Author: admin

ಬೆಂಗಳೂರಿನ ಯೂನಿವರ್ಸಲ್ ಕೋಚಿಂಗ್ ಸೆಂಟರ್ 25ನೇ ವಾರ್ಷಿಕ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದು, ಆ ಪ್ರಯುಕ್ತ ಜನವರಿ 24ರಂದು ಸಂಜೆ 5:00 ಗಂಟೆಗೆ ಸಂಸ್ಥಾಪಕರ ದಿನ ಕಾರ್ಯಕ್ರಮ ಹಮ್ಮಿಕೊಂಡಿದೆ. ತಾವರಕೆರೆ ಹೋಬಳಿ ಕೊಲೂರಿನ ಗುರುರಾಯನಪುರದಲ್ಲಿನ ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಂಸದ ಯದುವೀರ ಒಡೆಯರ್ ಉದ್ಘಾಟಿಸಲಿದ್ದು, ಎಮ್.ಆರ್.ಜಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ| ಕೆ ಪ್ರಕಾಶ್ ಶೆಟ್ಟಿ, ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್, ಸಿಜಿಎಸ್‌ಟಿ ಆಯುಕ್ತ ಡಾ| ಎಂ ಕೊಟ್ರಸ್ವಾಮಿ, ಅನ್ನರ್ಕುಂಗಾ ಸೊಲ್ಯೂಷನ್ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಅಶೋಕ್ ಚನ್ನೇಗೌಡ, ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಬೆಂಗಳೂರು ಸಂಸ್ಥೆಯ ಅಧ್ಯಕ್ಷ ಆರ್ ಉಪೇಂದ್ರ ಶೆಟ್ಟಿ ಭಾಗವಹಿಸಲಿದ್ದಾರೆ. ಈ ಸಂಸ್ಥಾಪಕರ ದಿನಾಚರಣೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವುದರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಸಂಸ್ಥೆಯ ಸಾಧನೆ ಮತ್ತು ಬೆಳವಣಿಗೆಯನ್ನು ಇನ್ನಷ್ಟು ಬಲಪಡಿಸುವ ಮಹತ್ವದ ವೇದಿಕೆಯಾಗಲಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ.

Read More

ಕರ್ನಾಟಕ ರಾಜ್ಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಚಾಮರಾಜನಗರ ಜಿಲ್ಲೆಯ ಡಾ| ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜನವರಿ 19 ಮತ್ತು 20 ರಂದು ನಡೆಯಿತು. ಬಾಲಕರ ವಿಭಾಗದಲ್ಲಿ 24 ಮತ್ತು ಬಾಲಕಿಯರ ವಿಭಾಗದಲ್ಲಿ 16 ತಂಡಗಳು ಭಾಗವಹಿಸಿದ್ದವು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಎರಡು ಬಾಲಕರ ಹಾಗೂ ಎರಡು ಬಾಲಕಿಯರ ತಂಡಗಳು ಸೇರಿದಂತೆ ಒಟ್ಟು 4 ತಂಡಗಳು ಪಾಲ್ಗೊಂಡಿದ್ದವು. ಲೀಗ್ ಹಾಗೂ ನಾಕೌಟ್ ಮಾದರಿ ಪಂದ್ಯಾಟದಲ್ಲಿ ಆಳ್ವಾಸ್ ಬಾಲಕ ಹಾಗೂ ಬಾಲಕಿಯರ ‘ಎ’ ತಂಡವು ಚಾಂಪಿಯನ್ಸ್ ಪಟ್ಟ ಅಲಂಕರಿಸಿದರೆ, ಆಳ್ವಾಸ್‌ನ ಬಾಲಕ ಹಾಗೂ ಬಾಲಕಿಯರ ‘ಬಿ’ ತಂಡಗಳು ರನ್ನರ್ಸ್ ಆಪ್ ಪ್ರಶಸ್ತಿಯನ್ನು ಪಡೆದು ಪ್ರಾಬಲ್ಯ ಮೆರೆದವು. ಸೆಮಿಫೈನಲ್ ನಲ್ಲಿ ಆಳ್ವಾಸ್ ಬಾಲಕರ ‘ಎ’ ತಂಡವು ಚಾಮರಾಜನಗರದ ಜಿಲ್ಲಾ ತಂಡವನ್ನು ಹಾಗೂ ಆಳ್ವಾಸ್ ‘ಬಿ’ ತಂಡವು ರಾಜರಾಜೇಶ್ವರಿ ನಗರ ತಂಡವನ್ನು ಸೋಲಿಸಿತ್ತು. ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ‘ಎ’ ತಂಡವು ಮೂಡಿಗೆರೆ ತಂಡವನ್ನು ಹಾಗೂ ಆಳ್ವಾಸ್ ‘ಬಿ’ ತಂಡವು ರಾಜರಾಜೇಶ್ವರಿ ನಗರ ತಂಡವನ್ನು ನೇರ ಸೆಟ್…

Read More

ಬಂಟ್ಸ್ ಫೋರಮ್ ಮೀರಾ ಭಾಯಂದರ್ ಜನವರಿ 24 ರಂದು ಉದಯ್ ಎಂ ಶೆಟ್ಟಿ ಮಲಾರಬೀಡು ಅವರ ಅಧ್ಯಕ್ಷತೆಯಲ್ಲಿ ಬಂಟ ಕೂಟ – 2026 ಕಾರ್ಯಕ್ರಮವು ಮೀರಾ ರೋಡ್ ಪೂರ್ವದ ಎಸ್ ಕೆ ಸ್ಟೋನ್ ಸಮೀಪ ಸೆಂಟ್ರಲ್ ಪಾರ್ಕ್ ಎಸಿ ಲಾನ್ ನಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಡಾ| ಆರ್ ಕೆ ಶೆಟ್ಟಿ ವೇದಿಕೆಯಲ್ಲಿ ಮದ್ಯಾಹ್ನ 12:00 ರಿಂದ ರಾತ್ರಿ 9:00ರ ತನಕ ನಡೆಯಲಿದೆ. ಮೀರಾಗಾಂವ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸಾಣೂರು ಸಾಂತಿಂಜ ಜನಾರ್ಧನ ಭಟ್ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವರು. ಮುಖ್ಯ ಅತಿಥಿಗಳಾಗಿ ಬಂಟರ ಸಂಘ ಮುಂಬಯಿಯ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಗುತ್ತಿನಾರ್ ರವೀಂದ್ರ ಶೆಟ್ಟಿ ಬಳ್ಕುಂಜೆ ಗುತ್ತು, ಸಾಯಿಬಾಬಾ ಆಸ್ಪತ್ರೆಯ ಸಿಎಂಡಿ ನಿಂಜೂರು ಅಂಬರೀಶ್ ಹೆಗ್ಡೆ, ಮೀರಾ ಭಾಯಂದರ್ ಹೋಟೆಲ್ಸ್ ಅಸೋಸಿಯೇಷನ್ ನ ಅಧ್ಯಕ್ಷ ರಂಜನ್ ಶೆಟ್ಟಿ ಆಗಮಿಸಲಿರುವರು. ಅತಿಥಿಗಳಾಗಿ ಹೋಟೆಲು ಉದ್ಯಮಿ ಮುಂಡಪ್ಪ ಎಸ್ ಪಯ್ಯಡೆ, ಮೀರಾ ಭಾಯಂದರ್ ನ ಬಿಜೆಪಿ…

Read More

ಬಂಟರ ಸಂಘ ಮುಂಬಯಿ ಮತ್ತು ಬಾಂಬೆ ಬಂಟ್ಸ್ ಅಸೋಸಿಯೇಶನ್ ಅಣ್ಣ ತಮ್ಮಂದಿರಂತೆ ಮತ್ತು ಮಹಿಳಾ ವಿಭಾಗವು ಅಕ್ಕ ತಂಗಿಯರoತೆ. ಈಗ ಮೊದಲಿನಂತೆ ಏನೂ ಇಲ್ಲ. ಪರಿವರ್ತನೆ ಜಗದ ನಿಯಮ ಎಂಬಂತೆ ನಾವು ಕಾಲಕ್ಕೆ ತಕ್ಕಂತೆ ನಡೆಯಬೇಕಾದುದು ನಮ್ಮ ಧರ್ಮ. ಇಂದು ಇಲ್ಲಿ ನಮ್ಮ ಮಹಿಳಾ ವಿಭಾಗದ ಶಾಂತಾ ನಾರಾಯಣ ಶೆಟ್ಟಿಯವರ ಆಯೋಜನೆಯಲ್ಲಿ ಹಳದಿ ಕುಂಕುಮ ಕಾರ್ಯಕ್ರಮವು ಬಹಳ ಸೊಗಸಾಗಿ ಪ್ರಸ್ತುತಗೊಂಡಿದೆ. ಬಂಟರ ಸಂಘ ಮುಂಬಯಿಯಿಂದ ಹೆಚ್ಚಿನ ಮಹಿಳೆಯರು ಇಂದು ಇಲ್ಲಿಗೆ ಬಂದಿದ್ದಾರೆ. ಇದಲ್ಲದೇ ನಮ್ಮ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಅರುಷಾ ಎನ್ ಶೆಟ್ಟಿಯವರಿಗೆ ನೀಡಿದ ಸನ್ಮಾನ ಅರ್ಥಪೂರ್ಣವಾಗಿದೆ. ಸಾಂಸ್ಕೃತಿಕ ವೈಭವದಂಗವಾಗಿ ನಡೆದ ‘ಮದ್ಮೆದ ಕಾಕಜಿ’ ತುಳು ನಾಟಕ, ಯಕ್ಷಗಾನ ತಾಳಮದ್ದಳೆ ಮತ್ತು ನೃತ್ಯ ವೈಭವ ಸೊಗಸಾಗಿತ್ತು. ಅಸೋಸಿಯೇಷನ್ ಗೆ ಎಲ್ಲರ ಸಹಕಾರ ನಿರಂತರವಾಗಿರಲಿ. ದೇವರು ಎಲ್ಲರನ್ನೂ ಒಳ್ಳೆಯದು ಮಾಡಲಿ ಎಂದು ಬಾಂಬೆ ಬಂಟ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಅಡ್ವೋಕೇಟ್ ಡಿ.ಕೆ ಶೆಟ್ಟಿಯವರು ಅಭಿಪ್ರಾಯಪಟ್ಟರು. ಜನವರಿ 18 ರವಿವಾರದಂದು ನವಿ ಮುಂಬಯಿ…

Read More

ಒಂದು ಸಾಮಾನ್ಯ ಮಧ್ಯಮ ವರ್ಗದ ಕುಟುಂಬದಿಂದ ಬಂದು, ಯಾರ ಸಹಾಯವೂ ಇಲ್ಲದೇ ತನ್ನ ಆತ್ಮಬಲವನ್ನೇ ಆಯುಧವನ್ನಾಗಿಸಿಕೊಂಡು ಬಿಗ್ ಬಾಸ್ ರನ್ನರ್ ಅಪ್ ಆದದ್ದು ಸಾಮಾನ್ಯ ವಿಷಯವೇ ಅಲ್ಲ. ಈ ಬಾರಿಯ ಬಿಗ್ ಬಾಸ್ ಸೀಸನ್ ನೋಡಿದಾಗ ರಕ್ಷಿತಾ ಹೊರತುಪಡಿಸಿ ಉಳಿದೆಲ್ಲಾ ಸ್ಪರ್ಧಿಗಳಿಗೆ ಸಿನಿಮಾ, ಧಾರಾವಾಹಿ, ರಿಯಾಲಿಟಿ ಶೋಗಳ ಹಿನ್ನೆಲೆ ಇತ್ತು. ಒಂದಷ್ಟು ಜನಪ್ರಿಯತೆ ಹಾಗೂ ಅಭಿಮಾನಿಗಳು ಶೋಗೆ ಬರುವ ಮೊದಲೇ ಇದ್ದರು. ಕೆಲವರಿಗೆ ‘ಗಾಡ್ ಫಾದರ್’ ಅಂತ ಹೇಳುವ ವ್ಯಕ್ತಿಗಳೂ ಇದ್ದರು. ಆದರೆ, ಇದಕ್ಕೆ ತದ್ವಿರುದ್ಧವಾಗಿದ್ದವರು ರಕ್ಷಿತಾ ಶೆಟ್ಟಿ ಮಾತ್ರ! ತುಳು ಮಾತೃಭಾಷೆ, ಓದಿದ್ದು ಹಿಂದಿ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ. ಕನ್ನಡ ಅಲ್ಪಸ್ವಲ್ಪ ಗೊತ್ತಿದ್ದ ಹುಡುಗಿ ಹಠಕ್ಕೆ ಬಿದ್ದು ಕನ್ನಡ ಕಲಿತರೂ, ಆಕೆಯ ಯೂಟ್ಯೂಬ್ ವಿಡಿಯೋಗಳಲ್ಲಿ ಮಾತನಾಡುತ್ತಿದ್ದ ಕನ್ನಡವನ್ನು ಕೇಳಿ ಹೊಗಳಿದವರಿಗಿಂತ ಬೈದವರೇ ಹೆಚ್ಚು. ಆದರೆ ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ, ಯಾವುದೇ ಫಿಲ್ಟರ್ ಇಲ್ಲದೆ, ಕನಿಷ್ಠ ಎಡಿಟಿಂಗ್ ಕೂಡಾ ಮಾಡದೆ, ಇದ್ದದ್ದನ್ನು ಇದ್ದ ಹಾಗೆ ತನ್ನ ವಿಡಿಯೋಗಳಲ್ಲಿ ತೋರಿಸುವ ಆಕೆಯ ಧೈರ್ಯ ಅಸಾಮಾನ್ಯವಾದುದು.…

Read More

ವಿಶ್ವದ ವಿವಿಧ ರಾಷ್ಟ್ರಗಳಾದ ಸ್ವಿಟ್ಜರ್ಲ್ಯಾಂಡ್, ಆಸ್ಟ್ರಿಯಾ, ಬೆಲ್ಜಿಯಂ, ಕೆನಡಾ, ಡೆನ್ಮಾರ್ಕ್, ಜರ್ಮನಿ, ನೆದರ್‌ಲ್ಯಾಂಡ್ಸ್, ನಾರ್ವೇ, ಪೋಲ್ಯಾಂಡ್, ರೊಮೇನಿಯಾ ಹಾಗೂ ಸ್ವೀಡನ್ ದೇಶಗಳಿಂದ ಆಗಮಿಸಿದ ಸುಮಾರು 25 ಮಂದಿ ವಿದೇಶಿ ರೋಟರಿ ಸದಸ್ಯ ಪ್ರವಾಸಿಗರಿಗೆ ರೋಟರಿ ಕ್ಲಬ್ ಪುತ್ತೂರು ಯುವದ ವತಿಯಿಂದ ಭಾನುವಾರ ಅದ್ದೂರಿಯ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡದ ಶಾಲು ಹೊದಿಸಿ ವಿದೇಶಿ ಅತಿಥಿಗಳನ್ನು ಗೌರವಿಸಲಾಯಿತು. ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರು ಕನ್ನಡ ಭಾಷೆ, ಅದರ ವೈಶಿಷ್ಟ್ಯತೆ ಹಾಗೂ ಸಾಂಸ್ಕೃತಿಕ ಮಹತ್ವವನ್ನು ಅತಿಥಿಗಳಿಗೆ ಪರಿಚಯಿಸಿದರು. ಕನ್ನಡ ಭಾಷೆಗೆ ವಿದೇಶಿ ಅತಿಥಿಗಳು ತೋರಿದ ಆತ್ಮೀಯ ಸ್ಪಂದನೆ ವಿಶೇಷ ಗಮನ ಸೆಳೆಯಿತು. ಎಲ್ಲಾ ವಿದೇಶಿ ಸದಸ್ಯರು ಕನ್ನಡದಲ್ಲಿ “ಎಲ್ಲರಿಗೂ ನಮಸ್ಕಾರ” ಎಂದು ಹೇಳಿದ ಕ್ಷಣ ಸಭಿಕರಿಗೆ ಅಪಾರ ಸಂತಸ ತಂದಿತು. ನಂತರ ಪುತ್ತೂರು ಮುರದಲ್ಲಿರುವ ಮಹೇಶ್ ಪ್ರಸಾದ್ ಹೋಟೆಲ್ ನಲ್ಲಿ ಕರಾವಳಿಯ ಖ್ಯಾತ ರುಚಿಕರ ಖಾದ್ಯಗಳಾದ ಬನ್ಸ್, ನೀರುಳ್ಳಿ ಬಜೆ, ನೀರ್ದೋಸೆ,…

Read More

ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 163ನೇ ಜಯಂತ್ಯೋತ್ಸವದ ಅಂಗವಾಗಿ ವಿವೇಕ ಕಾಯಕರತ್ನ ಪ್ರಶಸ್ತಿ ಪ್ರಧಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಜನವರಿ 24 ರಂದು ಶನಿವಾರ ಸಂಜೆ 6 ಗಂಟೆಗೆ ಅಳಿಯೂರಿನ ವಿಕಾಸ ನಗರದ ಶ್ರೀ ಶನೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ. ಕರಿಂಜೆ ಶ್ರೀ ಜಗದ್ಗುರು ರಾಘವೇಂದ್ರ ಪೀಠದ ಶ್ರೀ ಮುಕ್ತಾನಂದ ಶ್ರೀಗಳವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷರಾದ ಡಾ. ಎಂ ಮೋಹನ್ ಆಳ್ವ ಅವರು ಉದ್ಘಾಟಿಸಲಿದ್ದಾರೆ. ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷ ನಿಡ್ಡೋಡಿ ಚಾವಡಿಮನೆ ಜಗನ್ನಾಥ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರಿನ ನ್ಯಾಯವಾದಿ ಚಂದ್ರವರ್ಮ ಜೈನ್ ಅಳಿಯೂರು ಅವರು ವಿವೇಕಾನಂದರ ಸಂದೇಶ ನೀಡಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವಿ ಸಲ್ಲಿಸಿದ ಸದಾನಂದ ಪೂಜಾರಿ, ಅಚ್ಯುತ ಆಚಾರ್ಯ, ರವೀಂದ್ರ ಅಮೀನ್, ಆನಂದ ಸೀತಾರಾಮ ಶೆಟ್ಟಿ, ಸಂತೋಷ ಆಚಾರ್ಯ, ಲೀಲಾ ಮಡಿವಾಳ್ತಿ, ವಸಂತಿ ಶೆಟ್ಟಿ, ಚಂದ್ರಾವತಿ ಪೂಜಾರಿ, ಸುಮನ…

Read More

ಭಾರತ ಸರಕಾರ ಸಾಮ್ಯದ ಇಂಡಿಯನ್ ರೋಡ್ ಕಾಂಗ್ರೆಸ್ ಇದರ ರಸ್ತೆ ವಿಪತ್ತು ನಿರ್ವಹಣಾ ಸಮಿತಿ ತಾಂತ್ರಿಕ ಸಮಿತಿಗೆ ಸದಸ್ಯರಾಗಿ ಮುಂದಿನ ಎರಡು ವರ್ಷಗಳ ಅವಧಿಗೆ ಪುತ್ತೂರು ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕರಾದ ಡಾ| ಹರ್ಷ ಕುಮಾರ್ ರೈ ಮಾಡಾವು ಇವರನ್ನು ಆಯ್ಕೆ ಮಾಡಲಾಗಿದೆ. ರಸ್ತೆಯ ಗುಣಮಟ್ಟ ಮತ್ತು ಸುರಕ್ಷತೆಯ ಬಗ್ಗೆ ಅನ್ವೇಷಣೆ ನಡೆಸಿ ಹೊಸ ಹೊಸ ತಾಂತ್ರಿಕ ವಿಚಾರಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಅನುಷ್ಠಾನಗೊಳಿಸುವಂತೆ ಶಿಫಾರಸ್ಸು ಮಾಡುವ ಏಕೈಕ ಸ್ವತಂತ್ರ ಸಂಸ್ಥೆ ಇಂಡಿಯನ್ ರೋಡ್ ಕಾಂಗ್ರೆಸ್ ಇದೀಗ ರಸ್ತೆಗಳಲ್ಲಿ ಸಂಭವಿಸಬಹುದಾದ ವಿಪತ್ತುಗಳು, ನೆರೆ, ಭೂಕುಸಿತ, ಭೂಕಂಪ, ಅಪಘಾತಗಳು ಇತ್ಯಾದಿಗಳನ್ನು ತಡೆಗಟ್ಟುವ ಬಗ್ಗೆ ಯೋಜನೆಗಳನ್ನು ರೂಪಿಸಿ ವಿನೂತನ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲು ಮತ್ತು ಹೊಸ ಮಾರ್ಗಸೂಚಿ ನಿಯಮಾವಳಿಗಳನ್ನು ಜಾರಿಗೆ ತರಲು ಈ ಸಮಿತಿಯನ್ನು ರಚಿಸಲಾಗಿರುತ್ತದೆ.

Read More

ಪುತ್ತಿಗೆ ಮಠದ ಪರ್ಯಾಯ ಸಂದರ್ಭದಲ್ಲಿ ಹೊರೆ ಕಾಣಿಕೆ ಸಮಿತಿ ಸಂಚಾಲಕರಾಗಿ ಬೃಹತ್ ಪ್ರಮಾಣದಲ್ಲಿ ಸಾಮಾಗ್ರಿ ಸಂಗ್ರಹವನ್ನು ಯಶಸ್ವಿಯಾಗಿ ಮಾಡಿ, ಬಳಿಕ ಗೀತೋತ್ಸವ ಹಾಗೂ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ ಸಮಿತಿಯ ಸಂಚಾಲಕರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ನ್ಯಾಯವಾದಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಹಾಗೂ ಕ್ಷಮಾ ಸುಪ್ರಸಾದ್ ಶೆಟ್ಟಿ ದಂಪತಿಗಳಿಗೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಹಾಗೂ ಶ್ರೀ ಸುಶೀಂದ್ರತೀರ್ಥ ಸ್ವಾಮೀಜಿ ಅವರು ಶ್ರೀ ಕೃಷ್ಣಗೀತಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು.

Read More

ಜೇಸಿಐ ಕಾರ್ಕಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೇಸಿ ಇಂಟರ್ನ್ಯಾಷನಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಕಾರ್ಕಳ ಇಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ 2025ನೇ ಸಾಲಿನ ಅಧ್ಯಕ್ಷೆ ಶ್ವೇತಾ ಎಸ್ ಜೈನ್ ತನ್ನ ಒಂದು ವರ್ಷದ ಸಾಧನೆ ಮತ್ತು ಕಾರ್ಯಕ್ರಮಗಳ ಸಂಕ್ಷಿಪ್ತ ವರದಿಯನ್ನು ಮಂಡಿಸಿ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು. 2026 ರ ಸಾಲಿನ ನೂತನ ಅಧ್ಯಕ್ಷ ಅವಿನಾಶ್ ಶೆಟ್ಟಿಯವರಿಗೆ ನಿಕಟ ಪೂರ್ವಾಧ್ಯಕ್ಷೆ ಶ್ವೇತಾ ಎಸ್ ಜೈನ್ ಹಾಗೂ ನೂತನ ಸದಸ್ಯರಿಗೆ ಜೇಸಿ ವಲಯ 15ರ ವಲಯ ಅಧ್ಯಕ್ಷ ಸಂತೋಷ್ ಶೆಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿ ಶುಭ ಹಾರೈಸಿದರು. ಜೇಸಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚಿತ್ತರಂಜನ್ ಶೆಟ್ಟಿ ಮಾತನಾಡಿ, ನಿಕಟ ಪೂರ್ವಾಧ್ಯಕ್ಷರ ಕಾರ್ಯಕ್ರಮಗಳನ್ನು ಶ್ಲಾಘಿಸಿ, ನೂತನ ಅಧ್ಯಕ್ಷರು ಇನ್ನೂ ಉತ್ತಮ ಕೆಲಸ ಕಾರ್ಯಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು. ವಲಯ ಉಪಾಧ್ಯಕ್ಷ ಜಿತೇಶ್ ಪಿರೇರಾ, 2025ರ ಕಾರ್ಯದರ್ಶಿ ಸುಶ್ಮಿತಾ ರಾವ್, ಲೇಡಿ ಜೇಸಿ ಸಂಯೋಜಕಿ ಶಹಿನ್ ರಿಜ್ವಾನ್…

Read More