Author: admin
ಬೈಂದೂರು ಬಂಟರ ಯಾನೆ ನಾಡವರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಸಮಾಜ ಸೇವಕ, ಶ್ರೀ ಮಹಾಲಿಂಗೇಶ್ವರ ಕನ್ಸ್ಟ್ರಕ್ಷನ್ ನ ಆಡಳಿತ ನಿರ್ದೇಶಕರಾದ ಗಾಯಾಡಿ ಗೋಕುಲ ಶೆಟ್ಟಿ ಉಪ್ಪುಂದ ಅವರು ಅವಿರೋಧವಾಗಿ ಪುನರಾಯ್ಕೆಯಾದರು. ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ನೂತನ ಅಧ್ಯಕ್ಷರನ್ನು ಈ ಸಂಧರ್ಭದಲ್ಲಿ ಅಭಿನಂದಿಸಿದರು.
ಬಂಟರ ಸಂಘ ಮುಂಬಯಿಯ ಸಿಟಿ ಪ್ರಾದೇಶಿಕ ಸಮಿತಿಯು ಜೂನ್ 18 ರಂದು ಗುರುವಾರ ಬೆಳಿಗ್ಗೆ 10.30 ರಿಂದ ಬಂಟರ ಭವನದ ಶ್ರೀಮತಿ ರಂಜನಿ ಸುಧಾಕರ್ ಹೆಗ್ಡೆ ಎನೆಕ್ಸ್ ಕಟ್ಟಡದ ಎರಡನೇ ಮಹಡಿಯ ಶ್ರೀಮತಿ ವಿಜಯಲಕ್ಷ್ಮಿ ಮಹೇಶ್ ಶೆಟ್ಟಿ ಸಭಾಭವನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿಕೊಂಡಿತು. ಯೋಗ ಶಿಕ್ಷಣದ ಮೊದಲು ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಈ ಸಭೆಯಲ್ಲಿ ಸಮಿತಿಯ ಉಪ ಕಾರ್ಯಾಧ್ಯಕ್ಷ ಪದ್ಮನಾಭ ಎಸ್ ಶೆಟ್ಟಿ ಮತ್ತು ದಿವ್ಯ ಪಿ ಶೆಟ್ಟಿ ಅವರ ವಿವಾಹ ವಾರ್ಷಿಕೋತ್ಸವದ ಬೆಳ್ಳಿ ಹಬ್ಬ ಆಚರಣೆಯನ್ನು ಬಂಟರ ಸಂಘದ ಮಹಿಳಾ ವಿಭಾಗದ ಕೋಶಾಧಿಕಾರಿ ಮತ್ತು ಸಿಟಿ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷೆ ಶುಚಿತ ಕೆ ಶೆಟ್ಟಿಯವರ 50ನೇ ವರ್ಷದ ಹುಟ್ಟುಹಬ್ಬವನ್ನು ಮತ್ತು ಸಿಟಿ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷೆ ಕಲ್ಪನಾ ಕೃಷ್ಣ ಶೆಟ್ಟಿಯವರ 75 ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು. 25- 50- 75 ಎಂಬ ವಿಶೇಷ ಪರಿಕಲ್ಪನೆಯೊಂದಿಗೆ ಅವರೆಲ್ಲರನ್ನು…
ಸಮಾಜದ ಸೇವೆ ಮಾಡುವ ಅವಕಾಶ ದೊರೆತಿದ್ದು, ಸಮಾಜದ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಪ್ರಗತಿಗೆ ಶ್ರಮಿಸುವುದಾಗಿ ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷ ರಾಜೇಂದ್ರ ವಿ ಶೆಟ್ಟಿಯವರು ಹೇಳಿದರು. ಹುಬ್ಬಳ್ಳಿಯ ಆರ್.ಎನ್ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ‘ಬಂಟರ ಬಾಂಧವ್ಯ’ ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷ ವಿಜಯಾನಂದ ಶೆಟ್ಟಿಯವರಿಂದ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಸಮಾಜದ ವ್ಯಕ್ತಿಯಾಗಿ ಸಮಾಜದ ಅಧ್ಯಕ್ಷನಾಗಿ ಸೇವೆ ಸಲ್ಲಿಸುವ ಭಾಗ್ಯ ದೊರೆತಿರುವುದು ನನ್ನ ಪುಣ್ಯ. ಸಂಘದ ಸದಸ್ಯತ್ವ ಶುಲ್ಕ ಪಾವತಿಸಲು ಹಣವಿಲ್ಲದ ಸಂದರ್ಭದಲ್ಲಿ ಸಮಾಜ ಹಾಗೂ ಸಂಘವು ನನ್ನನ್ನು ಅಪ್ಪಿಕೊಂಡಿತ್ತು. ಎರಡು ವರ್ಷದ ಅವಧಿಯಲ್ಲಿ ಸಮಾಜದ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಪ್ರಗತಿಗೆ ಪೂರಕವಾಗಿ ಕಾರ್ಯಗಳನ್ನು ಮಾಡುತ್ತೇವೆ. ಆರ್.ಎನ್ ಶೆಟ್ಟಿ ಕಲ್ಯಾಣ ಮಂಟಪದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಹೆಚ್ಚೆಚ್ಚು ಕಾರ್ಯಕ್ರಮಗಳು ನಡೆದು ಸಂಘಕ್ಕೆ ಹಾಗೂ ಸಮಾಜಕ್ಕೆ ಆದಾಯ ಮೂಲವನ್ನಾಗಿ ವೃದ್ಧಿಸುವ ಕೆಲಸ ಮಾಡುತ್ತೇವೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದರು. ನಿಕಟಪೂರ್ವ ಅಧ್ಯಕ್ಷರಾದ ವಿಜಯಾನಂದ…
ಕರಾವಳಿ ಅಭಿವೃದ್ಧಿಯ ಬಗ್ಗೆ ಹೊಸ ಸರಕಾರದ ಕಾಳಜಿ ಸ್ವಾಗತಾರ್ಹ. ಎಷ್ಟೋ ವರ್ಷಗಳಿಂದ ಕರಾವಳಿಗರು ಬೆಂಗಳೂರಿಗಿಂತ ಜಾಸ್ತಿ ಮುಂಬೈ ಹಾಗೂ ಗಲ್ಫ್ ರಾಷ್ಟ್ರಗಳಿಗೆ ಉದ್ಯೋಗ ಹಾಗೂ ಆರ್ಥಿಕತೆಗೆ ವಲಸೆ ಹೋಗಿದ್ದು ಅಷ್ಟೇ ನಿಜ. ಇದಕ್ಕೆ ಬೆಂಗಳೂರಿನ ರಸ್ತೆ ಸಂಪರ್ಕದ ತೊಂದರೆಗಳು ಕೂಡಾ ಅಷ್ಟೇ ಕಾರಣವಾಗಿದ್ದು, ವಿಭಿನ್ನ ಸಂಸ್ಕೃತಿ ಕೂಡಾ ಕಾರಣವಾಗಿದ್ದು ನಿಜ. ಕೊಡಗು, ಚಿಕ್ಕಮಗಳೂರು, ಹಾಸನದ ಜನ ಮಕ್ಕಳ ವಿದ್ಯಾಭ್ಯಾಸ, ದೇವಸ್ಥಾನ ಹಾಗೂ ಅರೋಗ್ಯ ಸೇವೆಗೆ ಮಂಗಳೂರು ಹಾಗೂ ಉಡುಪಿಯೊಂದಿಗೆ ಕರ್ನಾಟಕದ ಉಳಿದ ಭಾಗಕ್ಕೆ ಕೊಂಡಿಯಾಗಿದ್ದು ಅಷ್ಟೇ ನಿಜ. ಕರಾವಳಿ ಪ್ರವಾಸೋದ್ಯಮ 5 ಸ್ಟಾರ್ ಹೋಟೆಲ್, ಬೀಚ್, ಸ್ಪೋರ್ಟ್ಸ್, ಬ್ರುವಾರಿಸ್ ಹಾಗೂ ಕಾಸಿನೋಗೆ ತನ್ನನ್ನು ತಾನು ಸಂಕುಚಿಸಿಕೊಂಡರೆ ಅಪಾಯಕಾರಿ. ನೆರೆ ರಾಜ್ಯಗಳ ಗಾಂಜಾ, ಇತರ ಡ್ರಗ್ಸ್ ಮಾಫಿಯ ಮಂಗಳೂರಿನಿಂದ ಮಣಿಪಾಲದವರೆಗೆ ಪಸವರಿಸಿದ್ದು ಅದು ಇನ್ನೂ ಜಾಸ್ತಿಯಾಗುವ ಭಯವಿದೆ. ಮಂಗಳೂರು ಹಾಗೂ ಉಡುಪಿಯ ದಕ್ಷ ಪೊಲೀಸ್ ಅಧಿಕಾರಿಗಳು ಅದಕ್ಕೆ ಕಡಿವಾಣ ಹಾಕಿದ್ದರು ಅದು ವ್ಯಕ್ತಿಪರವಾಗಬಾರದು. ಟೆಂಪಲ್ ಟೂರಿಸಂ, ಮೆಡಿಕಲ್ ಟೂರಿಸಮ್, ಬೀಚ್ ಟೂರಿಸಮ್, ಯೋಗ…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯಡಿ ಡಾ| ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಗುರುಪುರ ಉಳಾಯಿಬೆಟ್ಟು ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ ನೀಡಲಾಯಿತು. ಯಕ್ಷಗಾನ ನಾಟ್ಯ ತರಗತಿಯನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಇವರು ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು. ಶಾಲಾ ಪ್ರಾಚಾರ್ಯೆ ಶ್ರೀಮತಿ ಸುಮಂಗಲಾ ಸಭಾಧ್ಯಕ್ಷತೆ ವಹಿಸಿ ಶುಭ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಪ್ರಧಾನ ಸಂಚಾಲಕರಾದ ಪಣಂಬೂರು ವಾಸುದೇವ ಐತಾಳ, ಪೊಳಲಿ ಕೈಕಂಬ ಘಟಕದ ಪದಾಧಿಕಾರಿಗಳಾದ ಲೋಕೇಶ್ ಭರಣಿ ಮತ್ತು ಶಾಲೆಯ ಅಧ್ಯಾಪಕ ವರ್ಗದವರು ಉಪಸ್ಥಿತರಿದ್ದರು. ಯಕ್ಷಗಾನ ಶಿಕ್ಷಕರಾದ ದೀವಿತ್ ಎಸ್.ಕೆ ಪೆರಾಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಯಕ್ಷಗಾನ ವಿದ್ಯಾರ್ಥಿನಿ ಕು. ಪ್ರತೀಕ್ಷಾ ತನ್ನ ಅನುಭವಗಳನ್ನು ಹಂಚಿಕೊಂಡಳು. ಉದ್ಘಾಟನಾ ಕಾರ್ಯಕ್ರಮದ ತರುವಾಯ ಯಕ್ಷಗಾನ ವಿದ್ಯಾರ್ಥಿಗಳಿಂದ ಪೂರ್ವರಂಗದ ಪ್ರಾತ್ಯಕ್ಷಿಕೆಯು…
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಉಡುಪಿ ಜಿಲ್ಲೆ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಭೌತಶಾಸ್ತç ಉಪನ್ಯಾಸಕರ ಕಾರ್ಯಾಗಾರ ನಡೆಯಿತು. ಉಡುಪಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ ವಿಭಾಗ)ಯ ಉಪನಿರ್ದೇಶಕರಾದ ಶ್ರೀ ಮಾರುತಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಗಿರೀಶ ಸಿ ಅಸಿಸ್ಟೆಂಟ್ ಡೈರೆಕ್ಟರ್ ಕಂಪ್ಯೂಟರ್ ಸೆಲ್ ಕೆಎಸ್ ಇ ಎ ಬಿ ಬೆಂಗಳೂರು ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಡಾ. ದಯಾನಂದ ಪೈ ವಹಿಸಿದ್ದರು. ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ರೂಪ ಎಲ್ ಭಟ್, ಆದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಶ್ರೀ ಸಂಜೀವ, ಕಾರ್ಕಳ…
ಪುಣೆ ಬಂಟರ ಸಂಘದ ಸಮಾಜ ಕಲ್ಯಾಣ, ಕಲ್ಪವೃಕ್ಷ, ಕ್ರೀಡಾದಾತ ಯೋಜನೆಯ ಅಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನದಂಗವಾಗಿ ಯೋಗ ದಿನಾಚರಣೆಯು ಜೂನ್ 21 ರಂದು ಬೆಳಿಗ್ಗೆ ಗಂಟೆ 9.00ರಿಂದ ಬಂಟರ ಭವನದ ಬ್ಯಾಂಕ್ವೇಟ್ ಹಾಲ್ ನಲ್ಲಿ ನಡೆಯಲಿದೆ. ಯೋಗ ತರಬೇತುದಾರೆ ಜ್ಯೋತಿ ಶೆಟ್ಟಿಯವರು ಯೋಗದಿಂದ ದೇಹಕ್ಕೆ ಆಗುವ ಪ್ರಯೋಜನಗಳ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಪುಣೆಯ ಶೆಟ್ಟಿ ಯೋಗ ಕ್ಲಾಸ್ ನ ನಿರ್ದೇಶಕಿ ಪ್ರಮೀಳಾ ಜೆ ಶೆಟ್ಟಿಯವರು ಈ ಯೋಗ ದಿನಾಚರಣೆಯನ್ನು ನಡೆಸಿಕೊಡಲಿದ್ದಾರೆ. ಬಂಟರ ಸಂಘ ಪುಣೆ, ಮಹಿಳಾ ವಿಭಾಗ, ಯುವ ವಿಭಾಗ ಹಾಗೂ ಪ್ರಾದೇಶಿಕ ಸಮಿತಿಗಳ ಸಂಯುಕ್ತ ಕೂಡುವಿಕೆಯಲ್ಲಿ ನಡೆಯಲಿರುವ ಈ ಯೋಗ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಸಮಾಜ ಬಾಂಧವರು ಪಾಲ್ಗೊಳ್ಳುವಂತೆ ಪುಣೆ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ಅಧ್ಯಕ್ಷರಾದ ಕೆ ಅಜಿತ್ ಹೆಗ್ಡೆ, ಉಪಾಧ್ಯಕ್ಷರುಗಳಾದ ವಿಶ್ವನಾಥ್ ಶೆಟ್ಟಿ, ರಾಮಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣಂಜಾರು, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಕ್ರೀಡಾ ವಿಭಾಗದ…
ವಸಾಯಿ ಕರ್ನಾಟಕ ಸಂಘದ ವತಿಯಿಂದ ಜೂನ್ 21 ರಂದು ಬೆಳಿಗ್ಗೆ ಗಂಟೆ 9.30 ರಿಂದ ಶ್ರೀಸ್ವಾಮಿ ನಾರಾಯಣ ಸಭಾಂಗಣ ಮೊದಲನೆಯ ಮಹಡಿ ಸಾಯಿನಗರ ವಸಾಯಿ ಪಶ್ಚಿಮ ಇಲ್ಲಿ ಅಧ್ಯಕ್ಷರಾದ ಕರ್ನೂರು ಶಂಕರ ಆಳ್ವ ಅವರ ಅಧ್ಯಕ್ಷತೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಯೋಜಿಸಲಾಗಿದೆ. ಯೋಗ ಗುರು ಮಿಲನ್ ಠಕ್ಕರ್ ಮತ್ತು ಮಲ್ಲಿಕಾ ಎಸ್ ಶೆಟ್ಟಿ ಮತ್ತು ಸಂಗಡಿಗರು ಮಾರ್ಗದರ್ಶನ ಮಾಡಲಿದ್ದಾರೆ. ಇವರು ಸುಮಾರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲದಿಂದ ಯೋಗಾಭ್ಯಾಸದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಯೋಗವು ವಿಶ್ವಕ್ಕೆ ಭಾರತದ ದೊಡ್ಡ ಕೊಡುಗೆಯಾಗಿದೆ. ಜೂನ್ 21 ರಂದು ವಿಶ್ವ ಯೋಗ ದಿನವನ್ನಾಗಿ ಆಚರಿಸಲಾಗುತ್ತಿದ್ದು, 190ಕ್ಕೂ ಹೆಚ್ಚು ದೇಶಗಳಲ್ಲಿ ಆಚರಿಸಲಾಗುತ್ತಿದೆ. ಆ ದಿನ ಅನೇಕ ಸ್ಥಳಗಳಲ್ಲಿ ಶಿಬಿರಗಳು ಸಾಮೂಹಿಕ ಯೋಗ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಆರೋಗ್ಯ ದೃಷ್ಟಿಯಿಂದ ಯೋಗವು ತುಂಬಾ ಲಾಭದಾಯಕವಾಗಿದೆ. ಆಧುನಿಕ ಜೀವನ ಶೈಲಿಯ ಒತ್ತಡದಿಂದ ಯುವ ಜನತೆಗೆ ಯೋಗವು ಶಾಂತಿ ಮತ್ತು ಏಕಾಗ್ರತೆಯನ್ನು ಒದಗಿಸುವ ಒಂದು ಶಕ್ತಿಶಾಲಿ ವಿಧಾನ ಎಂದು ಹೇಳಬಹುದು. ಅಂದು ನಡೆಯುವ…
ಜಗತ್ತಿನ ನಾನಾ ಮೂಲೆಗಳಲ್ಲಿ ನೆಲೆಸಿರುವ ಕನ್ನಡಿಗರು ಕನ್ನಡ ನಾಡು-ನುಡಿ, ಸಂಸ್ಕೃತಿ, ಪರಂಪರೆಗಾಗಿ ತಮ್ಮದೇ ಆದ ಕೊಡುಗೆಯನ್ನು ನೀಡುವ ಮೂಲಕ ತಮ್ಮ ವೃತ್ತಿ, ಉದ್ಯೋಗ, ವ್ಯವಹಾರಗಳ ನಡುವೆಯೂ ಅವರು ಕನ್ನಡದ ಬೇರುಗಳನ್ನು ಮರೆಯದೆ, ಹೊಸ ತಲೆಮಾರಿಗೆ ಭಾಷೆಯ ಮಹತ್ವವನ್ನು ಬೋಧಿಸುತ್ತ ಬಂದಿರುವುದನ್ನು ನಾವು ಕಾಣಬಹುದಾಗಿದೆ. ಇಂಥ ಸನ್ನಿವೇಶದ ನಡುವೆ ದುಬೈಯಂತಹ ಬಹುಭಾಷಾ, ಬಹುಸಂಸ್ಕೃತಿಯ ನಗರದಲ್ಲಿ ಕನ್ನಡ ಭಾಷೆಗೆ ತನ್ನದೇ ಆದ ವಿಶೇಷ ಕೊಡುಗೆ ನೀಡಿದವರು ಕ್ರಿಯಾತ್ಮಕ ಕಲಾ ನಿರ್ದೇಶಕರಾಗಿರುವ ಕೊಡಗಿನ ಬಿ.ಕೆ ಗಣೇಶ್ ರೈ ತಮ್ಮ ಕಲಾತ್ಮಕ ದೃಷ್ಟಿ, ಸಂಘಟನಾ ಕೌಶಲ್ಯ ಮತ್ತು ಭಾಷಾ ಪ್ರೀತಿ ಮೂಲಕ ಅವರು ವಿದೇಶ ನೆಲದಲ್ಲೂ ಕನ್ನಡದ ಧ್ವಜವನ್ನು ಎತ್ತಿಹಿಡಿದಿದ್ದಾರೆ. ವಿಜ್ಞಾನದ ಕ್ರಿಯಾರೂಪದ ಅಧುನಿಕ ನಗರ, ವಿಶ್ವ ದರ್ಜೆಯ ವಾಣಿಜ್ಯ ಕೇಂದ್ರ, ವಿಶ್ವದ ನಾನಾ ಕಡೆಗಳ 250ಕ್ಕೂ ಹೆಚ್ಚು ದೇಶವಾಸಿಗಳ ನಾಗರಿಕರು ಅನಿವಾಸಿ ಪ್ರಜೆಗಳಾಗಿ ಉದ್ಯೋಗಿಗಳಾಗಿ, ಉದ್ಯಮಿಗಳಾಗಿ ನೆಲೆಸಿರುವ ದುಬೈನಲ್ಲಿ, ಹಲವಾರು ವರ್ಷಗಳಿಂದ ಕನ್ನಡದ ಮೇಲಿನ ಪ್ರೀತಿ, ಅಭಿಮಾನಕ್ಕಾಗಿ ಬಿ.ಕೆ ಗಣೇಶ್ ರೈ ಅವರು ಮಾಡಿಕೊಂಡು ಬಂದಿರುವ…
ತಾನಾಯಿತು ತನ್ನ ಪಾಡಾಯಿತು ಎನ್ನುವ ಈ ಸ್ವಾರ್ಥಮಯ ಜಗದಲಿ, ಯಾವುದೇ ಪ್ರತಿಫಲದ ನಿರೀಕ್ಷೆಯಿಲ್ಲದೆ ನಿಸ್ವಾರ್ಥವಾಗಿ ದುಡಿಯುವ ಸಂದೀಪ್ ಶೆಟ್ಟಿಯವರ ವ್ಯಕ್ತಿತ್ವ ನಿಜಕ್ಕೂ ಅಪರೂಪದ್ದು. ಇತರರ ನೋವಿಗೆ ಸ್ಪಂದಿಸುವ ಮಾನವೀಯ ಹೃದಯ, ಸಮಾಜದ ಒಳಿತಿಗಾಗಿ ಸದಾ ತುಡಿವ ಸೇವಾ ಮನೋಭಾವ ಹಾಗೂ ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುವ ಸಂದೀಪ್ ಶೆಟ್ಟಿಯವರು ಬೆಳುವಾಯಿ ಗಿರೀಶ್ ಶೆಟ್ಟಿ ಹಾಗೂ ಬಂಟ್ವಾಳ ತಾಲೂಕಿನ ನಯನಾಡು ಪ್ರಭಾವತಿ ಜಿ ಶೆಟ್ಟಿಯವರ ಸುಪುತ್ರರಾಗಿ ಜನಿಸಿದರು. ಡಿಪ್ಲೋಮ ಇಂಜಿನಿಯರಿಂಗ್ ಪದವಿ ಮುಗಿಸಿ ಕಳೆದ 13 ವರ್ಷಗಳಿಂದ ‘ಸಮರ್ಥ ಬಿಲ್ಡರ್ಸ್’ ಎಂಬ ಸ್ವಂತ ಸಂಸ್ಥೆ ಸ್ಥಾಪಿಸಿ ಯಶಸ್ವೀ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಸದಾ ನಗುಮೊಗದೊಂದಿಗೆ ಎಲ್ಲರೊಂದಿಗೆ ಬೆರೆತು ಬಾಳುವ ವಿಶೇಷ ಗುಣ, ಸ್ನೇಹಪರ ವ್ಯಕ್ತಿತ್ವ ಹಾಗೂ ಸೇವಾ ಮನೋಭಾವದಿಂದ ಜನಮನ ಗೆದ್ದಿರುವ ಸಂದೀಪ್ ಶೆಟ್ಟಿಯವರು ಯುವ ಬಂಟರ ಸಂಘ ಮೂಡುಬಿದಿರೆಯ 2026-27 ರ ಸಾಲಿಗೆ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡಿದ್ದಾರೆ. ಜವಾಬ್ದಾರಿಯನ್ನು ಹೊತ್ತರೆ ಅದನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಛಲ ಮತ್ತು ಶ್ರಮ ಇವರ ವಿಶೇಷತೆಯಾಗಿದೆ. ಯುವ ಬಂಟರ…















