Author: admin

ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಐಸಿಸಿಯ ಸಹವರ್ತಿ ಸಂಘಗಳಲ್ಲಿ ಒಂದಾದ ಬಂಟ್ಸ್ ಕತಾರ್ 2011 ರಲ್ಲಿ ಸ್ಥಾಪನೆಯಾದಾಗಿನಿಂದ ವಿವಿಧ ಸಾಮಾಜಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಅದರ ಪ್ರಾಥಮಿಕ ಉದ್ದೇಶವು ತನ್ನ ಸದಸ್ಯರಿಗೆ ವೇದಿಕೆಯನ್ನು ಒದಗಿಸುವುದು ಮತ್ತು ಸ್ಥಳೀಯ ಸಂಸ್ಕೃತಿಯನ್ನು ಯುವ ಪೀಳಿಗೆಗೆ ರವಾನಿಸುವುದಾಗಿದೆ. ಫೆಬ್ರವರಿ 20 ರಂದು ನಡೆದ ವಾರ್ಷಿಕ ಸಭೆಯಲ್ಲಿ ಬಂಟ್ಸ್ ಕತಾರ್ 2026-28 ಅವಧಿಗೆ ತನ್ನ ನೂತನ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಿತು ಮತ್ತು ಸುಖರಾಮ್ ಶೆಟ್ಟಿ ಸೌಕೂರು ಅವರನ್ನು ಸರ್ವಾನುಮತದಿಂದ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿತು. ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಸೌಕೂರು ಸುಕಾರಾಮ್ ಶೆಟ್ಟಿಯವರು ಕತಾರ್ ನ ವಿವಿಧ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಮತ್ತು ಗಮನಾರ್ಹವಾಗಿ ಅಲ್ಪಾವಧಿಯಲ್ಲಿ ಸಮಾಜದಲ್ಲಿ ಪ್ರಸಿದ್ಧರಾಗಿದ್ದಾರೆ. ಅವರ ನೈಸರ್ಗಿಕ ಮೋಡಿ ಮತ್ತು ಸ್ವಯಂಪ್ರೇರಿತ ಸೇವೆಗೆ ಸಮರ್ಪಣೆಯ ಮೂಲಕ ನಾಯಕತ್ವಕ್ಕೆ ಏರುತ್ತಿರುವ ಅವರು ಕತಾರ್ ಮತ್ತು ದುಬೈನಾದ್ಯಂತ ಅನೇಕ ಸಂಘಗಳಿಗೆ ಸೇವೆ ಸಲ್ಲಿಸಿದ್ದಾರೆ. ಸೇವೆ, ಏಕತೆ ಮತ್ತು ಸಹಯೋಗವನ್ನು ಗೌರವಿಸುವ…

Read More

ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ಮೇ 30 ಶನಿವಾರದಂದು ನಡೆಯಲಿರುವ ಪಟ್ಲ ಸಂಭ್ರಮ- 2026 ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ (SSLC) ಮತ್ತು ಪಿಯುಸಿ (2nd PUC) ವಿಭಾಗದಲ್ಲಿ ಶೇಕಡ 90ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ವತಿಯಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಈ ಯೋಜನೆಯ ಫಲಾನುಭವಿಗಳು ತಮ್ಮ ಭಾವಚಿತ್ರ, ಬಿಪಿಎಲ್ ಕಾರ್ಡ್ ಪ್ರತಿ ಹಾಗೂ ಅಂಕಪಟ್ಟಿಯೊಂದಿಗೆ ಮೇ 15 ರ ಮುಂಚಿತವಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು. ವಿದ್ಯಾರ್ಥಿ ವೇತನವನ್ನು ಸ್ವೀಕರಿಸುವ ವಿದ್ಯಾರ್ಥಿಗಳು ಸಮಾರಂಭದಂದು ಬೆಳಿಗ್ಗೆ ಗಂಟೆ 9 ಕ್ಕೆ ಸರಿಯಾಗಿ ಕಡ್ಡಾಯವಾಗಿ ಹಾಜರಿರಬೇಕು. ವಿದ್ಯಾರ್ಥಿಗಳು ಸ್ವಯಂ ಬಾರದೇ ಇದ್ದಲ್ಲಿ ಆ ಅರ್ಜಿಯನ್ನು ಮಾನ್ಯ ಮಾಡಲಾಗುವುದಿಲ್ಲ. ದಾಖಲೆಗಳೊಂದಿಗೆ ಅರ್ಜಿಗಳನ್ನು ಕಳುಹಿಸಬೇಕಾದ ವಿಳಾಸ : ಸಿಎ ಸುದೇಶ್ ಕುಮಾರ್ ರೈಶಾಪ್ ನಂ. 16 ಮತ್ತು 17ಎರಡನೇ ಮಹಡಿ, ಎಂಪೈರ್ ಮಾಲ್ಎಂ.ಜಿ ರಸ್ತೆ, ಮಂಗಳೂರು- 575003ಸಂಪರ್ಕ ಸಂಖ್ಯೆ 9448623375

Read More

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಲ್ಲೇ ಮುಳುಗಿರುವ ಮಕ್ಕಳಿಗೆ ತುಳುನಾಡಿನ ವೀರ ಕ್ರೀಡೆ ‘ಕಂಬಳ’ ಹಾಗೂ ಕೃಷಿ ಸಂಸ್ಕೃತಿಯನ್ನು ಪರಿಚಯಿಸುವ ಅಪೂರ್ವ ಪ್ರಯತ್ನವೊಂದು ಯಡಾಡಿ ಮತ್ಯಾಡಿಯಲ್ಲಿ ಜರುಗಿತು. ಇಲ್ಲಿನ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ‘ಮಂಥನ’ ಬೇಸಿಗೆ ಶಿಬಿರದ ಎರಡನೇ ದಿನದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಸಾಂಕೇತಿಕವಾಗಿ ಆಯೋಜಿಸಲಾಗಿದ್ದ ‘ಕಂಬಳ ಪ್ರದರ್ಶನ’ವು ಅತ್ಯಂತ ವೈಭವದಿಂದ ನಡೆಯಿತು. ಉಡುಪಿ ಜಿಲ್ಲಾ ಕಂಬಳ ಸಮಿತಿಯ ಸಂಚಾಲಕರಾದ ಶಾಂತರಾಮ ಶೆಟ್ಟಿ ಅವರು ಹೂವಿನ ಹೊಂಬಾಳೆಯನ್ನು ಬಿಡಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದಿನ ಮಕ್ಕಳಿಗೆ ನಮ್ಮ ನೆಲದ ಕಲೆ, ಆಚಾರ ವಿಚಾರ ಹಾಗೂ ಸಂಪ್ರದಾಯಗಳ ಬಗ್ಗೆ ಅರಿವು ಕಡಿಮೆಯಾಗುತ್ತಿದೆ. ಕಂಬಳದಂತಹ ಕ್ರೀಡೆಯನ್ನು ಪರಿಚಯಿಸುವ ಮೂಲಕ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಮಕ್ಕಳಲ್ಲಿ ಮಣ್ಣಿನ ಸಂಸ್ಕೃತಿಯ ಬಗ್ಗೆ ಅಭಿಮಾನ ಮೂಡಿಸುವ ಮಹತ್ತರ ಕಾರ್ಯ ಮಾಡುತ್ತಿದೆ ಎಂದು ಶ್ಲಾಘಿಸಿದರು. ಕ್ಯಾಶ್ಯೂ ಉದ್ಯಮಿ ಸತೀಶ್ ಕೆದ್ಲಾಯಿ ಅವರ ಕೃಷಿ ಭೂಮಿಯಲ್ಲಿ ಈ ಕಂಬಳ ಪ್ರದರ್ಶನ…

Read More

ಬಂಟರ ಸಂಘ ಪೂರ್ವ ಆಫ್ರಿಕಾ ನೈರೋಬಿ (ಕೀನ್ಯಾ) ಇದರ ವತಿಯಿಂದ ದಿನಾಂಕ ಏಪ್ರಿಲ್ 19 ರಂದು ನೈರೋಬಿ ವೆಸ್ಟ್ ಲ್ಯಾಂಡ್ ಚೌಪಾಟಿ ಹೋಟೆಲ್‌ನ ಸಭಾಭವನದಲ್ಲಿ ಬಿಸು ಪರ್ಬದ ಆಚರಣೆ ಬಹಳ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮವನ್ನು ದೇವರ ಪ್ರಾರ್ಥನೆಯೊಂದಿಗೆ ದೀಪ ಬೆಳಗಿಸುವ ಮೂಲಕ ಪ್ರಾರಂಭಿಸಲಾಯಿತು. ಪ್ರಾರ್ಥನೆಯನ್ನು ಉಷಾ ಪ್ರದೀಪ್ ಶೆಟ್ಟಿ ಮತ್ತು ಶಿವರಂಜನ್ ಶೆಟ್ಟಿ ನೆರವೇರಿಸಿದರು. ಭಾಸ್ಕರ್ ಶೆಟ್ಟಿ, ರವಿ ಶೆಟ್ಟಿ, ಸುರೇಶ್ ಶೆಟ್ಟಿ, ನವೀನ್ ಶೆಟ್ಟಿ ಹಾಗೂ ನಿತಿನ್ ಶೆಟ್ಟಿ ದೀಪ ಬೆಳಗಿಸಿದರು. ಸಂಘದ ಅಧ್ಯಕ್ಷರಾದ ಯಶವಂತ್ ಶೆಟ್ಟಿ ಸ್ವಾಗತ ಭಾಷಣ ಮಾಡಿದರು. ಬಿಸು ಆಚರಣೆಯ ಮಹತ್ವವನ್ನು ಸಂಘದ ಉಪಾಧ್ಯಕ್ಷರಾದ ಸಂದೀಪ್ ಸಾಮಾನಿ ಅವರು ವಿವರಿಸಿದರು. ಸಂಘದ ಪುಟಾಣಿ ಮಕ್ಕಳಿಂದ ನೃತ್ಯ, ಪ್ರಹಸನ ಹಾಗೂ ಮಹಿಳಾ ಸದಸ್ಯರಿಂದ ನೃತ್ಯ ಕಾರ್ಯಕ್ರಮಗಳು ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.

Read More

ರಾಷ್ಟ್ರೀಯ ದಂತ ಆಯೋಗ ಅಧಿನಿಯಮ 2023 ರ ಕಲಂ 11 ರ ಅನ್ವಯ ಕೇಂದ್ರ ಸರ್ಕಾರವು ದಂತ ಸಲಹಾ ಮಂಡಳಿ ರಚಿಸಿ ಆದೇಶ ಹೊರಡಿಸಿದ್ದು, ಇದರಲ್ಲಿ ಕರ್ನಾಟಕ ರಾಜ್ಯದ ಪ್ರತಿನಿಧಿಯಾಗಿ ಡಾ. ಶಿವಶರಣ್ ಶೆಟ್ಟಿಯವರನ್ನು ನೇಮಕ ಮಾಡಿದೆ. ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ದಂತ ಶಿಕ್ಷಣ ವಿಭಾಗದಿಂದ ಈ ಕುರಿತು ಆದೇಶ ಹೊರಡಿಸಲಾಗಿದೆ. ಈ ಮಂಡಳಿಗೆ ರಾಷ್ಟ್ರೀಯ ದಂತ ಆಯೋಗದ ಅಧ್ಯಕ್ಷರು ಹುದ್ದೆಯನ್ವಯ ಅಧ್ಯಕ್ಷರಾಗಿದ್ದು, ಆಯೋಗದ ಜೊತೆ ರಾಜ್ಯಗಳ ಪ್ರತಿನಿಧಿಗಳನ್ನು ಮಂಡಳಿಯಲ್ಲಿ ಆಯ್ಕೆ ಮಾಡಲಾಗುತ್ತದೆ ಎಂದು ಹೆಚ್ಚುವರಿ ಕಾರ್ಯದರ್ಶಿ ಡಾ. ವಿನೋದ್ ಕೋಟ್ವಾಲ್ ಆದೇಶ ಹೊರಡಿಸಿದ್ದಾರೆ.

Read More

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು (ರಿ) ಇಲ್ಲಿಗೆ ಪುತ್ತೂರು ತಾಲೂಕಿನಿಂದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ್ ಶೆಟ್ಟಿ, ಮಾಜಿ ಅಧ್ಯಕ್ಷ ದಯಾನಂದ ರೈ ಮನವಳಿಕೆ, ಸಮಾಜಸೇವಕ ದಂಬೆಕ್ಕಾನ ಸದಾಶಿವ ರೈ, ಉದ್ಯಮಿ ಸಾಜ ರಾಧಾಕೃಷ್ಣ ಆಳ್ವ, ನೂಜಿಬೈಲ್ ಜಯಪ್ರಕಾಶ್ ರೈ, ನಿತ್ಯಾನಂದ ಶೆಟ್ಟಿ ಮನವಳಿಕೆ, ಉದ್ಯಮಿ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ ಹಾಗೂ ಮಹಿಳಾ ಕ್ಷೇತ್ರದಿಂದ ವತ್ಸಲಾ ಪಿ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪುತ್ತೂರು ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷ ಸೀತಾರಾಮ ರೈ ಸವಣೂರು ಹಾಗೂ ರವಿಪ್ರಸಾದ್ ಶೆಟ್ಟಿ ನಾಮಪತ್ರ ಹಿಂತೆಗೆದ ಕಾರಣ ಅವಿರೋಧ ಆಯ್ಕೆ ನಡೆಯಿತು ಎಂದು ಮಾತೃ ಸಂಘದ ಪ್ರಕಟಣೆ ತಿಳಿಸಿದೆ.

Read More

ಸಾಂಸ್ಕೃತಿಕ ಸಂಘಟಕ, ನಾಟಕಕಾರ ಹಾಗೂ ರಾಜಕಾರಣಿ ರಾಮಚಂದ್ರ ಬೈಕಂಪಾಡಿ ಅವರು ತನಗಾಗಿ ಏನನ್ನೂ ಮಾಡದೇ ಇತರರ ಸಂತೋಷದಿಂದ ತೃಪ್ತಿ ಪಡೆದವರು. ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಹಲವಾರು ಯೋಜನೆಗಳ ಹೋರಾಟದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ ಅವರ ಮಾರ್ಗದರ್ಶನ ನನಗೂ ಪ್ರೇರಣೆಯಾಗಿತ್ತು. ಅವರು ಮಾಡಿದ ನಿಸ್ವಾರ್ಥ ಸೇವೆಯಿಂದ ಅವರ ಹೆಸರು ಚಿರಸ್ಮರಣೀಯ ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಜಿಲ್ಲಾ ಕಾರ್ಯಾಧ್ಯಕ್ಷರಾದ ಹರೀಶ್ ಕುಮಾರ್ ಎಂ ಶೆಟ್ಟಿ ನುಡಿದರು. ಮಂಗಳೂರು ತುಳು ಭವನದಲ್ಲಿ ಏಪ್ರಿಲ್ 25 ರಂದು ಆಯೋಜಿಸಲಾದ ತುಳು ಅಕಾಡೆಮಿಯ ಮಾಜಿ ಸದಸ್ಯ ಹಾಗೂ ತುಳು ಅಕಾಡೆಮಿಯ ವಾರ್ಷಿಕ ಗೌರವ ಪುರಸ್ಕೃತ ನಾಟಕಕಾರ ರಾಮಚಂದ್ರ ಬೈಕಂಪಾಡಿ ಅವರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮದಲ್ಲಿ ಸಮಿತಿಯ ಪರವಾಗಿ ಅವರು ಮಾತನಾಡಿದರು. ರಾಮಚಂದ್ರ ಬೈಕಂಪಾಡಿ ಅವರಲ್ಲಿ ನೈಜ ಸಾಂಸ್ಕೃತಿಕ ಕಾಳಜಿ ಇತ್ತು ಅವರು ರಾಜಕೀಯ ನೇತಾರರಾಗಿದ್ದರೂ ಅವರು ರಾಜಕೀಯ ಅದೃಷ್ಟವಂತರಾಗಿರಲಿಲ್ಲ. ಕರಾವಳಿಯ ಸಾಂಸ್ಕೃತಿಕ ಲೋಕಕ್ಕೆ ಅವರದ್ದು ದೊಡ್ಡ ಕೊಡುಗೆ ಇದೆ ಎಂದು ಹಿರಿಯ ವಿದ್ವಾಂಸ…

Read More

ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅತ್ತೂರು ಕೆಮ್ರಾಲ್ ಕಿಲೆಂಜೂರು ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭ ದೇವಸ್ಥಾನದ ಮಹಾದ್ವಾರ ಹಾಗೂ ನವೀಕೃತಗೊಂಡ ಹವಾನಿಯಂತ್ರಿತ ಆಶಾಲತಾ ನಾರಾಯಣ ಶೆಟ್ಟಿ ಸಭಾಭವನದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ, ಬಂಟರ ಸಂಘ ಮುಂಬಯಿಯ ಮಾಜಿ ಅಧ್ಯಕ್ಷರಾದ ಡಾ. ಪದ್ಮನಾಭ ವಿ ಶೆಟ್ಟಿಯವರನ್ನು ಗೌರವಿಸಿ ಅಭಿನಂದಿಸಲಾಯಿತು. ಈ ಸಂಧರ್ಭ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ದೇವಸ್ಥಾನದ ಮೊಕ್ತೇಸರ ಅತ್ತೂರು ಬಾಳಿಕೆ ಭಂಡಾರ ಮನೆ ರಾಜೇಶ್ ಶೆಟ್ಟಿ, ಕೃಷ್ಣ ಪ್ಯಾಲೇಸ್ ನ ಸಿಎಂಡಿ ಕೃಷ್ಣ ವೈ ಶೆಟ್ಟಿ, ಕಾಂಗ್ರೆಸ್ ಮುಖಂಡ ಮಿಥುನ್ ರೈ ಮತ್ತಿತರರು ಉಪಸ್ಥಿತರಿದ್ದರು.

Read More

ಬೆಳಗಾವಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಬಂಟರ ಭವನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಂಟರ ಕ್ರೀಡೋತ್ಸವಕ್ಕೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿಯವರು ಚಾಲನೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ದೇಹದ ಆರೋಗ್ಯಕ್ಕೆ ಮಾತ್ರವಲ್ಲದೆ ಮನಸ್ಸಿನ ಚೈತನ್ಯಕ್ಕೂ ಸಹಕಾರಿ ಎಂದು ತಿಳಿಸಿದರು. ಸಮಾಜದ ಒಗ್ಗಟ್ಟು ಮತ್ತು ಬಾಂಧವ್ಯವನ್ನು ಬಲಪಡಿಸುವಲ್ಲಿ ಇಂತಹ ಕ್ರೀಡೋತ್ಸವಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು. ಯುವಕರು ಕ್ರೀಡೆಗಳತ್ತ ಹೆಚ್ಚು ಆಸಕ್ತಿ ತೋರಿಸಿ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಬಂಟ ಸಮುದಾಯವು ಶಿಕ್ಷಣ, ಉದ್ಯಮ ಹಾಗೂ ಸಮಾಜ ಸೇವೆಯಲ್ಲಿ ನೀಡುತ್ತಿರುವ ಕೊಡುಗೆ ಶ್ಲಾಘನೀಯ. ಇಂತಹ ಕ್ರೀಡಾ ಕಾರ್ಯಕ್ರಮಗಳ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆಯುತ್ತದೆ ಎಂದು ಹೇಳಿದರು. ಈ ಕ್ರೀಡೋತ್ಸವದಲ್ಲಿ ವಿವಿಧ ವಯೋಮಾನದವರಿಗೆ ತಕ್ಕಂತೆ ಹಲವು ಕ್ರೀಡಾ ಸ್ಪರ್ಧೆಗಳು ಆಯೋಜಿಸಲಾಗಿದ್ದು, ಮಹಿಳೆಯರು ಮತ್ತು ಮಕ್ಕಳೂ ಸಹ ಉತ್ಸಾಹದಿಂದ ಭಾಗವಹಿಸಿದರು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ವಿಠಲ್ ಹೆಗ್ಡೆ, ಅಧ್ಯಕ್ಷ ವಿಜಯ ಶೆಟ್ಟಿ, ಬಂಟ…

Read More

ಕಂಪ್ಯೂಟರ್ ಜ್ಞಾನ ಇಂದು ನಿತ್ಯ ಜೀವನಕ್ಕೆ ಅವಶ್ಯವಾಗಿದೆ. ಕಂಪ್ಯೂಟರ್ ಸಾಕ್ಷರರಿಗೆ ನಾನಾ ಕ್ಷೇತ್ರಗಳಲ್ಲಿ ವಿಪುಲ ಅವಕಾಶವಿದ್ದು, ಮಹಿಳಾ ಸಬಲೀಕರಣಕ್ಕೂ ಇದು ದಾರಿಯಾಗಿದೆ. ಆದರೆ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ನಿರಂತರ ಕಲಿಕೆ ಅಗತ್ಯವಿದ್ದು, ಆ ಬಗ್ಗೆ ವಿಶೇಷ ಮುತುವರ್ಜಿ ವಹಿಸಬೇಕು. ನಮ್ಮ ಕೌಶಲ್ಯವನ್ನು ಸಮಯಕ್ಕೆ ಸರಿಯಾಗಿ ಉನ್ನತೀಕರಿಸಿಕೊಳ್ಳಬೇಕು ಎಂದು ಬಹರೈನ್ ಔಮಾ ಮಿಡಲ್ ಈಸ್ಟ್ ಸಂಸ್ಥೆಯ ಆಡಳಿತ ನಿರ್ದೇಶಕ ನವೀನ್ ಶೆಟ್ಟಿ ಹೇಳಿದರು. ಕುಂತಳನಗರದ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಆಶ್ರಯದಲ್ಲಿ ಆಲ್ ಕಾರ್ಗೋ ಲಾಜಿಸ್ಟಿಕ್ಸ್ ಮಂಗಳೂರು ಪ್ರಾಯೋಜಕತ್ವದಲ್ಲಿ ನಡೆಯುವ ಕಂಪ್ಯೂಟರ್ ಉಚಿತ ತರಬೇತಿ ಕಾರ್ಯಕ್ರಮದ 21ನೇ ಬ್ಯಾಚ್ ಉದ್ಘಾಟಿಸಿ ಮಾತನಾಡಿದರು. ದೆಂದೂರು ಕಟ್ಟೆ ಭಾರತಿ ಸಾಫ್ಟ್ ವೇರ್ ಆಡಳಿತ ನಿರ್ದೇಶಕ ಕಿರಣ್ ನಾಯಕ್ ಮಾತನಾಡಿ, ಕಂಪ್ಯೂಟರ್ ಬಳಿಕ ಬಂದಿರುವ ಕೃತಕ ಬುದ್ಧಿಮತ್ತೆ ಇಂದಿನ ಯುವ ಜನತೆಗೆ ಸವಲಾಗಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ವಿರುದ್ಧ ಹೋರಾಡುವ ಕ್ಷಮತೆ ಬೆಳೆಸಿಕೊಳ್ಳಬೇಕು. ಅಡ್ವಾನ್ಸ್ ತರಬೇತಿ ಪಡೆಯುವ ಮೂಲಕ ಅದು…

Read More