Author: admin
ತುಳುನಾಡಿನ ಮಾತೃ ಮೂಲ ಸಂಸ್ಕೃತಿ, ಮಹಿಳಾ ಶಕ್ತಿ, ಸಮಾಜಮುಖಿ ಸೇವೆ ಹಾಗೂ ನಾನಾ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ನಡೆಯುವ ‘ಅಪ್ಪೆ ಬೇರ್ ದ ತುಳುನಾಡ್’ ರಾಷ್ಟ್ರೀಯ ತುಳು ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಏಳು ಮಂದಿ ಸಾಧಕಿಯರಿಗೆ ‘ತುಳು ಅಪ್ಪೆ ಸಿರಿ’ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಮೇ 24 ರಂದು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮ ತುಳುನಾಡಿನ ಮಾತೃ ಮೂಲ ಸಂಸ್ಕೃತಿ, ತುಳು ಭಾಷೆ ಪರಂಪರೆ, ಮಹಿಳಾ ನಾಯಕತ್ವ ಹಾಗೂ ಸಾಮಾಜಿಕ ಏಕತೆಯ ಸಂದೇಶ ಸಾರುವ ವಿಶಿಷ್ಟ ವೇದಿಕೆಯಾಗಿದೆ. ಕಾರ್ಯಕ್ರಮದ ಅಂಗವಾಗಿ ಮಾತೃ ಮೂಲ ಸಂಸ್ಕೃತಿ, ತಾಯಿ ಮೂಲದ ತತ್ವ, ಅಳಿಯ ಸಂತಾನ ಪದ್ಧತಿ, ತುಳು ಭಾಷೆಯ ಭವಿಷ್ಯ, ಮಹಿಳಾ ನಾಯಕತ್ವ ಹಾಗೂ ತುಳುನಾಡಿನ ಸಾಂಸ್ಕೃತಿಕ ಪುನರುಜ್ಜೀವನ ಕುರಿತ ರಾಷ್ಟ್ರೀಯ ಮಟ್ಟದ ವಿಚಾರಗೋಷ್ಠಿ ಮತ್ತು ವಿಶೇಷ ಪ್ರಬಂಧ ಮಂಡನೆ ನಡೆಯಲಿದ್ದು, ನಾನಾ ಕ್ಷೇತ್ರದ ಗಣ್ಯರು, ಸಂಶೋಧಕರು, ಸಾಹಿತಿಗಳು, ಕಲಾವಿದರು ಹಾಗೂ ಸಮಾಜಮುಖಿ…
ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವತಿಯಿಂದ ಭಾರತ ಸರ್ಕಾರದ ಆಯುಷ್ ಸಚಿವಾಲಯದ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ಸಹಯೋಗದಲ್ಲಿ ‘ಯೋಗ ಮಹೋತ್ಸವ’ ಕಾರ್ಯಕ್ರಮವನ್ನು ಮೇ 23 ರಂದು ಮಿಜಾರಿನ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ. ‘ಆರೋಗ್ಯ, ಜ್ಞಾನ ಮತ್ತು ವಿಶ್ವಶಾಂತಿಗಾಗಿ ಯೋಗ’ ಎಂಬ ಮಹತ್ವದ ಆಶಯದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮವು ಯೋಗದ ಮೂಲಕ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಉತ್ತೇಜನ ನೀಡುವ ಉದ್ದೇಶ ಹೊಂದಿದೆ. ಸುಮಾರು 500ಕ್ಕೂ ಹೆಚ್ಚು ಯೋಗಾಸಕ್ತರು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಳ್ವಾ ಫಾರ್ಮಸಿಯ ವ್ಯವಸ್ಥಾಪಕ ನಿರ್ದೇಶಕಿ ಡಾ. ಗ್ರೀಷ್ಮಾ ವಿವೇಕ್ ಆಳ್ವ ಭಾಗವಹಿಸಲಿದ್ದಾರೆ. ಯೋಗಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಕೋರಿದ್ದಾರೆ.
ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಕಳ ಹೆಬ್ರಿ ತಾಲೂಕು ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ನೂತನ ಸಂಚಾಲಕರಾಗಿ ಉದ್ಯಮಿ, ಸಮಾಜಸೇವಕ ವಿಜಯ ಶೆಟ್ಟಿ ಹಾಗೂ ಸಹ ಸಂಚಾಲಕರಾಗಿ ಉದ್ಯಮಿ ಕೆ ರವಿ ಶೆಟ್ಟಿ ಕುಕ್ಕುಂದೂರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊಡುಗೈ ದಾನಿ ವಿಜಯ ಶೆಟ್ಟಿಯವರು ಧಾರ್ಮಿಕ ಕ್ಷೇತ್ರ, ಸಾಮಾಜಿಕ ಕ್ಷೇತ್ರದ ಸಾಧಕರಾಗಿಯೂ ಗುರುತಿಸಿಕೊಂಡಿದ್ದು, ಪಟ್ಲ ಫೌಂಡೇಶನ್ ಕಾರ್ಕಳ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕನ್ನಡ ಸಂಘ ಬಹರೈನ್ ವತಿಯಿಂದ ಸಂಘದ ಮಾಜಿ ಉಪಾಧ್ಯಕ್ಷರಾದ ದಿ. ಕರ್ಮಾರ್ ನಾಗೇಶ್ ಶೆಟ್ಟಿ ಅವರ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆಯನ್ನು ಮೇ 20 ರಂದು ಸಂಜೆ ಕನ್ನಡ ಭವನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಸಭೆಯಲ್ಲಿ ಕನ್ನಡ ಸಂಘ ಬಹರೈನ್ ಅಧ್ಯಕ್ಷರಾದ ಅಜಿತ್ ಬಂಗೇರ ಅವರು ದಿವಂಗತ ಕರ್ಮಾರ್ ನಾಗೇಶ್ ಶೆಟ್ಟಿ ಅವರ ಸಮಾಜಮುಖಿ ಸೇವೆ, ಸಂಘಟನಾ ನಿಷ್ಠೆ ಹಾಗೂ ಕನ್ನಡ ಸಂಘದ ಬೆಳವಣಿಗೆಯಲ್ಲಿ ನೀಡಿದ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಅಮರನಾಥ್ ರೈ, ರಾಜ್ ಕುಮಾರ್, ಹಿರಿಯ ಸದಸ್ಯರಾದ ಹಾಜಿ ಅಬ್ದುಲ್ ರಜಾಕ್, ರಮೇಶ್ ರಾಮಚಂದ್ರನ್, ಕಮಲಾಕ್ಷ ಅಮೀನ್, ಪೂರ್ಣಿಮಾ ಜಗದೀಶ, ಅಶ್ವಿನ್ ದಯಾನಂದ ಹಾಗೂ ಉಪಾಧ್ಯಕ್ಷ ನಿತಿನ್ ಶೆಟ್ಟಿ ಅವರು ದಿ. ಕರ್ಮಾರ್ ನಾಗೇಶ್ ಶೆಟ್ಟಿಯವರಿಗೆ ಭಾವಪೂರ್ಣ ನುಡಿನಮನ ಸಲ್ಲಿಸಿದರು. ಸಭೆಯ ನಿರ್ವಹಣೆಯನ್ನು ಪ್ರಧಾನ ಕಾರ್ಯದರ್ಶಿ ರಾಮಪ್ರಸಾದ್ ಅಮ್ಮೆನಡ್ಕ ಅವರು ನಡೆಸಿಕೊಟ್ಟರು. ಸಭೆಯಲ್ಲಿ ಅನೇಕ ಸದಸ್ಯರು ಭಾಗವಹಿಸಿ ದಿವಂಗತರ ಆತ್ಮಕ್ಕೆ ಶಾಂತಿ ಕೋರಿದರು…
ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ, ಸವಣೂರಿನ ಶಿಕ್ಷಣ ಕ್ರಾಂತಿಯ ಹರಿಕಾರ ಸವಣೂರು ಕೆ. ಸೀತಾರಾಮ ರೈ ಮತ್ತು ಕಸ್ತೂರಿಕಲಾ ಎಸ್ ರೈ ದಂಪತಿಯ ವೈವಾಹಿಕ ಜೀವನದ 5೦ರ ಸಂಭ್ರಮ ನಡೆಯಲಿದೆ. ಮೇ 23 ರಂದು ಅಪರಾಹ್ನ ೩-೦೦ರಿಂದ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ಜರಗಲಿದೆ. ಸಂಜೆ ಗಂಟೆ ೫-೩೦ ರಿಂದ ಸಭಾ ಕಾರ್ಯಕ್ರಮದಲ್ಲಿ ಶ್ರೀ ಸುಬ್ರಹ್ಮಣ್ಯ ಮಠದ ಮಠಾಧೀಶರಾದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಮತ್ತು ಒಡಿಯೂರು ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ನ ಡಾ| ಎ.ಜೆ ಶೆಟ್ಟಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಸನ್ಮಾನ ಸಮಾರಂಭ ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಭಾಗವಹಿಸಲಿದ್ದಾರೆ. ಕೊಂಬೆಟ್ಟು ಸರಕಾರಿ…
ಕಾಸರಗೋಡಿನ ಕೆಳಮಟ್ಟದ ಬಂಟರ ಏಳಿಗೆ ಮತ್ತು ಬಂಟರ ಭವನ ನಿರ್ಮಾಣದ ಸದುದ್ದೇಶವನ್ನು ಮುಂದಿಟ್ಟುಕೊಂಡು ಮಹಾದಾನಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿಯವರ ನೇತೃತ್ವದಲ್ಲಿ ಸಮಾನ ಮನಸ್ಸಿನ ಬಂಟರು ಭಾಗಿಯಾಗಿ ಕಾಸರಗೋಡು ಬಂಟ ಸಮಾಜದ ಸರ್ವತೋಮುಖ ಏಳಿಗೆಯ ಬಗ್ಗೆ ತೀವ್ರ ಚರ್ಚೆ ನಡೆಯಿತು. ಸದಾಶಿವ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಅವರ ಹೊಸ ನಿವಾಸ ಶ್ರೀಲಿಲಾ ಸದನದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಮಾಡಲಾಯಿತು. ಸಭೆಯಲ್ಲಿ ಕಾಸರಗೋಡಿನ ನೂರಕ್ಕೂ ಅಧಿಕ ಮಂದಿ ಭಾಗಿಯಾಗಿದ್ದರು. ಈ ಸಭೆಯಲ್ಲಿ ಕಾಸರಗೋಡು ಜಿಲ್ಲೆಯ ಸುಮಾರು ಹತ್ತಕ್ಕಿಂತ ಹೆಚ್ಚು ಪಂಚಾಯತಿನ ಬಂಟರ ಸಂಘದ ಅಧ್ಯಕ್ಷರು ಹಾಗೂ ಪ್ರದಾನ ಕಾರ್ಯದರ್ಶಿಗಳ ಸಹಿತ ವಿವಿಧ ಪದಾಧಿಕಾರಿಗಳು ಚರ್ಚೆಯಲ್ಲಿ ಪಾಲ್ಗೊಂಡರು. ಈ ಸಭೆಯಲ್ಲಿ ಕಾಸರಗೋಡು ಮಾತೃ ಸಂಘದ ನೂತನ ಪದಾಧಿಕಾರಿ ವಸಂತ್ ರಾಜ್ ವರ್ಕಾಡಿ, ಸಮಾಜ ಸೇವಕಿ ಜಯಂತಿ ಟಿ. ಶೆಟ್ಟಿ, ಮೀಂಜ ಪಂಚಾಯತ್ ಬಂಟರ ಸಂಘದ ಅಧ್ಯಕ್ಷ ಅರವಿಂದಾಕ್ಷ ಭಂಡಾರಿ ದಡ್ಡಂಗಡಿ ಹಾಗೂ ಮೀರಾ ಅಳ್ವ, ಸದಾಶಿವ ಶೆಟ್ಟಿ ಸೇವಾ ಸಮಿತಿ ಪಿ.ಅರ್.ಒ ಕಾರ್ತಿಕ್ ಶೆಟ್ಟಿ…
ಆಳ್ವಾಸ್ ಭಾರತೀಯ ಸಂವಿಧಾನದ ಮೌಲ್ಯಗಳನ್ನು ಅನುಸರಿಸಿ ವಿದ್ಯಾರ್ಥಿಗಳಲ್ಲಿ ಉತ್ತಮ ನಾಗರಿಕತ್ವವನ್ನು ಬೆಳೆಸುವ ಆದರ್ಶ ಶಿಕ್ಷಣ ಸಂಸ್ಥೆ ಎಂದು ಮಂಗಳೂರು ವಿವಿಯ ಕುಲಪತಿ ಡಾ| ಪಿ.ಎಲ್ ಧರ್ಮ ನುಡಿದರು. ಅವರು ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಚೊಚ್ಚಲ ಹಿರಿಯ ವಿದ್ಯಾರ್ಥಿಗಳ ಸಮಾವೇಶದಲ್ಲಿ ಮಾತನಾಡಿದರು. ಆಳ್ವಾಸ್ ಶಿಕ್ಷಣ ಸಂಸ್ಥೆಯು ಕೇವಲ ಶಿಕ್ಷಣ ನೀಡುವುದಲ್ಲ; ವಿದ್ಯಾರ್ಥಿಗಳಲ್ಲಿ ಮಾನವೀಯತೆ, ಶಿಸ್ತು, ರಾಷ್ಟ್ರೀಯತೆ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುತ್ತಿದೆ. ವಿವಿಧ ರಾಜ್ಯಗಳಿಂದ ಬಂದ ವಿದ್ಯಾರ್ಥಿಗಳು ಇಲ್ಲಿ ಒಂದೇ ಕುಟುಂಬದಂತೆ ಬೆರೆತು ಬದುಕುವುದು ಭಾರತದ ಏಕತೆಯ ಸಂಕೇತವಾಗಿದೆ ಎಂದರು. ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳ ಹೆಸರು ಹಲವರಿಗೆ ತಿಳಿದಿರದೇ ಇರಬಹುದು, ಆದರೆ ಡಾ. ಮೋಹನ್ ಆಳ್ವರ ಹೆಸರು ಎಲ್ಲರಿಗೂ ಪರಿಚಿತವಾಗಿದೆ. ಅದು ಅವರ ವ್ಯಕ್ತಿತ್ವದ ಮಹತ್ವವನ್ನು ತೋರಿಸುತ್ತದೆ. ಡಾ. ಆಳ್ವರು ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಕೊಡುಗೆ ನೀಡಿದ ಮಹನೀಯರು. ಅವರು ಸ್ಥಾಪಿಸಿದ ಆಳ್ವಾಸ್ ಶಿಕ್ಷಣ ಸಂಸ್ಥೆ ಇಂದು ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿರುವ ಜ್ಞಾನ ಮಂದಿರವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ…
ದೇಶದಾದ್ಯಂತ ಕೋಟ್ಯಾಂತರ ಯುವಕರ ಕನಸುಗಳನ್ನು ಹೊತ್ತು ಸಾಗುವ ಪರೀಕ್ಷೆಯೆಂದರೆ ಅದು ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್. ಬಡವನ ಮಗನಾಗಲಿ, ರೈತನ ಮಗಳಾಗಲಿ, ಮಧ್ಯಮ ವರ್ಗದ ವಿದ್ಯಾರ್ಥಿಯಾಗಲಿ ತಮ್ಮ ಬದುಕನ್ನು ಬದಲಾಯಿಸಿಕೊಳ್ಳಲು ವರ್ಷಗಳ ಕಾಲ ಹಗಲು-ರಾತ್ರಿ ದುಡಿದು ಈ ಪರೀಕ್ಷೆಗೆ ಸಿದ್ಧರಾಗುತ್ತಾರೆ. ಆದರೆ ಮೇ ಮೂರರಂದು ನಡೆದ ನೀಟ್ ಯುಜಿ 2026 ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯ ಕಾರಣಕ್ಕೆ ರದ್ದಾಗಿದೆ ಎನ್ನುವ ಸುದ್ದಿ ಕೇಳಿದಾಗ, ಕುಸಿದದ್ದು ಕೇವಲ ಪರೀಕ್ಷಾ ವ್ಯವಸ್ಥೆಯಲ್ಲ ಲಕ್ಷಾಂತರ ವಿದ್ಯಾರ್ಥಿಗಳ ಕನಸುಗಳು. ಸುಮಾರು ಇಪ್ಪತ್ತೆರಡು ಲಕ್ಷ ವಿದ್ಯಾರ್ಥಿಗಳು ಬರೆದ ಪರೀಕ್ಷೆಯನ್ನು ಮತ್ತೆ ಬರೆಯಬೇಕೆಂದರೆ ಅದು ಕೇವಲ ಆಡಳಿತಾತ್ಮಕ ನಿರ್ಧಾರವಲ್ಲ; ಅದು ವಿದ್ಯಾರ್ಥಿಗಳ ಮಾನಸಿಕ ಸ್ಥೈರ್ಯ, ಕುಟುಂಬಗಳ ಆರ್ಥಿಕ ಹೊರೆ ಮತ್ತು ಯುವಜನರ ಭವಿಷ್ಯದ ಮೇಲೆ ನಡೆಸುತ್ತಿರುವ ನಿರ್ದಯ ಪ್ರಯೋಗ. ಒಬ್ಬ ವಿದ್ಯಾರ್ಥಿ ನೀಟ್ಗೆ ಸಿದ್ಧವಾಗುವುದು ಎಂದರೆ ಕೇವಲ ಓದುವುದಲ್ಲ. ಅನೇಕರು ಮೊಬೈಲ್ ತ್ಯಜಿಸುತ್ತಾರೆ, ಹಬ್ಬ-ಹರಿದಿನ ಮರೆತು ಓದುತ್ತಾರೆ, ಸ್ನೇಹಿತರನ್ನು ದೂರವಿಡುತ್ತಾರೆ. ಕೆಲವರು ಕೋಚಿಂಗ್ಗಾಗಿ ಊರು ಬಿಟ್ಟು ನಗರಗಳಿಗೆ ಬರುತ್ತಾರೆ. ಕೆಲ…
ವಿಶಿಷ್ಟಚೇತನರು ಯಾರನ್ನೂ ಅವಲಂಬಿಸದೆ ಸ್ವಾವಲಂಬಿ ಬದುಕು ನಡೆಸಲು ಸಾಧ್ಯವಿದೆ ಎನ್ನುವುದನ್ನು ಹಲವಾರು ಮಂದಿ ಸಾಧಿಸಿ ತೋರಿಸಿದ್ದಾರೆ. ಅಂತಹ ಸಾಧಕರು ವಿಶಿಷ್ಟಚೇತನರಿಗೆ ಮಾತ್ರವಲ್ಲದೇ ಸಮಾಜಕ್ಕೂ ಕೂಡಾ ಪ್ರೇರಣೆಯಾಗಿದ್ದಾರೆ. ಎಂದು ನಿಟ್ಟೆ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಡಾ. ಎಂ. ಶಾಂತರಾಮ ಶೆಟ್ಟಿ ಹೇಳಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವಿಶಿಷ್ಟಚೇತನರ ಸಂಘದ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಹಾಗೂ ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಮಂಗಳೂರಿನ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ವಿಶಿಷ್ಟ ಚೇತನರ ಸಂಘದ 34ನೇ ವಾರ್ಷಿಕ ಸಮಾವೇಶ, ದಿವ್ಯಾಂಗರಿಗೆ ವೈದ್ಯಕೀಯ ನೆರವು, ವೈದ್ಯಕೀಯ ತಪಾಸಣೆ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮ ಉದ್ಘಾಟಿಸಿದ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಛೇರ್ಮನ್ ಸಿಎ ಶಾಂತರಾಮ ಶೆಟ್ಟಿ ಮಾತನಾಡಿ, ವಿವಿಧ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ ವಿಶಿಷ್ಟ…
ಬಂಟರ ಯಾನೆ ನಾಡವರ ಸಂಘ ಕೊಪ್ಪ (ರಿ) ಇದರ 41ನೇ ವಾರ್ಷಿಕೋತ್ಸವ ಸಮಾರಂಭವು ಇತ್ತೀಚಿಗೆ ಅನನ್ಯ ವಿಜಯ ಅಜಿಲ ಸ್ಮಾರಕ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರಗಿತು. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೊಪ್ಪ ಬಂಟರ ಸಂಘದ ಅಧ್ಯಕ್ಷ ಸುಬ್ರಮಣ್ಯ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶೃಂಗೇರಿ ಶಾಸಕ ಟಿಡಿ ರಾಜೇಗೌಡ, ಸುಧಾಕರ ಶೆಟ್ಟಿ ತುಮಾಖಾನೆ, ಮಾಜಿ ಶಾಸಕ ಸುಕುಮಾರ್ ಶೆಟ್ಟಿ, ಮೋಹನ್ ಶೆಟ್ಟಿ, ನರೇಂದ್ರ ಶೆಟ್ಟಿ, ಉದ್ಯಮಿ ವಿಜಯ ಹೆಗ್ಡೆ, ಶ್ರೀಮತಿ ಗೀತಾ ವಿಜಯ ಅಜಿಲ, ಸತೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.















