Author: admin

ಜೂನ್ 21ರಂದು ಜಾಗತಿಕವಾಗಿ ಆಚರಿಸಲಾದ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶ್ರೀ ಶಕ್ತಿ ಫೌಂಡೇಶನ್ (ರಿ) ವತಿಯಿಂದ ಕೆ.ಎಸ್ ಮೆಹ್ತಾ ಶಾಲೆಯ ಆವರಣದಲ್ಲಿ ಅತ್ಯಂತ ಸಂಭ್ರಮ ಹಾಗೂ ಸಡಗರದೊಂದಿಗೆ ಯೋಗ ದಿನಾಚರಣೆ ಆಚರಿಸಲಾಯಿತು. ಶ್ರೀ ಶಕ್ತಿ ಫೌಂಡೇಶನ್‌ನ ಸಂಸ್ಥಾಪಕ ಅಧ್ಯಕ್ಷೆ ಶಾಲಿನಿ ಎಸ್ ಶೆಟ್ಟಿ ಸಚ್ಚೇರಿಗುತ್ತು ಅವರ ಸಮರ್ಥ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಮೂಡಿ ಬಂದಿತು. ಶ್ರೀ ಶಕ್ತಿ ಫೌಂಡೇಶನ್‌ನ ಈ ಆರೋಗ್ಯ ಮತ್ತು ಸಾಂಸ್ಕೃತಿಕ ಹಬ್ಬಕ್ಕೆ ಗಣ್ಯರು ಜಂಟಿಯಾಗಿ ಚಾಲನೆ ನೀಡಿದರು. ಕಾರ್ಯಕ್ರಮದ ಆರಂಭದಲ್ಲಿ ಶ್ರೀಮತಿ ಅನಿತಾ ಮಿಶ್ರಾ ಅವರು ಭಕ್ತಿಪೂರ್ವಕವಾಗಿ ಪ್ರಾರ್ಥನೆ ನೆರವೇರಿಸಿದರು. ತದನಂತರ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಂಟರ ಸಂಘ ಮುಂಬಯಿಯ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಜಂಟಿ ಕಾರ್ಯದರ್ಶಿ ರಮೇಶ್ ಶೆಟ್ಟಿ ಸಿದ್ದಕಟ್ಟೆ, ಶ್ರೀ ಶಕ್ತಿ ಫೌಂಡೇಶನ್‌ನ ಸಂಸ್ಥಾಪಕ ಅಧ್ಯಕ್ಷೆ ಶ್ರೀಮತಿ ಶಾಲಿನಿ ಎಸ್ ಶೆಟ್ಟಿ ಸಚ್ಚೇರಿಗುತ್ತು ಹಾಗೂ ಉಪಸ್ಥಿತರಿದ್ದ ಇತರ ಗಣ್ಯರು ಒಟ್ಟಾಗಿ ಸಾಂಪ್ರದಾಯಿಕ ಶೈಲಿಯಲ್ಲಿ ದೀಪ ಬೆಳಗಿಸುವ ಮೂಲಕ…

Read More

ಬ್ರಹ್ಮಾವರ ಜೂ. ೨೨: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಡುಪಿಯ ಯೋಗ ಶಿಕ್ಷಕರಾದ ಬಿ ಕೆ ಪೂರ್ಣೇಶ್ ಶರ್ಮಾರವರು ಆಗಮಿಸಿದ್ದು. ಅವರು ಮಾತನಾಡಿ ವರ್ಷದಲ್ಲಿ ಜೂನ್ ೨೧ ಹಗಲು ಹೆಚ್ಚು ಇರುವ ದಿನವಾಗಿದ್ದು, ಈ ದಿನವನ್ನು ನಾವು “ಅಂತರರಾಷ್ಟ್ರೀಯ ಯೋಗ ದಿನ” ವನ್ನಾಗಿ ಆಚರಿಸುತ್ತೇವೆ. ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧಾರಣ, ಧ್ಯಾನ, ಸಮಾಧಿ ಇವು ಅಷ್ಟಾಂಗ ಯೋಗಗಳು. ಡಯಾಬಿಟಿಸ್‌ನಂತಹ ಖಾಯಿಲೆಯ ನಿರ್ಮೂಲನೆಗೆ ದಿನನಿತ್ಯ ಪ್ರಾಣಾಯಾಮ ಮಾಡಬೇಕು. ಯೋಗದಿಂದ ದೊಡ್ಡ ದೊಡ್ಡ ಖಾಯಿಲೆಗಳು ಗುಣಮುಖವಾಗುತ್ತದೆ. ನಮ್ಮ ಆರೋಗ್ಯ ಚೆನ್ನಾಗಿದ್ದರೆ ಮಾತ್ರ ನಾವು ಭೂಮಿಯ ಮೇಲೆ ನೆಮ್ಮದಿಯಿಂದ ಬದುಕಬಹುದೆಂದು ತಿಳಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ನಮ್ಮ ದಿನನಿತ್ಯ ಜೀವನಕ್ಕೆ ಯೋಗ ಅತ್ಯಗತ್ಯ, ಸಹಪಠ್ಯ ಚಟುವಟಿಕೆಗಳಲ್ಲಿ ಯೋಗ ಅತ್ಯಂತ ಪ್ರಮುಖವಾದ ವಿಷಯವಾಗಿದೆಯೆಂದು ತಿಳಿಸಿದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ವಿದ್ಯಾರ್ಥಿಗಳಿಂದ ಯೋಗಾಭ್ಯಾಸದ ಪ್ರತಿಜ್ಞೆಯನ್ನು ಸ್ವೀಕರಿಸಿ…

Read More

ನಿತ್ಯ ಜೀವನದಲ್ಲಿ ಯೋಗ ಮಾಡುವುದರಿಂದ ಸದಾ ಆರೋಗ್ಯವಂತರಾಗಿ ಇರಲು ಸಾಧ್ಯ ಎಂದು ಜ್ಞಾನಸುಧಾದ ಪೂರ್ವ ವಿದ್ಯಾರ್ಥಿನಿ, ಮಾಹೆಯ ಯೋಗಕೇಂದ್ರದ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಡಾ. ಆತ್ಮಿಕ ಶೆಟ್ಟಿ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ವಿಶ್ವಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಯೋಗದ ಮಹತ್ವವನ್ನು ಪ್ರಾತ್ಯಾಕ್ಷಿಕೆಯ ಮೂಲಕ ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲರಾದ ಶ್ರೀ ದಿನೇಶ್ ಎಂ ಕೊಡವೂರ್, ಉಪ್ರಪ್ರಾಂಶುಪಾಲರುಗಳಾದ ಶ್ರೀ ಸಾಹಿತ್ಯ ಹಾಗೂ ಶ್ರೀಮತಿ ಉಷಾ ರಾವ್ ಯು ಮತ್ತು ದೈ.ಶಿ.ನಿರ್ದೇಶಕಿ ಶ್ರೀಮತಿ ಸೌಜನ್ಯ ಹೆಗ್ಡೆ ಉಪಸ್ಥಿತಿರಿದ್ದರು. ಆಗ್ಲಭಾಷಾ ಉಪನ್ಯಾಸಕಿ ಕು.ದಿವ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Read More

ಪ್ರಸ್ತುತ ಉದ್ಯೋಗದ ನೇಮಕಾತಿ ಪ್ರಕ್ರಿಯೆಯಲ್ಲಾದ ಬದಲಾವಣೆಗೆ ಒಗ್ಗಿಕೊಂಡು ಪದವಿ, ಅಂಕ, ಪ್ರಮಾಣಪತ್ರಗಳ ಜೊತೆ ತಮ್ಮಲ್ಲಿರುವ ಕೌಶಲ್ಯಗಳನ್ನು ಮನದಟ್ಟು ಮಾಡಿಸುವ ಸಾಮರ್ಥ್ಯ ಅವಶ್ಯಕ. ಅದರೊಂದಿಗೆ ನಡೆದು ಬಂದ ದಾರಿಯ ಸ್ಮರಣೆ, ಗುರು ಹಿರಿಯರ ಆಶೀರ್ವಾದವು ನಿಮ್ಮನ್ನು ಯಶಸ್ಸಿನೆಡೆಗೆ ಕೊಂಡೊಯ್ಯಲಿದೆ ಎಂದು ನಿಟ್ಟೆ ತಂತ್ರಜ್ಞಾನ ಸಂಸ್ಥೆಯ ಸಮಲೋಚನೆ, ಕಲ್ಯಾಣ, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥ ಭರತ್ ಜಿ ಕುಮಾರ್ ಹೇಳಿದರು. ಅವರು ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಣಿಪುರ ಕುಂತಲ ನಗರದ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಸೆಂಟರ್ ನ ಕೌಶಲ ಅಭಿವೃದ್ಧಿ ಕೇಂದ್ರದಲ್ಲಿ ಉಚಿತ ಡಿಜಿಟಲ್ ಸಾಕ್ಷರತೆ ಕಂಪ್ಯೂಟರ್ ತರಬೇತಿ ಪೂರೈಸಿದ 21ನೇ ಬ್ಯಾಚ್ ನ ಅಭ್ಯರ್ಥಿಗಳಿಗೆ ಮೈನ್ಸ್ ಕಂಪ್ಯೂಟರ್ ಸಂಸ್ಥೆಯ ಪ್ರಮಾಣ ಪತ್ರ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ, 420 ಯುವಕರು, ಮಹಿಳೆಯರಿಗೆ ಉಚಿತ ಕಂಪ್ಯೂಟರ್…

Read More

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ಇವರಿಂದ ಜಿಲ್ಲಾ ಅನುದಾನಿತ ಶಾಲಾ ಸಂಘಗಳು ಉಡುಪಿ ಇವರ ಸಹಯೋಗದೊಂದಿಗೆ ಜೂನ್ 21 ರಂದು ಯಕ್ಷಗಾನ ಕಲಾರಂಗ ಉಡುಪಿ ಇಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲೆಯ 200 ಅನುದಾನಿತ ಶಾಲೆಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ 20,000 ಜೊತೆ ಉಚಿತ ಶಾಲಾ ಸಮವಸ್ತ್ರಗಳ ವಿತರಣೆ ಹಾಗೂ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾ ಪೋಷಕ ಪ್ರಶಸ್ತಿ ಮತ್ತು ವೆಬ್ ಸೈಟ್ ಅನಾವರಣ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷ ಡಾ| ಎಚ್ ಎಸ್ ಶೆಟ್ಟಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಸುವರ್ಣ, ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ರವೀಂದ್ರನಾಥ ಶಾನುಭಾಗ್, ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರು, ಜಿಲ್ಲಾ ಅನುದಾನಿತ ಪ್ರೌಢಶಾಲೆಗಳ ನೌಕರರ ಸಂಘದ ಅಧ್ಯಕ್ಷರಾದ ಡಾ. ಜಯಶೀಲ ಶೆಟ್ಟಿ ಕಂದಾವರ,…

Read More

ಯುವ ಬಂಟರ ಸಂಘ ಮೂಡುಬಿದಿರೆಯ ಪ್ರಥಮ ಪದಾಧಿಕಾರಿಗಳ ಸಭೆಯು ನೂತನ ಅಧ್ಯಕ್ಷ ಬೆಳುವಾಯಿ ಸಂದೀಪ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜೂನ್ 21 ರಂದು ಮೂಡುಬಿದಿರೆ ಕನ್ನಡ ಭವನದಲ್ಲಿ ನಡೆಯಿತು. ಶರತ್ ಶೆಟ್ಟಿಯವರು ಸಭೆಯಲ್ಲಿ ಭಾಗವಹಿಸಿದ ಎಲ್ಲಾ ಪದಾಧಿಕಾರಿಗಳನ್ನು ಸ್ವಾಗತಿಸಿದರು. ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಜಯಕುಮಾರ್ ಶೆಟ್ಟಿಯವರು ಪ್ರಾಸ್ತವಿಕವಾಗಿ ಮಾತನಾಡಿ, ಅವರ ಅಧ್ಯಕ್ಷ ಅವಧಿಯಲ್ಲಿ ಮಾಡಿದ ಕೆಲಸ ಕಾರ್ಯಗಳನ್ನು ವಿವರಿಸಿದರು ಹಾಗೂ ತನಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದವನ್ನು ತಿಳಿಸಿದರು. ಗೌರವಾಧ್ಯಕ್ಷರಾದ ವಿವೇಕ್ ಆಳ್ವರವರು ಮಾತನಾಡಿ, ಅನೇಕ ಸಲಹೆ ಸೂಚನೆಯನ್ನು ನೀಡಿದರು ಅದರಲ್ಲಿ ಮುಖ್ಯವಾಗಿ ಗ್ರಾಮ ಸಮಿತಿ ರಚಿಸಬೇಕೆಂದು ತಿಳಿಸಿದರು. ಪ್ರತೀ ಗ್ರಾಮದ ಯುವಕ ಯುವತಿಯರನ್ನು ಯುವ ಬಂಟರ ಸಂಘಕ್ಕೆ ಸದಸ್ಯರನ್ನಾಗಿ ಮಾಡಬೇಕೆಂದು ಹೇಳಿದರು. ಗೂಗಲ್ ಫಾರಂನ ಮುಖಾಂತರ ಎಲ್ಲಾ ಮಾಹಿತಿಯನ್ನು ನೀಡಿ ಸದಸ್ಯರಾಗಬೇಕೆಂದು ತಿಳಿಸಿದರು. ಗೌರವ ಸಲಹೆಗಾರರಾದ ಮಿಥುನ್ ಶೆಟ್ಟಿ, ಮನೋಜ್ ಶೆಟ್ಟಿ, ಅರುಣ್ ಶೆಟ್ಟಿ ವಾಲ್ಪಾಡಿ, ಉಪಾಧ್ಯಕ್ಷ ಸಂದೀಪ್ ಶೆಟ್ಟಿ ತೋಡಾರು, ಖಜಾಂಜಿ ಭರತ್ ಶೆಟ್ಟಿ, ಕಾನೂನು ಸಲಹೆಗಾರರಾದ…

Read More

ಬೈಂದೂರು ಬಂಟರ ಯಾನೆ ನಾಡವರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಸಮಾಜ ಸೇವಕ, ಶ್ರೀ ಮಹಾಲಿಂಗೇಶ್ವರ ಕನ್ಸ್ಟ್ರಕ್ಷನ್ ನ ಆಡಳಿತ ನಿರ್ದೇಶಕರಾದ ಗಾಯಾಡಿ ಗೋಕುಲ ಶೆಟ್ಟಿ ಉಪ್ಪುಂದ ಅವರು ಅವಿರೋಧವಾಗಿ ಪುನರಾಯ್ಕೆಯಾದರು. ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ನೂತನ ಅಧ್ಯಕ್ಷರನ್ನು ಈ ಸಂಧರ್ಭದಲ್ಲಿ ಅಭಿನಂದಿಸಿದರು.

Read More

ಬಂಟರ ಸಂಘ ಮುಂಬಯಿಯ ಸಿಟಿ ಪ್ರಾದೇಶಿಕ ಸಮಿತಿಯು ಜೂನ್ 18 ರಂದು ಗುರುವಾರ ಬೆಳಿಗ್ಗೆ 10.30 ರಿಂದ ಬಂಟರ ಭವನದ ಶ್ರೀಮತಿ ರಂಜನಿ ಸುಧಾಕರ್ ಹೆಗ್ಡೆ ಎನೆಕ್ಸ್ ಕಟ್ಟಡದ ಎರಡನೇ ಮಹಡಿಯ ಶ್ರೀಮತಿ ವಿಜಯಲಕ್ಷ್ಮಿ ಮಹೇಶ್ ಶೆಟ್ಟಿ ಸಭಾಭವನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿಕೊಂಡಿತು. ಯೋಗ ಶಿಕ್ಷಣದ ಮೊದಲು ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಈ ಸಭೆಯಲ್ಲಿ ಸಮಿತಿಯ ಉಪ ಕಾರ್ಯಾಧ್ಯಕ್ಷ ಪದ್ಮನಾಭ ಎಸ್ ಶೆಟ್ಟಿ ಮತ್ತು ದಿವ್ಯ ಪಿ ಶೆಟ್ಟಿ ಅವರ ವಿವಾಹ ವಾರ್ಷಿಕೋತ್ಸವದ ಬೆಳ್ಳಿ ಹಬ್ಬ ಆಚರಣೆಯನ್ನು ಬಂಟರ ಸಂಘದ ಮಹಿಳಾ ವಿಭಾಗದ ಕೋಶಾಧಿಕಾರಿ ಮತ್ತು ಸಿಟಿ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷೆ ಶುಚಿತ ಕೆ ಶೆಟ್ಟಿಯವರ 50ನೇ ವರ್ಷದ ಹುಟ್ಟುಹಬ್ಬವನ್ನು ಮತ್ತು ಸಿಟಿ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷೆ ಕಲ್ಪನಾ ಕೃಷ್ಣ ಶೆಟ್ಟಿಯವರ 75 ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು. 25- 50- 75 ಎಂಬ ವಿಶೇಷ ಪರಿಕಲ್ಪನೆಯೊಂದಿಗೆ ಅವರೆಲ್ಲರನ್ನು…

Read More

ಸಮಾಜದ ಸೇವೆ ಮಾಡುವ ಅವಕಾಶ ದೊರೆತಿದ್ದು, ಸಮಾಜದ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಪ್ರಗತಿಗೆ ಶ್ರಮಿಸುವುದಾಗಿ ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷ ರಾಜೇಂದ್ರ ವಿ ಶೆಟ್ಟಿಯವರು ಹೇಳಿದರು. ಹುಬ್ಬಳ್ಳಿಯ ಆರ್.ಎನ್ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ‘ಬಂಟರ ಬಾಂಧವ್ಯ’ ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷ ವಿಜಯಾನಂದ ಶೆಟ್ಟಿಯವರಿಂದ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಸಮಾಜದ ವ್ಯಕ್ತಿಯಾಗಿ ಸಮಾಜದ ಅಧ್ಯಕ್ಷನಾಗಿ ಸೇವೆ ಸಲ್ಲಿಸುವ ಭಾಗ್ಯ ದೊರೆತಿರುವುದು ನನ್ನ ಪುಣ್ಯ. ಸಂಘದ ಸದಸ್ಯತ್ವ ಶುಲ್ಕ ಪಾವತಿಸಲು ಹಣವಿಲ್ಲದ ಸಂದರ್ಭದಲ್ಲಿ ಸಮಾಜ ಹಾಗೂ ಸಂಘವು ನನ್ನನ್ನು ಅಪ್ಪಿಕೊಂಡಿತ್ತು. ಎರಡು ವರ್ಷದ ಅವಧಿಯಲ್ಲಿ ಸಮಾಜದ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಪ್ರಗತಿಗೆ ಪೂರಕವಾಗಿ ಕಾರ್ಯಗಳನ್ನು ಮಾಡುತ್ತೇವೆ. ಆರ್.ಎನ್ ಶೆಟ್ಟಿ ಕಲ್ಯಾಣ ಮಂಟಪದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಹೆಚ್ಚೆಚ್ಚು ಕಾರ್ಯಕ್ರಮಗಳು ನಡೆದು ಸಂಘಕ್ಕೆ ಹಾಗೂ ಸಮಾಜಕ್ಕೆ ಆದಾಯ ಮೂಲವನ್ನಾಗಿ ವೃದ್ಧಿಸುವ ಕೆಲಸ ಮಾಡುತ್ತೇವೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದರು. ನಿಕಟಪೂರ್ವ ಅಧ್ಯಕ್ಷರಾದ ವಿಜಯಾನಂದ…

Read More

ಕರಾವಳಿ ಅಭಿವೃದ್ಧಿಯ ಬಗ್ಗೆ ಹೊಸ ಸರಕಾರದ ಕಾಳಜಿ ಸ್ವಾಗತಾರ್ಹ. ಎಷ್ಟೋ ವರ್ಷಗಳಿಂದ ಕರಾವಳಿಗರು ಬೆಂಗಳೂರಿಗಿಂತ ಜಾಸ್ತಿ ಮುಂಬೈ ಹಾಗೂ ಗಲ್ಫ್ ರಾಷ್ಟ್ರಗಳಿಗೆ ಉದ್ಯೋಗ ಹಾಗೂ ಆರ್ಥಿಕತೆಗೆ ವಲಸೆ ಹೋಗಿದ್ದು ಅಷ್ಟೇ ನಿಜ. ಇದಕ್ಕೆ ಬೆಂಗಳೂರಿನ ರಸ್ತೆ ಸಂಪರ್ಕದ ತೊಂದರೆಗಳು ಕೂಡಾ ಅಷ್ಟೇ ಕಾರಣವಾಗಿದ್ದು, ವಿಭಿನ್ನ ಸಂಸ್ಕೃತಿ ಕೂಡಾ ಕಾರಣವಾಗಿದ್ದು ನಿಜ. ಕೊಡಗು, ಚಿಕ್ಕಮಗಳೂರು, ಹಾಸನದ ಜನ ಮಕ್ಕಳ ವಿದ್ಯಾಭ್ಯಾಸ, ದೇವಸ್ಥಾನ ಹಾಗೂ ಅರೋಗ್ಯ ಸೇವೆಗೆ ಮಂಗಳೂರು ಹಾಗೂ ಉಡುಪಿಯೊಂದಿಗೆ ಕರ್ನಾಟಕದ ಉಳಿದ ಭಾಗಕ್ಕೆ ಕೊಂಡಿಯಾಗಿದ್ದು ಅಷ್ಟೇ ನಿಜ. ಕರಾವಳಿ ಪ್ರವಾಸೋದ್ಯಮ 5 ಸ್ಟಾರ್ ಹೋಟೆಲ್, ಬೀಚ್, ಸ್ಪೋರ್ಟ್ಸ್, ಬ್ರುವಾರಿಸ್ ಹಾಗೂ ಕಾಸಿನೋಗೆ ತನ್ನನ್ನು ತಾನು ಸಂಕುಚಿಸಿಕೊಂಡರೆ ಅಪಾಯಕಾರಿ. ನೆರೆ ರಾಜ್ಯಗಳ ಗಾಂಜಾ, ಇತರ ಡ್ರಗ್ಸ್ ಮಾಫಿಯ ಮಂಗಳೂರಿನಿಂದ ಮಣಿಪಾಲದವರೆಗೆ ಪಸವರಿಸಿದ್ದು ಅದು ಇನ್ನೂ ಜಾಸ್ತಿಯಾಗುವ ಭಯವಿದೆ. ಮಂಗಳೂರು ಹಾಗೂ ಉಡುಪಿಯ ದಕ್ಷ ಪೊಲೀಸ್ ಅಧಿಕಾರಿಗಳು ಅದಕ್ಕೆ ಕಡಿವಾಣ ಹಾಕಿದ್ದರು ಅದು ವ್ಯಕ್ತಿಪರವಾಗಬಾರದು. ಟೆಂಪಲ್ ಟೂರಿಸಂ, ಮೆಡಿಕಲ್ ಟೂರಿಸಮ್, ಬೀಚ್ ಟೂರಿಸಮ್, ಯೋಗ…

Read More