Author: admin

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನ ದ.ಕ ಜಿಲ್ಲಾ ಘಟಕದ ಅಧ್ಯಕ್ಷೆಯಾಗಿ ಸಾಹಿತಿ ವೀಣಾ ಟಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಲತೇಶ ಬಾಕ್ರಬೈಲ್, ಜತೆ ಕಾರ್ಯದರ್ಶಿಗಳಾಗಿ ಗೀತಾ ಲಕ್ಷ್ಮೀಶ, ಶ್ರೀಲಕ್ಷ್ಮೀ ಮಠದಮೂಲೆ, ಕೋಶಾಧಿಕಾರಿಯಾಗಿ ರತ್ನಾವತಿ ಬೈಕಾಡಿ, ಮಾಧ್ಯಮ ಪ್ರಮುಖರಾಗಿ ಚಂದ್ರಶೇಖರ ಕುಳವರ್ಮ, ಮಹಿಳಾ ಪ್ರಕಾರ ಪ್ರಮುಖರಾಗಿ ಸುಮಂಗಲ ರತ್ನಾಕರ, ಮಕ್ಕಳ ಪ್ರಕಾರ ಪ್ರಮುಖರಾಗಿ ರಮೇಶ ಮಯ್ಯ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪಿ.ಬಿ ಹರೀಶ್ ರೈ, ಡಾ. ಸುರೇಶ ನೆಗಳಗುಳಿ, ಪ್ರಕಾಶ ನಾರಾಯಣ ಚಾರ್ಮಾಡಿ, ರವೀಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.

Read More

ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಗೀತಾ ದಂಪತಿ ಸಮ್ಮುಖದಲ್ಲಿ ಸಮಗ್ರ ಭಾರತದ ಸಾಂಸ್ಕೃತಿಕ ಚಿತ್ರಣವು ಜೀವ ಪಡೆದಂತೆ ಕಂಗೊಳಿಸಿದರೆ, ಅಷ್ಟೇ ವಿನೀತರಾದ ಶಿವರಾಜ್ ಕುಮಾರ್ ದಂಪತಿ ವಿನಮ್ರತೆ ತೋರಿದರು. ಇದು ವಿದ್ಯಾಗಿರಿಯ ಕೃಷಿ ಸಿರಿ ಆವರಣದ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಆಳ್ವಾಸ್ ಸಂಪ್ರದಾಯ ದಿನ -2026’ ರ ಝೋಷ್ಇದರಿಂದ ಪುಳಕಿತರಾದ ಶಿವರಾಜ್ ಕುಮಾರ್ ತಾಳ ಹಿಡಿದು, ‘ಕೋಲು ಮಂಡೆ ಜಂಗಮ ದೇವರು…..’ ಹಾಡಿ ಹೆಜ್ಜೆ ಹಾಕಿದರು. ತಮ್ಮ ಆರಂಭಿಕ ‘ಆನಂದ್’ ಸಿನಿಮಾದ ‘ಟುವ್ವಿ ಟುವ್ವಿ’ ಹಾಡಿನಿಂದ ಹಿಡಿದು ಪುನೀತ್ ರಾಜ್ ಕುಮಾರ್ ಅವರ ‘ಬೊಂಬೆ ಹೇಳುತೈತೆ… ನೀನೆ ರಾಜಕುಮಾರ…’ ವರೆಗಿನ ಹಾಡುಗಳನ್ನು ಹಾಡಿದರು. ಕಿಕ್ಕಿರಿದ ವಿದ್ಯಾರ್ಥಿ ಸಾಗರವು ಪುನೀತವಾಯಿತು. ಸಾಕ್ಷಾತ್ಕರಿಸಿದ ಡಾ. ಎಂ ಮೋಹನ ಆಳ್ವ ಖುಷಿ ಪಟ್ಟು ನಸುನಕ್ಕರು. ಇದಕ್ಕೂ ಮೊದಲು ದೀಪ ಬೆಳಗಿ, ಚೆಂಡೆ ಪರಿಕರ ಬಡಿದು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಿವರಾಜ್ ಕುಮಾರ್ ಅವರು, ‘ಏನನ್ನೇ…

Read More

ಜಗತ್ತಿನಲ್ಲಿ ಭಾರತೀಯ ಕುಟುಂಬ ವ್ಯವಸ್ಥೆ ಹಾಗೂ ಸಂಸ್ಕ್ರತಿಗೆ ವಿಶೇಷ ಸ್ಥಾನಮಾನಗಳಿವೆ. ಭಾರತದ ತಳಹದಿಯೇ ಕುಟುಂಬ ವ್ಯವಸ್ಥೆ. ಭಾರತೀಯ ಕುಟುಂಬ ವ್ಯವಸ್ಥೆಯಲ್ಲಿ ಭಾವನಾತ್ಮಕ ಸಂಬಂಧ, ಸಂಸ್ಕಾರದ ಹಾದಿ, ವಿಶೇಷವಾಗಿ ಮಾನವೀಯ ಗುಣಗಳು ಅಡಕವಾಗಿವೆ. ಬಹುಮುಖ್ಯವಾಗಿ ಸ್ತ್ರೀಯರನ್ನು, ಮಾತೆಯರನ್ನು ಪೂಜನೀಯ ಭಾವದಲ್ಲಿ ಕಂಡ ದೇಶ ಭಾರತ. ಜಗತ್ತಿನಲ್ಲಿ ಭಾರತೀಯ ಸಂಸ್ಕೃತಿಗೆ ಮಾರುಹೋಗದ ದೇಶಗಳೇ ಕಾಣಸಿಗುವುದು ಅಪರೂಪ. ಇಂತಹದ್ದೊಂದು ನಡೆಗೆ ಹಾದಿ ತೋರಿಸಿಕೊಟ್ಟವರು ನಮ್ಮ ಹಿರಿಯರು, ಪೂರ್ವಜರು, ಗತಿಸಿ ಹೋದ ಹಲವಾರು ತಲೆಮಾರುಗಳೆಂದರೂ ತಪ್ಪಾಗಲಾರದು. ಆ ಕಾರಣಕ್ಕಾಗಿ ಭಾರತೀಯ ಕೌಟುಂಬಿಕ ಪದ್ದತಿ, ಸಂಬಂಧಗಳು, ಆಚಾರ ವಿಚಾರ, ಸಂಪ್ರದಾಯಗಳು ಇಂದಿಗೂ ಜೀವಂತವಾಗಿ ಉಳಿದಿದೆಯೆಂದರೆ ಅತಿಶಯೋಕ್ತಿಯಾಗಲಾರದು. ವರ್ಷಗಳು ಉರುಳಿದಂತೆ ನಮ್ಮ ಹಿರಿಯರು ಹಾಕಿ ಕೊಟ್ಟ ಸಂಪ್ರದಾಯ, ಮಾನವೀಯ ಸಂಬಂಧ ಹಾಗೂ ಸಂಬಂಧಗಳ ಭದ್ರ ಬುನಾದಿ ಎಂಬುವುದೊಂದಿದೆಯಲ್ಲ ಅದು ತದ್ವಿರುದ್ಧ ಹಾದಿಯಲ್ಲಿ ಸಾಗುತ್ತಿರುವುದು ಭವಿಷ್ಯದ ಸಂಬಂಧ, ಕೌಟುಂಬಿಕ ಜೀವನ, ಬದುಕುವ ಪದ್ಧತಿ ಎಲ್ಲವೂ ಪಾಶ್ಚಾತ್ಯ ಶೈಲಿ. ವ್ಯಾಪಾರ, ವ್ಯವಹಾರಿಕ ದಿಕ್ಕಿನಲ್ಲಿ ಸಾಗಿ ಮನುಷ್ಯ ಸಂಬಂಧಗಳೆಂಬುವುದು ನಗಣ್ಯ ಹಾಗೂ ಅರ್ಥ ಕಳೆದುಕೊಳ್ಳುವತ್ತ…

Read More

ಎಲ್ಲರ ಬಾಯಲ್ಲೂ ಒಂದೇ ಸುದ್ದಿ ‘ಗ್ಯಾಸ್ ಬತ್ತ್ಂಡ ಗ್ಯಾಸ್ ಎತ್ತ್ಂಡ’. ಅಯ್ಯೋ ದೇವರೆ… ಎಲ್ಲವೂ ಇಷ್ಟೇ ನಾವು ಹೆಚ್ಚು ಹೆಚ್ಚು ಹೊಸತನ, ಹೊಸ ಟೆಕ್ನಾಲಜಿಯನ್ನು ನಮ್ಮ ನಿತ್ಯ ಜೀವನದ ಚಟುವಟಿಕೆಗಳಲ್ಲಿ ಅಳವಡಿಸಿ ಅದರ ಮೇಲೆ ಅವಲಂಭಿಸಿದಷ್ಟು ಇಂತಹ ಪಚೀತಿ ಎದುರಾಗುತ್ತಲೇ ಇರುತ್ತದೆ. ಮನೆಯೇ ಆಗಲಿ ಹೋಟೇಲೇ ಆಗಲಿ ಸೌದೆ ಒಲೆಯಲ್ಲಿ ಅಡುಗೆ ತಯಾರಾಗುತ್ತಿದ್ದ ಆ ಕಾಲದಲ್ಲಿ ಪಾತ್ರೆ ಪಗಡಿ ಮಸಿಯಾಗುವ ಸಮಸ್ಯೆ ಅಲ್ಲದೇ ಬೇರೆ ಅಂತದ್ದೇನು ಸಮಸ್ಯೆ ಇರಲಿಲ್ಲ. ಹೆಚ್ಚಿನ ಎಲ್ಲರ ಮನೆಯ ಅಟ್ಟದ ಮೇಲೆ ಕನಿಷ್ಟ ಪಕ್ಷ ಎರಡು ಮೂರು ತಿಂಗಳಿಗಾಗುವಷ್ಟು ಸೌದೆ ಇರುತ್ತಿತ್ತು. ಹಾಗಾಗಿ ಈ ಅಡುಗೆ ತಯಾರಿಯ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವೇ ಇರಲಿಲ್ಲ. ಅರ್ಥಾತ್ ಅದೊಂದು ದೊಡ್ಡ ಸಮಸ್ಯೆ ಎಂದೇ ಎಣಿಸಿರಲಿಲ್ಲ. ಆಗ ತಿಂದದ್ದು ಹೆಚ್ಚಾದರೆ ‘ಹೊಟ್ಟೆಯ ಗ್ಯಾಸ್ ಟ್ರಬಲ್’ ಸಮಸ್ಯೆ ಬಿಟ್ಟರೆ ಈ ಅಡುಗೆ ಗ್ಯಾಸ್ ನ ತಾಪತ್ರೆ ಇರಲಿಲ್ಲ!. ಆದರೆ ಬರಬರುತ್ತಾ ಎಲ್ಲವೂ ಬದಲಾಗಿ ಈ ಗ್ಯಾಸ್ ನ ಕಾರ್ಬಾರ್ ನಿಂದ ಕೇವಲ…

Read More

ಮನೆಯ ಕಡೆಗೆ ಗಮನ ಕೊಟ್ಟು ಸಂಸಾರವನ್ನು ಪ್ರೀತಿಸುವವಳು ಹೆಣ್ಣು. ಆಧುನಿಕ ಯುಗದಲ್ಲಿ ಅವಳು ಸಮಾನತೆಯ ಹಕ್ಕುಗಳನ್ನು ಅನುಭವಿಸುವಾಗ ತನ್ನ ಕರ್ತವ್ಯದ ಕಡೆಗೂ ಗಮನ ಹರಿಸಬೇಕು ಎಂದು ಹಿರಿಯ ಸಾಹಿತಿ ಡಾ| ಸುನೀತಾ ಎಂ. ಶೆಟ್ಟಿಯವರು ಹೇಳಿದರು. ಮಾರ್ಚ್ 21ರಂದು ಕುರ್ಲಾ ಪೂರ್ವದ ಬಂಟರ ಭವನದ ಎನೆಕ್ಸ್ ಕಟ್ಟಡದ ಸಭಾಗೃಹದಲ್ಲಿ ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಇದರ ಮಹಿಳಾ ವಿಭಾಗದ ಆಶ್ರಯದಲ್ಲಿ ಆಚರಿಸಲಾದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಂಡು ಹೆಣ್ಣು ಒಬ್ಬರನ್ನೊಬ್ಬರು ಅರಿತು ಬದುಕಿದಾಗ ಮಾತ್ರ ಜೀವನ ಹಾಗೂ ಸಂಸಾರ ಉತ್ತಮ ರೀತಿಯಲ್ಲಿ ನಡೆಯಲು ಸಾಧ್ಯ. ಹೆಣ್ಣು ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಪ್ರಾತಿನಿಧ್ಯವನ್ನು ಪಡೆದುಕೊಂಡಿದ್ದಾಳೆ ಆದರೆ ಅವಳದೇ ಆದ ಮಹತ್ವದ ಕರ್ತವ್ಯಗಳನ್ನು ಅವಳು ಎಂದಿಗೂ ಮರೆಯಬಾರದು ಕನ್ನಡ ವೆಲ್ಫೇರ್ ಸೊಸೈಟಿಯ ಸಮಾಜಪರ ಕಾರ್ಯಕ್ರಮಗಳನ್ನು ಕಂಡಾಗ ಸಂತೋಷವಾಗುತ್ತಿದೆ. ನಾಡು ನುಡಿಯ ಬಲವರ್ಧನೆಗೆ ಸಂಸ್ಥೆ ಮಾಡುತ್ತಿರುವ ಸೇವೆ ಅನುಕರಣೀಯವಾಗಿದೆ ಎಂದರು. ಸಂಸ್ಥೆಯ ಅಧ್ಯಕ್ಷ ನವೀನ್ ಶೆಟ್ಟಿ ಇನ್ನಬಾಳಿಕೆ ಅವರ ಅಧ್ಯಕ್ಷತೆಯಲ್ಲಿ ನಡೆದ…

Read More

ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ ಜಿಲ್ಲಾ ಘಟಕದ 2026-29 ನೇ ಸಾಲಿನ ಛೇರ್ಮನ್ ಆಗಿ ಸಿ.ಎ ಶಾಂತಾರಾಮ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ವೈಸ್ ಛೇರ್ಮನ್ ಆಗಿ ಡಾ. ಬಿ. ಸಚ್ಚಿದಾನಂದ ರೈ, ಖಜಾಂಚಿಯಾಗಿ ಗುರುದತ್ ನಾಯಕ್ ಆಯ್ಕೆಯಾಗಿದ್ದಾರೆ. ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ರೆಡ್ ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರು ಆಡಳಿತ ಮಂಡಳಿ ಸದಸ್ಯರಿಗೆ ಪ್ರಮಾಣವಚನ ಬೋಧಿಸಿ ಶುಭ ಹಾರೈಸಿದರು. ನೂತನವಾಗಿ ಚುನಾಯಿತರಾದ ಸಿ.ಎ ಶಾಂತಾರಾಮ ಶೆಟ್ಟಿ, ಡಾ. ಬಿ. ಸಚ್ಚಿದಾನಂದ ರೈ, ಗುರುದತ್ ನಾಯಕ್, ಡಾ. ಸತೀಶ್ ರಾವ್, ಯತೀಶ್ ಬೈಕಂಪಾಡಿ, ಪುಷ್ಪರಾಜ್ ಜೈನ್, ಡಾ. ಸುಮನ ಬಿ., ಪಿ.ಬಿ ಹರೀಶ್ ರೈ, ಸಚೇತ್ ಸುವರ್ಣ ಮತ್ತು ರಾಘವೇಂದ್ರ ರಾವ್ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಛೇರ್ಮನ್ ಹಾಗೂ ವಿವಿಧ ಉಪ ಸಮಿತಿಗಳಿಗೆ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು. ಸಿ.ಎ ಶಾಂತಾರಾಮ ಶೆಟ್ಟಿಯವರು ಸತತ 4 ನೇ ಅವಧಿಗೆ ದ.ಕ. ಜಿಲ್ಲಾ ಘಟಕದ ಛೇರ್ಮನ್ ಆಗಿ…

Read More

ಸಹಕಾರಿ ಕ್ಷೇತ್ರದಲ್ಲಿ 120 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಪುತ್ತೂರಿನ ಹೆಮ್ಮೆಯ ‘ಪುತ್ತೂರು ಕೋ- ಓಪರೇಟಿವ್ ಟೌನ್ ಬ್ಯಾಂಕ್’ ತನ್ನ ಗ್ರಾಹಕರಿಗೆ ಆಧುನಿಕ ಬ್ಯಾಂಕಿಂಗ್ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಂಪೂರ್ಣ ಡಿಜಿಟಲೀಕರಣದತ್ತ ಮಹತ್ವದ ಹೆಜ್ಜೆ ಇಟ್ಟಿದೆ. ಇದರ ಭಾಗವಾಗಿ ಗ್ರಾಹಕರ ಖಾತೆಗೆ ನೇರವಾಗಿ ಹಣ ಪಾವತಿಸಲು ಅನುಕೂಲವಾಗುವ ಕ್ಯೂಆರ್ ಕೋಡ್ (QR Code) ಸೌಲಭ್ಯವನ್ನು ಬ್ಯಾಂಕ್‌ನ ಆಡಳಿತ ಮಂಡಳಿ ಸಭೆಯಲ್ಲಿ ಅನಾವರಣಗೊಳಿಸಲಾಯಿತು. ಬ್ಯಾಂಕ್‌ನ ಆಡಳಿತ ಮಂಡಳಿ ಸಭೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮುಖ ಉದ್ಯಮಿ ಗ್ರಾಹಕರಿಗೆ ಕ್ಯೂಆರ್ ಕೋಡ್ ಕಾರ್ಡ್ ಮತ್ತು ಸೌಂಡ್ ಬಾಕ್ಸ್ ನೀಡಿ ಚಾಲನೆ ನೀಡಲಾಯಿತು. ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ಈಗಾಗಲೇ ಸಿಟಿಎಸ್ ಕ್ಲಿಯರಿಂಗ್ ಕ್ಷೇತ್ರಕ್ಕೆ ಕಾಲಿಟ್ಟಿದ್ದು, ಇನ್‌ವರ್ಡ್ ಮತ್ತು ಔಟ್‌ವರ್ಡ್ ತ್ವರಿತ ಕ್ಲಿಯರಿಂಗ್ ವ್ಯವಸ್ಥೆ ಜಾರಿಯಲ್ಲಿದೆ. ನೇರ ಹಣ ವರ್ಗಾವಣೆಗಾಗಿ ಆರ್‌ಟಿಜಿಎಸ್ ಮತ್ತು ಎನ್‌ಇಎಫ್‌ಟಿ ವ್ಯವಸ್ಥೆ, ಬ್ಯಾಂಕ್ ಐಎಫ್‌ಎಸ್‌ಸಿ ಕೋಡ್ ಹಾಗೂ ಮೊಬೈಲ್ ಬ್ಯಾಂಕಿಂಗ್ ಆಪ್ ಕೂಡ ಬಿಡುಗಡೆಯಾಗಿದೆ. ಇದೀಗ ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ಕ್ಯೂಆರ್ ಕೋಡ್ ಸೌಲಭ್ಯವನ್ನು…

Read More

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಪವಿತ್ರ ಸನ್ನಿಧಿಯಲ್ಲಿ ನೂತನ ರಾಜಗೋಪುರ ಸಮರ್ಪಣೆ ಹಾಗೂ ಅತಿರುದ್ರ ಮಹಾಯಾಗ ನಡೆಯಿತು. ಪುಣ್ಯ ಮುಹೂರ್ತದ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ, ದೇವಳದ ಧ್ವಜಸ್ಥಂಭವನ್ನು ಉದ್ಘಾಟಿಸಿದರು. ಈ ವೇಳೆ ಡಾ| ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಚಿವ ಜಯಪ್ರಕಾಶ್‌ ಹೆಗ್ಡೆ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಉದ್ಯಮಿ ಜಯಶೀಲ ಶೆಟ್ಟಿ, ಪದ್ಮನಾಭ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್‌ ಸಿಇಒ ಪ್ರತೀಕ್‌ ಬಾಯಲ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌, ಮುಖಂಡರಾದ ಕಿಶೋರ್‌ ಕುಮಾರ್‌ ಹೆಗ್ಡೆ, ವಿಜಯ್‌ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ಕಳೆದ ಮೂರು ವರ್ಷಗಳಿಂದ ಆಳ್ವಾಸ್ ಆನಂದಮಯ ಆರೋಗ್ಯಧಾಮ ಆಯೋಜಿಸಿಕೊಂಡು ಬರುತ್ತಿರುವ ಬೇಸಿಗೆ ಶಿಬಿರ ‘ಚಿಣ್ಣರ ಆರೋಗ್ಯ’ ಏಪ್ರಿಲ್ 01 ರಿಂದ 07 ರವರೆಗೆ ಮಿಜಾರಿನ ಶೋಭಾವನ ಆವರಣದಲ್ಲಿರುವ ಆನಂದಮಯ ಆರೋಗ್ಯಧಾಮದಲ್ಲಿ ನಡೆಯಲಿದೆ. ಈ ಶಿಬಿರವು ಪ್ರಕೃತಿ ಚಿಕಿತ್ಸೆಯ ತತ್ವಗಳು ಮತ್ತು ಆರೋಗ್ಯಕರ ಜೀವನಶೈಲಿಯ ಮೂಲಕ ಮಕ್ಕಳ ಮನಸ್ಸು ಮತ್ತು ದೇಹವನ್ನು ಪೋಷಿಸುವಂತೆ ವಿನ್ಯಾಸಗೊಳಿಸಲಾಗಿದೆ. ಮಕ್ಕಳು ಸರಳ ಮತ್ತು ನೈಸರ್ಗಿಕ ಚಿಕಿತ್ಸೆಗಳ ಬಗ್ಗೆ ಅನುಭವಾತ್ಮಕವಾಗಿ ಕಲಿಯುವ ಜೊತೆಗೆ ವಿವಿಧ ಮನೋರಂಜನಾತ್ಮಕ ಚಟುವಟಿಕೆಗಳು ಸದಾ ಮಕ್ಕಳನ್ನು ಚುರುಕಾಗಿಯೂ, ಕುತೂಹಲದಿಂದ ಕೂಡಿರುವಂತೆ ಮಾಡುತ್ತದೆ. ಭಾಗವಹಿಸುವವರಿಗೆ ಪೌಷ್ಟಿಕಾಂಶಯುಕ್ತ ಊಟ, ಆರೋಗ್ಯಕರ ತಿಂಡಿ ತಿನಿಸುಗಳು ಮತ್ತು ನೈಸರ್ಗಿಕ ಪಾನೀಯಗಳನ್ನು ಒದಗಿಸಲಾಗುತ್ತದೆ. ಶಿಬಿರದಲ್ಲಿ ಯೋಗಾಭ್ಯಾಸ, ಪ್ರಾಣಿ ಪಕ್ಷಿಗಳ ಆಸನಗಳು, ಸೂರ್ಯ ನಮಸ್ಕಾರ, ಸ್ಮರಣಶಕ್ತಿ ವೃದ್ಧಿಗೆ ಮೆಮೊರಿ ಗೇಮ್ಸ್, ಏಕಾಗ್ರತೆ ಹೆಚ್ಚಿಸಲು ಪ್ರಾಣಾಯಾಮ, ಉಸಿರಾಟ ವ್ಯಾಯಾಮಗಳು ಸೇರಿದಂತೆ ಹಲವಾರು ಚಟುವಟಿಕೆಗಳನ್ನು ಮಾಡಿಸಲಾಗುತ್ತದೆ. ಜೊತೆಗೆ ಕಲೆ, ಕರಕುಶಲ ಕಲೆ, ನೃತ್ಯ, ಸಂಗೀತ ಮತ್ತು ಚಿತ್ರಕಲೆ ಚಟುವಟಿಕೆಗಳ ಮೂಲಕ ಮಕ್ಕಳ ಸೃಜನಶೀಲತೆಯನ್ನು ಉತ್ತೇಜಿಸಲಾಗುತ್ತದೆ. ಆರೋಗ್ಯಕರ…

Read More

ಬ್ರಹ್ಮಾವರ ಜಿ.ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಯು.ಕೆ.ಜಿ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಸಮಾರಂಭವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಉಡುಪಿಯ ಡಾ. ಎ.ವಿ ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಕೌನ್ಸಿಲರ್ ಮತ್ತು ಕಛೇರಿಯ ಆಡಳಿತಾಧಿಕಾರಿಯಾದ ಶ್ರೀಮತಿ ಸೌಜನ್ಯ ಶೆಟ್ಟಿಯವರು ಆಗಮಿಸಿದ್ದರು. ಅವರು ಮಾತನಾಡಿ, ತೇವ ಮಣ್ಣಿನಿಂದ ವಿವಿಧ ಆಕಾರಗಳನ್ನು ಮಾಡಬಹುದು, ಬಿಳಿ ಕಾಗದದಿಂದ ವಿಮಾನ, ಹೂವು ಇತ್ಯಾದಿಗಳನ್ನು ತಯಾರಿಸಬಹುದು. ಮಕ್ಕಳು ಚಿಕ್ಕ ವಯಸ್ಸಿನಲ್ಲಿ ಪೋಷಕರಿಂದ ಕಲಿಯುತ್ತಾರೆ. ಬೆಳೆದಂತೆ ಪೋಷಕರನ್ನು ಅನುಸರಿಸುತ್ತಾರೆ. ಪೋಷಕರು ಮಕ್ಕಳೊಂದಿಗೆ ಒಳ್ಳೆಯ ಸಂಬಂಧವನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿ ಘಟಿಕೋತ್ಸವದ ವಿದ್ಯಾರ್ಥಿಗಳಿಗೆ ಅಭಿನಂದನೆ ತಿಳಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಎಲ್ಲಾ ಮಕ್ಕಳ ಭವಿಷ್ಯಕ್ಕೆ ಶುಭ ಹಾರೈಸಿ ಮಾತನಾಡಿ, ಮಕ್ಕಳಿಗೆ ಶಿಕ್ಷಣ ನೀಡಲು ನಮ್ಮ ಮೇಲೆ ವಿಶ್ವಾಸವಿಟ್ಟ ಪೋಷಕರಿಗೆ ಧನ್ಯವಾದ ಸಲ್ಲಿಸಿದರು. ನಾವು ಸದಾ ಮಕ್ಕಳನ್ನು ಹೆಚ್ಚು ಹೆಚ್ಚು ಚಟುವಟಿಕೆಗಳಲ್ಲಿ ಭಾಗವಹಿಸಲು ಉತ್ತೇಜಿಸುತ್ತೇವೆ. ನಾವು ಮಕ್ಕಳನ್ನು ಪ್ರೋತ್ಸಾಹಿಸಿದರೆ, ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಯುತ್ತದೆ. ಮಕ್ಕಳನ್ನು ಪ್ರೇರೇಪಿಸಿದ ಶಿಕ್ಷಕ ವೃಂದದವರಿಗೆ ಧನ್ಯವಾದ ಸಲ್ಲಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ…

Read More