Author: admin
ಕಾರ್ಸ್ ಅಡ್ಡ ಫೈನಾನ್ಸ್ ಹೌಸ್ ಹಾಗೂ ಕಾರ್ಸ್ ಅಡ್ಡ ಸೇವಾ ಟ್ರಸ್ಟ್ ಮಂಗಳೂರು ಇವರ ವತಿಯಿಂದ ಸಾಮಾಜಿಕ ಸೇವಾ ಯೋಜನೆಯ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳ ಶಿಕ್ಷಣದ ಉತ್ತೇಜನಕ್ಕಾಗಿ ವಿದ್ಯಾರ್ಥಿಗಳಿಗೆ (1ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ) ಶೈಕ್ಷಣಿಕ ಪೂರಕ ವಸ್ತುಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದ್ದಾರೆ. ಈ ಯೋಜನೆಗೆ ಸಾಕಷ್ಟು ಅರ್ಹ ಅರ್ಜಿಗಳು ಬಂದಿದ್ದು, ಒಂದು ಮನೆಯ ಒಂದು ವಿದ್ಯಾರ್ಥಿಗೆ ಮಾತ್ರ ಕಲಿಕಾ ವಸ್ತುಗಳನ್ನು ನೀಡಲಾಗುತ್ತದೆ. ಏಪ್ರಿಲ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಮೇ 23 ರಂದು ಸಂಜೆ 4.00 ರಿಂದ 5.30 ರವರೆಗೆ ಈ ಶೈಕ್ಷಣಿಕ ಪೂರಕ ವಸ್ತುಗಳನ್ನು ಅರ್ಹ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ ಎಂದು ಕಾರ್ಸ್ ಅಡ್ಡ ಫೈನಾನ್ಸ್ ಹೌಸ್ ನ ಆಡಳಿತ ನಿರ್ದೇಶಕರಾದ ಮನೋಜ್ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಲ್ಲಕಾಡು ಫ್ರೆಂಡ್ಸ್ (ರಿ) : ಮೇ 02 ರಂದು ಯುಗಾದಿ ಉತ್ಸವ -2026, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ
ಹಲವಾರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಾವೂರು ಮುಲ್ಲಕಾಡು ಪರಿಸರದಲ್ಲಿ ಧಾರ್ಮಿಕ, ಸಾಂಸ್ಕೃತಿಕ, ಕ್ರೀಡೆ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಊರಿನವರೆಲ್ಲರ ಪ್ರೀತಿ ವಿಶ್ವಾಸಗಳಿಗೆ ಪಾತ್ರರಾದ ಸಂಘಟನೆಯಾದ ಮುಲ್ಲಕಾಡು ಫ್ರೆಂಡ್ಸ್ (ರಿ) 21 ನೇ ವರ್ಷದ ಯುಗಾದಿ ಉತ್ಸವದ ಸಲುವಾಗಿ ವೈವಿಧ್ಯಮಯ ಕಾರ್ಯಕ್ರಮ, ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಸಹಾಯಧನ, ಮಕ್ಕಳಿಗೆ ಪ್ರೋತ್ಸಾಹ ಧನ, ಪುಸ್ತಕ ವಿತರಣೆ ಹಾಗೂ ಪ್ರಸನ್ನ ಶೆಟ್ಟಿ ಬೈಲೂರು ನಿರ್ದೇಶನದ ಚೈತನ್ಯ ಕಲಾವಿದರು ಬೈಲೂರು ತಂಡದವರಿಂದ ‘ರಾಘು ಮಾಸ್ಟ್ರು’ ಹಾಸ್ಯಮಯ ತುಳು ನಾಟಕ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಆಸರೆ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷೆ ಡಾ. ಆಶಾಜ್ಯೋತಿ ರೈಯವರು ನೆರವೇರಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಜೇಶ್ ಚೌಟ, ಮಾಜಿ ಮಂತ್ರಿ ಕೃಷ್ಣ ಜೆ ಪಾಲೇಮಾರ್, ಬಿಲ್ಲವ ಬ್ರಿಗೇಡ್ ಸಂಸ್ಥಾಪಕ ಸದಾನಂದ ಪೂಜಾರಿ, ಗುತ್ತಿಗೆದಾರ ರಾಜಶೇಖರ್ ಕೋಟ್ಯಾನ್, ಸಮಾಜಸೇವಕ ಅರ್ಜುನ್ ಭಂಡಾರ್ಕರ್ ಅವರ ಘನ ಉಪಸ್ಥಿತಿಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ…
ಶಿಕ್ಷಣ ಎನ್ನುವುದು ಕೇವಲ ಅಂಕಗಳಿಕೆಯಲ್ಲ, ಸಮಾಜದಲ್ಲಿ ಹೇಗೆ ಇರಬೇಕು ಮತ್ತು ವರ್ತಿಸಬೇಕು ಎಂಬುದನ್ನು ಕಲಿಸಿಕೊಡುವುದೇ ನಿಜವಾದ ಶಿಕ್ಷಣ. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಆಯೋಜಿಸಿರುವ ಈ ‘ಮಂಥನ’ ಬೇಸಿಗೆ ಶಿಬಿರವು ಮಕ್ಕಳ ಕ್ರೀಯಾಶೀಲ ಚಿಂತನೆಗೆ ಪೂರಕವಾಗಿದೆ ಎಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಮಾಜಿ ಮ್ಯಾನೇಜಿಂಗ್ ಟ್ರಸ್ಟಿ ಮಂಜಯ್ಯ ಶೆಟ್ಟಿ ಸಬ್ಲಾಡಿ ಅಭಿಪ್ರಾಯಪಟ್ಟರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗುತ್ತಿರುವ 5ನೇ ದಿನದ ‘ಮಂಥನ’ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಮಕ್ಕಳು ಸ್ಮಾರ್ಟ್ಫೋನ್ಗಳ ಮೊರೆ ಹೋಗದೆ ಓದಿನ ರುಚಿ ಹತ್ತಿಸಿಕೊಳ್ಳಬೇಕು. ತಮಗೆ ದೊರೆತ ಇಂತಹ ಸುಸಂದರ್ಭಗಳನ್ನು ಸದುಪಯೋಗಪಡಿಸಿಕೊಂಡು ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ sportsmail.net ನ ಸಂಪಾದಕ ಸೋಮಶೇಖರ ಪಡುಕೆರೆ ಮಾತನಾಡಿ, ಯಶಸ್ಸು ಪಡೆಯಲು ನಿರಂತರ ಪರಿಶ್ರಮ ಅತ್ಯಗತ್ಯ. ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು. ಕ್ರೀಡೆಯು ನಿಮ್ಮನ್ನು ಸದಾ ಸಕ್ರಿಯರಾಗಿರುವಂತೆ ನೋಡಿಕೊಳ್ಳುತ್ತದೆ. ಈ ಶಿಬಿರವು ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ಉತ್ತಮ…
ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘಕ್ಕೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬೆಳ್ತಂಗಡಿ ತಾಲೂಕಿನಿಂದ 4 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾತೃ ಸಂಘದ ಬೆಳ್ತಂಗಡಿ ಸಂಚಾಲಕ ಎಂ ಜಯರಾಮ ಭಂಡಾರಿ ಧರ್ಮಸ್ಥಳ, ಸಹ ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಜಯರಾಮ ಶೆಟ್ಟಿ ಮುಂಡಾಡಿಗುತ್ತು, ಮಹಿಳಾ ಕ್ಷೇತ್ರದಿಂದ ಮೂಡಬಿದ್ರೆ ಮಹಾವೀರ ಕಾಲೇಜಿನ ಉಪನ್ಯಾಸಕಿ ಸುಜಾತ ಶೆಟ್ಟಿ ಪೆರಿಂಜೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಸರ್ಕಲ್ ಬಳಿ ಇರುವ ಬಂಟರ ಯಾನೆ ನಾಡವರ ಮಾತೃ ಸಂಘ ಇದರ 2026 -29ನೇ ಅವಧಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ವಿವಿಧ ಹುದ್ದೆಗಳ ಚುನಾವಣೆಯನ್ನು ಘೋಷಿಸಲಾಗಿದ್ದು, ಮೇ 1 ರಿಂದ ಮೇ 7ರವರೆಗೆ ವಿವಿಧ ಹಂತಗಳಲ್ಲಿ ಮತದಾನ ನಡೆಯಲಿದೆ. ಅಧ್ಯಕ್ಷರಾಗಿ ಈಗಾಗಲೇ ಕೆ ಅಜಿತ್ ಕುಮಾರ್ ರೈ ಮಾಲಾಡಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತಿನಸು ಒಂದೇ, ನಾಮ ಹಲವು. ಹಾಗೊಂದು ತುಳುವರ ಅಚ್ಚು ಮೆಚ್ಚಿನ ತಿಂಡಿಯೇ ಕಪ್ಪರುಟ್ಟಿ. ನಮ್ಮ ಅವಿಭಜಿತ ದಕ್ಷಿಣ ಕನ್ನಡದಲ್ಲಿ ಪುಂಡಿ, ನೀರ್ ದೋಸೆ, ಗಟ್ಟಿ (ಕಡುಬು)ಗಳಿಗೆ ಸಮದಂಡಿಯಾದ ಮತ್ತೊಂದು ತಿಂಡಿಯೇ ಈ ಕಪ್ಪರ್ರುಟ್ಟಿ. ಮೂವತ್ತು ನಲ್ವತ್ತು ವರ್ಷಗಳ ಹಿಂದೆ ಇಡ್ಲಿ, ಅಪ್ಪ ಇತ್ಯಾದಿ ಉಪಹಾರಗಳ ಎದುರು ಈ ತಿಂಡಿಗೆ ಸ್ವಲ್ಪ ಮರ್ಯಾದಿ ಕಡಿಮೆ. ನಮಗೆ ಇವತ್ತು ಚಾದೊಂದಿಗೆ ತಿಂಡಿ ‘ಕಪ್ಪರುಟ್ಟಿ’ ಎಂದು ಮೈಯನ್ನೆಲ್ಲಾ ಹಿಡಿಮಾಡಿ ಹೇಳುವ ಕಾಲ ಇತ್ತು. ‘ಬಲ್ಲವರೆ ಬಲ್ಲರು ಬೆಲ್ಲದ ಸವಿಯ’ ಎಂಬಂತೆ, ತಿಂದವನೇ ಬಲ್ಲ ಕಪ್ಪರುಟ್ಟಿಯ ಸವಿ ರುಚಿ. ಕಪ್ಪಲ್+ರುಟ್ಟಿ = ಕಪ್ಪರುಟ್ಟಿ, ಲೋಪ ಸಂಧಿ. ಕಪ್ಪಲ್ ಅಂದರೆ ಒಡೆದ ಮಣ್ಣಿನ ಹಂಡೆ (ಗುರ್ಕೆ), ಅಗೋಲಿ (ದೊಡ್ಡ ಮಡಕೆ) ಇವುಗಳ ಬಾಣಲೆ ಯಾ ಕಾವಲಿಯಂತಹ ಭಾಗ. ಕಪ್ಪರುಟ್ಟಿಯನ್ನು ದಕ್ಷಿಣ ಕನ್ನಡದ ಕೆಲವೆಡೆ ‘ಉಪ್ಪು ದೋಸೆ’ ಎಂದು ಕರೆದರೆ, ತೆಂಕಿನ ಪುತ್ತೂರು ಕಡೆಯವರು ‘ಓಡ್ ಪಾಲೆ’ ಅಂತ ಕರೆಯುತ್ತಾರೆ. ಅವರಿಗಿಂತ ಸ್ವಲ್ಪ ಬಡಗಿನವರು ‘ಓಡುದ ಅಡ್ಡೆ’ (ತಿಂಡಿ) ಅನ್ನುತ್ತಾರೆ.…
ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ| ಕುರಿಯನ್ ಹೇಳಿದರು.ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ವಿವಿಧ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪ್ರಸ್ತುತ ಔದ್ಯೋಗಿಕ ಬೇಡಿಕೆಗೆ ಅನುಗುಣವಾದ ಶಿಕ್ಷಣವನ್ನು ಪಡೆದರೆ ಉದ್ಯೋಗದ ಅವಕಾಶ ಹೆಚ್ಚುತ್ತದೆ. ಆಳ್ವಾಸ್ ಕಾಲೇಜಿನಲ್ಲಿ ‘ಮಾಧ್ಯಮ’ ಶಿಕ್ಷಣವು ಅತ್ಯುತ್ತಮವಾಗಿದ್ದು, ಪ್ರಾಯೋಗಿಕ ಅವಕಾಶಗಳು ವಿಫುಲವಾಗಿವೆ. ಧನಾತ್ಮಕ ಧೋರಣೆಯನ್ನು ಸೃಜಿಸುವಲ್ಲಿ ಆಳ್ವಾಸ್ ಕೊಡುಗೆ ಅನನ್ಯವಾಗಿದೆ ಎಂದರು. ಮುದ್ರಣ ಮಾಧ್ಯಮ, ಟೆಲಿವಿಷನ್ ಮಾಧ್ಯಮ, ರೇಡಿಯೊ ಹಾಗೂ ಡಿಜಿಟಲ್ ಮಾಧ್ಯಮದ ಪ್ರಾಯೋಗಿಕ ತರಗತಿಗಳನ್ನು ತಜ್ಞರು ನಡೆಸಿಕೊಟ್ಟರು. ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬನ್ನಡ್ಕ ವಿಶ್ವವಿದ್ಯಾನಿಲಯ ಕಾಲೇಜು, ಮೂಡುಬಿದಿರೆ ಮಹಾವೀರ ಕಾಲೇಜು, ಕಟೀಲು ಎಸ್ಡಿಟಿ ಪ್ರಥಮ ದರ್ಜೆ ಕಾಲೇಜು ಹಾಗೂ ಆಳ್ವಾಸ್ ಕಾಲೇಜಿನ…
ಹಾವು ಕಡಿತಕ್ಕೊಳಗಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಡ ಮಹಿಳೆಗೆ ತುರ್ತಾಗಿ ರಕ್ತದ ವ್ಯವಸ್ಥೆ ಮಾಡುವ ಮೂಲಕ ಬಂಟ್ವಾಳದ ದಿನೇಶ್ ಶೆಟ್ಟಿ ದಂಬೆದಾರು ಹಾಗೂ ಅವರ ತಂಡವು ಮಾನವೀಯತೆ ಮೆರೆದಿದೆ. ಅನಂತಾಡಿ ಗ್ರಾಮದ ಗೋಳಿಕಟ್ಟೆ ನಿವಾಸಿ ಭವಾನಿ ಅವರಿಗೆ ವಿಷಕಾರಿ ಹಾವು ಕಚ್ಚಿದ್ದು, ಮೊದಲು ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸೂಕ್ತ ಚಿಕಿತ್ಸೆ ದೊರೆಯದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಲಾಯಿತು. ಚಿಕಿತ್ಸೆ ಸಮಯದಲ್ಲಿ ಮಹಿಳೆಗೆ ತುರ್ತಾಗಿ ರಕ್ತದ ಅವಶ್ಯಕತೆ ಇತ್ತು. ಆದರೆ ಮಂಗಳೂರಿನ ಆಸ್ಪತ್ರೆಗಳಲ್ಲಿ ರಕ್ತದ ಅಭಾವವಿದ್ದ ಕಾರಣ ಕುಟುಂಬದವರು ಆತಂಕಕ್ಕೊಳಗಾಗಿದ್ದರು. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ದಿನೇಶ್ ಶೆಟ್ಟಿ ದಂಬೆದಾರು ಅವರನ್ನು ಸಂಪರ್ಕಿಸಿ ಸಹಾಯ ಕೋರಲಾಯಿತು. ವಿಷಯ ತಿಳಿದ ಕೂಡಲೇ ಕಾರ್ಯಪ್ರವೃತ್ತರಾದ ದಿನೇಶ್ ದಂಬೆದಾರು ಅವರು ತಾವೂ ಕೂಡ ಆಸ್ಪತ್ರೆಗೆ ಧಾವಿಸಿ ರಕ್ತದಾನಿ ಯುವಕರ ತಂಡವನ್ನು ಸಂಘಟಿಸಿದರು. ಮಹಿಳೆಯ ಜೀವ ಉಳಿಸಲು…
ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳು ಡಿಜಿಟಲ್ ಲೋಕದಿಂದ ಹೊರಬಂದು, ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಸುಜ್ಞಾನ ಎಜುಕೇಷನಲ್ ಟ್ರಸ್ಟ್ ಆಯೋಜಿಸಿರುವ ‘ಮಂಥನ’ ಬೇಸಿಗೆ ಶಿಬಿರವು ಮಕ್ಕಳ ಬದುಕಿಗೆ ಹೊಸ ದಾರಿದೀಪವಾಗಲಿದೆ ಎಂದು ಸುಣ್ಣಾರಿಯ ವಿವೇಕೋದಯ ಇಂಗ್ಲಿಷ್ ಮಾಧ್ಯಮ ಶಾಲೆಯ ಅಧ್ಯಕ್ಷ ಕಿಶೋರ್ ಕುಮಾರ್ ಶೆಟ್ಟಿ ತಿಳಿಸಿದರು. ಅವರು ಸುಜ್ಞಾನ ಎಜುಕೇಷನಲ್ ಟ್ರಸ್ಟ್ ಆಶ್ರಯದಲ್ಲಿ ನಡೆಯುತ್ತಿರುವ ‘ಮಂಥನ’ ಬೇಸಿಗೆ ಶಿಬಿರದ ನಾಲ್ಕನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿಬಿರದ ನಾಲ್ಕನೇ ದಿನವು ವೈವಿಧ್ಯಮಯ ಚಟುವಟಿಕೆಗಳಿಂದ ಕೂಡಿದ್ದು, ಶಿಬಿರಾರ್ಥಿಗಳಲ್ಲಿ ಹೊಸ ಉತ್ಸಾಹ ತುಂಬಿತು. ಪಾಕತಜ್ಞ ಸುಜನ್ ಕುಂದಾಪುರ ಅವರಿಂದ ಮಕ್ಕಳು ‘ಓರಿಯೊ ಸೀಸರ್ ರೋಲ್’ ತಯಾರಿಕೆಯನ್ನು ಕಲಿತರು. ತಾವೇ ತಯಾರಿಸಿದ ಸಿಹಿತಿಂಡಿಯನ್ನು ಸವಿದು ಮಕ್ಕಳು ಸಂಭ್ರಮಿಸಿದರು. ಶಾಂಭವಿ ರಂಜಿತ್ ಅವರು ಮಕ್ಕಳಿಗೆ ‘ಲೀಫ್ ಆರ್ಟ್’ (ಎಲೆಗಳ ಕಲೆ) ಹಾಗೂ ಆಕ್ಷನ್ ಸಾಂಗ್ ಮೂಲಕ ರಂಜಿಸಿದರು. ಝುಂಬಾ ತಜ್ಞೆ ಸಹನಾ ಜಗನ್ನಾಥ್ ಮತ್ತು ಆಝಾದ್ ಮೊಹಮ್ಮದ್ ಅವರು ಝುಂಬಾ ಹಾಗೂ ಏರೋಬಿಕ್ಸ್ ತರಬೇತಿ…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮೂಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಡಾ| ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ದಾನಿಗಳ ಸಹಕಾರದಿಂದ ನಿರ್ಮಾಣ ಹಂತದಲ್ಲಿರುವ ಹವಾನಿಯಂತ್ರಿತ ಸಭಾಭವನದ ಕಾಮಗಾರಿ ವೀಕ್ಷಣೆಯನ್ನು ಖ್ಯಾತ ಉದ್ಯಮಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕರಾದ ಮೆರಿಟ್ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಸಿಎಂಡಿ ಅಶೋಕ್ ಶೆಟ್ಟಿ ಬೆಳ್ಳಾಡಿ ಅವರು ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ನಂತರ ಒಕ್ಕೂಟದ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯಲ್ಲಿ ಶ್ರೀಯುತರನ್ನು ಸ್ವಾಗತಿಸಿ ಒಕ್ಕೂಟದ ಅಧ್ಯಕ್ಷರು ಅಭಿನಂದಿಸಿದರು. ಈ ಸಂದರ್ಭ ಸಂಚಾಲಕರಾದ ಕೊಲ್ಲಾಡಿ ಬಾಲಕೃಷ್ಣ ರೈ, ಉದ್ಯಮಿ ಸುರೇಶ್ ಶೆಟ್ಟಿ ಶಿಬರೂರು, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ, ಸಿವಿಲ್ ಗುತ್ತಿಗೆದಾರ ಶಿವಪ್ರಸಾದ್ ರೈ ಉಪಸ್ಥಿತರಿದ್ದರು.
ಒಬ್ಬನೇ ವ್ಯಕ್ತಿ ತನ್ನ ಸತತ ಸಾಧನೆಗಳ ಮೂಲಕ ಎಷ್ಟೆಲ್ಲಾ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳಬಲ್ಲ ಎನ್ನುವುದಕ್ಕೊಂದು ಉತ್ತಮ ಉದಾಹರಣೆಯಾದ ಸತೀಶ್ ಆನಂದ ಶೆಟ್ಟಿಯವರು ಉಡುಪಿಯ ಹಿರಿಯಡ್ಕ ಪೆರ್ಣಂಕಿಲ ಪಡುಬೆಟ್ಟು ಆನಂದ ಮದನ್ ಶೆಟ್ಟಿ ಹಾಗೂ ಉಡುಪಿ ಜಿಲ್ಲೆಯ ಮಂದಾರ್ತಿ ಹೆಗ್ಗುಂಜೆ ಹೆಬ್ಬಾಡಿ ಪಾರ್ವತಿ ಆನಂದ ಶೆಟ್ಟಿ ದಂಪತಿಯರ ಸುಪುತ್ರರಾಗಿ ಜನಿಸಿದರು. ಸತೀಶ್ ವಾಣಿಜ್ಯ ಪದವಿಧರರು ಹಾಗೂ ಎಂ.ಬಿ.ಎ ಸ್ನಾತಕೋತ್ತರ ಉಚ್ಛ ಶಿಕ್ಷಣ ಪಡೆದ ಧೀಮಂತರು. ಇವರು ಬಹುಭಾಷಾ ಜ್ಞಾನಿ ಅಷ್ಟೇ ಅಲ್ಲದೆ ಹಲವಾರು ಕ್ರೀಡೆಗಳ ಅಭ್ಯಾಸ ಮಾಡಿದ ಕ್ರೀಡಾಪಟು ಕೂಡಾ. ಸಾಮಾಜಿಕ ಚಿಂತನೆ ಉಳ್ಳವರಾದ ಸತೀಶ್ ಶೆಟ್ಟಿಯವರು ಬಡ ಮಕ್ಕಳ ಶಿಕ್ಷಣಕ್ಕೆ ಬೇಕು ಬೇಕಾದ ಪಠ್ಯ ಪುಸ್ತಕ ಹಾಗೂ ಇತರ ವಸ್ತುಗಳನ್ನು ಕೊಡಮಾಡುತ್ತಾ ಬಂದವರು. ಬಡಬಗ್ಗರ ಕುರಿತು ಕರುಣೆ ತೋರುತ್ತಾ ತನ್ನ ಕೈಲಾದ ಸಹಾಯ ಮಾಡುವವರು. ಸಮಾಜಕ್ಕೆ ತೀರಾ ಅವಶ್ಯಕ ಉತ್ಪನ್ನ ಹಾಗೂ ಸೇವೆಗಳನ್ನು ನೀಡಬಹುದಾದ ಕೆಲವು ಕಿರು ಕೈಗಾರಿಕೆಗಳನ್ನು ಹುಟ್ಟು ಹಾಕಿ ಓರ್ವ ಕೈಗಾರಿಕೋದ್ಯಮಿಯಾಗಿಯೂ ಗುರುತಿಸಿ ಕೊಂಡಿದ್ದು, ಸಮಾಜ ಸೇವಾ ಭಾವನೆಯಿಂದ ತನ್ನ…















