Author: admin

ಕುರ್ಪಾಡಿ ಸಂಜೀವ ನಾರಾಯಣ ಶೆಟ್ಟಿ ಸ್ಮರಣಾರ್ಥವಾಗಿ ಅವರ ಪುತ್ರರಾದ ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಉದ್ಯಮಿ, ಸಮಾಜಸೇವಕ ಹರೀಶ್ ಶೆಟ್ಟಿಯವರು ಪಡುಕುಡೂರುವಿನಲ್ಲಿ ‘ಗೋಕಟ್ಟೆ’ಯನ್ನು ನಿರ್ಮಿಸಿದ್ದಾರೆ. ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರು ಉದ್ಘಾಟನಾ ಸಮಾರಂಭದಲ್ಲಿ ದಿವ್ಯ ಸಾನಿದ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಸಹಿತ ಸ್ಥಳೀಯರು, ಗ್ರಾಮಸ್ಥರು, ಕುಟುಂಬಸ್ಥರು ಉಪಸ್ಥಿತರಿದ್ದರು.

Read More

ಕಳೆದ 28 ವರ್ಷಗಳ ಹಿಂದೆ ಅಂದೇರಿ ಪರಿಸರದ ಸಮಾನ ಮನಸ್ಕ ಬಂಟರು ದೂರದರ್ಶಿತ್ವದ ಯೋಚನೆ, ಯೋಜನೆಗಳೊಂದಿಗೆ ಸ್ಥಾಪಿಸಿದಂತಹ ಜವಾಬ್ ಸಂಸ್ಥೆಯನ್ನು ಇಷ್ಟರವರೆಗೆ ನಡೆಸಿಕೊಂಡು ಬಂದವರೆಲ್ಲರೂ ಸದಾ ಪ್ರಾತಸ್ಮರಣೀಯರು. ಜವಾಬ್ ನಮಗೆ ಒಂದು ಕುಟುಂಬ ಇದ್ದಂತೆ. ಕುಟುಂಬ ಬಾಂಧವರ ಪ್ರೀತಿ, ವಿಶ್ವಾಸ, ಕಾರ್ಯಕ್ಷಮತೆಯೊಂದಿಗೆ ಜವಾಬ್ ಎತ್ತರಕ್ಕೆ ಬೆಳೆಯುತ್ತಿದೆ ಎಂದರೆ ತಪ್ಪಾಗದು. ಇದಕ್ಕಾಗಿ ಸಮಾಜ ಬಾಂಧವರೆಲ್ಲರಿಗೂ ಅಭಿನಂದನೆಗಳು. ಕೊಡುಗೈ ದಾನಿಗಳೇ ಜವಾಬ್ ನ ಅಡಿಪಾಯ. ಜವಾಬ್ ನ ಸ್ಥಿರತೆಗೆ ಹಮ್ಮಿಕೊಂಡ ಯೋಜನೆಗೆ ಎಲ್ಲರ ಸಹಕಾರ ಇರಲಿ ಎಂದು ಜವಾಬ್ ನ ಅಧ್ಯಕ್ಷ ತಾಳಿಪಾಡಿ ಗುತ್ತು ವಿಶ್ವನಾಥ್ ಶೆಟ್ಟಿ ಅವರು ಅಭಿಪ್ರಾಯಪಟ್ಟರು. ಫೆಬ್ರವರಿ 28ರಂದು ಅಂಧೇರಿ ಪಶ್ಚಿಮ ಸಮರ್ಥನಗರ್ ಲೋಖಂಡವಾಲ ಕಾಂಪ್ಲೆಕ್ಸ್ ರೆಸಿಡೆಂಟ್ಸ್ ಅಸೋಸಿಯೇಷನ್ ಗ್ರೌಂಡ್ ನಲ್ಲಿ ಜರಗಿದ ಜವಾಬ್ ನ 28 ನೇಯ ವಾರ್ಷಿಕ ಸ್ನೇಹ ಸಮ್ಮಿಲನದ ಸಭಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವೇದಿಕೆಯಲ್ಲಿ ಬಂಟರ ಸಂಘ ಮುಂಬಯಿಯ ಮಾಜಿ ಅಧ್ಯಕ್ಷ ಹಾಗೂ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನ ಮಾಜಿ ಕಾರ್ಯದರ್ಶಿ, ಉದ್ಯಮಿ, ಕರ್ನಾಟಕ…

Read More

ಕನ್ನಡ ಸಂಘ ಬಹರೈನ್ ವತಿಯಿಂದ ಜನವರಿ 30 ರಂದು ಜರುಗಿದ ಸದಸ್ಯರ ವಾರ್ಷಿಕ‌ ದಿನಾಚರಣೆಯಂದು ಹಿರಿಯ ಸದಸ್ಯ ರಾಜೇಂದ್ರ ಹೆಗ್ಡೆಯವರಿಗೆ ಸಂಘಕ್ಕೆ ನೀಡಿದ ದೀರ್ಘಕಾಲದ ಸೇವೆಯನ್ನು ಸ್ಮರಿಸಿ ಬೀಳ್ಕೊಡುಗೆ ಸಮಾರಂಭ ನೆರವೇರಿಸಲಾಯಿತು. ವೇದಿಕೆಯಲ್ಲಿ ಉಪಸ್ಥಿತರಿದ್ದ ಮುಖ್ಯ ಅತಿಥಿಗಳಾದ ಜಯಶಂಕರ್ ವಿಶ್ವನಾಥನ್ (COO, Uneeco Bahrain), ಹಾಜಿ ಅಬ್ದುಲ್ ರಜಾಕ್ ಹೆಜಮಾಡಿ (Metalco Group), ಪ್ರಕಾಶ್ ಶೆಟ್ಟಿ (ಮಾಲಕರು, Central Cafe) ಹಾಗೂ ಸಂಘದ ಮಾಜಿ ಅಧ್ಯಕ್ಷರುಗಳಾದ ಪ್ರದೀಪ್ ಕುಮಾರ್ ಶೆಟ್ಟಿ, ಅಮರನಾಥ್ ರೈ, ಬಿಲ್ಲವಾಸ್ ಬಹರೈನ್ ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ,‌ ಸಂಘದ ಅಧ್ಯಕ್ಷ ಅಜಿತ್ ಬಂಗೇರ, ಉಪಾಧ್ಯಕ್ಷ ನಿತಿನ್ ಶೆಟ್ಟಿ ಮತ್ತು ಪದಾಧಿಕಾರಿಗಳು ರಾಜೇಂದ್ರ ಹೆಗ್ಡೆಯವರನ್ನು ಸನ್ಮಾನಿಸಿ ಅಭಿನಂದಿಸಿದರು. ಅತಿಥಿಗಳು ಮತ್ತು ಅಧ್ಯಕ್ಷರು ರಾಜೇಂದ್ರ ಹೆಗ್ಡೆ, ಶ್ರೀಮತಿ ಚೇತನಾ ರಾಜೇಂದ್ರ ಹೆಗ್ಡೆ ಮತ್ತು ಅವರ ಮಕ್ಕಳು ಸಂಘಕ್ಕೆ ಕಳೆದ ಮೂರು ದಶಕಗಳಿಂದ ನೀಡಿದ ಗಣನೀಯ ಕೊಡುಗೆಯನ್ನು ಗೌರವಿಸಿ ಮಾತನಾಡಿದರು. ಸನ್ಮಾನಿತರಾದ ರಾಜೇಂದ್ರ ಹೆಗ್ಡೆ ತಮ್ಮ ಅನುಭವಗಳನ್ನು ಹಂಚಿಕೊಂಡು ಸಂಘದ ಮುಂದಿನ…

Read More

ಮುಂಡ್ಕೂರು ಭಾರ್ಗವ ಜೆಸಿಐ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಆಯ್ಕೆ ಪ್ರಕ್ರಿಯೆ ಮತ್ತು ಪದಗ್ರಹಣ ಸಮಾರಂಭದಲ್ಲಿ 2026 ರ ಸಾಲಿನ ಅಧ್ಯಕ್ಷೆಯಾಗಿ ಮುಂಡ್ಕೂರು ಅಂಗಡಿಗುತ್ತು ಸಮೀಪದ ಪ್ರಾಪ್ತಿ ಪ್ರಭಾಕರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಈಕೆ ಹಲವಾರು ವರ್ಷಗಳಿಂದ ಮುಂಡ್ಕೂರು ಪರಿಸರದಲ್ಲಿ ಹಲವಾರು ಸಾಮಾಜಿಕ, ಧಾರ್ಮಿಕ ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದು ಜನಾನುರಾಗಿದ್ದರು. ಈಕೆ ಮುಂಡ್ಕೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಬಂಗಾರು ಗದ್ದೆ ಪ್ರಭಾಕರ ವಾಸು ಶೆಟ್ಟಿ ಅವರ ಮತ್ತು ಪಂಜನಲ್ಲೆ ಗುತ್ತು ಪೂರ್ಣಿಮಾ ಶೆಟ್ಟಿಯವರ ದಂಪತಿಯ ಪುತ್ರಿ.

Read More

ಮುಂಬಯಿ ಮಹಾನಗರದ ಪ್ರತಿಷ್ಠಿತ ಹೋಟೆಲ್ ಉದ್ಯಮದ ಸಂಘಟನೆಯಲ್ಲಿ ಒಂದಾದ ವಸಾಯಿ ತಾಲೂಕು ಹೋಟೆಲ್ ಅಸೋಸಿಯೇಷನ್ ಇದರ ನೂತನ ಅಧ್ಯಕ್ಷರಾಗಿ ಸೆಂಟ್ರಲ್ ಪಾಯಿಂಟ್ ಇದರ ಮಾಲಕರಾದ ಕಾಪು ಮೋಹನ್ ವಿ. ಶೆಟ್ಟಿ ಕಾಪು ಹಾಗೂ ಉಪಾಧ್ಯಕ್ಷರಾಗಿ ಸಂಘಟಕ, ಉದ್ಯಮಿ ಶಂಕರ್ ಆಳ್ವ ಕರ್ನೂರು ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿರಾರ್ ಪೂರ್ವದ ವಿಷ್ಣು ಕೃಪಾ ಬ್ಯಾಂಕ್ವೆಟ್ ಹಾಲ್ ಇಲ್ಲಿ ಪ್ರೀತಂ ಸಿಂಗ್ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಮಹಾಸಭೆಯಲ್ಲಿ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮೋಹನ್ ವಿ ಶೆಟ್ಟಿ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಾಪು ಬಾಲಾಜಿ ಮೋಹನ್ ಶೆಟ್ಟಿ ಅವರು ತಮ್ಮ ಕಾಲೇಜು ಜೀವನದಿಂದಲೇ ನಾಯಕತ್ವದ ಗುಣವನ್ನು ಬೆಳೆಸಿಕೊಂಡವರು. ಅವರು ಶಿರ್ವದ ಮೂಲ್ಕಿ ಸುಂದರ ರಾಮ ಶೆಟ್ಟಿ ಕಾಲೇಜಿನಲ್ಲಿ 1986-87ನೇ ಸಾಲಿನಲ್ಲಿ ವಿದ್ಯಾರ್ಥಿ ನಾಯಕರಾಗಿ ಸೇವೆ ಸಲ್ಲಿಸಿದ್ದಲ್ಲದೇ ಪ್ರಸ್ತುತ ಎಂ.ಎಸ್.ಆರ್.ಎಸ್. ಕಾಲೇಜು, ಶಿರ್ವ ಅಲುಮ್ನಿ ಅಸೋಸಿಯೇಷನ್ ಮುಂಬಯಿ ಇದರ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಸಾಯಿ ತಾಲೂಕು ಹೋಟೆಲ್ ಅಸೋಸಿಯೇಷನ್ ನಲ್ಲಿ ಅವರು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುವುದರ…

Read More

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ), ವಿಶ್ವಕರ್ಮ ಸಹಕಾರ ಬ್ಯಾಂಕ್ ಉಡುಪಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಷ್ಣುಮೂರ್ತಿ ಫ್ರೆಂಡ್ಸ್ (ರಿ) ದೊಡ್ಡಣ್ಣಗುಡ್ಡೆ, ವಿಷ್ಣುಮೂರ್ತಿ ಮಹಿಳಾ ಘಟಕ, ದೊಡ್ಡಣ್ಣಗುಡ್ಡೆ ನಾಥ ಪಂಥ ಅಲೆಮಾರಿ ಜೋಗಿ ಮಹಿಳಾ ವೇದಿಕೆ (ರಿ) ಉಡುಪಿ ಜಿಲ್ಲೆ ಇವರುಗಳ ಸಹಯೋಗದಲ್ಲಿ ‘ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ’ ಫೆಬ್ರವರಿ 8 ರಂದು ವಿಷ್ಣುಮೂರ್ತಿ ಫ್ರೆಂಡ್ಸ್ ದೊಡ್ಡಣ್ಣಗುಡ್ಡೆ ಇವರ ಕಚೇರಿಯ ಬಳಿ ಇರುವ ಸಾರ್ವಜನಿಕ ಆಟದ ಮೈದಾನದ ವಠಾರದಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ನಿಕಟ ಪೂರ್ವ ಶಾಸಕರಾದ ಕೆ. ರಘುಪತಿ ಭಟ್ ರವರು ದೀಪ ಬೆಳಗಿಸಿ ಉದ್ಘಾಟಿಸಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದಂತಹ ವಿಷ್ಣುಮೂರ್ತಿ ಫ್ರೆಂಡ್ಸ್ ಸಂಘವನ್ನು ಮತ್ತು ಅವರ ಕಾರ್ಯ ಚಟುವಟಿಕೆಯನ್ನು ಪ್ರಶಂಸಿಸಿದರು. ಸಂಘದ 20 ನೇ ವರ್ಷದ ಕಾರ್ಯಘಟ್ಟದಲ್ಲಿ ಉತ್ತಮ ಕಾರ್ಯಕ್ರಮಗಳನ್ನು ನಡೆಸಿಕೊಂಡು ಸಾರ್ವಜನಿಕರಿಗೂ ಸಾಮಾಜಿಕವಾಗಿ ಸೇವೆಗಳನ್ನು ನೀಡುತ್ತಾ ಬಂದಿರುವಿರಿ. ಅದೇ ರೀತಿ ಸಿದ್ಧ ಕಣ್ಣಿನ ಹನಿ ಕಾರ್ಯಕ್ರಮವು ಪ್ರಪ್ರಥಮವಾಗಿ ಉಡುಪಿಯಲ್ಲಿ ನಡೆದಿರುವುದರಿಂದ ಕಾರ್ಯಕ್ರಮದ…

Read More

ಮಾಜಿ ಶಾಸಕ ರಾಜಕೀಯ, ಧಾರ್ಮಿಕ, ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಿರಿಯ ನಾಯಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕರಾದ ಬಸ್ರೂರು ಅಪ್ಪಣ್ಣ ಹೆಗ್ಡೆಯವರು ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಅವರು ಕೊನೆಯುಸಿರೆಳೆದರು. 1983- 85 ರ ಅವಧಿಯಲ್ಲಿ ಜನತಾ ಪಕ್ಷದಿಂದ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಶಾಸಕರಾಗಿದ್ದ ಅಪ್ಪಣ್ಣ ಹೆಗ್ಡೆ ಅವರು ರಾಜಕೀಯ ಜೀವನದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿದ್ದು, ಜನಪ್ರತಿನಿಧಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಕೆಗೆ ಹೆಸರುವಾಸಿಯಾಗಿದ್ದರು. ಶಾಸಕರಾಗಿ ಕಾರ್ಯ ನಿರ್ವಹಿಸಿದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು. ಧಾರ್ಮಿಕ ಕ್ಷೇತ್ರದಲ್ಲಿಯೂ ಅವರ ಸೇವೆ ಗಣನೀಯವಾಗಿದ್ದು, ಅನೇಕ ದೇವಾಲಯಗಳ ಅಭಿವೃದ್ಧಿ, ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ ಹಾಗೂ ಸಂರಕ್ಷಣೆಗೆ ಅವರು ಮುನ್ನಡೆ ನೀಡಿದ್ದರು. ರಾಜಕೀಯ ಹಾಗೂ ನಿಜ ಜೀವನದಲ್ಲಿ ಅಜಾತ ಶತ್ರು ಎನಿಸಿಕೊಂಡಿದ್ದರು. ಸಾಮಾಜಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದ ಅವರು ತಾಲೂಕು ಕೋ ಅಪರೇಟಿವ್ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧಿ…

Read More

ಬಂಟರ ಯಾನೆ ನಾಡವರ ಮಾತೃ ಸಂಘದ ನಿಕಟಪೂರ್ವ ಗೌರವ ಪ್ರಧಾನ ಕಾರ್ಯದರ್ಶಿ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಕೆನರಾ ಪದವಿ ಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಅವರ ಕಛೇರಿಯಲ್ಲಿ ಸನ್ಮಾನಿಸಲಾಯಿತು. ಜಿಲ್ಲಾಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು, ಮಂಗಳೂರು ತಾಲೂಕು ಅಧ್ಯಕ್ಷರಾದ ಗೋಪಾಲಕೃಷ್ಣ ಶಾಸ್ತ್ರಿ ಮತ್ತು ಕೆನರಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ರಘ ಇಡ್ಕಿದು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

Read More

ಬೆಳ್ತಂಗಡಿ ತಾಲೂಕು ಬಂಟರ ಸಂಘದ ಗೌರವ ಮಾರ್ಗದರ್ಶಕರಾದ ಹೆಸರಾಂತ ಉದ್ಯಮಿ, ಸಮಾಜಸೇವಕ ಬರೋಡ ಶಶಿಧರ ಶೆಟ್ಟಿ ಇವರ ಮಾತೃಶ್ರಿಯವರಾದ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ ‘ಕಾಶಿ ಸದನ’ ವಸತಿ ಯೋಜನೆಯ ಸಹಾಯ ಹಸ್ತವನ್ನು ಬೆಳ್ತಂಗಡಿ ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡುವುದೆಂದು ನಿರ್ಣಯ ಮಾಡಲಾಗಿತ್ತು. ಆ ಪ್ರಯುಕ್ತ ಜನವರಿ 31 ಶನಿವಾರದಂದು ಪೂರ್ವಾಹ್ನ 9.30 ಕ್ಕೆ ನಾರಾವಿ ವಲಯ ಕೊಕ್ರಾಡಿ ಗ್ರಾಮದ ಶ್ರೀಮತಿ ಗಿರಿಜಾ ಶೆಟ್ಟಿ ಇವರ ನಿವೇಶನದ ಭೂಮಿ ಪೂಜೆ ನಡೆಯಿತು. ಇದರ ಶಿಲಾನ್ಯಾಸವನ್ನು ಬರೋಡ ಶಶಿಧರ ಶೆಟ್ಟಿ ಇವರು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಉದ್ಯಮಿ ಸುರೇಶ್ ಶೆಟ್ಟಿ ಸೂರ್ಯಶ್ರೀ, ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷರಾದ ಜಯಂತ ಶೆಟ್ಟಿ ಕುಂಟಿನಿ, ಎಂ. ಜಯರಾಮ ಭಂಡಾರಿ, ರಘುರಾಮ ಶೆಟ್ಟಿ ಉಜಿರೆ, ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ಕೋಶಾಧಿಕಾರಿ…

Read More

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ವಿಶ್ವಕರ್ಮ ಸಹಕಾರಿ ಬ್ಯಾಂಕ್ ಉಡುಪಿ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಂಸ್ಥೆ ವಿಷ್ಣುಮೂರ್ತಿ ಫ್ರೆಂಡ್ಸ್ (ರಿ) ದೊಡ್ಡಣಗುಡ್ಡೆ ಉಡುಪಿ, ವಿಷ್ಣುಮೂರ್ತಿ ಮಹಿಳಾ ಘಟಕ ದೊಡ್ಡಣಗುಡ್ಡೆ ಇವರ ಮುಂದಾಳತ್ವದಲ್ಲಿ ಸಿದ್ಧ ಕಣ್ಣಿನ ಹನಿ ಕಾರ್ಯಕ್ರಮ ಫೆಬ್ರವರಿ 08 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ನಡೆಯಲಿರುವುದು. ಮಾನವನ ನಿಜವಾದ ಜ್ಞಾನದ ಬಾಗಿಲು ಎಂದರೆ ಅದು ಕಣ್ಣು. ಅದರ ಸಂರಕ್ಷಣೆ ಅತಿ ಮುಖ್ಯ. ಇಂದಿನ ಆಧುನಿಕ ದಿನಮಾನದಲ್ಲಿ ಸಾಮಾಜಿಕ ಜಾಲತಾಣಗಳು, ಹಾಗೆ ಅತಿಯಾದ ಮೊಬೈಲ್ ವೀಕ್ಷಣೆಯಿಂದ ಕಣ್ಣಿಗೆ ಅಪಾರವಾದ ತೊಂದರೆ ಉಂಟಾಗಿದೆ. ಇಂತಹ ಹಲವಾರು ಕಣ್ಣಿನ ದೋಷಗಳ ನಿವಾರಣೆಗೆ ಈ ಪುರಾತನ ಆಯುರ್ವೇದ ಸಿದ್ಧ ಕಣ್ಣಿನ ಹನಿಯ ಕಾರ್ಯಕ್ರಮವು ಅತ್ಯಂತ ಪರಿಣಾಮಕಾರಿ. ಕಣ್ಣಿಗೆ ಹನಿ ಹಾಕುವುದರಿಂದ ಪ್ರಯೋಜನಗಳು : ಕಣ್ಣಿನಲ್ಲಿ ನೀರು ಬರುವುದು ಕಡಿಮೆಯಾಗುತ್ತದೆ. ⁠ಕಣ್ಣು ಕೆಂಪಗಾಗುವುದು, ಕಣ್ಣು ಉರಿಯುವುದು ಕಡಿಮೆಯಾಗುತ್ತದೆ. ⁠ಕಣ್ಣಿನ ಪೊರೆ ಬರುವ ಹಂತದವರಿಗೆ ಕಡಿಮೆಯಾಗುತ್ತದೆ. ⁠ದೃಷ್ಟಿ…

Read More