Author: admin
ಮುಂಬೈ ಮಹಾನಗರದ ಪ್ರತಿಷ್ಠಿತ ಸಾಮಾಜಿಕ ಸಂಸ್ಥೆ ಬೋಂಬೆ ಬಂಟ್ಸ್ ಅಸೋಸಿಯೇಷನ್ ನ ಮಹಿಳಾ ವಿಭಾಗದ ಆಯೋಜನೆಯಲ್ಲಿ ನವಿ ಮುಂಬೈಯ ಜೂಹಿನಗರದ ಬಂಟ್ಸ್ ಸೆಂಟರ್ ನಲ್ಲಿ ವಸ್ತ್ರಾಭರಣಗಳ ಪ್ರದರ್ಶನ ಮತ್ತು ಮಾರಾಟವು ಬೋಂಬೆ ಬಂಟ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಅಡ್ವೋಕೇಟ್ ಡಿ.ಕೆ ಶೆಟ್ಟಿ ಅವರ ನೇತೃತ್ವ ಹಾಗೂ ಅಧ್ಯಕ್ಷತೆಯಲ್ಲಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಂತ ನಾರಾಯಣ ಶೆಟ್ಟಿ ಅವರ ನೇತೃತ್ವ ಹಾಗೂ ಪದಾಧಿಕಾರಿಗಳ ಮುಂದಾಳತ್ವದೊಂದಿಗೆ ಅಕ್ಟೋಬರ್ 11 ರಂದು ನಡೆಯಿತು. ಕಾರ್ಯಕ್ರಮವನ್ನು ಬೋಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಅಡ್ವೋಕೇಟ್ ಡಿ.ಕೆ ಶೆಟ್ಟಿ, ಹೇಮಲತಾ ಡಿ.ಕೆ ಶೆಟ್ಟಿ, ಶಾಲಿನಿ ಸತೀಶ್ ಶೆಟ್ಟಿ ಅವರು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದರು. ಬೋಂಬೆ ಬಂಟ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಅಡ್ವೋಕೇಟ್ ಡಿ.ಕೆ ಶೆಟ್ಟಿ ಅವರು ಮಾತನಾಡಿ, ಅಸೋಸಿಯೇಷನ್ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪ್ರಚಲಿತವಾಗಿದೆ. ಮಹಿಳಾ ವಿಭಾಗದ ಶಾಂತ ಎನ್ ಶೆಟ್ಟಿ ಮತ್ತು ಅವರ ತಂಡದಿಂದ ವಿವಿಧ ಪ್ರಕಾರಗಳ ಸೀರೆಗಳು, ವಜ್ರಾಭರಣಗಳು ಹಾಗೂ ದಿನೋಪಯೋಗಿ ವಸ್ತುಗಳ ಪ್ರದರ್ಶನ ಮತ್ತು…
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಎಲ್ಲಾ ಕಾರ್ಯಕರ್ತರು ತಮ್ಮ ಜವಾಬ್ಧಾರಿಯನ್ನು ನಿಸ್ವಾರ್ಥವಾಗಿ ನಿರ್ವಹಿಸುತ್ತಿದ್ದಾರೆ. ಮುಂಬಯಿ ಸಮಿತಿ ಹಾಗೂ ಜಿಲ್ಲೆಗಳ ಸಮಿತಿಯ ಎಲ್ಲರೂ ಅವರವರ ಕಾರ್ಯವನ್ನು ಸಮಿತಿಯ ಹೆಸರಿಗೆ ಧಕ್ಕೆಯಾಗದ ರೀತಿಯಲ್ಲಿ ಯಶಸ್ವಿಯಾಗಿ ನೆರವೇರಿಸುತ್ತಿರುವುದು ಅಭಿನಂದನೀಯ. ಇದೇ ರೀತಿ ಎಲ್ಲರೊಂದಿಗೆ ಸಹಬಾಳ್ವೆ ಮತ್ತು ಒಗ್ಗಟ್ಟಿನಿಂದ ನಮ್ಮ ಸಂಘಟನೆಯನ್ನು ಮುನ್ನಡೆಸೋಣ. ಕೆಲವೊಮ್ಮೆ ಅನಿವಾರ್ಯ ಸಂದರ್ಭದಲ್ಲಿ ಕೆಲವು ನಿರ್ಧಾರವನ್ನು ಸಂಸ್ಥಾಪಕರ ಮಾರ್ಗದರ್ಶನದಂತೆ ಕೈಗೊಂಡಿರುವ ಸಾಧ್ಯತೆಯಿದೆ. ಆದರೂ ನಮಗೆ ನಮ್ಮ ಹಿರಿಯ ಸದಸ್ಯರು ಸಲಹೆ ಸೂಚನೆ ನೀಡುವುದಾದರೆ ಸ್ವಾಗತಾರ್ಹ. ಕಳೆದ 25 ವರ್ಷಗಳಿಂದ ಸಮಿತಿಯು ಜಿಲ್ಲೆಗಳಿಗೆ ವಿದ್ಯುತ್, ಹೆದ್ದಾರಿ, ರೈಲು, ಉದ್ಯೋಗಾವಕಾಶ ನೀಡಿದ್ದು, ಜನರು ಇದನ್ನು ಗಮನಿಸಬೇಕಾಗಿದೆ. ನಮ್ಮ ಕಾರ್ಯಚಟುವಟಿಕೆಗಳು ಹೆಚ್ಚುತ್ತಿದ್ದು ಸಮಿತಿಯ ಸಂಘಟನೆಯ ತಿದ್ದುಪಡಿಯ ಅಗತ್ಯವಿದೆ ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಡಿ ಕೋಟ್ಯಾನ್ ನುಡಿದರು. ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 25ನೇ ವಾರ್ಷಿಕ ಮಹಾಸಭೆಯು ಮುಂಬಯಿ ಸಾಕಿನಾಕಾದ ಪೆನಿನ್ಸುಲಾ ಗ್ರಾಂಡ್ ಹೋಟೆಲು ಇಲ್ಲಿ ಸಮಿತಿಯ ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಶೆಟ್ಟಿಯವರ…
ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ತೃತೀಯ ವಾರ್ಷಿಕೋತ್ಸವ ಸಮಾರಂಭ ಅಕ್ಟೋಬರ್ 18 ಶನಿವಾರ ಸಂಜೆ 4 ಗಂಟೆಗೆ ಸುರತ್ಕಲ್ ಬಂಟರ ಭವನದ ವಠಾರದಲ್ಲಿ ನಡೆಯಲಿದೆ. ಸುರತ್ಕಲ್ ಗೋವಿಂದದಾಸ ಕಾಲೇಜ್ ನ ಆಡಳಿತಾತ್ಮಕ ನಿರ್ದೇಶಕರಾದ ರಮೇಶ್ ಭಟ್ ಎಸ್ ಜಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಿಡಬ್ಯೂಡಿ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ರಾಜೇಶ್ ರೈ, ಉದ್ಯಮಿ ಸಮಾಜ ಸೇವಕ ಸತೀಶ್ ಮುಂಚೂರು, ದ.ಕ ಜಿಲ್ಲಾ ಬಿಜೆಪಿ ವಕ್ತಾರ ರಾಜ್ ಗೋಪಾಲ್ ರೈ, ದ.ಕ ಹೋಟೆಲ್ ಅಸೋಸಿಯೇಷನ್ ನ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ವಾಮಂಜೂರು ಶ್ರೀ ಅಮೃತೇಶ್ವರ ಯಕ್ಷಗಾನ ಪ್ರತಿಷ್ಠಾನದ ಅಧ್ಯಕ್ಷ ದೀಪಕ್ ಶೆಟ್ಟಿ ಲಿಂಗಮಾರುಗುತ್ತು, ಶ್ರೀಮತಿ ಸೀಮಾ ಶೆಟ್ಟಿ ಸುಭಾಷಿತನಗರ, ಶ್ರೀಮತಿ ಮಮತ ಪ್ರೇಮನಾಥ್ ಹೆಗ್ಡೆ ಭಾಗವಹಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಯಕ್ಷಗುರು ರಾಕೇಶ್ ರೈ ಅಡ್ಕ, ಸುರತ್ಕಲ್ ಬಂಟರ ಸಂಘದ ಮಾಜಿ…
ಲೈವ್ ಕಿಚನ್ ಹಾಗೂ ಲೈವ್ ಕೇಕ್ ಗಳಿಗೆ ಸೆವೆನ್ತ್ ಹೆವೆನ್ ಪ್ರಸಿದ್ದಿಯಾಗಿದ್ದು, ಉತ್ಪನ್ನಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ಸೇವೆ, ಸಭೆ ಸಮಾರಂಭಗಳಲ್ಲಿ ಅವಶ್ಯಕತೆಗೆ ತಕ್ಕಷ್ಟು ಪ್ರಮಾಣದಲ್ಲಿ ಸಮಯಕ್ಕೆ ಸರಿಯಾಗಿ ತಲುಪಿಸುವ ಸೇವಾ ತತ್ಪರತೆಗಳಿಂದ ಇಂದು ಸೆವೆನ್ತ್ ಹೆವೆನ್ ಬೇಕರಿ ಹಬ್ ಗಳು ರಾಜ್ಯಾದ್ಯಂತ ಹಾಗೂ ದೇಶದಾದ್ಯಂತ ಮನೆ ಮಾತಾಗಿದೆ. 3D ಕೇಕ್, ಕಪ್ ಕೇಕ್, ಮೆಕರೋನ್ಸ್, ಡೋನಟ್ಸ್, ಟಾರ್ಟ್ಸ್, ಬ್ರೌನಿಸ್, ಚೀಸ್ ಕೇಕ್ಸ್ ಹಾಗೂ ಇನ್ನಿತರ ಸಂಪೂರ್ಣ ಶಾಖಾಹಾರಿ ವೈವಿಧ್ಯಮಯ ಉತ್ಪನ್ನಗಳು ಟೀಮ್ ವರ್ಕ್ ಮುಖಾಂತರ ಗ್ರಾಹಕರ ಮನೆಗೆ ತಲುಪುವ ಬೇಕ್ ಡ್ ಖಾದ್ಯ ಪದಾರ್ಥಗಳು ತನ್ನದೇ ಆದ ಬ್ರಾಂಡ್ ಗುರುತು ಹೊಂದಿದ್ದು, ಬೇಕರಿ ಉದ್ಯಮದಲ್ಲೇ ಸ್ಟಾಂಡರ್ಡ್ ಬೇಕರಿ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದು, ದಿನೇ ದಿನೇ ಗ್ರಾಹಕರ ಬೇಡಿಕೆಯೂ ಹೆಚ್ಚುತ್ತಲೇ ಇರುವುದು ಸೆವೆನ್ತ್ ಹೆವೆನ್ ಬೇಕರಿ ಎಂಡ್ ಕೆಫೆ ವೈಶಿಷ್ಟ್ಯ. ಇಲ್ಲಿನ ಕೇಕ್ ಗಳಿಗೆ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನ ಇದ್ದು, ಉಡುಪಿಯಲ್ಲಿ ಹಲವಾರು ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಸೆವೆನ್ತ್ ಹೆವೆನ್ ಉಡುಪಿ…
ಐಲೇಸಾ ವಯೋಸಮ್ಮಾನ್ 2025 ಪುರಸ್ಕಾರಕ್ಕೆ ಮಂಗಳೂರಿನ ಶಿಕ್ಷಕಿ, ಯಕ್ಷಗಾನ ಕಲಾವಿದೆ ಸಾವಿತ್ರಿ ಶ್ರೀನಿವಾಸ್ ರಾವ್ ಆಯ್ಕೆ
ಐಲೇಸಾ ತನ್ನ ಹುಟ್ಟು ಹಬ್ಬದ ಸಲುವಾಗಿ ಕೊಡಮಾಡುವ ವಯೋಸಮ್ಮಾನ್ ವಿಶಿಷ್ಠ ಪುರಸ್ಕಾರಕ್ಕೆ ಶಿಕ್ಷಕಿ, ಮಕ್ಕಳ ವ್ಯಕ್ತಿತ್ವ ವಿಕಸನದ ಶಿಬಿರಗಳಿಂದ ತನ್ನ ವಿದ್ಯಾರ್ಥಿ ವಲಯದಲ್ಲಿ ವಿಶೇಷ ಶ್ರೇಯ ಪಡೆದ 81ರ ಹರೆಯದ ಶ್ರೀಮತಿ ಸಾವಿತ್ರಿ ಎಸ್ ರಾವ್ ಆಯ್ಕೆಯಾಗಿದ್ದಾರೆ. ಶಿಕ್ಷಕಿಯಾಗಿರುವ ಇವರು ತನ್ನ 66 ನೇ ವಯಸ್ಸಿನಲ್ಲಿ ಯಕ್ಷಗಾನ ನಾಟ್ಯ ಕಲಿತು 113 ಪ್ರದರ್ಶನಗಳನ್ನು ಕೊಟ್ಟು ಹಾಗೂ ತಾಳ ಮದ್ದಳೆಗಳಲ್ಲಿ ಭಾಗವಹಿಸಿ ಇವರು ಯಾವುದೇ ಕಲಿಕೆಗೆ ವಯಸ್ಸಿನ ಹಂಗಿಲ್ಲವೆಂದು ನಿರೂಪಿಸಿದವರು. ಆಕಾಶವಾಣಿ ಕಾರ್ಯಕ್ರಮಗಳಲ್ಲಿ ಕನ್ನಡ ತುಳು ಹಾಡುಗಳನ್ನು, ನಾಟಕಗಳನ್ನು ಬರೆದು ಹಾಡಿ, ಆಡಿ ಜನಜನಿತರಾದವರು. ಮಂಗಳೂರಿನ ಅಶೋಕನಗರದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಧ್ಯಾಪಕಿಯಾಗಿ ಸುಮಾರು 27 ವರ್ಷಗಳ ಕಾಲ ನಿರಂತರ ಸೇವೆಯಲ್ಲಿದ್ದು ಸ್ವಯಂ ನಿವೃತ್ತರಾದವರು. ಮಕ್ಕಳಿಗೆ ಭಗವದ್ಗೀತೆ ಕಂಠ ಪಾಠ, ಭಾವ ಗೀತೆ ಗಾಯನ, ಕತೆ ಹೇಳುವ, ಭಾಷಣ ಕಮ್ಮಟ ಹೀಗೆ ಹಲವಾರು ಮಕ್ಕಳ ವ್ಯಕ್ತಿತ್ವ ವಿಕಸನದ ಕಾರ್ಯಕ್ರಮಗಳನ್ನು ಐನೂರಕ್ಕಿಂತಲೂ ಅಧಿಕ ಶಾಲೆಗಳಲ್ಲಿ ನಡೆಸಿ ಮಕ್ಕಳ ಮನ ಗೆದ್ದವರು. ನವಿಲು ಗರಿ, ಹಾಡು…
ಸರಕಾರಿ ಪ್ರೌಡ ಶಾಲೆ ಮೂಡಂಬೈಲು ಶಾಲಾ ಶತಮಾನೋತ್ಸವದ ಸವಿ ನೆನಪಿಗಾಗಿ ನಿರ್ಮಿಸಲಿರುವ ರಂಗಮಂದಿರದ ಶಂಕು ಸ್ಥಾಪನೆ ಕಾರ್ಯಕ್ರಮ ಶಾಲಾ ವಠಾರದಲ್ಲಿ ನಡೆಯಿತು. ರಂಗಮಂದಿರದ ಶಂಕು ಸ್ಥಾಪನೆಯನ್ನು ಹೇರಂಭ ಇಂಡಸ್ಟ್ರಿಸ್ ಮುಂಬಯಿಯ ಸಿಎಂಡಿ ಡಾ| ಸದಾಶಿವ ಶೆಟ್ಟಿ ಕುಳೂರು ಕನ್ಯಾನರವರು ನಡೆಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಒಂದು ಊರಿನ ಆರಾಧನ ಕೇಂದ್ರಗಳು ಹೇಗೆ ಇವೆಯೋ ಅದಕ್ಕಿಂತಲೂ ಭಿನ್ನವಾಗಿ ಎಲ್ಲಾ ಜಾತಿ ಮತ ಧರ್ಮಗಳಿಗೂ ವಿದ್ಯಾ ಕೇಂದ್ರವೂ ಮುಖ್ಯವಾಗಿರುತ್ತದೆ. ಇಂತಹ ವಿದ್ಯಾಲಯಗಳಲ್ಲಿ ಸ್ಥಾಪಿತವಾಗುವ ರಂಗ ಮಂದಿರಗಳು ಭವಿಷ್ಯದ ಪ್ರತಿಭೆಗಳಿಗೆ ಪುಟ್ಟ ಹೆಜ್ಜೆಯೂರಲು ಇರುವ ಪವಿತ್ರ ಸಾನಿಧ್ಯವಾಗಿದೆ. ಆದ್ದರಿಂದಲೇ ರಂಗ ಮಂದಿರವೊಂದರ ನಿರ್ಮಾಣಕ್ಕೆ ಪ್ರಾಶಸ್ತ್ಯ ಕಲ್ಪಿಸುವುದು ಪ್ರಾಮುಖ್ಯವಾಗುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಅಕ್ಷರ ಸಂತ ಶ್ರೀ ಹರೆಕಳ ಹಾಜಬ್ಬ, ಚಲನಚಿತ್ರ ನಟ ‘ಸು ಫ್ರಮ್ ಸೋ’ ಖ್ಯಾತಿಯ ಪುಷ್ಪರಾಜ್ ಬೊಳ್ಳಾರ್, ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ, ವಾರ್ಡ್ ಸದಸ್ಯ ಜಯರಾಮ ಬಲ್ಲಂಗುಡೆಲು, ಎ.ಇ.ಒ ಮಂಜೇಶ್ವರ ಜಾರ್ಜ್ ಕ್ರಾಸ್ತಾ, ಕಂಚಿಲ ಮಹಮ್ಮದ್, ನಿವೃತ್ತ…
ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ತಯಾರಾದ ರಿಷಬ್ ಶೆಟ್ಟಿ ನಿರ್ದೇಶನದ “ಕಾಂತಾರ” ಸಿನಿಮಾದ ಬಗ್ಗೆ ಪರ ವಿರೋಧ ಚರ್ಚೆಯಾಗುತ್ತಿದ್ದು, ಸಿನಿಮಾದಲ್ಲಿ ಎಲ್ಲೂ ದೈವಗಳಿಗೆ ಅಪಚಾರ ಆಗಿಲ್ಲ. ಸಿನಿಮಾವನ್ನು ಸಿನಿಮಾದ ರೀತಿಯಲ್ಲೇ ನೋಡಿದರೆ ಚೆಂದ. ಸಿನಿಮಾದ ಉದ್ದಕ್ಕೂ ಎಲ್ಲೂ ದೈವಗಳ ನಿಂದನೆಯಾಗಿಲ್ಲ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ. ಕಾಂತಾರ ಸಿನಿಮಾ ಇಂದು ವಿಶ್ವದೆಲ್ಲೆಡೆ ಬಿಡುಗಡೆಯಾಗಿ ಸಂಚಲನವನ್ನೇ ಸೃಷ್ಟಿ ಮಾಡಿದೆ. ಇದರ ಬೆನ್ನಲ್ಲೇ ಸಿನಿಮಾದ ಕುರಿತು ಅಪಸ್ವರ ಎದ್ದಿದೆ. ಪರ ವಿರೋಧ ಚರ್ಚೆಗಳು ನಡೆದಿದೆ. ದೈವ ನಂಬಿದವರ ಸ್ವತ್ತು. ದೈವ ಒಂದು ಜಾತಿಗೆ ಸೀಮಿತವಾದ ಸ್ವತ್ತಲ್ಲ. ಜಾತಿ ಮತಕ್ಕೆ ಮೀರಿದ ಸ್ವತ್ತು. ಕಾಂತಾರದಿಂದ ದೈವಭಕ್ತಿ ಹೆಚ್ಚಿದೆ. ಈ ಸಿನಿಮಾವನ್ನು ನಿರ್ದೇಶಿಸಿ ಪಾತ್ರ ನಿರ್ವಹಿಸಿರುವ ರಿಷಬ್ ಶೆಟ್ಟಿ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಈ ನೆಲದ ಭಾಷೆಯ ಕಂಪನ್ನು ರಾಷ್ಟ್ರದೆಲ್ಲೆಡೆ ಪಸರಿಸಿದ್ದಾರೆ. ಸಿನಿಮಾದಿಂದ ದೈವಗಳ ಅವಹೇಳನ ಆಗಿಲ್ಲ. ಸಿನಿಮಾವನ್ನು ಸಿನಿಮಾದ ರೀತಿಯಲ್ಲೇ ನೋಡಿ ಎಂದು ಐಕಳ ಹರೀಶ್ ಶೆಟ್ಟಿ…
ಪ್ರಸಿದ್ಧ ಉದ್ಯಮಿ, ಸಮಾಜಸೇವಕ ಶಶಿಧರ್ ಶೆಟ್ಟಿ ಬರೋಡ ಅವರ ಮಾತೃಶ್ರೀ ಕಾಶಿ ಶೆಟ್ಟಿ ಅವರು ಇಂದು ಸ್ವಗೃಹದಲ್ಲಿ ನಿಧನರಾದರು. ಇವರು ಮಕ್ಕಳಾದ ಶ್ರೀನಿವಾಸ ಶೆಟ್ಟಿ, ಜಯರಾಮ ಶೆಟ್ಟಿ, ಶಶಿಧರ ಶೆಟ್ಟಿ, ಪ್ರಶಾಂತ ಶೆಟ್ಟಿ, ಹರೀಶ್ ಶೆಟ್ಟಿ, ರಾಜೇಶ್ ಶೆಟ್ಟಿ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಾಶಿ ಶೆಟ್ಟಿ ಅವರ ನಿಧನಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ ಶೆಟ್ಟಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಬಂಟ್ಸ್ ನೌ ಸ್ಥಾಪಕ ರಂಜಿತ್ ಶೆಟ್ಟಿ ಸೇರಿದಂತೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಬೆರಳಚ್ಚುಗಾರ, ಹೆಜಮಾಡಿ ಕಣ್ಣಂಗಾರು ಕಮಲಾ ನಿವಾಸದ ಭಾಸ್ಕರ್ ಟಿ ಶೆಟ್ಟಿ ಹೆಜಮಾಡಿಯವರು (69) ಅಸೌಖ್ಯದಿಂದ ನಿಧನರಾದರು. ಮೃತರು ಪತ್ನಿ ಹರಿಣಿ, ಪುತ್ರ ಹಿತೇಶ್ ಶಿಕ್ಷಕರು ಸರಕಾರಿ ಪ್ರೌಢ ಶಾಲೆ ಮರವಂತೆ, ಪುತ್ರಿ ಭವ್ಯ ಶಿಕ್ಷಕಿ ಕ್ರಿಶ್ಚಿಯನ್ ಪ್ರೌಢ ಶಾಲೆ ಉಡುಪಿ ಹಾಗೂ ತಮ್ಮ ಮುಂಬಯಿಯ ಪತ್ರಕರ್ತ ವೈ. ಟಿ. ಶೆಟ್ಟಿ ಹೆಜಮಾಡಿ ಮತ್ತು ಅಪಾರ ವರ್ಗದ ಬಂಧು ಮಿತ್ರರನ್ನು ಅಗಲಿರುತ್ತಾರೆ.
ಮುಂಬಯಿ ಕನ್ನಡಿಗರು ತಮ್ಮ ಬದುಕನ್ನು ಕಟ್ಟಿಕೊಳ್ಳುತ್ತಾ ಮುಂಬಯಿಗರ ಜೊತೆ ಉಳಿದುಕೊಂಡು ಅಭಿಮಾನದಿಂದ ಬಾಳುತ್ತಿದ್ದಾರೆ. ಅನ್ಯೋನ್ಯತೆಯ ಬದುಕು ಸುಂದರವಾದ ಬದುಕು ಕಟ್ಟಿಕೊಂಡು ಜೀವನದಲ್ಲಿ ಕೂಡಾ ಯಶಸ್ವಿಯನ್ನು ಗಳಿಸಿಕೊಂಡಿದ್ದಾರೆ. ಅದರೊಟ್ಟಿಗೆ ನಮ್ಮ ಭಾಷೆ ಸಂಸ್ಕೃತಿಯನ್ನು ಶ್ರೀಮಂತಗೊಳಿಸುವಲ್ಲಿ ಸಂಘ ಸಂಸ್ಥೆಗಳನ್ನು ಕಟ್ಟಿಕೊಂಡು ನಾಡಿನ ಜನರಿಗೆ ಸಹಕಾರವಾಗುತ್ತಿದ್ದಾರೆ. ನಮ್ಮಷ್ಟು ಶ್ರೀಮಂತ ಗುಣದವರು ಬಹಳ ವಿರಳ ಎಂದು ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರು ನುಡಿದರು. ಸೆ. ೨೮ರಂದು ಕಾಂದಿವಲಿ ಪಶ್ಚಿಮದ ಆರ್ಯ ಸಮಾಜದ ಸಭಾಗೃಹದಲ್ಲಿ ದಿ. ಎಂ.ಎಸ್ ರಾವ್ ವೇದಿಕೆಯಲ್ಲಿ ನಡೆದ ಚಾರ್ಕೋಪ್ ಕನ್ನಡಿಗರ ಬಳಗ ಕಾಂದಿವಲಿ ಇದರ ಬೆಳ್ಳಿ ಹಬ್ಬದ ಸಂಭ್ರಮ, ವಾರ್ಷಿಕ ಶಾರದಾ ಪೂಜೆ, ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು ಸಂಘ ಎಂದರೆ ವಿಭಿನ್ನ ಚಿಂತನೆಯ ಅಪೂರ್ವ ಮನುಷ್ಯನ ಸಂಗಮ. ಈ ಸಂಗಮಕ್ಕೆ ಒಂದಾಗಿ ವಿಭಿನ್ನ ಚಿಂತನೆ ಮಾಡಿ ಯೋಚನೆಯನ್ನು ಯೋಜನೆಯಾಗಿ ಪರಿವರ್ತಿಸಿ ಸಮಾಜಕ್ಕೆ ಅನುಕೂಲ ಮಾಡಲು ಒಂದಾಗಿ ಕಾರ್ಯನಿರ್ವಹಿಸುವುದು. ಈ ನಿಟ್ಟಿನಲ್ಲಿ ಈ ಮರಾಠಿ ಮಣ್ಣಲ್ಲಿ…