Author: admin

ಕರಾವಳಿಯ ನಗುಮೊಗದ ಹೀರೋ ರಾಕ್ ಸ್ಟಾರ್ ರೂಪೇಶ್‌ ಶೆಟ್ಟಿ ಅವರು ಬಿಗ್‌ಬಾಸ್‌ ವಿನ್ನರ್‌ ಆದ ಬಳಿಕ ಬಹುಬೇಡಿಕೆಯ ನಟ, ನಿರೂಪಕರಾಗಿ ಗುರುತಿಸಿಕೊಂಡಿದ್ದು, ತಾನು ಕೈಯಾಡಿಸಿದ ಪ್ರತಿಯೊಂದರಲ್ಲೂ ಸಕ್ಸಸ್‌ ಆಗುತ್ತಿರುವುದು ಅವರ ಪ್ರತಿಭೆಗೆ ಸಾಕ್ಷಿ. ಐಪಿಎಲ್‌ ಸಂದರ್ಭದಲ್ಲೂ ಟೀವಿ ಚಾನೆಲ್‌ನಲ್ಲಿ ಕಾಮೆಂಟರರ್‌ ಆಗಿ ಬ್ಯುಸಿಯಾಗಿದ್ದ ರೂಪೇಶ್‌ ಶೆಟ್ಟಿ ಈಗ ಸುಲಭದಲ್ಲಿ ಯಾರ ಕೈಗೂ ಸಿಗದಷ್ಟು ಕೆಲಸ ಕಾರ್ಯಗಳಲ್ಲಿ ವ್ಯಸ್ತರಾಗಿದ್ದಾರೆ. ಅವರ ನಟನೆಯ ‘ಜೈ’ ಸಿನಿಮಾವಂತೂ ಸೂಪರ್‌ ಹಿಟ್‌ ಆಗಿ, ನೂರು ದಿನಗಳನ್ನು ಪೂರೈಸಿ ನಿರ್ಮಾಪಕರಿಗೆ ಖುಷಿ ಕೊಟ್ಟಿದೆ. ಒಂದು ಹೊಸ ರೂಪದ ಸಿನೆಮಾ ಎಂದು ಜನಮನ್ನಣೆಯನ್ನೂ ಗಳಿಸಿದೆ. ಜೊತೆಗೆ ಹೊಸ ತುಳು ಸಿನಿಮಾ ‘ಬ್ರೋ’ ಘೋಷಣೆಯಾಗಿದೆ. ಈಗ ರೂಪೇಶ್‌ ನಟಿಸಿರುವ ಮೊದಲ ತಮಿಳು ಸಿನೆಮಾ ಸನ್ನಿಧಾನಂ ಪಿ.ಒ. ತಮಿಳುನಾಡಿನಾದ್ಯಂತ ಬಿಡುಗಡೆಯಾಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇವರ ನಟನೆಗೆ ತಮಿಳರು ಕೂಡಾ ಫಿದಾ ಆಗಿದ್ದು, ರೂಪೇಶ್‌ ಶೆಟ್ಟಿಗೆ ಅಲ್ಲೂ ಭಾರೀ ಬೇಡಿಕೆ ವ್ಯಕ್ತವಾಗುವ ಸಾಧ್ಯತೆ ಇದೆ. ಈ ನಡುವೆ ಇವರು ಮತ್ತೊಂದು ಕನ್ನಡ ಸಿನೆಮಾದಲ್ಲೂ…

Read More

ಎಚ್ಚಿನಗುಲು ಪಿನಯೆರ್, ಬೊಂದೆ ಪಂಡ ದಾದ ಪಂದ್. ಬೂತಾಯಿದ ನನಾತ್ ಸಸಾರದ ಪುದರೇ ಬೊಂದೆ. ಜೋರ್‌ದ ಪೊನ್ನುಲೆಗ್ ‘ನಿನನ್ ಆಲ್ ಒಂಜಿ ಬೊಂದೆಗ್ ಅಡವು ದೀವೊಲು’ ಇಂಚ ಪನುವೆರ್ ಪೊಂಜೋವುಲು ತನ್ಕ್‌ಲೆನ (ಪಾಪದ) ಆನ್ ಜೋಕುಲೆಗ್. ಒವುಲ ಒಂಜಿ ಪಿರಿಯದ ವಸ್ತುನು ಸರಿಟ್ ತೂವಂದೆ ಪತ್ತಂದೆ ಕನತಡ, ಆ ವಸ್ತ್ ಬಿಲೆಕ್ ತಕ್ಕಂತಿನ ಅತ್ತ್‌ಡ, ‘ಪೋಯೆರ್, ಬೂತಾಯಿ ಕಂತಿಲಕ್ಕ ಕನತೆರ್’ ಪಂದ್ ಇಲ್ಲದ ಬಾಕಿದಗುಲು (ಎಚ್ಚಾದ್ ಬುಡೆದಿ) ಅಂಗ್‌ಸಾವೆರ್. ಪಂಡ ಬೊಂದೆಗ್ ದಾಲ ಬಿಲೆನೇ ಇಜ್ಜಿ. ದುಂಬು ನಮ್ಮೂರ್‌ದ ಕಡಲ್‌ಡ್ ಬಾರಿ ಬೂತಾಯಿದ ಚೊಪ್ಪ. ಸಂತೆಡ್ ಪಲ್ಲಾಯಿಡ್ ಗೋರುದು ಮಾರುನು ಬೂತಾಯಿ, ಚಕ್ರೊಗು (25 ನಯಾ ಪೈಸೆ) ಒಂಜಿ ಪಲ್ಲಾಯಿ ನಿಲ್ಕೆ. ಲೆಕ್ಕ ಮಲ್ತ್ ಏರ್ ಕುಲ್ಲುನು, ರಡ್ಡ್ ರಡ್ಡ್ ನಾಲ್, ನಾಲ್ ನಾಲ್ ಆಜಿ, ಆಜಿ ಆಜಿ.. ಪನೊಂದು. ಒರೊರಾ ರಂಪೊನಿಗ್ ಮಸ್ತ್ ಬೂತಾಯಿ ಬೂರ್ದು, ಮಾರ್ದ್ ಪೋವಂದೆ, ಮರಿಯೊಲೊಡು ನುಂಗಾವರೆಲಾ ಆವಂದೆ, ಕಡೆಕ್ ಕುಟ್ಟೆ ಮಲ್ಪುನು. ಪಂಡ ಲಾರಿಗಟ್ಟಲೆ…

Read More

ಗ್ರಾಮೀಣ ಪ್ರದೇಶದ ಮಕ್ಕಳು ಉತ್ತಮ‌ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ರೂಪಿಸಬೇಕು. ಈ ಮೂಲಕ ಗ್ರಾಮದ ಅಭಿವೃದ್ದಿ ಆಗಬೇಕು ಎಂದು ಉದ್ಯಮಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಹೇಳಿದರು. ಅವರು ದ.ಕ.ಜಿಲ್ಲಾ ಪಂಚಾಯತ್ ಹಿರಿಯ ಪ್ರಾರ್ಥಮಿಕ ಶಾಲೆ ಕರ್ನಿರೆ ಇಲ್ಲಿನ ವಿದ್ಯಾರ್ಥಿಗಳಿಗೆ ತಮ್ಮ ಪ್ರಾಯೋಜಕತ್ವದಲ್ಲಿ ಉಚಿತ ಪುಸ್ತಕ ವಿತರಿಸಿ ಮಾತನಾಡಿ, ಕಳೆದ 30 ವರ್ಷಗಳಿಂದ ಇಲ್ಲಿನ ಮಕ್ಕಳಿಗೆ ಪುಸ್ತಕ ಕೊಡುತ್ತಿದ್ದೇನೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ಕೊರತೆ ಆಗಬಾರದು ಎಂಬುದೇ ನನ್ನ ಮೂಲ ಉದ್ದೇಶವಾಗಿದೆ ಎಂದರು. ಕನ್ನಡ ಉಳಿಸಿ ಬೆಳೆಸಿ ಸಂಘಟನೆಯ ದ.ಕ, ಉಡುಪಿ ಜಿಲ್ಲಾಧ್ಯಕ್ಷ ವಾಸುದೇವ ರಾವ್ ಮಾತನಾಡಿ, ಕರ್ನಿರೆ ವಿಶ್ವನಾಥ ಶೆಟ್ಟಿಯವರ ಸಮಾಜಮುಖಿ ಚಿಂತನೆಗಳು ಅಭಿನಂದನೀಯವಾದುದು. ಕಳೆದ ಕೆಲ ವರ್ಷಗಳಿಂದ ಅವರ ಸಾಮಾಜಿಕ ಚಟುವಟಿಕೆಗಳನ್ನು ಕಂಡಿದ್ದೇನೆ. ಬಡವರ ಬಗ್ಗೆ ವಿಶೇಷ ಕಾಳಜಿ ಹೊಂದಿದವರಾಗಿದ್ದಾರೆ. ಗ್ರಾಮೀಣ ಪ್ರದೇಶದ ಶಾಲೆ ಉಳಿಸಿ ಬೆಳೆಸಲು ಅವರ ಕೊಡುಗೆ ಅಭಿನಂದನೀಯ ಎಂದರು. ಈ ಸಂದರ್ಭ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್…

Read More

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯಡಿ ಕರ್ತವ್ಯ ನಿರತ ಯಕ್ಷಗಾನ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರವು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ನಾಗವೃಜ ಕ್ಷೇತ್ರ ಪಾವಂಜೆ ಇಲ್ಲಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಾಗಾರವನ್ನು ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ನಿರ್ದೇಶಕರಾದ ಪಟ್ಲ ಸತೀಶ್ ಶೆಟ್ಟಿ ಉದ್ಘಾಟಿಸಿ ಯಕ್ಷಗಾನ ಶಿಕ್ಷಕರ ಕಾರ್ಯಾಗಾರದ ಪ್ರಾಮುಖ್ಯತೆಯನ್ನು ವಿವರಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಯಕ್ಷಗಾನ ಶಿಕ್ಷಕರರ ತರಬೇತಿ ಕಾರ್ಯಾಗಾರವು ಪ್ರಾರಂಭವಾಯಿತು. ಪ್ರಸಕ್ತ ಕಾರ್ಯಾಗಾರದಲ್ಲಿ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ತೆಂಕುತಿಟ್ಟು ಯಕ್ಷಗಾನ ತಂತ್ರಜ್ಞಾನಾಧಾರಿತ ಪಠ್ಯಪುಸ್ತಕದ ಬಗ್ಗೆ ಪರಿಚಯಾತ್ಮಕ ತರಗತಿಯನ್ನು ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಸಂಯೋಜಕ ದೀವಿತ್ ಎಸ್ ಕೆ ಪೆರಾಡಿ ನಡೆಸಿದರು. ಈ ಪಠ್ಯ ಪುಸ್ತಕದಲ್ಲಿರುವ ಕ್ಯೂ ಆರ್ ಕೋಡನ್ನು ಬಳಸಿ ಅದರಲ್ಲಿರುವ ನಾಟ್ಯಗಳ ಹೆಜ್ಜೆಗಾರಿಕೆಯ ಬಗ್ಗೆ ಪ್ರಾಯೋಗಿಕ ತರಗತಿಯನ್ನು‌ ನಡೆಸಲಾಯಿತು. ತಾಳ, ಕಾಲ, ತತ್ಕಾರ, ಬಿಡಿತ, ಮುಕ್ತಾಯ ಇವುಗಳ ಶಾಸ್ತ್ರೀಯ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಲಾಯಿತು. ಇದೇ ಸಂದರ್ಭದಲ್ಲಿ…

Read More

ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ (ರಿ) ಮೊಳಹಳ್ಳಿ ಇವರ ಆಶ್ರಯದಲ್ಲಿ ರಾಜ್ಯಮಟ್ಟದಲ್ಲಿ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ಕ್ರೀಡಾಪಟುಗಳಿಗೆ ಗೌರವ ಸನ್ಮಾನ, ಮೊಳಹಳ್ಳಿ ಗ್ರಾಮದ ವಿಶಿಷ್ಟ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ ವಿಭಾಗ)ದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್‌ನ ಸಂಸ್ಥಾಪಕರಾದ ಮೊಳಹಳ್ಳಿ ದಿನೇಶ್ ಹೆಗ್ಡೆ ವಹಿಸಿದ್ದರು. ಉದ್ಘಾಟಕರಾಗಿ ಭಾಗವಹಿಸಿದ್ದ ನಿವೃತ್ತ ಪ್ರಾಂಶುಪಾಲರಾದ ಎಂ. ಬಾಲಕೃಷ್ಣ ಶೆಟ್ಟಿ ಮಾತನಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ವಿದ್ಯಾರ್ಥಿವೇತನ ನೀಡುವ ಮೂಲಕ ಟ್ರಸ್ಟ್ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಸಾಧನೆಗೈದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕೆಂಬ ಸಂದೇಶವನ್ನು ಟ್ರಸ್ಟ್ ನೀಡುತ್ತಿದೆ ಎಂದು ಹೇಳಿದರು. ಟ್ರಸ್ಟಿ ಸಂತೋಷ ಕಾಂಚನ್…

Read More

ಸನಾತನ ಹಿಂದೂ ಧರ್ಮದಲ್ಲಿ ದೇವಸ್ಥಾನಗಳಿಗಾಗಲಿ ಅಥವಾ ಮನೆಯಲ್ಲಾಗಲಿ ಪೂಜೆ ಮುಗಿದ ನಂತರ ದೇವರಿಗೆ ಮಹಾ ಮಂಗಳಾರತಿ ಮಾಡುವುದು ಕಡ್ಡಾಯ. ಆದರೆ, ಆರತಿ ತಟ್ಟೆಯನ್ನು ಭಕ್ತರ ಮುಂದೆ ತಂದಾಗ ಅದಕ್ಕೆ ಕಡ್ಡಾಯವಾಗಿ ಹಣ ಅಥವಾ ನಾಣ್ಯಗಳನ್ನು ಹಾಕುವ ಸಂಪ್ರದಾಯ ಇಂದಿಗೂ ನಡೆದುಕೊಂಡು ಬಂದಿದೆ. ಇದು ಕೇವಲ ಮೂಢನಂಬಿಕೆಯಲ್ಲ ಅಥವಾ ಬಲವಂತದ ಆಚರಣೆಯಲ್ಲ. ಇದರ ಹಿಂದೆ ಆಳವಾದ ಧಾರ್ಮಿಕ, ಐತಿಹಾಸಿಕ ಮತ್ತು ವೈಜ್ಞಾನಿಕ ಕಾರಣಗಳಿವೆ ಎಂದು ಶಾಸ್ತ್ರ ಹೇಳಿದೆ. ಶಾಸ್ತ್ರಗಳ ಪ್ರಕಾರ, ಭಗವಂತನು ನಮಗೆ ನೀಡಿರುವ ಐಶ್ವರ್ಯ, ಆರೋಗ್ಯ ಮತ್ತು ಪ್ರಕೃತಿಯ ಕೊಡುಗೆಗಳಿಗೆ ಪ್ರತಿಯಾಗಿ ನಾವು ಕೃತಜ್ಞತೆ ಸಲ್ಲಿಸಬೇಕು. ಆರತಿ ತಟ್ಟೆಗೆ ನಾಣ್ಯವನ್ನು ಹಾಕುವುದು ಎಂದರೆ ನಮ್ಮಲ್ಲಿರುವ ‘ಮಮಕಾರ’ ಮತ್ತು ‘ಅಹಂಕಾರ’ವನ್ನು ದೇವರ ಪಾದಕ್ಕೆ ಅರ್ಪಿಸುವುದು ಎಂದರ್ಥ. ದೇವಸ್ಥಾನಕ್ಕೆ ಹೋದಾಗ ಬರಿಗೈಯಲ್ಲಿ ಹೋಗಬಾರದು ಮತ್ತು ಬರಿಗೈಯಲ್ಲಿ ವಾಪಸು ಬರಬಾರದು ಎಂಬ ನಿಯಮವಿದೆ. ಭಕ್ತಿಪೂರ್ವಕವಾಗಿ ನೀಡುವ ಈ ಕಾಣಿಕೆ ಮನುಷ್ಯನಲ್ಲಿ ಕಂಜೂಸು ಗುಣವನ್ನು ದೂರ ಮಾಡಿ, ತ್ಯಾಗ ಮನೋಭಾವನೆಯನ್ನು ಬೆಳೆಸುತ್ತದೆ. ಪ್ರಾಚೀನ ಇತಿಹಾಸವನ್ನು ಗಮನಿಸಿದರೆ, ದೇವಸ್ಥಾನಗಳು…

Read More

ಬಂಟರ ಸಂಘ (ರಿ) ಸುರತ್ಕಲ್ ಇದರ ವಾರ್ಷಿಕ ಮಹಾಸಭೆ ಮತ್ತು ಅಭಿನಂದನೆ, ಸಹಾಯ ಹಸ್ತ, ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಜೂನ್ 14 ರಂದು ಭಾನುವಾರ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಮಕ್ಕಳಿಂದ ವೈವಿಧ್ಯಮಯ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ವಿಶೇಷ ಮಹಾಸಭೆ, 11 ಗಂಟೆಗೆ ವಾರ್ಷಿಕ ಮಹಾಸಭೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಗ್ರಾಮವಾರು ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದೆ. ಸಂಜೆ 4.30 ಕ್ಕೆ ಸಭಾ ಕಾರ್ಯಕ್ರಮ, ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಬಾಳ‌ ಜಗನ್ನಾಥ ಶೆಟ್ಟಿ ವಹಿಸಲಿದ್ದಾರೆ. ಸಮಾರಂಭವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಂಬಯಿ ವಿ.ಕೆ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು, ಮುಂಬಯಿ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಡಾ. ಪಿ.ವಿ ಶೆಟ್ಟಿ ಮುಂಬಯಿ, ಮುಂಬಯಿ ಬಂಟರ…

Read More

ಬೇಸಿಗೆ ಶಿಬಿರ, ಕೆಲವಷ್ಟು ಕಾರ್ಯಾಗಾರ, ಟ್ರಿಪ್, ಅಪ್ಪ ಅಮ್ಮನ ಜೊತೆ, ಪ್ರೆಂಡ್ಸ್ ಜೊತೆ ತಿರುಗಾಟ, ಆಟ, ಕೂಟ, ಮೋಜು ಮಸ್ತಿ ಎಲ್ಲವೂ ಮುಗಿಸಿ ಮಕ್ಕಳು ಶಾಲೆಗೆ ತಯಾರಾದರು. ಸ್ವಲ್ಪ ದಿವಸ ರಿಲೇಕ್ಸ್ ಆಗಿದ್ದ ಅಪ್ಪ ಅಮ್ಮನೂ ಮತ್ತೆ ಬೆಳಿಗ್ಗೆ ಬೇಗ ಎದ್ದು ಮಕ್ಕಳಿಗೆ ಬೇಕಾದ್ದೆಲ್ಲಾ ತಯಾರು ಮಾಡುವ ಬೆಳಿಗ್ಗಿನ ಗಡಿಬಿಡಿ ಮತ್ತೆ ಪ್ರಾರಂಭವಾಯಿತು. ಮೊದಲಾಗಿ ದಾಖಲಾಗಿ ಶಾಲೆಗೆ ಹೊರಟ ಪುಟಾಣಿಗಳಿಗೆ ಏನೇನೆಲ್ಲಾ ಶೃಂಗಾರ ಮಾಡಿ ಅವರ ಜೊತೆ ಫೋಟೋ, ಸೆಲ್ಫಿ ತೆಗೆದು ಬೀಳ್ಕೊಡುವ ಸುಸಮಯ ಮತ್ತೆ ಬಂತು. ಎಲ್ಲಾ ಮುದ್ದು ಪುಟಾಣಿಗಳಿಗೂ ಶಿಕ್ಷಣದ ಹೊಸ ವರ್ಷದ ಶುಭಾಶಯಗಳು. ಯುನಿಫಾರ್ಮ್ ಶೂ ಧರಿಸಿ, ಕೈಯಲ್ಲಿ ಒಂದು ನೀರಿನ ಬಾಟಲ್, ಬೆನ್ನಿಗೆ ಪುಸ್ತಕದ ಮಣ ಭಾರದ ಚೀಲ ಹೊತ್ತು ಧೋ ಎಂದು ಸುರಿವ ಮಳೆಗೆ ಕೊಡೆಯೋ ರೈನ್ ಕೋಟೋ ಧರಿಸಿ ನಡೆದು ಹೋಗುತ್ತಿದ್ದ ಆ ಕಾಲ ಕಳೆಯಿತು. ಈಗ ಎಲ್ಲವೂ ಬದಲಾಗಿದೆ. ಇದೆಲ್ಲವೂ ತಂದೆಯೋ ತಾಯೋ ಹೊತ್ತು ಮಗುವಿನ ಕೈ ಹಿಡಿದು ಮನೆಯೆದುರು ಬರುವ…

Read More

ಮೂಡುಶೆಡ್ಡೆ ಹೊಸಲಕ್ಕೆ ದಿವಂಗತ ದೇವಕಿ ಸಂಜೀವ ಶೆಟ್ಟಿ ಅವರ ನಾಲ್ಕನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಅವರ ಪುತ್ರರು ಕೊರಗ ಸಮುದಾಯಕ್ಕೆ ಸೇರಿದ ಗಿರಿಜ ಎಂಬವರಿಗೆ ನೂತನವಾಗಿ ನಿರ್ಮಿಸಿದ ಮನೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮನೆಯ ಕೀಲಿ ಕೈ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ವಕೀಲ ಹೊಸಲಕ್ಕೆ ಉಮೇಶ್ ಶೆಟ್ಟಿ ಅವರು, ಅಮ್ಮ ದಿವಂಗತ ದೇವಕಿ ಶೆಟ್ಟಿಯವರು ನೊಂದವರು, ಕಷ್ಟದಲ್ಲಿರುವವರಿಗೆ ನೆರವಾಗುತ್ತಿದ್ದ ಜೀವ. ಅವರ ಮಾರ್ಗದರ್ಶನದಲ್ಲೇ ಬೆಳೆದ ನಾವು ಅವರ ನಾಲ್ಕನೇ ವರ್ಷದ ಪುಣ್ಯಸ್ಮರಣೆಗಾಗಿ ಸಮಾಜಕ್ಕೆ ನಮ್ಮಿಂದಾದ ಸೇವೆ ಸಲ್ಲಿಸಬೇಕು ಎಂಬ ದೃಷ್ಟಿಯಿಂದ ಮೂಡುಶೆಡ್ಡೆ ಪಂಚಾಯತ್ ಅನ್ನು ಸಂಪರ್ಕಿಸಿದ್ದೆವು. ಅಲ್ಲಿನ ಪಿಡಿಒ ಅವರು ಮನೆ ಸಂಪೂರ್ಣವಾಗಿ ಕುಸಿದು ಬಿದ್ದು ಸಮಸ್ಯೆಯನ್ನು ಎದುರಿಸುತ್ತಿದ್ದ ಕೊರಗ ಸಮುದಾಯದ ಗಿರಿಜ ಅವರ ಕುಟುಂಬವನ್ನು ನಮಗೆ ತೋರಿಸಿದ್ದು, ಅವರಿಗೆ 10 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಹಂಚಿನ ಮನೆ ನಿರ್ಮಿಸಿ ಕೊಟ್ಟಿದ್ದೇವೆ. ನಮಗೆ ಜನರ ಆಶೀರ್ವಾದ ಇದ್ದರೆ ಸಾಕು.…

Read More

ಸುತ್ತಲೂ ನೀರು. ಮಧ್ಯದಲ್ಲೊಂದು ಸಂಭ್ರಮ ಲೋಕ. 5 ದಿನ ಕಳೆದದ್ದೇ ಗೊತ್ತಾಗಿಲ್ಲ.ಅಯ್ಯೋ ಮುಗಿದು ಹೋಯಿತಲ್ಲಾ ಇಂಥದ್ದೊಂದು ಮಧುರ ಕ್ಷಣ ಎಂದು ಆ ಸಂಭ್ರಮ ಲೋಕವನ್ನು ಬಿಟ್ಟು ಬರಲು ಮನಸ್ಸಾಗದೆ ಬೇಸರಿಸಿಕೊಂಡವರೇ ಹೆಚ್ಚು. ಏನು ಹೇಳುತ್ತೇವೆಂದು ಗೊತ್ತಾಗಿಲ್ಲ ತಾನೇ? ಇದು ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ (ರಿ) ಮಂಗಳೂರು ಮತ್ತು ತ್ರಿರಂಗ ಸಂಗಮ ಮುಂಬಯಿ ವತಿಯಿಂದ ಕಲಾವಿದರು ಹಾಗೂ ಅವರ ಕುಟುಂಬ ಸದಸ್ಯರಿಗೆ ಏರ್ಪಡಿಸಿದ ‘ಸಮುದ್ರಯಾನ’ ಎಂಬ ಪ್ರವಾಸದ ಬಗ್ಗೆ ಪ್ರವಾಸಿಗರ ಅನುಭವ. ಮಂಗಳೂರಿನಿಂದ ಸುಮಾರು 300 ಮಂದಿ ಹಾಗೂ ಮುಂಬಯಿಯಿಂದ ಸುಮಾರು 340 ಮಂದಿ ಸೇರಿ ಸುಮಾರು 640 ಮಂದಿಗೆ 5 ದಿನಗಳ ಕಾಲ ಲಕ್ಷದ್ವೀಪ ಪ್ರವಾಸವನ್ನು ಕೋರ್ಡೆಯಿಲಾ ಎಂಬ ವಿಲಾಸಿ ಹಡಗಿನಲ್ಲಿ ಆಯೋಜಿಸಲಾಗಿತ್ತು. ಈ 5 ದಿನಗಳ ಕಾಲ ಎಲ್ಲರೂ ಮೊಬೈಲ್‌ ಬದಿಗಿಟ್ಟು ಜೋಷ್‌ ಮಾಡಿದ್ದೇ ಮಾಡಿದ್ದು. ಹೆಚ್ಚಿನ ಕಾಲವನ್ನು ಕಳೆದದ್ದು ಹಡಗಿನಲ್ಲಿಯೇ. ಅಂಥ ಹಡಗಿನಲ್ಲಿ ಬಹುತೇಕರಿಗೆ ಇದು ಮೊದಲ ಪ್ರವಾಸದ ಅನುಭವ. ಹೆಚ್ಚಿನವರು ಕುಟುಂಬದ ಜತೆಯಲ್ಲೇ ಇದ್ದ ಕಾರಣ…

Read More