Author: admin

ಮೇ 2026ರಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಾಣಿಜ್ಯ ವಿಭಾಗದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಸುಧೀಕ್ಷಾ ಎಸ್ ಶೆಟ್ಟಿ (290) ಉತ್ತೀರ್ಣರಾಗಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಸಿಎ ಫೌಂಡೇಶನ್‌ ನಿಂದ ಸಿಎ ಇಂಟರ್‌ಮೀಡಿಯೇಟ್ ಹಾಗೂ ಸಿಎ ಫೈನಲ್‌ವರೆಗೆ ನಿರಂತರ ಮತ್ತು ಸಮಗ್ರ ತರಬೇತಿ ವ್ಯವಸ್ಥೆ ರೂಪಿಸಲಾಗಿದೆ. ದೇಶದ ವಿವಿಧ ಭಾಗಗಳ ಅನುಭವಿ ಹಾಗೂ ಪರಿಣತ ಚಾರ್ಟರ್ಡ್ ಅಕೌಂಟೆಂಟ್‌ಗಳು ಮತ್ತು ವಿಷಯ ತಜ್ಞರಿಂದ ಗುಣಮಟ್ಟದ ಬೋಧನೆ, ನಿಯಮಿತ ಮೌಲ್ಯಮಾಪನ, ವೈಯಕ್ತಿಕ ಮಾರ್ಗದರ್ಶನ ಹಾಗೂ ಪರಿಕಲ್ಪನಾ ಆಧಾರಿತ ಕಲಿಕೆಗೆ ಆದ್ಯತೆ ನೀಡಲಾಗುತ್ತಿದೆ. ಈ ಶೈಕ್ಷಣಿಕ ಮಾದರಿಯೇ ವಿದ್ಯಾರ್ಥಿಗಳ ನಿರಂತರ ಯಶಸ್ಸಿಗೆ ಪ್ರಮುಖ ಕಾರಣವಾಗಿದೆ ಎಂದು ಡಾ. ಎಂ ಮೋಹನ ಆಳ್ವ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ಪದವಿ ಹಾಗೂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು, ವಾಣಿಜ್ಯ ವಿಭಾಗದ ಡೀನ್ ಅಭಿನಂದಿಸಿದ್ದಾರೆ.

Read More

2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ವತಿಯಿಂದ ಪುತ್ತೂರು ವಲಯದ ಸಂಚಾಲಕರಾಗಿ ಮನೋಹರ ರೈ ಅವರನ್ನು ನೇಮಕ ಮಾಡಲಾಗಿದೆ. ಮನೋಹರ ರೈ ಅವರು ಪ್ರಸ್ತುತ ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಮಂಗಳೂರು ಇಲ್ಲಿ ಸೇವೆ ಸಲ್ಲಿಸುತ್ತಿದ್ದು, ಸಾಮಾಜಿಕ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರ ಸೇವಾ ಮನೋಭಾವ, ಸಂಘಟನಾ ಸಾಮರ್ಥ್ಯ ಹಾಗೂ ತುಳು ಭಾಷೆ, ಸಂಸ್ಕೃತಿ ಮತ್ತು ತಾಯ್ನಾಡಿನ ಮೇಲಿನ ಬದ್ಧತೆಯನ್ನು ಪರಿಗಣಿಸಿ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಅಂತರರಾಷ್ಟ್ರೀಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಕೇಂದ್ರೀಯ ಅಧ್ಯಕ್ಷ ಡಾ. ಅವಿನ್ ಬಿ.ಆರ್ ಆಳ್ವ, ಪ್ರಧಾನ ಕಾರ್ಯದರ್ಶಿ ಅರವಿಂದ ಬೆಳ್ಚಡ ಹಾಗೂ ಪ್ರಧಾನ ಸಂಚಾಲಕ ವಿಶ್ವನಾಥ ಆಚಾರ್ಯ ಪೆರ್ಡೂರು ಅವರು ಪುತ್ತೂರು ವಲಯ ಸಂಚಾಲಕರಾಗಿ ನೇಮಕಗೊಳಿಸಿದ್ದಾರೆ. 2028ರ ಶತಮಾನೋತ್ಸವದ ಅಂಗವಾಗಿ ತುಳು ಭಾಷೆ, ಸಂಸ್ಕೃತಿ ಮತ್ತು ಪರಂಪರೆಯ ಸಂರಕ್ಷಣೆ, ತುಳುವ ನಾಗರಿಕತೆಯ ವೈಭವವನ್ನು ಮರು ಸ್ಥಾಪಿಸುವುದು, ತುಳು ಭಾಷೆಗೆ ಸಂವಿಧಾನಾತ್ಮಕ ಮಾನ್ಯತೆ ದೊರಕಿಸುವ…

Read More

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಉದ್ಯಮಿ ಕೆದೂರು ಸದಾನಂದ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್ ನೇಮಕಗೊಳಿಸಿ ಆದೇಶಿದ್ದಾರೆ. ಕೆದೂರು ಸದಾನಂದ ಶೆಟ್ಟಿಯವರು ಕುಂದಾಪುರ ತಾಲೂಕು ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Read More

ಯು.ಎ.ಇ.ಯಲ್ಲಿ ಕಳೆದ 23 ವರ್ಷಗಳಿಂದ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸಮಾಜಮುಖಿ ಸೇವೆಗಳನ್ನು ನಡೆಸುತ್ತಾ ಅನಿವಾಸಿ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿರುವ ಕರ್ನಾಟಕ ಸಂಘ ಶಾರ್ಜಾ ಇದರ 2026 -28ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದುಬೈ ಗ್ರ್ಯಾಂಡ್ ಹೋಟೆಲ್ ಬೈ ಫಾರ್ಚೂನ್ ನಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡು, ಸಂಘದ ಪಥ ಹಾಗೂ ಸಾಧನೆಗಳ ಕುರಿತು ಸತೀಶ್ ಪೂಜಾರಿ ಅವರು ಮಾಹಿತಿ ನೀಡಿದರು. ಬಳಿಕ ಸಂಘದ ಬೈಲಾ ಕುರಿತು ಗಣೇಶ್ ರೈ ಅವರು ಸದಸ್ಯರಿಗೆ ವಿವರಿಸಿದರು. ನಂತರ ನೂತನ ಕಾರ್ಯಕಾರಿ ಸಮಿತಿಯ ಸದಸ್ಯರ ಪರಿಚಯ ನಡೆಯಿತು. ಕರ್ನಾಟಕ ಸಂಘ ಶಾರ್ಜಾದ ಪೂರ್ವಾಧ್ಯಕ್ಷ ಗಣೇಶ್ ರೈಯವರ ನೇತೃತ್ವದಲ್ಲಿ ನೂತನ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳಿಗೆ ಅಧಿಕೃತವಾಗಿ ಪದಗ್ರಹಣ ಪ್ರಮಾಣ ವಚನ ಬೋಧಿಸಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ರಂಗಸಾರಥಿ ವಿಶ್ವನಾಥ್ ಶೆಟ್ಟಿ ಅವರು ಪದಗ್ರಹಣ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿ, ಸಂಘದ ಅಭಿವೃದ್ಧಿ, ಕನ್ನಡ ಭಾಷೆ ಮತ್ತು…

Read More

ಮೇ 2026ರಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಾಣಿಜ್ಯ ವಿಭಾಗದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ನಿಹಾರಿಕಾ ಜೆ ಶೆಟ್ಟಿ (231) ಉತ್ತೀರ್ಣರಾಗಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಸಿಎ ಫೌಂಡೇಶನ್‌ ನಿಂದ ಸಿಎ ಇಂಟರ್‌ಮೀಡಿಯೇಟ್ ಹಾಗೂ ಸಿಎ ಫೈನಲ್‌ವರೆಗೆ ನಿರಂತರ ಮತ್ತು ಸಮಗ್ರ ತರಬೇತಿ ವ್ಯವಸ್ಥೆ ರೂಪಿಸಲಾಗಿದೆ. ದೇಶದ ವಿವಿಧ ಭಾಗಗಳ ಅನುಭವಿ ಹಾಗೂ ಪರಿಣತ ಚಾರ್ಟರ್ಡ್ ಅಕೌಂಟೆಂಟ್‌ಗಳು ಮತ್ತು ವಿಷಯ ತಜ್ಞರಿಂದ ಗುಣಮಟ್ಟದ ಬೋಧನೆ, ನಿಯಮಿತ ಮೌಲ್ಯಮಾಪನ, ವೈಯಕ್ತಿಕ ಮಾರ್ಗದರ್ಶನ ಹಾಗೂ ಪರಿಕಲ್ಪನಾ ಆಧಾರಿತ ಕಲಿಕೆಗೆ ಆದ್ಯತೆ ನೀಡಲಾಗುತ್ತಿದೆ. ಈ ಶೈಕ್ಷಣಿಕ ಮಾದರಿಯೇ ವಿದ್ಯಾರ್ಥಿಗಳ ನಿರಂತರ ಯಶಸ್ಸಿಗೆ ಪ್ರಮುಖ ಕಾರಣವಾಗಿದೆ ಎಂದು ಡಾ. ಎಂ ಮೋಹನ ಆಳ್ವ ತಿಳಿಸಿದ್ದಾರೆ.

Read More

ಭಕ್ತಿಯ ಶಿಖರ, ನಂಬಿಕೆಯ ನೆಲೆ, ಶಕ್ತಿಯ ಸಂಕೇತ, ಸಂಸ್ಕೃತಿಯ ಸಿರಿತನ ಹಾಗೂ ಕರಾವಳಿ ಕರ್ನಾಟಕದ ಆಧ್ಯಾತ್ಮಿಕ ವೈಭವವನ್ನು ಸಾರುವ ಪವಿತ್ರ ಕ್ಷೇತ್ರವೇ ಶ್ರೀ ಕ್ಷೇತ್ರ ಮಂದಾರ್ತಿ. ಮಂದಾರ್ತಿ ಕೇವಲ ಒಂದು ದೇವಾಲಯವಲ್ಲ. ಅದು ಭಕ್ತಿಯ ಅನುಭವ, ಶಕ್ತಿಯ ಆರಾಧನೆ, ಸಂಸ್ಕೃತಿಯ ಸಂರಕ್ಷಣೆ ಮತ್ತು ಕರಾವಳಿ ಜನರ ಜೀವನದ ಅವಿಭಾಜ್ಯ ಅಂಗವಾಗಿ ಶತಮಾನಗಳಿಂದ ಬೆಳಗುತ್ತಿರುವ ದಿವ್ಯ ಶಕ್ತಿಪೀಠವಾಗಿದೆ. ಇಂತಹ ಶ್ರೀ ದುರ್ಗೆಯ ಪದತಲದಲ್ಲಿ ಜನಿಸಿ ಬೆಳೆದ ಅಮರನಾಥ ಶೆಟ್ಟಿ ಹೆಗ್ಗುಂಜೆಯವರು 2026 –29ನೇ ಸಾಲಿನ ಅವಧಿಗೆ ಬೆಂಗಳೂರು ಬಂಟರ ಸಂಘದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಲು ಅಣಿಯಾಗಿದ್ದಾರೆ. ಅಮರನಾಥ ಶೆಟ್ಟಿಯವರು 2014 -16 ಹಾಗೂ 2016 -18 ರವರೆಗೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಸಮಾಜಸೇವಾ ಸಮಿತಿಯ ಕಾರ್ಯಾಧ್ಯಕ್ಷರಾಗಿ ವಿದ್ಯಾರ್ಥಿವೇತನ ಸಮಿತಿಯ ಗೌರವ ಸಲಹೆಗಾರರಾಗಿ ಸೇವೆ ಸಲ್ಲಿಸಿ, 2022 ರಿಂದ 2024 ರವರೆಗೆ ಖಜಾಂಚಿಯಾಗಿ ಅತ್ಯಂತ ಪ್ರಾಮಾಣಿಕತೆ, ಪಾರದರ್ಶಕತೆ ಹಾಗೂ ನಿಷ್ಪಕ್ಷಪಾತತೆಯಿಂದ ಕಾರ್ಯ ನಿರ್ವಹಿಸಿ ಸದಸ್ಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮ್ಮ ಅಧಿಕಾರದ ಅವಧಿಯಲ್ಲಿ ಬಂಟರ…

Read More

ಹೊಸದಿಲ್ಲಿಯ ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಆದಿತ್ಯ ಎಚ್ ಪೆರ್ಗಡೆ ಅವರು ಒಟ್ಟು 406 ಅಂಕಗಳನ್ನು ಗಳಿಸಿ ಅಖಿಲ ಭಾರತ ಮಟ್ಟದಲ್ಲಿ 47 ನೇ ರ‍್ಯಾಂಕ್ ಪಡೆದಿದ್ದಾರೆ. ಬಂಟ್ವಾಳ ಪರಂಗಿಪೇಟೆ ಮೇರೆಮಜಲು ಎಂಬಲ್ಲಿ ಅಸಹಾಯಕ, ಅನಾಥ, ನಿರ್ಲಕ್ಷಿತ ಮಂದಿಯ ಸೇವೆಯಲ್ಲಿ, ‘ಶ್ರೀ ಮಾತಾ ಲಕ್ಷಣಿ ಆಶ್ರಯ ಧಾಮ’ ಸಂಸ್ಥೆಯ ಮೂಲಕ ಸಮಾಜಮುಖಿಯಾಗಿ ಪ್ರಸ್ತುತ ಪಡಿಸಿಕೊಂಡಿರುವ ಕಾಂತಾಡಿಗುತ್ತು ಹರೀಶ್ ಪೆರ್ಗಡೆ ಮತ್ತು ಶಶಿಕಲಾ ಪೆರ್ಗಡೆ ದಂಪತಿಯ ಪುತ್ರರಾದ ಇವರು ಪ್ರತಿಭಾವಂತ ಸಾಧಕ. ಸಿಎ ಫೌಂಡೇಶನ್ ಮತ್ತು ಸಿಎ ಇಂಟರ್ ಮೀಡಿಯೆಟ್ ತರಬೇತಿ ಜೊತೆಗೆ ಪದವಿ ಶಿಕ್ಷಣವನ್ನು ಮಂಗಳೂರಿನ ತ್ರಿಶಾ ಕಾಲೇಜಿನಲ್ಲಿ ಪಡೆದಿದ್ದಾರೆ. ಆರ್ಟಿಕಲ್ ಶಿಪ್ ಅನ್ನು ಮಂಗಳೂರಿನ ಖ್ಯಾತ ಲೆಕ್ಕ ಪರಿಶೋಧಕ ಸಂಸ್ಥೆ ಗಣೇಶ ಮತ್ತು ಸುಧೀರ್ ಅವರಲ್ಲಿ ಪೂರೈಸಿದ್ದಾರೆ.

Read More

ನಮ್ಮ ಹಿರಿಯರ ಪ್ರಕಾರ ವಿವಾಹ ಎಂಬುದು ಪವಿತ್ರ ಬಂಧನ. ಇದಕ್ಕಿಂತ ಮಿಗಿಲಾದ ಸಂಬಂಧ ಮತ್ತೊಂದಿಲ್ಲ. ಹಿಂದೆ ಕುಟುಂಬ ವ್ಯವಸ್ಥೆ ಭದ್ರವಾಗಿದ್ದು, ಹೆಚ್ಚಿನ ಮಹಿಳೆಯರು ಶಿಕ್ಷಣದಿಂದ ವಂಚಿತರಾಗಿ ನಾಲ್ಕು ಗೋಡೆಗಳ ಮಧ್ಯೆ ಸೀಮಿತರಾಗಿದ್ದರು. ಆದರೆ ಇಂದು ಕಾಲ ಬದಲಾಗಿದೆ. ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ಜಾಗೃತಿಯಿಂದ ಕುಟುಂಬ ಜೀವನದಲ್ಲಿಯೂ ಅನೇಕ ಬದಲಾವಣೆಗಳು ಕಂಡುಬಂದಿವೆ. ಯಶಸ್ವಿ ವೈವಾಹಿಕ ಜೀವನದಲ್ಲಿ ದೀರ್ಘಕಾಲ ಕಳೆದ ದಂಪತಿಗಳನ್ನು ಗೌರವಿಸಿ, ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಿ ಗುರುತಿಸುವ ಉದ್ದೇಶದಿಂದ ‘ವಸುಂಧರ ಆದರ್ಶ ದಂಪತಿ ಪ್ರಶಸ್ತಿ -2026’ ಪ್ರದಾನಿಸಲಾಯಿತು ಎಂದು ಕಲಾ ಜಗತ್ತು ಸಂಸ್ಥೆಯ ಅಧ್ಯಕ್ಷ ಡಾ| ತೋನ್ಸೆ ವಿಜಯಕುಮಾರ್ ಶೆಟ್ಟಿ ಹೇಳಿದರು. ಜೂನ್ 26ರಂದು ಬೊರಿವಲಿ ಪಶ್ಚಿಮ ಪ್ರಭೋದನ್ ಠಾಕ್ರೆ ನಾಟ್ಯಗೃಹದಲ್ಲಿ ಕಲಾ ಜಗತ್ತು ವಸುಂಧರ ವತಿಯಿಂದ ಜರಗಿದ ‘ವಸುಂಧರ ಆದರ್ಶ ದಂಪತಿ ಪ್ರಶಸ್ತಿ–2026’ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಸುಖೀ ದಾಂಪತ್ಯ ಜೀವನಕ್ಕೆ ಪರಸ್ಪರ ವಿಶ್ವಾಸ, ಗೌರವ, ತಾಳ್ಮೆ ಮತ್ತು ಹೊಂದಾಣಿಕೆ ಅತ್ಯಂತ ಮುಖ್ಯವೆಂದು ತಿಳಿಸಿದರು. ಮಕ್ಕಳಿಗೆ ಉತ್ತಮ ಸಂಸ್ಕೃತಿ,…

Read More

ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟಗೊಂಡಿದ್ದು, ಉಪಾಧ್ಯಕ್ಷೆಯಾಗಿ ಕಾರ್ಕಳ ತಾಲೂಕಿನ ನೀರೆ ಗ್ರಾಮದ ಮಾಲಿನಿ ಜೆ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಮಾಲಿನಿ ಜೆ ಶೆಟ್ಟಿಯವರು ನೀರೆ ಕಣಂಜಾರು ಗ್ರಾಮ ಪಂಚಾಯತ್‌ ಉಪಾಧ್ಯಕ್ಷೆಯಾಗಿ, ತಾಲೂಕು ಪಂಚಾಯತ್‌ ಉಪಾಧ್ಯಕ್ಷೆ ಮತ್ತು ಅಧ್ಯಕ್ಷೆಯಾಗಿ, ತಾಲೂಕು ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿ ಹಾಗೂ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದು, ಇದೀಗ ಎರಡನೇ ಬಾರಿಗೆ ಜಿಲ್ಲಾ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಇದಲ್ಲದೇ ಧಾರ್ಮಿಕ ಹಾಗೂ ಸಾಮಾಜಿಕವಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.

Read More

ಆತ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರೀಕದಲ್ಲಿ ಬಂಟ ಸಮಾಜದ ಮಹಾನ್ ಚೇತನ, ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಅಧ್ಯಕ್ಷ, ಕೊಡುಗೈ ದಾನಿಯಾಗಿದ್ದ ದಿವಂಗತ ಸತೀಶ್ಚಂದ್ರ ಹೆಗ್ಡೆ ಅವರ ಸವಿ ನೆನಪಿಗಾಗಿ ‘ಸತೀಶ್ಚಂದ್ರ ಹೆಗ್ಡೆ ಸರ್ಕಲ್’ ಲೋಕಾರ್ಪಣೆಗೊಂಡಿತು. ಈ ಸಂಧರ್ಭ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪ್ರೇಮಲತಾ ಎಸ್ ಹೆಗ್ಡೆ, ಆತ್ರಾಡಿ ಬೀಡು ದಿಲೀಪ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

Read More