Author: admin

ಯುಎಇಯ ಪ್ರಸಿದ್ಧ ತುಳು ನಾಟಕ ತಂಡ ಗಮ್ಮತ್ ಕಲಾವಿದರ್ ಯುಎಇ 2011ರಲ್ಲಿ ಸ್ಥಾಪನೆಗೊಂಡು ತುಳು ರಂಗಭೂಮಿಯನ್ನು ಸಕ್ರಿಯವಾಗಿ ಮರಳುನಾಡಿನಲ್ಲಿ ಬೆಳೆಸಿಕೊಂಡು ಬರುತ್ತಿದ್ದು, ಗುಣಮಟ್ಟದ ನಾಟಕ ಪ್ರದರ್ಶನಗಳು, ಪರಿಪಕ್ವವಾದ ಅಭಿನಯಗಳ ಮೂಲಕ ಕೊಲ್ಲಿ ರಾಷ್ಟ್ರದಲ್ಲಿ ಮಾತ್ರವಲ್ಲದೆ ತಾಯ್ನಾಡಿನ ತುಳು ರಂಗಭೂಮಿಯಲ್ಲಿ ತನ್ನದೇ ಆದ ಗೌರವಾನ್ವಿತ ಸ್ಥಾನವನ್ನು ಗಳಿಸಿದೆ. ರಂಗಭೂಮಿಯ ಚಟುವಟಿಕೆಗಳಷ್ಟೇ ಅಲ್ಲದೆ, ಗಮ್ಮತ್ ಕಲಾವಿದರ್ ಯುಎಇ ಕಳೆದ ಒಂದು ದಶಕಕ್ಕಿಂತ ಹೆಚ್ಚು ಕಾಲ ಸ್ವದೇಶದಲ್ಲಿನ ವಿವಿಧ ಸಮಾಜಮುಖಿ ಕಾರ್ಯಗಳಿಗೆ ಸಹಾಯ ಹಸ್ತ ನೀಡುತ್ತಾ ಸಾಂಸ್ಕೃತಿಕ ಪ್ರಚಾರದ ಜೊತೆಗೆ ಅರ್ಥಪೂರ್ಣ ಸಾಮಾಜಿಕ ಸೇವೆಯನ್ನು ಸಮತೋಲನದಿಂದ ಮುಂದುವರೆಸುತ್ತಿರುವುದು ಗಮನಾರ್ಹ ಅಂಶ. ಗಮ್ಮತ್ ಕಲಾವಿದರ್ ಯುಎಇ ತಮ್ಮ ಮುಂದಿನ ಕಾರ್ಯಕ್ರಮಗಳು ಮತ್ತು ಯೋಜನೆಗಳಿಗೆ ಬಲ ತುಂಬುವ ಉದ್ದೇಶದಿಂದ 2026–27 ಅವಧಿಯ ನೂತನ ಕಾರ್ಯಕಾರಿ ಸಮಿತಿಯನ್ನು 18 ಜನವರಿ 2026ರಂದು ದುಬೈಯ ಬರ್ ದುಬೈಯಲ್ಲಿರುವ ಗ್ರ್ಯಾಂಡ್ ಎಕ್ಸೆಲ್ಸಿಯರ್ ಹೋಟೆಲ್‌ನ ಘಜಲ್ ರೆಸ್ಟೋರೆಂಟ್‌ನಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ರಚಿಸಲಾಯಿತು. ವಾರ್ಷಿಕ ಸಭೆಯು ಸಂಸ್ಥೆಯ ಗೌರವ ಪೋಷಕರು ಹಾಗೂ ಕನ್ನಡ ಚಿತ್ರ…

Read More

ಗಂಗಾ ಪ್ರತಿಷ್ಠಾನ ಕುಮಾರಪುರ ಅರ್ಪಿಸುವ ‘ಕಲ್ಲುರ್ಟಿ ಕಥನ’ ಕಲ್ಲುರ್ಟಿ ದೈವದ ಕುರಿತಾದ ಒಂದು ಸಮಗ್ರ ಮತ್ತು ರೋಚಕವಾದ ಗೀತಾ ಕಥನ ‘ನಮ್ಮ ಕೊಂಬಾರು’ ಯೂಟ್ಯೂಬ್ ವಾಹಿನಿಯಲ್ಲಿ ಬಿಡುಗಡೆಗೊಂಡಿದೆ. ಹಿರಿಯ ಕವಿ, ಸಾಹಿತಿ ಮತ್ತು ಯಕ್ಷಗಾನ ಅರ್ಥಧಾರಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿಯವರ ಸಾಹಿತ್ಯಕ್ಕೆ ಖ್ಯಾತ ಗಾಯಕ ಎಂ. ರವೀಂದ್ರ ಪ್ರಭು ಧ್ವನಿ ನೀಡಿದ್ದಾರೆ. ಪ್ರತಿಷ್ಠಾನದ ಸಂಚಾಲಕ ಹಾಗೂ ಬೆಂಗಳೂರಿನಲ್ಲಿ ಹೈಕೋರ್ಟ್ ವಕೀಲರಾಗಿರುವ ಪ್ರವೀಣ ಕುಮಾರ್ ಕಟ್ಟೆ ಇದರ ನಿರ್ಮಾಪಕರು. ತುಳುನಾಡಿನ ಸತ್ಯ ದೇವತೆ ಕಾರಣೀಕದ ಶ್ರೀ ಕಲ್ಲುರ್ಟಿ ದೈವದ ಆರಾಧನಾ ಕ್ಷೇತ್ರಗಳು ಹಲವು. ಬಂಟ್ವಾಳ ತಾಲೂಕಿನ ಪಣೋಲಿಬೈಲು, ಬಾಳ್ತಿಲ ಗ್ರಾಮದ ಚೆಂಡೆ ಮೊದಲಾದೆಡೆ ನೆಲೆ ನಿಂತು ನಂಬಿದವರನ್ನು ಪವಾಡ ಸದೃಶವಾಗಿ ಅನುಗ್ರಹಿಸುವ ಕಲ್ಲುರ್ಟಿ ಅಮ್ಮನ ಕಥನವು ಅಷ್ಟೇ ಹೃದಯಂಗಮವಾದುದು. ತುಳು ಜನಪದ ಸಾಹಿತ್ಯದಲ್ಲಿ ಕೆಲ್ಲತ್ತ ಮಾರ್ನಾಡಿನ ಬಡ ಕಲ್ಲು ಕುಟಿಗರ ಕುಟುಂಬವೊಂದರಲ್ಲಿ ಹುಟ್ಟಿದ ಅಣ್ಣ ತಂಗಿಯರು ವೀರ ಕಲ್ಕುಡ ಮತ್ತು ಕಾಳಮ್ಮರು ಆಳರಸರ ದೌರ್ಜನ್ಯಕ್ಕೊಳಗಾಗಿ ತಮ್ಮ ಭೌತಿಕ ಕಾಯವನ್ನು ತ್ಯಜಿಸಿ ಮಾಯಾ…

Read More

ಕರ್ನಾಟಕ ರಕ್ಷಣಾ ವೇದಿಕೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ (ಉತ್ತರ ಬೆಂಗಳೂರು) ಉದ್ದಿಮೆದಾರರ ಘಟಕದ ಅಧ್ಯಕ್ಷರಾಗಿ ಕೈಗಾರಿಕೋದ್ಯಮಿ, ಸಮಾಜಸೇವಕ ಡಾ| ಜೆ.ಕೆ ಶೆಟ್ಟಿಯವರು ನಿಯುಕ್ತಿಗೊಂಡಿದ್ದಾರೆ. ಪ್ರವೀಣ್ ಕುಮಾರ್ ಶೆಟ್ಟಿಯವರು ವೇದಿಕೆಯ ನಾಯಕರಾಗಿದ್ದು, ಕನ್ನಡ ಭಾಷೆ ಮತ್ತು ಕರ್ನಾಟಕದ ಹಿತಾಸಕ್ತಿಗಳಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಕನ್ನಡಿಗರ ಉದ್ಯೋಗ, ಗಡಿ ಭಾಗಗಳ ಸಮಸ್ಯೆಗಳು, ಕನ್ನಡ ಜಾಹೀರಾತುಗಳು ಮತ್ತು ಕನ್ನಡ ಶಾಲೆಗಳ ಅಭಿವೃದ್ಧಿ ಮುಂತಾದ ವಿಷಯಗಳ ಬಗ್ಗೆ ಧ್ವನಿ ಎತ್ತಿದ್ದಾರೆ.

Read More

ರೈಡ್ ಫಾರ್ ರೋಟರಿ ಕಾರ್ಯಕ್ರಮದ ಅಂಗವಾಗಿ ಹತ್ತು ದೇಶಗಳಿಂದ ಆಗಮಿಸಿದ್ದ ಮೂವತ್ತಕ್ಕೂ ಹೆಚ್ಚು ಅಂತರಾಷ್ಟ್ರೀಯ ರೋಟೇರಿಯನ್‌ಗಳು ಕಾರ್ಕಳ ರೋಟರಿ ಕ್ಲಬ್‌ನ ಆತಿಥ್ಯವನ್ನು ಪಡೆದರು. ರೋಟರಿ ಕ್ಲಬ್ ಕಾರ್ಕಳದ ಅಧ್ಯಕ್ಷ ಕೆ. ನವೀನ್ ಚಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ಕಾರ್ಕಳದ ಶೀತಲ್ ಗಾರ್ಡನ್ ಫ್ಯಾಮಿಲಿ ರೆಸ್ಟೋರೆಂಟ್‌ನಲ್ಲಿ ಆತಿಥ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ರೊಮೇನಿಯಾ, ಆಸ್ಟ್ರಿಯಾ, ಜರ್ಮನಿ, ಕೆನಡಾ, ಸ್ವೀಡನ್, ನಾರ್ವೆ, ಬೆಲ್ಜಿಯಂ, ಪೋಲಂಡ್, ನೆದರ್‌ಲ್ಯಾಂಡ್ ಹಾಗೂ ಡೆನ್ಮಾರ್ಕ್ ದೇಶಗಳಿಂದ ಬಂದ ರೋಟೇರಿಯನ್ ರೈಡರ್ಸ್‌ಗಳು ಹಾಗೂ ಅವರೊಂದಿಗೆ ಆಗಮಿಸಿದ ರೋಟರಿ ಡಿಸ್ಟ್ರಿಕ್ಟ್ 3180ರ ಸದಸ್ಯರು ಆತಿಥ್ಯವನ್ನು ಸ್ವೀಕರಿಸಿ ಕಾರ್ಕಳ ರೋಟರಿ ಕ್ಲಬ್‌ನ ಸಂಘಟನಾ ಸಾಮರ್ಥ್ಯ ಹಾಗೂ ಆತ್ಮೀಯತೆಯನ್ನು ಮೆಚ್ಚಿದರು. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ರೋಟೇರಿಯನ್‌ಗಳು ಮತ್ತು ಕಾರ್ಕಳ ರೋಟರಿ ಕ್ಲಬ್ ನಡುವಿನ ಸ್ನೇಹದ ಸಂಕೇತವಾಗಿ ಫ್ಲಾಗ್ ಎಕ್ಸ್ಚೇಂಜ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ PdG ಡಾ. ಭರತೇಶ ಆದಿರಾಜ್, ಹರಿಪ್ರಕಾಶ್ ಶೆಟ್ಟಿ, ಜಾನ್ ಆರ್ ಡಿ’ಸಿಲ್ವಾ, ರೇಖಾ ಉಪಾಧ್ಯಾಯ, ಸುರೇಶ್ ನಾಯಕ್, ವಸಂತ ಎಂ., ಇಕ್ಬಾಲ್ ಅಹ್ಮದ್,…

Read More

ಮಹಾರಾಷ್ಟ್ರದಲ್ಲಿ ಮುಂಬಯಿ ಮಹಾನಗರ ಪಾಲಿಕೆ (ಬಿಎಂಸಿ) ಸಹಿತ 29 ಮಹಾನಗರ ಪಾಲಿಕೆಗಳಿಗೆ ನಡೆದ ಚುನಾವಣೆಯಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳಾಗಿ ಕಣಕ್ಕಿಳಿದ ಬಂಟ ಅಭ್ಯರ್ಥಿಗಳು ಉತ್ತಮ ಹೋರಾಟ ಮಾಡಿ ಗೆಲುವು ಸಾಧಿಸಿದ್ದಾರೆ. ಕಲ್ಯಾಣ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕರಾದ ಮಲ್ಲೇಶ್ ಶೆಟ್ಟಿ ಹಾಗೂ ಅವರ ಸುಪುತ್ರ ಹರ್ಮೇಶ್ ಮಲ್ಲೇಶ್ ಶೆಟ್ಟಿಯವರು ಶಿಂದೆ ಬಣದ ಶಿವಸೇನೆ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಜಯ ಗಳಿಸಿದ್ದಾರೆ. ಪನ್ವೇಲ್ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಂತೋಷ್ ಜಿ ಶೆಟ್ಟಿ ಸತತ ಐದನೇ ಬಾರಿ ಗೆಲುವು ಸಾಧಿಸುವ ಮೂಲಕ ವಿಕ್ರಮ ಸಾಧಿಸಿದ್ದಾರೆ. ಬಿಎಂಸಿ ಚುನಾವಣೆಯಲ್ಲಿ ಮುಂಬೈಯ ಪ್ರಸಿದ್ಧ ಸಿದ್ಧಿವಿನಾಯಕ ಮಂದಿರದ ಟ್ರಸ್ಟಿಯಾಗಿ ಸಮಾಜ ಸೇವೆಯ ಮೂಲಕ ಜನಾನುರಾಗಿಯಾಗಿರುವ ಇನ್ನಾ ಭಾಸ್ಕರ್ ಶೆಟ್ಟಿ ಅವರು ಶಿವಸೇನೆ ಅಭ್ಯರ್ಥಿಯಾಗಿ ಧಾರಾವಿ ವಾರ್ಡಿನಲ್ಲಿ ಜಯಭೇರಿ ಬಾರಿಸಿದ್ದಾರೆ. ಬಿಎಂಸಿ ವಾರ್ಡ್ ನಂಬರ್ 9ರಲ್ಲಿ ಗೊರಾಯಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿವಾನಂದ ಶೆಟ್ಟಿ ಚುನಾಯಿತರಾದರೆ, ನವಿ ಮುಂಬೈ ಮಹಾನಗರ ಪಾಲಿಕೆ…

Read More

ವಿದ್ಯಾರ್ಥಿಗಳು ಮೋಜಿನ ಆಕರ್ಷಣೆಗಳಿಂದ ವಿಚಲಿತರಾಗದೆ ಭವಿಷ್ಯದಲ್ಲಿ ಜವಾಬ್ದಾರಿಯುತ ಪ್ರಜೆಗಳಾಗಿ ರೂಪುಗೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲೇ ಸೇವೆಗೆ ಸಿಗುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ಯುವಜನತೆ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸ್ವಾಮಿ ವಿವೇಕಾನಂದರ ಸಂದೇಶ ಸ್ಫೂರ್ತಿಯಾಗಿದೆ ಎಂದು ರೆಡ್‌ಕ್ರಾಸ್ ದ.ಕ ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು. ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಮತ್ತು ಯೂತ್ ರೆಡ್‌ಕ್ರಾಸ್ ಸೊಸೈಟಿ ದ.ಕ ಜಿಲ್ಲಾ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ 164ನೇ ಜಯಂತಿ ಅಂಗವಾಗಿ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಂಗಳಾ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಸುಬ್ರಹ್ಮಣ್ಯ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಯುವ ಸಾಧಕರಾದ ವಿಶ್ವಕಪ್ ವಿಜೇತ ಭಾರತೀಯ ಮಹಿಳಾ ಕಬಡ್ಡಿ ತಂಡದ ಆಟಗಾರ್ತಿ ಧನಲಕ್ಷ್ಮಿಪೂಜಾರಿ, ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ವಿಶ್ವದಾಖಲೆಯ ವಿದುಷಿ ದೀಕ್ಷಾ ಎಸ್. ಮತ್ತು ರಾಷ್ಟ್ರಪತಿ ರೋವರ್ಸ್‌ ಅವಾರ್ಡ್ ವಿಜೇತ ಪ್ರೀತೇಶ್ ಇವರುಗಳನ್ನು ಸನ್ಮಾನಿಸಲಾಯಿತು. ಮಂಗಳೂರು ವಿ.ವಿ, ಯೇನೆಪೊಯಾ ಪರಿಗಣಿತ…

Read More

ಜೇಸಿಐ ವಲಯದ ಅತ್ಯಂತ ಪ್ರತಿಷ್ಠಿತ ಘಟಕಗಳಲ್ಲಿ ಒಂದಾದ ಜೇಸಿಐ ಗಣೇಶಪುರದ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಬೈಕಂಪಾಡಿಯ ಕೈಗಾರಿಕಾ ಭವನದಲ್ಲಿ ಜನವರಿ 11ರಂದು ನಡೆಯಿತು. ಘಟಕದ 11 ನೇಯ ಅಧ್ಯಕ್ಷರಾಗಿ ಚೇಳ್ಯಾರು ಗುತ್ತು ಮನೆತನದ ಖ್ಯಾತ ವಾಗ್ಮಿ, ಸಾಹಿತಿ, ಪ್ರತಿಷ್ಠಿತ ಎಂ.ಆರ್.ಪಿ.ಎಲ್ ಸಂಸ್ಥೆಯ ನಿವೃತ್ತ ಮಹಾ ಪ್ರಬಂಧಕರಾದ ಶ್ರೀಮತಿ ವೀಣಾ ಟಿ ಶೆಟ್ಟಿ ಮತ್ತು ಉದ್ಯಮಿ ತಾರನಾಥ ಶೆಟ್ಟಿ ದಂಪತಿಗಳ ಸುಪುತ್ರ ಜೇ.ಎಫ್.ಎಂ ದೇವಿಚರಣ್ ಟಿ ಶೆಟ್ಟಿ ಅವರು ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಅಧ್ಯಕ್ಷರಾದ ಜೆ.ಎಫ್.ಎಂ ಅಶ್ವಿನ್ ಶೇಖರವರು ನೂತನ ಅಧ್ಯಕ್ಷ ರಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯದರ್ಶಿಯಾಗಿ ಜೇಸಿ ಅಶ್ವತ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಜೇಸಿ ರಜತ್ ಶೆಟ್ಟಿ, ಖಜಾಂಚಿಯಾಗಿ ಜೇಸಿ ರಿತೇಶ್, ಮಹಿಳಾ ಜೇಸಿ ಸಂಯೋಜಕರಾಗಿ ಜೇಸಿ ಶುಭ ಶರತ್, ಯುವ ಜೇಸಿ ಸಂಯೋಜಕರಾಗಿ ಜೇಜೇಸಿ ವಿನೀತ್ ಅಧಿಕಾರ ವಹಿಸಿಕೊಂಡರು. ಇದೇ ಸಂದರ್ಭದಲ್ಲಿ ಮೂವರು ಹೊಸ ಜೇಸಿ ಸದಸ್ಯರನ್ನು ವಲಯ ಅಧ್ಯಕ್ಷ ಸಂತೋಷ್ ಶೆಟ್ಟಿಯವರು ಪ್ರಮಾಣವಚನ…

Read More

ಜಾಗತಿಕ ಸವಾಲುಗಳಿಗೆ ಉತ್ತರ ನೀಡಲು ಖಾಸಗೀ ಶಿಕ್ಷಣ ಸಂಸ್ಥೆಗಳಿಂದ ಸಾದ್ಯವಾಗಿದೆ. ವಿದ್ಯಾರ್ಥಿಗಳ ಸಾಧನೆಗೆ ಮತ್ತು ಅವರ ಫಲಿತಾಂಶಗಳ ಸುಧಾರಣೆಗೆ ಖಾಸಗೀ ಸಂಸ್ಥೆಗಳ ಪಾತ್ರ ದೊಡ್ಡದು. ಶಿಕ್ಷಣ ಸಂಸ್ಥೆಯೊಳಗೆ ವ್ಯಾಪಾರ ಮನೋಧರ್ಮದ ಬದಲಾಗಿ ಸೇವಾ ಮನೋಭಾವವೇ ಮೂಲವಾಗಬೇಕು. ಅನಗತ್ಯ ಟೀಕೆ ಟಿಪ್ಪಣಿಗಳಿಗೆ ಚಿಂತಿಸದೆ ಫಲಿತಾಂಶದ ಕಡೆಗೆ ದುಡಿಯುವ ಮನಸ್ಸು ನಮ್ಮದಾಗಬೇಕು. ಪ್ರತೀ ಜಿಲ್ಲೆಗಳಲ್ಲೂ ಕುಪ್ಮಾ ಸಂಘಟನೆ ಬಲವಾಗಬೇಕು ಎಂದು ಕುಪ್ಮಾ ರಾಜ್ಯ ಸಮಿತಿಯ ಅಧ್ಯಕ್ಷರಾದ ಮೋಹನ್ ಆಳ್ವ ಉದ್ಘಾಟಿಸಿ, ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಮಾತನಾಡಿ, ಇಲಾಖೆ ಮತ್ತು ಕುಪ್ಮಾ ಸಂಘಟನೆ ಜೊತೆಗೂಡಿ ಕೆಲಸ ನಿರ್ವಹಿಸಬೇಕು. ಪ್ರತೀ ಮಗುವಿಗೂ ಶಿಕ್ಷಣ ಸಿಗಲು ಖಾಸಗೀ ಸಂಸ್ಥೆಗಳ ಪಾಲು ದೊಡ್ಡದು ಎಂದು ಶುಭ ಹಾರೈಸಿದರು. ಕುಪ್ಮಾ ರಾಜ್ಯ ಸಮಿತಿಯ ಗೌರವಾಧ್ಯಕ್ಷರಾದ ರಾಧಾಕೃಷ್ಣ ಶೆಣೈ ಮಾತನಾಡಿ, ಎಲ್ಲಾ ಖಾಸಗೀ ಸಂಸ್ಥೆಗಳಲ್ಲಿ ಆರೋಗ್ಯಕರವಾದ ಸ್ಪರ್ಧೆಗಳು ಇರಲಿ ಎಂದರು. ಕಾರ್ಯಕ್ರಮದ ಆದ್ಯಕ್ಷತೆಯನ್ನ ವಹಿಸಿದ್ದ ಡಾ. ಪ್ರಶಾಂತ್ ಶೆಟ್ಟಿ ಮಾತನಾಡಿ, ಖಾಸಗೀ…

Read More

ಬಂಟ್ವಾಳ ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಭವನದ ಕ್ರೀಡಾಂಗಣದಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟದಲ್ಲಿ ಮಾಣಿ ವಲಯ ಬಂಟರ ಸಂಘವು ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಪುರುಷರ ಲಗೋರಿಯಲ್ಲಿ ಪ್ರಥಮ, ಮಹಿಳೆಯರ ಲಗೋರಿಯಲ್ಲಿ ಪ್ರಥಮ, ಪುರುಷರ ವಾಲಿಬಾಲ್ ನಲ್ಲಿ ದ್ವಿತೀಯ, ಪುರುಷದ ಹಗ್ಗ ಜಗ್ಗಾಟದಲ್ಲಿ ದ್ವಿತೀಯ ಸ್ಥಾನ ಹಾಗೂ ವೈಯುಕ್ತಿಕ ವಿಭಾಗದಲ್ಲಿ ಹಲವು ಬಹುಮಾನಗಳನ್ನು ಗಳಿಸುವ ಮೂಲಕ ಸಮಗ್ರ ಪ್ರಶಸ್ತಿಯನ್ನು ಗಳಿಸಿದೆ. ಕಲ್ಲಡ್ಕ ವಲಯ ಬಂಟರ ಸಂಘವು ದ್ವಿತೀಯ ಸ್ಥಾನವನ್ನು ಗಳಿಸಿದೆ. ಮಾಜಿ ಸಚಿವ ಬಿ ರಮಾನಾಥ ರೈ, ಶಾಸಕ ರಾಜೇಶ್ ನಾಯ್ಕ್, ಉದ್ಯಮಿ ಸದಾನಂದ ಭಂಡಾರಿ, ಬಂಟ್ವಾಳ ಬಂಟರ ಸಂಘದ ಯುವ ವಿಭಾಗದ ಸ್ಥಾಪಕ ಅಧ್ಯಕ್ಷ ಹರೀಶ್ ಶೆಟ್ಟಿ ಬಂಟ್ವಾಳ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾಣಿ ಸಾಗು ಉಮೇಶ್ ಮಹಾಬಲ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದರು. ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಮಾಜಿ ಅಧ್ಯಕ್ಷರುಗಳಾದ ಕಿರಣ್ ಹೆಗ್ಡೆ ಅನಂತಾಡಿ, ಲೋಕನಾಥ ಶೆಟ್ಟಿ ಬಿಸಿ ರೋಡು, ಚಂದ್ರಹಾಸ…

Read More

ಆಳ್ವಾಸ್ ಕಾಲೇಜಿನ ಇಂಗ್ಲೀಷ್ ಮತ್ತು ವಿದೇಶಿ ಭಾಷೆಗಳ ವಿಭಾಗದ ಸಾಹಿತ್ಯಿಕ ಸಂಘ ‘ಮೆಟಾಫೋರಿಯಾ’ದ ಉದ್ಘಾಟನೆ ಹಾಗೂ ವಿಭಾಗದ ಹೊಸ ಪಠ್ಯಪುಸ್ತಕಗಳ ಬಿಡುಗಡೆ ಸಮಾರಂಭ ಕಾಲೇಜಿನ ಆಡಿಯೋ–ವಿಜುವಲ್ ಹಾಲ್‌ನಲ್ಲಿ ಶುಕ್ರವಾರ ನಡೆಯಿತು. ಸಾಹಿತ್ಯ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಆಳ್ವ ಫಾರ್ಮಸಿಯ ಆಡಳಿತಾಧಿಕಾರಿ ಡಾ. ಗ್ರೀಷ್ಮಾ ಆಳ್ವ, ಇಂತಹ ವೇದಿಕೆ ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಒಲವನ್ನು ಉದ್ದೀಪನಗೊಳಿಸಬಲ್ಲದು. ಸಾರ್ವಜನಿಕ ಭಾಷಣ ಕೌಶಲ್ಯದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಆತ್ಮವಿಶ್ವಾಸವು ಹುಟ್ಟಿನಿಂದ ಬರಲು ಸಾಧ್ಯವಿಲ್ಲ. ಅದು ಅಭ್ಯಾಸದಿಂದ ಬೆಳೆಸಿಕೊಳ್ಳಬಹುದಾದ ಗುಣ. ಭಾಷಣದ ವೇಳೆ ಭಯಕ್ಕೆ ಒಳಗಾಗದೆ, ಸರಳ ಹಾಗೂ ಸ್ಪಷ್ಟ ಸಂವಹನಕ್ಕೆ ಒತ್ತು ನೀಡಬೇಕು ಎಂದು ಹೇಳಿದರು. ಭಾಷಣದ ಸಂಧರ್ಭದಲ್ಲಿ ಬಾಡಿ ಲಾಂಗ್ವೇಜ್, ಪೋಶ್ಚರ್, ಉಚ್ಚಾರಣೆ, ಶಬ್ದ ಸ್ಪಷ್ಟತೆ, ಧ್ವನಿಯ ಮೇಲೆ ಹಿಡಿತ ಮತ್ತು ಶ್ರೋತೃಗಳೊಂದಿಗೆ ನೇರ ಸಂವಾದದ ಮಹತ್ವವನ್ನು ವಿವರಿಸಿದರು. ನೀವು ಮಾತನಾಡುವ ವೇಳೆಯಲ್ಲಿ ಜನರು ನಿಮ್ಮ ಮಾತಿಗೆ ಹೇಗೆ ಸ್ಫಂದಿಸುತ್ತಾರೆ ಎಂಬುದು ಮುಖ್ಯ ಎಂದರು. ನಿಧಾನಗತಿಯಲ್ಲಿ ಮಾತನಾಡುವ ಮೂಲಕ ಸಭಿಕರನ್ನು ತಲುಪಲು ಸಾಧ್ಯ…

Read More