Author: admin
ಬಂಟರ ಯಾನೆ ನಾಡವರ ಮಾತೃ ಸಂಘ(ರಿ) ಇದರ 105 ನೇ ವಾರ್ಷಿಕ ಸರ್ವ ಸದಸ್ಯರ ಸಭೆ ದಿನಾಂಕ ಮೇ 28 ರಂದು ಗುರುವಾರ ಬೆಳಿಗ್ಗೆ 10.30 ಕ್ಕೆ ಬಂಟ್ಸ್ ಹಾಸ್ಟೇಲ್ ಬಳಿ ಇರುವ ಶ್ರೀಮತಿ ಎಸ್.ಎಮ್ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. 2026 -29 ರ ಸಾಲಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಕಾರ್ಯಕ್ರಮವೂ ನಡೆಯಲಿದ್ದು, 2024-25 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿ ವಹಿಸಲಿದ್ದಾರೆ.
ಎರು ಆರ್ಯೆ ಆಂಡ ಕೊಟ್ಟೆ ಗುದ್ದುನ ಕರ್ಚಿ ಇಜ್ಜಿ. ಈ ಎರ್ಲು ಪರು ಸರ್ಕೆಗ್ ಬತ್ತಿನದಗ ಕೊಟ್ಟೆಗ್ ಕಲ್ಲ್ ಪಾಡೊಡು, ಇಜ್ಜಿಡ ಐಕ್ಲೆನ ಅಬತಾರ ತಡೆವರೆ ತೀರುಜಿ. ಬೊಕ್ಕ ಐಕ್ಲೆನ ನರನಾಡಿ ಬಂದ್ ಆಪುಂಡುಗೆ, ಕಾರ್ ಮರಕಟ್ಟುಂಡುಗೆ. ಪರು ಸರ್ಕೆ ಪನ್ನಗ ಎಡ್ಮ ಪರು (ಕೂಲಿ) ಕದೆಪುನು (ಅಡಿ ದೀಪಿನಿ, ಬರ್ಪಿನಿ). ನಾಲ್ ವರ್ಸ ಪೂರಾ ಆವೊಡು. ಎರು, ಬೋರಿನ್ ನಾಲ್ ಕಾರ್ಗ್ ಬಲ್ಲ್ ಅರ್ಕಲ್ ಪಾಡ್ದ್ ಮುಟ್ಟ ಒಯಿಪುನಗ, ನಾಲ್ ಕಾರ್ ಒಟ್ಟು ಆನಗ ಕೈಕಂಜಿ ಮಗುರುವ. ಸರೀ ತಪ್ಪು ಅಡಿಕ್ ಪಾಡ್ದ್ ಇಪ್ಪೊಡು ಕಿದೆಟ್. ಬೊಕ್ಕ ಅಡಿಟ್ ಮನೆ ದೀದ್, ಮಿತ್ತ್ಡ್ದ ಕೊಟ್ಟೆ ದೀದ್, ಉದ್ದ ಉರುಂಟುದ ಕಲ್ಲ್ಡ್ ಞಂಕ್ಕ ಞಂಕ್ಕ ಗುದ್ದಿಯೆರ್ ಪೊಸಲ್ಲ್ ದೇವು ಪೂಜಾರ್ಲು, ಎರ್ಲೆನ ಕೊಟ್ಟೆನ್. ಬಾರಿ ಜಾಗ್ರತೆ ಬೋಡು, ಪೆಟ್ಟ್ ತತ್ತ್ದ್ ತಾವುದ ಕೋಡಿಗ್ ಬೂರ್ಂಡ, ಕೈಟೆ ಜೀವ ಬುಡುವ ಎರು ಬೋರಿಲು. ಐತ ಮುದೆಲ್ದ ನರಂಬುನು ಗುದ್ದುದ್ದು ನೀರ್ ಮಲ್ಪುನು. ಗುದ್ದುನಗ…
ಬಡತನವನ್ನು ಅನುಭವಿಸಿದ ತಾನು ಬಡವರ ಸಂಕಷ್ಟಗಳನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ಅವರ ಮುಖದಲ್ಲಿ ನಗು ಕಾಣುವ ಕುರಿತು ಚಿಂತಿಸುತ್ತಾ ಒಂದಿಲ್ಲೊಂದು ವಿಧದಲ್ಲಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ತಾನು ಮಾಡಿದ ದಾನ ಧರ್ಮಗಳ ಬಗ್ಗೆ ಎಲ್ಲಿಯೂ ಹೇಳಿಕೊಳ್ಳದೆ ಆತ್ಮಸಂತೋಷ ಪಟ್ಟುಕೊಳ್ಳುವ ಜಾಯಮಾನ ಡಾ| ದೀಪಕ್ ಶೆಟ್ಟಿ ಬಾರ್ಕೂರು ಹಾಗೂ ಹೆಗ್ಗುಂಜೆ ಅಮರನಾಥ ಶೆಟ್ಟಿಯವರದ್ದು. ಜೀವನದಲ್ಲಿ ಸ್ಪಷ್ಟ ಉದ್ದೇಶ ಮತ್ತು ಅಬೇಧ್ಯ ಲಕ್ಷ್ಯ ಇದ್ದರೆ ಏನನ್ನಾದರೂ ಸಾಧಿಸಬಹುದೆನ್ನುವುದಕ್ಕೆ ಉದಾಹರಣೆಯಾಗಬಲ್ಲ ಮಹಾದಾನಿಗಳು, ಕಲೆ ಸಂಸ್ಕೃತಿ ಪೋಷಕರು, ಸ್ವಜನರ ಯೋಗ ಕ್ಷೇಮಕ್ಕೆ ಬೇಕಾಗಿ ಹಗಲಿರುಳು ಜೀವ ತೇವ ಅಪರೂಪದ ವ್ಯಕ್ತಿತ್ವವಿರುವ ವಿದ್ಯಾವಂತ ಯುವ ಉದ್ಯಮಿಗಳಾದ ದೀಪಕ್ ಶೆಟ್ಟಿ ಹಾಗೂ ಅಮರನಾಥ್ ಶೆಟ್ಟಿಯವರು ಬೆಂಗಳೂರು ಬಂಟರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಗೌರವ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸಜ್ಜಾಗುತ್ತಿದ್ದಾರೆ. ಇಬ್ಬರಿಗೂ ಬೆಂಗಳೂರು ಬಂಟರ ಸಂಘದ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ ಅನುಭವವಿದೆ. ಓರ್ವ ಜನಪರ ಕಾಳಜಿಯ ಸಮಾಜ ಸೇವಕರಾಗಿ, ಅಪ್ರತಿಮ ಸಂಘಟಕರೂ ಆಗಿ ಜನಾನುರಾಗಿಯಾದ ಅತ್ಯಂತ ಸರಳ ಸ್ವಭಾವದ ವಿನಮ್ರ…
ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕಿನ ಮುಂದಿನ ಸಂಚಾಲಕರಾಗಿ ಉದ್ಯಮಿ, ಧಾರ್ಮಿಕ ಮುಖಂಡರಾದ ದಿವಾಕರ ಸಾಮಾನಿ ಚೇಳ್ಯಾರು ಗುತ್ತು ಹಾಗೂ ಸಹ ಸಂಚಾಲಕರಾಗಿ ಯುವ ಉದ್ಯಮಿ ಅಶ್ವತ್ಥಾಮ ಹೆಗ್ಡೆಯವರು ಅವಿರೋಧವಾಗಿ ಆಯ್ಕೆಯಾದರು. ಈ ಸಂಧರ್ಭ ವಸಂತ ಶೆಟ್ಟಿ ಜೆಪ್ಪು, ಸಿಎ ರಾಮಮೋಹನ ರೈ, ಉಲ್ಲಾಸ್ ಶೆಟ್ಟಿ ಪೆರ್ಮುದೆ, ರತ್ನಾಕರ ಶೆಟ್ಟಿ ಎಕ್ಕಾರ್, ಉಮೇಶ್ ರೈ ಮೇಗಿನ ಮನೆ, ಎಂ ಸುಂದರ ಶೆಟ್ಟಿ, ಕೇಶವ ಮಾರ್ಲ, ಅಶೋಕ್ ಶೆಟ್ಟಿ ಮೂಲ್ಕಿ, ಜಗದೀಶ್ ಶೆಟ್ಟಿ ಬಿಜೈ, ಕೃಷ್ಣಪ್ರಸಾದ್ ರೈ, ಮನೀಶ್ ರೈ, ಶೋಭಾ ಹೆಗ್ಡೆ ಮೂಡಬಿದ್ರೆ ಹಾಗೂ ಸಬಿತಾ ಶೆಟ್ಟಿ ಉಪಸ್ಥಿತರಿದ್ದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ನಮ್ಮ ಮೂಡುಬಿದಿರೆ, ನೇತಾಜಿ ಬ್ರಿಗೇಡ್, ಜೆಸಿಐ, ಮೂಡುಬಿದಿರೆ ಬಂಟರ ಮಹಿಳಾ ಸಂಘದ ಸದಸ್ಯರು ವಿದ್ಯಾಗಿರಿ – ಹನ್ಡೇಲು ಹಾಗೂ ವಿದ್ಯಾಗಿರಿ – ಪುತ್ತಿಗೆ ಪರಿಸರದ 5.5 ಕಿಮೀ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ ‘ಸ್ವಚ್ಛ ಸಂಕಲ್ಪ’ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ನ ಅಧ್ಯಕ್ಷ ಅಶೋಕ ಅಡ್ಯಂತಾಯ ಕಾರ್ಯಕ್ರಮಕ್ಕೆ ಶುಭ ಹಾರೈಸಿ, ಸ್ವಚ್ಛತೆ ಎನ್ನುವುದು ಆರೋಗ್ಯಕರ ಸಮಾಜದ ಅಡಿಪಾಯ. ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಹೌದು. ಇದೇ ಉದ್ದೇಶವನ್ನು ಮನಗಂಡು ಮೂಡುಬಿದಿರೆಯಲ್ಲಿ ವಿವಿಧ ಸಂಘ ಸಂಸ್ಥೆಗಳು ಕೈಜೋಡಿಸಿ ‘ಸ್ವಚ್ಛ ಸಂಕಲ್ಪ’ ಎಂಬ ಮಹತ್ವದ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಂಡಿವೆ ಎಂದರು. ಕಾರ್ಯಕ್ರಮದಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ನಿಂದ ಕಳೆದ 12 ವರ್ಷಗಳಿಂದ ಅಳಿವೆ ಪ್ರದೇಶದಲ್ಲಿ ನಿರಂತರವಾಗಿ ಸ್ವಚ್ಛತಾ ಅಭಿಯಾನ ನಡೆಸುತ್ತಾ ಬರಲಾಗಿದೆ. ನಂದಿನಿ ಹಾಗೂ ಫಲ್ಗುಣಿ ನದಿಗಳು ಈ ಭಾಗದಲ್ಲಿ ಹರಿಯುತ್ತಿದ್ದು, ಅವುಗಳಿಗೆ ಸಂಪರ್ಕ ಹೊಂದಿರುವ ಚರಂಡಿಗಳ ಮೂಲಕ ತ್ಯಾಜ್ಯಗಳು…
ಕರಾವಳಿ ಕರ್ನಾಟಕ ಮತ್ತು ವಾಣಿಜ್ಯ ನಗರಿ ಮುಂಬಯಿ ನಡುವಿನ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿಯ ಜಿಲ್ಲಾ ತಂಡವು ಒಂದು ಪ್ರಮುಖ ಹೆಜ್ಜೆಯನ್ನಿಟ್ಟಿದೆ. ಮುಂಬಯಿ ಮಂಗಳೂರು ಮಾರ್ಗದಲ್ಲಿ ಮತ್ತೊಂದು ನಿಯಮಿತ (ರೆಗ್ಯುಲರ್) ರೈಲು ಹಾಗೂ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ಕೋಚ್ ರೈಲನ್ನು ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಗುರುಪುರದ ಜಂಗಮ ಮಠದಲ್ಲಿ ಗೌರವಾನ್ವಿತ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಸಮಿತಿಯ ವತಿಯಿಂದ ಅಧಿಕೃತವಾಗಿ ಮನವಿ ಪತ್ರವನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕರು, ಜಿಲ್ಲಾಧ್ಯಕ್ಷರು, ರಾಜ್ಯ ಸಂಯೋಜಕರು ಹಾಗೂ ಮಂಗಳೂರು ಉತ್ತರ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ಉಪಸ್ಥಿತರಿದ್ದು ಪ್ರಸ್ತಾವನೆಗೆ ಬಲ ತುಂಬಿದರು. ಜಂಗಮ ಮಠ ಮತ್ತು ವಜ್ರದೇಹಿ ಮಠದ ಪೂಜ್ಯ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ…
ಯುಎಇ ಹಾಗೂ ಕರಾವಳಿಯಲ್ಲಿ ಹೆಸರು ವಾಸಿಯಾಗಿರುವ ಹೋಟೆಲ್ ಉದ್ಯಮ ಸಂಸ್ಥೆ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ ನಿರ್ದೇಶಕರಾದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ಕಳೆದ 14 ವರ್ಷದಿಂದ ತನ್ನ ಮಾತಾ ಪಿತರ ಮದುವೆಯ ವಾರ್ಷಿಕ ದಿನದಂದು ದುಬೈನಲ್ಲಿ ನಡೆಸಿಕೊಂಡು ಬರುತ್ತಿರುವ ರಕ್ತದಾನ ಶಿಬಿರ ಕಾರ್ಯಕ್ರಮ ಫಾರ್ಚೂನ್ ಪ್ಲಾಝದಲ್ಲಿ ಯಶಸ್ವಿಯಾಗಿ ನಡೆಯಿತು. ದುಬೈ ಹೆಲ್ತ್ ಅಥೋರಿಟಿಯ ಸಹಯೋಗದೊಂದಿಗೆ ನಡೆದ ರಕ್ತದಾನ ಶಿಬಿರವು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರ ವರೆಗೆ ಯಶಸ್ವಿಯಾಗಿ ಜರುಗಿತು. ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನ ಸಿಬ್ಬಂದಿ ವರ್ಗದವರು, ದುಬೈ ತುಳು ಕನ್ನಡ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪ್ರವೀಣ್ ಶೆಟ್ಟಿಯವರ ಸ್ನೇಹಿತರು ಶಿಬಿರದಲ್ಲಿ ರಕ್ತದಾನ ಮಾಡಿ ಶಿಬಿರವನ್ನು ಯಶಸ್ವಿಗೊಳಿಸಿದರು. ಮಾಧ್ಯಮದೊಂದಿಗೆ ಮಾತನಾಡಿದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು, ನನ್ನ ಮಾತಾ ಪಿತರಾದ ಶ್ರೀಮತಿ ಸರೋಜಿನಿ ಶೆಟ್ಟಿ ಮತ್ತು ಶ್ರೀ ನಾರಾಯಣ ಶೆಟ್ಟಿಯವರ ಮದುವೆಯ ವರ್ಷದ ಈ ಶುಭ ದಿನದಂದು ಕಳೆದ 14 ವರ್ಷಗಳಿಂದ ಈ…
ಮುಲ್ಕಿ ಸುಂದರ್ ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್ ನಲ್ಲಿ ಸ್ಯಾಂಡಿಸ್ ಕಂಪನಿಯ ಆಶ್ರಯದಲ್ಲಿ ನಡೆದ ಕೋಸ್ಟಲ್ ಫಿಲಂ ಅವಾಡ್ಸ್೯ ನಲ್ಲಿ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನ ‘ಜೈ’ ತುಳು ಸಿನಿಮಾದಲ್ಲಿ ಅಕ್ಷರ್ ಜೆ ಶೆಟ್ಟಿಯ ಅಭಿನಯಕ್ಕಾಗಿ ಬಾಲನಟ ಪ್ರಶಸ್ತಿ ಲಭಿಸಿದೆ. ಕ್ರೀಡೆಯಲ್ಲೂ ಸಾಧನೆ ಮಾಡುತ್ತಿರುವ ಅಕ್ಷರ್ ಜೆ ಶೆಟ್ಟಿ ಹಿರಿಯ ಪತ್ರಕರ್ತ ಹಾಗೂ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾದ ಜಗನ್ನಾಥ ಶೆಟ್ಟಿ ಬಾಳ ಅವರ ಸುಪುತ್ರ.
ಮುಂಬೈ ವಿಶ್ವವಿದ್ಯಾಲಯವು ಕಳೆದ ಮೇ ತಿಂಗಳಲ್ಲಿ ನಡೆಸಿದ ಕನ್ನಡ ಡಿಪ್ಲೋಮಾ ಕೋರ್ಸ್ನ 2025 -26 ನೇ ಸಾಲಿನ ಪರೀಕ್ಷೆಯಲ್ಲಿ ಶ್ರೀಮತಿ ಉಷಾ ಶೆಟ್ಟಿ ಅವರು ಅತ್ಯಧಿಕ ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿರುವ ಉಷಾ ರತ್ನಾಕರ್ ಶೆಟ್ಟಿಯವರು ಕಣಂಜಾರು ಮೇಲ್ ಮೂಡಿಬೆಟ್ಟು ದಿವಂಗತ ವಿಠ್ಠಲ ಶೆಟ್ಟಿ ಹಾಗೂ ಕಾರ್ಕಳ ತಾಲೂಕಿನ ನೀರೆ ಆಂಬೊಟ್ಟು ಸುಶೀಲ ಶೆಟ್ಟಿ ಇವರ ಪ್ರಥಮ ಪುತ್ರಿ. ನೃತ್ಯ, ನಾಟಕ, ಏಕಪಾತ್ರಾಭಿನಯ, ಯಕ್ಷಗಾನಗಳಲ್ಲಿ ವಿವಿಧ ಪಾತ್ರ ಪೋಷಣೆ, ತಾಳಮದ್ದಲೆಗಳಲ್ಲಿ ಅರ್ಥಧಾರಿಯಾಗಿ ಭಾಗವಹಿಸುವ ಇವರದ್ದು ಬಹುಮುಖ ಪ್ರತಿಭೆ. ಮುಂಬೈಯ ಪ್ರಸಿದ್ಧ ಯಕ್ಷಗಾನ ತರಬೇತುಗಾರರಾದ ದೇವಲ್ಕುಂದ ಭಾಸ್ಕರ್ ಶೆಟ್ಟಿಯವರ ನೇತೃತ್ವದಲ್ಲಿ ಶ್ರೀ ಮಹಾಲಕ್ಷ್ಮಿ ಬಂಟ ಮಹಿಳಾ ಯಕ್ಷಗಾನ ಬಳಗ ಇದರಲ್ಲಿ ನಿರಂತರ ನಡೆಯುವ ತಾಳಮದ್ದಳೆಗಳಲ್ಲಿ ಅರ್ಥಧಾರಿಯಾಗಿ ಪಾಲ್ಗೊಳ್ಳುತ್ತಾರೆ. ನವಿಮುಂಬಯಿ ಪರಿಸರದ ಸಂಘ ಸಂಸ್ಥೆಗಳಾದ ರಂಗಭೂಮಿ ಫೈನ್ ಆರ್ಟ್ಸ್, ನೆರೂಲ್ ಶನಿಮಂದಿರ, ಬಾಂಬೇ ಬಂಟ್ಸ್ ಅಸೋಸಿಯೇಶನ್ಗಳಲ್ಲಿ ಸಕ್ರಿಯರು. ಪ್ರಸ್ತುತ ಪ್ರತಿಷ್ಠಿತ ಬಾಂಬೇ ಬಂಟ್ಸ್ ಅಸೋಸಿಯೇಶನ್ನಲ್ಲಿ ಮಹಿಳಾ ವಿಭಾಗದ…
ನಾಲ್ಕು ದಿನಗಳ ಹಿಂದೆ ಥಾಯ್ಲೆಂಡ್ನಲ್ಲಿರುವ ಜಗತ್ತಿನ ಮೊದಲ ಮೊಯ್ ಥಾಯ್ ಕ್ರೀಡಾಂಗಣ ಹಾಗೂ ಅಲ್ಲಿಯ ರಾಷ್ಟ್ರೀಯ ಕ್ರೀಡಾಂಗಣವಾದ ರಾಜಾದಮ್ನರೆನ್ನಲ್ಲಿ ಕಿಕ್ಕಿರಿದು ನೆರೆದಿದ್ದ ಕಿಕ್ ಬಾಕ್ಸಿಂಗ್ ಅಭಿಮಾನಿಗಳ ಸಮ್ಮುಖದಲ್ಲಿ ‘ಅನೀಶ್ ಶೆಟ್ಟಿ ಫ್ರಮ್ ಇಂಡಿಯಾ’ ಎಂಬ ಹೆಸರು ಮಾರ್ಧನಿಗೊಂಡಿತು. ವೃತ್ತಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ಪ್ರವೃತ್ತಿಯಲ್ಲಿ ಮೊಯ್ ಥಾಯ್ ಕಿಕ್ ಬಾಕ್ಸರ್ ಆಗಿರುವ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪುಟ್ಟ ಗ್ರಾಮ ಕಟ್ಕೆರೆಯ ಅನೀಶ್ ಶೆಟ್ಟಿ ಎದುರಾಳಿಯನ್ನು ಸೋಲಿಸಿ ವೃತ್ತಿ ಬದುಕಿನ ಏಳನೇ ಫೈಟ್ ಗೆದ್ದಾಗ ಕ್ರೀಡಾಂಗಣದಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಅನೀಶ್ ಶೆಟ್ಟಿ ಅವರು ಈ ಸಾಧನೆಯ ಮೂಲಕ ಈ ಅಂಗಣದಲ್ಲಿ ಮೊಯ್ ಥಾಯ್ ಫೈಟ್ ಗೆದ್ದ ಐದನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅನೀಶ್ ಶೆಟ್ಟಿ ಅವರು ಥಾಯ್ಲೆಂಡಿನ ಸಿತ್ಜಾವೊಫೋ ಜಿಮ್ ಪ್ರತಿನಿಧಿಸುತ್ತಿದ್ದು, ಕೆನಡಾದ ಫೈಟರ್ ರಾಬರ್ಟ್ ಒಟಾರೊಲಾ ಥಾಯ್ಲೆಂಡಿನ ಸಿಟ್ಮೋಚಾಯ್ ಜಿಮ್ ಪ್ರತಿನಿಧಿಸುತ್ತಿದ್ದಾರೆ. ಎಲ್ಲರೂ ಕೆನಡಾದ ರಾಬರ್ಟ್ ಗೆಲ್ಲುತ್ತಾನೆಂದು ನಂಬಿದ್ದರು. ಆದರೆ ಕಳೆದ ಎಂಟು ವರ್ಷಗಳಿಂದ ಹೆಚ್ಚು…















