Author: admin

ವಸಾಯಿ ಕರ್ನಾಟಕ ಸಂಘದ ವತಿಯಿಂದ ಜೂನ್ 21 ರಂದು ಬೆಳಿಗ್ಗೆ ಗಂಟೆ 9.30 ರಿಂದ ಶ್ರೀಸ್ವಾಮಿ ನಾರಾಯಣ ಸಭಾಂಗಣ ಮೊದಲನೆಯ ಮಹಡಿ ಸಾಯಿನಗರ ವಸಾಯಿ ಪಶ್ಚಿಮ ಇಲ್ಲಿ ಅಧ್ಯಕ್ಷರಾದ ಕರ್ನೂರು ಶಂಕರ ಆಳ್ವ ಅವರ ಅಧ್ಯಕ್ಷತೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಯೋಜಿಸಲಾಗಿದೆ. ಯೋಗ ಗುರು ಮಿಲನ್ ಠಕ್ಕ‌ರ್ ಮತ್ತು ಮಲ್ಲಿಕಾ ಎಸ್ ಶೆಟ್ಟಿ ಮತ್ತು ಸಂಗಡಿಗರು ಮಾರ್ಗದರ್ಶನ ಮಾಡಲಿದ್ದಾರೆ. ಇವರು ಸುಮಾರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲದಿಂದ ಯೋಗಾಭ್ಯಾಸದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಯೋಗವು ವಿಶ್ವಕ್ಕೆ ಭಾರತದ ದೊಡ್ಡ ಕೊಡುಗೆಯಾಗಿದೆ. ಜೂನ್ 21 ರಂದು ವಿಶ್ವ ಯೋಗ ದಿನವನ್ನಾಗಿ ಆಚರಿಸಲಾಗುತ್ತಿದ್ದು, 190ಕ್ಕೂ ಹೆಚ್ಚು ದೇಶಗಳಲ್ಲಿ ಆಚರಿಸಲಾಗುತ್ತಿದೆ. ಆ ದಿನ ಅನೇಕ ಸ್ಥಳಗಳಲ್ಲಿ ಶಿಬಿರಗಳು ಸಾಮೂಹಿಕ ಯೋಗ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಆರೋಗ್ಯ ದೃಷ್ಟಿಯಿಂದ ಯೋಗವು ತುಂಬಾ ಲಾಭದಾಯಕವಾಗಿದೆ. ಆಧುನಿಕ ಜೀವನ ಶೈಲಿಯ ಒತ್ತಡದಿಂದ ಯುವ ಜನತೆಗೆ ಯೋಗವು ಶಾಂತಿ ಮತ್ತು ಏಕಾಗ್ರತೆಯನ್ನು ಒದಗಿಸುವ ಒಂದು ಶಕ್ತಿಶಾಲಿ ವಿಧಾನ ಎಂದು ಹೇಳಬಹುದು. ಅಂದು ನಡೆಯುವ…

Read More

ಜಗತ್ತಿನ ನಾನಾ ಮೂಲೆಗಳಲ್ಲಿ ನೆಲೆಸಿರುವ ಕನ್ನಡಿಗರು ಕನ್ನಡ ನಾಡು-ನುಡಿ, ಸಂಸ್ಕೃತಿ, ಪರಂಪರೆಗಾಗಿ ತಮ್ಮದೇ ಆದ ಕೊಡುಗೆಯನ್ನು ನೀಡುವ ಮೂಲಕ ತಮ್ಮ ವೃತ್ತಿ, ಉದ್ಯೋಗ, ವ್ಯವಹಾರಗಳ ನಡುವೆಯೂ ಅವರು ಕನ್ನಡದ ಬೇರುಗಳನ್ನು ಮರೆಯದೆ, ಹೊಸ ತಲೆಮಾರಿಗೆ ಭಾಷೆಯ ಮಹತ್ವವನ್ನು ಬೋಧಿಸುತ್ತ ಬಂದಿರುವುದನ್ನು ನಾವು ಕಾಣಬಹುದಾಗಿದೆ. ಇಂಥ ಸನ್ನಿವೇಶದ ನಡುವೆ ದುಬೈಯಂತಹ ಬಹುಭಾಷಾ, ಬಹುಸಂಸ್ಕೃತಿಯ ನಗರದಲ್ಲಿ ಕನ್ನಡ ಭಾಷೆಗೆ ತನ್ನದೇ ಆದ ವಿಶೇಷ ಕೊಡುಗೆ ನೀಡಿದವರು ಕ್ರಿಯಾತ್ಮಕ ಕಲಾ ನಿರ್ದೇಶಕರಾಗಿರುವ ಕೊಡಗಿನ ಬಿ.ಕೆ ಗಣೇಶ್ ರೈ ತಮ್ಮ ಕಲಾತ್ಮಕ ದೃಷ್ಟಿ, ಸಂಘಟನಾ ಕೌಶಲ್ಯ ಮತ್ತು ಭಾಷಾ ಪ್ರೀತಿ ಮೂಲಕ ಅವರು ವಿದೇಶ ನೆಲದಲ್ಲೂ ಕನ್ನಡದ ಧ್ವಜವನ್ನು ಎತ್ತಿಹಿಡಿದಿದ್ದಾರೆ. ವಿಜ್ಞಾನದ ಕ್ರಿಯಾರೂಪದ ಅಧುನಿಕ ನಗರ, ವಿಶ್ವ ದರ್ಜೆಯ ವಾಣಿಜ್ಯ ಕೇಂದ್ರ, ವಿಶ್ವದ ನಾನಾ ಕಡೆಗಳ 250ಕ್ಕೂ ಹೆಚ್ಚು ದೇಶವಾಸಿಗಳ ನಾಗರಿಕರು ಅನಿವಾಸಿ ಪ್ರಜೆಗಳಾಗಿ ಉದ್ಯೋಗಿಗಳಾಗಿ, ಉದ್ಯಮಿಗಳಾಗಿ ನೆಲೆಸಿರುವ ದುಬೈನಲ್ಲಿ, ಹಲವಾರು ವರ್ಷಗಳಿಂದ ಕನ್ನಡದ ಮೇಲಿನ ಪ್ರೀತಿ, ಅಭಿಮಾನಕ್ಕಾಗಿ ಬಿ.ಕೆ ಗಣೇಶ್ ರೈ ಅವರು ಮಾಡಿಕೊಂಡು ಬಂದಿರುವ…

Read More

ತಾನಾಯಿತು ತನ್ನ ಪಾಡಾಯಿತು ಎನ್ನುವ ಈ ಸ್ವಾರ್ಥಮಯ ಜಗದಲಿ, ಯಾವುದೇ ಪ್ರತಿಫಲದ ನಿರೀಕ್ಷೆಯಿಲ್ಲದೆ ನಿಸ್ವಾರ್ಥವಾಗಿ ದುಡಿಯುವ ಸಂದೀಪ್ ಶೆಟ್ಟಿಯವರ ವ್ಯಕ್ತಿತ್ವ ನಿಜಕ್ಕೂ ಅಪರೂಪದ್ದು. ಇತರರ ನೋವಿಗೆ ಸ್ಪಂದಿಸುವ ಮಾನವೀಯ ಹೃದಯ, ಸಮಾಜದ ಒಳಿತಿಗಾಗಿ ಸದಾ ತುಡಿವ ಸೇವಾ ಮನೋಭಾವ ಹಾಗೂ ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುವ ಸಂದೀಪ್ ಶೆಟ್ಟಿಯವರು ಬೆಳುವಾಯಿ ಗಿರೀಶ್ ಶೆಟ್ಟಿ ಹಾಗೂ ಬಂಟ್ವಾಳ ತಾಲೂಕಿನ ನಯನಾಡು ಪ್ರಭಾವತಿ ಜಿ ಶೆಟ್ಟಿಯವರ ಸುಪುತ್ರರಾಗಿ ಜನಿಸಿದರು. ಡಿಪ್ಲೋಮ ಇಂಜಿನಿಯರಿಂಗ್ ಪದವಿ ಮುಗಿಸಿ ಕಳೆದ 13 ವರ್ಷಗಳಿಂದ ‘ಸಮರ್ಥ ಬಿಲ್ಡರ್ಸ್’ ಎಂಬ ಸ್ವಂತ ಸಂಸ್ಥೆ ಸ್ಥಾಪಿಸಿ ಯಶಸ್ವೀ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಸದಾ ನಗುಮೊಗದೊಂದಿಗೆ ಎಲ್ಲರೊಂದಿಗೆ ಬೆರೆತು ಬಾಳುವ ವಿಶೇಷ ಗುಣ, ಸ್ನೇಹಪರ ವ್ಯಕ್ತಿತ್ವ ಹಾಗೂ ಸೇವಾ ಮನೋಭಾವದಿಂದ ಜನಮನ ಗೆದ್ದಿರುವ ಸಂದೀಪ್ ಶೆಟ್ಟಿಯವರು ಯುವ ಬಂಟರ ಸಂಘ ಮೂಡುಬಿದಿರೆಯ 2026-27 ರ ಸಾಲಿಗೆ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡಿದ್ದಾರೆ. ಜವಾಬ್ದಾರಿಯನ್ನು ಹೊತ್ತರೆ ಅದನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಛಲ ಮತ್ತು ಶ್ರಮ ಇವರ ವಿಶೇಷತೆಯಾಗಿದೆ. ಯುವ ಬಂಟರ…

Read More

ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ| ಕೆ. ಪ್ರಕಾಶ್ ಶೆಟ್ಟಿಯವರು ತಮ್ಮ ಉದ್ಯಮ ಪಯಣದ ಮತ್ತೊಂದು ಮಹತ್ವದ ಮೈಲಿಗಲ್ಲಾಗಿ ಅಮೆರಿಕದಿಂದ ತರಿಸಲಾದ 14 ಆಸನಗಳ ‘ಎಂಬ್ರೇಯರ್ ಲೆಗಸಿ 650’ (Embraer Legacy 650) ಖಾಸಗಿ ವಿಮಾನವನ್ನು ಎಂಆರ್‌ಜಿ ಕುಟುಂಬಕ್ಕೆ ಸೇರ್ಪಡೆಗೊಳಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನ್ನಿಧ್ಯ ಹಾಗೂ ಆಶೀರ್ವಾದದೊಂದಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಕುಟುಂಬ ಸದಸ್ಯರು, ಆಪ್ತರು ಹಾಗೂ ಹಿತೈಷಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು. ಆತಿಥ್ಯ, ರಿಯಲ್ ಎಸ್ಟೇಟ್ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ದೇಶಾದ್ಯಂತ ತನ್ನದೇ ಆದ ಛಾಪು ಮೂಡಿಸಿರುವ ಎಂಆರ್‌ಜಿ ಸಮೂಹವನ್ನು ವಿನಯ, ಪರಿಶ್ರಮ ಮತ್ತು ದೂರದೃಷ್ಟಿಯೊಂದಿಗೆ ಬೆಳೆಸಿದ ಡಾ| ಪ್ರಕಾಶ್ ಶೆಟ್ಟಿ ಅವರು ಯಶಸ್ವಿ ಉದ್ಯಮಿಯಾಗಿರುವುದರ ಜೊತೆಗೆ ಸಮಾಜಮುಖಿ ಚಟುವಟಿಕೆಗಳು ಮತ್ತು ದಾನ ಧರ್ಮಗಳ ಮೂಲಕವೂ ಹೆಸರುವಾಸಿಯಾಗಿದ್ದಾರೆ. ವಿನಮ್ರ ಆರಂಭದಿಂದ ಆರಂಭವಾದ ಅವರ ಪಯಣ…

Read More

ಬಾಂಬೆ ಬಂಟ್ಸ್ ಅಸೋಸಿಯೇಶನ್ ಮುಂಬಯಿ ಮಹಾನಗರದಲ್ಲಿರುವ ಜಾತೀಯ ಸಂಘಟನೆಗಳಲ್ಲಿ ಮುಂಚೂಣಿಯಲ್ಲಿ ಇರುವ ಒಂದು ಸಂಸ್ಧೆ. ಇದರ ಮಹಿಳಾ ವಿಭಾಗದ ವತಿಯಿಂದ ಇದೇ ಬರುವ ಜೂನ್ 21 ರಂದು ಆದಿತ್ಯವಾರ ಸಾಯಂಕಾಲ 4.00 ಗಂಟೆಗೆ ಸರಿಯಾಗಿ ಅಧ್ಯಕ್ಷರಾದ ಅಡ್ವೋಕೇಟ್ ಡಿ.ಕೆ ಶೆಟ್ಚಿಯವರ ಅಧ್ಯಕ್ಷತೆಯಲ್ಲಿ ಬಂಟ್ಸ್ ಸೆಂಟರ್ ಜೂಯಿನಗರ ನವಿ ಮುಂಬಯಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಿದೆ. ಈ ಕಾರ್ಯಕ್ರಮದಲ್ಲಿ ಯೋಗ ಗುರುಗಳಾದ ಶ್ರೀಮತಿ ಸ್ವಾತಿ ಶೆಟ್ಟಿ, ಶ್ರೀಮತಿ ಸವಿತಾ ರತ್ನಾಕರ ಶೆಟ್ಟಿ ಹಾಗೂ ಸಮಾಜಸೇವಕಿ ಶ್ರೀಮತಿ ರತಿ ಶೆಟ್ಟಿಯವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶ್ರೀಮತಿ ಸ್ವಾತಿ ಶೆಟ್ಟಿಯವರು ಯೋಗಾಭ್ಯಾಸದ ಬಗ್ಗೆ ವಿವಿಧ ಸಾಮಾನ್ಯ ಮತ್ತು ಕಠಿಣ ಆಸನಗಳನ್ನು ಪ್ರಾಯೋಗಿಕವಾಗಿ ಸ್ವಯಂ ಪ್ರದರ್ಶಿಸಲಿದ್ದಾರೆ ಮತ್ತು ಶ್ರೀಮತಿ ಸವಿತಾ ಆರ್ ಶೆಟ್ಟಿಯವರು ಯೋಗಾಭ್ಯಾಸದ ಮಾಹಿತಿಯನ್ನು ವಿವರವಾಗಿ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಅಡ್ವೋಕೇಟ್ ಡಿ.ಕೆ ಶೆಟ್ಟಿ, ಉಪಾಧ್ಯಕ್ಷ ಐಕಳ ಕಿಶೋರ್ ಕೆ ಶೆಟ್ಟಿ, ಗೌ.ಪ್ರ ಕಾರ್ಯದರ್ಶಿ ನ್ಯಾ. ಶೇಖರ್ ಆರ್ ಶೆಟ್ಟಿ, ಗೌ. ಕೋಶಾಧಿಕಾರಿ ಸಿ.ಎ ವಿಶ್ವನಾಥ ಶೆಟ್ಟಿ,…

Read More

ರಾಜ್ಯದ ಮುಂಚೂಣಿಯ ಕ್ರೆಡಿಟ್ ಸಹಕಾರ ಸಂಘವಾದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿಯ ಪಡೀಲ್ ಶಾಖೆಯನ್ನು ದ.ಕ ಜಿಲ್ಲಾಧಿಕಾರಿ ಕಾರ್ಯಾಲಯ ಪ್ರಜಾ ಸೌಧಕ್ಕೆ ಜೂನ್ 17 ರಂದು ಸ್ಥಳಾಂತರ ಮಾಡಲಾಯಿತು. ಉದ್ಘಾಟಕರಾಗಿ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ದರ್ಶನ್ ಎಚ್‌.ವಿರವರು ಮಾತನಾಡುತ್ತಾ, ನಮ್ಮ ಕಛೇರಿ ಸಂಕೀರ್ಣದಲ್ಲಿ ಬ್ಯಾಂಕುಗಳ ಹಾಗೆಯೇ ಜನಸಾಮಾನ್ಯರಿಗೆ ಆರ್ಥಿಕ ಸವಲತ್ತುಗಳನ್ನು ನೀಡಿ ಜನರ ಆರ್ಥಿಕ ಅಭ್ಯುದಯಕ್ಕೆ ಕೊಡುಗೆಯನ್ನು ನೀಡುತ್ತಿರುವ ಸಹಕಾರ ಸಂಘಗಳಿಗೆ ಅವಕಾಶ ಕಲ್ಪಿಸಲಾಗಿದೆ. ಶ್ರೀ ರಾಮಕೃಷ್ಣ ಸೊಸೈಟಿಯು ಹೆಚ್ಚು ಹೆಚ್ಚು ವಹಿವಾಟುಗಳನ್ನು ಮಾಡಿ ಇನ್ನಷ್ಟು ಅಭಿವೃದ್ಧಿಯನ್ನು ಕಾಣಲಿ ಎಂದು ಹಾರೈಸಿದರು. ಸಭೆಯ ಮುಖ್ಯ ಅಭ್ಯಾಗತರಾದ ದಕ್ಷಿಣ ಕನ್ನಡ ಜಿಲ್ಲೆಯ ಅಪಾರ ಜಿಲ್ಲಾಧಿಕಾರಿ ರಾಜು ಕೆ. ರವರು ಮಾತನಾಡಿ, ರಾಜ್ಯದಲ್ಲಿ ಸಹಕಾರ ಚಳುವಳಿಯು ಗದಗದಲ್ಲಿ ಆರಂಭವಾಗಿದ್ದರೂ, ಅದು ಅತ್ಯುತ್ತಮವಾಗಿ ಪ್ರಗತಿಯನ್ನು ಹೊಂದಿ ಜನರ ವಿಶ್ವಾಸಕ್ಕೆ ಪಾತ್ರವಾಗಿರುವುದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ. ಇದಕ್ಕೆ ಪೂರಕವಾಗಿ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿಯು ಒಳ್ಳೆಯ…

Read More

ಯುವ ಬಂಟರ ಸಂಘ ಮೂಡುಬಿದಿರೆಯ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಸಮಾಜ ಸೇವಕ, ಧಾರ್ಮಿಕ ಮುಖಂಡ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಹಾಗೂ ಸಮರ್ಥ ಬಿಲ್ಡರ್ಸ್ ನ ಆಡಳಿತ ನಿರ್ದೇಶಕರಾದ ಬೆಳುವಾಯಿ ಸಂದೀಪ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉದ್ಯಮ ಕ್ಷೇತ್ರದ ಸಾಧನೆಗಾಗಿ 2025 ರ ಸಾಲಿನ ಶ್ರೀ ಯಕ್ಷದೇವ ಸಾಧನಾ ಪುರಸ್ಕಾರ ಪಡೆದ ಸಂದೀಪ್ ಶೆಟ್ಟಿಯವರು ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಯಶಸ್ವೀ ಸಂಘಟಕರಾಗಿಯೂ, ಸಮಾಜ ಸೇವಕರಾಗಿಯೂ ಗುರುತಿಸಿಕೊಂಡಿದ್ದಾರೆ.

Read More

ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ವತಿಯಿಂದ ಜೂನ್ 19 ರಂದು ಸಂಜೆ 4 ಗಂಟೆಗೆ ಇಂದಿರಾ ಗಾಜಿನ ಮನೆ ಹತ್ತಿರವಿರುವ ಆರ್.ಎನ್ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ‘ಬಂಟರ ಬಾಂಧವ್ಯ’ ಸಮಾರಂಭವನ್ನು ಆಯೋಜಿಸಲಾಗಿದೆ. ಬಂಟ ಸಮುದಾಯದ ಬಾಂಧವರನ್ನು ಒಗ್ಗೂಡಿಸುವ ಮತ್ತು ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಂಘದ ಸಂಸ್ಥಾಪಕರು, ಹಿರಿಯರು, ದಾನಿಗಳು ಹಾಗೂ ಮಾಜಿ ಅಧ್ಯಕ್ಷರುಗಳು ಸಮಾರಂಭ ಯಶಸ್ಸಿಗೆ ಕೈಜೋಡಿಸಿದ್ದಾರೆ ಎಂದು ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ಅಧ್ಯಕ್ಷ ರಾಜೇಂದ್ರ ಎ ಶೆಟ್ಟಿ ತಿಳಿಸಿದ್ದಾರೆ. ಸಂಜೆ 4 ರಿಂದ ಲಘು ಉಪಹಾರದೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಸಂಜೆ 4:3೦ ರಿಂದ ಬಂಟ ಸಮುದಾಯದ ಆಸಕ್ತ ಮಕ್ಕಳು, ಮಹಿಳೆಯರು ಮತ್ತು ಪುರುಷರಿಂದ ಸಾಂಸ್ಕೃತಿಕ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 5 ಕ್ಕೆ ಮದುವೆಯಾದ ನೂತನ ವಧು ವರರಿಗೆ ಹಿರಿಯರಿಂದ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆ. 5.30ಕ್ಕೆ ರಂಗಮಂಚದ ಕಾರ್ಯಕ್ರಮ ಮುಂದುವರಿಯಲಿದ್ದು, ಜೂನಿಯರ್ ರಾಜ್‌ಕುಮಾರ್, ಜೂನಿಯರ್ ಅಂಬರೀಶ್, ಜೂನಿಯರ್ ವಿಷ್ಣುವರ್ಧನ್ ಮತ್ತು ಜೂನಿಯರ್ ಕುಮಾರ್…

Read More

ಭಾರತದ ಪ್ರವಾಸೋದ್ಯಮ ನಕ್ಷೆಯಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಗೋವಾ, ತನ್ನ ಸೂರ್ಯ ಕಿರಣಗಳಿಂದ ಕಂಗೊಳಿಸುವ ಕಡಲತೀರಗಳು, ಸಮೃದ್ಧ ಸಾಂಸ್ಕೃತಿಕ ಪರಂಪರೆ, ಆಹ್ಲಾದಕರ ಹವಾಮಾನ ಹಾಗೂ ಅಪರೂಪದ ನೈಸರ್ಗಿಕ ಸೌಂದರ್ಯದಿಂದ ದೇಶ ವಿದೇಶಗಳ ಪ್ರವಾಸಿಗರನ್ನು ನಿರಂತರವಾಗಿ ಆಕರ್ಷಿಸುತ್ತಿದೆ. ಗೋವಾದ ರಾಜಧಾನಿಯಾದ ಪಣಜಿಯ ಹೃದಯಭಾಗದಲ್ಲಿ ನೆಲೆಗೊಂಡಿರುವ ‘ಗೋಲ್ಡ್ ಫಿಂಚ್ ಪಣಜಿ ಗೋವಾ’ ಅತ್ಯಾಧುನಿಕ ಆತಿಥ್ಯ ಸೇವೆಗಳನ್ನು ಗೋವಾದ ವಿಶಿಷ್ಟ ಸೊಬಗಿನೊಂದಿಗೆ ಸಂಯೋಜಿಸಿ ಪ್ರವಾಸಿಗರಿಗೆ ಹೊಸ ಅನುಭವವನ್ನು ನೀಡುತ್ತಿದೆ. ಸುಂದರ ಮಂಡೋವಿ ನದಿಯ ನೋಟವನ್ನು ಹೊಂದಿರುವ ಈ ಹೋಟೆಲ್, ಗೋಲ್ಡ್ ಫಿಂಚ್ ಹಾಸ್ಪಿಟಾಲಿಟಿಯ ದೇಶಾದ್ಯಂತ ಬೆಳೆಯುತ್ತಿರುವ ಹೋಟೆಲ್ ಜಾಲಕ್ಕೆ ಹೊಸ ಸೇರ್ಪಡೆಯಾಗಿದೆ. ವ್ಯಾಪಾರ ಮತ್ತು ಪ್ರವಾಸ ಉದ್ದೇಶದ ಅತಿಥಿಗಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾದ ಈ ಹೋಟೆಲ್ ಆರಾಮ, ಅನುಕೂಲತೆ ಮತ್ತು ಆಧುನಿಕ ಸೊಬಗನ್ನು ಒಂದೇ ವೇದಿಕೆಯಲ್ಲಿ ಒದಗಿಸುತ್ತದೆ. ಒಟ್ಟು 98 ಸುಸಜ್ಜಿತ ಕೊಠಡಿಗಳನ್ನು ಹೊಂದಿರುವ ಈ ಹೋಟೆಲ್‌ನಲ್ಲಿ ಏಳು ವಿಶಾಲ ಸೂಟ್‌ಗಳಿವೆ. ಆಧುನಿಕ ಸೌಲಭ್ಯಗಳು, ವಿಶಾಲ ಲಾಬಿ, ಹಸಿರು ಪರಿಸರ ಹಾಗೂ ಆಕರ್ಷಕ ಒಳಾಂಗಣ ವಿನ್ಯಾಸಗಳು…

Read More

ಕರ್ನಾಟಕ ಟಿವಿ ಪ್ರಸ್ತುತ ಪಡಿಸುವ ಲೀಡರ್ ಅವಾರ್ಡ್ಸ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜೂನ್ 20 ರಂದು ಸಂಜೆ 4 ಗಂಟೆಗೆ ಬೆಂಗಳೂರು ಅರಮನೆ ಮೈದಾನದ ಗೇಟ್ ನಂಬರ್ 4 ಗಾಯತ್ರಿ ವಿಹಾರ್ ನಲ್ಲಿ ನಡೆಯಲಿದೆ. ಈ ಭವ್ಯ ಸಮಾರಂಭದಲ್ಲಿ ಬೈಂದೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರಿಗೆ ‘ಬೆಸ್ಟ್ ಎಂ.ಎಲ್.ಎ’ ಹಾಗೂ ಸಮಾಜಸೇವಕಿ, ಉದ್ಯಮ ಕ್ಷೇತ್ರದಲ್ಲಿ ಮಹಾನ್ ಸಾಧನೆ ಮಾಡಿದ ಶ್ರೀಮತಿ ಕಾಂತಿ ಶೆಟ್ಟಿಯವರಿಗೆ ‘ಬೆಸ್ಟ್ ನಾಯಕಿ’ ಪ್ರಶಸ್ತಿ ಪ್ರದಾನ ನಡೆಯಲಿದೆ.

Read More