Author: admin

ಕಠಿಣ ಪರಿಶ್ರಮ ಮತ್ತು ಅಚಲ ಗುರಿಯಿದ್ದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಕುಂದಾಪುರದ ಮಾಣಿಗರಡಿಯ ರಿತಿನ್ ಶೆಟ್ಟಿ ಸಾಬೀತುಪಡಿಸಿದ್ದಾರೆ. ದೇಶದ ಅತ್ಯಂತ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ನಡೆಯುವ JEE Advanced ಪರೀಕ್ಷೆಯಲ್ಲಿ ರಿತಿನ್ ಶೆಟ್ಟಿ ರಾಷ್ಟ್ರಮಟ್ಟದಲ್ಲಿ 1005ನೇ ರ್ಯಾಂಕ್ ಪಡೆಯುವ ಮೂಲಕ ಅಪ್ರತಿಮ ಸಾಧನೆ ಮಾಡಿದ್ದಾರೆ. ಮಾಣಿಗರಡಿಯ ಎಂ. ಸತೀಶ್ ಶೆಟ್ಟಿ ಮತ್ತು ಗೀತಾ ಶೆಟ್ಟಿ ದಂಪತಿಯ ಸುಪುತ್ರನಾದ ರಿತಿನ್ ಶೆಟ್ಟಿ ಮೂಲತಃ ಕುಂದಾಪುರದವರಾಗಿದ್ದರೂ ಶಿಕ್ಷಣಕ್ಕಾಗಿ ತೆಲಂಗಾಣದ ಸೂರ್ಯಪೇಟೆಯನ್ನು ಆಯ್ದುಕೊಂಡಿದ್ದರು. ಅಲ್ಲಿನ ಜಯ ಜೂನಿಯರ್ ಕಾಲೇಜಿನ ವಿದ್ಯಾರ್ಥಿಯಾಗಿರುವ ಇವರು, ಹಗಲಿರುಳು ನಡೆಸಿದ ಅಭ್ಯಾಸದ ಫಲವಾಗಿ ಇಂದು ಈ ಉನ್ನತ ಸ್ಥಾನಕ್ಕೇರಿದ್ದಾರೆ. ಕುಂದಾಪುರದ ಗ್ರಾಮೀಣ ಭಾಗದ ಪ್ರತಿಭೆಯಾಗಿ ಐಐಟಿ (IIT) ಪ್ರವೇಶಾತಿಯ ಹೊಸ್ತಿಲಲ್ಲಿ ನಿಂತಿದ್ದಾರೆ. ನನ್ನ ಮಗನ ಈ ಸಾಧನೆಗೆ ಅವನ ನಿರಂತರ ಪರಿಶ್ರಮವೇ ಕಾರಣ. ಕುಂದಾಪುರದ ಮಣ್ಣಿನ ಸಂಸ್ಕಾರ ಮತ್ತು ಗುರುಗಳ ಮಾರ್ಗದರ್ಶನ ಅವನನ್ನು ಈ ಮಟ್ಟಕ್ಕೆ ತಂದಿದೆ ಎಂದು ತಂದೆ ಮಾಣಿಗರಡಿಯ ಎಂ. ಸತೀಶ್ ಶೆಟ್ಟಿ ಹರ್ಷ…

Read More

ಜವಾಬ್ದಾರಿಯನ್ನು ಸ್ವೀಕರಿಸಿದಾಗ ಮಾತ್ರ ಬದುಕಿನಲ್ಲಿ ಸ್ಥಾನಮಾನ ಮತ್ತು ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ಶಿಕ್ಷಣದ ಜೊತೆಗೆ ಉತ್ತಮ ವ್ಯಕ್ತಿತ್ವ ಹಾಗೂ ಉತ್ತಮ ಮನಸ್ಸನ್ನು ರೂಪಿಸಿಕೊಳ್ಳುವುದು ವಿದ್ಯಾರ್ಥಿಗಳ ಪ್ರಮುಖ ಗುರಿಯಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಸ್ವಾಯತ್ತಾ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಇಂಡಕ್ಷನ್ ಕಾರ್ಯಕ್ರಮ ‘ಅಂಕುರ’ ಸೋಮವಾರ ಕೃಷಿಸಿರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 1998ರಲ್ಲಿ ಕೇವಲ 25 ವಿದ್ಯಾರ್ಥಿಗಳು, ಎರಡು ವಿಭಾಗ ಹಾಗೂ 11 ಅಧ್ಯಾಪಕರೊಂದಿಗೆ ತನ್ನ ಶೈಕ್ಷಣಿಕ ಪಯಣವನ್ನು ಆರಂಭಿಸಿದ್ದ ಆಳ್ವಾಸ್ ಸಂಸ್ಥೆ, ಇಂದು 54 ಶೈಕ್ಷಣಿಕ ಕಾರ್ಯಕ್ರಮಗಳು, 122 ತರಗತಿ ಕೊಠಡಿಗಳು, 188 ಶಿಕ್ಷಕರು ಹಾಗೂ 3,191 ವಿದ್ಯಾರ್ಥಿಗಳನ್ನು ಒಳಗೊಂಡ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಬೆಳೆದಿದೆ. ಸಂಸ್ಥೆಯ ಈ ಸಾಧನೆಯ ಹಿಂದಿನ ನಿಜವಾದ ಶಕ್ತಿ ಮತ್ತು ಬ್ರ‍್ಯಾಂಡ್ ಇಲ್ಲಿನ ವಿದ್ಯಾರ್ಥಿಗಳು. ಮಕ್ಕಳು ತಮ್ಮ ಪಾಲಕರ ತ್ಯಾಗ ಮತ್ತು ನಿರೀಕ್ಷೆಗಳನ್ನು ಅರ್ಥ ಮಾಡಿಕೊಂಡು ಶಿಕ್ಷಣದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.…

Read More

ಚಿಣ್ಣರಬಿಂಬ ಸಂಸ್ಥೆಯು ಪ್ರಕಾಶ್ ಭಂಡಾರಿಯವರ ಮಾರ್ಗದರ್ಶನದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಇಲ್ಲಿ ಸಾವಿರಾರು ಮಕ್ಕಳು ಶಿಕ್ಷಣ ಹಾಗೂ ಸಂಸ್ಕಾರಗಳನ್ನು ಪಡೆದು ಸಮಾಜದಲ್ಲಿ ಉತ್ತಮ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಚಿಣ್ಣರಬಿಂಬದ ಮಕ್ಕಳಲ್ಲಿ ಶಿಸ್ತು, ಶ್ರದ್ಧೆ, ಶ್ರಮ ಮತ್ತು ದೇಶಭಕ್ತಿಯನ್ನು ಕಾಣಬಹುದು. ಸರ್ಕಾರ ಮಾಡಬೇಕಾದ ಅನೇಕ ಕಾರ್ಯಗಳನ್ನು ಈ ಸಂಸ್ಥೆ ಸಮರ್ಥವಾಗಿ ನಿರ್ವಹಿಸುತ್ತಿದೆ. ಮಕ್ಕಳ ಭಜನೆ ಹಾಗೂ ಗಾಯನವನ್ನು ಆಲಿಸಿ ಅಪಾರ ಸಂತೋಷವಾಯಿತು. ನನ್ನ ಮಗಳು ಕೂಡ ಚಿಣ್ಣರಬಿಂಬದ ವಿದ್ಯಾರ್ಥಿನಿಯಾಗಿದ್ದಾಳೆ ಎನ್ನುವುದು ಹೆಮ್ಮೆಯ ವಿಷಯ ಎಂದು ಪೊವಾಯಿ ಕನ್ನಡ ಸೇವಾ ಸಂಘದ ಮಾಜಿ ಅಧ್ಯಕ್ಷರು ಹಾಗೂ ಸಲಹಾ ಸಮಿತಿಯ ಕಾರ್ಯಾಧ್ಯಕ್ಷರಾದ ಅಡ್ವೋಕೇಟ್ ಆರ್.ಜಿ ಶೆಟ್ಟಿ ಅವರು ನುಡಿದರು.‌ ಅವರು ಜೂನ್ 14ರಂದು ಭಾನುವಾರ ಮಧ್ಯಾಹ್ನ ಎಸ್.ಎಂ ಶೆಟ್ಟಿ ಶಾಲೆಯಲ್ಲಿ ನಡೆದ ಮುಂಬಯಿಯ ಪ್ರತಿಷ್ಠಿತ ಮಕ್ಕಳ ಸಾಂಸ್ಕೃತಿಕ ಸಂಸ್ಥೆಯಾದ ಚಿಣ್ಣರಬಿಂಬದ 2026 -27ನೇ ಸಾಲಿನ ಕನ್ನಡ ಹಾಗೂ ಭಜನಾ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ದೀಪ ಪ್ರಜ್ವಲಿಸಿ ಮಾತನಾಡಿದರು. ಸೆಂಟ್ರಲ್ ಕಮಿಟಿಯ ಸದಸ್ಯ ರಮೇಶ್ ಡಿ ರೈ ಅವರು…

Read More

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಡಳಿತ ಮಂಡಳಿಗೆ ಅಧಿಕಾರೇತರ ಸದಸ್ಯರನ್ನಾಗಿ ಕೋಡಿಂಬಾಡಿ ಗ್ರಾಮದ ಜಗನ್ನಾಥ ಶೆಟ್ಟಿ ನಡುಮನೆ ಅವರನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರ ನಾಮನಿರ್ದೇಶನ ಮಾಡಿ ಆದೇಶಿಸಿದೆ. ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ರ ಪ್ರಕರಣ 28 ಎ ಉಪ ಪ್ರಕರಣ (4ಬಿ) (1)ರ ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರಕಾರ ಈ ಆದೇಶ ಹೊರಡಿಸಿದೆ. ನಾಮನಿರ್ದೇಶನವು ಕೂಡಲೇ ಜಾರಿಗೆ ಬರಲಿದ್ದು, ಸರಕಾರದ ಮುಂದಿನ ಆದೇಶದವರೆಗೆ ಮುಂದುವರೆಯಲಿದೆ. ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸಹಕಾರ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ- 3 ರಂಗನಾಥ ಜಿ ಅವರು ಮೇ 30ರಂದು ಅಧಿಸೂಚನೆ ಹೊರಡಿಸಿದ್ದಾರೆ. ಜಗನ್ನಾಥ ಶೆಟ್ಟಿ ಅವರು ಎರಡು ಬಾರಿ ಕೋಡಿಂಬಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ ಚುನಾಯಿತರಾಗಿದ್ದು, ಪ್ರಸ್ತುತ ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿದ್ದಾರೆ. ವಲಯ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ,…

Read More

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಹಾಗೂ ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ. ಉದಯ್ ಶೆಟ್ಟಿ ಮುನಿಯಾಲು ಮಾತನಾಡಿ, ‘ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಉಳಿವು ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರಕಾರದ ವತಿಯಿಂದ ತುಳು ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಬೇಕೆಂದು ಸಿ.ಎಂಗೆ ಮನವಿ ಸಲ್ಲಿಸಿದ್ದೇನೆ’ ಎಂದರು. ತುಳು ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಪ್ರಾಚೀನ ದ್ರಾವಿಡ ಭಾಷೆಯಾಗಿದ್ದು, ಲಕ್ಷಾಂತರ ಜನರ ಮಾತೃ ಭಾಷೆಯಾಗಿದೆ. ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಜೀವನ ಶೈಲಿಯ ಅವಿಭಾಜ್ಯ ಅಂಗ ತುಳು. ಜಾಗತೀಕರಣದ ಪರಿಣಾಮ ಪ್ರಾದೇಶಿಕ ಭಾಷೆಗಳ ಬಳಕೆ ಕಡಿಮೆಯಾಗುತ್ತಿರುವ ಸಂದರ್ಭ ತುಳು ಭಾಷೆಯ ಸಂರಕ್ಷಣೆ ಮತ್ತು ಅಭಿವೃದ್ಧಿಯ ಅಗತ್ಯತೆ ಹೆಚ್ಚಾಗಿದೆ ಎಂದರು.

Read More

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ, ಪ್ರಸಿದ್ಧ ಸಮಾಜಸೇವಕ ಹಾಗೂ ಉದ್ಯಮಿ ಬರೋಡ ಶಶಿಧರ್ ಶೆಟ್ಟಿ ಅವರ ವತಿಯಿಂದ ದೇವನಾರಿ ಬಂಗಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 60 ವಿದ್ಯಾರ್ಥಿಗಳಿಗೆ ಉಚಿತ ಯೂನಿಫಾರ್ಮ್ (ಟಿ-ಶರ್ಟ್ ಮತ್ತು ಪ್ಯಾಂಟ್) ವಿತರಿಸಲಾಯಿತು. ತಮ್ಮ ಪ್ರೀತಿಯ ತಾಯಿ ದಿವಂಗತ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ ಶಶಿಧರ್ ಶೆಟ್ಟಿ ಅವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಈ ಯೂನಿಫಾರ್ಮ್‌ಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಉದ್ಯಮಿಯ ಈ ಸಮಾಜಮುಖಿ ಕಾರ್ಯವು ವಿದ್ಯಾರ್ಥಿಗಳಲ್ಲಿ ಹರ್ಷ ಮೂಡಿಸಿದೆ. ಈ ಉಚಿತ ಯೂನಿಫಾರ್ಮ್ ವಿತರಣೆಯ ಸಂಪೂರ್ಣ ಉಸ್ತುವಾರಿ ಮತ್ತು ವ್ಯವಸ್ಥೆಯನ್ನು ಕುವೆಟ್ಟು ಗ್ರಾಮ ಪಂಚಾಯತ್‌ನ ಮಾಜಿ ಉಪಾಧ್ಯಕ್ಷರಾದ ಪ್ರದೀಪ್ ಶೆಟ್ಟಿ ಅವರು ಅಚ್ಚುಕಟ್ಟಾಗಿ ಮಾಡಿಕೊಟ್ಟರು. ದಾನಿಗಳ ಪರವಾಗಿ ಅವರೇ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಯೂನಿಫಾರ್ಮ್‌ಗಳನ್ನು ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ (SDMC) ಸದಸ್ಯರು ದಾನಿ ಬರೋಡ ಶಶಿಧರ್ ಶೆಟ್ಟಿ ಅವರ…

Read More

ಪ್ರತಿಭೆ, ಸಾಮರ್ಥ್ಯ ಹಾಗೂ ಕಲಿಯುವ ಆಸಕ್ತಿ ಹೊಂದಿರುವವರಿಗೆ ಇಂದಿನ ಸಮಾಜದಲ್ಲಿ ಆರ್ಥಿಕ ಹಿನ್ನೆಲೆ ಅಡ್ಡಿಯಾಗುವುದಿಲ್ಲ. ಸಾರ್ವಜನಿಕ ಜೀವನದಲ್ಲಿ ಉತ್ತಮ ಕೆಲಸ ಮಾಡುವವರನ್ನು ಗುರುತಿಸಿ, ಗೌರವಿಸಿ, ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕೋಟೇಶ್ವರದ ಯುವ ಮೆರಿಡಿಯನ್ ಗ್ರ್ಯಾಂಮಿ ಬಾಲ್‌ರೂಮ್‌ನಲ್ಲಿ ಭಾನುವಾರ ನಡೆದ ‘ಸೇವಾ ಸಂಕಲ್ಪ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಕಾರ್ಯಕ್ರಮವನ್ನು ಶ್ರೀ ಕೃಷ್ಣಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಹಾಗೂ ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್, ವಂಡಾರು-ಬ್ರಹ್ಮಾವರ ವತಿಯಿಂದ ಆಯೋಜಿಸಲಾಗಿತ್ತು. ಸಮಾಜದ ಅಭಿವೃದ್ಧಿಗೆ ದೂರದೃಷ್ಟಿಯ ನಾಯಕತ್ವ ಅಗತ್ಯವಾಗಿದ್ದು, ಟಿ.ಎ. ಪೈ, ಶ್ರೀನಿವಾಸ ಮಲ್ಯ ಹಾಗೂ ಜಾರ್ಜ್ ಫೆರ್ನಾಂಡಿಸ್ ಅವರಂತಹ ನಾಯಕರು ರೂಪಿಸಿದ ದಾರಿಯ ಫಲವಾಗಿ ಇಂದು ಕರಾವಳಿ ಭಾಗವು ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದೆ ಎಂದು ಅವರು ಹೇಳಿದರು. ಜಿಲ್ಲೆಯಲ್ಲಿ ಪ್ರತಿಭಾವಂತರ ಸಂಖ್ಯೆ ಹೆಚ್ಚಿದ್ದು, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಜನರು ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು. ಶ್ರೀ ಕೃಷ್ಣಪ್ರಸಾದ್ ಗ್ರೂಪ್ ಆಫ್…

Read More

ಬಂಟ ಸಮಾಜದ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳನ್ನು ಹೊರತರಲು ಹಾಗೂ ಅವರಿಗೆ ಸೂಕ್ತ ಅವಕಾಶಗಳನ್ನು ಒದಗಿಸಿ ಸ್ಫೂರ್ತಿ ನೀಡಲು ಕಳೆದ 18 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬಂಟ್ಸ್ ನೌ ಮಾಧ್ಯಮ ಸಂಸ್ಥೆಯು ಮೇ 16 ರಂದು 100 ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಮಾಧ್ಯಮ ಸಂಸ್ಥೆಯ ಕಚೇರಿಯಲ್ಲಿ ನಡೆಯಲಿದೆ. ಬಡ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದ್ದು, ಶಾಲಾ ಶುಲ್ಕ, ಸಮವಸ್ತ್ರ, ಪುಸ್ತಕಗಳು ಮತ್ತು ಇತರ ಶೈಕ್ಷಣಿಕ ಸಾಮಗ್ರಿಗಳನ್ನು ದಾನಿಗಳ ಮುಖಾಂತರ ನಿಧಿ ಸಂಗ್ರಹಿಸಿ ಸಂಸ್ಥೆ ಭರಿಸಲಿವೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಸಂಪೂರ್ಣ ಶೈಕ್ಷಣಿಕ ಜವಾಬ್ದಾರಿಯನ್ನು ಹೊರುವ ವ್ಯವಸ್ಥೆಯೂ ಇದೆ.

Read More

ಉತ್ತಮ ಆರೋಗ್ಯ ಸೇವೆ ಪ್ರತಿಯೊಬ್ಬರಿಗೂ ಲಭ್ಯವಾಗಿ ಆರೋಗ್ಯವಂತ ಸಮಾಜ ನಿರ್ಮಾಣವಾಗಬೇಕು. ಆರೋಗ್ಯ, ಶಿಕ್ಷಣ, ಪರಿಸರ ಮೂಲ ಸೌಕರ್ಯ ಒದಗಿಸಲು ಎಂ.ಆರ್.ಪಿ.ಎಲ್ ಆದ್ಯತೆ ನೀಡುತ್ತಿದೆ ಎಂದು ಎಮ್.ಆರ್.ಪಿ.ಎಲ್ ವಿಭಾಗದ ಜನರಲ್ ಮ್ಯಾನೇಜರ್ ಮಂದಾರ ಕಾಳೆ ಹೇಳಿದರು. ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂ.ಆರ್‌.ಪಿ.ಎಲ್ ಸಿ.ಎಸ್.ಆರ್ ಅನುದಾನದಲ್ಲಿ ಸುರತ್ಕಲ್ ರೋಟರಿ ಕ್ಲಬ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮತ್ತು ಸುರತ್ಕಲ್ ರೋಟರಿ ಕ್ಲಬ್ ರೂಪಿಸಿರುವ ನವೀಕೃತ ಮೆಡಿಸಿನ್ ಸ್ಟೋರೇಜ್ ಕೊಠಡಿಯನ್ನು ಅವರು ಉದ್ಘಾಟಿಸಿ ಮಾತನಾಡಿದರು. ರೋಟರಿ ಕ್ಲಬ್ 3181 ವಲಯ 2ರ ಅಸಿಸ್ಟೆಂಟ್ ಗವರ್ನರ್ ಸಿಎ ಶಾಂತರಾಮ ಶೆಟ್ಟಿ ಮಾತನಾಡಿ, ಬಾಲ್ಯ ಮತ್ತು ವೃದ್ಧಾಪ್ಯದಲ್ಲಿ ಕಾಳಜಿ ಅಗತ್ಯ. ಹಿರಿಯ ನಾಗರಿಕರಿಗೆ ಆರೋಗ್ಯ ಸೇವಾ ಕೇಂದ್ರಗಳ ಅವಶ್ಯಕತೆ ಇದೆ. ಸುಸಜ್ಜಿತ ಔಷಧ ಶೇಖರಣ ಕೊಠಡಿಯಿಂದ ಉತ್ತಮ ಸೇವೆ ಸಾಧ್ಯ ಎಂದರು. ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಡಾ. ಭಾಸ್ಕರ ಕೋಟ್ಯಾನ್ ಮಾತನಾಡಿ, ಉದ್ಯಮ ಹಾಗೂ ಸಾಮಾಜಿಕ ಸಂಸ್ಥೆಗಳ ಸಹಯೋಗದಿಂದ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ ಎಂದರು. ಫಾರ್ಮಸಿಸ್ಟ್…

Read More

ಅಲಯನ್ಸ್ ಕ್ಲಬ್ ಮಂಗಳೂರಿನ ಸಭೆಯು ಇತ್ತೀಚೆಗೆ ಹೋಟೆಲ್ ಶಂಕರ್ ಭವನ ಹೋಟೆಲಿನಲ್ಲಿ ಅಲಯನ್ಸ್ ಕ್ಲಬ್ ಮಂಗಳೂರಿನ ಅಧ್ಯಕ್ಷರಾದ ಅಲೈ ಸನ್ಮತ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. 2026 -27ರ ಸಾಲಿನ ನೂತನ ಅಧ್ಯಕ್ಷರಾಗಿ ಅಲೈ ಜಿ.ಕೆ ಹರಿಪ್ರಸಾದ ರೈ ಕಾರಮೊಗರು ಗುತ್ತುರವರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು. ನೂತನ ಕಾರ್ಯದರ್ಶಿಯಾಗಿ ಅಲೈ ವಿಶ್ವನಾಥ ಶೆಟ್ಟಿ, ಉಪಾಧ್ಯಕ್ಷರಾಗಿ ಅಲೈ ಪ್ರಶಾಂತ್ ಆಳ್ವ, ಕೋಶಾಧಿಕಾರಿಯಾಗಿ ಅಲೈ ಮಾಧವ ಉಲ್ಲಾಳ, ಜೊತೆ ಕಾರ್ಯದರ್ಶಿಯಾಗಿ ಅಲೈ ಸುಧಾಕರ್ ಬಿ, ಸಾರ್ವಜನಿಕ ಮಾರ್ಕೆಟಿಂಗ್ ಸಂಪರ್ಕ ಅಧಿಕಾರಿಯಾಗಿ ಅಲೈ ಸಂತೋಷ ಆಳ್ವ, ಸದಸ್ಯತ್ವ ಅಧಿಕಾರಿಯಾಗಿ ಅಲೈ ರಂಜಿತ್ ಶೆಟ್ಟಿ, ಲೀಡರ್ ಶಿಪ್ ಅಧಿಕಾರಿಯಾಗಿ ಅಲೈ ಡಾ| ರಾಜೇಶ್ ಆಳ್ವ, ಸಾಮಾಜಿಕ ಅಧಿಕಾರಿಯಾಗಿ ಅಲೈ ಡಾ. ಶರತ್ ಶೆಟ್ಟಿ, ಬೋರ್ಡ್ ಆಫ್ ನಿರ್ದೇಶಕರಾಗಿ ಅಲೈ ಅಲಿಸ್ಟನ್, ಅಲೈ ಅಭಿಷೇಕ್, ಅಲೈ ಆಶೀಶ್, ಅಲೈ ವಿಜಯಕುಮಾರ್ ಶೆಟ್ಟಿ, ಅಲೈ ಸತೀಶ್ ಭಂಡಾರಿ, ಅಲೈ ರೂಪೇಶ, ಅಲೈ ಪ್ರವೀಣ್ ಮುಂತಾದವರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಗೊಂಡರು ಎಂದು ಅಲಯನ್ಸ್…

Read More