Author: admin
ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಕಾಸರಗೋಡು ತಾಲೂಕು ಸಮಿತಿ : ಕೆ ಅಜಿತ್ ಕುಮಾರ್ ರೈ ಮಾಲಾಡಿ ನೇತೃತ್ವದ ತಂಡಕ್ಕೆ ಭರ್ಜರಿ ಜಯ
ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಇದರ ಕೇಂದ್ರ ಕಾರ್ಯಕಾರಿ ಸಮಿತಿಗೆ ಕಾಸರಗೋಡು ತಾಲೂಕಿನಿಂದ 8 ಸ್ಥಾನಗಳಿಗಾಗಿ ಮೇ 07 ರಂದು ನಡೆದ ಚುನಾವಣೆಯಲ್ಲಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ನೇತೃತ್ವದ ಕಿರಣ್ ಮಾಡ, ಚಿದಾನಂದ ಆಳ್ವ, ನ್ಯಾಯವಾದಿ ಬಿ ಸುಬ್ಬಯ್ಯ ರೈ, ಮುಕ್ತಾನಂದ ರೈ, ಮೋಹನ್ ಕೆ ರೈ, ವಸಂತರಾಜ್ ಶೆಟ್ಟಿ, ಶಶಿಧರ ಶೆಟ್ಟಿ ಹಾಗೂ ಸದಾನಂದ ರೈಯವರು ಬಹುಮತದಿಂದ ಗೆದ್ದು ವಿಜಯಶಾಲಿಯಾಗಿದ್ದಾರೆ. ಕೆ ಅಜಿತ್ ಕುಮಾರ್ ರೈ ಮಾಲಾಡಿಯವರು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
‘ಯಾವುದೇ ಸಾಂಸ್ಕೃತಿಕ ಸಂಸ್ಥೆ ಇಪ್ಪತ್ತೈದು ವರ್ಷಗಳನ್ನು ಪೂರೈಸುವುದು ಅದರ ಸಾಧನೆಯಲ್ಲೊಂದು ಮೈಲಿಗಲ್ಲು. ಮುಂಬಯಿಯಲ್ಲಿ ಯಕ್ಷಗಾನ ತರಬೇತಿ, ಊರಿನ ಪ್ರಸಿದ್ಧ ಕಲಾವಿದರಿಂದ ಸರಣಿ ತಾಳಮದ್ದಳೆ, ಬಯಲಾಟ ಪ್ರದರ್ಶನ, ಯಕ್ಷ ರಕ್ಷಾ ಪ್ರಶಸ್ತಿ ಪ್ರದಾನ, ಗ್ರಂಥ ಪ್ರಕಟಣೆ, ಕಲಾವಿದರಿಗೆ ನೆರವು, ಸನ್ಮಾನ ಗೌರವಗಳನ್ನು ನೀಡುತ್ತಿರುವ ಅಜೆಕಾರು ಕಲಾಭಿಮಾನಿ ಬಳಗ ತನ್ನ ಬೆಳ್ಳಿ ಹಬ್ಬದ ಕಾರ್ಯಕ್ರಮವನ್ನು ಒಂದು ಬೃಹತ್ ಸಮ್ಮೇಳನದ ಮೂಲಕ ಅರ್ಥಪೂರ್ಣವಾಗಿ ಆಚರಿಸುತ್ತಿದೆ’ ಎಂದು ಮುಂಬಯಿ ಹೇರಂಬ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ, ಮಹಾದಾನಿ ಡಾ| ಕನ್ಯಾನ ಸದಾಶಿವ ಶೆಟ್ಟಿ ಹೇಳಿದರು. ಮುಂಬಯಿ ಅಜೆಕಾರು ಕಲಾಭಿಮಾನಿ ಬಳಗದ ರಜತ ಪರ್ವ ಸಂಭ್ರಮದ ಅಂಗವಾಗಿ ಅಕ್ಟೋಬರ್ ನಲ್ಲಿ ನಡೆಯಲಿರುವ ‘ಮುಂಬಯಿ ಯಕ್ಷಗಾನ ಸಮ್ಮೇಳನ – 2026’ ಇದರ ವರ್ಣರಂಜಿತ ಲಾಂಛನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ‘ಮುಂಬಯಿ ಯಕ್ಷಗಾನ ಸಮ್ಮೇಳನ ಯಕ್ಷಗಾನದ ಇತಿಹಾಸದಲ್ಲಿ ದಾಖಲಾಗುವುದರಲ್ಲಿ ಅನುಮಾನವಿಲ್ಲ. ಇಂತಹ ಸತ್ಕಾರ್ಯಕ್ಕೆ ಯಕ್ಷಗಾನ ಕಲಾಭಿಮಾನಿಗಳು, ಉದ್ಯಮಿಗಳು ಹಾಗೂ ಸಮಾಜದ ಗಣ್ಯರು ಮುಕ್ತ ಮನಸ್ಸಿನಿಂದ ಕೈಜೋಡಿಸಬೇಕು’ ಎಂದವರು ನುಡಿದರು. ಅಜೆಕಾರು ಕಲಾಭಿಮಾನಿ ಬಳಗದ…
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ನಿಂದ ನೀಡಲ್ಪಡುವ 2026ನೇ ಸಾಲಿನ ಕಾಯಕಯೋಗಿ ರಾಜ್ಯ ಪ್ರಶಸ್ತಿಯನ್ನು ಮೇ 1 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ತೀರ್ಥಹಳ್ಳಿಯ ಸಮಾಜ ಸೇವಕ, ಹಿರಿಯ ಪತ್ರಕರ್ತ ಡಿ.ಎಸ್ ವಿಶ್ವನಾಥ ಶೆಟ್ಟಿಯವರಿಗೆ ಪ್ರದಾನ ಮಾಡಲಾಯಿತು. ಪರಿಷತ್ನ ಮಹಾಪೋಷಕರರು, ಇಸ್ರೋ ಮಾಜಿ ಅಧ್ಯಕ್ಷ ಡಾ. ಎ.ಎಸ್ ಕಿರಣ್ ಕುಮಾರ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ. ಅಂಜಿನಪ್ಪ, ಕರಾವೈಸಂ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ್, ಶಿವಮೊಗ್ಗ ಜಿಲ್ಲಾಧ್ಯಕ್ಷ ರವಿಕುಮಾರ್, ತೀರ್ಥಹಳ್ಳಿ ತಾಲೂಕು ಅಧ್ಯಕ್ಷೆ ಬಿ ವರಲಕ್ಷ್ಮಿ ಪ್ರಕಾಶ್, ರಿಪ್ಪನ್ಪೇಟೆಯ ಸವಿತಾ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.
‘ಕೀರ್ತಿಕಾಮನೆ ಬೆನ್ನ ಹಿಡಿದು ಹೋದರೆ ಮನುಜ ತಂತಿ ಮೇಲಿನ ಆಟ, ಅದು ದೊಂಬರಾಟ; ಹೂ ಅರಳಿ ನಗುವಂತೆ ಇರಲಿ ಸಹಜತೆ ಮನದಿ ದೂರವಿರು ಹೊಗಳಿಕೆಗೆ’ – ಮುದ್ದು ರಾಮ. ಒಬ್ಬೊಬ್ಬರ ಬದುಕು ಒಂದೊಂದು ರೀತಿ. ಒಬ್ಬರದು ಗಳಿಸಬೇಕು ಗಳಿಸಿದನ್ನು ಉಳಿಸಬೇಕು ಅದೇ ಬದುಕು ಅನ್ನುವುದಾದರೆ, ಇನ್ನೊಬ್ಬರದ್ದು ದುಡಿಯಬೇಕು ದುಡಿ ದುಡಿದು ಗಂಟು ಕಟ್ಟಿ ನನ್ನ ಕುಟುಂಬದವರ ಜೀವನ ಹಸನುಗೊಳಿಸಬೇಕು. ಮತ್ತೊಬ್ಬರದ್ದು ದುಡಿಯುತ್ತಿರಬೇಕು ದುಡಿ ದುಡಿಯುತ್ತಾ ಬದುಕು ಕೊನೆಯಾಗಲಿ ಅನ್ನುವುದಾದರೆ, ಬೆರಳೆಣಿಕೆಯ ಜನರ ವಿಚಾರ ಮಾತ್ರ ಬೇರೆಯದೇ ಆಗಿರುತ್ತದೆ. ನಾನು ಶ್ರಮಿಕನಾಗಬೇಕು ನನಗಾಗಿಯಲ್ಲ ನನ್ನವರಿಗಾಗಿಯೂ ಅಲ್ಲ, ಕೇವಲ ನನ್ನ ಸುತ್ತ-ಮುತ್ತಲ ಸಮಾಜಕ್ಕಾಗಿ ದುಡಿಯಬೇಕು ಅನ್ನುವವರ ಒಂದು ವರ್ಗ ಇರುತ್ತದೆ. ಆ ವರ್ಗಕ್ಕೆ ಸೇರಿದವರ ಚಿಂತನೆಯೂ ನಮ್ಮ ಊಹೆಗೆ ನಿಲುಕದಾಗಿರುತ್ತದೆ. ಈ ಭೂಮಿಯಲ್ಲಿನ ಋಣ ಚಿರ ನಿದ್ರೆಗೆ ಜಾರುವ ತನಕ. ಇರುವಷ್ಟು ಕಾಲ ಕಷ್ಟ, ನೊಂದವರ ಬದುಕನ್ನು ಸಾಂತ್ವನಿಸಬೇಕು. ನಮ್ಮ ಆಸುಪಾಸಿನ ಸಮಾಜ ಪ್ರಗತಿ ಕಾಣಬೇಕು. ಊರು ಅಭಿವೃದ್ಧಿಯಾಗಬೇಕು. ಅಲ್ಲಿನ ಮಕ್ಕಳು ಶಿಕ್ಷಿತರಾಗಬೇಕು. ಅಲ್ಲಿನ…
ಡಾ| ಕನ್ಯಾನ ಸದಾಶಿವ ಶೆಟ್ಟಿಯವರ ಜತೆಯಲ್ಲಿ ಚಿತ್ರ ತಯಾರಿಕೆಯ ಸಾಹಸಕ್ಕಿಳಿದಿರುವ ಕರಾವಳಿ ಕರ್ನಾಟಕದ ಪಡುಬಿದ್ರಿಯ ಹುಟ್ಟು ಪ್ರತಿಭೆ, ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಹೆಸರು ಮಾಡಿರುವ ಗುರು ಹೆಗ್ಡೆಯವರು ಮುಂದೆ ಚಿತ್ರ ನಿರ್ಮಾಣದಲ್ಲೂ ಇನ್ನಷ್ಟು ಮಿಂಚಲಿ ಎಂದು ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀಣೋದ್ಧಾರ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ| ಕೆ. ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಪಡುಬಿದ್ರಿ ದೇಗುಲದ ಬ್ರಹ್ಮಕಲಶೋತ್ಸವದಲ್ಲಿ ವಿಜಯಪ್ರಕಾಶ್ ಸಂಗೀತ ರಸಸಂಜೆಯ ಕಾರ್ಯಕ್ರಮದಲ್ಲಿ ‘ಪಂಚರಂಗಿ ಫಿಲಂಸ್’ ಸಂಸ್ಥೆಯಿಂದ ಡಾ| ಕನ್ಯಾನ ಸದಾಶಿವ ಶೆಟ್ಟಿ ಮತ್ತು ಗುರು ಹೆಗ್ಡೆ ನಿರ್ಮಾಣದಲ್ಲಿ, ಗುರು ಹೆಗ್ಡೆ ಮತ್ತು ವಿನಯ್ ಪ್ರೀತಮ್ ಅವರ ನಿರ್ದೇಶನದಲ್ಲಿ ನಿರ್ಮಾಣಗೊಂಡು ಬಿಡುಗಡೆಯ ಹಂತದಲ್ಲಿರುವ ಕನ್ನಡ ಚಲನಚಿತ್ರ ‘ಅಮರ್ಥ’ದ ಲಿರಿಕಲ್ ವೀಡಿಯೋ ಬಿಡುಗಡೆ ಸಂದರ್ಭ ಮಾತನಾಡಿದರು. ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ಶ್ರೀನಗರ್ ಕಿಟ್ಟಿ, ಮೇಘನಾ ರಾಜ್, ಗುರು ಹೆಗ್ಡೆ, ಮಂಜು ಭಾಷಿಣಿ, ಉಷಾ ಭಂಡಾರಿ, ಹರೀಶ್ ಹಿರಿಯೂರು ಅವರೊಂದಿಗೆ ಕರ್ನಾಟಕ ಕರಾವಳಿಯ ಪ್ರಮುಖ ಕಲಾವಿದರು, ತಂತ್ರಜ್ಞರು ಭಾಗಿಗಳಾಗಿದ್ದಾರೆ. ಖ್ಯಾತ…
ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ ‘ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಮೇ 22 ರಂದು ತೆರೆಗೆ
ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ ‘ಗಜಾನನ ಕ್ರಿಕೆಟರ್ಸ್’ (ಜಂತೊಟ್ಟು ಸಿನ್ಸ್ 1983) ತುಳು ಚಲನಚಿತ್ರವು ಮೇ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಬಿಗು ಕತೆ ಒಳಗೊಂಡಿದೆ. ಕೀರ್ತನ್ ಭಂಡಾರಿ ಅವರು ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಮಂಗಳೂರು ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಈ ಚಿತ್ರದಲ್ಲಿ ನಿರ್ಮಾಪಕರಾದ ಪ್ರಜ್ವಲ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದ ತಾರಾಗಣದಲ್ಲಿ ವಿನೀತ್ ಕುಮಾರ್, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಾಜೆ, ಪ್ರಕಾಶ್ ತುಮಿನಾಡು, ಉಮೇಶ್ ಮಿಜಾರು, ಸಮತಾ ಅಮೀನ್, ಅನ್ವಿತಾ ಸಾಗರ್, ಸರ್ವೋತ್ತಮ ಶೆಟ್ಟಿ, ವಾಲ್ಟರ್ ನಂದಳಿಕೆ, ರೂಪಾ ವರ್ಕಾಡಿ,…
ಉದ್ಯೋಗ ಅರಸಿಕೊಂಡು ಇಲ್ಲವೇ ಇನ್ನಿತರ ಯಾವುದೇ ಕಾರಣದಿಂದ ಮುಂಬಯಿ ಮಹಾನಗರಕ್ಕೆ ಬಂದು ಏನನ್ನಾದರೂ ಸಾಧಿಸಿಬೇಕೆಂಬ ಛಲ, ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ, ಸಮಯಪ್ರಜ್ಞೆ, ವಿದ್ಯೆ, ವಿನಯ ಇದ್ದು ಬುದ್ಧಿವಂತಿಕೆಯಿಂದ ದುಡಿದವರನ್ನು ಮುಂಬಯಿಯ ಮಹಾಲಕ್ಷ್ಮೀ ಮಾತೆಯು ಉದ್ದರಿಸದೇ ಎಂದೂ ಕೈ ಬಿಡುವುದಿಲ್ಲ ಎಂಬುದಕ್ಕೆ ಹಲವಾರು ಮಂದಿ ಉನ್ನತ ಉದ್ಯೋಗಿಗಳಾಗಿ, ಹೋಟೆಲ್ ಮಾಲೀಕರಾಗಿ, ಕಂಪನಿಗಳ ಆಡಳಿತ ನಿರ್ದೇಶಕರಾಗಿ ಮೆರೆಯುತ್ತಾ ತಮಗೆ ಸಾಧ್ಯವಾದಷ್ಟು ಸಮಾಜ ಸೇವೆ ಮಾಡುವುದರಲ್ಲಿ ನಿರತರಾಗಿದ್ದಾರೆ ಎಂಬುದು ಸಂತೋಷದ ಸಂಗತಿ. ಇಂತಹ ಸಮಾಜ ಸೇವಕರಲ್ಲಿ ಸರಳ ಸಜ್ಜನಿಕೆಯ ರಮೇಶ್ ಶೆಟ್ಟಿ ಸಿದ್ಧಕಟ್ಟೆ ಪ್ರಮುಖರು. ಇವರ ಕಿರು ಪರಿಚಯವನ್ನು ಸಮಾಜ ಬಾಂಧವರಾದ ಬಂಧುಗಳೊಂದಿಗೆ ಹಂಚಿಕೊಳ್ಳಲು ಸಂತೋಷ ಪಡುತ್ತೇನೆ. ಸಿದ್ಧಕಟ್ಟೆ ಉಗ್ರೋಡಿ ಮನೆ ದಿವಂಗತ ಮಹಾಬಲ ಶೆಟ್ಟಿ ಮತ್ತು ಕಲ್ಲಬೆಟ್ಟು ಮನೆ ದಿವಂಗತ ಸೇಸಿ ಶೆಟ್ಟಿ ದಂಪತಿಗಳ ಸುಪುತ್ರನಾಗಿ 1968 ಜೂನ್ 4 ರಂದು ಜನಿಸಿದ ರಮೇಶ್ ಶೆಟ್ಟಿಯವರು ಪ್ರಾಥಮಿಕ ಶಿಕ್ಷಣವನ್ನು ಆರಂಬೋಡಿ ಶಾಲೆಯಲ್ಲೂ, ಹೈಸ್ಕೂಲ್ ಶಿಕ್ಷಣವನ್ನು ಸಿದ್ಧಕಟ್ಟೆಯ ಸೈಂಟ್ ಪ್ಯಾಟ್ರಿಕ್ ಹೈಸ್ಕೂಲ್ ನಲ್ಲಿ ಪೂರೈಸಿದ ನಂತರ…
ಆಳ್ವಾಸ್ ‘ಭಾಷೆ, ಸಂಸ್ಕೃತಿ, ಸಂಪ್ರದಾಯಗಳ ವೈವಿಧ್ಯತೆಯ ನಡುವೆ ಒಗ್ಗಟ್ಟಿನಿಂದ ಬದುಕುವುದನ್ನು ಕಲಿಸುತ್ತದೆ’- ಡಾ. ಎಂ ಮೋಹನ ಆಳ್ವ
ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ರಾಜ್ಯದ ಅಗ್ರಗಣ್ಯ 10 ರ್ಯಾಂಕ್ನ ಒಳಗೆ ಸ್ಥಾನ ಪಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ 103 ವಿದ್ಯಾರ್ಥಿಗಳ ಜೊತೆಯಲ್ಲಿ ಎಸ್ಎಸ್ಎಲ್ಸಿ ಹಂತದಲ್ಲಿ 50%ಕ್ಕಿಂತ ಕಡಿಮೆ ಅಂಕಗಳಿಸಿ, ನಂತರ ಪದವಿಪೂರ್ವ ಶಿಕ್ಷಣಕ್ಕೆ ಆಳ್ವಾಸ್ ಸೇರಿದ ನಂತರ 95%ಕ್ಕಿಂತಲೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸುವ ಕಾರ್ಯಕ್ರಮ ಭಾನುವಾರ ನುಡಿಸಿರಿ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ, ನೀವು ಈಗ ಕೇವಲ ನಮ್ಮ ವಿದ್ಯಾರ್ಥಿಗಳಲ್ಲ. ನಮ್ಮ ಸಂಸ್ಥೆಯ ರಾಯಭಾರಿಗಳಾಗುವವರು. ಇಲ್ಲಿ ಕಲಿತಿರುವ ಶಿಸ್ತಿನ ಜೊತೆಗೆ ಉತ್ತಮ ಸ್ವಭಾವ, ಹೋರಾಟ ಮನೋಭಾವ ಹಾಗೂ ಕೂಡಿ ಬಾಳುವ ಗುಣಗಳು ನಿಮ್ಮ ಮುಂದಿನ ಜೀವನಕ್ಕೆ ದಾರಿದೀಪವಾಗಲಿ ಎಂದರು.ಆಳ್ವಾಸ್ ಸಂಸ್ಥೆಯನ್ನು ‘ಮಿನಿ ಇಂಡಿಯಾ’ ಎಂದು ಕರೆಯಲಾಗುತ್ತದೆ. ದೇಶದ ವಿವಿಧ ಭಾಗಗಳಿಂದ ಬಂದ ವಿದ್ಯಾರ್ಥಿಗಳು ಇಲ್ಲಿ ಒಂದೇ ಕುಟುಂಬದಂತೆ ಬೆರೆತು ಬದುಕುತ್ತಾರೆ. ಭಾಷೆ, ಸಂಸ್ಕೃತಿ, ಸಂಪ್ರದಾಯಗಳ ವೈವಿಧ್ಯತೆಯ ನಡುವೆಯೂ ಒಗ್ಗಟ್ಟಿನಿಂದ ಬದುಕುವುದನ್ನು ಕಲಿಸುತ್ತದೆ. ಈ…
ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಮೇ 10 ರಂದು ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ದಂಪತಿಗೆ ಸನ್ಮಾನ
ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗ ಮುಂಬಯಿ ವತಿಯಿಂದ ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಸಹಕಾರದೊಂದಿಗೆ ಪ್ರಭು ರಾಮಚಂದ್ರ ದೇವರ ಅವತಾರದ ಆರಂಭದಿಂದ ಶ್ರೀ ದೇವರ ನಿರ್ಯಾಣದವರೆಗಿನ ಸಂಪೂರ್ಣ ಶ್ರೀ ರಾಮ ಚರಿತ್ರೆ ಶ್ರೀ ರಾಮ ಕಥಾ ಹೃದಯಂ ಪುಣ್ಯಪ್ರದ ಇಪ್ಪತ್ತ ನಾಲ್ಕು ಕಂತುಗಳ ಸರಣಿ ತಾಳಮದ್ದಳೆ ಕಾರ್ಯಕ್ರಮದ ಏಳನೇಯ ಪ್ರಸ್ತುತಿ ಸೀತಾಪಹಾರ ಜಟಾಯು ಮೋಕ್ಷ ಮತ್ತು ಸಮ್ಮಾನ ಕಾರ್ಯಕ್ರಮವು ಮೇ 10ರಂದು ಅಪರಾಹ್ನ 2.15 ರಿಂದ ವಿದ್ಯಾವಿಹಾರ್ ಪಶ್ಚಿಮದ ಗಾಂವ್ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಜರಿಮೆರಿ ಇವರಿಂದ ಶ್ರೀರಾಮ ಸಂಕೀರ್ತನೆ ನಡೆಯಲಿದೆ. ಪೂಜ್ಯ ಹರಿದಾಸ ಭಟ್ ಪೆರ್ಣಂಕಿಲ ಅವರ ಶುಭಾಶೀರ್ವಾದದೊಂದಿಗೆ, ಶ್ರೀ ಅಂಬಿಕಾ ಆದಿನಾಥೇಶ್ವರ ದೇವಸ್ಥಾನ ವಿದ್ಯಾವಿಹಾರ್ ಇದರ ಆಡಳಿತ ಮೊಕ್ತೇಸರ ಹರಿದಾಸ ಗೋಪಾಲ್ ಶೆಟ್ಟಿ ಅವರ ಸಂಪೂರ್ಣ ಸಹಕಾರದೊಂದಿಗೆ ನಡೆಯಲಿರುವ ಸಮಾರಂಭದಲ್ಲಿ ಪ್ರಸಿದ್ಧ ಯಕ್ಷಗಾನ ಭಾಗವತ ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ದಂಪತಿಯನ್ನು ಪರಮಪೂಜ್ಯ…
ಒಂದು ಕಾಲದಲ್ಲಿ ಯಕ್ಷಗಾನ ಕಲಾವಿದರ ಜೀವನ ಕಷ್ಟದಲ್ಲಿ ತುಂಬಿಕೊಂಡಿತ್ತು. ರಂಗಸ್ಥಳದಲ್ಲಿ ರಾಮ, ಕೃಷ್ಣ, ದೇವೇಂದ್ರ ಪಾತ್ರ ಮಾಡುವ ಪಾತ್ರಧಾರಿಗಳು ವೇಷ ಕಳಚಿ ಬಂದಾಗ ಅವರ ಬದುಕು ಏನೆಂಬುದನ್ನು ಅರ್ಥ ಮಾಡಿಕೊಳ್ಳಬಹುದು. ಒಂದು ಕಾಲದಲ್ಲಿ ಕಲಾವಿದರಿಗೆ ಕನಿಷ್ಠ ಗೌರವ ಕೊಡುವ ಸೌಜನ್ಯವೂ ಇರಲಿಲ್ಲ. ಆದರೆ ಪಟ್ಲ ಸತೀಶ್ ಶೆಟ್ಟಿ ಅವರು ಕಲ್ಲಾಡಿ ವಿಠಲ ಶೆಟ್ರ ಮೂಲಕ ಕಟೀಲು ಮೇಳಕ್ಕೆ ಯಾವಾಗ ಬಂದರೋ ಅಂದಿನಿಂದ ಕಲಾವಿದರ ಬದುಕಿನ ಚಿತ್ರಣವೇ ಬದಲಾಯಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪನೆಯಾದ ಬಳಿಕ ಕಲಾವಿದರ ಜೀವನವೇ ಬದಲಾಯಿತು ಎಂದು ಪಡ್ರೆ ಧೂಮಾವತಿ ದೈವಸ್ಥಾನದ ಅಧ್ಯಕ್ಷರಾದ ಡಿವೈಎಸ್ಪಿ ದಿನಕರ ಶೆಟ್ಟಿ ಪಡ್ರೆ ತಿಳಿಸಿದರು. ಸುರತ್ಕಲ್ ಬಂಟರ ಸಂಘದ ಆವರಣದಲ್ಲಿ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸುರತ್ಕಲ್ ಘಟಕದ ಷಷ್ಟಮ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.ಪಟ್ಲ ಫೌಂಡೇಶನ್ ಟ್ರಸ್ಟ್ ಕಲಾ ಸೇವೆ ಮಾಡುವುದರ ಜೊತೆಗೆ ಯಕ್ಷಗಾನ, ನಾಟಕ, ದೈವರಾಧನೆ ಸಹಿತ ಬೇರೆ ಬೇರೆ ಕ್ಷೇತ್ರಗಳಲ್ಲಿರುವ…















