಕ್ಷರಾದ ಗಣೇಶ್ ಶೆಟ್ಟಿ ಇರ್ವತ್ತೂರು ಅವರನ್ನು ನೇಮಕ ಮಾಡಲಾಗಿದೆ. ಗಣೇಶ್ ಶೆಟ್ಟಿ ಇರ್ವತ್ತೂರು ಅವರು ಹಲವು ವರ್ಷಗಳಿಂದ ಗೋವಾದಲ್ಲಿ ತುಳು ಭಾಷೆ, ಸಂಸ್ಕೃತಿ ಮತ್ತು ಪರಂಪರೆಯ ಉಳಿವು ಬೆಳವಣಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ತುಳುಕೂಟ ಗೋವಾ ಅಧ್ಯಕ್ಷರಾಗಿ ಅನೇಕ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಸಮುದಾಯದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಿ, ಗೋವಾದ ತುಳುವರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಗಣೇಶ್ ಶೆಟ್ಟಿಯವರ ಸಮಾಜಸೇವೆ, ಸಂಘಟನಾ ಸಾಮರ್ಥ್ಯ ಹಾಗೂ ತುಳು ಭಾಷೆ ಮತ್ತು ಸಂಸ್ಕೃತಿಯ ಮೇಲಿನ ಬದ್ಧತೆಯನ್ನು ಪರಿಗಣಿಸಿ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಅಂತರರಾಷ್ಟ್ರೀಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಕರ್ನಾಟಕ ರಾಜ್ಯ ಅಧ್ಯಕ್ಷ ದೇವೇಂದ್ರ ಹೆಗ್ಗಡೆ ಕೊಕ್ರಾಡಿ, ಕೇಂದ್ರೀಯ ಅಧ್ಯಕ್ಷ ಡಾ. ಅವಿನ್ ಬಿ.ಆರ್ ಆಳ್ವ ಹಾಗೂ ಪ್ರಧಾನ ಕಾರ್ಯದರ್ಶಿ ಅರವಿಂದ ಬೆಳ್ಚಡ ಅವರು ಗೋವಾ…

Read More

ಬಂಟ್ವಾಳ ತಾಲೂಕು ಕೊಯಿಲ ಗ್ರಾಮದ ಮಾಡಂದೂರು ನಿವಾಸಿ ಪ್ರಶಾಂತ್ ಶೆಟ್ಟಿ ಮತ್ತು ಸವಿತಾ ಶೆಟ್ಟಿ ದಂಪತಿಯ ಸುಪುತ್ರ ತೀರ್ಥೇಶ್ ಶೆಟ್ಟಿಯವರ ಸಾಧನೆಯ ಮುಕುಟಕ್ಕೆ ಹೊಸ ಗರಿ ಸೇರಿಕೊಂಡಿದೆ. ಚೀನಾದಲ್ಲಿ ನಡೆದ ಏಷ್ಯನ್ ರಿಲೇ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕ್ರೀಡಾ ಕೂಟದ ಮಿಶ್ರ ರಿಲೇ ಸ್ಪರ್ಧೆಯಲ್ಲಿ ಅದ್ಭುತ ಪ್ರದರ್ಶನ ನೀಡಿ ರಜತ ಪ್ರಶಸ್ತಿ ವಿಜೇತರಾಗಿದ್ದಾರೆ. ಜೆ.ಎಸ್.ಡಬ್ಲ್ಯೂ ಅಕಾಡೆಮಿಯಲ್ಲಿ ತರಬೇತಿ ಮುಗಿಸಿ ಪ್ರಸ್ತುತ ಇಂಡಿಯನ್ ಕ್ಯಾಂಪ್ ನಲ್ಲಿ ತರಬೇತಿ ಪಡೆಯುತ್ತಿರುವ ತೀರ್ಥೇಶ್ ಮುಂದಿನ ದಿನಗಳಲ್ಲಿ ತನ್ನದೇ ದಾಖಲೆಗಳನ್ನು ಮುರಿದು ಮುನ್ನುಗ್ಗಿ ವಿಶ್ವದಾಖಲೆಯನ್ನು ನಿರ್ಮಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಬೋಟ್ಸ್ವಾನಾದ ವಿಶ್ವ ರಿಲೇಸ್ ಆಯೋಜನೆಯ ಸ್ಪರ್ಧೆಯಲ್ಲಿ ಭಾಗವಹಿಸಿ ವಿಶೇಷ ಅನುಭವ ಹೊಂದಿದ ಇವರು ಸಾಧನೆಯ ಹಾದಿಯಲ್ಲಿ ಹಿಂದಿರುಗಿ ನೋಡಲಿಲ್ಲ. ಒಂದರ ಮೇಲೊಂದು ರಾಷ್ಟ್ರೀಯ ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾ ಅನೇಕ ಪ್ರಶಸ್ತಿ ಪತ್ರಗಳನ್ನು ಪಡೆದ ಹೆಗ್ಗಳಿಕೆ ಇವರದ್ದು. ವಿಶ್ವ ವಿದ್ಯಾಲಯ ಮಟ್ಟದಿಂದ ವಿಶ್ವ ಮಟ್ಟಕ್ಕೆ ಏರಿದ ಇವರು ಸದಾ ಪ್ರಯತ್ನ ಶೀಲರು. ಮುಂಬರುವ ಏಷ್ಯನ್ ಮತ್ತು ಒಲಿಂಪಿಕ್ಸ್ ಸ್ಪರ್ಧೆಗಳಲ್ಲಿ…

Read More