Author: admin
ಕುಂದಾಪುರದ ಪ್ರತಿಷ್ಠಿತ ಭಂಡಾರ್ ಕಾರ್ಸ್ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಸುಖಾನಂದ ಶೆಟ್ಟಿ ಅಂಪಾರು ಇವರು ಹೆಸರಾಂತ ಲೇಖಕಿ ಹಾಗೂ ವಿಶ್ರಾಂತ ಪ್ರಾಧ್ಯಾಪಕರಾದ ಡಾ| ರೇಖಾ ಬನ್ನಾಡಿಯವರ ಮಾರ್ಗದರ್ಶನದಲ್ಲಿ ಪ್ರಾದೇಶಿಕ ಜಾನಪದ ರಂಗ ಕಲೆಗಳ ಅಧ್ಯಯನ ಕೇಂದ್ರದ (ಮಾಹೆ) ಮೂಲಕ ಸಲ್ಲಿಸಿದ ಕೊಲ್ಲೂರು ಒಂದು ಸಾಂಸ್ಕೃತಿಕ ಅಧ್ಯಯನ (A cultural Study in Kolluru) ಎಂಬ ಮಹಾಪ್ರಬಂಧಕ್ಕೆ ಪ್ರತಿಷ್ಠಿತ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ. ಶ್ರೀಯುತರು ಬ್ರಹ್ಮಾವರ ಹೇರೂರು ದೊಡ್ಡಮನೆ ನಿವೃತ್ತ ಪದವೀಧರ ಮುಖ್ಯೋಪಾಧ್ಯಾಯರಾದ ಎಚ್. ಬಿ ಬಾಬಯ್ಯ ಶೆಟ್ಟಿ ಮತ್ತು ಅಂಪಾರು ಹೊಸ ಮನೆ ಶಾರದಾ ಬಿ ಶೆಟ್ಟಿಯವರ ಸುಪುತ್ರ.
ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ನಿಕಟಪೂರ್ವ ಸಂಚಾಲಕರಾದ ನ್ಯಾಯವಾದಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಕುಂಬ್ರ ದುರ್ಗಾಪ್ರಸಾದ್ ರೈ ಅವರಿಗೆ ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಹಾಗೂ ಪುತ್ತೂರು ತಾಲೂಕು ಬಂಟರ ಸಂಘದ ವತಿಯಿಂದ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಚಾವಡಿ ಸಮ್ಮಾನವನ್ನು ಮಾಡಿ ಗೌರವಿಸಲಾಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷರಾಗಿರುವ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅವರು ಕುಂಬ್ರ ದುರ್ಗಾಪ್ರಸಾದ್ ರೈ ಅವರನ್ನು ಸನ್ಮಾನಿಸಿ ಮಾತನಾಡಿ, ದುರ್ಗಾಪ್ರಸಾದ್ ರೈಯವರು ಬಹುಮುಖ ಪ್ರತಿಭೆ ಉಳ್ಳವರು, ಸಂಘಟನಾ ಚತುರತೆಯನ್ನು ಹೊಂದಿದವರು, ನ್ಯಾಯವಾದಿಯಾಗಿ ತುಳು ಅಕಾಡೆಮಿ ಸದಸ್ಯರಾಗಿ ಹೆಸರನ್ನು ಪಡೆದಿದ್ದಾರೆ. ಇವರು ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕರಾಗಿ ಉತ್ತಮ ಸೇವೆಯನ್ನು ನೀಡಿದ್ದಾರೆ. ಇವರ ಸಂಘಟನಾ ಶಕ್ತಿ ನಮಗೆ ಇನ್ನೂ ಬೇಕು. ಇವರು ಮುಂದೆಯೂ…
2002 ರಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿದ್ದ ಟ್ರಸ್ಟಿಗೆ 2024 ರಿಂದ ಗಣನಾಥ ಶೆಟ್ಟಿ ಎಕ್ಕಾರು ಅವರನ್ನು ಅಧ್ಯಕ್ಷರನ್ನಾಗಿ ಮತ್ತು ಒಂಬತ್ತು ಕ್ರಿಯಾಶೀಲ ಸದಸ್ಯರನ್ನು ಕರ್ನಾಟಕ ಸರಕಾರವು ನೇಮಿಸಿತು. ಈ ಹಿಂದೆ ಒಂದೇ ಸ್ಥಳಕ್ಕೆ ಸೀಮಿತವಾಗಿದ್ದ ಟ್ರಸ್ಟ್ ಕಾರ್ಯಕ್ರಮಗಳು ಈಗ ರಾಜ್ಯಾದ್ಯಂತ ನಿರಂತರ ನಡೆಯುತ್ತಿರುವುದು ಗಮನಾರ್ಹ. ಕಳೆದ ಒಂದೂವರೆ ವರ್ಷದಲ್ಲಿ ಟ್ರಸ್ಟ್ 52 ಕಾರ್ಯಕ್ರಮಗಳನ್ನು ಏರ್ಪಡಿಸಿದೆ. ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಅರಿವಿನ ಬೆಳಕು, ಪದವಿಪೂರ್ವ ಪ್ರೌಢಶಾಲೆ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ರಂಗವಲ್ಲಿ ಮತ್ತು ಚಿತ್ರಕಲೆ ಮೂಲಕ ಕಾರಂತರು ರಂಗ ತಂಡಗಳ ಕಾರಂತರ ಕೃತಿಗಳ ನಾಟಕ ಪ್ರದರ್ಶನ ಕಥೆ ನಾಟಕ ಕಾದಂಬರಿಗಳ ಅಧ್ಯಯನ ಶಿಬಿರಗಳು, ಕನ್ನಡೇತರರಿಗೆ ಕನ್ನಡ ಕಲಿಕೆ, ರಾಜ್ಯ ಮತ್ತು ಜಿಲ್ಲಾಮಟ್ಟದ ಸ್ಪರ್ಧೆಗಳು ಪರಿಸರ ಕಾರ್ಯಕ್ರಮ ರಾಷ್ಟ್ರೀಯ ವಿಚಾರ ಸಂಕಿರಣಗಳು, ಕೃತಿ ಪರಿಚಯ ಕಾರ್ಯಕ್ರಮ, ಹಿರಿಯ ನಾಗರಿಕರಿಗೆ ಸ್ಪರ್ಧೆ ಮತ್ತು ಉಪನ್ಯಾಸ. ಕಾರಂತರ ಜನ್ಮ ದಿನೋತ್ಸವದ ಅಂಗವಾಗಿ ಲೇಖಕರ ಸಮ್ಮಿಲನ ಮತ್ತು ಕಾರಂತ ಸಾಹಿತ್ಯೋತ್ಸವವನ್ನು ಏರ್ಪಡಿಸಲಾಗಿದೆ. ಕಾರಂತರ ಸಿನಿಮಾ ಪ್ರದರ್ಶನ ಮತ್ತು ಚರ್ಚೆ, ನಾಡಿನ…
ಬೆಂಗಳೂರಿನಲ್ಲಿ ಡ್ರೈವರ್ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಹೊಸಕಾಡು ನಿವಾಸಿ ಅಶೋಕ್ ರವರು ಕಳೆದ 3 ತಿಂಗಳಿನಿಂದ ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದು, ಶುಶ್ರೂಷೆ ನಡೆಯುತ್ತಿದೆ. ಹೃದಯದಲ್ಲಿ ಸ್ಟಂಟ್ ಅಳವಡಿಸಿದ ಕಾರಣ ದುಡಿಯಲು ಸಾಧ್ಯವಾಗದೆ ಹಾಸಿಗೆ ಹಿಡಿದಿದ್ದು, ಆರ್ಥಿಕ ಸಮಸ್ಯೆ ತಲೆದೋರಿದ ಕಾರಣ ಅಶೋಕ್ ರವರ ಶ್ರೀಮತಿಯವರ ಮನವಿಯ ಮೇರೆಗೆ ಶಿವಾಯ ಫೌಂಡೇಶನ್ ವತಿಯಿಂದ 25,000 ರೂಪಾಯಿಗಳ ಧನಸಹಾಯ ಮಾಡಲಾಯಿತು. ಈ ಸಂಧರ್ಭ ಶಿವಾಯ ಫೌಂಡೇಶನ್ ನ ಗೌರವಾಧ್ಯಕ್ಷ ನವೀನ್ ಚಂದ್ರ ಜೆ ಶೆಟ್ಟಿ, ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಪಲಿಮಾರು ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು ಬಂಟರ ಸಂಘದ ಸಮಾಜ ಸೇವಾ ಸಮಿತಿ ಮತ್ತು ಸೇವಾದಳ ಆಯೋಜನೆ ಮಾಡಿರುವ ಸೇವಾ ಸಮಾಗಮ ಕಾರ್ಯಕ್ರಮದಲ್ಲಿ ಸುಮಾರು 46 ಮಂದಿಗೆ ಉಚಿತ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು. ಈ ಸಂಧರ್ಭ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿಎ ಅಶೋಕ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ವಿಜಯ್ ಶೆಟ್ಟಿ ಹಾಲಾಡಿ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ, ಉಪಾಧ್ಯಕ್ಷ ಜಪ್ತಿ ಸಂತೋಷ್ ಶೆಟ್ಟಿ, ಮಹಿಳಾ ಉಪಾಧ್ಯಕ್ಷೆ ಕಾಂತಿ ಶೆಟ್ಟಿ, ಕೋಶಾಧಿಕಾರಿ ಅಶೋಕ್ ಶೆಟ್ಟಿ, ಸಮಾಜ ಸೇವಾ ಸಮಿತಿ ಮತ್ತು ಸೇವಾದಳದ ಛೇರ್ಮನ್ ಪ್ರತಾಪ್ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಭೂತಾನ್ ನಲ್ಲಿ ನಡೆದ ಇಂಟರ್ನ್ಯಾಷನಲ್ ಸಂಸ್ಕೃತಿ ಉತ್ಸವದಲ್ಲಿ ಪುಣೆಯ ಖ್ಯಾತ ಉದ್ಯಮಿ ಹಾಗೂ ಸಮಾಜಸೇವಕ ಕಟ್ಟಿಂಗೇರಿ ಸುಭಾಶ್ಚಂದ್ರ ಹೆಗ್ಡೆಯವರಿಗೆ ಸಮಾಜ ಸೇವೆ ಹಾಗೂ ಉದ್ಯಮ ಕೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಗೌರವಿಸಿ ಸನ್ಮಾನಿಸಿದರು. ಈ ಸಂಧರ್ಭ ಭೂತಾನ್ ಲೋಕಸಭಾ ಸದಸ್ಯರಾದ ದಶೋ ಉಗ್ಯೆಮ್ ಲಾಮೋ ಉಪಸ್ಥಿತರಿದ್ದರು.
ರಾಜಕೀಯವೆಂದರೆ ಕೇವಲ ಅಧಿಕಾರದ ಅಲಂಕಾರವಲ್ಲ; ಅದು ಜನರ ನೋವುಗಳಿಗೆ ಸ್ಪಂದಿಸುವ ಹೃದಯದ ಧ್ವನಿ. ಕೆಲವರು ಹುದ್ದೆಗಳನ್ನು ಅಲಂಕರಿಸುತ್ತಾರೆ. ಆದರೆ ಕೆಲವರು ತಮ್ಮ ಕಾರ್ಯಗಳಿಂದಲೇ ಹುದ್ದೆಗಳಿಗೆ ಗೌರವ ತರುತ್ತಾರೆ. ಅಂತಹ ಅಪರೂಪದ ಜನನಾಯಕರ ಸಾಲಿನಲ್ಲಿ ಕರಾವಳಿ ಕರ್ನಾಟಕ ಹೆಮ್ಮೆಯಿಂದ ಉಚ್ಚರಿಸುವ ಹೆಸರು ಕೆ. ಜಯಪ್ರಕಾಶ್ ಹೆಗ್ಡೆ. ಸರಳತೆ, ಸಜ್ಜನಿಕೆ, ಪ್ರಾಮಾಣಿಕತೆ ಮತ್ತು ಜನಪರ ಚಿಂತನೆಯ ಮೂಲಕ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಅವರು ಶಾಸಕನಾಗಿ, ಸಚಿವನಾಗಿ, ಸಂಸದರಾಗಿ ಹಾಗೂ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜನಸೇವೆಯ ಅನೇಕ ಸುವರ್ಣ ಅಧ್ಯಾಯಗಳನ್ನು ಬರೆದಿದ್ದಾರೆ. ಜೆ.ಎಚ್ ಪಟೇಲ್ ಅವರ ಸಚಿವ ಸಂಪುಟದಲ್ಲಿ ಬಂದರು ಹಾಗೂ ಮೀನುಗಾರಿಕಾ ಸಚಿವರಾಗಿ ಕಾರ್ಯ ನಿರ್ವಹಿಸಿದ ಸಂದರ್ಭದಲ್ಲಿ ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಹೊಸ ಚೈತನ್ಯ ನೀಡಿದರು. ಸಮುದ್ರವನ್ನು ಜೀವನಾಧಾರವಾಗಿಸಿಕೊಂಡ ಮೀನುಗಾರರ ಸಮಸ್ಯೆಗಳನ್ನು ಹತ್ತಿರದಿಂದ ಅರಿತು, ಮೀನುಗಾರಿಕಾ ಕ್ಷೇತ್ರದ ಆಧುನೀಕರಣ, ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಅವರ ಬದುಕಿನ ಭದ್ರತೆಗೆ ಹಲವಾರು ಯೋಜನೆಗಳಿಗೆ ಚಾಲನೆ ನೀಡಿದರು. ಕರಾವಳಿಯ…
ಶಾಲಾ ಶುಲ್ಕ ಭರಿಸಲು ಅಸಾಧ್ಯವಾದ ಪರಿವಾರದ ಬಾಲಕಿಯ ಶಾಲಾ ಶುಲ್ಕವಾದ 39,000 ರೂಪಾಯಿಗಳನ್ನು ಭರಿಸಲು ಶಿವಾಯ ಫೌಂಡೇಶನ್ ವತಿಯಿಂದ ಸಹಾಯ ಮಾಡಲಾಯಿತು. ಈ ಹೆಣ್ಣು ಮಗುವಿನ ತಂದೆ ಕಿಡ್ನಿ ಸಮಸ್ಯೆಯಿಂದ ಬಳಳುತ್ತಿದ್ದು, ದೀರ್ಘ ಸಮಯದಿಂದ ಚಿಕಿತ್ಸೆ ಪಡೆಯುತ್ತಿದ್ದು, ಆರ್ಥಿಕ ಸಹಾಯಕ್ಕಾಗಿ ಶಿವಾಯ ಫೌಂಡೇಶನ್ ನಿಂದ ಸಹಾಯ ಯಾಚಿಸಿದ್ದರು. ಈ ಸಂದರ್ಭದಲ್ಲಿ ಶಿವಾಯ ಫೌಂಡೇಶನ್ ನ ಗೌರವಾಧ್ಯಕ್ಷರಾದ ನವೀನ್ ಚಂದ್ರ ಜೆ ಶೆಟ್ಟಿ ಪಡುಬಿದ್ರಿ, ಎಸ್.ಇ.ಝಡ್ ಇದರ ಮುಖ್ಯಸ್ಥರಾದ ಅಶೋಕ್ ಕುಮಾರ್ ಶೆಟ್ಟಿ, ಪ್ರಶಾಂತ್ ಶೆಟ್ಟಿ ಪಲಿಮಾರು, ಹರೀಶ್ ಕೋಟ್ಯಾನ್ ಪಡು ಇನ್ನ, ರವಿ ಶೆಟ್ಟಿ ಪಾದೆಬೆಟ್ಟು, ಸ್ಮೈಲ್ ಫೋಟೋಗ್ರಾಫಿಯ ಮಹೇಶ್ ದೇವಾಡಿಗ ಉಪಸ್ಥಿತರಿದ್ದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಉಡುಪಿ ತಾಲೂಕು ಸಂಚಾಲಕರಾಗಿ ದಿನಕರ ಶೆಟ್ಟಿ ಹೆರ್ಗ ಅವರು ಆಯ್ಕೆಯಾಗಿದ್ದಾರೆ. ದಿನಕರ ಶೆಟ್ಟಿಯವರು ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘ ಪರ್ಕಳ ಇಲ್ಲಿನ ಅಧ್ಯಕ್ಷರಾಗಿ, ಹೆರ್ಗ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಂಚಾಲಕರಾಗಿ ಸಹಕಾರ ರತ್ನ ದಂಬೆಕ್ಕಾನ ಸದಾಶಿವ ರೈಯವರು ಆಯ್ಕೆಯಾಗಿದ್ದಾರೆ. ನೂತನ ಸಂಚಾಲಕರಾಗಿ ಆಯ್ಕೆಯಾದ ದಂಬೆಕ್ಕಾನ ಸದಾಶಿವ ರೈಯವರು ಸಹಕಾರ ಕ್ಷೇತ್ರದಲ್ಲಿ ಅಪಾರವಾದ ಅನುಭವವನ್ನು ಹೊಂದಿದ್ದಾರೆ. ರೋಯಲ್ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದು, ಡಾ. ಪಿ.ಬಿ ಪ್ರತಿಷ್ಠಾನದ ರೂವಾರಿ, ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ, ಪುತ್ತೂರು ವಿಶ್ವ ಹಿಂದೂ ಪರಿಷತ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಪುತ್ತೂರು ತಾಲೂಕು ಬಂಟರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.















