Author: admin

ಮುಂಬಯಿ, ಪಾಲ್ಗರ್, ವಸಾಯಿ ಹಾಗೂ ದುಬೈಯಲ್ಲಿ ಬಾರಿ ಜನಪ್ರಿಯತೆ ಗಳಿಸಿರುವ ಹೋಟೆಲ್ “ಫಾರ್ಮ್ ಹೌಸ್‌” ನ ಆಡಳಿತ ನಿರ್ದೇಶಕ, ಮುಂಬಯಿ ಬಂಟರ ಸಂಘದ ವಸಾಯಿ ದಹಾಣು ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಹರೀಶ್ ಪಾಂಡು ಶೆಟ್ಟಿಯವರ ಧರ್ಮಪತ್ನಿ ಮಧುರಾ ಹರೀಶ್ ಶೆಟ್ಟಿಯವರು ಇತ್ತೀಚಿಗೆ ದಿಲ್ಲಿಯಲ್ಲಿ ನಡೆದ ಮಿಸೆಸ್ ವರ್ಲ್ಡ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ಭಾಗವಹಿಸಿ ಜಗತ್ತಿನ ವಿವಿಧ ದೇಶಗಳ ಸ್ಪರ್ಧಿಗಳ ಪೈಕಿ ಸ್ಪರ್ಧೆಯಲ್ಲಿ ಮಿಸೆಸ್ ಟ್ಯಾಲೆಂಟೆಡ್ ಮತ್ತು 4 ನೇ ರನ್ನರ್ ಅಪ್ ಆಗಿ ನಾಮ ನಿರ್ದೇಶನಗೊಂಡಿದ್ದಾರೆ. ಶ್ರೀಮತಿ ಮಧುರಾ ಹರೀಶ್ ಶೆಟ್ಟಿ ಅವರನ್ನು ಪಾಂಡು ಎಲ್ ಶೆಟ್ಟಿ, ಪದ್ಮಾವತಿ ಪಿ ಶೆಟ್ಟಿ, ಹರೀಶ್ ಪಿ ಶೆಟ್ಟಿ, ಭರತ್ ಪಿ ಶೆಟ್ಟಿ, ನವ್ಯ ಬಿ ಶೆಟ್ಟಿ, ಪಳ್ಳಿ ಕರುಣಾಕರ್ ಶೆಟ್ಟಿ, ಸುಧಾಮಣಿ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟರ ಸಂಘ ಮುಂಬಯಿಯ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಬಂಟರ ಸಂಘದ ವಸಾಯಿ ದಹಾಣು ಪ್ರಾದೇಶಿಕ ಸಮಿತಿಯ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಇದರ ಆಡಳಿತ ಮಂಡಳಿಯ ಸಭೆ ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ವರದಿ ವಾಚಿಸಿದರು.‌ ಕೋಶಾಧಿಕಾರಿ ಉಳ್ತೂರು ಮೋಹನದಾಸ ಶೆಟ್ಟಿ ಲೆಕ್ಕಪತ್ರ ಮಂಡಿಸಿದರು. ಬಳಿಕ ಒಕ್ಕೂಟದಿಂದ ಸಮಾಜ ಕಲ್ಯಾಣ ಕಾರ್ಯಕ್ರಮ‌ ನೆರವೇರಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ವೈದ್ಯಕೀಯ ಚಿಕಿತ್ಸೆಗೆ, ಮದುವೆಗೆ, ವಿದ್ಯಾಭ್ಯಾಸಕ್ಕೆ, ಮನೆ ರಿಪೇರಿಗೆ, ಕ್ರೀಡೆಗೆ, 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ (95%) ಹೀಗೆ ಹತ್ತಾರು ಸಮಾಜಮುಖಿ ಕೆಲಸಗಳಿಗೆ ಒಕ್ಕೂಟದಿಂದ ಸುಮಾರು 50 ಲಕ್ಷ ರೂಪಾಯಿಗೂ ಮಿಕ್ಕಿದ ಅನುದಾನವನ್ನು ವಿತರಿಸಲಾಯಿತು. ಕಳೆದ ಏಳು ವರ್ಷಗಳಿಂದ ಒಕ್ಕೂಟದಿಂದ ಈವರೆಗೆ 30 ಕೋಟಿ ರೂಪಾಯಿಗೂ ಮಿಕ್ಕಿದ ಅನುದಾನವನ್ನು ವಿತರಿಸಲಾಗಿದೆ ಎಂದು ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು. ಮುಲ್ಕಿಯಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣವಾಗುತ್ತಿರುವ ತೋನ್ಸೆ…

Read More

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹತ್ತನೇ ತರಗತಿ ಮತ್ತು ಪಿಯುಸಿ ಪಾಸಾದ 90 ಶೇಕಡಾಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವು ಟ್ರಸ್ಟಿನ ಅಧ್ಯಕ್ಷ ಅವಿನಾಶ್ ವಿ ಶೆಟ್ಟಿಯವರ ನೇತೃತ್ವದಲ್ಲಿ ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರವಾಜೆ ಇಲ್ಲಿ ನಡೆಯಿತು. ವಿದ್ಯಾಭಿಮಾನಿಗಳೂ ಹಿರಿಯರೂ ಆದ ವೈಕುಂಟ ಶೆಣೈ ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಆನಂದ ನಾಯಕ್ ರವರು ವಿದ್ಯಾರ್ಥಿಗಳು ಮುಂದಿನ ವರ್ಷ ಇದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯುವಲ್ಲಿ ಪ್ರಯತ್ನಿಸಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಮುಖ್ಯ ಅತಿಥಿ ಕಾರ್ಕಳ ರೋಟರಿ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮಾತನಾಡುತ್ತಾ, ಅವಿನಾಶ್ ವಿ ಶೆಟ್ಟಿಯವರು ತನ್ನ ಸಣ್ಣ ಪ್ರಾಯದಲ್ಲೇ ಇಂಥಹ ಉತ್ತಮ ಕಾರ್ಯಕ್ರಮಗಳನ್ನು ಮಾಡಲು ಅಮ್ಮನಿಂದ ಬಂದ ಉತ್ತಮ ಸಂಸ್ಕಾರಗಳೇ ಕಾರಣ. ಜೊತೆಗೆ ಅವರು ಓರ್ವ ಉತ್ತಮ…

Read More

ಅದ್ಯಪಾಡಿ ಶ್ರೀ ಅದಿನಾಥೇಶ್ವರ ದೇವಸ್ಥಾನದಲ್ಲಿ ಎರಡು ರಥದ ಕೊಠಡಿ, ರಾಜ ಬೀದಿ ಕೆಲಸ, ದೇವಸ್ಥಾನದ ಸುತ್ತ ತಡೆಗೋಡೆ ಸಹಿತ ಕೆಲವು ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಎರಡು ಕೋಟಿ ರೂಪಾಯಿ ಅನುದಾನ ನೀಡಬೇಕೆಂದು ಕರ್ನಾಟಕ ಸರಕಾರ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗ ರೆಡ್ಡಿ ಅವರನ್ನು ಶ್ರೀ ಆದಿನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಭೇಟಿ ನೀಡಿ ಮನವಿ ಸಲ್ಲಿಸಿದರು. ಬೈಲು ಏತಮೊಗರು ದೊಡ್ಡಮನೆ ಹರೀಶ್ ಶೆಟ್ಟಿ ಮತ್ತು ಸುಜೀತ್ ಆಳ್ವ ಏತಮೊಗರು ಗುತ್ತು ಇವರ ನೇತೃತ್ವದಲ್ಲಿ ಸಚಿವರಿಗೆ ಮನವಿ ನೀಡಲಾಯಿತು. ಸಚಿವರು ಮನವಿ ಸ್ವೀಕರಿಸಿ ಬೇಡಿಕೆಗೆ ಸ್ಪಂದಿಸುವ ಭರವಸೆ ನೀಡಿದರು. ಸಚಿವರನ್ನು ಭೇಟಿ ಮಾಡಿದ ನಿಯೋಗದಲ್ಲಿ ರಮಾನಾಥ್ ಅತ್ತಾರ್, ಸುಕೇಶ್ ಮಾಣೈ ತಲಕಳ, ಸತೀಶ್ ಆಳ್ವ, ಮನೋಹರ್ ಶೆಟ್ಟಿ, ವಸಂತ ಕುಮಾರ್ ಕಜೆ, ಮಧುಚಂದ್ರ ಶೆಟ್ಟಿ, ಮಹೇಶ್ ಭಟ್, ಕುಮಾರ್ ಶೆಟ್ಟಿ, ಜೀವನ್ ಮಲ್ಲಿ, ಮೋಹನ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ರೋಹಿತ್ ಶೆಟ್ಟಿ, ಸಂಪತ್ ಶೆಟ್ಟಿ, ಶಿವರಾಮ ಹೆಗ್ಡೆ, ಸುಜೀರ್…

Read More

ನಬಾರ್ಡ್ ನಿಯೋಜಿತ ಕರ್ನಾಟಕ, ಗುಜರಾತ್, ಮಹಾರಾಷ್ಟ್ರ ತೆಲಂಗಾಣ, ತಮಿಳುನಾಡು, ಕೇರಳ ರಾಜ್ಯಗಳಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಶಾಖಾ ವ್ಯವಸ್ಥಾಪಕರನ್ನು ಒಳಗೊಂಡ 45 ಸದಸ್ಯರ ಅಧ್ಯಯನ ಪ್ರವಾಸ ತಂಡ ಮಂದಾರ್ತಿ ಸೇವಾ ಸಹಕಾರಿ ಸಂಘಕ್ಕೆ ಭೇಟಿ ನೀಡಿದರು. ಸಂಘದ ಅಧ್ಯಕ್ಷ ಗಂಗಾಧರ ಶೆಟ್ಟಿ ತಂಡವನ್ನು ಸ್ವಾಗತಿಸಿ, ಸೊಸೈಟಿಯ ಕಾರ್ಯ ವೈಖರಿ ಬಗ್ಗೆ ಮತ್ತು ನಡೆದು ಬಂದ ಹಾದಿಯ ಕುರಿತು ಮಾಹಿತಿ ನೀಡಿದರು. ನಬಾರ್ಡ್ ನ ಡಿ.ಜಿ.ಎಂ. ಯೋಗಿಶ್ ಸಂಘದ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಮಕೃಷ್ಣ ಶೆಟ್ಟಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Read More

ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ (ರಿ) ಇದರ ಅಧ್ಯಕ್ಷರಾಗಿ ರಮೇಶ್ ಶೆಟ್ಟಿ ಆಯ್ಕೆಯಾದರು. ಸೂರಜ್ ಹೊಟೇಲ್ ನ ಸಭಾಂಗಣದಲ್ಲಿ ನಡೆದ ಅಸೋಸಿಯೇಶನ್ ನ ನಾಲ್ಕನೇ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ಅಸೋಸಿಯೇಶನ್ ನ ಅಧ್ಯಕ್ಷ ರಮೇಶ್ ಶೆಟ್ಟಿ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ ವರದಿ ವಾಚಿಸಿದರು. ನರಸಿಂಹ ಸುವರ್ಣ ಲೆಕ್ಕಪತ್ರ ಮಂಡಿಸಿದರು.‌ ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ಕೈಗೊಂಡ ಕೆಲಸ ಕಾರ್ಯಗಳ ವಿವರವನ್ನು ಸಭೆಯ ಮುಂದಿಟ್ಟರು.‌ ಬಳಿಕ ನಡೆದ ಪದಾಧಿಕಾರಿಗಳ ಆಯ್ಕೆಯಲ್ಲಿ ರಮೇಶ್ ಶೆಟ್ಟಿ ಅವರನ್ನು ಸರ್ವಾನುಮತದಿಂದ ಮುಂದಿನ ಎರಡು ವರ್ಷದ ಅವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ತಾರಾನಾಥ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಶೆಟ್ಟಿ, ಕೋಶಾಧಿಕಾರಿಯಾಗಿ ನರಸಿಂಹ ಸುವರ್ಣ, ಜತೆ ಕಾರ್ಯದರ್ಶಿಯಾಗಿ ಲಕ್ಷ್ಮೀ ಚಂದ್ರಶೇಖರ್ ಆಚಾರ್ಯ, ಸಂಘಟನಾ ಕಾರ್ಯದರ್ಶಿಯಾಗಿ ಪುಷ್ಪರಾಜ ಶೆಟ್ಟಿ ಕುಡುಂಬೂರು ಅವರನ್ನು ಆಯ್ಕೆ ಮಾಡಲಾಯಿತು. ಗೌರವ ಸಲಹೆಗಾರರಾಗಿ ಸತ್ಯಜಿತ್ ಸುರತ್ಕಲ್, ಬಾಳ…

Read More

ಮೀರಾರೋಡ್ ಪೂನಮ್ ಸಾಗರ್, ಆಶೀರ್ವಾದ್ ಬಿಲ್ಡಿಂಗ್ ನಿವಾಸಿ ಕೊರಂಗ್ರಪಾಡಿ ದೊಡ್ಡಮನೆ ಕುಮಾರ್ ನಾರಾಯಣ ಶೆಟ್ಟಿ (78) ಯವರು ಜುಲೈ 15 ರಂದು ಹೃದಯಾಘಾತದಿಂದ ನಿಧನರಾದರು. ಮೃತರು ಇಬ್ಬರು ಗಂಡು ಮಕ್ಕಳಾದ ಉದಯ ಹಾಗೂ ಉಲ್ಲಾಸ್ ಮತ್ತು ಮಗಳು ಕುತ್ಯಾರು ಅಂಜಾರು ಮನೆ ಉಷಾ ದಾಮೋದರ್ ಶೆಟ್ಟಿ ಹಾಗೂ ಬಂಟರ ಸಂಘ ಮುಂಬಯು ಇದರ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷೆ ಅಮಿತಾ ಕಿಶೋರ್ ಶೆಟ್ಟಿ (ಸೋದರ ಮಾವ) ಸೇರಿದಂತೆ ಪರಿಸರದ ಅಪಾರ ವರ್ಗದ ಬಂಧು- ಬಳಗದವರನ್ನು ಅಗಲಿದ್ದಾರೆ. ಕುಮಾರ್ ಶೆಟ್ಟಿಯವರ ನಿಧನಕ್ಕೆ ಕರ್ನಾಟಕ ಸಂಘ, ಬಂಟರ ಸಂಘ ಮುಂಬಯಿ ಇದರ ಮೀರಾ ಭಯಂದರ್ ಪ್ರಾದೇಶಿಕ ಸಮಿತಿ, ಮೀರಾ ಭಯಂದರ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರಮೋದ್ ಸಾಮಂತ್ ಶೋಕವನ್ನು ವ್ಯಕ್ತಪಡಿಸಿದ್ದಾರೆ. ಮೃತರ ಅಂತಿಮ ಯಾತ್ರೆಯು ಅವರ ನಿವಾಸದಿಂದ ಜುಲೈ 16 ರ ಬುಧವಾರ ಬೆಳಿಗ್ಗೆ 8.30ಕ್ಕೆ ಹೊರಡಲಿದೆ.

Read More

ಪುಣೆಯ ಖ್ಯಾತ ಮಕ್ಕಳ ತಜ್ಞ, ಸಮಾಜರತ್ನ ಡಾ. ಸುಧಾಕರ್ ಶೆಟ್ಟಿಯವರು ಮೂಡಬಿದಿರೆಯ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜ್ ನಲ್ಲಿ Approach to Pediatric pratice ವಿಷಯದ ಬಗ್ಗೆ ಅತಿಥಿ ಉಪನ್ಯಾಸಕರಾಗಿ ವಿಶೇಷ ಉಪನ್ಯಾಸ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಸುಧಾಕರ್ ಶೆಟ್ಟಿಯವರು ಸಮಾಜ ಸೇವಕರಾಗಿ ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ, ಕೆಲಸ ಕಾರ್ಯಗಳು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಜನ ಮನ್ನಣೆ ಗಳಿಸಿದೆ. ಇವರು ನಟಿಸಿದ ‘ಹೇ ಪ್ರಭು’ ಚಲನಚಿತ್ರ ಸದ್ಯದಲ್ಲೇ ಬಿಡುಗಡೆಗೊಳ್ಳಲಿದೆ.

Read More

ಶಿಕ್ಷಣವು ಅತ್ಯುತ್ತಮ ಬಂಡವಾಳ. ಕೇವಲ ಉದ್ಯೋಗ ಪಡೆಯಲು ಮಾತ್ರ ಶಕ್ತಿ ಎಂಬ ನಂಬಿಕೆ ಹಿಂದೆ ಇತ್ತು. ಆದರೆ ಈಗ ಜ್ಞಾನ ಮತ್ತು ಕೌಶಲಕ್ಕಾಗಿ ಓದು ಎಂಬ ಗ್ರಹಿಕೆ ಆರಂಭವಾಗಿದೆ. ವಿದ್ಯಾರ್ಥಿಗಳು ಕೇವಲ ಮಾರ್ಕ್ ಹಿಂದೆ ಹೋಗದೆ ಜ್ಞಾನ ಮತ್ತು ಕೌಶಲಗಳನ್ನು ಪಡೆಯಬೇಕು. ಸಂಸ್ಕೃತಿ ಮರೆತರೆ ಒಂದು ಜನಾಂಗವೇ ಅವನತಿ ಹೊಂದುತ್ತದೆ ಎಂದು ಕೇಮಾರು ಸಾಧನಾಶ್ರಮದ ಈಶ ವಿಠಲದಾಸ ಸ್ವಾಮೀಜಿ ಅವರು ಹೇಳಿದರು. ಅವರು ಬಜಗೂಳಿ ಜ್ಯೂನಿಯರ್ ಕಾಲೇಜಿನಲ್ಲಿ ಅಮ್ಮನ ನೆರವು ಫೌಂಡೇಶನ್ ಮೂಲಕ ಕೊಡ ಮಾಡಿದ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಆಶೀರ್ವಚನ ನೀಡುತ್ತಿದ್ದರು. ದಿವಂಗತ ಶಿವಣ್ಣ ಶೆಟ್ಟಿ ದೇಜುಬೆಟ್ಟು ರೆಂಜಾಳ ಅವರ ಹೆಸರಿನಲ್ಲಿ ಅವರ ಮಕ್ಕಳು ಮತ್ತು ಕುಟುಂಬದವರು ಈ ವಿದ್ಯಾರ್ಥಿವೇತನಗಳ ಪ್ರಾಯೋಜಕರಾಗಿದ್ದರು. ಕಾರ್ಕಳ ತಾಲೂಕಿನ ವಿವಿಧ ಸರಕಾರಿ ಪ್ರೌಢಶಾಲೆಗಳ ಎಸ್.ಎಸ್.ಎಲ್.ಸಿ ಮತ್ತು ಪದವಿಪೂರ್ವ ತರಗತಿಯಲ್ಲಿ 90% ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಗಳನ್ನು ಈ ಕಾರ್ಯಕ್ರಮದಲ್ಲಿ ವಿತರಣೆ ಮಾಡಲಾಯಿತು. ಬಜಗೊಳಿಯ ಅಹಿಂಸಾ ಎನಿಮಲ್ ಕೇರ್ ಟ್ರಸ್ಟಿಗೆ ಅಮ್ಮನ ನೆರವು ಫೌಂಡೇಶನ್…

Read More

ಜುಲೈ 12 ರಂದು ಸಾಗರ ಬಂಟರ ಸಂಘದ ಕಟ್ಟಡಕ್ಕೆ ಹಲವಾರು ಸಂಘ ಸಂಸ್ಥೆಗಳಲ್ಲಿ ಪ್ರಸಿದ್ದರಾಗಿರುವ ವಾಗ್ಮಿ, ಅತ್ಯುತ್ತಮ ಸಂಘಟಕ, ಪ್ರೊಫೆಸರ್ ಶಿವಮೊಗ್ಗ ಬಂಟರ ಸಂಘದ ಅಧ್ಯಕ್ಷರಾದ ಡಾ. ಸತೀಶ್ ಕುಮಾರ್ ಶೆಟ್ಟಿ ನೇತೃತ್ವದ ನಿಯೋಗ ಭೇಟಿ ನೀಡಿತು. ಜೊತೆಯಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರಮುಖ ಹಾಗೂ ಪ್ರಭಾವಿ ಬಂಟ ರಾಜಕೀಯ ನಾಯಕ ಸಂಘಟಕ ದಿವಾಕರ್ ಶೆಟ್ಟಿ, ಹಲವಾರು ಸಂಘ ಸಂಸ್ಥೆಯ ಅನುಭವಿ ಪ್ರಖ್ಯಾತ ಉದ್ಯಮಿ, ದಾನಿ ಪಿಂಗಾರ ರಾಜಮೋಹನ್ ಹೆಗ್ಡೆ, ಸಂಘಟಕ ಅಪರೂಪದ ವ್ಯಕ್ತಿತ್ವ ಹೊಂದಿರುವ ದಾನಿ ಶೆಟ್ಟಿ ಮೆಡಿಕಲ್ ಅರುಣ್ ಶೆಟ್ಟಿ, ಯುವನಾಯಕ ಸಂಘಟಕ ರಾಘವೇಂದ್ರ ಶೆಟ್ಟಿ, ಪ್ರಜಾಶಕ್ತಿ ಪತ್ರಿಕೆಯ ಯುವಶಕ್ತಿ ಮಂಜುನಾಥ್ ಶೆಟ್ಟಿ ಆಗಮಿಸಿದ್ದರು. ಇವರೆಲ್ಲರನ್ನು ಸಾಗರ ಬಂಟರ ಸಂಘದ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ ಹಕ್ಲಾಡಿ ಹಾಗೂ ತಾಲ್ಲೂಕಿನ ಬಂಟ ಮುಖಂಡರು ಆತ್ಮೀಯವಾಗಿ ಬರ ಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶಿವಮೊಗ್ಗ ಬಂಟರ ಸಂಘದ ಅಧ್ಯಕ್ಷರಾದ ಡಾ. ಸತೀಶ್ ಕುಮಾರ್ ಶೆಟ್ಟಿ ಅವರು, ಬಂಟ ಸಮುದಾಯದ ಏಳಿಗೆಗಾಗಿ ಶಿವಮೊಗ್ಗ…

Read More