Author: admin
ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ 29ನೇ ವಾರ್ಷಿಕ ಮಹಾಸಭೆ ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಂಟ್ಸ್ ಹಾಸ್ಟೆಲ್ ಬಳಿಯ ಬಂಟರ ಯಾನೆ ನಾಡವರ ಮಾತೃ ಸಂಘದ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು, “ಸುಸಂಸ್ಕೃತ ಸಮಾಜಕ್ಕೆ ಇನ್ನೊಂದು ಹೆಸರೇ ನಮ್ಮ ಬಂಟ ಸಮಾಜ. ಲಕ್ಷ್ಮಿ, ಜ್ಞಾನ ಶಕ್ತಿ, ಕ್ರಿಯಾ ಶಕ್ತಿ ಎಲ್ಲವೂ ಒಗ್ಗೂಡಿದಾಗ ಸಮಾಜದ ಶ್ರೇಯಸ್ಸು ಸಾಧ್ಯ. ಬಂಟ ಸಮಾಜಕ್ಕೆ ರಾಜ್ಯವನ್ನು ಆಳುವ ಸಾಮರ್ಥ್ಯವಿದೆ. ನಮ್ಮ ಬಂಟರು ವಿಶ್ವದೆಲ್ಲೆಡೆ ಇದ್ದಾರೆ. ಅವರೆಲ್ಲಾ ಒಗ್ಗೂಡಿದರೆ ರಾಷ್ಟ್ರ ಸುಭದ್ರವಾಗುತ್ತದೆ“ ಎಂದರು. ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಮಾತಾಡಿ, “ಜಿಲ್ಲೆಯ ಬೇರೆಲ್ಲಾ ಸಂಘಗಳಿಗೆ ಮಾದರಿಯಾಗಿ ನಮ್ಮ ಜಿಲ್ಲೆಗೆ ಗೌರವ ತಂದ ಸಂಘ ಏನಾದರೂ ಇದ್ದರೆ ಅದು ಬಂಟರ ಸಂಘ. ಬಂಟ ಸಮಾಜದ ಜೊತೆಗೆ ಎಲ್ಲಾ ಸಮಾಜವನ್ನು ಜೊತೆಗೆ ಕೊಂಡೊಯ್ಯುವ ತಾಕತ್ತು ಈ ಸಂಘಕ್ಕಿದೆ. ಭಿನ್ನಾಭಿಪ್ರಾಯ ಇದ್ದಾಗ ಎಲ್ಲಾ…
ಕುಂದಾಪುರ ತಾಲೂಕು ಯುವ ಬಂಟರ ಸಂಘದ ನೂತನ ಆಡಳಿತ ಕಚೇರಿ ಉದ್ಘಾಟನೆ ನವೆಂಬರ್ 15ರ ಶನಿವಾರ ಬೆಳಿಗ್ಗೆ 10:00 ಗಂಟೆಗೆ ಆರ್ ಎನ್ ಶೆಟ್ಟಿ ಸಭಾಂಗಣದ ಎರಡನೇ ಮಹಡಿಯಲ್ಲಿ ಸಂಘದ ಮಹಾಪೋಷಕರಾದ ಗಿಳಿಯಾರು ಉದಯ್ ಕುಮಾರ್ ಹೆಗ್ಡೆಯವರು ರಿಬ್ಬನ್ ಕತ್ತರಿಸುವ ಮೂಲಕ ಕಚೇರಿಯನ್ನು ಉದ್ಘಾಟನೆ ಮಾಡಿದರು. ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು ಅಧ್ಯಕ್ಷತೆ ವಹಿಸಿದ್ದರು. ಸಂಘದ ಗೌರವ ಸಲಹೆಗಾರರು, ಬಂಟರ ಯಾನೆ ನಾಡವರ ಸಂಘದ ಮಾಜಿ ಅಧ್ಯಕ್ಷರಾದ ಬಿ ಅರುಣ್ ಕುಮಾರ್ ಶೆಟ್ಟಿ ದೀಪವನ್ನು ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಸಂಚಾಲಕರಾದ ಆವರ್ಸೆ ಸುಧಾಕರ ಶೆಟ್ಟಿ, ಸಂಘದ ಪೋಷಕ ಸದಸ್ಯರಾದ ಸಟ್ಟಾಡಿ ವಿಜಯ್ ಶೆಟ್ಟಿ, ಸಮತಾ ಮೋಟರ್ಸ್ ಮಾಲೀಕರಾದ ಜಡ್ಡಾಡಿ ವಿಜಯ ಶೆಟ್ಟಿ, ಪ್ರಥಮ ದರ್ಜೆಯ ಗುತ್ತಿಗೆದಾರರಾದ ಯಡಾಡಿ ಮತ್ಯಾಡಿ ಅರುಣ್ ಕುಮಾರ್ ಹೆಗ್ಡೆ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಭಾಪತಿ ಜಯಕರ ಶೆಟ್ಟಿ, ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ…
ಜಗತ್ತಿನ ಯಾವ ವೃತ್ತಿಯಲ್ಲೂ ‘ಕಡಿಮೆ ಶ್ರಮ ದೀರ್ಘ ಫಲ’ ಎಂಬ ಸಮೀಕರಣವಿಲ್ಲ. ಆದರೆ ಕೃಷಿಯಲ್ಲಿ ಮಾತ್ರ ಎರಡು ಮೂರು ತಿಂಗಳ ಶ್ರಮವೇ ಹನ್ನೆರಡು ತಿಂಗಳ ಜೀವನಕ್ಕೆ ಸಾಕಾಗುತ್ತದೆ ಎಂದು ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ನುಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನೂತನವಾಗಿ ಪ್ರಾರಂಭಿಸಲಾದ ಆಳ್ವಾಸ್ ಇನ್ಸ್ಟಿಟ್ಯೂಟ್ ಅಗ್ರಿಕಲ್ಚರಲ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ ಕಾಲೇಜನ್ನು ಉದ್ಘಾಟಿಸಿ ಮಾತನಾಡಿದರು. ಬೇರೆ ವೃತ್ತಿಗಳಲ್ಲಿ ಹೂಡಿಕೆಯಷ್ಟೇ ಅಪಾಯವೂ ಇರುತ್ತದೆ. ಆದರೆ ಕೃಷಿಯಲ್ಲಿ ಪ್ರಕೃತಿಯೊಡನೆ ತಕ್ಕಮಟ್ಟಿನ ಜಾಗರೂಕತೆ ಮತ್ತು ಸುಧಾರಿತ ವಿಧಾನಗಳು ಇದ್ದರೆ ನಷ್ಟಕ್ಕಿಂತ ಲಾಭವೇ ಹೆಚ್ಚು. ಇಂದು ಭಾರತ ಕೃಷಿಯ ಮೂಲಕ ದೇಶದ ಜಿಡಿಪಿಗೆ ಸುಮಾರು 18% ಕೊಡುಗೆಯನ್ನು ನೀಡುತ್ತಿದೆ. ಈ ಕೊಡುಗೆ 25–30%ಕ್ಕೆ ಏರಿದರೆ, ಭಾರತ ಕೇವಲ ಅಭಿವೃದ್ಧಿಶೀಲ ರಾಷ್ಟ್ರವಲ್ಲ, ವಿಶ್ವದ ನಂ.1 ಆರ್ಥಿಕ ಶಕ್ತಿಯಾಗುವ ಸಾಮರ್ಥ್ಯವನ್ನು ಸಾಧಿಸುತ್ತದೆ. ಕೃಷಿಯ ಬಲವರ್ಧನೆಯೇ ಭಾರತದ ಭವಿಷ್ಯ ಬಲಿಷ್ಠವಾಗುವ ಮೂಲ. ಮೋದಿಯವರ ಆಡಳಿತದಲ್ಲಿ ಕೃಷಿ ವಲಯವನ್ನು ಆಧುನಿಕ, ಲಾಭದಾಯಕ ಮತ್ತು ಸ್ಪರ್ಧಾತ್ಮಕಗೊಳಿಸುವ ಹಲವು ಮಹತ್ತರ ಕ್ರಮಗಳು…
ತಾಲೂಕು, ಜಿಲ್ಲೆ, ರಾಜ್ಯ ಹೀಗೆ ಒಂದಲ್ಲ ಒಟ್ಟು ಮೂರು ಹಂತದ ರಾಜ್ಯೋತ್ಸವ ಪ್ರಶಸ್ತಿಗೆ ಹತ್ತಾರು ಬಾರಿ ಅರ್ಜಿ ಹಾಕಿ ಹಾಕಿ ಹೈರಾಣಗೊಂಡ ನಡುವಯಸ್ಸಿನ ‘ಅಸಾಧಾರಣ ಸಾಧಕ’ರೊಬ್ಬರನ್ನು ಪ್ರಯಾಣದುದ್ದ ಪಕ್ಕದ ಸೀಟಲ್ಲಿ ಭೇಟಿಯಾಗುವ ಪ್ರಸಂಗವೊಂದು ಒದಗಿತು. ಯಾವುದೇ ಸಂಕೋಚ ನಾಚಿಕೆಯಿಲ್ಲದೆ, “ತಪ್ಪು ಸರ್ಕಾರದಲ್ಲ, ನನ್ನ ಅರ್ಜಿಯದ್ದೇ ಇರಬೇಕು” ಎಂದು ಅಳು ನುಂಗಿದ ಮುಖವಾಡದೊಂದಿಗೆ, “ಮುಂದಿನ ಸಲ ಅರ್ಜಿಗೊಮ್ಮೆ ನೀವು ಕಣ್ಣಾಡಿಸಬೇಕು” ಎಂದಾಗ ಸಹಜವಾಗಿಯೆ ನಾನು ಗಲಿಬಿಲಿಗೊಂಡೆ. ಸಮಾಜಕ್ಕೆ ಅವರು ಮಾಡಿದ ಸೇವೆಗಳೆಂದರೆ ಒಂದಷ್ಟು ಶಾಲಾ ಮಕ್ಕಳಿಗೆ ಫೀಸು ತುಂಬಿಸಿದದ್ದು, ಇವೆಲ್ಲವೂ ಸಂದೇಹವಿಲ್ಲದ ಸಹಕಾರವೇ. ಆದರೆ ಆ ಸತ್ಯದ ಮೇಲೆ ಒಣಮಳೆ ಸುರಿಸುತ್ತಿದ್ದ ಅವರ ಮತ್ತೊಂದು ನಿಜ ಈಗ ನನ್ನ ಕಿವಿಗೆ ಬಡಿದುಕೊಂಡಿತು. ಕಳೆದ ಆರೇಳು ವರ್ಷಗಳಿಂದ ಅವರ ಉದ್ಯಮ, ಗಳಿಕೆ, ಜನಪ್ರೀತಿ ಎಲ್ಲಕ್ಕಿಂತಲೂ ಹೆಚ್ಚಾಗಿ ಅವರೊಳಗಡೆ ಸಮಾನಾಂತರವಾಗಿ ಬೆಳೆಯುತ್ತಿದ್ದದ್ದು ‘ಪ್ರಶಸ್ತಿ ಭಾವನೆ’ ಎಂಬ ಒಂದು ಹೊಸಬೆಳೆ. ಸುಮಾರು ಮೂರು ದಶಕಗಳ ಹಿಂದಿನ ಒಂದು ಘಟನೆಯನ್ನು ನಾನು ಹೇಳಲೇಬೇಕು. ಕರಾವಳಿ ಕರ್ನಾಟಕದ ಪ್ರಸಿದ್ಧ ಶೈಕ್ಷಣಿಕ…
ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿ ವೇದಿಕೆ ‘ಅಭಿವ್ಯಕ್ತಿ’ಯ 2025ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಹಾಗೂ ಖ್ಯಾತ ನಿರೂಪಕ ರಾಜೇಶ್ ಡಿ’ಸೋಜಾ, ಯಶಸ್ಸಿನ ಮೂಲತತ್ತ್ವಗಳನ್ನು ವಿದ್ಯಾರ್ಥಿಗಳಿಗೆ ಮನದಟ್ಟುಗೊಳಿಸಿದರು. ಯಶಸ್ಸು ಕೇವಲ ಶ್ರಮದ ಪ್ರತಿಫಲವಲ್ಲ. ಅದು ನಾಲ್ಕು ‘ಪಿ’ಗಳಾದ ಪ್ಯಾಶನ್, ಪ್ರಿಪರೇಷನ್ ಪ್ರಸೆಂಟೇಶನ್ ಮತ್ತು ಪರ್ಪಸ್ನ ಸಮನ್ವಯದಿಂದ ಮೂಡಿಬರುವ ಸಮಗ್ರ ಸಫಲತೆ. ಪ್ರತಿಯೊಂದು ಕಾರ್ಯಕ್ಕೂ ಆಸಕ್ತಿ, ಸ್ಪಷ್ಟ ಗುರಿ, ಸಮಗ್ರ ತಯಾರಿ ಹಾಗೂ ಪರಿಣಾಮಕಾರಿ ಪ್ರಸ್ತುತಪಡಿಸುವಿಕೆಯ ಅಗತ್ಯವನ್ನು ಉದಾಹರಣೆಯೊಂದಿಗೆ ವಿವರಿಸಿದರು. ಜೊತೆಯಲ್ಲಿ ಸಮಯ ನಿರ್ವಹಣೆ, ಹಾಸ್ಯಪ್ರಜ್ಞೆ ಹಾಗೂ ಸಕಾಲದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ವ್ಯಕ್ತಿಯ ಬದುಕನ್ನು ಅಂದಗೊಳಿಸುವುದಲ್ಲದೆ ನಾಯಕತ್ವ ಗುಣಗಳನ್ನು ಬೆಳೆಸುತ್ತವೆ ಎಂದರು. ಈ ಸಂದರ್ಭದಲ್ಲಿ 2025–26ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿಗಳನ್ನು ನೀಡಲಾಯಿತು. ಮಂಜುಳಾ ಹಾಗೂ ವಿಧಿಶಾ ವಿದ್ಯಾರ್ಥಿ ವೇದಿಕೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಅಧಿಕಾರ…
ಜಾಗತಿಕ ಬಂಟರ ಸಂಘಗಳ ಒಕ್ಕೂಟ : ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ, ಪುಷ್ಪರಾಜ್ ಶೆಟ್ಟಿ ಬಿ.ಎನ್, ರಾಜೇಶ್ ಶೆಟ್ಟಿ, ಸತೀಶ್ ಇರಾ, ಅಶೋಕ್ ಶೆಟ್ಟಿ ಬಿ.ಎನ್. ಅವರಿಗೆ ಸನ್ಮಾನ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ ಮತ್ತು ಬಹಿರಂಗ ಅಧಿವೇಶನ ಸಮಾರಂಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀನಿವಾಸ ನಾಯಕ್ ಇಂದಾಜೆ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ ಬಿ.ಎನ್, ಉಪಾಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ಸತೀಶ್ ಇರಾ, ಕಾರ್ಯಕಾರಿ ಸಮಿತಿ ಸದಸ್ಯರಾದ ಅಶೋಕ್ ಶೆಟ್ಟಿ ಬಿ.ಎನ್. ಬ್ರಹ್ಮರಕೂಟ್ಲು ಅವರನ್ನು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಮಾತೃ ಸಂಘದ ಹೊರ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪುನರಾಯ್ಕೆಗೊಂಡ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಉಮಾಕೃಷ್ಣ ಶೆಟ್ಟಿ, ಪುಣೆ ಬಂಟರ ಸಂಘದ ಅಧ್ಯಕ್ಷ ಅಜಿತ್ ಹೆಗ್ಡೆ, ಮೋಹನ್ ದಾಸ್ ಶೆಟ್ಟಿ, ಶಶಿಧರ್ ಶೆಟ್ಟಿ ಇನ್ನಂಜೆ,…
ಬಂಟರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಕೊಂಬೆಟ್ಟು ಬಂಟರ ಭವನದಲ್ಲಿ ನವೆಂಬರ್ 22 ರಂದು ಬಂಟೆರೆ ಸೇರಿಗೆ – 2025 ಮತ್ತು ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಕಲ್ಪವೃಕ್ಷದ ಗಿಡಗಳಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೇರಂಭಾ ಗ್ರೂಪ್ ಆಫ್ ಕಂಪನಿ ಮುಂಬೈ ಇದರ ಸಂಸ್ಥಾಪಕ ಡಾ| ಕೂಳೂರು ಕನ್ಯಾನ ಸದಾಶಿವ ಶೆಟ್ಟಿ, ಪುತ್ತೂರು ಬಂಟ ಸಂಘದ ಬಗ್ಗೆ ಅಪಾರ ಗೌರವವಿದೆ. ಬಂಟರ ಸಂಘದಲ್ಲಿ ಮಾತೃ ಸಂಘಕ್ಕೆ ಉನ್ನತ ಸ್ಥಾನವಿದೆ. ಬಂಟ ಸಮಾಜದ ರಮಾನಾಥ ರೈ, ನಳಿನ್ ಕುಮಾರ್ ಕಟೀಲ್ ಅವರಂತಹ ಅನೇಕ ರಾಜಕೀಯ ದುರೀಣರು ಯಾವುದೇ ಕಪ್ಪು ಚುಕ್ಕೆಯಿಲ್ಲದೆ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜಕೀಯ ಮಾತ್ರವಲ್ಲದೆ ಸಾಂಸ್ಕೃತಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಅನೇಕರು ಸಾಧನೆಗೈದಿದ್ದಾರೆ. ಬಂಟರ ಸಂಘದ ಯೋಜಿತ ಕಟ್ಟಡ ನಿರ್ಮಾಣಕ್ಕೆ ಬೇಕಾದ ಸಹಕಾರವನ್ನು ನೀಡುತ್ತೇನೆ. ಪ್ರಸ್ತುತ ದಿನಮಾನಗಳಲ್ಲಿ ದನಿಗಳು ಹೆಚ್ಚಾಗಿದ್ದಾರೆ. ಆದರೆ ದಾನಿಗಳು ಕಡಿಮೆಯಾಗಿರುವುದು ವಿಪರ್ಯಾಸ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮಾಜಿ…
ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 2025 -28 ರ ಸಾಲಿನ ದ.ಕ ಜಿಲ್ಲಾ ಘಟಕದ ಪದಗ್ರಹಣ ಸಮಾರಂಭ ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ನಡೆಯಿತು. ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ದ.ಕ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಉಪ ನಿರ್ದೇಶಕರು ಹಾಗೂ ಚುನಾವಣಾಧಿಕಾರಿ ಖಾದರ್ ಶಾ ಶುಭ ಹಾರೈಸಿ ಮಾತನಾಡುತ್ತಾ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಕ್ರೀಯ ಚಟುವಟಿಕೆಗಳಿಂದ ಜನರ ವಿಶ್ವಾಸಕ್ಕೆ ಪಾತ್ರವಾಗಿದೆ. ಜಿಲ್ಲೆಯ ಗ್ರಾಮೀಣ ಪ್ರದೇಶದ ಪತ್ರಕರ್ತರು ಜಿಲ್ಲಾ ಸಂಘದ ಪದಾಧಿಕಾರಿಗಳಾಗಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದಸ್ಯರ ಶ್ರೇಯೋಭಿವೃದ್ಧಿಗೆ ಇನ್ನಷ್ಟು ಉತ್ತಮ ಕೆಲಸಗಳಾಗಲಿ ಎಂದು ಶುಭ ಹಾರೈಸಿದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಪೂರ್ವಾಧ್ಯಕ್ಷ ಆನಂದ ಶೆಟ್ಟಿಯವರು ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಬಿ.ಎನ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ ಪೂಜಾರಿ, ಉಪಾಧ್ಯಕ್ಷರಾದ ಮಹಮ್ಮದ್ ಆರಿಫ್ ಪಡುಬಿದ್ರೆ, ವಿಲ್ಫ್ರೆಡ್ ಡಿ ಸೋಜ, ರಾಜೇಶ್ ಶೆಟ್ಟಿ, ಕೋಶಾಧಿಕಾರಿ ವಿಜಯ ಕೋಟ್ಯಾನ್ ಪಡು, ಕಾರ್ಯದರ್ಶಿಗಳಾದ…
ಪುಣೆ ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮಹಾಸಭೆ : ದೇವಸ್ಥಾನದ ಮುಂದಿನ ಅಭಿವೃದ್ದಿಗೆ ಭಕ್ತರ ಸಹಕಾರ ಇನ್ನಷ್ಟು ಒದಗಲಿ – ಸುಭಾಷ್ ಶೆಟ್ಟಿ
ಪುಣೆ ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿ, ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘ ಇದರ ವಿಶ್ವಸ್ಥ ಮಂಡಳಿ ಮತ್ತು ಕಾರ್ಯಕಾರಿ ಸಮಿತಿಯ ವಾರ್ಷಿಕ ಮಹಾಸಭೆಯು ನವೆಂಬರ್ 22 ಶನಿವಾರದಂದು ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರಾಂಗಣದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸುಭಾಷ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು. ವೇದಿಕೆಯಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಯಾದ ರಘುರಾಮ್ ರೈ, ಉಪಾಧ್ಯಕ್ಷ ಸುಧಾಕರ್ ಶೆಟ್ಟಿ, ಕೋಶಾಧಿಕಾರಿ ಸಚ್ಚಿದಾನಂದ ಶೆಟ್ಟಿ, ಮಾಜಿ ಅಧ್ಯಕ್ಷ ಶೇಖರ್ ಟಿ ಪೂಜಾರಿ, ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಶೆಟ್ಟಿ ಮತ್ತು ಕಾರ್ಯದರ್ಶಿ ಜಗದೀಪ್ ಶೆಟ್ಟಿಯವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ರಘುರಾಮ್ ರೈಯವರು ಸ್ವಾಗತಿಸಿ ವಾರ್ಷಿಕ ವರದಿಯನ್ನು ಮತ್ತು ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಸಾಮಾಜಿಕ, ಕಲಾ ಕಾರ್ಯಕ್ರಮಗಳ ವಿವರವನ್ನು ಸಭೆಯ ಮುಂದಿಟ್ಟರು. ವಾರ್ಷಿಕ ಲೆಕ್ಕ ಪತ್ರವನ್ನು ಕೋಶಾಧಿಕಾರಿ ಸಚ್ಚಿದಾನಂದ ಶೆಟ್ಟಿ ಮಂಡಿಸಿದರು ಮತ್ತು ಸಭೆಯ ಅನುಮೊದನೆ ಪಡೆದರು. ಸಭೆಯಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ…
ನಿರ್ಧರಿಸಿದ ಗುರಿಯೆಡೆಗೆ ಕನಸನ್ನು ಮಾತ್ರ ಕಾಣದೆ ಅದರಡೆಗೆ ಯೋಜಿತ ಕೆಲಸಗಳನ್ನು ಮಾಡುತ್ತಾ ಸಾಗುವುದು ಮುಖ್ಯ. ಅನಗತ್ಯ ವಿಷಯಗಳಿಂದ ದೂರವಿದ್ದರೆ ಶೈಕ್ಷಣಿಕ ಸಾಧನೆ ಸುಲಭ. ಸಂಸ್ಕಾರಯುತ ಶಿಕ್ಷಣಕ್ಕೆ ಹೆಸರಾಗಿರುವ ಜ್ಞಾನಸುಧಾ ವಾರ್ಷಿಕೋತ್ಸವ ದಲ್ಲಿ ಭಾಗವಹಿಸಿ ನನ್ನ ಮನಸ್ಸಿನ ಮಾತುಗಳನ್ನು ಸಾಧನೆಯ ಹಾದಿಯಲ್ಲಿರುವ ಮಕ್ಕಳೆದುರು ಹಂಚಿಕೊಳ್ಳುವ ಅವಕಾಶ ಸಿಕ್ಕಿರುವುದು ಖುಷಿ ತಂದಿದೆ ಎಂದು ಬೈಂದೂರಿನ ಸಂವೇದನಾ ವಿಜ್ಞಾನ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯ ಭಟ್ ಹೇಳಿದರು. ಅವರು ಮಣಿಪಾಲ್ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಉದಯವಾಣಿ ಮಣಿಪಾಲದ ನಿವೃತ್ತ ಹಿರಿಯ ಉಪಸಂಪಾದಕರಾದ ಶ್ರೀ ನಿತ್ಯಾನಂದ ಪಡ್ರೆ ಮಾತನಾಡಿ ಶಿಕ್ಷಣ ಕೇವಲ ಸಂಬಳ ಕೊಡುವ ಉದ್ಯೋಗವನ್ನು ಕೊಡಿಸುವ ಮಾಧ್ಯಮವಾಗದೆ ಜೀವನ ಕಟ್ಟಿಕೊಡುವ ನೈಜ ಶಿಕ್ಷಣವಾಗಬೇಕು ಎಂದು ಅವರು ತನ್ನ ಜೀವನದಲ್ಲಿ ಕಂಡುಕೊಂಡ ನೈಜ ನಿದರ್ಶನಗಳು ಮಕ್ಕಳಿಗೆ ತಿಳಿಸುವರು ಮಾತನಾಡಿದರು. ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ,…














