Author: admin

ನೆಮ್ಮದಿಯ ಬದುಕು, ಸುಖ ಸಮೃದ್ದಿಯ ಬದುಕು ನೀಡಿದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಸಮಿತಿಗೆ ಅಧ್ಯಕ್ಷರಾಗಿ ಸತ್ವ ಪರೀಕ್ಷೆಯಂತೆ ಬಂದ ಕಾರ್ಯವನ್ನು ಮಾಡುವ ಜವಾಬ್ದಾರಿ ಬಂದಾಗ ಒಂದು ಹೆಜ್ಜೆ ಮುಂದೆ ಇಟ್ಟರೆ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂಬಂತೆ ದೇವಸ್ಥಾನದ ಪುನರ್ ನಿರ್ಮಾಣಕ್ಕೆ ಇಳಿದಿದ್ದೇವೆ. ಎಲ್ಲವೂ ದೇವರ ಅನುಮತಿಯಂತೆ ನಡೆಯುತ್ತದೆ ಎಂಬುದನ್ನು ನಾವು ನಂಬಿದವರು. ಸಣ್ಣ ಪುಟ್ಟ ಅಡೆತಡೆಗಳು ನಿವಾರಣೆಯಾಗಿ ಯಾವುದೇ ಜಾತಿ ಪಂಗಡ ಧರ್ಮ ಇರಲಿ ಅಥವಾ ಯಾವುದೇ ವ್ಯಕ್ತಿ ಕೂಡಾ ಮನಸ್ಸು ಬೇಜಾರು ಮಾಡಿಕೊಳ್ಳದೆ ಒಂದು ಸೇರಿ ನನ್ನ ಬಳಿ ಬಂದಾಗ ಇಲ್ಲ ಎನ್ನದೇ ಮತ್ತು ನನ್ನ ಧರ್ಮಪತ್ನಿಯ ಸಂಕಲ್ಪ ಏನಿದೆಯೋ ಅದರಂತೆ ಇಂದು ದೇವಸ್ಥಾನದ ಕಾರ್ಯಗಳು ನಡೆಯುತ್ತಿವೆ. ನಮ್ಮ ಪಾಲಿಗೆ ದೇವತಾ ಕಾರ್ಯ ಮಾಡುವ ಯೋಗ ಬಂದಿದೆ. ನನ್ನ ವೈಯುಕ್ತಿಕ ಸೇವೆ ಇದ್ದೇ ಇದೆ. ಆದರೆ ಇಲ್ಲಿ ಸೇರಿದ ಮತ್ತು ಪಡುಬಿದ್ರಿ ಮಹಾಲಿಂಗೇಶ್ವರ ಭಕ್ತರ, ಎಲ್ಲರ ತನು ಮನ ಧನದ ಸೇವೆ ಸಲ್ಲಬೇಕು ಎಂಬುದೇ ನಮ್ಮ…

Read More

ಸಂಸ್ಕಾರಯುತ ಶಿಕ್ಷಣ ಇಂದಿನ ದಿನಗಳಲ್ಲಿ ಅವಶ್ಯಕವಾಗಿದೆ. ಕಲಿಕೆಯೊಂದಿಗೆ ಪರಿಸರದ ಬಗೆಗಿನ ಕಾಳಜಿಯೂ ಅತೀ ಅಗತ್ಯವಾಗಿದೆ. ಅಮೆರಿಕಾದಂತಹ ದೇಶದಲ್ಲೂ ಉದ್ಯೋಗ ಕ್ಷೇತ್ರದಲ್ಲಿ ಭಾರತೀಯ ಯುವಕರಿಗೆ ಉತ್ತಮ ಅವಕಾಶವಿದೆ. ಸಾಧಕರನ್ನು ಗುರುತಿಸಿ ಗೌರವಿಸುವ ಮೂಲಕ ಅವರ ಹುಮ್ಮಸ್ಸನ್ನು ಇಮ್ಮಡಿಗೊಳಿಸುವ ಕೆಲಸವನ್ನು ಕಾರ್ಕಳ ರೋಟರಿ ಸಂಸ್ಥೆಯು ಮಾಡುತ್ತಿರುವುದು ಅಭಿನಂದನೀಯ ಎಂದು ಕಾರ್ಕಳ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಹ ಸಂಸ್ಥಾಪಕ ಡಾ| ಗಣನಾಥ ಶೆಟ್ಟಿ ಬಿ. ಹೇಳಿದರು. ಅವರು ಕಾರ್ಕಳ ಕಾಬೆಟ್ಟು ಕಟ್ಟೆಮಾರ್ “ನೈವೇದ್ಯ” ಸಭಾ ವೇದಿಕೆಯಲ್ಲಿ ರೋಟರಿ ಸಂಸ್ಥೆಯ ಕ್ರಿಸ್ಮಸ್ ಹಾಗೂ ಹೊಸ ವರ್ಷ ಆಚರಣೆಯ “ಸಂಭ್ರಮ ಸಮ್ಮಿಲನ” ಸಮಾರಂಭದಲ್ಲಿ ಭಾಗವಹಿಸಿ ಸಾಧಕರಾದ ಖ್ಯಾತ ಶಿಲ್ಪಿ ಕೆ ಸತೀಶ್ ಆಚಾರ್ಯ ಹಾಗೂ ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಹೆಬ್ರಿ ಇದರ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿಯವರನ್ನು ಗೌರವಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ರೋಟರಿಯ ರೋಟರಿ ಜಿಲ್ಲೆ 3182 ರ ಪ್ರತಿನಿಧಿಯಾಗಿ 2026 – 28ರ ಅವಧಿಗೆ ಆಯ್ಕೆಯಾದ ಕ್ಲಬ್ಬಿನ ಮಾಜಿ ಜಿಲ್ಲಾ ಗವರ್ನರ್…

Read More

ಸಹಕಾರ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡು ನಿರಂತರ ಸೇವೆ ಮಾಡುತ್ತಾ, ಸಾಮಾಜಿಕ ಸೇವಾ ಸಂಸ್ಥೆ ಸ್ಕೌಟ್ಸ್ ಆಂಡ್ ಗೈಡ್ಸ್ ಮುಖ್ಯ ಆಯುಕ್ತಕರಾದ ಸಹಕಾರ ರತ್ನ ಬಿ. ಜಯಕರ ಶೆಟ್ಟಿ ಇಂದ್ರಾಳಿ ದಂಪತಿಯನ್ನು ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ವತಿಯಿಂದ ವಿಶ್ವ ಗೀತಾ ಪರ್ಯಾಯದ ಪ್ರಯುಕ್ತ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಸಂಸ್ಥಾನದ ಮಠಾಧೀಶರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ, ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರು ಶ್ರೀ ಮಠದ ವತಿಯಿಂದ “ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿ” ಅನುಗ್ರಹಿಸಿ, ಗೌರವಿಸಿದರು.

Read More

ತನ್ನ ಸಾಮಾಜಿಕ ಜೀವನದಲ್ಲಿ ಪರೋಪಕಾರಿಯಾಗಿ ಕಷ್ಟದಲ್ಲಿದ್ದವರಿಗೆ ಸಹಾಯಕ್ಕಾಗಿ ಸ್ಪಂದಿಸುತ್ತಾ, ಉತ್ತಮ ಸಮಾಜ ಸೇವಾ ಕಾರ್ಯ ಮಾಡುತ್ತಾ ಇದ್ದ ನಮ್ಮ ತುಳುಕೂಟದ ದಿವಂಗತ ಸಂತೋಷ್ ಶೆಟ್ಟಿಯವರ ನೆನಪಾಗುವುದು ಸಾಮಾನ್ಯ. ಅವರ ಸ್ಮರಣೆ ಮಾಡುವ ನಿಟ್ಟಿನಲ್ಲಿ ಸಮಾಜಕ್ಕಾಗಿ ಉಪಯೋಗಕಾರಿಯಾಗುವ ಸೇವೆಯನ್ನು ಮಾಡಬೇಕೆಂಬ ತುಳುಕೂಟದ ಯುವ ವಿಭಾಗದವರು ಆಯೋಜಿಸಿದ ರಕ್ತದಾನ ಮತ್ತು ಉಚಿತ ಅರೋಗ್ಯ ತಪಾಸಣಾ ಕಾರ್ಯಕ್ರಮಕ್ಕೆ ಮಹತ್ವವಿದೆ. ಮನುಷ್ಯ ಜೀವನದಲ್ಲಿ ಆರೋಗ್ಯ ಕಾಪಾಡಲು ಹಲವಾರು ಮಾರ್ಗಗಳಿವೆ. ಅದನ್ನು ಅನುಸರಿಸಿದರೆ ಆರೋಗ್ಯದಾಯಕ ಜೀವನ ಸಾಧ್. ಆದರೆ ಅವೆಲ್ಲವೂ ಅಕಸ್ಮಿಕ ಅನಾರೋಗ್ಯ ಅಥವಾ ಅಪಘಾತ ಎಂಬುದು ಯಾವತ್ತು ಹೇಳಿ ಬರುವುದಿಲ್ಲ. ಜೀವನ ಪದ್ಧತಿ, ಅಹಾರ ಪದ್ಧತಿ ನಗರ ಜೀವನದ ಇಂದಿನ ಕಾಲದ ವಾತಾವರಣದಿಂದ ಮನುಷ್ಯ ಬೇಗನೆ ಅನಾರೋಗ್ಯ ಪಿಡಿತನಾಗುತ್ತಾನೆ. ಅಂತೆಯೇ ಅಸರ್ಮಪಕ ನಿರ್ವಹಣೆಯಿಂದ ಅಥವಾ ಮನುಷ್ಯ ತಪ್ಪಿನಿಂದ ಅನಾರೋಗ್ಯ ಅಪಘಾತಗಳು ಕೂಡಾ ಹೆಚ್ಚೆಚ್ಚು ಆಗುತಿದೆ. ಪ್ರತಿಯೊಬ್ಬರೂ ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ ಮತ್ತು ಮೆಡಿಕಲ್ ಸಂಬಂಧಿತ ಇನ್ಸೂರೆನ್ಸ್ ಇದ್ದರೆ ಒಳ್ಳೆಯದು. ಡಾ. ಸುಜಯ್ ಹೆಗ್ಡೆಯವರು ನಮಗೆ…

Read More

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಇತ್ತೀಚೆಗೆ ನಿಧನರಾದ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಎನ್ ವಿನಯ ಹೆಗ್ಡೆಯವರಿಗೆ ಶ್ರದ್ದಾಂಜಲಿ ಸಭೆ ಮತ್ತು ಪ್ರಾರ್ಥನಾ ಸಭೆ ಜನವರಿ 9 ರಂದು ಶುಕ್ರವಾರ ಸಂಜೆ 5 ಗಂಟೆಗೆ ಬಂಟ್ಸ್ ಹಾಸ್ಟೇಲ್ ಶ್ರೀ ರಾಮಕೃಷ್ಣ ಕಾಲೇಜು ಬಳಿ ಇರುವ ಶ್ರೀಮತಿ ಗೀತಾ ಎಸ್ ಎಂ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. ಡಾ| ಎನ್ ವಿನಯ ಹೆಗ್ಡೆ ಅವರು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ಗ್ರಾಮೀಣ ಪ್ರದೇಶವಾಗಿದ್ದ ನಿಟ್ಟೆಯನ್ನು ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸಿದ ಶಿಕ್ಷಣ ತಜ್ಞರು. ನಿಟ್ಟೆ ಯೂನಿವರ್ಸಿಟಿ ರೂವಾರಿಯಾಗಿದ್ದ ಅವರು ದಕ್ಷ ಆಡಳಿತಗಾರರಾಗಿದ್ದರು. ಅವರಿಗೆ ಶ್ರದ್ದಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದ್ದಾರೆ.

Read More

ಕೊಕ್ಕರ್ಣೆ ಶ್ರೀ ಅನಿತಾ ವಿದ್ಯಾ ಸಂಸ್ಥೆಯ ದುರ್ಗಾ ಆಂಗ್ಲ ಮಾಧ್ಯಮ ಶಾಲೆಯ ದಶಮಾನೋತ್ಸವ ಸಮಾರಂಭ ನೆರವೇರಿತು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಹುಬ್ಬಳ್ಳಿಯ ಚಾರ್ಟರ್ಡ್ ಅಕೌಂಟೆಂಟ್ ಎಸ್.ಬಿ ಶೆಟ್ಟಿ, ಹುಬ್ಬಳ್ಳಿಯ ಶೆಟ್ಟಿಸ್ ಕನ್ಸ್ಟ್ರಕ್ಷನ್ ನ ಎಂ.ಡಿ ಪ್ರಸನ್ನ ಶೆಟ್ಟಿ, ಉಡುಪಿ ಡಯಟ್ ಪ್ರಾಂಶುಪಾಲ ಡಾ| ಅಶೋಕ್ ಕಾಮತ್, ಬ್ರಹ್ಮಾವರದ ನ್ಯೂ ಕರ್ನಾಟಕ ಬಿಲ್ಡರ್ ಆಂಡ್ ಡೆವಲಪರ್ಸ್ ನ ಮಾಲಕ ಚೇತನ್ ಕುಮಾರ್ ಶೆಟ್ಟಿ, ಉಡುಪಿಯ ವೃತ್ತ ನಿರೀಕ್ಷಕ ರಮೇಶ್ ಕೆ, ಗ್ರಾಮ ಪಂಚಾಯತ್ ಅಧ್ಯಕ್ಷ ಜಯಂತ್ ಪೂಜಾರಿ, ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು, ರಕ್ಷಕ ಶಿಕ್ಷಕ ಸಂಘದ ಸದಸ್ಯರು, ಶಿಕ್ಷಕ ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿ ದಾನಿಗಳನ್ನು ಸನ್ಮಾನಿಸಲಾಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.

Read More

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಮೂಡುಬಿದಿರೆ ಹಾಗೂ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಧನ್ವಂತರಿ ಪೂಜಾ ಮಹೋತ್ಸವ, ಶಿಷ್ಯೋಪನಯನ ಸಂಸ್ಕಾರ, ಆಳ್ವಾಸ್ ಧನ್ವಂತರಿ ಪ್ರಶಸ್ತಿ ಪ್ರದಾನ ಮತ್ತು ಕಾಲೇಜು ವಾರ್ಷಿಕೋತ್ಸವ ಸಮಾರಂಭ ಬುಧವಾರ ಕಾಲೇಜಿನ ಆವರಣದಲ್ಲಿ ನಡೆಯಿತು. ನಾರಾವಿಯ ಪ್ರಸಿದ್ಧ ಆಯುರ್ವೇದ ವೈದ್ಯ ಡಾ. ಎನ್ ಶೀತಲ್‌ಕುಮಾರ್, ಬೆಂಗಳೂರಿನ ಭಾರತೀಯ ಆಯುರ್ವೇದ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯ ರಸಶಾಸ್ತ್ರ ಮತ್ತು ಭೈಷಜ್ಯ ಕಲ್ಪನಾ ವಿಭಾಗದ ಪ್ರಾಧ್ಯಾಪಕರು, ವಿಭಾಗ ಮುಖ್ಯಸ್ಥ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ. ಜಗದೀಶ್ ಕೋನರೆಡ್ಡಿ, ಕೇರಳದ ಕೊಟ್ಟಕ್ಕಲ್ ಆರ‍್ಯ ವೈದ್ಯ ಶಾಲೆಯ ಗುಣಮಟ್ಟ ಭರವಸೆ ವಿಭಾಗದ ವೈದ್ಯಾಧಿಕಾರಿ ಮತ್ತು ವಿಭಾಗ ಮುಖ್ಯಸ್ಥ ಡಾ. ಜಿತೇಶ್ ಎಂಕೆರಿಗೆ ಶಾಲು, ಹಾರ, ಪ್ರಶಸ್ತಿ ಫಲಕ ಹಾಗೂ ನಗದು ಹಣ ಹತ್ತು ಸಾವಿರದೊಂದಿಗೆ ಆಳ್ವಾಸ್ ಧನ್ವಂತರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಧನ್ವಂತರಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ನಾರಾವಿಯ ಪ್ರಸಿದ್ಧ ಆಯುರ್ವೇದ ವೈದ್ಯ…

Read More

ರಾಜ್ಯದ ಪ್ರತಿಷ್ಠಿತ ಕ್ರೆಡಿಟ್ ಸಹಕಾರ ಸಂಸ್ಥೆಗಳಲ್ಲೊಂದಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರ ಮಾಣಿಕ್ಯ ಪ್ರಶಸ್ತಿ ವಿಜೇತ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2025-26ನೇ ಸಾಲಿನ ವಿತ್ತೀಯ ವರ್ಷದ 3ನೇ ತ್ರೈಮಾಸಿಕ ಅವಧಿ ದಿನಾಂಕ 31.12.2025ಕ್ಕೆ ರೂ.660 ಕೋಟಿ ಠೇವಣಿ, ರೂ.558 ಕೋಟಿ ಸಾಲ, ರೂ.1218 ಕೋಟಿ (ಠೇವಣಿ ಮತ್ತು ಸಾಲ) ವ್ಯವಹಾರವನ್ನು ಹೊಂದಿದೆ. 2024ನೇ ಡಿಸೆಂಬರ್ 31ಕ್ಕೆ ಹೋಲಿಸುವಾಗ ಠೇವಣಿಯಲ್ಲಿ ರೂ.96 ಕೋಟಿ 17% ವೃದ್ಧಿ, ಹೊರಬಾಕಿ ಸಾಲದಲ್ಲಿ ರೂ.72 ಕೋಟಿ ಹೆಚ್ಚಳ 15% ವೃದ್ಧಿಯೊಂದಿಗೆ, ಒಟ್ಟು ವ್ಯವಹಾರದಲ್ಲಿ ರೂ.168 ಕೋಟಿ ವೃದ್ಧಿಯಿಂದ 16% ಹೆಚ್ಚಳವನ್ನು ಸಾಧಿಸಿದೆ. 31.12.2025ಕ್ಕೆ ನಿವ್ವಳ ಲಾಭವು ರೂ.10.22 ಕೋಟಿ ದಾಖಲಿಸಿದ್ದು, ಇದು ಕಳೆದ ವರ್ಷಕ್ಕಿಂತ ರೂ.1.39 ಕೋಟಿ ಹೆಚ್ಚಳವಾಗಿ 16% ವೃದ್ಧಿಯಾಗಿದೆ. ಸ್ಥಾಪನೆಯಾದಿನಿಂದ ನಿರಂತರ ಡಿವಿಡೆಂಡ್ ಅನ್ನು ನೀಡುತ್ತಾ ಬಂದ ಸೊಸೈಟಿ, 2024-25ನೇ ಸಾಲಿಗೆ ಶೇ.25 ಡಿವಿಡೆಂಡ್ ಅನ್ನು ನೀಡಿದ್ದು, ಕಳೆದ ಏಳು ವರ್ಷಗಳಿಂದ ಗರಿಷ್ಠ 25% ಡಿವಿಡೆಂಡ್…

Read More

ಬಂಟರ ಸಂಘವು ಒಂದು ದೇವಸ್ಥಾನವಿದ್ದಂತೆ. ಸಂಘವು ಅದರ ಎಲ್ಲಾ ಸದಸ್ಯರಿಗೆ ಸೇರಿದ್ದು, ಬಂಟರ ಸಂಘದ ಎಲ್ಲಾ ಮೂರು ಶಿಕ್ಷಣ ಸಂಸ್ಥೆಯಿಂದಾಗಿ ಮುಂದೆ ಸಂಘಕ್ಕೆ ದೊಡ್ಡ ಮಟ್ಟದ ಆದಾಯವಾಗಲಿದ್ದು, ಸಂಘವು ಮುಂದೆ ಆರ್ಥಿಕವಾಗಿ ಮತ್ತಷ್ಟು ಗಟ್ಟಿಯಾಗಲಿದೆ. ಸಂಘದ ಬೊರಿವಲಿ ಶಿಕ್ಷಣ ಸಂಸ್ಥೆಗೆ ಜೋಗೇಶ್ವರಿ ದಹಿಸರ್ ಪರಿಸರದ ಸಮಾಜ ಬಾಂಧವರ ಮಹತ್ವದ ಕೊಡುಗೆಯಿದೆ ಎಂದು ಬಂಟರ ಸಂಘ ಮುಂಬಯಿಯ ಉಪಾಧ್ಯಕ್ಷ, ಬಾಬಾಸ್ ಗ್ರೂಪ್ ಆಫ್ ಕಂಪನೀಸ್ ಇದರ ಸಿ.ಎಂ.ಡಿ ಮಹೇಶ್ ಎಸ್. ಶೆಟ್ಟಿ ನುಡಿದರು. ಜನವರಿ 3 ರಂದು ಬೊರಿವಲಿ ಪಶ್ಚಿಮದ ನ್ಯೂ ಲಿಂಕ್ ರೋಡ್ ಪಕ್ಕದ ಎಕ್ಸರ್ ಕ್ಲಬ್ ಸಮೀಪವಿರುವ ಕೆ. ಡಿವೈನ್ ಲಾನ್ಸ್ ಎಂಡ್ ಕನ್ವೆನ್ಶನ್ ನ ಸಭಾಗೃಹದಲ್ಲಿ ಬೋಳ ನಂದಳಿಕೆ ‘ಶ್ರೀ ಮಾತಾ’ ಸುಬ್ಬಯ್ಯ ವಿ. ಶೆಟ್ಟಿ ಸ್ಮಾರಕ ವೇದಿಕೆಯಲ್ಲಿ, ಸಂಘದ ಜೋಗೇಶ್ವರಿ ದಹಿಸರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರೇಮನಾಥ್ ಶೆಟ್ಟಿ ಕೊಂಡಾಡಿಯವರ ನೇತೃತ್ವದಲ್ಲಿ ಜರಗಿದ ಪ್ರಾದೇಶಿಕ ಸಮಿತಿಯ ಹದಿನೆಂಟನೆಯ ವರ್ಷದ ವಾರ್ಷಿಕೋತ್ಸವ ಅಷ್ಟಾದಶ ಸಂಭ್ರಮ ಸಮಾರಂಭದ ಸಭಾ ಕಾರ್ಯಕ್ರಮದ…

Read More

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕುಂದೂರು ಇಲ್ಲಿ 28 ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ನೇತ್ರ ತಪಾಸಣಾ ಶಿಬಿರದಲ್ಲಿ ದೃಷ್ಟಿ ದೋಷವಿರುವ ಫಲಾನುಭವಿಗಳಿಗೆ ನೀಡಿದ ಕನ್ನಡಕಗಳು ಸದುಪಯೋಗವಾಗಲಿ, ನಿಮ್ಮ ಬಾಳಿಗೆ ಬೆಳಕನ್ನು ನೀಡಲಿ ಎಂದು ಶುಭ ಹಾರೈಸಿದರು. ಕುಕ್ಕುಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾರವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಶಿಕಲಾ, ಕ್ಲಬ್ಬಿನ ಕಾರ್ಯದರ್ಶಿ ಚೇತನ್ ನಾಯಕ್, ಕ್ಷಯ ರೋಗ ಮೇಲ್ವಿಚಾರಕ ಶಿವಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರೋಟರಿ ಸಮುದಾಯ ಸೇವಾ ಚೇರ್ಮನ್ ವಸಂತ್ ಎಂ, ಕೃಷ್ಣ ಶೆಟ್ಟಿ, ಉದಯ ಕಡಂಬ, ನಕ್ರೆ ಗ್ರಾಮ ಪಂಚಾಯತ್ ಸದಸ್ಯರು, ಆರೋಗ್ಯ ಇಲಾಖಾ ಸಿಬ್ಬಂದಿ ಉಪಸ್ಥಿತರಿದ್ದರು. ಆಶಾ ಕಾರ್ಯಕರ್ತೆ ಸುನೀತಾ ಪ್ರಾರ್ಥಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕುಮುದಾವತಿ ಸ್ವಾಗತಿಸಿ ನಿರೂಪಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ವೈದ್ಯಾಧಿಕಾರಿ…

Read More