Author: admin
ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರು, ಸಮಾಜ ಸೇವಕರು, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರಾದ ಸುಗ್ಗಿ ಸುಧಾಕರ್ ಶೆಟ್ಟಿಯವರು 2026 ರ ಸಾಲಿನ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ’ ಗೌರವಕ್ಕೆ ಪಾತ್ರರಾಗಿದ್ದಾರೆ. ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು.
ಡಿ.ವಿ.ಜಿ ಅವರು “ನಗುವು ಸಹಜದ ಧರ್ಮ; ನಗಿಸುವುದು ಪರಧರ್ಮ” ಎಂದು ಹೇಳುವ ಮೂಲಕ, ಇತರರ ಮುಖದಲ್ಲಿ ನಗು ಮೂಡಿಸುವುದೇ ಅತ್ಯುತ್ತಮ ಸೇವೆ ಎಂದು ವರ್ಣಿಸಿದ್ದಾರೆ. ಈ ಮಾತು ‘ಸೇವೆಯೇ ಪರಮ ಧರ್ಮ’ ಎಂದು ನಂಬಿ, ಜನರ ಕಷ್ಟಗಳಿಗೆ ಸ್ಪಂದಿಸಿ, ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವ ಬಂಟರತ್ನ ಡಾ| ಆರ್ ಕೆ ಶೆಟ್ಟಿಯವರಿಗೆ ಸೂಕ್ತವೆನಿಸುತ್ತದೆ. ಇಸ್ಸಾರ್ ಫೈನಾನ್ಸಿಯಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕ ಡಾ| ಆರ್ ಕೆ ಶೆಟ್ಟಿಯವರು ಜೀವವಿಮಾ ಕ್ಷೇತ್ರದ ಸಲಹೆಗಾರರಾಗಿ ಮುಂಬಯಿ ನಗರ ಮಾತ್ರವಲ್ಲದೇ, ವಿಶ್ವದ ನಲವತ್ತೆರಡು ರಾಷ್ಟ್ರಗಳಲ್ಲಿ ಪರಿಚಿತರಿರುವ ಪ್ರಪ್ರಥಮ ಭಾರತೀಯ. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾದ ಬಂಟ ಜನಾಂಗದ ಹೆಮ್ಮೆಯ ಪುತ್ರ. ಘನ ಮಹಾರಾಷ್ಟ್ರ ಸರಕಾರದ ಮಾನ್ಯ ರಾಜ್ಯಪಾಲರಾದ ಶ್ರೀ ಭಗತ್ ಸಿಂಗ್ ಕಿಶ್ಯಾರಿ ಅವರು ರಾಜಭವನದಲ್ಲಿ ಆರ್ ಕೆ ಶೆಟ್ಟಿಯವರನ್ನು ಗೌರವಿಸಿದ್ದಾರೆ ಎಂದಾದರೆ ಅವರ ಘನತೆ ಪ್ರಸಿದ್ಧಿಗೆ ಬೇರೆ ಸಾಕ್ಷಿ ಬೇಕೆ ? ಮಾನ್ಯ ಆರ್ ಕೆ ಶೆಟ್ಟರು ವಿಶ್ವಮಟ್ಟದ ಪ್ರತಿಷ್ಠಿತ…
ದುಂಬುಡು ಆಜೇಲ್ ವರ್ಸದ ಪಿರಯೊಡೆ ಪೊನ್ನುಲೆಗ್ ಮದಿಮೆ ಮಲ್ತೊಂದು ಇತ್ತೆರ್ಗೆ. ಎನ್ನ ಬುಡೆದಿನ ಅಜ್ಜಿಗ್ ಏಲ್ ವರ್ಸ ಆನಗನೇ ಸಂಬಂದೊಡೆ ಮದಿಮೆ ಮಲ್ದೆರ್ಗೆ. ಅಜ್ಜೆರ್ ಪದಿನಾಲ್ ವರ್ಸ ಮಲ್ಲಗೆ. ಎಲ್ಲಿ ಪ್ರಾಯೊಡು ಮದಿಮೆ ಆಂಡಲಾ, ಮದಿಮಾಲ್ ಆವಂದೆ ‘ಕೂಡಿಕೆ’ ಮಲ್ಪರೆ ಇಜ್ಜಿ. ಪೊನ್ನು ಕಂಡ್ಯಾನ ಇಲ್ಲಡ್ ಇಪ್ಪೊಲಿ. ಐವ ವರ್ಸ ಪಿರವುಡು ಎಂಕಲೆನ ನಿರೆಕರೆತಾರ್ ಮದಿಮೆ ಆತಿನ ಪೊನ್ನು ರಡ್ಡ್ ವರ್ಸ ಕರಿದ್ ಮದ್ಮಾಲ್ ಆಯಿನಿ. ಮದಿಮೆ ಆಯಿ ಬೊಕ್ಕ ಪೊನ್ನು, ಪೊನ್ನು ಪೋದು ಪೊಂಜೋವ್ ಆಂಡ, ಅದಗ ಮಲ್ಪುನ ಕ್ರಮೊಕು ತಲ್ನೀರ್ ಮದಿಮೆ ಪನೊಂದು ಇತ್ತೆರ್ಗೆ. ಮದಿಮೆ ಆವಂದಿ ಪೊನ್ನು ಮದ್ಮಾಲ್ ಆಂಡ “ಕರ ಪೊತ್ತಾವುನ” ಕ್ರಮ ಮಲ್ತೊಂದು ಇತ್ತೆರ್ ಇಂಚಪ ಮುಟ್ಟ. ತಲ್ನೀರ್ ಮದಿಮೆಗ್ ಊರುಗು ಹೇಲಿಕೆ ಕೊರೊಂದು ಇತ್ತೆರ್ಗೆ, ಅಂಚೆನೆ ಕಂಡ್ಯಾನ ಇಲ್ಲದಗಲೆಗ್ಲಾ ಹೇಲಿಕೆ ಪೋವೊಂದು ಇತ್ಂಡ್ಗೆ. ಕರ ಪೊತ್ತಾವುನ, ಬಾಯಕೆದಲ್ಕ, ಎಚ್ಚಾದ್ ಪೊಂಜೇವೆಗೆ ಹೇಲಿಕೆ ಜಾಸ್ತಿಗೆ, ಅಂಚ ಪೊಂಜೋವೆ ಎಚ್ಚ ಸೇರೊಂದು ಇತಿನಿಗೆ ತಲ್ನೀರ್ ಮದಿಮೆಗ್.…
ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘದ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉಡುಪಿ ತಾಲೂಕಿನಿಂದ 9 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಿನಕರ ಶೆಟ್ಟಿ ಹೆರ್ಗ, ಮಿಥುನ್ ಆರ್ ಹೆಗ್ಡೆ ಪಡುಬಿದ್ರೆ, ಪ್ರಸಾದ್ ಹೆಗ್ಡೆ ಮಾರಾಳಿ, ಕಿಶೋರ್ ಶೆಟ್ಟಿ ಎರ್ಮಾಳ್, ವೀರೇಂದ್ರ ಶೆಟ್ಟಿ ಪಂಜಿಮಾರ್ ಗುತ್ತು, ರವೀಂದ್ರ ಶೆಟ್ಟಿ ಪೆರ್ಡೂರು, ಜೈ ಕಿಶನ್ ಶೆಟ್ಟಿ ಬ್ರಹ್ಮಾವರ ಪ್ರಸಾದ್ ಹೆಗ್ಡೆ ಕುಕ್ಕೆಹಳ್ಳಿ, ಮಹಿಳಾ ಕ್ಷೇತ್ರದಿಂದ ಸಮಾಜಸೇವಕಿ ನಿರುಪಮಾ ಪ್ರಸಾದ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಂಟರ ಯಾನೆ ನಾಡವರ ಮಾತೃ ಸಂಘ ಇದರ 2026 -29ನೇ ಅವಧಿಗೆ ಅಧ್ಯಕ್ಷರಾಗಿ ಈಗಾಗಲೇ ಕೆ ಅಜಿತ್ ಕುಮಾರ್ ರೈ ಮಾಲಾಡಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಲವಾರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಾವೂರು ಮುಲ್ಲಕಾಡು ಪರಿಸರದಲ್ಲಿ ಧಾರ್ಮಿಕ, ಸಾಂಸ್ಕೃತಿಕ, ಕ್ರೀಡೆ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಊರಿನವರೆಲ್ಲರ ಪ್ರೀತಿ ವಿಶ್ವಾಸಗಳಿಗೆ ಪಾತ್ರರಾದ ಸಂಘಟನೆಯಾದ ಮುಲ್ಲಕಾಡು ಫ್ರೆಂಡ್ಸ್ (ರಿ) ತನ್ನ 21 ನೇ ವರ್ಷದ ಯುಗಾದಿ ಉತ್ಸವವನ್ನು ಮೇ 2 ರಂದು ಶ್ರೀ ಅಯ್ಯಪ್ಪ ಭಜನಾ ಮಂದಿರ ಬಳಿ ಇರುವ ಮುಲ್ಲಕಾಡು ಕೇಂದ್ರ ಮೈದಾನದಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಆಸರೆ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷೆ ಡಾ. ಆಶಾಜ್ಯೋತಿ ರೈಯವರು ನೆರವೇರಿಸಿದರು. ಬಳಿಕ ಮಾತನಾಡಿದ ಡಾ. ಆಶಾಜ್ಯೋತಿ ರೈಯವರು, ಅಖಂಡ ಭಾರತದಲ್ಲಿ ಭೂಮಿ ಮೇಲೆ ಮಾನವ ಜನ್ಮ ತಾಳಿರುವುದು ನಮ್ಮೆಲ್ಲರ ಪುಣ್ಯ. ಈ ಶ್ರೇಷ್ಠವಾದ ಜನ್ಮವನ್ನು ನಾವೆಲ್ಲರೂ ಸಾರ್ಥಕ್ಯ ಮಾಡಿಕೊಳ್ಳಬೇಕು. ಆ ಮೂಲಕ ನಾವು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಪ್ರಸ್ತುತ ಸಮಾಜ ಸಾಮಾಜಿಕ ಪಿಡುಗುಗಳಿಂದ ಹೊರಬರಬೇಕು. ಈಗಿನ ಚಿಕ್ಕ ಮಕ್ಕಳು ಡ್ರಗ್ಸ್ ಗಳ ದಾಸರಾಗಿದ್ದು ಬೇಸರದ ಸಂಗತಿ. ನಾವೆಲ್ಲರೂ ಡ್ರಗ್ಸ್ ಮುಕ್ತ…
ಸುರತ್ಕಲ್ ಸ್ಪೋರ್ಟ್ ಕ್ಲಬ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ನಿರಂತರವಾಗಿ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡು ಕ್ರಿಯಾಶೀಲ ಸಂಘಟನೆಯಾಗಿ ಬೆಳೆದಿದೆ. ಸಂಘದ ಒಗ್ಗಟ್ಟು, ಕಾರ್ಯಸಾಧನೆ, ಕ್ರೀಡಾಶಕ್ತಿ ಇತರ ಸಂಘಗಳಿಗೆ ಮಾದರಿಯಾಗಿದೆ ಎಂದು ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದರು ಅಡಳಿತ ಮೊಕ್ತೇಸರರು ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅವರು ಸುರತ್ಕಲ್ ಸ್ಪೋರ್ಟ್ಸ್ ಆಂಡ್ ಕಲ್ಚರಲ್ ಕ್ಲಬ್ ಹಾಗೂ ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಎರಡು ದಿನದ ಹಿರಿಯರ ಕ್ರಿಕೆಟ್ ಹಬ್ಬ ಪಂದ್ಯಾಟ ಸೀಸನ್ 5 ನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ಮೊಯಿದಿನ್ ಬಾವ, ಬಿ.ಎ.ಎಸ್.ಎಪ್ ಸಂಸ್ಥೆಯ ಎಚ್ ಅರ್ ವಿಭಾಗದ ಸೀನಿಯರ್ ಮ್ಯಾನೇಜರ್ ಸಂತೋಷ್ ಪೈ, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಅಶೋಕ್ ಶೆಟ್ಟಿ ಸುರತ್ಕಲ್, ಉದ್ಯಮಿ ಅಶೋಕ್ ಶೆಟ್ಟಿ ಅರಂತಬೆಟ್ಟು, ಕಿನ್ನಿಗೋಳಿ ಪಟ್ಟಣ ಪಂಚಾಯತ್ ಅಧ್ಯಕ್ಷ ಗುರುರಾಜ್ ಮಲ್ಲಿಗೆಯಂಗಡಿ, ಸುರತ್ಕಲ್…
ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಕಾಸರಗೋಡು ತಾಲೂಕು ಸಮಿತಿ : ಕೆ ಅಜಿತ್ ಕುಮಾರ್ ರೈ ಮಾಲಾಡಿ ನೇತೃತ್ವದ ತಂಡಕ್ಕೆ ಭರ್ಜರಿ ಜಯ
ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಇದರ ಕೇಂದ್ರ ಕಾರ್ಯಕಾರಿ ಸಮಿತಿಗೆ ಕಾಸರಗೋಡು ತಾಲೂಕಿನಿಂದ 8 ಸ್ಥಾನಗಳಿಗಾಗಿ ಮೇ 07 ರಂದು ನಡೆದ ಚುನಾವಣೆಯಲ್ಲಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ನೇತೃತ್ವದ ಕಿರಣ್ ಮಾಡ, ಚಿದಾನಂದ ಆಳ್ವ, ನ್ಯಾಯವಾದಿ ಬಿ ಸುಬ್ಬಯ್ಯ ರೈ, ಮುಕ್ತಾನಂದ ರೈ, ಮೋಹನ್ ಕೆ ರೈ, ವಸಂತರಾಜ್ ಶೆಟ್ಟಿ, ಶಶಿಧರ ಶೆಟ್ಟಿ ಹಾಗೂ ಸದಾನಂದ ರೈಯವರು ಬಹುಮತದಿಂದ ಗೆದ್ದು ವಿಜಯಶಾಲಿಯಾಗಿದ್ದಾರೆ. ಕೆ ಅಜಿತ್ ಕುಮಾರ್ ರೈ ಮಾಲಾಡಿಯವರು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
‘ಯಾವುದೇ ಸಾಂಸ್ಕೃತಿಕ ಸಂಸ್ಥೆ ಇಪ್ಪತ್ತೈದು ವರ್ಷಗಳನ್ನು ಪೂರೈಸುವುದು ಅದರ ಸಾಧನೆಯಲ್ಲೊಂದು ಮೈಲಿಗಲ್ಲು. ಮುಂಬಯಿಯಲ್ಲಿ ಯಕ್ಷಗಾನ ತರಬೇತಿ, ಊರಿನ ಪ್ರಸಿದ್ಧ ಕಲಾವಿದರಿಂದ ಸರಣಿ ತಾಳಮದ್ದಳೆ, ಬಯಲಾಟ ಪ್ರದರ್ಶನ, ಯಕ್ಷ ರಕ್ಷಾ ಪ್ರಶಸ್ತಿ ಪ್ರದಾನ, ಗ್ರಂಥ ಪ್ರಕಟಣೆ, ಕಲಾವಿದರಿಗೆ ನೆರವು, ಸನ್ಮಾನ ಗೌರವಗಳನ್ನು ನೀಡುತ್ತಿರುವ ಅಜೆಕಾರು ಕಲಾಭಿಮಾನಿ ಬಳಗ ತನ್ನ ಬೆಳ್ಳಿ ಹಬ್ಬದ ಕಾರ್ಯಕ್ರಮವನ್ನು ಒಂದು ಬೃಹತ್ ಸಮ್ಮೇಳನದ ಮೂಲಕ ಅರ್ಥಪೂರ್ಣವಾಗಿ ಆಚರಿಸುತ್ತಿದೆ’ ಎಂದು ಮುಂಬಯಿ ಹೇರಂಬ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ, ಮಹಾದಾನಿ ಡಾ| ಕನ್ಯಾನ ಸದಾಶಿವ ಶೆಟ್ಟಿ ಹೇಳಿದರು. ಮುಂಬಯಿ ಅಜೆಕಾರು ಕಲಾಭಿಮಾನಿ ಬಳಗದ ರಜತ ಪರ್ವ ಸಂಭ್ರಮದ ಅಂಗವಾಗಿ ಅಕ್ಟೋಬರ್ ನಲ್ಲಿ ನಡೆಯಲಿರುವ ‘ಮುಂಬಯಿ ಯಕ್ಷಗಾನ ಸಮ್ಮೇಳನ – 2026’ ಇದರ ವರ್ಣರಂಜಿತ ಲಾಂಛನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ‘ಮುಂಬಯಿ ಯಕ್ಷಗಾನ ಸಮ್ಮೇಳನ ಯಕ್ಷಗಾನದ ಇತಿಹಾಸದಲ್ಲಿ ದಾಖಲಾಗುವುದರಲ್ಲಿ ಅನುಮಾನವಿಲ್ಲ. ಇಂತಹ ಸತ್ಕಾರ್ಯಕ್ಕೆ ಯಕ್ಷಗಾನ ಕಲಾಭಿಮಾನಿಗಳು, ಉದ್ಯಮಿಗಳು ಹಾಗೂ ಸಮಾಜದ ಗಣ್ಯರು ಮುಕ್ತ ಮನಸ್ಸಿನಿಂದ ಕೈಜೋಡಿಸಬೇಕು’ ಎಂದವರು ನುಡಿದರು. ಅಜೆಕಾರು ಕಲಾಭಿಮಾನಿ ಬಳಗದ…
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ನಿಂದ ನೀಡಲ್ಪಡುವ 2026ನೇ ಸಾಲಿನ ಕಾಯಕಯೋಗಿ ರಾಜ್ಯ ಪ್ರಶಸ್ತಿಯನ್ನು ಮೇ 1 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ತೀರ್ಥಹಳ್ಳಿಯ ಸಮಾಜ ಸೇವಕ, ಹಿರಿಯ ಪತ್ರಕರ್ತ ಡಿ.ಎಸ್ ವಿಶ್ವನಾಥ ಶೆಟ್ಟಿಯವರಿಗೆ ಪ್ರದಾನ ಮಾಡಲಾಯಿತು. ಪರಿಷತ್ನ ಮಹಾಪೋಷಕರರು, ಇಸ್ರೋ ಮಾಜಿ ಅಧ್ಯಕ್ಷ ಡಾ. ಎ.ಎಸ್ ಕಿರಣ್ ಕುಮಾರ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ. ಅಂಜಿನಪ್ಪ, ಕರಾವೈಸಂ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ್, ಶಿವಮೊಗ್ಗ ಜಿಲ್ಲಾಧ್ಯಕ್ಷ ರವಿಕುಮಾರ್, ತೀರ್ಥಹಳ್ಳಿ ತಾಲೂಕು ಅಧ್ಯಕ್ಷೆ ಬಿ ವರಲಕ್ಷ್ಮಿ ಪ್ರಕಾಶ್, ರಿಪ್ಪನ್ಪೇಟೆಯ ಸವಿತಾ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.
‘ಕೀರ್ತಿಕಾಮನೆ ಬೆನ್ನ ಹಿಡಿದು ಹೋದರೆ ಮನುಜ ತಂತಿ ಮೇಲಿನ ಆಟ, ಅದು ದೊಂಬರಾಟ; ಹೂ ಅರಳಿ ನಗುವಂತೆ ಇರಲಿ ಸಹಜತೆ ಮನದಿ ದೂರವಿರು ಹೊಗಳಿಕೆಗೆ’ – ಮುದ್ದು ರಾಮ. ಒಬ್ಬೊಬ್ಬರ ಬದುಕು ಒಂದೊಂದು ರೀತಿ. ಒಬ್ಬರದು ಗಳಿಸಬೇಕು ಗಳಿಸಿದನ್ನು ಉಳಿಸಬೇಕು ಅದೇ ಬದುಕು ಅನ್ನುವುದಾದರೆ, ಇನ್ನೊಬ್ಬರದ್ದು ದುಡಿಯಬೇಕು ದುಡಿ ದುಡಿದು ಗಂಟು ಕಟ್ಟಿ ನನ್ನ ಕುಟುಂಬದವರ ಜೀವನ ಹಸನುಗೊಳಿಸಬೇಕು. ಮತ್ತೊಬ್ಬರದ್ದು ದುಡಿಯುತ್ತಿರಬೇಕು ದುಡಿ ದುಡಿಯುತ್ತಾ ಬದುಕು ಕೊನೆಯಾಗಲಿ ಅನ್ನುವುದಾದರೆ, ಬೆರಳೆಣಿಕೆಯ ಜನರ ವಿಚಾರ ಮಾತ್ರ ಬೇರೆಯದೇ ಆಗಿರುತ್ತದೆ. ನಾನು ಶ್ರಮಿಕನಾಗಬೇಕು ನನಗಾಗಿಯಲ್ಲ ನನ್ನವರಿಗಾಗಿಯೂ ಅಲ್ಲ, ಕೇವಲ ನನ್ನ ಸುತ್ತ-ಮುತ್ತಲ ಸಮಾಜಕ್ಕಾಗಿ ದುಡಿಯಬೇಕು ಅನ್ನುವವರ ಒಂದು ವರ್ಗ ಇರುತ್ತದೆ. ಆ ವರ್ಗಕ್ಕೆ ಸೇರಿದವರ ಚಿಂತನೆಯೂ ನಮ್ಮ ಊಹೆಗೆ ನಿಲುಕದಾಗಿರುತ್ತದೆ. ಈ ಭೂಮಿಯಲ್ಲಿನ ಋಣ ಚಿರ ನಿದ್ರೆಗೆ ಜಾರುವ ತನಕ. ಇರುವಷ್ಟು ಕಾಲ ಕಷ್ಟ, ನೊಂದವರ ಬದುಕನ್ನು ಸಾಂತ್ವನಿಸಬೇಕು. ನಮ್ಮ ಆಸುಪಾಸಿನ ಸಮಾಜ ಪ್ರಗತಿ ಕಾಣಬೇಕು. ಊರು ಅಭಿವೃದ್ಧಿಯಾಗಬೇಕು. ಅಲ್ಲಿನ ಮಕ್ಕಳು ಶಿಕ್ಷಿತರಾಗಬೇಕು. ಅಲ್ಲಿನ…















