Author: admin

ಉಡುಪಿ ಜಿಲ್ಲೆಯ ಕಾಪುವಿನ ಇತಿಹಾಸ ಪ್ರಸಿದ್ಧ ಶ್ರೀ ಬ್ರಹ್ಮ ಮುಗ್ಗೇರ್ಕಳ ಪಿಲಿ ಚಾಮುಂಡಿ ದೈವಸ್ಥಾನದಲ್ಲಿ ಅತ್ಯಂತ ಅಪರೂಪದ ಹಾಗೂ ಸಾಂಪ್ರದಾಯಿಕ ಆಚರಣೆಯಾದ ‘ಕಾಪು ಪಿಲಿ ಕೋಲ’ವು ಇದೇ ಬರುವ ಮೇ 16, 2026ರ ಶನಿವಾರದಂದು ಅತ್ಯಂತ ವೈಭವದಿಂದ ಜರುಗಲಿದೆ. ತುಳುನಾಡಿನ ಭೂತಾರಾಧನೆಯ ಪರಂಪರೆಯಲ್ಲಿ ತನ್ನದೇ ಆದ ವಿಶೇಷ ಸ್ಥಾನ ಹೊಂದಿರುವ ಈ ದ್ವೈವಾರ್ಷಿಕ ಉತ್ಸವವು ಪ್ರಕೃತಿ ಆರಾಧನೆಯ ಸಂಕೇತವಾಗಿದ್ದು, ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಿಸಲಿದೆ. ಈ ವಿಶೇಷ ಆಚರಣೆಯ ಅಂಗವಾಗಿ ಪಿಲಿ ಚಾಮುಂಡಿ ದೈವದ ನೇಮೋತ್ಸವಕ್ಕೂ ಮುನ್ನ ಪರಿವಾರ ದೈವಗಳಾದ ಬಬ್ಬರ್ಯ, ಕೊಡಮಣಿತ್ತಾಯ ಹಾಗೂ ನಂದಿಕೇಶ್ವರ ದೈವಗಳ ನೇಮೋತ್ಸವವು ಶಾಸ್ತ್ರೋಕ್ತವಾಗಿ ನೆರವೇರಲಿದೆ. ಪಿಲಿ ಕೋಲದ ಪ್ರಮುಖ ಆಕರ್ಷಣೆಯೆಂದರೆ ದೈವ ನರ್ತಕ ದೇವಸ್ಥಾನದಿಂದ ಪ್ರಸಾದ ಸ್ವೀಕರಿಸಿದ ನಂತರ ದೈವವು ಆವೇಶಭರಿತವಾಗಿ ಪಂಜರವನ್ನು ಮುರಿದು ಹೊರಬರುವ ದೃಶ್ಯವು ರೋಮಾಂಚನಕಾರಿಯಾಗಿರುತ್ತದೆ. ತದನಂತರ ಸುತ್ತಮುತ್ತಲಿನ ಪರಿಸರದಲ್ಲಿ ದೈವವು ನಡೆಸುವ ‘ಬೇಟೆ’ಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕರಾವಳಿಯ ನಾನಾ ಭಾಗಗಳಿಂದ ಹಾಗೂ ಮುಂಬೈನಂತಹ ನಗರಗಳಿಂದ ಸಾವಿರಾರು ತುಳುವರು ಕಾಪುವಿಗೆ ಆಗಮಿಸಲಿದ್ದಾರೆ.…

Read More

ಬ್ರಹ್ಮಾವರ ತಾಲೂಕು ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಉದ್ಯಮಿ, ದಾನಿ, ಸಾಮಾಜಿಕ ಧಾರ್ಮಿಕ ಮುಂದಾಳು ಪ್ರಸಾದ್ ಹೆಗ್ಡೆ ಮಾರಾಳಿಯವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಈ ವೇದಿಕೆಯು ಸಾವಿರಾರು ಸ್ವಯಂಸೇವಕರ ಮೂಲಕ ಸ್ವಸ್ಥ ಮತ್ತು ಸುಸಂಸ್ಕೃತ ಸಮಾಜ ನಿರ್ಮಾಣಕ್ಕಾಗಿ ಕೆಲಸ ಮಾಡುತ್ತಿದೆ.

Read More

ಸಿಸ್ಟರ್ಸ್ ಡೇ ಪ್ರಯುಕ್ತ ವೈದ್ಯಕೀಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ನರ್ಸ್‌ಗಳ ಸೇವೆಯನ್ನು ಗೌರವಿಸುವ ಉದ್ದೇಶದಿಂದ ರೋಟರಿ ಕ್ಲಬ್ ಕಾರ್ಕಳ ವತಿಯಿಂದ ರೋಟರಿ ಹಾಸ್ಪಿಟಲ್ ಹಾಗೂ ಸಿಟಿ ಹಾಸ್ಪಿಟಲ್ ಗೆ ಭೇಟಿ ನೀಡಿ ಸುಮಾರು 45 ಮಂದಿ ಸಿಸ್ಟರ್ಸ್‌ರಿಗೆ ಹೂವು ಹಾಗೂ ಸಿಹಿ ನೀಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷರಾದ ರೋ. ಕೆ. ನವೀನ್ ಚಂದ್ರ ಶೆಟ್ಟಿಯವರು ಮಾತನಾಡಿ, ರೋಗಿಗಳ ಆರೈಕೆ ಮತ್ತು ಆರೋಗ್ಯ ಸೇವೆಯಲ್ಲಿ ನರ್ಸ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅವರ ಪ್ರಾಮಾಣಿಕತೆ, ಸಹನೆ ಹಾಗೂ ಮಾನವೀಯ ಸೇವೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಅಭಿನಂದನಾ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞೆ ರೋ. ಡಾ. ಆಶಾ ಹೆಗ್ಡೆ, ಮಾಜಿ ಅಧ್ಯಕ್ಷ ರೋ. ಇಕ್ಬಾಲ್ ಅಹಮದ್, ರೋ. ಸುಬ್ರಮಣ್ಯ ದೇವಾಡಿಗ, ರೋ. ಚೇತನ್ ಕುಮಾರ್, ಕಾರ್ಯದರ್ಶಿ ರೋ. ಚೇತನ್ ನಾಯಕ್ ಹಾಗೂ ರೋಟರಿ ಹಾಸ್ಪಿಟಲ್ ನ ಅಶ್ಲೋನ್ ಅಲ್ಮಡಿಯಾ ಉಪಸ್ಥಿತರಿದ್ದರು.

Read More

ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಉದ್ಯಮಿ ವಿ ಪ್ರಸಾದ್ ಶೆಟ್ಟಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಸುಮಾರು 2 ಲಕ್ಷ ಸದಸ್ಯರನ್ನು ಹೊಂದಿದ ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಸಂಸ್ಥೆಯು 1941 ರಲ್ಲಿ ಪ್ರಾರಂಭಗೊಂಡಿದ್ದು, ದೇಶಾದ್ಯಂತ 264 ಶಾಖೆಯನ್ನು ಹೊಂದಿದೆ. ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ, ಕಾರ್ಯದರ್ಶಿಯಾಗಿ ಕೆ ವರುಣ್ ಶೆಟ್ಟಿ, ಕೋಶಾಧಿಕಾರಿಯಾಗಿ ಅಲೆವೂರು ದಿನೇಶ್ ಕಿಣಿ, ಜೊತೆ ಕಾರ್ಯದರ್ಶಿಗಳಾಗಿ ಏಕಾನಾಥ್ ಬೋಳಾರ್ ಮತ್ತು ಅಶ್ವಿನ್ ಕುಂದರ್, ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಸಿದ್ಧರಾಜು, ಜನರಲ್ ಕೌನ್ಸಿಲ್ ಸದಸ್ಯರಾಗಿ ಎನ್.ಎಮ್ ಹೆಗ್ಡೆ, ಉಪಾಧ್ಯಕ್ಷರಾಗಿ‌ ಕೆ ಪ್ರಕಾಶ್ ಬೆಟ್ಟಿನ್ ಹಾಗೂ ರಾಜಗೋಪಾಲ್ ಎಸ್, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅರುಣ್ ಕುಮಾರ್ ಹೆಗ್ಡೆ, ಹರಿಪ್ರಸಾದ್ ರೈ, ರಂಜನ್ ಕೆ ಮತ್ತು ಎಸ್ ಉಮರ್ ಆಯ್ಕೆಯಾಗಿದ್ದಾರೆ.

Read More

ಬಂಟರ ಯಾನೆ ನಾಡವರ ಮಾತೃ ಸಂಘದ 2026 -29 ಸಾಲಿನ ಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಉಪಾಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಕರುಣಾಕರ ಶೆಟ್ಟಿ, ಕೋಶಾಧಿಕಾರಿಯಾಗಿ ಸಿಎ ರಾಮ್ ಮೋಹನ್ ರೈ ಹಾಗೂ ಜೊತೆ ಕಾರ್ಯದರ್ಶಿಯಾಗಿ ಪುಂಚಮೆ ಪದ್ಮನಾಭ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು ಸೇರಿ 84 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ಚುನಾವಣಾ ಆಯೋಗ ಅಧಿಕೃತವಾಗಿ ಘೋಷಿಸಿದೆ. ಮುಖ್ಯ ಚುನಾವಣಾಧಿಕಾರಿಯಾಗಿದ್ದ ವಕೀಲ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಅವರು ಅಧ್ಯಕ್ಷ ಹಾಗೂ ಇತರ ಪದಾಧಿಕಾರಿಗಳ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪ ಚುನಾವಣಾಧಿಕಾರಿ ವಕೀಲ ನವೀನ್ ಶೆಟ್ಟಿ ಹಾಗೂ ಚುನಾವಣಾಧಿಕಾರಿ ಸದಾಶಿವ ಶೆಟ್ಟಿಯವರು ಉಪಸ್ಥಿತರಿದ್ದರು.

Read More

ಉಳೆಪಾಡಿಯಲ್ಲಿ ಮಹೇಶ್ ಶೆಟ್ಟಿ ತೆಳ್ಳಾರ್, ಗಿರೀಶ್ ಶೆಟ್ಟಿ ತೆಳ್ಳಾರ್, ಸುದೇಶ್ ಶೆಟ್ಟಿ ತೆಳ್ಳಾರ್, ರಾಜೇಶ್ ಶೆಟ್ಟಿ ತೆಳ್ಳಾರ್, ಭಾಸ್ಕರ ಶೆಟ್ಟಿ ಕುಡ್ಡುಲಾಜೆ ತೆಳ್ಳಾರ್, ದೇಜಪ್ಪ ಶೆಟ್ಟಿ ಮನೆ ಕುಟುಂಬಸ್ಥರು ಉಳೆಪಾಡಿಯಲ್ಲಿ ನಿರ್ಮಿಸಿದ ನೂತನ ಧರ್ಮಚಾವಡಿಯಲ್ಲಿ ಧರ್ಮದೈವಗಳ ಪುನರ್ ಪ್ರತಿಷ್ಠೆ, ಕಲಶಾಭಿಷೇಕ ಹಾಗೂ ನೇಮೋತ್ಸವ ಮೇ 07 ರಿಂದ 8 ರವರೆಗೆ ನಡೆಯಿತು. ಧರ್ಮಚಾವಡಿಯಲ್ಲಿ ಧರ್ಮದೈವಗಳ ಪುನರ್ ಪ್ರತಿಷ್ಠೆ ಕಲಶಾಭಿಷೇಕ ಹಾಗೂ ನೇಮೋತ್ಸವ ಸಂದರ್ಭದಲ್ಲಿ ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ, ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಪೂಜ್ಯ ಮಾಣಿಲ ಶ್ರೀ ಮೋಹನದಾಸ್ ಪರಮಹಂಸ ಸ್ವಾಮೀಜಿ ಹಾಗೂ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ರಾಮದಾಸ್ ರವರು ಉಪಸ್ಥಿತರಿದ್ದು ಕುಟುಂಬಸ್ಥರಿಗೆ ಆಶೀರ್ವಾದ ನೀಡಿದರು. ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಬಂಟರ ಸಂಘ ಮುಂಬಯಿಯ ಗೌರವ…

Read More

ಉಡುಪಿ ಜಿಲ್ಲೆಯ ಇನ್ನಂಜೆ ಫ್ರೆಂಡ್ಸ್ ಇವರ ಆಶ್ರಯದಲ್ಲಿ ಹಳೆ ವಿದ್ಯಾರ್ಥಿ ಹಾಗೂ ದಾನಿಗಳ ಸಹಕಾರದಲ್ಲಿ ಇನ್ನಂಜೆ ಕನ್ನಡ ಮಾಧ್ಯಮ ಶಾಲೆಯ ಉಚಿತ ವಿದ್ಯಾಭ್ಯಾಸದ ಸಹಾಯಾರ್ಥವಾಗಿ ಇನ್ನಂಜೆ ಮೈದಾನದಲ್ಲಿ ಇನ್ನಂಜೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ ಆಯೋಜಿಸಿ, ಅದರಲ್ಲಿ ಉಳಿದ ಮೊತ್ತ 1,67,875 ರೂಪಾಯಿಯನ್ನು ಇನ್ನಂಜೆ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ನಟರಾಜ್ ಉಪಾಧ್ಯಾಯ, ದೈಹಿಕ ಶಿಕ್ಷಕರಾದ ನವೀನ್ ಶೆಟ್ಟಿ, ಅಧ್ಯಾಪಕಿಯಾದ ಶಶಿಕಲಾ ಆಚಾರ್ಯ ಇವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಇನ್ನಂಜೆ ಫ್ರೆಂಡ್ಸ್ ಇದರ ಸದಸ್ಯರುಗಳಾದ ದಿವೇಶ್ ಶೆಟ್ಟಿ, ರಾಜೇಶ್ ಕುಲಾಲ್, ಅನಿರುದ್ಧ, ಪ್ರಶಾಂತ್ ಆಚಾರ್ಯ, ವಿಕೇಶ್ ಶೆಟ್ಟಿ, ನಾಗೇಶ್ ಆಚಾರ್ಯ, ಪ್ರಥಮ್ ಆಚಾರ್ಯ, ನಿತೇಶ್ ಆಚಾರ್ಯ, ಸಚಿನ್ ಅಮೀನ್, ಪವನ್ ಕುಲಾಲ್, ಸಂದೀಪ್ ಅಜೀಲಕಾಡು, ಸಂದೀಪ್ ಆಚಾರ್ಯ, ಗಣೇಶ್ ಆಚಾರ್ಯ, ರವಿ ಪ್ರಸಾದ್, ನೀಲೇಶ್ ಶೆಟ್ಟಿ, ಕೃಷ್ಣ ಶೆಟ್ಟಿ ಮಂಡೇಡಿ ಉಪಸ್ಥಿತರಿದ್ದರು. 2025-26 ರ ಸಾಲಿನ ಇನ್ನಂಜೆ ಶಾಲೆಯ 10ನೇ ತರಗತಿಯಲ್ಲಿ ಕನ್ನಡ ಮಾಧ್ಯಮ ಮತ್ತು ಆಂಗ್ಲ ಮಾಧ್ಯಮ ವಿಭಾಗಕ್ಕೆ ಶೇಕಡಾ…

Read More

ಪ್ರತಿಯೊಂದು ವೈಫಲ್ಯವೂ ಜೀವನದಲ್ಲಿ ಮಹತ್ವದ ಪಾಠವನ್ನು ಕಲಿಸಿ ವ್ಯಕ್ತಿಯನ್ನು ಯಶಸ್ಸಿಗೆ ಇನ್ನಷ್ಟು ಹತ್ತಿರಕ್ಕೆ ಕರೆದೊಯ್ಯಬಲ್ಲದು ಎಂದು ನಿವೃತ್ತ ಸೇನಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಅಂಕಿತಾ ಶ್ರೀವಾಸ್ತವ ಅಭಿಪ್ರಾಯಪಟ್ಟರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಶನಿವಾರ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್ ವತಿಯಿಂದ ಆಯೋಜಿಸಲಾದ ‘ಒಲಿವ್ ಗ್ರೀನ್ ಟು ಬ್ಯೂಟಿ ಕ್ವೀನ್ – ಎ ಜರ್ನಿ ವಿದಿನ್’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತೀಯ ಸೇನೆಯಲ್ಲಿ ಮಹಿಳಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಅನುಭವಗಳು, ಎದುರಿಸಿದ ಸವಾಲುಗಳು, ವೈಫಲ್ಯಗಳು ಹಾಗೂ ಸಾಧನೆಗಳನ್ನು ಹಂಚಿಕೊಂಡರು. ಸಂಪೂರ್ಣ ಪುರುಷ ಸೈನಿಕರಿಂದ ಕೂಡಿದ ಘಟಕದಲ್ಲಿ ಮಹಿಳಾ ಅಧಿಕಾರಿಯಾಗಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸುವುದು ಅತ್ಯಂತ ದೊಡ್ಡ ಸವಾಲಾಗಿತ್ತು. ಆದರೆ ಆ ಸವಾಲನ್ನು ಸ್ವೀಕರಿಸಿ ಜಯಿಸಿದ ಪರಿ ಸದಾ ಪ್ರೇರಣಾದಾಯಕ ಎಂದರು. ಯಶಸ್ಸು ಸಾಧಿಸಲು ಏಕಾಗ್ರತೆ, ದೃಢನಿಶ್ಚಯ ಮತ್ತು ಕ್ರಿಯಾಶೀಲತೆ ಅಗತ್ಯವೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಾರ್ಗಿಲ್ ಯುದ್ಧದ ಅವಧಿಯಲ್ಲಿ ಭಾರತ ಚೀನಾ ಗಡಿಭಾಗದಲ್ಲಿ ಸೇವೆ ಸಲ್ಲಿಸಿದ ಸಂದರ್ಭವನ್ನು ನೆನಪಿಸಿಕೊಂಡ ಅವರು,…

Read More

ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರು, ಸಮಾಜ ಸೇವಕರು, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರಾದ ಸುಗ್ಗಿ ಸುಧಾಕರ್ ಶೆಟ್ಟಿಯವರು 2026 ರ ಸಾಲಿನ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ’ ಗೌರವಕ್ಕೆ ಪಾತ್ರರಾಗಿದ್ದಾರೆ. ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು.

Read More

ಡಿ.ವಿ.ಜಿ ಅವರು “ನಗುವು ಸಹಜದ ಧರ್ಮ; ನಗಿಸುವುದು ಪರಧರ್ಮ” ಎಂದು ಹೇಳುವ ಮೂಲಕ, ಇತರರ ಮುಖದಲ್ಲಿ ನಗು ಮೂಡಿಸುವುದೇ ಅತ್ಯುತ್ತಮ ಸೇವೆ ಎಂದು ವರ್ಣಿಸಿದ್ದಾರೆ. ಈ ಮಾತು ‘ಸೇವೆಯೇ ಪರಮ ಧರ್ಮ’ ಎಂದು ನಂಬಿ, ಜನರ ಕಷ್ಟಗಳಿಗೆ ಸ್ಪಂದಿಸಿ, ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವ ಬಂಟರತ್ನ ಡಾ| ಆರ್ ಕೆ ಶೆಟ್ಟಿಯವರಿಗೆ ಸೂಕ್ತವೆನಿಸುತ್ತದೆ. ಇಸ್ಸಾರ್ ಫೈನಾನ್ಸಿಯಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕ ಡಾ| ಆರ್ ಕೆ ಶೆಟ್ಟಿಯವರು ಜೀವವಿಮಾ ಕ್ಷೇತ್ರದ ಸಲಹೆಗಾರರಾಗಿ ಮುಂಬಯಿ ನಗರ ಮಾತ್ರವಲ್ಲದೇ, ವಿಶ್ವದ ನಲವತ್ತೆರಡು ರಾಷ್ಟ್ರಗಳಲ್ಲಿ ಪರಿಚಿತರಿರುವ ಪ್ರಪ್ರಥಮ ಭಾರತೀಯ. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾದ ಬಂಟ ಜನಾಂಗದ ಹೆಮ್ಮೆಯ ಪುತ್ರ. ಘನ ಮಹಾರಾಷ್ಟ್ರ ಸರಕಾರದ ಮಾನ್ಯ ರಾಜ್ಯಪಾಲರಾದ ಶ್ರೀ ಭಗತ್ ಸಿಂಗ್ ಕಿಶ್ಯಾರಿ ಅವರು ರಾಜಭವನದಲ್ಲಿ ಆರ್ ಕೆ ಶೆಟ್ಟಿಯವರನ್ನು ಗೌರವಿಸಿದ್ದಾರೆ ಎಂದಾದರೆ ಅವರ ಘನತೆ ಪ್ರಸಿದ್ಧಿಗೆ ಬೇರೆ ಸಾಕ್ಷಿ ಬೇಕೆ ? ಮಾನ್ಯ ಆರ್ ಕೆ ಶೆಟ್ಟರು ವಿಶ್ವಮಟ್ಟದ ಪ್ರತಿಷ್ಠಿತ…

Read More