Author: admin
ಲಯನ್ಸ್ ಜಿಲ್ಲೆ 317 ಡಿ ಪ್ರಾಂತ್ಯ 2 : ಕದ್ರಿ ಶ್ರೀ ಮಂಜುನಾಥ ದೇಗುಲದ ಪ್ರವೇಶ ದ್ವಾರ ಡಾ| ಎ.ಜೆ ಶೆಟ್ಟಿಯವರಿಂದ ಉದ್ಘಾಟನೆ
ಲಯನ್ಸ್ ಜಿಲ್ಲೆ 317 ಡಿಯ ಪ್ರಾಂತ್ಯ 2ರ ಪ್ರಾಂತೀಯ ಸಮ್ಮೇಳನ – 2026 ‘ಗ್ರಂಥ’ ಇದರ ಶಾಶ್ವತ ಸೇವಾ ಯೋಜನೆಗಳ ಅಂಗವಾಗಿ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಕದ್ರಿ ಪಾರ್ಕ್ ಬಳಿ ಪ್ರವೇಶ ದ್ವಾರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ದ್ವಾರ ಉದ್ಘಾಟಿಸಿದ ಕದ್ರಿ ಮಂಜುನಾಥ ದೇವಸ್ಥಾನದ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಎ.ಜೆ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಡಾ| ಎ.ಜೆ. ಶೆಟ್ಟಿ ಅವರು ಶುಭ ಹಾರೈಸಿದರು. ಲಯನ್ಸ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ್ ಶೆಣೈ, ಪ್ರಾಂತ್ಯಾಧ್ಯಕ್ಷ ಚರಣ್ ಆಳ್ವ ಚಿಪ್ಪಾರು ಗುತ್ತು, ಎರಡನೇ ಉಪ ಜಿಲ್ಲಾ ಗವರ್ನರ್ ಗೋವರ್ಧನ್ ಶೆಟ್ಟಿ, ಪ್ರಾಂತ್ಯ ಸಮ್ಮೇಳನ ಸಮಿತಿ ಅಧ್ಯಕ್ಷ ಲೋಕೇಶ್ ಉಳ್ಳಾಲ್, ಕಾರ್ಯದರ್ಶಿ ಮನೋಜ್ ಶೆಟ್ಟಿ, ಖಜಾಂಚಿ ಕುಸುಮ ಯು. ರಾವ್, ರೀಜನ್ -1 ರ ವಲಯಾಧ್ಯಕ್ಷ ನರೇಶ್ ಶೆಟ್ಟಿ, ರೀಜನ್ -2 ರ ವಲಯಾಧ್ಯಕ್ಷ ಸುನಿಲ್ ಕುಮಾರ್, ಲಯನ್ಸ್ ಕ್ಲಬ್ ಅಶೋಕನಗರ ಇದರ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಕಾರ್ಯದರ್ಶಿ ಬ್ರಿಜೇಶ್ ಶೆಟ್ಟಿ, ಖಜಾಂಚಿ ನಿಖಿಲ್…
ಗೋರೆಗಾಂವ್ ಕರ್ನಾಟಕ ಸಂಘ ಇದರ 67 ನೇಯ ನಾಡಹಬ್ಬ ಸಮಾರಂಭ ಹಾಗೂ ವಿಚಾರಗೋಷ್ಠಿ ಸಮಾರಂಭವು ಮಾರ್ಚ್ 1 ರಂದು ಬೆಳಿಗ್ಗೆ ಮಲಾಡ್ ಪಶ್ಚಿಮ ಸುಂದರ ನಗರದ ಹಿಂದಿರುವ ಡಿ.ಜಿ ಕೇತನ್ ಇಂಟರ್ನ್ಯಾಷನಲ್ ಸಭಾಗೃಹದಲ್ಲಿ ಜರಗಿತು. ಕಾರ್ಯಕ್ರಮದ ವಿಚಾರಗೋಷ್ಠಿಯ ಉದ್ಘಾಟನಾ ಸಮಾರಂಭವನ್ನು ಸಮಾಜಸೇವಕ ಸತೀಶ್ ಶೆಟ್ಟಿ ಕೊಟ್ರಪಾಡಿ ಉದ್ಘಾಟಿಸಿ ಶುಭ ಹಾರೈಸುತ್ತಾ, ಗೋರೆಗಾಂವ್ ಕರ್ನಾಟಕ ಸಂಘದ ನಮ್ಮ ನಾಡಿನ ಭಾಷೆ ಮಾತ್ರವಲ್ಲದೆ ಧರ್ಮ, ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯದಲ್ಲಿ ನಿರತವಾಗಿದ್ದು ಈ ಸಂಘಕ್ಕೆ ನಾವೆಲ್ಲರೂ ಪ್ರೋತ್ಸಾಹಿಸಬೇಕಾಗಿದೆ. ಕನ್ನಡಪರ ಕಾರ್ಯಕ್ರಮಗಳನ್ನು ಆಗಾಗ ನಡೆಸುತ್ತಾ, ತುಳು ಕನ್ನಡಿಗರನ್ನು ಒಂದೆಡೆ ಸೇರಿಸುತ್ತಾ ಬಂದಿರುವ ಗೋರೆಗಾಂವ್ ಕರ್ನಾಟಕ ಸಂಘವು ಇನ್ನೂ ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿ ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷ ಡಾ| ದಿವಾಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಕನ್ನಡದ ಕಾರ್ಯಕ್ರಮಗಳಲ್ಲಿ ಬಾಗವಹಿಸಲು ನನಗೆ ಸಂತೋಷವಾಗುತ್ತಿದೆ. ಕನ್ನಡಿಗರಾದ ನಾವು ಕನ್ನಡವನ್ನು ಉಳಿಸಿ ಬೆಳೆಸುವಲ್ಲಿ ಕಾರ್ಯನಿರತರಾಗಬೇಕು. ಈ ನಿಟ್ಟಿನಲ್ಲಿ ಗೋರೆಗಾಂವ್ ಕರ್ನಾಟಕ ಸಂಘಕ್ಕೆ ಅಭಿನಂದನೆ…
ಹಿಂದೂಗಳು ಜಾತಿಯ ಹೆಸರಿನಲ್ಲಿ ವಿಂಗಡನೆ ಆಗದೇ ಹಿಂದೂಗಳೆಂದು ಒಟ್ಟಾಗಬೇಕಾಗಿದೆ. ಹಿಂದೂ ಮಕ್ಕಳಿಗೆ ಧಾರ್ಮಿಕ, ಸಂಸ್ಕಾರಯುತ ಶಿಕ್ಷಣ ನೀಡುವ ಅಗತ್ಯವಿದೆ ಎಂದು ಉದ್ಯಮಿ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಹೇಳಿದರು. ಅವರು ಬಜಗೋಳಿಯ ಶ್ರೀ ಗಣಪತಿ ಸಭಾಭವನದಲ್ಲಿ ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ನಡೆದ “ಹಿಂದೂ ರಾಷ್ಟ್ರ ಜಾಗೃತಿ ಸಂವಾದ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯುವ ಪೀಳಿಗೆಯಲ್ಲಿ ರಾಷ್ಟ್ರೀಯತೆ ಮತ್ತು ಧಾರ್ಮಿಕತೆಯನ್ನು ಹೆಚ್ಚಿಸುವುದು ಅವಶ್ಯವಾಗಿದೆ. ಈ ದಿಸೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಶ್ಲಾಘನೀಯ ಪ್ರಯತ್ನ ಎಂದರು. ಸನಾತನ ಸಂಸ್ಥೆಯ ಸೌ. ಅಶ್ವಿನಿ ನಾಯಕ್ ಮಾತನಾಡಿ, “ಯತೋ ಧರ್ಮಸ್ತತೋ ಜಯ” ಎಲ್ಲಿ ಧರ್ಮವಿರುತ್ತದೆಯೋ ಅಲ್ಲಿ ಜಯವಿರುತ್ತದೆ. ಕೇವಲ ಜನ್ಮತಃ ಹಿಂದೂ ಎಂದು ಕರೆಸಿಕೊಳ್ಳುವುದರಲ್ಲಿ ಸಾರ್ಥಕತೆಯಿಲ್ಲ. ನಮ್ಮ ಕರ್ಮ ಮತ್ತು ಆಚರಣೆಗಳಲ್ಲಿ ಹಿಂದುತ್ವ ಪ್ರತಿಫಲಿಸಬೇಕು ಎಂದರು. ಇಂದು ಪಾಶ್ಚಾತ್ಯ ಸಂಸ್ಕೃತಿಯ ಅಂಧಾನುಕರಣೆಯಿಂದಾಗಿ ನಾವು ನಮ್ಮ ಭವ್ಯ ಪರಂಪರೆಯನ್ನೇ ಮರೆಯುತ್ತಿದ್ದೇವೆ ನಮ್ಮ ಪ್ರತಿಯೊಂದು ಹಬ್ಬ ಸಂಪ್ರದಾಯ ಮತ್ತು ಉತ್ಸವಗಳ ಹಿಂದೆ ವೈಜ್ಞಾನಿಕ ಧರ್ಮಶಾಸ್ತ್ರ ಅಡಗಿದೆ. ಈ…
ವಿಜ್ಞಾನವೆಂಬುದು ನಿನ್ನೆ, ಇಂದಿನ ಮತ್ತು ನಾಳೆಯ ನಡುವೆ ಸೇತುವೆಯಾಗಿರುವ ಶಕ್ತಿ. ಪ್ರಕೃತಿಯ ಸೌಂದರ್ಯವನ್ನು ಅರಿತು ಅನುಭವಿಸುವುದೇ ವಿಜ್ಞಾನ. ಶ್ರಮ, ಸಮರ್ಪಣೆ ಮತ್ತು ಕ್ರಮಬದ್ಧ ಅಧ್ಯಯನದ ಮೂಲಕ ಯಾವುದೇ ವಿದ್ಯಾರ್ಥಿಯೂ ಉತ್ತಮ ವಿಜ್ಞಾನಿಯಾಗಬಹುದು ಎಂದು ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಪರಿಷತ್ತಿನ ಬೆಂಗಳೂರಿನ ಶಾಖೆಯ ಗೌರವ ಕಾರ್ಯದರ್ಶಿ ಡಾ| ಎಸ್ ಅನಂತ ಪದ್ಮನಾಭ ಭಟ್ ಅಭಿಪ್ರಾಯಪಟ್ಟರು. ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗಗಳು ಕುವೆಂಪು ಸಭಾಂಗಣದಲ್ಲಿ ಜಂಟಿಯಾಗಿ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಮಾತನಾಡಿದರು. ಅವರು ಸಿ.ವಿ.ರಾಮನ್ರವರ ಜಿಜ್ಞಾಸೆ ಮತ್ತು ಸಂಶೋಧನಾ ಮನೋಭಾವವನ್ನು ಸ್ಮರಿಸಿ, ಪ್ರಕೃತಿಯ ಮೇಲಿನ ಕುತೂಹಲವೇ ಅವರನ್ನು ನೊಬೆಲ್ ಪುರಸ್ಕಾರಕ್ಕೆ ಪಾತ್ರರನ್ನಾಗಿಸಿತು ಎಂದರು. ಪ್ರಾಚೀನ ಭಾರತದ ಮಹರ್ಷಿಗಳಾದ ಆರ್ಯಭಟ, ವರಹಮಿಹಿರ ಹಾಗೂ ಪತಂಜಲಿಯವರ ವಿಜ್ಞಾನ ಕ್ಷೇತ್ರದ ಕೊಡುಗೆ ಅಪಾರ. ಖಗೋಳಶಾಸ್ತ್ರ, ಗಣಿತ ಮತ್ತು ವಾಸ್ತುಶಿಲ್ಪದ ಸಮ್ಮಿಲನವನ್ನು ಕೊನಾರ್ಕದ ಸರ್ಯ ದೇವಸ್ಥಾನ, ಮೋಧೇರಾ ಸೂರ್ಯ ದೇವಾಲಯಗಳ ಸ್ಮಾರಕಗಳಲ್ಲಿ ಕಾಣಬಹುದು ಎಂದು ತಿಳಿಸಿದರು. ಇಂದಿಗೂ ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ ವಿಜ್ಞಾನಿಗಳ ಹಗಲಿರುಳಿನ…
ನಿರಂತರ ಸಮಾಜ ಕಾರ್ಯಗಳಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ತೊಡಗಿಸಿಕೊಂಡಿದೆ. ಮುಲ್ಕಿಯಲ್ಲಿ ಡಾ| ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಕೆಲಸ ತ್ವರಿತವಾಗಿ ನಡೆಯುತ್ತಿದೆ. ಮಹಾದಾನಿ ಡಾ| ಕನ್ಯಾನ ಸದಾಶಿವ ಶೆಟ್ಟಿಯವರ ಆಶಯ, ಆಶೀರ್ವಾದಿಂದ ಸಂಕೀರ್ಣದ ಕೆಲಸ ಪ್ರಗತಿಯಲ್ಲಿದೆ. ಸಂಕೀರ್ಣದಲ್ಲಿ ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ಅವರ ಹೆಸರಿನಲ್ಲಿ ವೇದಿಕೆ ಇದೆ. ಇದರ ಜೊತೆಗೆ ಕಿರು ಸಭಾಂಗಣ, ಧರ್ಮಚಾವಡಿ, ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯೂ ಇದೆ. ಡಿಸೆಂಬರ್ ತಿಂಗಳಲ್ಲಿ “ಡಾ| ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ” ಲೋಕಾರ್ಪಣೆಗೊಳ್ಳಲಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟ ಅವರು ತಿಳಿಸಿದರು. ಅವರು ಬಂಟ್ಸ್ ಹಾಸ್ಟೆಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಒಕ್ಕೂಟದ ಮಹಾ ನಿರ್ದೇಶಕ ತೋನ್ಸೆ ಆನಂದ ಶೆಟ್ಟಿ ಅವರು ಸಭೆಯನ್ನು ಉದ್ಘಾಟಿಸಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಮಧ್ಯಮ ವರ್ಗದವರ ಕಣ್ಣೀರನ್ನು…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಉಪ್ಪಿನಂಗಡಿ ಘಟಕದ 9ನೇ ವಾರ್ಷಿಕೋತ್ಸವವು ಉಪ್ಪಿನಂಗಡಿ ಹುಣ್ಣಿಮೆಯ ನಡುಮಖೆ ಜಾತ್ರೆ ಸಂದರ್ಭದಲ್ಲಿ ಸಹಸ್ರಲಿಂಗಲೇಶ್ವರ ದೇವಸ್ಥಾನದ ಮುಂಭಾಗ ನಡೆಯಿತು. ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಕೆ. ಜಗದೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ರಾಧಾಕೃಷ್ಣ ನಾಯ್ಕ್, ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ಇಂದ್ರಪ್ರಸ್ಥ ವಿದ್ಯಾಲಯದ ಅಧ್ಯಕ್ಷ ಕರುಣಾಕರ ಸುವರ್ಣ, ಶ್ರೀ ರಾಮ ಶಾಲೆ ವೇದಶಂಕರನಗರ ಇದರ ಸಂಚಾಲಕರಾದ ಯು. ಜಿ. ರಾಧ, ಕಹಳೆ ನ್ಯೂಸ್’ನ ಶ್ಯಾಮ್ ಸುದರ್ಶನ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಪಾವಂಜೆ ಮೇಳದ ರಂಗಕರ್ಮಿ ರಘು ಶೆಟ್ಟಿ ನಾಳ, ಯಕ್ಷಗಾನ ಪೋಷಕ ವಿಶ್ವನಾಥ ಶೆಟ್ಟಿ ಕಂಗ್ವೆ ಹಾಗೂ ಪುತ್ತೂರು ತಾಲೂಕು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಯು. ಎಲ್. ಉದಯ್ ಕುಮಾರ್ ಇವರನ್ನು ಗೌರವ ಧನದೊಂದಿಗೆ ಸಂಮಾನಿಸಲಾಯಿತು. ಯಕ್ಷ ಸಂಗಮ ಉಪ್ಪಿನಂಗಡಿ ವತಿಯಿಂದ ಶ್ರೀ ರಾಮ ಶಾಲೆಯಲ್ಲಿ ನಡೆಯುತ್ತಿರುವ ಯಕ್ಷ…
ಬಂಟರ ಸಂಘ ಸುರತ್ಕಲ್ ನ ಯುವ ವಿಭಾಗದ ವತಿಯಿಂದ ಮಾರ್ಚ್ 28 ಮತ್ತು 29ರಂದು ಪಣಂಬೂರು ಎನ್.ಎಂ.ಪಿ.ಎ ಕ್ರಿಕೆಟ್ ಮೈದಾನದಲ್ಲಿ ಜರಗಲಿರುವ “ಬಂಟ್ಸ್ ಕ್ರಿಕೆಟ್ ಲೀಗ್ – 2026” ಕ್ರೀಡಾ ಕಾರ್ಯಕ್ರಮಕ್ಕೆ ಅತಿಥಿಯಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರನ್ನು ಯುವ ವಿಭಾಗದ ಸದಸ್ಯರು ಅವರ ಕಿನ್ನಿಗೋಳಿಯಲ್ಲಿರುವ ನಿವಾಸದಲ್ಲಿ ಭೇಟಿಯಾಗಿ ಆಮಂತ್ರಣ ಪತ್ರಿಕೆ ನೀಡಿ ಪ್ರೀತಿ ಪೂರ್ವಕವಾಗಿ ಆಹ್ವಾನಿಸಿದರು.
ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ, ಬಂಟರ ಸಂಘ ಪುತ್ತೂರು ತಾಲೂಕು ಇದರ ಮಾರ್ಗದರ್ಶನದೊಂದಿಗೆ ಮಹಿಳಾ ಬಂಟರ ವಿಭಾಗ, ಬಂಟರ ಸಂಘ ಪುತ್ತೂರು ತಾಲೂಕು ಇದರ ಸಾರಥ್ಯದಲ್ಲಿ ಯುವ ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಸಹಕಾರದೊಂದಿಗೆ ಮಾರ್ಚ್ 22 ರಂದು ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿರುವ “ಐಸಿರಿ – 2026” ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಮಾರ್ಚ್ 2 ರಂದು ಜರಗಿತು. ಪ್ರಾರಂಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ ನರಿಮೊಗರು, ನಿಕಟ ಪೂರ್ವ ಅಧ್ಯಕ್ಷೆ ಸಬಿತಾ ಭಂಡಾರಿ, ಪ್ರಧಾನ ಕಾರ್ಯದರ್ಶಿ ಕುಸುಮಾ ಪಿ. ಶೆಟ್ಟಿ ಕೆರೆಕ್ಕೋಡಿ ಮತ್ತು ಉಪಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು,…
ಮಾರ್ಚ್ 1 ರಂದು ಆದಿತ್ಯವಾರ ಬಂಟ್ಸ್ ಹಾಸ್ಟೆಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ಸಭೆಯು ಜರಗಿತು. ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ವಹಿಸಿದ್ದರು. ಸಭೆಯು ಸುರೇಶ್ ಶೆಟ್ಟಿ ಶಿಬರೂರು ಇವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಸಭೆಯಲ್ಲಿ ದಾನಿಗಳಾದ ತೋನ್ಸೆ ಆನಂದ್ ಶೆಟ್ಟಿ, ಪ್ರವೀಣ್ ಭೋಜ ಶೆಟ್ಟಿ, ರಾಜೇಂದ್ರ ವಿ ಶೆಟ್ಟಿ ಪಂಜುರ್ಲಿ ಗ್ರೂಪ್ಸ್, ಶಶಿಧರ್ ಶೆಟ್ಟಿ ಇನ್ನಂಜೆ, ಉದಯ್ ಕುಮಾರ್ ಶೆಟ್ಟಿ ಮುನಿಯಾಲ್ ಹಾಗೂ ಸದಸ್ಯರಾದ ವಸಂತ್ ಶೆಟ್ಟಿ ಜಪ್ಪು, ಕರ್ನಲ್ ಶರತ್ ಭಂಡಾರಿ, ಸುಕುಮಾರ್ ಶೆಟ್ಟಿ ಮುಂಬೈ, ವಿಶಾಕ್ ಶೆಟ್ಟಿ, ಮೋಹನ್ ಶೆಟ್ಟಿ ಮೂಡನಿಡಂಬೂರು, ಜಯರಾಮ್ ಸಾಂತ ಇವರುಗಳು ಒಕ್ಕೂಟದ ಕಾರ್ಯವೈಖರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಉತ್ತಮ ಸಲಹೆ ಸೂಚನೆ ನೀಡಿದರು. ವೇದಿಕೆಯಲ್ಲಿ ಒಕ್ಕೂಟದ ದಾನಿಗಳಾದ ತೋನ್ಸೆ ಆನಂದ್ ಎಂ. ಶೆಟ್ಟಿ, ಪ್ರವೀಣ್ ಭೋಜ ಶೆಟ್ಟಿ, ರಾಜೇಶ್ ಶೆಟ್ಟಿ ರಾಕ್ಷಿ ಡೆವಲಪರ್ಸ್, ಬೆಳ್ಳಾಡಿ ಅಶೋಕ್ ಶೆಟ್ಟಿ, ಅರವಿಂದ್ ಆನಂದ್ ಶೆಟ್ಟಿ,…
ಸುಸಂಸ್ಕೃತ ಸಮಾಜ ನಿರ್ಮಿಸುವಲ್ಲಿ ಮಹಿಳೆಯರ ಪಾತ್ರ ಬಹಳಷ್ಟಿದೆ. ಮಹಿಳೆಯರು ಸ್ವಂತ ಮನೆ ಹಾಗೂ ಸಮಾಜವನ್ನು ಬೆಳಗಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿಕೊಂಡಿದ್ದಾರೆ. ನಾವು ಸದಾ ನಮ್ಮ ಸಂಸ್ಕೃತಿ, ಸಂಸ್ಕಾರ, ಆಚಾರ ವಿಚಾರಗಳನ್ನು ಪಾಲಿಸಿಕೊಂಡು ಉತ್ತಮ ಸಮಾಜವನ್ನು ನಿರ್ಮಿಸುವ ಕಡೆಗೆ ಗಮನ ಹರಿಸಬೇಕು ಎಂದು ಬಂಟರ ಸಂಘ ಮುಂಬಯಿ ಇದರ ಉಪಾಧ್ಯಕ್ಷ ಮಹೇಶ್ ಎಸ್. ಶೆಟ್ಟಿಯವರು ಹೇಳಿದರು. ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಇದರ ಮಹಿಳಾ ವಿಭಾಗದ ಆಶ್ರಯದಲ್ಲಿ ಫೆಬ್ರವರಿ 26 ರಂದು ಘಾಟ್ಕೋಪರ್ ಪೂರ್ವದ ಪಂತ್ ನಗರದ ಕನ್ನಡ ವೆಲ್ಫೇರ್ ಸೊಸೈಟಿಯ ಮಹೇಶ್ ಎಸ್ ಶೆಟ್ಟಿ ಬಾಬಾಸ್ ಗ್ರೂಪ್ ಸಭಾಗೃಹದಲ್ಲಿ ನಡೆದ ಅರಶಿನ ಕುಂಕುಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಅರಶಿನ ಕುಂಕುಮ ಮಹಿಳೆಯರ ಸೌಭಾಗ್ಯದ ಸಂಕೇತವಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಹೇಳಿ ಶುಭ ಹಾರೈಸಿದರು. ವೆಲ್ಕಮ್ ಪ್ಯಾಕೇಜಿಂಗ್ ಕಂಪನಿಯ ಆಡಳಿತ ನಿರ್ದೇಶಕ ರವೀಂದ್ರನಾಥ ಎಂ. ಭಂಡಾರಿಯವರು ಮಾತನಾಡಿ, ಕನ್ನಡ ವೆಲ್ಫೇರ್ ಸೊಸೈಟಿಯ ಕಾರ್ಯ…















