Author: admin
ಉಳೆಪಾಡಿಯಲ್ಲಿ ಮಹೇಶ್ ಶೆಟ್ಟಿ ತೆಳ್ಳಾರ್, ಗಿರೀಶ್ ಶೆಟ್ಟಿ ತೆಳ್ಳಾರ್, ಸುದೇಶ್ ಶೆಟ್ಟಿ ತೆಳ್ಳಾರ್, ರಾಜೇಶ್ ಶೆಟ್ಟಿ ತೆಳ್ಳಾರ್, ಭಾಸ್ಕರ ಶೆಟ್ಟಿ ಕುಡ್ಡುಲಾಜೆ ತೆಳ್ಳಾರ್, ದೇಜಪ್ಪ ಶೆಟ್ಟಿ ಮನೆ ಕುಟುಂಬಸ್ಥರು ಉಳೆಪಾಡಿಯಲ್ಲಿ ನಿರ್ಮಿಸಿದ ನೂತನ ಧರ್ಮಚಾವಡಿಯಲ್ಲಿ ಧರ್ಮದೈವಗಳ ಪುನರ್ ಪ್ರತಿಷ್ಠೆ, ಕಲಶಾಭಿಷೇಕ ಹಾಗೂ ನೇಮೋತ್ಸವ ಮೇ 07 ರಿಂದ 8 ರವರೆಗೆ ನಡೆಯಿತು. ಧರ್ಮಚಾವಡಿಯಲ್ಲಿ ಧರ್ಮದೈವಗಳ ಪುನರ್ ಪ್ರತಿಷ್ಠೆ ಕಲಶಾಭಿಷೇಕ ಹಾಗೂ ನೇಮೋತ್ಸವ ಸಂದರ್ಭದಲ್ಲಿ ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ, ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಪೂಜ್ಯ ಮಾಣಿಲ ಶ್ರೀ ಮೋಹನದಾಸ್ ಪರಮಹಂಸ ಸ್ವಾಮೀಜಿ ಹಾಗೂ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ರಾಮದಾಸ್ ರವರು ಉಪಸ್ಥಿತರಿದ್ದು ಕುಟುಂಬಸ್ಥರಿಗೆ ಆಶೀರ್ವಾದ ನೀಡಿದರು. ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಬಂಟರ ಸಂಘ ಮುಂಬಯಿಯ ಗೌರವ…
ಇನ್ನಂಜೆ ಕನ್ನಡ ಮಾಧ್ಯಮ ಶಾಲೆ : ಉಚಿತ ವಿದ್ಯಾಭ್ಯಾಸಕ್ಕಾಗಿ ಕ್ರಿಕೆಟ್ ಪಂದ್ಯಾಟ, ಶಾಲೆಗೆ ರೂ. 1,67,875 ಹಸ್ತಾಂತರ
ಉಡುಪಿ ಜಿಲ್ಲೆಯ ಇನ್ನಂಜೆ ಫ್ರೆಂಡ್ಸ್ ಇವರ ಆಶ್ರಯದಲ್ಲಿ ಹಳೆ ವಿದ್ಯಾರ್ಥಿ ಹಾಗೂ ದಾನಿಗಳ ಸಹಕಾರದಲ್ಲಿ ಇನ್ನಂಜೆ ಕನ್ನಡ ಮಾಧ್ಯಮ ಶಾಲೆಯ ಉಚಿತ ವಿದ್ಯಾಭ್ಯಾಸದ ಸಹಾಯಾರ್ಥವಾಗಿ ಇನ್ನಂಜೆ ಮೈದಾನದಲ್ಲಿ ಇನ್ನಂಜೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ ಆಯೋಜಿಸಿ, ಅದರಲ್ಲಿ ಉಳಿದ ಮೊತ್ತ 1,67,875 ರೂಪಾಯಿಯನ್ನು ಇನ್ನಂಜೆ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ನಟರಾಜ್ ಉಪಾಧ್ಯಾಯ, ದೈಹಿಕ ಶಿಕ್ಷಕರಾದ ನವೀನ್ ಶೆಟ್ಟಿ, ಅಧ್ಯಾಪಕಿಯಾದ ಶಶಿಕಲಾ ಆಚಾರ್ಯ ಇವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಇನ್ನಂಜೆ ಫ್ರೆಂಡ್ಸ್ ಇದರ ಸದಸ್ಯರುಗಳಾದ ದಿವೇಶ್ ಶೆಟ್ಟಿ, ರಾಜೇಶ್ ಕುಲಾಲ್, ಅನಿರುದ್ಧ, ಪ್ರಶಾಂತ್ ಆಚಾರ್ಯ, ವಿಕೇಶ್ ಶೆಟ್ಟಿ, ನಾಗೇಶ್ ಆಚಾರ್ಯ, ಪ್ರಥಮ್ ಆಚಾರ್ಯ, ನಿತೇಶ್ ಆಚಾರ್ಯ, ಸಚಿನ್ ಅಮೀನ್, ಪವನ್ ಕುಲಾಲ್, ಸಂದೀಪ್ ಅಜೀಲಕಾಡು, ಸಂದೀಪ್ ಆಚಾರ್ಯ, ಗಣೇಶ್ ಆಚಾರ್ಯ, ರವಿ ಪ್ರಸಾದ್, ನೀಲೇಶ್ ಶೆಟ್ಟಿ, ಕೃಷ್ಣ ಶೆಟ್ಟಿ ಮಂಡೇಡಿ ಉಪಸ್ಥಿತರಿದ್ದರು. 2025-26 ರ ಸಾಲಿನ ಇನ್ನಂಜೆ ಶಾಲೆಯ 10ನೇ ತರಗತಿಯಲ್ಲಿ ಕನ್ನಡ ಮಾಧ್ಯಮ ಮತ್ತು ಆಂಗ್ಲ ಮಾಧ್ಯಮ ವಿಭಾಗಕ್ಕೆ ಶೇಕಡಾ…
ಲೆಫ್ಟಿನೆಂಟ್ ಕರ್ನಲ್ ಅಂಕಿತಾ ಶ್ರೀವಾಸ್ತವ ಜೀವನಗಾಥೆ ಮಹಿಳೆಯರಿಗೆ ಮಾತ್ರವಲ್ಲ, ಪುರುಷರಿಗೂ ಪ್ರೇರಣೆದಾಯಕ -ವಿವೇಕ್ ಆಳ್ವ
ಪ್ರತಿಯೊಂದು ವೈಫಲ್ಯವೂ ಜೀವನದಲ್ಲಿ ಮಹತ್ವದ ಪಾಠವನ್ನು ಕಲಿಸಿ ವ್ಯಕ್ತಿಯನ್ನು ಯಶಸ್ಸಿಗೆ ಇನ್ನಷ್ಟು ಹತ್ತಿರಕ್ಕೆ ಕರೆದೊಯ್ಯಬಲ್ಲದು ಎಂದು ನಿವೃತ್ತ ಸೇನಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಅಂಕಿತಾ ಶ್ರೀವಾಸ್ತವ ಅಭಿಪ್ರಾಯಪಟ್ಟರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಶನಿವಾರ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್ ವತಿಯಿಂದ ಆಯೋಜಿಸಲಾದ ‘ಒಲಿವ್ ಗ್ರೀನ್ ಟು ಬ್ಯೂಟಿ ಕ್ವೀನ್ – ಎ ಜರ್ನಿ ವಿದಿನ್’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತೀಯ ಸೇನೆಯಲ್ಲಿ ಮಹಿಳಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಅನುಭವಗಳು, ಎದುರಿಸಿದ ಸವಾಲುಗಳು, ವೈಫಲ್ಯಗಳು ಹಾಗೂ ಸಾಧನೆಗಳನ್ನು ಹಂಚಿಕೊಂಡರು. ಸಂಪೂರ್ಣ ಪುರುಷ ಸೈನಿಕರಿಂದ ಕೂಡಿದ ಘಟಕದಲ್ಲಿ ಮಹಿಳಾ ಅಧಿಕಾರಿಯಾಗಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸುವುದು ಅತ್ಯಂತ ದೊಡ್ಡ ಸವಾಲಾಗಿತ್ತು. ಆದರೆ ಆ ಸವಾಲನ್ನು ಸ್ವೀಕರಿಸಿ ಜಯಿಸಿದ ಪರಿ ಸದಾ ಪ್ರೇರಣಾದಾಯಕ ಎಂದರು. ಯಶಸ್ಸು ಸಾಧಿಸಲು ಏಕಾಗ್ರತೆ, ದೃಢನಿಶ್ಚಯ ಮತ್ತು ಕ್ರಿಯಾಶೀಲತೆ ಅಗತ್ಯವೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಾರ್ಗಿಲ್ ಯುದ್ಧದ ಅವಧಿಯಲ್ಲಿ ಭಾರತ ಚೀನಾ ಗಡಿಭಾಗದಲ್ಲಿ ಸೇವೆ ಸಲ್ಲಿಸಿದ ಸಂದರ್ಭವನ್ನು ನೆನಪಿಸಿಕೊಂಡ ಅವರು,…
ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರು, ಸಮಾಜ ಸೇವಕರು, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರಾದ ಸುಗ್ಗಿ ಸುಧಾಕರ್ ಶೆಟ್ಟಿಯವರು 2026 ರ ಸಾಲಿನ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ’ ಗೌರವಕ್ಕೆ ಪಾತ್ರರಾಗಿದ್ದಾರೆ. ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು.
ಡಿ.ವಿ.ಜಿ ಅವರು “ನಗುವು ಸಹಜದ ಧರ್ಮ; ನಗಿಸುವುದು ಪರಧರ್ಮ” ಎಂದು ಹೇಳುವ ಮೂಲಕ, ಇತರರ ಮುಖದಲ್ಲಿ ನಗು ಮೂಡಿಸುವುದೇ ಅತ್ಯುತ್ತಮ ಸೇವೆ ಎಂದು ವರ್ಣಿಸಿದ್ದಾರೆ. ಈ ಮಾತು ‘ಸೇವೆಯೇ ಪರಮ ಧರ್ಮ’ ಎಂದು ನಂಬಿ, ಜನರ ಕಷ್ಟಗಳಿಗೆ ಸ್ಪಂದಿಸಿ, ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವ ಬಂಟರತ್ನ ಡಾ| ಆರ್ ಕೆ ಶೆಟ್ಟಿಯವರಿಗೆ ಸೂಕ್ತವೆನಿಸುತ್ತದೆ. ಇಸ್ಸಾರ್ ಫೈನಾನ್ಸಿಯಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕ ಡಾ| ಆರ್ ಕೆ ಶೆಟ್ಟಿಯವರು ಜೀವವಿಮಾ ಕ್ಷೇತ್ರದ ಸಲಹೆಗಾರರಾಗಿ ಮುಂಬಯಿ ನಗರ ಮಾತ್ರವಲ್ಲದೇ, ವಿಶ್ವದ ನಲವತ್ತೆರಡು ರಾಷ್ಟ್ರಗಳಲ್ಲಿ ಪರಿಚಿತರಿರುವ ಪ್ರಪ್ರಥಮ ಭಾರತೀಯ. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾದ ಬಂಟ ಜನಾಂಗದ ಹೆಮ್ಮೆಯ ಪುತ್ರ. ಘನ ಮಹಾರಾಷ್ಟ್ರ ಸರಕಾರದ ಮಾನ್ಯ ರಾಜ್ಯಪಾಲರಾದ ಶ್ರೀ ಭಗತ್ ಸಿಂಗ್ ಕಿಶ್ಯಾರಿ ಅವರು ರಾಜಭವನದಲ್ಲಿ ಆರ್ ಕೆ ಶೆಟ್ಟಿಯವರನ್ನು ಗೌರವಿಸಿದ್ದಾರೆ ಎಂದಾದರೆ ಅವರ ಘನತೆ ಪ್ರಸಿದ್ಧಿಗೆ ಬೇರೆ ಸಾಕ್ಷಿ ಬೇಕೆ ? ಮಾನ್ಯ ಆರ್ ಕೆ ಶೆಟ್ಟರು ವಿಶ್ವಮಟ್ಟದ ಪ್ರತಿಷ್ಠಿತ…
ದುಂಬುಡು ಆಜೇಲ್ ವರ್ಸದ ಪಿರಯೊಡೆ ಪೊನ್ನುಲೆಗ್ ಮದಿಮೆ ಮಲ್ತೊಂದು ಇತ್ತೆರ್ಗೆ. ಎನ್ನ ಬುಡೆದಿನ ಅಜ್ಜಿಗ್ ಏಲ್ ವರ್ಸ ಆನಗನೇ ಸಂಬಂದೊಡೆ ಮದಿಮೆ ಮಲ್ದೆರ್ಗೆ. ಅಜ್ಜೆರ್ ಪದಿನಾಲ್ ವರ್ಸ ಮಲ್ಲಗೆ. ಎಲ್ಲಿ ಪ್ರಾಯೊಡು ಮದಿಮೆ ಆಂಡಲಾ, ಮದಿಮಾಲ್ ಆವಂದೆ ‘ಕೂಡಿಕೆ’ ಮಲ್ಪರೆ ಇಜ್ಜಿ. ಪೊನ್ನು ಕಂಡ್ಯಾನ ಇಲ್ಲಡ್ ಇಪ್ಪೊಲಿ. ಐವ ವರ್ಸ ಪಿರವುಡು ಎಂಕಲೆನ ನಿರೆಕರೆತಾರ್ ಮದಿಮೆ ಆತಿನ ಪೊನ್ನು ರಡ್ಡ್ ವರ್ಸ ಕರಿದ್ ಮದ್ಮಾಲ್ ಆಯಿನಿ. ಮದಿಮೆ ಆಯಿ ಬೊಕ್ಕ ಪೊನ್ನು, ಪೊನ್ನು ಪೋದು ಪೊಂಜೋವ್ ಆಂಡ, ಅದಗ ಮಲ್ಪುನ ಕ್ರಮೊಕು ತಲ್ನೀರ್ ಮದಿಮೆ ಪನೊಂದು ಇತ್ತೆರ್ಗೆ. ಮದಿಮೆ ಆವಂದಿ ಪೊನ್ನು ಮದ್ಮಾಲ್ ಆಂಡ “ಕರ ಪೊತ್ತಾವುನ” ಕ್ರಮ ಮಲ್ತೊಂದು ಇತ್ತೆರ್ ಇಂಚಪ ಮುಟ್ಟ. ತಲ್ನೀರ್ ಮದಿಮೆಗ್ ಊರುಗು ಹೇಲಿಕೆ ಕೊರೊಂದು ಇತ್ತೆರ್ಗೆ, ಅಂಚೆನೆ ಕಂಡ್ಯಾನ ಇಲ್ಲದಗಲೆಗ್ಲಾ ಹೇಲಿಕೆ ಪೋವೊಂದು ಇತ್ಂಡ್ಗೆ. ಕರ ಪೊತ್ತಾವುನ, ಬಾಯಕೆದಲ್ಕ, ಎಚ್ಚಾದ್ ಪೊಂಜೇವೆಗೆ ಹೇಲಿಕೆ ಜಾಸ್ತಿಗೆ, ಅಂಚ ಪೊಂಜೋವೆ ಎಚ್ಚ ಸೇರೊಂದು ಇತಿನಿಗೆ ತಲ್ನೀರ್ ಮದಿಮೆಗ್.…
ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘದ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉಡುಪಿ ತಾಲೂಕಿನಿಂದ 9 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಿನಕರ ಶೆಟ್ಟಿ ಹೆರ್ಗ, ಮಿಥುನ್ ಆರ್ ಹೆಗ್ಡೆ ಪಡುಬಿದ್ರೆ, ಪ್ರಸಾದ್ ಹೆಗ್ಡೆ ಮಾರಾಳಿ, ಕಿಶೋರ್ ಶೆಟ್ಟಿ ಎರ್ಮಾಳ್, ವೀರೇಂದ್ರ ಶೆಟ್ಟಿ ಪಂಜಿಮಾರ್ ಗುತ್ತು, ರವೀಂದ್ರ ಶೆಟ್ಟಿ ಪೆರ್ಡೂರು, ಜೈ ಕಿಶನ್ ಶೆಟ್ಟಿ ಬ್ರಹ್ಮಾವರ ಪ್ರಸಾದ್ ಹೆಗ್ಡೆ ಕುಕ್ಕೆಹಳ್ಳಿ, ಮಹಿಳಾ ಕ್ಷೇತ್ರದಿಂದ ಸಮಾಜಸೇವಕಿ ನಿರುಪಮಾ ಪ್ರಸಾದ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಂಟರ ಯಾನೆ ನಾಡವರ ಮಾತೃ ಸಂಘ ಇದರ 2026 -29ನೇ ಅವಧಿಗೆ ಅಧ್ಯಕ್ಷರಾಗಿ ಈಗಾಗಲೇ ಕೆ ಅಜಿತ್ ಕುಮಾರ್ ರೈ ಮಾಲಾಡಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಲವಾರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಾವೂರು ಮುಲ್ಲಕಾಡು ಪರಿಸರದಲ್ಲಿ ಧಾರ್ಮಿಕ, ಸಾಂಸ್ಕೃತಿಕ, ಕ್ರೀಡೆ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಊರಿನವರೆಲ್ಲರ ಪ್ರೀತಿ ವಿಶ್ವಾಸಗಳಿಗೆ ಪಾತ್ರರಾದ ಸಂಘಟನೆಯಾದ ಮುಲ್ಲಕಾಡು ಫ್ರೆಂಡ್ಸ್ (ರಿ) ತನ್ನ 21 ನೇ ವರ್ಷದ ಯುಗಾದಿ ಉತ್ಸವವನ್ನು ಮೇ 2 ರಂದು ಶ್ರೀ ಅಯ್ಯಪ್ಪ ಭಜನಾ ಮಂದಿರ ಬಳಿ ಇರುವ ಮುಲ್ಲಕಾಡು ಕೇಂದ್ರ ಮೈದಾನದಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಆಸರೆ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷೆ ಡಾ. ಆಶಾಜ್ಯೋತಿ ರೈಯವರು ನೆರವೇರಿಸಿದರು. ಬಳಿಕ ಮಾತನಾಡಿದ ಡಾ. ಆಶಾಜ್ಯೋತಿ ರೈಯವರು, ಅಖಂಡ ಭಾರತದಲ್ಲಿ ಭೂಮಿ ಮೇಲೆ ಮಾನವ ಜನ್ಮ ತಾಳಿರುವುದು ನಮ್ಮೆಲ್ಲರ ಪುಣ್ಯ. ಈ ಶ್ರೇಷ್ಠವಾದ ಜನ್ಮವನ್ನು ನಾವೆಲ್ಲರೂ ಸಾರ್ಥಕ್ಯ ಮಾಡಿಕೊಳ್ಳಬೇಕು. ಆ ಮೂಲಕ ನಾವು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಪ್ರಸ್ತುತ ಸಮಾಜ ಸಾಮಾಜಿಕ ಪಿಡುಗುಗಳಿಂದ ಹೊರಬರಬೇಕು. ಈಗಿನ ಚಿಕ್ಕ ಮಕ್ಕಳು ಡ್ರಗ್ಸ್ ಗಳ ದಾಸರಾಗಿದ್ದು ಬೇಸರದ ಸಂಗತಿ. ನಾವೆಲ್ಲರೂ ಡ್ರಗ್ಸ್ ಮುಕ್ತ…
ಸುರತ್ಕಲ್ ಸ್ಪೋರ್ಟ್ ಕ್ಲಬ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ನಿರಂತರವಾಗಿ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡು ಕ್ರಿಯಾಶೀಲ ಸಂಘಟನೆಯಾಗಿ ಬೆಳೆದಿದೆ. ಸಂಘದ ಒಗ್ಗಟ್ಟು, ಕಾರ್ಯಸಾಧನೆ, ಕ್ರೀಡಾಶಕ್ತಿ ಇತರ ಸಂಘಗಳಿಗೆ ಮಾದರಿಯಾಗಿದೆ ಎಂದು ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದರು ಅಡಳಿತ ಮೊಕ್ತೇಸರರು ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅವರು ಸುರತ್ಕಲ್ ಸ್ಪೋರ್ಟ್ಸ್ ಆಂಡ್ ಕಲ್ಚರಲ್ ಕ್ಲಬ್ ಹಾಗೂ ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಎರಡು ದಿನದ ಹಿರಿಯರ ಕ್ರಿಕೆಟ್ ಹಬ್ಬ ಪಂದ್ಯಾಟ ಸೀಸನ್ 5 ನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ಮೊಯಿದಿನ್ ಬಾವ, ಬಿ.ಎ.ಎಸ್.ಎಪ್ ಸಂಸ್ಥೆಯ ಎಚ್ ಅರ್ ವಿಭಾಗದ ಸೀನಿಯರ್ ಮ್ಯಾನೇಜರ್ ಸಂತೋಷ್ ಪೈ, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಅಶೋಕ್ ಶೆಟ್ಟಿ ಸುರತ್ಕಲ್, ಉದ್ಯಮಿ ಅಶೋಕ್ ಶೆಟ್ಟಿ ಅರಂತಬೆಟ್ಟು, ಕಿನ್ನಿಗೋಳಿ ಪಟ್ಟಣ ಪಂಚಾಯತ್ ಅಧ್ಯಕ್ಷ ಗುರುರಾಜ್ ಮಲ್ಲಿಗೆಯಂಗಡಿ, ಸುರತ್ಕಲ್…
ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಕಾಸರಗೋಡು ತಾಲೂಕು ಸಮಿತಿ : ಕೆ ಅಜಿತ್ ಕುಮಾರ್ ರೈ ಮಾಲಾಡಿ ನೇತೃತ್ವದ ತಂಡಕ್ಕೆ ಭರ್ಜರಿ ಜಯ
ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಇದರ ಕೇಂದ್ರ ಕಾರ್ಯಕಾರಿ ಸಮಿತಿಗೆ ಕಾಸರಗೋಡು ತಾಲೂಕಿನಿಂದ 8 ಸ್ಥಾನಗಳಿಗಾಗಿ ಮೇ 07 ರಂದು ನಡೆದ ಚುನಾವಣೆಯಲ್ಲಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ನೇತೃತ್ವದ ಕಿರಣ್ ಮಾಡ, ಚಿದಾನಂದ ಆಳ್ವ, ನ್ಯಾಯವಾದಿ ಬಿ ಸುಬ್ಬಯ್ಯ ರೈ, ಮುಕ್ತಾನಂದ ರೈ, ಮೋಹನ್ ಕೆ ರೈ, ವಸಂತರಾಜ್ ಶೆಟ್ಟಿ, ಶಶಿಧರ ಶೆಟ್ಟಿ ಹಾಗೂ ಸದಾನಂದ ರೈಯವರು ಬಹುಮತದಿಂದ ಗೆದ್ದು ವಿಜಯಶಾಲಿಯಾಗಿದ್ದಾರೆ. ಕೆ ಅಜಿತ್ ಕುಮಾರ್ ರೈ ಮಾಲಾಡಿಯವರು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.















