Author: admin

ಬಂಟರ ಸಂಘವು ಒಂದು ದೇವಸ್ಥಾನವಿದ್ದಂತೆ. ಸಂಘವು ಅದರ ಎಲ್ಲಾ ಸದಸ್ಯರಿಗೆ ಸೇರಿದ್ದು, ಬಂಟರ ಸಂಘದ ಎಲ್ಲಾ ಮೂರು ಶಿಕ್ಷಣ ಸಂಸ್ಥೆಯಿಂದಾಗಿ ಮುಂದೆ ಸಂಘಕ್ಕೆ ದೊಡ್ಡ ಮಟ್ಟದ ಆದಾಯವಾಗಲಿದ್ದು, ಸಂಘವು ಮುಂದೆ ಆರ್ಥಿಕವಾಗಿ ಮತ್ತಷ್ಟು ಗಟ್ಟಿಯಾಗಲಿದೆ. ಸಂಘದ ಬೊರಿವಲಿ ಶಿಕ್ಷಣ ಸಂಸ್ಥೆಗೆ ಜೋಗೇಶ್ವರಿ ದಹಿಸರ್ ಪರಿಸರದ ಸಮಾಜ ಬಾಂಧವರ ಮಹತ್ವದ ಕೊಡುಗೆಯಿದೆ ಎಂದು ಬಂಟರ ಸಂಘ ಮುಂಬಯಿಯ ಉಪಾಧ್ಯಕ್ಷ, ಬಾಬಾಸ್ ಗ್ರೂಪ್ ಆಫ್ ಕಂಪನೀಸ್ ಇದರ ಸಿ.ಎಂ.ಡಿ ಮಹೇಶ್ ಎಸ್. ಶೆಟ್ಟಿ ನುಡಿದರು. ಜನವರಿ 3 ರಂದು ಬೊರಿವಲಿ ಪಶ್ಚಿಮದ ನ್ಯೂ ಲಿಂಕ್ ರೋಡ್ ಪಕ್ಕದ ಎಕ್ಸರ್ ಕ್ಲಬ್ ಸಮೀಪವಿರುವ ಕೆ. ಡಿವೈನ್ ಲಾನ್ಸ್ ಎಂಡ್ ಕನ್ವೆನ್ಶನ್ ನ ಸಭಾಗೃಹದಲ್ಲಿ ಬೋಳ ನಂದಳಿಕೆ ‘ಶ್ರೀ ಮಾತಾ’ ಸುಬ್ಬಯ್ಯ ವಿ. ಶೆಟ್ಟಿ ಸ್ಮಾರಕ ವೇದಿಕೆಯಲ್ಲಿ, ಸಂಘದ ಜೋಗೇಶ್ವರಿ ದಹಿಸರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರೇಮನಾಥ್ ಶೆಟ್ಟಿ ಕೊಂಡಾಡಿಯವರ ನೇತೃತ್ವದಲ್ಲಿ ಜರಗಿದ ಪ್ರಾದೇಶಿಕ ಸಮಿತಿಯ ಹದಿನೆಂಟನೆಯ ವರ್ಷದ ವಾರ್ಷಿಕೋತ್ಸವ ಅಷ್ಟಾದಶ ಸಂಭ್ರಮ ಸಮಾರಂಭದ ಸಭಾ ಕಾರ್ಯಕ್ರಮದ…

Read More

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕುಂದೂರು ಇಲ್ಲಿ 28 ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ನೇತ್ರ ತಪಾಸಣಾ ಶಿಬಿರದಲ್ಲಿ ದೃಷ್ಟಿ ದೋಷವಿರುವ ಫಲಾನುಭವಿಗಳಿಗೆ ನೀಡಿದ ಕನ್ನಡಕಗಳು ಸದುಪಯೋಗವಾಗಲಿ, ನಿಮ್ಮ ಬಾಳಿಗೆ ಬೆಳಕನ್ನು ನೀಡಲಿ ಎಂದು ಶುಭ ಹಾರೈಸಿದರು. ಕುಕ್ಕುಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾರವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಶಿಕಲಾ, ಕ್ಲಬ್ಬಿನ ಕಾರ್ಯದರ್ಶಿ ಚೇತನ್ ನಾಯಕ್, ಕ್ಷಯ ರೋಗ ಮೇಲ್ವಿಚಾರಕ ಶಿವಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರೋಟರಿ ಸಮುದಾಯ ಸೇವಾ ಚೇರ್ಮನ್ ವಸಂತ್ ಎಂ, ಕೃಷ್ಣ ಶೆಟ್ಟಿ, ಉದಯ ಕಡಂಬ, ನಕ್ರೆ ಗ್ರಾಮ ಪಂಚಾಯತ್ ಸದಸ್ಯರು, ಆರೋಗ್ಯ ಇಲಾಖಾ ಸಿಬ್ಬಂದಿ ಉಪಸ್ಥಿತರಿದ್ದರು. ಆಶಾ ಕಾರ್ಯಕರ್ತೆ ಸುನೀತಾ ಪ್ರಾರ್ಥಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕುಮುದಾವತಿ ಸ್ವಾಗತಿಸಿ ನಿರೂಪಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ವೈದ್ಯಾಧಿಕಾರಿ…

Read More

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ರೋಡ್ ನಿವಾಸಿ ಸಂಪತ್ ಶೆಟ್ಟಿ ಅವರು ಭೂ ವ್ಯವಹಾರ, ನಿವೇಶನ ಕುರಿತ ಉದ್ಯಮದಲ್ಲಿ ತೊಡಗಿಸಿಕೊಂಡ ಪ್ರಾಮಾಣಿಕ ಸಾಮಾಜಿಕ ಕಾರ್ಯಕರ್ತ. ಮೂಲತಃ ಬಹು ಪ್ರತಿಷ್ಠಿತ ಪಂಜದ ಗುತ್ತು ಮನೆತನದವರು. ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಇತಿಹಾಸದಲ್ಲಿ ಪಂಜದ ಗುತ್ತು ಇಲ್ಲಿನ ಉಲ್ಲೇಖ ಇದೆ. ಬಪ್ಪನಾಡು ದುರ್ಗಾಪರಮೇಶ್ವರಿ ದೇವಿ ಉತ್ಸವ ಸಂದರ್ಭದಲ್ಲಿ ಇಲ್ಲಿನ ಹಿರಿಯರ ಉಪಸ್ಥಿತಿ ಇರಬೇಕು. ಪಂಜದ ಗುತ್ತಿಗೆ ಒಂದು ಗತ್ತಿನ ಗುತ್ತು ಮನೆತನದ ಪರಂಪರೆ ಇದೆ. ಈ ಮನೆತನಕ್ಕೆ ಸಂಬಂಧ ಪಟ್ಟ ಸಂಪತ್ ಅವರು ತನ್ನ ಶಿಕ್ಷಣವನ್ನು ಹುಟ್ಟೂರಿನಲ್ಲಿ ಮುಗಿಸಿ ಮುಂದೆ ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿ ಕ್ಯಾಂಟೀನ್ ವ್ಯವಹಾರ ಸೇರಿದಂತೆ ಅನೇಕ ವ್ಯಾಪಾರ ವಹಿವಾಟುಗಳನ್ನು ನಡೆಸಿಕೊಂಡು ಉದ್ಯಮ ಕ್ಷೇತ್ರದಲ್ಲಿ ತನ್ನ ಅನುಭವವನ್ನು ಹೆಚ್ಚಿಸಿಕೊಂಡರು. ಕೆಲವು ವರ್ಷಗಳಿಂದ ಮೀರಾರೋಡ್ ನಲ್ಲಿ ವಾಸ್ತವ್ಯ ಹಾಗೂ ವ್ಯವಹಾರ ಹೊಂದಿದ ಸಂಪತ್ ಶೆಟ್ಟಿ ಓರ್ವ ಉತ್ತಮ ನಡೆ ನುಡಿಯ ಸಂಘಟಕನಾಗಿ, ಉದಾರ ದಾನಿಯಾಗಿ ಉತ್ತಮ ಮಟ್ಟದ ಸಮಾಜ ಸೇವಕನಾಗಿ ಪರಿಚಯಿಸಿಕೊಂಡರು.…

Read More

ಸುಂದರ ಕೊಡಗಿನ ಮುಖ್ಯಪಟ್ಟಣ ಮಂಜಿನ ನಗರಿ ಮಡಿಕೇರಿಯ ಹೃದಯ ಭಾಗದಲ್ಲಿರುವ ಶ್ರೀ ಓಂಕಾರೇಶ್ವರ ದೇವಾಲಯದ ಐತಿಹಾಸಿಕ ಚಿತ್ರಕಥಾ ಪುಸ್ತಕವು ಜನವರಿ 5 ರಂದು ಸೋಮವಾರ ಪೂರ್ವಾಹ್ನ ಮಡಿಕೇರಿಯಲ್ಲಿರುವ ಶ್ರೀ ಓಂಕಾರೇಶ್ವರ ದೇವರ ಸನ್ನಿಧಾನದಲ್ಲಿ ಪೂಜಾ ವಿದಿ ವಿಧಾನಗಳೊಂದಿಗೆ ಲೋಕಾರ್ಪಣೆಗೊಂಡಿತು. ಶ್ರೀ ಓಂಕಾರೇಶ್ವರ ದೇವಾಸ್ಥಾನ ಸಮಿತಿಯ ಅಧ್ಯಕ್ಷರು ಶ್ರೀ ಅಪ್ಪನೆರವಂಡ ಚುಮ್ಮಿ ದೇವಯ್ಯನವರು ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಮೂಡಿ ಬಂದಿರುವ ಚಿತ್ರಕಥಾ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಸರ್ವರಿಗೂ ಶುಭವನ್ನು ಹಾರೈಸಿದರು. ಮಡಿಕೇರಿ ಸಿಟಿ ಮುನ್ಸಿಪಲ್ ಕಾರ್ಪೊರೇಶನ್ ಮಾಜಿ ಅಧ್ಯಕ್ಷರು, ಮಡಿಕೇರಿ ಓಂಕಾರೇಶ್ವರ ದೇವಸ್ಥಾನ ಸಮಿತಿಯ ಪೂರ್ವ ಅಧ್ಯಕ್ಷರು ಶ್ರೀ ಕೊಂಗಂಡ ಎಸ್. ದೇವಯ್ಯನವರು ಗೌರವ ಅತಿಥಿಗಳಾಗಿ ಪಾಲ್ಗೊಂಡು ಪ್ರಥಮ ಕೃತಿಯನ್ನು ಸ್ವೀಕರಿಸಿದರು. ೧೬ನೇ ಶತಮಾನದಲ್ಲಿ ಕೊಡಗನ್ನು ಆಳಿರುವ ಹಾಲೇರಿ ವಂಶದ ರಾಜ ಮನೆತನದ ಶ್ರೀ ಲಿಂಗರಾಜೇಂದ್ರ ಒಡೆಯರ್-||, 1820ರಲ್ಲಿ ನಿರ್ಮಿಸಿರುವ ಶ್ರೀ ಓಂಕಾರೇಶ್ವರ ದೇವಾಲಯದ ಐತಿಹಾಸಿಕ ಚಿತ್ರಕಥೆ ಕೊಡಗಿನ ಚಿತ್ರ ಶಿಲ್ಪ ಕಲಾವಿದ ಬಿ. ಕೆ. ಗಣೇಶ್ ರೈಯವರ ಪರಿಕಲ್ಪನೆಯಲ್ಲಿ ಡಿಜಿಟಲ್ ಗ್ರಾಫಿಕ್ಸ್…

Read More

ಪುತ್ತೂರು ತಾಲೂಕು ಯುವ ಬಂಟರ ವಿಭಾಗದ ನೂತನ ಅಧ್ಯಕ್ಷರನ್ನಾಗಿ ಶ್ರೀ ಭಾಗ್ಯೇಶ್ ರೈ ಮತ್ತು 2025-26 ಕ್ರಿಕೆಟ್ ಟೂರ್ನಮೆಂಟ್ ಸಂಚಾಲಕರನ್ನಾಗಿ ಶ್ರೀ ಕಾರ್ತಿಕ್ ರೈ ಬೆಳಿಯೂರು ಕಟ್ಟೆ ಅವರನ್ನು ತಾಲೂಕು ಬಂಟರ ಸಂಘದ ಶಿಫಾರಸ್ಸಿನಂತೆ ಅಧ್ಯಕ್ಷರಾದ ಶ್ರೀ ಕಾವು ಹೇಮನಾಥ ಶೆಟ್ಟಿಯವರು ನೇಮಕ ಮಾಡಿರುತ್ತಾರೆ. ಕಳೆದ ಎರಡು ವರುಷಗಳಿಂದ ಯುವ ಬಂಟರ ಸಂಘವನ್ನು ಗ್ರಾಮ ಮಟ್ಟದಲ್ಲಿ ಕಟ್ಟಿ ಬೆಳೆಸಿ,ಯುವ ಸಮುದಾಯಕ್ಕೆ ಪ್ರೇರಣಾ ಶಕ್ತಿಯು ಅದೇ ರೀತಿ ಸಂಘದ ಬೆಳವಣಿಗೆ ಅದ್ಭುತ ಕೂಡುಗೆ ನೀಡಿದ ಯುವ ಉದ್ಯಮಿ ಶ್ರೀ ಹರ್ಷ ಕುಮಾರ್ ರೈ ಮಾಡವು ಇವರಿಂದ ತೆರವಾದ ಯುವ ಬಂಟರ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಮುಂದಿನ ಅವಧಿಗೆ ವಿದ್ಯಾಮಾತಾ ಅಕಾಡಮಿಯ ಮೂಲಕ ಯುವ ಜನರನ್ನು ಉದ್ಯೋಗಿಗಳನ್ನಾಗಿ ಮಾಡುವ 50 ವರ್ಷ ಹಳೆಯ ಜೆಸಿಐಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವಿ ಯುವ ನಾಯಕ ಭಾಗ್ಯೇಶ್ ರೈಯವರನ್ನು ನೇಮಕಗೊಳಿಸಲಾಗಿದೆ. ಅನೇಕ ವರುಷಗಳಿಂದ ನಡೆಯುವ ಪ್ರತಿಷ್ಠಿತ…

Read More

ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇವರ ಸಹಯೋಗದಲ್ಲಿ ಬಂಟರ ಕ್ರೀಡೋತ್ಸವ ಜನವರಿ 11 ರಂದು ಭಾನುವಾರ ಸುರತ್ಕಲ್ ಗೋವಿಂದ ದಾಸ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 8.30 ಕ್ಕೆ ನಡೆಯುವ ಬಂಟರ ಕ್ರೀಡೋತ್ಸವ ಕಾರ್ಯಕ್ರಮವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಸಂಚಾಲಕರಾದ ವಸಂತ ಶೆಟ್ಟಿ ಉದ್ಘಾಟಿಸಲಿದ್ದಾರೆ‌. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಬಾಳ ಜಗನ್ನಾಥ ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಕ್ಕಾರು ಬಂಟರ ಸಂಘದ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ಎಕ್ಕಾರು, ಉದ್ಯಮಿ ಹರೀಶ್ ಶೆಟ್ಟಿ ಪೆರ್ಮುದೆ, ಮಂಗಳೂರು ಯಥಾಥ್೯ ಸೋಶಿಯಲ್ ನ ಈಶ್ವರ್ ಪ್ರಸಾದ್ ಶೆಟ್ಟಿ ಭಾಗವಹಿಸಲಿದ್ದಾರೆ. ಸಂಘದ ಸ್ಥಾಪಕಾಧ್ಯಕ್ಷ ರೋಹಿತಾಕ್ಷ ರೈ ಕುಳಾಯಿಗುತ್ತು ಉಪಸ್ಥಿತರಿರುವರು. ಮಧ್ಯಾಹ್ನ 12 ಗಂಟೆಗೆ ನಡೆಯುವ ಅಭಿನಂದನಾ ಸಮಾರಂಭದಲ್ಲಿ 2025 ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ…

Read More

ಈ ನೆಲದ ಅಸ್ಮಿತೆ ಸನಾತನ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕುತ್ತಿರುವವರು ಕರಾವಳಿಗರು. ಇಲ್ಲಿ ಕಲೆ ಮತ್ತು ಸಂಸ್ಕೃತಿ ದೊಡ್ಡ ಪಾತ್ರವನ್ನು ವಹಿಸಿಕೊಂಡಿದೆ. ಈ ನೆಲದ ಕಲೆ ಮತ್ತು ಸಂಸ್ಜೃತಿಯನ್ನು ಉಳಿಸುವ ಕೆಲಸ ಯಕ್ಷಗಾನ ಮಾಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದರು. ಅಡ್ಯಾರ್ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕಗಳ ಸಹಯೋಗದೊಂದಿಗೆ ನಡೆದ ಯಕ್ಷಧ್ರುವ ಯಕ್ಷ ಶಿಕ್ಷಣ ಯೋಜನೆಯ ವಿದ್ಯಾರ್ಥಿಗಳ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025 -26 ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನದ ಮೂಲಕ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದೇಶ ಕಟ್ಟುವ ರಾಷ್ಟ್ರೀಯ ನಿರ್ಮಾಣದ ಕೆಲಸ ಮಾಡುತ್ತಿದೆ. ಯಕ್ಷಗಾನಕ್ಕೆ ದೀರ್ಘಕಾಲಿಕವಾದ ಇತಿಹಾಸ ಇದೆ. ಇದು ಹೀಗೆಯೆ ಮುಂದುವರಿಯಲಿ ಎಂದವರು ತಿಳಿಸಿದರು. ಯಕ್ಷಗಾನ ಶ್ರೇಷ್ಠಕಲೆ. ವಿಶ್ವಮಟ್ಟದಲ್ಲಿ ಬೆಳೆಯುತ್ತಿದೆ. ದೇಶ ಉಳಿಯಬೇಕಾದರೆ ನಮ್ಮ ಸಂಸ್ಕೃತಿ ಬೆಳೆಯಬೇಕು, ಉಳಿಯಬೇಕು. ಶಾಲಾ ಕಾಲೇಜುಗಳ ಪ್ರೋತ್ಸಾಹ ಮತ್ತು ಪೋಷಕರ ಬೆಂಬಲದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಾಯಿತು ಎಂದು…

Read More

ದೇಶದ ವಿವಿಧ ಭಾಷಿಕ ಸಮುದಾಯಗಳಿಗೆ ಹೋಲಿಸಿದರೆ ಕನ್ನಡ ಭಾಷಿಕ ಸಮುದಾಯದಲ್ಲಿ ಔದ್ಯಮಿಕ ಮನಸ್ಸುಗಳು ಕಡಿಮೆ ಎಂಬ ಮಾತು ಇದೆ. ಒಂದು ಹಂತದ ಮಟ್ಟಿಗೆ ಇದು ನಿಜವೂ ಹೌದು. ಆದರೆ, ಅಚ್ಚ ಕನ್ನಡದ ಪುಟ್ಟ ಹಳ್ಳಿಯೊಂದರಲ್ಲಿ ಜನಿಸಿ ನಾಡಿನ ದೊಡ್ಡ ಉದ್ಯಮಿಯಾಗಿ ಬೆಳೆದು ನಿಂತ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರು ರಾಮ ನಾಗಪ್ಪ ಶೆಟ್ಟಿ. ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರ ಆರ್ ಎನ್ ಶೆಟ್ಟಿ ಅವರ ಹುಟ್ಟೂರು. ಇಂದು ಅದು ನಾಡಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ ಎಂದಾದರೆ ಅದಕ್ಕೆ ಮುಖ್ಯ ಕಾರಣ ಆರ್ ಎನ್ ಶೆಟ್ಟಿ ಅವರ ಕರ್ತೃತ್ವ ಶಕ್ತಿ. ಆರ್‌.ಎನ್‌. ಶೆಟ್ಟಿ ಸಮೂಹದ ಮೂಲಕ ಆರ್ ಎನ್ ಶೆಟ್ಟಿ ಅವರು ಉದ್ಯೋಗವನ್ನೂ ನೀಡಿದರು. ಆ ಸಮೂಹದ ಮೂಲಕ ದುಡಿದ ಹಣವನ್ನು ಸಮಾಜಕ್ಕೆ ದಾನದ ರೂಪದಲ್ಲಿಯೂ ಕೊಟ್ಟರು. ಕನ್ನಡ ನಾಡಿನಲ್ಲಿ ಉದ್ಯಮಿಯಾಗಿ, ಉದ್ಯೋಗಶೀಲ ವ್ಯಕ್ತಿಯಾಗಿ, ಉದ್ಯೋಗದಾತರಾಗಿ, ಉದ್ಯೋಗಾರ್ಹತೆ ನೀಡಬಲ್ಲ ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುವವರಾಗಿ, ವಾಸ್ತುಶಿಲ್ಪಿಯಾಗಿ ದೊಡ್ಡ ಹೆಸರು ಮಾಡಿದವರು ಆರ್ ಎನ್…

Read More

ಕ್ರೀಯಾಶೀಲತೆ, ಸಮಯ ಪ್ರಜ್ಞೆ ಮತ್ತು ನಿಖರತೆಗೆ ಮತ್ತೊಂದು ನಾಮವೇ ಪುತ್ತಿಗೆ ಗುತ್ತು ಐಕಳ ಹಿರಿಮನೆ ಸುಧಾಕರ್ ಶೆಟ್ಟಿ. ಹಿರಿಮೆ–ಗರಿಮೆಯ ಗುತ್ತು ಮನೆತನದಲ್ಲಿ ಹುಟ್ಟಿ ಬೆಳೆದ ಅವರ ಮುಖದಲ್ಲಿ ಗಂಭೀರತೆಯ ರಾಜಕಳೆಯಿದ್ದರೂ ಅವರ ಮನಸ್ಸು ಹಸಿರಂತಾದದ್ದು, ಮಾತು ಮತ್ತು ನಡತೆ ಎರಡರಲ್ಲಿಯೂ ಏಕತೆ ಮತ್ತು ಸರಳತೆ. ಸಹೃದಯತೆಯ ಸಾಕಾರ ಮೂರ್ತಿಯಾದ ಶ್ರೇಯಸ್ಸಿಗೆ ‘ಅಣ್ಣಾ’, ‘ಮಲ್ಲಶೆಟ್ಟಿ’ ಎಂಬ ಉಪನಾಮಗಳಿಂದ ಚಿರಪರಿಚಿತರಾದವರು. ಬಹು ಅಪರೂಪದ ಧೀಮಂತ ವ್ಯಕ್ತಿತ್ವವನ್ನು ಪಡೆದ ಪೌರ್ಣಿಮೆಯ ಚಂದ್ರನಂತೆ ಸೌಹಾರ್ದತೆಯನ್ನು ಲೋಕದೆಲ್ಲೆಡೆ ಪಸರಿಸಿದ ಊರು ಕಿನ್ನಿಗೊಳಿಯ ಐಕಳ. ಇವರಿಗೆ ಜನ್ಮ ನೀಡಿದ ಪುಣ್ಯಾತ್ಮರು ಮಂಡೂರು ರೆಂಜೆಗುತ್ತು ಶಾಮರಾಯ ಶೆಟ್ಟಿ ಮತ್ತು ಐಕಳ ಹಿರಿಮನೆ ಕಮಲ ಶೆಟ್ಟಿ ದಂಪತಿಗಳು. ಮೂಲತಃ ಕೃಷಿ ಕುಟುಂಬದಿಂದ ಬಂದ ಶ್ರೀಯುತರು ಮಣ್ಣಿನ ಸೆಳೆತ, ತುಳುವ ಸಂಸ್ಕೃತಿಯ ಅಪಾರ ತಳಹದಿ ಇದ್ದರೂ ಬಾಲ್ಯದಿಂದಲೇ ವಿದ್ಯಾಭ್ಯಾಸ ಹಾಗೂ ಕ್ರೀಡೆ ಈ ಎರಡೂ ಕ್ಷೇತ್ರಗಳಲ್ಲಿ ಅಗ್ರಪಂಕ್ತಿಯಲ್ಲೇ ಮುಂದುವರೆದರು. ಸಾಂಸ್ಕೃತಿಕ, ಸಾಹಿತ್ಯ ಮತ್ತು ವಿಜ್ಞಾನ ಲೋಕ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಎಲೆಕ್ಟ್ರಿಕಲ್…

Read More

ರಾಜ್ಯದಾದ್ಯಂತ ಡ್ರಗ್ಸ್ ಬಗ್ಗೆ ಜನಜಾಗೃತಿ ಮೂಡಿಸುತ್ತಿರುವ ಡ್ರಗ್ಸ್ ಮುಕ್ತ ಕರ್ನಾಟಕ ಜನಜಾಗೃತಿ ರಥ ಯಾತ್ರೆಯು ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಕಾರ್ಕಳ ಇಲ್ಲಿಗೆ ಆಗಮಿಸಿದಾಗ ರೋಟರಿ ಸಂಸ್ಥೆ ಹಾಗೂ ಶಾಲಾ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಪರಿವರ್ತನಾ ಟ್ರಸ್ಟ್ ನ ಸಂಚಾಲಕ ಸುದರ್ಶನ್, ಡ್ರಗ್ಸ್ ಮಾಫಿಯಾ ಹೇಗೆ ಯುವ ಜನತೆಯನ್ನು ಆಕರ್ಷಿಸುವಂತೆ ಮಾಡಿ ಆ ಮೂಲಕ ಇಡೀ ಸಮಾಜ ವ್ಯವಸ್ಥೆಯನ್ನು ದುರ್ಬಲಗೊಳಿಸಿ ದೇಶವನ್ನೇ ಬಲಿಕೊಡುತ್ತಿರುವ ಈ ಡ್ರಗ್ಸ್ ಮಾಫಿಯಾದಿಂದ ಯುವ ಜನತೆ ದೂರವಿರುವಂತೆ ಕರೆಕೊಟ್ಟರು. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರಸನ್ನ ರವರು ಮಾತನಾಡಿ, ವಿದ್ಯಾರ್ಥಿಗಳು ಈ ಒಂದು ದುಶ್ಚಟಕ್ಕೆ ಬಲಿಯಾಗದೆ ಉತ್ತಮ ಜೀವನ ನಡೆಸಿ ತಮ್ಮನ್ನು ನಂಬಿದ ತಂದೆ ತಾಯಿಗಳ ನಿರೀಕ್ಷೆಯನ್ನು ಸಾಕಾರಗೊಳಿಸುವಂತೆ ಕರೆ ನೀಡಿ ಇದನ್ನು ಮಟ್ಟ ಹಾಕುವಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು ಕೈಜೋಡಿಸಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಕಾರ್ಕಳ ಹಾಗೂ ರೋಟರಿ ಕ್ಲಬ್ ಕಾರ್ಕಳ…

Read More