Author: admin

ವಿದ್ಯಾರ್ಥಿಗಳು ಕಾಲೇಜು ಜೀವನದ ಖುಷಿಯನ್ನು ಅನುಭವಿಸಬೇಕು. ಹಾಗೆಂದು ಯಾವುದೇ ಕಾರಣಕ್ಕೂ ದುಶ್ಚಟಗಳಿಗೆ ಬಲಿಯಾಗಬಾರದು. ದುಶ್ಚಟಗಳಿಂದ ದೂರವಿದ್ದರೆ ಮಾತ್ರ ಪರಿಪೂರ್ಣ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಛೇರ್ಮನ್ ಸಿಎ ಶಾಂತರಾಮ ಶೆಟ್ಟಿ ಹೇಳಿದರು. ಎಸ್.ಡಿ.ಎಂ ಕಾಲೇಜ್ ಆಫ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್, ಪಿಜಿ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್ ಮತ್ತು ರಿಸರ್ಚ್ ಹಾಗೂ ಇಂಡಿಯನ್ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹಯೋಗದಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ಎಸ್‌ಡಿಎಂ ಪಿಜಿ ಸೆಂಟರ್ ಸಭಾಂಗಣದಲ್ಲಿ ಆಹಾರ, ನೈರ್ಮಲ್ಯ ಮತ್ತು ಯುವ ಜನತೆಯ ಮಾನಸಿಕ ಆರೋಗ್ಯ ವಿಷಯದ ಬಗ್ಗೆ ನಡೆದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಯೂತ್ ರೆಡ್ ಕ್ರಾಸ್ ನಿರ್ದೇಶಕಿ ಡಾ. ಸುಮನಾ ಬೋಳಾರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಇಂತಹ ಕಾರ್ಯಾಗಾರಗಳು ಉಪಯುಕ್ತವಾಗಿವೆ ಎಂದರು. ಎಸ್.ಡಿ.ಎಂ ಪಿಜಿ ಸೆಂಟರ್ ನಿರ್ದೇಶಕಿ ಡಾ. ಸೀಮಾ ಎಸ್ ಶೆಣೈ…

Read More

ಬಂಟರ ಯಾನೆ ನಾಡವರ ಮಾತೃ ಸಂಘದ ಬೆಳ್ತಂಗಡಿ ತಾಲೂಕು ಸಮಿತಿ ಸಭೆಯು ಮೇ 20 ರಂದು ಮುಂಡಾಡಿ ಗುತ್ತು ಜಯರಾಮ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಬಂಟರ ಭವನದಲ್ಲಿ ನಡೆಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ 108 ನೇ ವರ್ಷದ ಕಾರ್ಯಕಾರಿ ಸಮಿತಿಗೆ ಅವಿರೋಧವಾಗಿ ಆಯ್ಕೆಯಾದ ಎಂ ಜಯರಾಮ ಭಂಡಾರಿ, ಕಿರಣ್ ಕುಮಾರ್ ಶೆಟ್ಟಿ, ಮುಂಡಾಡಿ ಗುತ್ತು ಜಯರಾಮ ಶೆಟ್ಟಿ ಹಾಗೂ ಸುಜಾತ ಶೆಟ್ಟಿ ಪೆರಿಂಜೆ ಇವರು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಬೆಳ್ತಂಗಡಿ ತಾಲೂಕಿನ ಮುಂದಿನ ಸಂಚಾಲಕರಾಗಿ ಎಂ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿಯವರನ್ನು ಪುನರಾಯ್ಕೆಗೊಳಿಸಲಾಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಆಡಳಿತ ಮಂಡಳಿಗೆ ಬೆಳ್ತಂಗಡಿ ತಾಲೂಕಿನಿಂದ ನಾಮ ನಿರ್ದೇಶನ ಸದಸ್ಯರಾಗಿ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಅಜಿತ್ ಜಿ ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು.

Read More

ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗ ಮುಂಬಯಿ ವತಿಯಿಂದ ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಸಹಕಾರದೊಂದಿಗೆ ಪ್ರಭು ಶ್ರೀ ರಾಮಚಂದ್ರ ದೇವರ ಅವತಾರದ ಆರಂಭದಿಂದ ಶ್ರೀ ದೇವರ ನಿರ್ಯಾಣದವರೆಗಿನ ಸಂಪೂರ್ಣ ‘ಶ್ರೀರಾಮ ಚರಿತ್ರೆ – ಶ್ರೀ ರಾಮಕಥಾ ಹೃದಯಂ’ ಪುಣ್ಯಪ್ರದ 24 ಕಂತುಗಳ ಸರಣಿ ತಾಳಮದ್ದಳೆ ಕಾರ್ಯಕ್ರಮದ ಎಂಟನೆಯ ಪ್ರಸ್ತುತಿ ಶ್ರೀರಾಮ ಕಾರುಣ್ಯ ಮತ್ತು ಸನ್ಮಾನ ಕಾರ್ಯಕ್ರಮವು ಮೇ 24ರಂದು ಅಪರಾಹ್ನ 2.15 ರಿಂದ ವಿದ್ಯಾ ವಿಹಾರ್ ಪಶ್ಚಿಮದ ಗಾಂವ್ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ಹರಿದಾಸ ಭಟ್ ಪೆರ್ಣಂಕಿಲ ಅವರ ಶುಭಾಶೀರ್ವಾದದೊಂದಿಗೆ, ಶ್ರೀ ಅಂಬಿಕಾ ಆದಿನಾಥೇಶ್ವರ ದೇವಸ್ಥಾನ ವಿದ್ಯಾ ವಿಹಾರ್ ಇದರ ಆಡಳಿತ ಮೊಕ್ತೇಸರ ಹರಿದಾಸ ಗೋಪಾಲ ಶೆಟ್ಟಿ ಅವರ ಸಂಪೂರ್ಣ ಸಹಕಾರದೊಂದಿಗೆ ನಡೆಯಲಿರುವ ಸಮಾರಂಭದಲ್ಲಿ, ಕಳೆದ ಮೂರು ದಶಕಗಳಿಂದ ಕಲಾಸೇವೆಗೈಯುತ್ತಿರುವ ರವೀಂದ್ರ ಪೂಜಾರಿ ಉಚ್ಚಿಲ ಅವರನ್ನು ಸಪತ್ನಿಕರಾಗಿ ವೇದಮೂರ್ತಿ ಪೆರ್ಣಂಕಿಲ ಹರಿದಾಸ ಭಟ್ ಅವರ ಆಶಯದಂತೆ ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಗುವುದು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವೇದಮೂರ್ತಿ ಶ್ರೀ…

Read More

ಬಂಟರ ಯಾನೆ ನಾಡವರ ಮಾತೃ ಸಂಘದ ಕುಂದಾಪುರ ತಾಲೂಕು ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ನೂತನ ಸಂಚಾಲಕರಾಗಿ ಸಂಪತ್ ಕುಮಾರ್ ಶೆಟ್ಟಿ ಹಾಗೂ ಸಹ ಸಂಚಾಲಕರಾಗಿ ಡಾ| ನಿತ್ಯಾನಂದ ಶೆಟ್ಟಿ ಅಂಪಾರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಪತ್ ಶೆಟ್ಟಿಯವರು ಧಾರ್ಮಿಕ ಕ್ಷೇತ್ರ, ಸಾಮಾಜಿಕ ಕ್ಷೇತ್ರದ ಸಾಧಕರಾಗಿ ಗುರುತಿಸಿಕೊಂಡಿದ್ದು, ಡಾ| ನಿತ್ಯಾನಂದ ಶೆಟ್ಟಿ ಅಂಪಾರು ಅವರು ಕುಂದಾಪುರ ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾಗಿ ಹಲವಾರು ಜನಪರ ಕೆಲಸಗಳನ್ನು ಮಾಡಿ ಕುಂದಾಪುರ ತಾಲೂಕಿನ ಬಂಟ ಸಮಾಜದ ಪ್ರೀತಿಗೆ ಪಾತ್ರರಾಗಿದ್ದಾರೆ.

Read More

ತುಳುನಾಡಿನ ಮಾತೃ ಮೂಲ ಸಂಸ್ಕೃತಿ, ಮಹಿಳಾ ಶಕ್ತಿ, ಸಮಾಜಮುಖಿ ಸೇವೆ ಹಾಗೂ ನಾನಾ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ನಡೆಯುವ ‘ಅಪ್ಪೆ ಬೇರ್ ದ ತುಳುನಾಡ್’ ರಾಷ್ಟ್ರೀಯ ತುಳು ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಏಳು ಮಂದಿ ಸಾಧಕಿಯರಿಗೆ ‘ತುಳು ಅಪ್ಪೆ ಸಿರಿ’ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಮೇ 24 ರಂದು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮ ತುಳುನಾಡಿನ ಮಾತೃ ಮೂಲ ಸಂಸ್ಕೃತಿ, ತುಳು ಭಾಷೆ ಪರಂಪರೆ, ಮಹಿಳಾ ನಾಯಕತ್ವ ಹಾಗೂ ಸಾಮಾಜಿಕ ಏಕತೆಯ ಸಂದೇಶ ಸಾರುವ ವಿಶಿಷ್ಟ ವೇದಿಕೆಯಾಗಿದೆ. ಕಾರ್ಯಕ್ರಮದ ಅಂಗವಾಗಿ ಮಾತೃ ಮೂಲ ಸಂಸ್ಕೃತಿ, ತಾಯಿ ಮೂಲದ ತತ್ವ, ಅಳಿಯ ಸಂತಾನ ಪದ್ಧತಿ, ತುಳು ಭಾಷೆಯ ಭವಿಷ್ಯ, ಮಹಿಳಾ ನಾಯಕತ್ವ ಹಾಗೂ ತುಳುನಾಡಿನ ಸಾಂಸ್ಕೃತಿಕ ಪುನರುಜ್ಜೀವನ ಕುರಿತ ರಾಷ್ಟ್ರೀಯ ಮಟ್ಟದ ವಿಚಾರಗೋಷ್ಠಿ ಮತ್ತು ವಿಶೇಷ ಪ್ರಬಂಧ ಮಂಡನೆ ನಡೆಯಲಿದ್ದು, ನಾನಾ ಕ್ಷೇತ್ರದ ಗಣ್ಯರು, ಸಂಶೋಧಕರು, ಸಾಹಿತಿಗಳು, ಕಲಾವಿದರು ಹಾಗೂ ಸಮಾಜಮುಖಿ…

Read More

ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವತಿಯಿಂದ ಭಾರತ ಸರ್ಕಾರದ ಆಯುಷ್ ಸಚಿವಾಲಯದ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ಸಹಯೋಗದಲ್ಲಿ ‘ಯೋಗ ಮಹೋತ್ಸವ’ ಕಾರ್ಯಕ್ರಮವನ್ನು ಮೇ 23 ರಂದು ಮಿಜಾರಿನ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ. ‘ಆರೋಗ್ಯ, ಜ್ಞಾನ ಮತ್ತು ವಿಶ್ವಶಾಂತಿಗಾಗಿ ಯೋಗ’ ಎಂಬ ಮಹತ್ವದ ಆಶಯದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮವು ಯೋಗದ ಮೂಲಕ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಉತ್ತೇಜನ ನೀಡುವ ಉದ್ದೇಶ ಹೊಂದಿದೆ. ಸುಮಾರು 500ಕ್ಕೂ ಹೆಚ್ಚು ಯೋಗಾಸಕ್ತರು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಳ್ವಾ ಫಾರ್ಮಸಿಯ ವ್ಯವಸ್ಥಾಪಕ ನಿರ್ದೇಶಕಿ ಡಾ. ಗ್ರೀಷ್ಮಾ ವಿವೇಕ್ ಆಳ್ವ ಭಾಗವಹಿಸಲಿದ್ದಾರೆ. ಯೋಗಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಕೋರಿದ್ದಾರೆ.

Read More

ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಕಳ ಹೆಬ್ರಿ ತಾಲೂಕು ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ನೂತನ ಸಂಚಾಲಕರಾಗಿ ಉದ್ಯಮಿ, ಸಮಾಜಸೇವಕ ವಿಜಯ ಶೆಟ್ಟಿ ಹಾಗೂ ಸಹ ಸಂಚಾಲಕರಾಗಿ ಉದ್ಯಮಿ ಕೆ ರವಿ ಶೆಟ್ಟಿ ಕುಕ್ಕುಂದೂರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊಡುಗೈ ದಾನಿ ವಿಜಯ ಶೆಟ್ಟಿಯವರು ಧಾರ್ಮಿಕ ಕ್ಷೇತ್ರ, ಸಾಮಾಜಿಕ ಕ್ಷೇತ್ರದ ಸಾಧಕರಾಗಿಯೂ ಗುರುತಿಸಿಕೊಂಡಿದ್ದು, ಪಟ್ಲ ಫೌಂಡೇಶನ್ ಕಾರ್ಕಳ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Read More

ಕನ್ನಡ ಸಂಘ ಬಹರೈನ್ ವತಿಯಿಂದ ಸಂಘದ ಮಾಜಿ ಉಪಾಧ್ಯಕ್ಷರಾದ ದಿ. ಕರ್ಮಾರ್ ನಾಗೇಶ್ ಶೆಟ್ಟಿ ಅವರ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆಯನ್ನು ಮೇ 20 ರಂದು ಸಂಜೆ ಕನ್ನಡ ಭವನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಸಭೆಯಲ್ಲಿ ಕನ್ನಡ ಸಂಘ ಬಹರೈನ್ ಅಧ್ಯಕ್ಷರಾದ ಅಜಿತ್ ಬಂಗೇರ ಅವರು ದಿವಂಗತ ಕರ್ಮಾರ್ ನಾಗೇಶ್ ಶೆಟ್ಟಿ ಅವರ ಸಮಾಜಮುಖಿ ಸೇವೆ, ಸಂಘಟನಾ ನಿಷ್ಠೆ ಹಾಗೂ ಕನ್ನಡ ಸಂಘದ ಬೆಳವಣಿಗೆಯಲ್ಲಿ ನೀಡಿದ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಅಮರನಾಥ್ ರೈ, ರಾಜ್ ಕುಮಾರ್, ಹಿರಿಯ ಸದಸ್ಯರಾದ ಹಾಜಿ ಅಬ್ದುಲ್ ರಜಾಕ್, ರಮೇಶ್ ರಾಮಚಂದ್ರನ್, ಕಮಲಾಕ್ಷ ಅಮೀನ್, ಪೂರ್ಣಿಮಾ ಜಗದೀಶ, ಅಶ್ವಿನ್ ದಯಾನಂದ ಹಾಗೂ ಉಪಾಧ್ಯಕ್ಷ ನಿತಿನ್ ಶೆಟ್ಟಿ ಅವರು ದಿ.‌ ಕರ್ಮಾರ್ ನಾಗೇಶ್ ಶೆಟ್ಟಿಯವರಿಗೆ ಭಾವಪೂರ್ಣ ನುಡಿನಮನ ಸಲ್ಲಿಸಿದರು. ಸಭೆಯ ನಿರ್ವಹಣೆಯನ್ನು ಪ್ರಧಾನ ಕಾರ್ಯದರ್ಶಿ ರಾಮಪ್ರಸಾದ್ ಅಮ್ಮೆನಡ್ಕ ಅವರು ನಡೆಸಿಕೊಟ್ಟರು. ಸಭೆಯಲ್ಲಿ ಅನೇಕ ಸದಸ್ಯರು ಭಾಗವಹಿಸಿ ದಿವಂಗತರ ಆತ್ಮಕ್ಕೆ ಶಾಂತಿ ಕೋರಿದರು…

Read More

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ, ಸವಣೂರಿನ ಶಿಕ್ಷಣ ಕ್ರಾಂತಿಯ ಹರಿಕಾರ ಸವಣೂರು ಕೆ. ಸೀತಾರಾಮ ರೈ ಮತ್ತು ಕಸ್ತೂರಿಕಲಾ ಎಸ್ ರೈ ದಂಪತಿಯ ವೈವಾಹಿಕ ಜೀವನದ 5೦ರ ಸಂಭ್ರಮ ನಡೆಯಲಿದೆ. ಮೇ 23 ರಂದು ಅಪರಾಹ್ನ ೩-೦೦ರಿಂದ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ಜರಗಲಿದೆ. ಸಂಜೆ ಗಂಟೆ ೫-೩೦ ರಿಂದ ಸಭಾ ಕಾರ್ಯಕ್ರಮದಲ್ಲಿ ಶ್ರೀ ಸುಬ್ರಹ್ಮಣ್ಯ ಮಠದ ಮಠಾಧೀಶರಾದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಮತ್ತು ಒಡಿಯೂರು ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್‌ನ ಡಾ| ಎ.ಜೆ ಶೆಟ್ಟಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಸನ್ಮಾನ ಸಮಾರಂಭ ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಭಾಗವಹಿಸಲಿದ್ದಾರೆ. ಕೊಂಬೆಟ್ಟು ಸರಕಾರಿ…

Read More

ಕಾಸರಗೋಡಿನ ಕೆಳಮಟ್ಟದ ಬಂಟರ ಏಳಿಗೆ ಮತ್ತು ಬಂಟರ ಭವನ ನಿರ್ಮಾಣದ ಸದುದ್ದೇಶವನ್ನು ಮುಂದಿಟ್ಟುಕೊಂಡು ಮಹಾದಾನಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿಯವರ ನೇತೃತ್ವದಲ್ಲಿ ಸಮಾನ ಮನಸ್ಸಿನ ಬಂಟರು ಭಾಗಿಯಾಗಿ ಕಾಸರಗೋಡು ಬಂಟ ಸಮಾಜದ ಸರ್ವತೋಮುಖ ಏಳಿಗೆಯ ಬಗ್ಗೆ ತೀವ್ರ ಚರ್ಚೆ ನಡೆಯಿತು. ಸದಾಶಿವ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಅವರ ಹೊಸ ನಿವಾಸ ಶ್ರೀಲಿಲಾ ಸದನದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಮಾಡಲಾಯಿತು. ಸಭೆಯಲ್ಲಿ ಕಾಸರಗೋಡಿನ ನೂರಕ್ಕೂ ಅಧಿಕ ಮಂದಿ ಭಾಗಿಯಾಗಿದ್ದರು. ಈ ಸಭೆಯಲ್ಲಿ ಕಾಸರಗೋಡು ಜಿಲ್ಲೆಯ ಸುಮಾರು ಹತ್ತಕ್ಕಿಂತ ಹೆಚ್ಚು ಪಂಚಾಯತಿನ ಬಂಟರ ಸಂಘದ ಅಧ್ಯಕ್ಷರು ಹಾಗೂ ಪ್ರದಾನ ಕಾರ್ಯದರ್ಶಿಗಳ ಸಹಿತ ವಿವಿಧ ಪದಾಧಿಕಾರಿಗಳು ಚರ್ಚೆಯಲ್ಲಿ ಪಾಲ್ಗೊಂಡರು. ಈ ಸಭೆಯಲ್ಲಿ ಕಾಸರಗೋಡು ಮಾತೃ ಸಂಘದ ನೂತನ ಪದಾಧಿಕಾರಿ ವಸಂತ್ ರಾಜ್ ವರ್ಕಾಡಿ, ಸಮಾಜ ಸೇವಕಿ ಜಯಂತಿ ಟಿ. ಶೆಟ್ಟಿ, ಮೀಂಜ ಪಂಚಾಯತ್ ಬಂಟರ ಸಂಘದ ಅಧ್ಯಕ್ಷ ಅರವಿಂದಾಕ್ಷ ಭಂಡಾರಿ ದಡ್ಡಂಗಡಿ ಹಾಗೂ ಮೀರಾ ಅಳ್ವ, ಸದಾಶಿವ ಶೆಟ್ಟಿ ಸೇವಾ ಸಮಿತಿ ಪಿ.ಅರ್.ಒ ಕಾರ್ತಿಕ್ ಶೆಟ್ಟಿ…

Read More