Author: admin
ಯುವಜನತೆಯು ಮಾದಕ ವಸ್ತುಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದು ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸುವ ಸಲುವಾಗಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಕಾರ್ಕಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಾರ್ಕಳ ನಗರ ವಲಯ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ(ರಿ.), ಕಾರ್ಕಳ ತಾಲೂಕು ಹಾಗೂ ಕಾರ್ಕಳ ನಗರ ಆರಕ್ಷಕ ಠಾಣೆ ಮತ್ತು ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಕಾರ್ಕಳದ ಜಂಟಿ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಮಾದಕ ವಸ್ತು ವಿರೋಧಿ ದಿನ ಹಾಗೂ ನಶಾ ಮುಕ್ತ ಭಾರತ ಎಂಬ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಕಳ ನಗರ ವಲಯದ ಪೊಲೀಸ್ ಉಪನಿರೀಕ್ಷಕರಾದ ಶ್ರೀ ಶಿವಕುಮಾರ್ ಎಸ್ ಆರ್. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಬದುಕಿನ ಅದಃಪತನಕ್ಕೆ ಕಾರಣವಾಗುತ್ತದೆ. ಯುವ ಜನತೆ ದೇಶಕ್ಕೆ ಶಕ್ತಿಯಾಗಿ ಪೂರಕವಾಗಬೇಕೇ ವಿನಹ ಮಾರಕವಾಗಬಾರದು ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವವರ ವಿರುದ್ಧ ಕಾನೂನಾತ್ಮಕವಾಗಿ ಕಠಿಣ…
ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಬಿಲ್ಲಾಡಿ ಪ್ರಥ್ವಿರಾಜ್ ಶೆಟ್ಟಿ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಅಸಮರ್ಪಕತೆ ಕುರಿತು ಮನವಿ ನೀಡಲಾಯಿತು. ನರೇಂದ್ರ ಮೋದಿಯವರ ಆಯುಷ್ಮಾನ್ ಯೋಜನೆಯ ಪ್ರಯೋಜನವನ್ನು ಪಡೆಯಲು ಉಡುಪಿ ಜಿಲ್ಲೆಯ ಜನಸಾಮಾನ್ಯರು ಪರದಾಡುತ್ತಿದ್ದು, ಈ ಕುರಿತು ಉಡುಪಿ ಜಿಲ್ಲಾಧಿಕಾರಿಗಳಿಗೆ ಮಾನವಿ ನೀಡಿ ಸಮಸ್ಯೆಯನ್ನು 7 ದಿನಗಳ ಒಳಗೆ ಸರಿಪಡಿಸುವಂತೆ ಗಡುವು ನೀಡಲಾಯಿತು. ಇಲ್ಲವೇ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸುವದಾಗಿ ಎಚ್ಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಭಿರಾಜ್ ಸುವರ್ಣ, ಪ್ರದೀಪ್ ಕುಂದರ್, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರುಗಳಾದ ಗುರುರಾಜ್ ಮಾಡ, ಗಜೇಂದ್ರ ಎಸ್ ಬೆಳಮನೆ, ಪ್ರಥ್ವಿರಾಜ್ ಮಣಿಪಾಲ, ಕಾರ್ಯದರ್ಶಿಗಳಾದ ರಾಕೇಶ್ ಅಮೀನ್ ಕಾರ್ಕಳ, ನಿತೇಶ್ ಶೆಟ್ಟಿ ಕಪ್ಪೆಟ್ಟು, ಯತೀಶ್ ಶೆಟ್ಟಿ, ಕಾರ್ಯಕಾರಿಣಿ ಸದಸ್ಯರಾದ ದರ್ಶಿತ್ ಶೆಟ್ಟಿ, ಗಣೇಶ್ ಕುಂದರ್, ನಿತೇಶ್, ಆದಿತ್ಯ ಆಚಾರ್ಯ ಗ್ರಾಮಾಂತರ ಅಧ್ಯಕ್ಷ ಸುಶಾಂತ್ ಪೂಜಾರಿ, ಉಪಾಧ್ಯಕ್ಷ ಆಯುಷ್ ಪೂಜಾರಿ ಉಪಸ್ಥಿತರಿದ್ದರು.
ಹುಟ್ಟಿದ ಪ್ರತಿಯೊಂದು ಜೀವಿಗೂ ದೈಹಿಕ ಸ್ವಾಸ್ಥ್ಯ ಎಂಬುದು ಅತ್ಯಗತ್ಯ. ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮತೋಲನ ಒಬ್ಬ ಮನುಷ್ಯನ ಅವಿಭಾಜ್ಯ ಅಂಗ. ಅಂತಹ ಮಾನಸಿಕ ರೋಗಕ್ಕೆ ಸಂಬಂಧಪಟ್ಟ ಒಂದು ಅಪರೂಪದ ರೋಗದ ಬಗ್ಗೆ ಮತ್ತು ಅದನ್ನು ಹೇಗೆ ಗುಣಪಡಿಸಲು ಸಾಧ್ಯ ಎಂಬುದರ ಬಗ್ಗೆ ನಾನು ಇಲ್ಲಿ ಬರೆಯುತ್ತಿದ್ದೇನೆ. ಪಿಡ್ಸ್ / ಮೂರ್ಛೆ ರೋಗ ಅಥವಾ ಅಪಸ್ಮಾರ ಕಾಯಿಲೆಯ ಬಗ್ಗೆ ನಾವೆಲ್ಲರೂ ಕೇಳಿರುತ್ತೇವೆ. ವರ್ಲ್ಡ್ ಹೆಲ್ತ್ ಆರ್ಗನೈಸೇಷನ್ (WHO) ಅಥವಾ ವಿಶ್ವ ಆರೋಗ್ಯ ಸಂಸ್ಥೆಯ ಒಂದು ಸಮೀಕ್ಷೆಯ ಪ್ರಕಾರ ಜಗತ್ತಿನಲ್ಲಿ ಸುಮಾರು 50 ಮಿಲಿಯನ್ (5 ಕೋಟಿ) ಜನರು ಈ ಅಪಸ್ಮಾರ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅದೇ ನಮ್ಮ ಭಾರತ ದೇಶದಲ್ಲಿ ನೋಡುವುದಾದರೆ, ಪ್ರತೀ 1000 ಜನರಲ್ಲಿ 5 ರಿಂದ 10 ಜನ ಎಂದರೆ, ಸರಿ ಸುಮಾರು ಒಂದು ಕೋಟಿಗೂ ಅಧಿಕ ಮಂದಿ ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅಪಸ್ಮಾರ ಎಂಬ ಕಾಯಿಲೆಯು ಮೆದುಳಿನ ನರಕೋಶಗಳು ಅಸಹಜವಾಗಿ ಮತ್ತು ಅತಿಯಾಗಿ ವಿದ್ಯುತ್ ಸಂಕೇತಗಳನ್ನು ಉತ್ಪಾದಿಸಿದಾಗ ಉಂಟಾಗುತ್ತದೆ.…
ಬ್ರಹ್ಮಾವರ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ‘ಪ್ರೆಷರ್ಸ್ ಡೇ’ ಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಖ್ಯಾತ ಯಕ್ಷಗಾನ ಕಲಾವಿದೆ, ವಿಮರ್ಷಕಿ, ಚಿಂತಕಿ ಶ್ರೀಮತಿ ಅಶ್ವಿನಿ ಹೆಗ್ಡೆ ಕೊಂಡದಕುಳಿ ಆಗಮಿಸಿದ್ದರು. ಅವರು ಮಾತನಾಡಿ ಉತ್ತಮ ಜೀವನ ನಡೆಸಲು ಅಂಕದ ಜೊತೆಯಲ್ಲಿ ಪ್ರಾಯೋಗಿಕ ಜ್ಞಾನ ಅತ್ಯಗತ್ಯ. ‘ಕಲಾರಂಗ’ದಲ್ಲಿನ ಆಸಕ್ತಿಯು ನಮ್ಮನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಗಟ್ಟಿಗೊಳಿಸುತ್ತದೆ. ನಮ್ಮ ಜೀವನದಲ್ಲಿರುವ ಧನಾತ್ಮಕತೆಯನ್ನು ಕಂಡುಕೊAಡಾಗ ಮಾತ್ರ ನಾವು ಸಾಧನೆ ಮಾಡಲು ಸಾಧ್ಯ. ಜೀವನದಲ್ಲಿ ‘ರೀಲ್ ಸ್ಟಾರ್’ ಆಗದೇ ‘ರಿಯಲ್ ಸ್ಟಾರ್’ ಆಗಿ ಎಂದು ತಿಳಿಸಿ, ಅಭಿಮನ್ಯು ಚಕ್ರವ್ಯೂಹಕ್ಕೆ ಯಾಕೆ ಮತ್ತು ಹೇಗೆ ತೆರಳುತ್ತಾನೆಂದು ಯಕ್ಷಗಾನದ ಭಾಗವತಿಕೆ ಮತ್ತು ಅಭಿನಯದ ಮೂಲಕ ಪ್ರದರ್ಶಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಶಿಕ್ಷಣದ ಜೊತೆಯಲ್ಲಿ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿಯನ್ನು ಅಳವಡಿಸಿಕೊಂಡರೆ ನಿಮ್ಮ ಮುಂದಿನ ಜೀವನ ಉತ್ತಮವಾಗುತ್ತದೆ. ಅತಿಥಿಗಳ ನುಡಿಯಂತೆ ಸಂಸ್ಥೆಯಲ್ಲಿರುವ ಸೌಲಭ್ಯಗಳನ್ನು ಕೇವಲ ಉಪಯೋಗಿಸಿಕೊಳ್ಳದೇ ಸದ್ಭಳಕೆ ಮಾಡಿಕೊಳ್ಳಿ ಎಂದು ತಿಳಿಸಿದರು. ಸಂಸ್ಥೆಗೆ ಹೊಸದಾಗಿ…
ಪ್ರತಿಷ್ಠಿತ ಟೊಯೊಟಾ ಕಂಪನಿಯಲ್ಲಿ ಅಧಿಕಾರಿ. ಯಕ್ಷಗಾನ ಸಂಬಂಧಿ ಸಂಶೋಧನೆಯಲ್ಲಿ ಡಾಕ್ಟರೇಟ್. ಅಚ್ಚರಿ ಎನಿಸುವುದಿಲ್ಲವೆ?! ಹೌದು ಇದು ನಮ್ಮ ಬಂಟ ಸಾಧಕರ ವೈಶಿಷ್ಟ್ಯ. ಔದ್ಯೋಗಿಕ, ಸಾಂಸ್ಕೃತಿಕ, ಸಾಮಾಜಿಕ ಹಾಗೂ ಕಲಾ ಕ್ಷೇತ್ರದಲ್ಲಿ ತನ್ನ ಹೆಸರನ್ನು ದಾಖಲಿಸಿರುವ ಅಪೂರ್ವ ಪ್ರತಿಭೆ ಡಾ| ದೀಪಕ್ ಶೆಟ್ಟಿಯವರು ಬಾರ್ಕೂರು ಮೂಲದ ನಿವೃತ್ತ ಶಿಕ್ಷಕ ಶಿಕ್ಷಕಿಯರಾದ ಹಿಮಕರ ಶೆಟ್ಟಿ ವನಜಾ ಶೆಟ್ಟಿ ದಂಪತಿಯರ ಸುಪುತ್ರ. ಟೊಯೊಟಾ ಕಂಪನಿಯಲ್ಲಿ ಜನರಲ್ ಮ್ಯಾನೇಜರ್ ಹುದ್ದೆಯಲ್ಲಿ ಇದ್ದಂತೆಯೇ ತನ್ನ ಆಸಕ್ತಿಯ ಕ್ಷೇತ್ರವಾದ ಯಕ್ಷಗಾನ ಕುರಿತಂತೆ ಅಧ್ಯಯನ ನಡೆಸಿ ಹವ್ಯಾಸಿ ಕಲಾವಿದನಾಗಿ, ಸಂಘಟಕನಾಗಿ, ಅರ್ಥಧಾರಿಯಾಗಿ ಗುರುತಿಸಿಕೊಂಡ ಡಾ| ದೀಪಕ್ ಶೆಟ್ಟಿಯವರು ನಿಜಾರ್ಥದ ಕುಲದೀಪಕರು. ಔದ್ಯೋಗಿಕ ಕ್ಷೇತ್ರದಲ್ಲಿ ವಿಶೇಷ ಪರಿಣತಿ ಮೆರೆದ ದೀಪಕ್ ಶೆಟ್ಟರು ಜಪಾನ್ ಸೇರಿದಂತೆ ವಿದೇಶಗಳಲ್ಲಿ ಕಾರ್ಯ ನಿರ್ವಹಿಸಿ ಅಪಾರ ಅನುಭವ ಗಳಿಸಿ ಕಂಪನಿಯ ಅಮೂಲ್ಯ ಆಸ್ತಿ ಎಂಬಂತೆ ಗೌರವ ಪಾತ್ರರಾಗಿದ್ದಾರೆ. ಅನೇಕ ಸಂಘಟನೆಗಳಲ್ಲಿ ಜವಾಬ್ದಾರಿ ಸ್ಥಾನದ ಪದಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದೀಪಕ್ ಶೆಟ್ಟಿಯವರ ಸಮಾಜಮುಖಿ ಸೇವೆ ನಾಗರಿಕರ ಪ್ರಶಂಸೆಗೆ ಪಾತ್ರವಾಗಿದೆ. ಕೋವಿಡ್…
ಕುಂದಾಪುರ ಪರಿಸರದಲ್ಲಿ ಶಿಕ್ಷಣ, ಕಲೆ, ಸಾಹಿತ್ಯ, ಸಾಂಸ್ಕೃತಿಕ ವಲಯದಲ್ಲಿ ಕ್ರಿಯಾಶೀಲವಾಗಿ ಗುರುತಿಸಿಕೊಂಡಿರುವ ಸಂಘಟನಾ ಚತುರ, ವಾಗ್ಮಿಗಳಾಗಿರುವ ಡಾ| ಚೇತನ್ ಶೆಟ್ಟಿ ಕೋವಾಡಿ ಅವರು ಕುಂದಾಪುರ ತಾಲೂಕಿನ ಪ್ರತಿಷ್ಠಿತ ಯುವ ಬಂಟರ ಸಂಘದ 2026 -28 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾಗಿ ರಾಜ್ಯಮಟ್ಟದ ಗಮನ ಸೆಳೆದವರು. ಇವರ ನಿರ್ವಾಹಕ ಸಂಪಾದಕತ್ವದ ಕಾಲೇಜಿನ ವಾರ್ಷಿಕ ಸಂಚಿಕೆ ‘ಶಿಖರ’ ಸತತ ನಾಲ್ಕು ವರ್ಷ ಪ್ರಥಮ ಸ್ಥಾನ ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ. ಇದುವರೆಗೆ 200ಕ್ಕೂ ಹೆಚ್ಚು ಸರಕಾರಿ ಮತ್ತು ಖಾಸಗಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಇವರು ರಾಜ್ಯ ಮತ್ತು ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ ಪ್ರಬಂಧ ಮಂಡಿಸಿ, ಅಧ್ಯಯನ ಗೋಷ್ಠಿಯ ಅಧ್ಯಕ್ಷತೆಯನ್ನು ನಿರ್ವಹಿಸಿದ್ದಾರೆ. ‘ಕರ್ನಾಟಕ ಕರಾವಳಿಯ ಪ್ರಾದೇಶಿಕ ಅಧ್ಯಯನದ ವಿಭಿನ್ನ ಪ್ರವೃತ್ತಿಗಳು’ ಎಂಬ ವಿಷಯದ ಕುರಿತು ಪ್ರಸಿದ್ಧ ಅಂಕಣಕಾರ ಡಾ|…
ಮಕ್ಕಳು ಬಂಟರ ಸಂಘದ ಚಟುವಟಿಕೆಗಳಲ್ಲಿ ಯಾವಾಗಲೂ ಬಾಗವಹಿಸಲು ಅಥವಾ ಉಪಸ್ಥಿತರಿರಲು ಸಾಧ್ಯವಾಗದೇ ಇದ್ದಲ್ಲಿ ಮಕ್ಕಳಿಗೆ ಅವರ ಹಿರಿಯರು ಯಾ ತಂದೆ ತಾಯಂದಿರು ಶಿಕ್ಷಣದ ಜೊತೆಗೆ ಬಂಟರ ಸಂಘದ ಚಟುವಟಿಕೆಗಳ ಬಗ್ಗೆ ಮಾಹಿತಿಯಿತ್ತಲ್ಲಿ ಮುಂದೆ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಮತ್ತು ಸಂಘಕ್ಕೆ ಸಹಾಯ ನೀಡಲು ಸಾಧ್ಯ ಎಂದು ಶತಮಾನದತ್ತ ಸಾಗುತ್ತಿರುವ ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ನುಡಿದರು. ಜೂನ್ 28ರಂದು ನಾಲಾಸೋಪಾರ ಪಶ್ಚಿಮ ಗೆಲಾಕ್ಸಿ ಹೋಟೇಲಿನ ಸಭಾಗೃಹದಲ್ಲಿ ಬಂಟರ ಸಂಘ ಮುಂಬಯಿಯ ವಸಾಯಿ ದಹಾಣು ಪ್ರಾದೇಶಿಕ ಸಮಿತಿಯ ಆಶ್ರಯದಲ್ಲಿ ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯಿಂದ ನಡೆದ ಸಮಾಜದಲ್ಲಿನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ, ವಿಧವೆಯರಿಗೆ ಹಾಗೂ ಪ್ರಾದೇಶಿಕ ಸಮಿತಿಯ ವ್ಯಾಪ್ತಿಯಲ್ಲಿ 10 ಹಾಗೂ 12 ನೇಯ ತರಗತಿಯಲ್ಲಿ ಅಧಿಕ ಅಂಕ ಗಳಿಸಿದ ಪರಿಸರದಲ್ಲಿರುವ ಸಮಾಜದ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಪ್ರತಿಯೊಂದು ಪ್ರಾದೇಶಿಕ ಸಮಿತಿಯು ನೂರು ಮಕ್ಕಳನ್ನು ಶೈಕ್ಷಣಿಕ ದತ್ತು…
1928ರ ಸೆಪ್ಟೆಂಬರ್ 23ರಂದು ಉಡುಪಿಯಲ್ಲಿ ಸ್ಥಾಪನೆಯಾಗಿ, 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ನ ಅಂತರರಾಷ್ಟ್ರೀಯ ಅಧ್ಯಕ್ಷರಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ನ ಹಿರಿಯ ಸಮಾಜಸೇವಕ, ಉದ್ಯಮಿ ಹಾಗೂ ಅನಿವಾಸಿ ತುಳುವ ಸಮುದಾಯದ ಪ್ರಮುಖ ಸಂಘಟಕರಾದ ಸರ್ವೋತ್ತಮ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಪರೀಕ ಗ್ರಾಮದವರಾದ ಸರ್ವೋತ್ತಮ ಶೆಟ್ಟಿ ಅವರು ಕಳೆದ 48 ವರ್ಷಗಳಿಂದ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಕನ್ನಡ ಮತ್ತು ತುಳು ಭಾಷೆ, ಕಲೆ ಹಾಗೂ ಸಂಸ್ಕೃತಿಯ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ. ಅಬುಧಾಬಿ ಕರ್ನಾಟಕ ಸಂಘ, ಯುಎಇ ಬಂಟ್ಸ್, ಯುಎಇ ತುಳು ಕೂಟ ಸೇರಿದಂತೆ ಹಲವು ಸಂಘಟನೆಗಳ ಸ್ಥಾಪನೆ ಮತ್ತು ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಅವರು, ಅನಿವಾಸಿ ತುಳುವರನ್ನು ಜಾಗತಿಕ ಮಟ್ಟದಲ್ಲಿ ಸಂಘಟಿಸುವ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದಾರೆ. 2016 ರಲ್ಲಿ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ಐದು ದಿನಗಳ ಕಾಲ ನಡೆದ ಐತಿಹಾಸಿಕ ‘ವಿಶ್ವ ತುಳುವೆರೆ ಆಯನೊ’ದ ಅಧ್ಯಕ್ಷರಾಗಿ ಯಶಸ್ವಿ…
ಒಂದು ನಾಗರಿಕತೆಯ ಶ್ರೇಷ್ಠತೆಯನ್ನು ಅದರ ಅರಮನೆಗಳು, ದೇವಾಲಯಗಳು ಅಥವಾ ಸಾಹಿತ್ಯದಿಂದ ಮಾತ್ರ ಅಳೆಯಲಾಗುವುದಿಲ್ಲ. ಆ ಸಮಾಜವು ಕಾಲವನ್ನು ಹೇಗೆ ಅರ್ಥ ಮಾಡಿಕೊಂಡಿತು? ಋತುಗಳನ್ನು ಹೇಗೆ ಗುರುತಿಸಿತು? ಕೃಷಿಯನ್ನು ಹೇಗೆ ಸಂಘಟಿಸಿತು? ಮತ್ತು ಪ್ರಕೃತಿಯ ಚಲನೆಯನ್ನು ಹೇಗೆ ವೈಜ್ಞಾನಿಕವಾಗಿ ಗಮನಿಸಿತು? ಎಂಬುವುದು ಅದರ ನಾಗರಿಕತೆಯ ಪ್ರಮುಖ ಮಾನದಂಡಗಳಾಗಿವೆ. ಆದ್ದರಿಂದಲೇ ಜಗತ್ತಿನ ಪ್ರತಿಯೊಂದು ಪ್ರಾಚೀನ ನಾಗರಿಕತೆಯು ತನ್ನದೇ ಆದ ಕಾಲಗಣನಾ ಪದ್ಧತಿಯನ್ನು ರೂಪಿಸಿಕೊಂಡಿದೆ. ಈಜಿಪ್ಟಿನವರು ನೈಲ್ ನದಿಯ ಪ್ರವಾಹವನ್ನು ಆಧರಿಸಿ ತಮ್ಮ ಕ್ಯಾಲೆಂಡರ್ ನಿರ್ಮಿಸಿದರು. ಮಾಯಾ ನಾಗರಿಕತೆಯು ಸೂರ್ಯ, ಚಂದ್ರ ಮತ್ತು ಗ್ರಹಗಳ ಚಲನೆಯನ್ನು ಆಧರಿಸಿದ ಅತ್ಯಂತ ನಿಖರ ಕಾಲಗಣನಾ ವ್ಯವಸ್ಥೆಯನ್ನು ರೂಪಿಸಿತು. ಭಾರತೀಯ ಉಪಖಂಡದಲ್ಲಿ ಸೌರಮಾನ ಮತ್ತು ಚಂದ್ರಮಾನ ಪರಂಪರೆಗಳು ಸಾವಿರಾರು ವರ್ಷಗಳಿಂದ ಬೆಳವಣಿಗೆಯಾದವು. ಈ ಹಿನ್ನೆಲೆಯಲ್ಲಿ ತುಳುನಾಡಿನಲ್ಲಿ ಇಂದಿಗೂ ಜೀವಂತವಾಗಿರುವ ತುಳು ಕ್ಯಾಲೆಂಡರ್ ಕೇವಲ ತಿಂಗಳುಗಳ ಹೆಸರಿನ ಪಟ್ಟಿಯಲ್ಲ. ಅದು ತುಳುನಾಡಿನ ಜನರ ಖಗೋಳ ಜ್ಞಾನ, ಪ್ರಕೃತಿ ಅರಿವು, ಕೃಷಿ ಜೀವನ, ಋತು ವಿಜ್ಞಾನ ಮತ್ತು ಸಾಂಸ್ಕೃತಿಕ ಸಂಘಟನೆಯ ಜೀವಂತ ದಾಖಲೆ.…
2028ರಲ್ಲಿ ಶತಮಾನೋತ್ಸವ ಆಚರಿಸಲಿರುವ ತುಳುವ ಮಹಾಸಭೆಯ ಕೇಂದ್ರೀಯ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ತುಳುವ ಮಹಾಸಭೆ ಇಂಟರ್ನ್ಯಾಷನಲ್ ಕೇಂದ್ರೀಯ ಸಮಿತಿಯ ಅಧ್ಯಕ್ಷರಾಗಿ ಡಾ. ಅವಿನ್ ಬಿ.ಆರ್ ಆಳ್ವ, ಪ್ರಧಾನ ಕಾರ್ಯದರ್ಶಿಯಾಗಿ ಅರವಿಂದ ಬೆಳ್ಚಡ ಹಾಗೂ ಪ್ರಧಾನ ಸಂಚಾಲಕರಾಗಿ ವಿಶ್ವನಾಥ ಆಚಾರ್ಯ ಪೆರ್ಡೂರು ಅವರನ್ನು ನೇಮಕ ಮಾಡಲಾಗಿದೆ. 2028ರಲ್ಲಿ ತುಳುವ ಮಹಾಸಭೆಗೆ 100 ವರ್ಷಗಳು ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಶತಮಾನೋತ್ಸವವನ್ನು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನೂತನ ಪದಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ತುಳುವ ಭಾಷೆಯ ಅಭಿವೃದ್ಧಿ, ಸಂವಿಧಾನಾತ್ಮಕ ಮಾನ್ಯತೆಗಾಗಿ ಪ್ರಯತ್ನ, ಸಂಶೋಧನೆ, ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆ ಹಾಗೂ ವಿಶ್ವದಾದ್ಯಂತ ತುಳುವ ಸಮುದಾಯವನ್ನು ಸಂಘಟಿಸುವ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮಹಾಸಭೆ ನೂತನ ಪದಾಧಿಕಾರಿಗಳು ತಿಳಿಸಿದ್ದಾರೆ.















