Author: admin

ಬಂಟರ ಸಂಘ ಪೂರ್ವ ಆಫ್ರಿಕಾ ನೈರೋಬಿ (ಕೀನ್ಯಾ) ಇದರ ವತಿಯಿಂದ ದಿನಾಂಕ ಏಪ್ರಿಲ್ 19 ರಂದು ನೈರೋಬಿ ವೆಸ್ಟ್ ಲ್ಯಾಂಡ್ ಚೌಪಾಟಿ ಹೋಟೆಲ್‌ನ ಸಭಾಭವನದಲ್ಲಿ ಬಿಸು ಪರ್ಬದ ಆಚರಣೆ ಬಹಳ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮವನ್ನು ದೇವರ ಪ್ರಾರ್ಥನೆಯೊಂದಿಗೆ ದೀಪ ಬೆಳಗಿಸುವ ಮೂಲಕ ಪ್ರಾರಂಭಿಸಲಾಯಿತು. ಪ್ರಾರ್ಥನೆಯನ್ನು ಉಷಾ ಪ್ರದೀಪ್ ಶೆಟ್ಟಿ ಮತ್ತು ಶಿವರಂಜನ್ ಶೆಟ್ಟಿ ನೆರವೇರಿಸಿದರು. ಭಾಸ್ಕರ್ ಶೆಟ್ಟಿ, ರವಿ ಶೆಟ್ಟಿ, ಸುರೇಶ್ ಶೆಟ್ಟಿ, ನವೀನ್ ಶೆಟ್ಟಿ ಹಾಗೂ ನಿತಿನ್ ಶೆಟ್ಟಿ ದೀಪ ಬೆಳಗಿಸಿದರು. ಸಂಘದ ಅಧ್ಯಕ್ಷರಾದ ಯಶವಂತ್ ಶೆಟ್ಟಿ ಸ್ವಾಗತ ಭಾಷಣ ಮಾಡಿದರು. ಬಿಸು ಆಚರಣೆಯ ಮಹತ್ವವನ್ನು ಸಂಘದ ಉಪಾಧ್ಯಕ್ಷರಾದ ಸಂದೀಪ್ ಸಾಮಾನಿ ಅವರು ವಿವರಿಸಿದರು. ಸಂಘದ ಪುಟಾಣಿ ಮಕ್ಕಳಿಂದ ನೃತ್ಯ, ಪ್ರಹಸನ ಹಾಗೂ ಮಹಿಳಾ ಸದಸ್ಯರಿಂದ ನೃತ್ಯ ಕಾರ್ಯಕ್ರಮಗಳು ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.

Read More

ರಾಷ್ಟ್ರೀಯ ದಂತ ಆಯೋಗ ಅಧಿನಿಯಮ 2023 ರ ಕಲಂ 11 ರ ಅನ್ವಯ ಕೇಂದ್ರ ಸರ್ಕಾರವು ದಂತ ಸಲಹಾ ಮಂಡಳಿ ರಚಿಸಿ ಆದೇಶ ಹೊರಡಿಸಿದ್ದು, ಇದರಲ್ಲಿ ಕರ್ನಾಟಕ ರಾಜ್ಯದ ಪ್ರತಿನಿಧಿಯಾಗಿ ಡಾ. ಶಿವಶರಣ್ ಶೆಟ್ಟಿಯವರನ್ನು ನೇಮಕ ಮಾಡಿದೆ. ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ದಂತ ಶಿಕ್ಷಣ ವಿಭಾಗದಿಂದ ಈ ಕುರಿತು ಆದೇಶ ಹೊರಡಿಸಲಾಗಿದೆ. ಈ ಮಂಡಳಿಗೆ ರಾಷ್ಟ್ರೀಯ ದಂತ ಆಯೋಗದ ಅಧ್ಯಕ್ಷರು ಹುದ್ದೆಯನ್ವಯ ಅಧ್ಯಕ್ಷರಾಗಿದ್ದು, ಆಯೋಗದ ಜೊತೆ ರಾಜ್ಯಗಳ ಪ್ರತಿನಿಧಿಗಳನ್ನು ಮಂಡಳಿಯಲ್ಲಿ ಆಯ್ಕೆ ಮಾಡಲಾಗುತ್ತದೆ ಎಂದು ಹೆಚ್ಚುವರಿ ಕಾರ್ಯದರ್ಶಿ ಡಾ. ವಿನೋದ್ ಕೋಟ್ವಾಲ್ ಆದೇಶ ಹೊರಡಿಸಿದ್ದಾರೆ.

Read More

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು (ರಿ) ಇಲ್ಲಿಗೆ ಪುತ್ತೂರು ತಾಲೂಕಿನಿಂದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ್ ಶೆಟ್ಟಿ, ಮಾಜಿ ಅಧ್ಯಕ್ಷ ದಯಾನಂದ ರೈ ಮನವಳಿಕೆ, ಸಮಾಜಸೇವಕ ದಂಬೆಕ್ಕಾನ ಸದಾಶಿವ ರೈ, ಉದ್ಯಮಿ ಸಾಜ ರಾಧಾಕೃಷ್ಣ ಆಳ್ವ, ನೂಜಿಬೈಲ್ ಜಯಪ್ರಕಾಶ್ ರೈ, ನಿತ್ಯಾನಂದ ಶೆಟ್ಟಿ ಮನವಳಿಕೆ, ಉದ್ಯಮಿ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ ಹಾಗೂ ಮಹಿಳಾ ಕ್ಷೇತ್ರದಿಂದ ವತ್ಸಲಾ ಪಿ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪುತ್ತೂರು ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷ ಸೀತಾರಾಮ ರೈ ಸವಣೂರು ಹಾಗೂ ರವಿಪ್ರಸಾದ್ ಶೆಟ್ಟಿ ನಾಮಪತ್ರ ಹಿಂತೆಗೆದ ಕಾರಣ ಅವಿರೋಧ ಆಯ್ಕೆ ನಡೆಯಿತು ಎಂದು ಮಾತೃ ಸಂಘದ ಪ್ರಕಟಣೆ ತಿಳಿಸಿದೆ.

Read More

ಸಾಂಸ್ಕೃತಿಕ ಸಂಘಟಕ, ನಾಟಕಕಾರ ಹಾಗೂ ರಾಜಕಾರಣಿ ರಾಮಚಂದ್ರ ಬೈಕಂಪಾಡಿ ಅವರು ತನಗಾಗಿ ಏನನ್ನೂ ಮಾಡದೇ ಇತರರ ಸಂತೋಷದಿಂದ ತೃಪ್ತಿ ಪಡೆದವರು. ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಹಲವಾರು ಯೋಜನೆಗಳ ಹೋರಾಟದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ ಅವರ ಮಾರ್ಗದರ್ಶನ ನನಗೂ ಪ್ರೇರಣೆಯಾಗಿತ್ತು. ಅವರು ಮಾಡಿದ ನಿಸ್ವಾರ್ಥ ಸೇವೆಯಿಂದ ಅವರ ಹೆಸರು ಚಿರಸ್ಮರಣೀಯ ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಜಿಲ್ಲಾ ಕಾರ್ಯಾಧ್ಯಕ್ಷರಾದ ಹರೀಶ್ ಕುಮಾರ್ ಎಂ ಶೆಟ್ಟಿ ನುಡಿದರು. ಮಂಗಳೂರು ತುಳು ಭವನದಲ್ಲಿ ಏಪ್ರಿಲ್ 25 ರಂದು ಆಯೋಜಿಸಲಾದ ತುಳು ಅಕಾಡೆಮಿಯ ಮಾಜಿ ಸದಸ್ಯ ಹಾಗೂ ತುಳು ಅಕಾಡೆಮಿಯ ವಾರ್ಷಿಕ ಗೌರವ ಪುರಸ್ಕೃತ ನಾಟಕಕಾರ ರಾಮಚಂದ್ರ ಬೈಕಂಪಾಡಿ ಅವರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮದಲ್ಲಿ ಸಮಿತಿಯ ಪರವಾಗಿ ಅವರು ಮಾತನಾಡಿದರು. ರಾಮಚಂದ್ರ ಬೈಕಂಪಾಡಿ ಅವರಲ್ಲಿ ನೈಜ ಸಾಂಸ್ಕೃತಿಕ ಕಾಳಜಿ ಇತ್ತು ಅವರು ರಾಜಕೀಯ ನೇತಾರರಾಗಿದ್ದರೂ ಅವರು ರಾಜಕೀಯ ಅದೃಷ್ಟವಂತರಾಗಿರಲಿಲ್ಲ. ಕರಾವಳಿಯ ಸಾಂಸ್ಕೃತಿಕ ಲೋಕಕ್ಕೆ ಅವರದ್ದು ದೊಡ್ಡ ಕೊಡುಗೆ ಇದೆ ಎಂದು ಹಿರಿಯ ವಿದ್ವಾಂಸ…

Read More

ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅತ್ತೂರು ಕೆಮ್ರಾಲ್ ಕಿಲೆಂಜೂರು ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭ ದೇವಸ್ಥಾನದ ಮಹಾದ್ವಾರ ಹಾಗೂ ನವೀಕೃತಗೊಂಡ ಹವಾನಿಯಂತ್ರಿತ ಆಶಾಲತಾ ನಾರಾಯಣ ಶೆಟ್ಟಿ ಸಭಾಭವನದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ, ಬಂಟರ ಸಂಘ ಮುಂಬಯಿಯ ಮಾಜಿ ಅಧ್ಯಕ್ಷರಾದ ಡಾ. ಪದ್ಮನಾಭ ವಿ ಶೆಟ್ಟಿಯವರನ್ನು ಗೌರವಿಸಿ ಅಭಿನಂದಿಸಲಾಯಿತು. ಈ ಸಂಧರ್ಭ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ದೇವಸ್ಥಾನದ ಮೊಕ್ತೇಸರ ಅತ್ತೂರು ಬಾಳಿಕೆ ಭಂಡಾರ ಮನೆ ರಾಜೇಶ್ ಶೆಟ್ಟಿ, ಕೃಷ್ಣ ಪ್ಯಾಲೇಸ್ ನ ಸಿಎಂಡಿ ಕೃಷ್ಣ ವೈ ಶೆಟ್ಟಿ, ಕಾಂಗ್ರೆಸ್ ಮುಖಂಡ ಮಿಥುನ್ ರೈ ಮತ್ತಿತರರು ಉಪಸ್ಥಿತರಿದ್ದರು.

Read More

ಬೆಳಗಾವಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಬಂಟರ ಭವನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಂಟರ ಕ್ರೀಡೋತ್ಸವಕ್ಕೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿಯವರು ಚಾಲನೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ದೇಹದ ಆರೋಗ್ಯಕ್ಕೆ ಮಾತ್ರವಲ್ಲದೆ ಮನಸ್ಸಿನ ಚೈತನ್ಯಕ್ಕೂ ಸಹಕಾರಿ ಎಂದು ತಿಳಿಸಿದರು. ಸಮಾಜದ ಒಗ್ಗಟ್ಟು ಮತ್ತು ಬಾಂಧವ್ಯವನ್ನು ಬಲಪಡಿಸುವಲ್ಲಿ ಇಂತಹ ಕ್ರೀಡೋತ್ಸವಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು. ಯುವಕರು ಕ್ರೀಡೆಗಳತ್ತ ಹೆಚ್ಚು ಆಸಕ್ತಿ ತೋರಿಸಿ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಬಂಟ ಸಮುದಾಯವು ಶಿಕ್ಷಣ, ಉದ್ಯಮ ಹಾಗೂ ಸಮಾಜ ಸೇವೆಯಲ್ಲಿ ನೀಡುತ್ತಿರುವ ಕೊಡುಗೆ ಶ್ಲಾಘನೀಯ. ಇಂತಹ ಕ್ರೀಡಾ ಕಾರ್ಯಕ್ರಮಗಳ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆಯುತ್ತದೆ ಎಂದು ಹೇಳಿದರು. ಈ ಕ್ರೀಡೋತ್ಸವದಲ್ಲಿ ವಿವಿಧ ವಯೋಮಾನದವರಿಗೆ ತಕ್ಕಂತೆ ಹಲವು ಕ್ರೀಡಾ ಸ್ಪರ್ಧೆಗಳು ಆಯೋಜಿಸಲಾಗಿದ್ದು, ಮಹಿಳೆಯರು ಮತ್ತು ಮಕ್ಕಳೂ ಸಹ ಉತ್ಸಾಹದಿಂದ ಭಾಗವಹಿಸಿದರು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ವಿಠಲ್ ಹೆಗ್ಡೆ, ಅಧ್ಯಕ್ಷ ವಿಜಯ ಶೆಟ್ಟಿ, ಬಂಟ…

Read More

ಕಂಪ್ಯೂಟರ್ ಜ್ಞಾನ ಇಂದು ನಿತ್ಯ ಜೀವನಕ್ಕೆ ಅವಶ್ಯವಾಗಿದೆ. ಕಂಪ್ಯೂಟರ್ ಸಾಕ್ಷರರಿಗೆ ನಾನಾ ಕ್ಷೇತ್ರಗಳಲ್ಲಿ ವಿಪುಲ ಅವಕಾಶವಿದ್ದು, ಮಹಿಳಾ ಸಬಲೀಕರಣಕ್ಕೂ ಇದು ದಾರಿಯಾಗಿದೆ. ಆದರೆ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ನಿರಂತರ ಕಲಿಕೆ ಅಗತ್ಯವಿದ್ದು, ಆ ಬಗ್ಗೆ ವಿಶೇಷ ಮುತುವರ್ಜಿ ವಹಿಸಬೇಕು. ನಮ್ಮ ಕೌಶಲ್ಯವನ್ನು ಸಮಯಕ್ಕೆ ಸರಿಯಾಗಿ ಉನ್ನತೀಕರಿಸಿಕೊಳ್ಳಬೇಕು ಎಂದು ಬಹರೈನ್ ಔಮಾ ಮಿಡಲ್ ಈಸ್ಟ್ ಸಂಸ್ಥೆಯ ಆಡಳಿತ ನಿರ್ದೇಶಕ ನವೀನ್ ಶೆಟ್ಟಿ ಹೇಳಿದರು. ಕುಂತಳನಗರದ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಆಶ್ರಯದಲ್ಲಿ ಆಲ್ ಕಾರ್ಗೋ ಲಾಜಿಸ್ಟಿಕ್ಸ್ ಮಂಗಳೂರು ಪ್ರಾಯೋಜಕತ್ವದಲ್ಲಿ ನಡೆಯುವ ಕಂಪ್ಯೂಟರ್ ಉಚಿತ ತರಬೇತಿ ಕಾರ್ಯಕ್ರಮದ 21ನೇ ಬ್ಯಾಚ್ ಉದ್ಘಾಟಿಸಿ ಮಾತನಾಡಿದರು. ದೆಂದೂರು ಕಟ್ಟೆ ಭಾರತಿ ಸಾಫ್ಟ್ ವೇರ್ ಆಡಳಿತ ನಿರ್ದೇಶಕ ಕಿರಣ್ ನಾಯಕ್ ಮಾತನಾಡಿ, ಕಂಪ್ಯೂಟರ್ ಬಳಿಕ ಬಂದಿರುವ ಕೃತಕ ಬುದ್ಧಿಮತ್ತೆ ಇಂದಿನ ಯುವ ಜನತೆಗೆ ಸವಲಾಗಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ವಿರುದ್ಧ ಹೋರಾಡುವ ಕ್ಷಮತೆ ಬೆಳೆಸಿಕೊಳ್ಳಬೇಕು. ಅಡ್ವಾನ್ಸ್ ತರಬೇತಿ ಪಡೆಯುವ ಮೂಲಕ ಅದು…

Read More

ಶ್ರೀ ತುಳುವೇಶ್ವರ ದೇವಸ್ಥಾನ ಬಸ್ರೂರಿನಲ್ಲಿ ಮೇ 2ರಿಂದ ನಡೆಯಬೇಕಿದ್ದ ಅಷ್ಟಮಂಗಲ ಪ್ರಶ್ನೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಎಚ್.ಕೆ ದೇವಾನಂದ ಶೆಟ್ಟಿಯವರು ತಿಳಿಸಿದ್ದಾರೆ. ಈ ಕುರಿತು ಜ್ಯೋತಿಷ್ಯರ ಸಮ್ಮುಖದಲ್ಲಿ ನಡೆದ ಪ್ರಶ್ನೆ ಚಿಂತನೆ ಪ್ರಕಾರ, ಶ್ರೀ ಚಕ್ರ ಸಾನಿಧ್ಯ ಹೊಂದಿರುವ ದೇವಿ ತುಳುವೇಶ್ವರಿ ಸಾನಿಧ್ಯದ ಅಭಿವೃದ್ಧಿ ನಡೆದ ನಂತರವೇ ತುಳುವೇಶ್ವರನ ಸಾನಿಧ್ಯದ ಪೂರ್ಣ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂಬ ದೈವಜ್ಞರ ಸಂದೇಶ ಲಭಿಸಿದೆ. ಆದ್ದರಿಂದ ಮೊದಲಿಗೆ ತುಳುವೇಶ್ವರಿ ಸಾನಿಧ್ಯದ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಪ್ರಕ್ರಿಯೆಗಳನ್ನು ಪ್ರಾರಂಭಿಸಿ, ಆ ಕಾರ್ಯಗಳು ಪೂರ್ಣಗೊಂಡ ನಂತರವೇ ತುಳುವೇಶ್ವರ ದೇವರ ಮುಂದಿನ ಕಾರ್ಯಗಳನ್ನು ಕೈಗೊಳ್ಳಬೇಕೆಂದು, ಹಾಗೆಯೇ ಭೂದಾನ ಸೇವೆಯನ್ನು ಪ್ರಾರಂಭಿಸಿ ತುಳುವೇಶ್ವರನ ಸುತ್ತಮುತ್ತಲಿನ ಭೂಮಿಯನ್ನು ಮರಳಿ ಪಡೆಯುವ ಪ್ರಕ್ರಿಯೆಯನ್ನು ಮುಂದುವರಿಸಬೇಕೆಂದು ಸೂಚನೆ ನೀಡಿದರು. ಈ ಹಿನ್ನೆಲೆಯಲ್ಲಿ ಮೇ 2ರಂದು ನಿಗದಿಯಾಗಿದ್ದ ಅಷ್ಟಮಂಗಲ ಪ್ರಶ್ನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ತುಳುವೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಸಂಚಾಲಕರಾದ ಬೇಲೂರು ದಿನಕರ ಶೆಟ್ಟಿ, ತುಳುವರ್ಲ್ಡ್ ಫೌಂಡೇಶನ್…

Read More

ಉಡುಪಿ ಗ್ರಾಮೀಣ ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಸಖಾರಾಮ ಶೆಟ್ಟಿಯವರ ಗೌರವಾರ್ಥ ನುಡಿ ನಮನ ಕಾರ್ಯಕ್ರಮವು ಹಾಲಿ ಅಧ್ಯಕ್ಷ ಡಾ. ಎಚ್.ಬಿ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘದ ಆಶಾ ಪ್ರಕಾಶ ಶೆಟ್ಟಿ ಕನ್ವೆನ್ಷನ್ ಸೆಂಟರ್ ಸಭಾಭವನದಲ್ಲಿ ಏಪ್ರಿಲ್ 24 ರಂದು ನಡೆಯಿತು. ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ ಕುಮಾರ ಶೆಟ್ಟಿ ಮಾತನಾಡಿ, ಉಡುಪಿ ಗ್ರಾಮೀಣ ಬಂಟರ ಸಂಘದ ಕಟ್ಟಡ ನಿರ್ಮಾಣ ಸಹಿತ ಸಮಗ್ರ ಅಭ್ಯುದಯಕ್ಕೆ ತೊಡಗಿಸಿಕೊಂಡಿದ್ದ ಸಖಾರಾಮ ಶೆಟ್ಟಿಯವರ ನಾಯಕತ್ವದ ಗುಣದಿಂದ ಊರಿನ ಅಭಿವೃದ್ಧಿ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದು, ಗ್ರಾಮೀಣ, ಪಟ್ಟಣ, ನಗರ ವ್ಯಾಪ್ತಿಯಲ್ಲಿ ಯಶಸ್ವಿ ಉದ್ಯಮಿಯಾಗಿ ಉದ್ಯೋಗದಾತರಾಗಿದ್ದರು ಎಂದರು. ಸಂಘದ ಕೋಶಾಧಿಕಾರಿ ವಿಜೀತ್ ಶೆಟ್ಟಿ, ಪ್ರಮುಖರಾದ ದಯಾನಂದ ಶೆಟ್ಟಿ ಕಲ್ಮಂಜೆ, ಗೋಪಾಲ ಶೆಟ್ಟಿ ಮೊದಲಾದವರು ನುಡಿ ನಮನ ಸಲ್ಲಿಸಿ ಪುಷ್ಪಾಂಜಲಿ ಸಮರ್ಪಿಸಿದರು. ಈ ಸಂದರ್ಭ ಬಹರೈನ್ ಔಮಾ ಮಿಡ್ಲ್ ಈಸ್ಟ್ ಸಂಸ್ಥೆಯ ಎಂಡಿ ನವೀನ್ ಶೆಟ್ಟಿ ದೆಂದೂರುಕಟ್ಟೆ, ಭಾರತಿ ಸಾಫ್ಟ್…

Read More

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಕೆ ಅಜಿತ್‌ ಕುಮಾರ್ ರೈ ಮಾಲಾಡಿ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವುದು ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ ಎಂದು ಕೆ ಅಜಿತ್ ಕುಮಾರ್ ರೈ ಹೇಳಿದರು. ಮುಖ್ಯ ಚುನಾವಣಾಧಿಕಾರಿಯಾಗಿದ್ದ ವಕೀಲ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಅವರು ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪ ಚುನಾವಣಾಧಿಕಾರಿ, ವಕೀಲ ನವೀನ್ ಶೆಟ್ಟಿ ಹಾಗೂ ಚುನಾವಣಾಧಿಕಾರಿ ಸದಾಶಿವ ಶೆಟ್ಟಿಯವರು ಉಪಸ್ಥಿತರಿದ್ದರು.

Read More