Author: admin

ಮೂಡಬಿದಿರೆ ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜಿನ ಎಂ.ಡಿ ಇನ್ ಕ್ಲಿನಿಕಲ್ ನ್ಯಾಚುರೋಪತಿ ವಿಭಾಗದ ವಿದ್ಯಾರ್ಥಿನಿ ಡಾ. ಗ್ರೀಷ್ಮಾ ವಿವೇಕ್ ಆಳ್ವ ಅವರಿಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ 2022 -25 ನೇ ಸಾಲಿನ ಸ್ನಾತಕೋತ್ತರ ಪರೀಕ್ಷೆಯಲ್ಲಿ ದ್ವಿತೀಯ ರ‌್ಯಾಂಕ್ ಲಭಿಸಿದೆ. ಮೂಲತಃ ಪುತ್ತೂರು ತಾಲೂಕಿನ ಬಾಲ್ಯೊಟ್ಟು ಗುತ್ತು ಶ್ರೀಮತಿ ಶಶಿಕಲ ರೈ ಕುಕ್ಕುವಳ್ಳಿ ಮತ್ತು ದಿ| ಮಲಾರ ಬೀಡು ಗಣೇಶ್ ರೈ ಪಲ್ಲಮಜಲು ಅವರ ಪುತ್ರಿಯಾಗಿರುವ ಡಾ. ಗ್ರೀಷ್ಮಾ ಮೂಡಬಿದ್ರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರ ಸೊಸೆ, ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವರ ಧರ್ಮಪತ್ನಿ ಹಾಗೂ ಯಕ್ಷಗಾನ ವಿದ್ವಾಂಸ, ಸಾಹಿತಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ಸೋದರ ಸೊಸೆ. ವೃತ್ತಿಯಲ್ಲಿ ನ್ಯಾಚುರೋಪತಿ ವೈದ್ಯರಾಗಿರುವ ಡಾ. ಗ್ರೀಷ್ಮಾ ಪುತ್ತೂರು ತೆಂಕಿಲದ ವಿವೇಕಾನಂದ ಶಾಲೆಯಲ್ಲಿ ಆರಂಭಿಕ ಶಿಕ್ಷಣ ಪೂರೈಸಿ ಮೂಡಬಿದ್ರಿ ಆಳ್ವಾಸ್ ನ್ಯಾಚುರೋಪತಿ ಕಾಲೇಜಿನಲ್ಲಿ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ನಲ್ಲಿ…

Read More

ಕರ್ನಾಟಕ ಪ್ರೊಫೆಷನಲ್ ಸಿವಿಲ್ ಇಂಜಿನಿಯರ್ಸ್ ಸ್ಟೀರಿಂಗ್ ಕನ್ಸೋರ್ಟಿಯಂ (ಕೆಪಿಸಿಇ – ಎಸ್.ಸಿ) ಸಂಸ್ಥೆಯ 2026-28 ರ ಅವಧಿಯ ಚುನಾವಣೆ ಇತ್ತೀಚೆಗೆ ನಡೆದಿದ್ದು, ರಾಜ್ಯದ ನಾನಾ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಮೂಲ್ಕಿ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಅಧ್ಯಕ್ಷ ಹಾಗೂ ಮೂಲ್ಕಿ ಶಾರದಾ ಗ್ರೂಪ್ ನ ಸಿಎಂಡಿ ಮೂಲ್ಕಿ ಜೀವನ್ ಕೆ ಶೆಟ್ಟಿ ಅವರು ಮೈಸೂರು ರೆವೆನ್ಯೂ ಡಿವಿಜನ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಂಸ್ಥೆಯು ರಾಜ್ಯದಲ್ಲಿ ಸಿವಿಲ್ ಇಂಜಿನಿಯರ್ ಗಳ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮಾರ್ಗದರ್ಶನ ನೀಡುವ ಪ್ರಮುಖ ವೇದಿಕೆ ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ವೃತ್ತಿಪರ ಮಾನದಂಡಗಳನ್ನು ಉತ್ತೇಜಿಸುವುದು, ಇಂಜಿನಿಯರ್ ಗಳ ನೋಂದಣಿ ಮತ್ತು ಜವಾಬ್ದಾರಿತ್ವವನ್ನು ವ್ಯವಸ್ಥಿತಗೊಳಿಸುವುದು, ನೈತಿಕ ಮೌಲ್ಯಗಳು ಮತ್ತು ಗುಣಮಟ್ಟದ ನಿರ್ಮಾಣವನ್ನು ಉತ್ತೇಜಿಸುವುದು, ಸರಕಾರ ಶಿಕ್ಷಣ ಸಂಸ್ಥೆಗಳು ಮತ್ತು ಇಂಜಿನಿಯರ್ ಗಳ ನಡುವೆ ಸಮನ್ವಯ ಸಾಧಿಸುವುದು, ದೇಶದಲ್ಲಿ ಸಿವಿಲ್ ಇಂಜಿನಿಯರ್ ಕೌನ್ಸಿಲ್ ರಚನೆ ಮಾಡುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು, ದೇಶದಲ್ಲಿ ಸಿವಿಲ್ ಪಠ್ಯ ವಿಷಯದಲ್ಲಿ ಪರಿವರ್ತನೆ ಮಾಡುವಲ್ಲಿ ಪ್ರಯತ್ನ ಮಾಡುವುದು,…

Read More

ರಾಷ್ಟ್ರಪ್ರಶಸ್ತಿ ಆಯ್ಕೆಯ ಹಿನ್ನೆಲೆಯಲ್ಲಿ ಬೆಳ್ಳೆ ಗ್ರಾಮ ಪಂಚಾಯತ್ ನ ಮೌಲ್ಯಮಾಪನದ ಅಂಗವಾಗಿ ಆಗಮಿಸಿದ್ದ ಕೇಂದ್ರ ಸರಕಾರದ ನಿಯೋಗವು ಕುಂತಳನಗರದಲ್ಲಿರುವ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಗೆ ಭೇಟಿ ನೀಡಿ ಸೆಂಟರ್ ನಲ್ಲಿ ನಡೆಯುತ್ತಿರುವ ನಾನಾ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಮತ್ತು ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿತು. ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ ಶೆಟ್ಟಿ ಅವರು ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನ ಪ್ರಮುಖ ಕಾರ್ಯಕ್ರಮಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಪದವಿ, ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಮತ್ತು ಐಟಿಐಗಳ 1,450 ವಿದ್ಯಾರ್ಥಿಗಳಿಗೆ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ, ಪಳ್ಳಿ ಬೆಳ್ಳೆ ಮಣಿಪುರ ಮತ್ತು ಅಲೆವೂರು ಗ್ರಾಮ ಪಂಚಾಯಿತಿಗಳಲ್ಲಿ 1450 ಮಹಿಳೆಯರಿಗೆ ಮಹಿಳಾ ಸಬಲೀಕರಣ ನಿಮಿತ್ತ ಉದ್ಯಮ ಅಭಿವೃದ್ಧಿ ಕಾರ್ಯಾಗಾರ, ಡಿಜಿಟಲ್ ಸಾಕ್ಷರತೆ ಅಂಗವಾಗಿ 400 ಮಂದಿಗೆ ಆಲ್ ಕಾರ್ಗೋ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಒಂದು ತಿಂಗಳ ಮೂಲ ಮತ್ತು…

Read More

ಥಾಣೆ ಬಂಟ್ಸ್ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಅಸೋಸಿಯೇಷನ್ ಆಫ್ ಬಂಟ್ಸ್ ಡಾಕ್ಟರ್ಸ್ ಸಹಯೋಗದಲ್ಲಿ ಏಪ್ರಿಲ್ 19 ರಂದು ಭಾನುವಾರ ಥಾಣೆ ಹರಿನಿವಾಸ್ ಬಳಿಯ ಥಾಣೆ ಬಂಟ್ಸ್ ಕಚೇರಿಯಲ್ಲಿ ಬೆಳಿಗ್ಗೆ 9.30 ರಿಂದ ಅಪರಾಹ್ನ 3 ಗಂಟೆಯವರೆಗೆ ನುರಿತ ವೈದ್ಯರ ತಂಡದಿಂದ ಬೃಹತ್‌ ರಕ್ತದಾನ ಶಿಬಿರವು ನಡೆಯಲಿದೆ. ಈ ರಕ್ತದಾನ ಶಿಬಿರದಲ್ಲಿ ಬಂಟ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಥಾಣೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಅಶೋಕ್ ಎಂ ಶೆಟ್ಟಿ, ಅಸೋಸಿಯೇಷನ್ ಆಫ್ ಬಂಟ್ಸ್ ಡಾಕ್ಟರ್ಸ್ ಅಧ್ಯಕ್ಷ ಡಾ| ಸತ್ಯಪ್ರಕಾಶ್ ಶೆಟ್ಟಿ, ಥಾಣೆ ಬಂಟ್ಸ್ ಅಸೋಸಿಯೇಷನ್ ವೈದ್ಯಕೀಯ ವಿಭಾಗದ ಕಾರ್ಯಾಧ್ಯಕ್ಷ ವಿನಯ್ ಪಿ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ರಿನೀತ್ ಆರ್ ಶೆಟ್ಟಿ ಹಾಗೂ ಎಲ್ಲಾ ಪದಾಧಿಕಾರಿಗಳು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More

ಎಂ.ಆರ್.ಜಿ ಸಮೂಹ ಸಂಸ್ಥೆಯ ಸಂಸ್ಥಾಪಕ ಡಾ| ಕೆ ಪ್ರಕಾಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಮಗ್ರ ಪುನರ್ ನಿರ್ಮಾಣಗೊಂಡು ಹೊಸ ರೂಪವನ್ನು ಹೊಂದಲಿರುವ ಪಡುಬಿದ್ರೆಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನಕ್ಕೆ ಬಹುರಾಷ್ಟ್ರೀಯ ಸಂಸ್ಥೆಯಾದ ಆಸ್ಪೆನ್ ಇನ್ಫ್ರಾದಿಂದ 25 ಲಕ್ಷ ರೂಪಾಯಿಗಳ ದೇಣಿಗೆ ಸಮರ್ಪಿತವಾಯಿತು. ಜೀರ್ಣೋದ್ಧಾರ ಹಾಗೂ ಪುನರ್ ನಿರ್ಮಾಣ ಕಾರ್ಯಗಳು ಅಂತಿಮ ಹಂತ ತಲುಪಿರುವ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವವು ಏಪ್ರಿಲ್ 23ರಿಂದ ಮೇ 4ರ ವರೆಗೆ ನಡೆಯಲಿದ್ದು, ಈ ಮಹಾನ್ ಕಾರ್ಯಗಳಿಗೆ ನೆರವು ನೀಡುವ ನೆಟ್ಟಿನಲ್ಲಿ ಪಡುಬಿದ್ರಿಯ ವಿಶೇಷ ವಿತ್ತ ವಲಯದಲ್ಲಿನ ಆಸ್ಪೆನ್ ಇನ್ಫ್ರಾ ಕಂಪನಿಯ 25 ಲಕ್ಷ ರೂಪಾಯಿಗಳ ದೇಣಿಗೆಯನ್ನು ಪಡುಬಿದ್ರಿ ಶ್ರೀ ದೇಗುಳದ ಅನುವಂಶಿಕ ಮೊಕ್ತೇಸರ ಪಡುಬಿದ್ರಿ ಪೇಟೆಮನೆ ಭವಾನಿ ಶಂಕರ ಹೆಗ್ಡೆ ಅವರಿಗೆ ಕಂಪನಿಯ ಹಿರಿಯ ಮಹಾ ಪ್ರಬಂಧಕ ಹಾಗೂ ಮುಖ್ಯಸ್ಥ ಅಶೋಕ್ ಶೆಟ್ಟಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವ್ಯಾಸ ಆಚಾರ್ಯ, ಕೇಶವ ತಂತ್ರಿ, ನವೀನ್ ಚಂದ್ರ ಜೆ ಶೆಟ್ಟಿ, ಸುರೇಶ್ ಶೆಟ್ಟಿ ಗುಂಡ್ಲಾಡಿ,…

Read More

ಮುಂಬಯಿಯ ಪ್ರತಿಷ್ಠಿತ ಬಂಟ ಬಾಂಧವರ ಸಂಸ್ಢೆಗಳಲ್ಲಿ ಒಂದಾದ ಬಾಂಬೆ ಬಂಟ್ಸ್ ಅಸೋಸಿಯೇಷನ್ ಇದರ ವಲಯ ಸಮಿತಿಯ ಉದ್ಘಾಟನಾ ಸಮಾರಂಭ ಅಸೋಸಿಯೇಶನ್ ನ ಅಧ್ಯಕ್ಷ ನ್ಯಾಯವಾದಿ ಡಿ.ಕೆ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 12 ರವಿವಾರದಂದು ಅಪರಾಹ್ನ 2.30ಕ್ಕೆ ಸರಿಯಾಗಿ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹ ಬಂಟ್ಸ್ ಸೆಂಟರ್ ಜೂಯಿನಗರ ಇಲ್ಲಿ ಬಹಳ ಸಂಭ್ರಮ ಹಾಗೂ ವಿಜೃಂಭಣೆಯಿಂದ ವೈವಿದ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು. ಅಧ್ಯಕ್ಷರಾದ ನ್ಯಾಯವಾದಿ ಡಿ.ಕೆ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರೆ, ಸಭಾ ಕಾರ್ಯಕ್ರಮದಲ್ಲಿ ನವಿಮುಂಬಯಿ ಮಹಾನಗರ ಪಾಲಿಕೆಯ ಮಹಾ ಪೌರರಾದ ಶ್ರೀಮತಿ ಸುಜಾತ ಸೂರಜ್ ಪಾಟೀಲ್ ಇವರು ಕಾರ್ಯಕ್ರಮದ ಉದ್ಘಾಟಕರಾಗಿ ಭಾಗವಹಿಸಿದರು. ಮಾಜಿ ಅಧ್ಯಕ್ಷ ಜಯರಾಮ ಎಸ್ ಮಲ್ಲಿ ಮುಖ್ಯ ಅತಿಥಿಯಾಗಿ, ಮುಲುಂಡ್ ಬಂಟ್ಸ್ ಅಧ್ಯಕ್ಷ ಸಿ.ಎ ಕರುಣಾಕರ್ ಶೆಟ್ಟಿ ಹಾಗೂ ಥಾಣೆ ಬಂಟ್ಸ್ ಅಧ್ಯಕ್ಷ ಅಶೋಕ್‌ ಎಮ್ ಶೆಟ್ಟಿ ಗೌರವ ಅತಿಥಿಗಳಾಗಿ ಆಗಮಿಸಿದರು. ಬಾಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ನ್ಯಾಯವಾದಿ ಡಿ.ಕೆ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಮತ್ತು ಮಾರ್ಗದರ್ಶನದಲ್ಲಿ ಹಾಗೂ ವಲಯದ ಕಾರ್ಯಾಧ್ಯಕ್ಷರುಗಳಾದ…

Read More

ಕಲ್ಲು, ಮಣ್ಣು, ಮರ ಹೀಗೆ ಪ್ರಕೃತಿಯೆ ದೇವರೆಂದು ಆರಾಧನೆ ಮಾಡಲು ಜಗತ್ತಿಗೆ ತೋರಿಸಿಕೊಟ್ಟವರು ತುಳುನಾಡಿನ ಹಿರಿಯರು ಎಂದು ತುಳು ಜಾನಪದ ವಿದ್ಯಾರ್ಥಿ ವಿಜೇತ್ ಎಂ ಮಂಜನಾಡಿ ನುಡಿದರು. ಅವರು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ “ಅಯೋಧ್ಯ” ಚೇಳ್ಯಾರುಗುತ್ತುವಿನಲ್ಲಿ ನಡೆದ ಯುಗಾದಿ ಭಾವ ಗಾನ ಯಾನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ತುಳುನಾಡಿನಲ್ಲಿ ಪ್ರಕೃತಿ, ದೈವ, ದೇವರ ಮೇಲಿನ ನಂಬಿಕೆ ಅಪಾರ. ಇದು ಇಲ್ಲಿನ ಶಕ್ತಿ ಎಂದರು. ಯುಗಾದಿ ಎಂಬುದು ನಮ್ಮ ತುಳುವರ ವರ್ಷದ ಆರಂಭ ಹಿಂದಿನ ಕಾಲದಲ್ಲಿ ಯುಗಾದಿಯ ಬಿಸು ಹಬ್ಬವನ್ನು ವಿಶೇಷ ರೀತಿಯಲ್ಲಿ ಅಚರಿಸಲಾಗುತ್ತಿತ್ತು ಎಂದರು. ಕಾರ್ಯಕ್ರಮವನ್ನು ಹಿರಿಯ ಜಾನಪದ ವಿದ್ವಾಂಸರಾದ ಡಾ. ವೈ‌. ಎನ್ ಶೆಟ್ಟಿ ಉದ್ಘಾಟಿಸಿದರು. ವೇದಿಕೆಯಲ್ಲಿ ಅ.ಭಾ.ಸಾ.ಪ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶೈಲೇಶ್, ಜಿಲ್ಲಾ ಸಮಿತಿ ಸಂಚಾಲಕ ಸುಂದರ ಶೆಟ್ಟಿ ಇಳಂತಿಲ, ದಿವಾಕರ ಸಾಮಾನಿ ಚೇಳ್ಯಾರುಗುತ್ತು ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅ.ಭಾ.ಸಾ.ಪ ದಕ್ಷಿಣ ಕನ್ನಡ ಜಿಲ್ಲಾ…

Read More

ಇತ್ತೀಚೆಗೆ ನಡೆದ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ರೋಟರಿ ಕ್ಲಬ್ ಕಾರ್ಕಳ ಸದಸ್ಯರ ಮಕ್ಕಳನ್ನು ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೋಟೇರಿಯನ್ ಡಾ. ಪ್ರಭಾ ಹಾಗೂ ರೋಟೇರಿಯನ್ ನಿರಂಜನ್ ಜೈನ್ ಅವರ ಪುತ್ರ ಆಶಯ್ ಜೈನ್ ಅವರು 98.83% ಅಂಕಗಳೊಂದಿಗೆ 6ನೇ ರಾಂಕ್ ಪಡೆದು ವಿಶೇಷ ಸಾಧನೆ ಮಾಡಿದ್ದಾರೆ. ಹಾಗೆಯೇ ರೋಟೇರಿಯನ್ ಶ್ರೀಮತಿ ಪ್ರೀತಿ ಶೆಟ್ಟಿ ಮತ್ತು ರೋಟೇರಿಯನ್ ದಿವಾಕರ್ ಶೆಟ್ಟಿ ಅವರ ಪುತ್ರಿ ಶರಧಿ ಶೆಟ್ಟಿ ಅವರು 98.33% ಅಂಕಗಳೊಂದಿಗೆ 10ನೇ ರಾಂಕ್ ಪಡೆದು ವಿಶೇಷ ಸಾಧನೆ ಮಾಡಿದ್ದಾರೆ. ಶ್ರೀಮತಿ ಅಶ್ವಿನಿ ಮತ್ತು ರೋಟೇರಿಯನ್ ವೇಣುಗೋಪಾಲ್ ಅವರ ಪುತ್ರ ಶ್ರೀವತ್ಸ ವಿ ಅವರು 94% ಅಂಕಗಳನ್ನು ಪಡೆದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಸಾಧಕರನ್ನು ರೋಟರಿ ಕ್ಲಬ್ ಕಾರ್ಕಳ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಹಾಗೂ ಸದಸ್ಯರು ಅಭಿನಂದಿಸಿ, ಭವಿಷ್ಯದಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಹಾರೈಸಿದರು. ಕಾರ್ಯಕ್ರಮದಲ್ಲಿ ರೋಟರಿ ಸದಸ್ಯರು, ಪೋಷಕರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Read More

ಜ್ಞಾನಸುಧಾದಂತಹ ಶ್ರೇಷ್ಠ ಶಿಕ್ಷಣ ಸಂಸ್ಥೆಗಳನ್ನು ಹುಟ್ಟು ಹಾಕಿ ಇದೀಗ ತನ್ನೂರಿನ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವ ಮಹತ್ಕಾರ್ಯಕ್ಕೆ ಮುಂದಾಗಿರುವುದು ಶ್ರೇಷ್ಠ ಕಾರ್ಯವೆಂದು ಮಾಜಿ ಮುಖ್ಯಮಂತ್ರಿ ಡಾ| ಎಂ ವೀರಪ್ಪ ಮೊಯಿಲಿ ಹೇಳಿದರು. ಅವರು ಏಪ್ರಿಲ್ 14 ರಂದು ಅಜೆಕಾರು ಜ್ಞಾನಸುಧಾ ಪಿ.ಯು ಕಾಲೇಜು ಲೋಕಾರ್ಪಣೆಗೊಳಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತರಾಗದೆ ಜ್ಞಾನ ವಿಜ್ಞಾನದ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಜ್ಞಾನಸುಧಾ ಶಿಕ್ಷಣ ಸಂಸ್ಥೆ ಕ್ರಾಂತಿಯನ್ನೇ ಸೃಷ್ಟಿಸಿದೆ. ಇಲ್ಲಿನ ವಿದ್ಯಾರ್ಥಿಗಳು ಸಾಧನೆ ತೋರಿ ಕೇವಲ ರಾಜ್ಯ, ದೇಶಕ್ಕೆ ಸೀಮಿತವಾಗದೇ ಇಡೀ ಜಗತ್ತಿಗೆ ಜ್ಞಾನಸುಧಾದ ಸುಗಂಧವನ್ನು ಪಸರಿಸಿದ್ದಾರೆ. ಇದು ಕಾರ್ಕಳಕ್ಕೆ ಹೆಮ್ಮೆ. ಸರಿಯಾದ ಅವಕಾಶ ಸಿಕ್ಕರೆ ಪ್ರತಿಯೊಬ್ಬ ಮಗುವೂ ಬುದ್ಧಿವಂತನಾಗಿ ಬೆಳೆಯಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಸಮಾಜದಿಂದ ಆತ್ಮವಿಶ್ವಾಸ ತುಂಬುವ ಕೆಲಸವಾಗಬೇಕು ಎಂದು ಮೊಯಿಲಿಯವರು ಹೇಳಿದರು. ಗಣಿತದಲ್ಲಿ ಸಂಶೋಧನೆ ಮಾಡುವ ಹಂಬಲ ವ್ಯಕ್ತಪಡಿಸಿದ ಜ್ಞಾನಸುಧಾದ ವಿದ್ಯಾರ್ಥಿಯನ್ನು ಮೊಯಿಲಿ ಪ್ರಶಂಸಿಸಿದರು. ಇಂಜಿನಿಯರಿಂಗ್‌ನಂತಹ ಸಾಂಪ್ರದಾಯಿಕ ವೃತ್ತಿಗಳ ಆಚೆಗೂ ಸಂಶೋಧನಾ ಕ್ಷೇತ್ರದಲ್ಲಿ ಮೇರು ಸಾಧನೆ ಮಾಡುವಂತಹ ವೇದಿಕೆಯನ್ನು…

Read More

ದೀಕ್ಷಿತ್ ರೈಯವರ ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಪುತ್ತೂರಿನ ಅಕಾಂಕ್ಷಾ ಚಾರಿಟೇಬಲ್ ಟ್ರಸ್ಟ್‌ ಹಾಗೂ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್‌ ಸಹಯೋಗದಲ್ಲಿ ಉಡುಪಿ ಜಿಲ್ಲೆಯ ಆಯ್ದ ಕನ್ನಡ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ತರಬೇತಿ ತರಗತಿ ನಡೆಯಲಿದೆ ಎಂದು ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಸ್ಪೋಕನ್‌ ಇಂಗ್ಲಿಷ್ ಸಶಕ್ತೀಕರಣ ಕಾರ್ಯಕ್ರಮ ಒಪ್ಪಂದ ಅನ್ವಯ ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಸಂಸ್ಥೆಯು ಸಿ.ಎಸ್.ಆರ್ ಅನ್ವಯ ಅಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ಹಾಗೂ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಒಂದು ವರ್ಷದ ಸ್ಪೋಕನ್ ಇಂಗ್ಲಿಷ್ ಸಶಕ್ತೀಕರಣ ಕಾರ್ಯಕ್ರಮ ಜಾರಿಗೆ ತರಲು ಪರಸ್ಪರ ಒಪ್ಪಂದ ಮಾಡಿಕೊಂಡಿದೆ. ಈ ಉಪಕ್ರಮವು ಉಡುಪಿ ಜಿಲ್ಲೆಯಾದ್ಯಂತ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಗುರುತಿಸಿದ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಇಂಗ್ಲಿಷ್ ಸಂವಹನ ಕೌಶಲ್ಯ ಒದಗಿಸುವ ಉದ್ದೇಶ ಹೊಂದಿದೆ. ಈ ಕಾರ್ಯಕ್ರಮವು 2026ರ…

Read More