Author: admin

ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟಗೊಂಡಿದ್ದು, ಉಪಾಧ್ಯಕ್ಷೆಯಾಗಿ ಕಾರ್ಕಳ ತಾಲೂಕಿನ ನೀರೆ ಗ್ರಾಮದ ಮಾಲಿನಿ ಜೆ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಮಾಲಿನಿ ಜೆ ಶೆಟ್ಟಿಯವರು ನೀರೆ ಕಣಂಜಾರು ಗ್ರಾಮ ಪಂಚಾಯತ್‌ ಉಪಾಧ್ಯಕ್ಷೆಯಾಗಿ, ತಾಲೂಕು ಪಂಚಾಯತ್‌ ಉಪಾಧ್ಯಕ್ಷೆ ಮತ್ತು ಅಧ್ಯಕ್ಷೆಯಾಗಿ, ತಾಲೂಕು ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿ ಹಾಗೂ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದು, ಇದೀಗ ಎರಡನೇ ಬಾರಿಗೆ ಜಿಲ್ಲಾ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಇದಲ್ಲದೇ ಧಾರ್ಮಿಕ ಹಾಗೂ ಸಾಮಾಜಿಕವಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.

Read More

ಆತ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರೀಕದಲ್ಲಿ ಬಂಟ ಸಮಾಜದ ಮಹಾನ್ ಚೇತನ, ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಅಧ್ಯಕ್ಷ, ಕೊಡುಗೈ ದಾನಿಯಾಗಿದ್ದ ದಿವಂಗತ ಸತೀಶ್ಚಂದ್ರ ಹೆಗ್ಡೆ ಅವರ ಸವಿ ನೆನಪಿಗಾಗಿ ‘ಸತೀಶ್ಚಂದ್ರ ಹೆಗ್ಡೆ ಸರ್ಕಲ್’ ಲೋಕಾರ್ಪಣೆಗೊಂಡಿತು. ಈ ಸಂಧರ್ಭ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪ್ರೇಮಲತಾ ಎಸ್ ಹೆಗ್ಡೆ, ಆತ್ರಾಡಿ ಬೀಡು ದಿಲೀಪ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

Read More

ಹುಬ್ಬಳ್ಳಿ ಧಾರವಾಡ ಬಂಟರ ಸಂಘದ 2026 -28ನೇ ಸಾಲಿನ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾಗಿರುವ ಪ್ರಮುಖರನ್ನು ಹೂಗಾರ ಸಮಾಜ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ರಾಜೇಂದ್ರ ವಿ ಶೆಟ್ಟಿ, ನೂತನ ಕಾರ್ಯದರ್ಶಿ ರತ್ನಾಕರ್ ಎಂ. ಶೆಟ್ಟಿ (ಕರಾವಳಿ ಕ್ಯಾಟರ್ಸ್) ಹಾಗೂ ನೂತನ ಖಜಾಂಚಿ ದಿನೇಶ್ ಕೆ ಶೆಟ್ಟಿ ಅವರನ್ನು ಪ್ರತಿಷ್ಠಾನದ ಪದಾಧಿಕಾರಿಗಳು ಗೌರವಿಸಿ, ಅವರ ಮುಂದಿನ ಸಮಾಜಮುಖಿ ಕಾರ್ಯಗಳಿಗೆ ಶುಭ ಹಾರೈಸಿದರು. ನೂತನ ಪದಾಧಿಕಾರಿಗಳ ನಾಯಕತ್ವದಲ್ಲಿ ಸಂಘವು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಈ ಸಂದರ್ಭದಲ್ಲಿ ಆಶಿಸಲಾಯಿತು. ಈ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಹೂಗಾರ ಸಮಾಜ ಅಭಿವೃದ್ಧಿ ಪ್ರತಿಷ್ಠಾನದ ಪ್ರಮುಖರಾದ ಲೋಚನೇಶ ಹೂಗಾರ, ಸುರೇಶ ಹೂಗಾರ, ಬಸವರಾಜ ಹೂಗಾರ ಹಾಗೂ ಹೊಳಬಸಪ್ಪ ಹೂಗಾರ ಸೇರಿದಂತೆ ಸಮಾಜದ ಪ್ರಮುಖರು ಹಾಗೂ ಗಣ್ಯರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Read More

2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ವತಿಯಿಂದ ಬ್ರಹ್ಮಾವರ ವಲಯದ ಸಂಚಾಲಕಿಯಾಗಿ ಶ್ರೀಮತಿ ಆಶಾ ಎ. ಹೆಗ್ಡೆ ಅವರನ್ನು ಮರು ನೇಮಕ ಮಾಡಲಾಗಿದೆ. ಆರೋಗ್ಯ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಆಶಾ ಎ. ಹೆಗ್ಡೆ ಅವರು ಶ್ರೀದೇವಿ ಕ್ಲಿನಿಕಲ್ ಲ್ಯಾಬೋರೇಟರಿ, ಶ್ರೀದೇವಿ ಹೆಲ್ತ್ ಕೇರ್ ಮತ್ತು ಪ್ರಧಾನಮಂತ್ರಿ ಜನೌಷಧಿ ಕೇಂದ್ರ ಮಂದಾರ್ತಿಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮಾನವ ಹಕ್ಕುಗಳು ಮತ್ತು ಮಹಿಳಾ ಮಕ್ಕಳ ಕಲ್ಯಾಣ ಸಂಸ್ಥೆಯ ಕರ್ನಾಟಕ ಉಪಾಧ್ಯಕ್ಷೆ, ಸಹಕಾರ ಭಾರತಿಯ ಉಡುಪಿ ಜಿಲ್ಲಾ ಮಹಿಳಾ ಪ್ರಮುಖೆ ಸೇರಿದಂತೆ ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಅವರ ಸಮಾಜಸೇವೆ, ಸಂಘಟನಾ ಸಾಮರ್ಥ್ಯ ಹಾಗೂ ತುಳು ಭಾಷೆ ಮತ್ತು ಸಂಸ್ಕೃತಿಯ ಮೇಲಿನ ಬದ್ಧತೆಯನ್ನು ಪರಿಗಣಿಸಿ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಅಂತರಾಷ್ಟ್ರೀಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಕೇಂದ್ರೀಯ ಅಧ್ಯಕ್ಷ ಡಾ. ಅವಿನ್ ಬಿ.ಆರ್ ಆಳ್ವ, ಪ್ರಧಾನ ಕಾರ್ಯದರ್ಶಿ ಅರವಿಂದ ಬೆಳ್ಚಡ ಹಾಗೂ ಪ್ರಧಾನ ಸಂಚಾಲಕ ವಿಶ್ವನಾಥ…

Read More

ಬಂಟರ ಸಂಘ ಹೈದರಾಬಾದ್ ವತಿಯಿಂದ ಬಂಟ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಜುಲೈ 5 ರಂದು ಸಂಜೆ 6 ಗಂಟೆಗೆ ಹೈದರಾಬಾದ್ ಲಕ್ಡಿಕಪುಲ್ ನಲ್ಲಿರುವ ಹೋಟೆಲ್ ಅಬೋಡೆಯಲ್ಲಿ ಸಂಘದ ಅಧ್ಯಕ್ಷ ಎಚ್ ಚಂದ್ರಶೇಖರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕುಂದಾಪುರ ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷ ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದು, ಉದ್ಯಮಿ, ಸಮಾಜಸೇವಕ, ಹೈದರಾಬಾದ್ ಬಂಟರ ಸಂಘದ ಮಾಜಿ ಅಧ್ಯಕ್ಷ ರತ್ನಾಕರ ರೈ ಹಾಗೂ ಗೀತಾ ರೈ ದಂಪತಿಗಳನ್ನು ಈ ಸಂಧರ್ಭದಲ್ಲಿ ಸನ್ಮಾನಿಸಲಾಗುವುದು. ಬಂಟರ ಸಂಫದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದು, ಕಾರ್ಯಕ್ರಮದ ಕೊನೆಯಲ್ಲಿ ಸಹಭೋಜನ ನಡೆಯಲಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹೈದರಾಬಾದ್ ಬಂಟರ ಸಂಘದ ಅಧ್ಯಕ್ಷ ಎಚ್ ಚಂದ್ರಶೇಖರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕವಿತಾ ಪಿ ಶೆಟ್ಟಿ ಹಾಗೂ ಕೋಶಾಧಿಕಾರಿ ಎಸ್ ರವಿ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಂಟರ ಸಂಘ ಬಜಪೆ ವಲಯದ ನೂತನ ಬಂಟರ ಭವನಕ್ಕೆ ಶಿಲಾನ್ಯಾಸ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ಸಹಾಯಧನ ವಿತರಣೆ ಕಾರ್ಯಕ್ರಮವು ಸಂಘದ ನಿವೇಶನ ಇರುವ ಬಜಪೆ ತಾರಿಕಂಬ್ಳ ಮುಂಡಾರಿನಲ್ಲಿ ಜುಲೈ 5ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಬಂಟರ ಸಂಘ ಬಜಪೆಯ ಅಧ್ಯಕ್ಷ ವೇಣುಗೋಪಾಲ್ ಎಲ್ ಶೆಟ್ಟಿ ಕರಂಬಾರು ಪಡುಮನೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದಾಜು ರೂ. 10 ಕೋಟಿಯಲ್ಲಿ ನಿರ್ಮಾಣಗೊಳ್ಳಲಿರುವ ಬಂಟರ ಭವನಕ್ಕೆ ಎಂ.ಆರ್.ಜಿ ಸಮೂಹ ಸಂಸ್ಥೆಗಳ ಸಿಎಂಡಿ ಡಾ| ಕೆ ಪ್ರಕಾಶ್ ಶೆಟ್ಟಿ ಶಿಲಾನ್ಯಾಸ ನೆರವೇರಿಸುವರು. ಶಬರಿ ಇಂಡಸ್ಟ್ರಿಯಲ್ ಕೇಟರಿಂಗ್ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಕೆ ಶೆಟ್ಟಿ ದೀಪ ಪ್ರಜ್ವಲನೆ ಮಾಡಿ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‍ ಕುಮಾರ್ ರೈ ಮಾಲಾಡಿ ಕಾರ್ಯಕ್ರಮ ಉದ್ಘಾಟಿಸುವರು. ಉದ್ಯಮಿ ಕರುಣಾಕರ ಶೆಟ್ಟಿ ಮಧ್ಯಗುತ್ತುರವರು ನೂತನ ಬಂಟರ ಭವನದ ನೀಲನಕ್ಷೆ ಬಿಡುಗಡೆ ಮಾಡುವರು. ಪುಣೆ ಬಂಟರ ಸಂಘ ಅಧ್ಯಕ್ಷ ಅಜಿತ್ ಹೆಗ್ಡೆ ಕೆಂಜಾರುಗುತ್ತು…

Read More

2028ರಲ್ಲಿ ಶತಮಾನೋತ್ಸವ ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ವತಿಯಿಂದ ಕಾಪು ವಲಯ ಸಂಚಾಲಕರಾಗಿ ಡಾ| ನಿರಂಜನ್ ಎಸ್ ಶೆಟ್ಟಿ ಅವರನ್ನು ಮರು ನೇಮಕ ಮಾಡಲಾಗಿದೆ. ಆಯುರ್ವೇದ, ಯೋಗ, ಸಮತೋಲಿತ ಆಹಾರ ಹಾಗೂ ಮನಃಶಾಂತಿ ಆಧಾರಿತ ಸಮಗ್ರ ಆರೋಗ್ಯ ಸೇವೆಯಲ್ಲಿ ಗುರುತಿಸಿಕೊಂಡಿರುವ ಡಾ| ನಿರಂಜನ್ ಎಸ್ ಶೆಟ್ಟಿ ಅವರು ಸುನಂದ ವೆಲ್‌ನೆಸ್ ಸೆಂಟರ್ ನ ಸಂಸ್ಥಾಪಕರಾಗಿದ್ದು, ಔಷಧರಹಿತ ಚಿಕಿತ್ಸಾ ವಿಧಾನಗಳ ಮೂಲಕ ನೂರಾರು ಜನರ ಆರೋಗ್ಯ ಸುಧಾರಣೆಗೆ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವ ಅವರು ರಾಷ್ಟ್ರೀಯ ಮಾನವ ಹಕ್ಕು ಸಮಿತಿ ಹಾಗೂ ಮಹಿಳಾ ಮಕ್ಕಳ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಮೆರಿಕದ ಲಿಂರಾ ವಿಂಡ್ಸರ್ ಸುವರ್ಣ ಪದಕ ಹಾಗೂ ಸಿಂಗಾಪುರದ ಚಾಂಪಿಯನ್ ಆಫ್ ಚಾಂಪಿಯನ್ಸ್ ಸಿಇಓ ಅವಾರ್ಡ್ ಸೇರಿದಂತೆ ಹಲವು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅವರ ಸಮಾಜ ಸೇವೆ, ಸಂಘಟನಾ ಸಾಮರ್ಥ್ಯ ಹಾಗೂ ತುಳು ಭಾಷೆ, ಸಂಸ್ಕೃತಿ ಮತ್ತು…

Read More

ಯುವಜನತೆಯು ಮಾದಕ ವಸ್ತುಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದು ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸುವ ಸಲುವಾಗಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಕಾರ್ಕಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಾರ್ಕಳ ನಗರ ವಲಯ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ(ರಿ.), ಕಾರ್ಕಳ ತಾಲೂಕು ಹಾಗೂ ಕಾರ್ಕಳ ನಗರ ಆರಕ್ಷಕ ಠಾಣೆ ಮತ್ತು ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಕಾರ್ಕಳದ ಜಂಟಿ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಮಾದಕ ವಸ್ತು ವಿರೋಧಿ ದಿನ ಹಾಗೂ ನಶಾ ಮುಕ್ತ ಭಾರತ ಎಂಬ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಕಳ ನಗರ ವಲಯದ ಪೊಲೀಸ್ ಉಪನಿರೀಕ್ಷಕರಾದ ಶ್ರೀ ಶಿವಕುಮಾರ್ ಎಸ್ ಆರ್. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಬದುಕಿನ ಅದಃಪತನಕ್ಕೆ ಕಾರಣವಾಗುತ್ತದೆ. ಯುವ ಜನತೆ ದೇಶಕ್ಕೆ ಶಕ್ತಿಯಾಗಿ ಪೂರಕವಾಗಬೇಕೇ ವಿನಹ ಮಾರಕವಾಗಬಾರದು ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವವರ ವಿರುದ್ಧ ಕಾನೂನಾತ್ಮಕವಾಗಿ ಕಠಿಣ…

Read More

ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಬಿಲ್ಲಾಡಿ ಪ್ರಥ್ವಿರಾಜ್ ಶೆಟ್ಟಿ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಅಸಮರ್ಪಕತೆ ಕುರಿತು ಮನವಿ ನೀಡಲಾಯಿತು. ನರೇಂದ್ರ ಮೋದಿಯವರ ಆಯುಷ್ಮಾನ್ ಯೋಜನೆಯ ಪ್ರಯೋಜನವನ್ನು ಪಡೆಯಲು ಉಡುಪಿ ಜಿಲ್ಲೆಯ ಜನಸಾಮಾನ್ಯರು ಪರದಾಡುತ್ತಿದ್ದು, ಈ ಕುರಿತು ಉಡುಪಿ ಜಿಲ್ಲಾಧಿಕಾರಿಗಳಿಗೆ ಮಾನವಿ ನೀಡಿ ಸಮಸ್ಯೆಯನ್ನು 7 ದಿನಗಳ ಒಳಗೆ ಸರಿಪಡಿಸುವಂತೆ ಗಡುವು ನೀಡಲಾಯಿತು. ಇಲ್ಲವೇ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸುವದಾಗಿ ಎಚ್ಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಭಿರಾಜ್ ಸುವರ್ಣ, ಪ್ರದೀಪ್ ಕುಂದರ್, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರುಗಳಾದ ಗುರುರಾಜ್ ಮಾಡ, ಗಜೇಂದ್ರ ಎಸ್ ಬೆಳಮನೆ, ಪ್ರಥ್ವಿರಾಜ್ ಮಣಿಪಾಲ, ಕಾರ್ಯದರ್ಶಿಗಳಾದ ರಾಕೇಶ್ ಅಮೀನ್ ಕಾರ್ಕಳ, ನಿತೇಶ್ ಶೆಟ್ಟಿ ಕಪ್ಪೆಟ್ಟು, ಯತೀಶ್ ಶೆಟ್ಟಿ, ಕಾರ್ಯಕಾರಿಣಿ ಸದಸ್ಯರಾದ ದರ್ಶಿತ್ ಶೆಟ್ಟಿ, ಗಣೇಶ್ ಕುಂದರ್, ನಿತೇಶ್, ಆದಿತ್ಯ ಆಚಾರ್ಯ ಗ್ರಾಮಾಂತರ ಅಧ್ಯಕ್ಷ ಸುಶಾಂತ್ ಪೂಜಾರಿ, ಉಪಾಧ್ಯಕ್ಷ ಆಯುಷ್ ಪೂಜಾರಿ ಉಪಸ್ಥಿತರಿದ್ದರು.

Read More

ಹುಟ್ಟಿದ ಪ್ರತಿಯೊಂದು ಜೀವಿಗೂ ದೈಹಿಕ ಸ್ವಾಸ್ಥ್ಯ ಎಂಬುದು ಅತ್ಯಗತ್ಯ. ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮತೋಲನ ಒಬ್ಬ ಮನುಷ್ಯನ ಅವಿಭಾಜ್ಯ ಅಂಗ. ಅಂತಹ ಮಾನಸಿಕ ರೋಗಕ್ಕೆ ಸಂಬಂಧಪಟ್ಟ ಒಂದು ಅಪರೂಪದ ರೋಗದ ಬಗ್ಗೆ ಮತ್ತು ಅದನ್ನು ಹೇಗೆ ಗುಣಪಡಿಸಲು ಸಾಧ್ಯ ಎಂಬುದರ ಬಗ್ಗೆ ನಾನು ಇಲ್ಲಿ ಬರೆಯುತ್ತಿದ್ದೇನೆ. ಪಿಡ್ಸ್ / ಮೂರ್ಛೆ ರೋಗ ಅಥವಾ ಅಪಸ್ಮಾರ ಕಾಯಿಲೆಯ ಬಗ್ಗೆ ನಾವೆಲ್ಲರೂ ಕೇಳಿರುತ್ತೇವೆ. ವರ್ಲ್ಡ್ ಹೆಲ್ತ್ ಆರ್ಗನೈಸೇಷನ್ (WHO) ಅಥವಾ ವಿಶ್ವ ಆರೋಗ್ಯ ಸಂಸ್ಥೆಯ ಒಂದು ಸಮೀಕ್ಷೆಯ ಪ್ರಕಾರ ಜಗತ್ತಿನಲ್ಲಿ ಸುಮಾರು 50 ಮಿಲಿಯನ್ (5 ಕೋಟಿ) ಜನರು ಈ ಅಪಸ್ಮಾರ ಕಾಯಿಲೆಯಿಂದ ಬಳಲುತ್ತಿದ್ದಾರೆ‌. ಅದೇ ನಮ್ಮ ಭಾರತ ದೇಶದಲ್ಲಿ ನೋಡುವುದಾದರೆ, ಪ್ರತೀ 1000 ಜನರಲ್ಲಿ 5 ರಿಂದ 10 ಜನ ಎಂದರೆ, ಸರಿ ಸುಮಾರು ಒಂದು ಕೋಟಿಗೂ ಅಧಿಕ ಮಂದಿ ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅಪಸ್ಮಾರ ಎಂಬ ಕಾಯಿಲೆಯು ಮೆದುಳಿನ ನರಕೋಶಗಳು ಅಸಹಜವಾಗಿ ಮತ್ತು ಅತಿಯಾಗಿ ವಿದ್ಯುತ್ ಸಂಕೇತಗಳನ್ನು ಉತ್ಪಾದಿಸಿದಾಗ ಉಂಟಾಗುತ್ತದೆ.…

Read More