Author: admin
ಮೂಲ್ಕಿ ರಾಷ್ಟ್ರೀಯ ಹೆದ್ದಾರಿ 66 ರ ಬಳಿ ಡಾ| ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಡಿಸೆಂಬರ್ ನಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿದೆ. ಡಾ| ಸದಾಶಿವ ಶೆಟ್ಟಿ ಸಂಕೀರ್ಣಕ್ಕೆ 1.25 ಕೋಟಿ ರೂಪಾಯಿ ನೆರವು ನೀಡುವುದಾಗಿ ತಿಳಿಸಿದರು. ಸಭಾಭವನ ಪೂರ್ಣಗೊಳ್ಳಲು ಎಲ್ಲಾ ಬಂಟ ಬಂಧುಗಳ ಸಹಕಾರ ಬೇಕು ಎಂದು ಒಕ್ಕೂಟದ ಮಹಾ ನಿರ್ದೇಶಕ, ಉದ್ಯಮಿ ಶಶಿಧರ ಶೆಟ್ಟಿ ಬರೋಡಾ ತಿಳಿಸಿದರು. ಮೂಲ್ಕಿಯಲ್ಲಿರುವ ಪ್ರವೀಣ್ ಭೋಜ ಶೆಟ್ಟಿ ಸಂಕೀರ್ಣದಲ್ಲಿ ನಡೆದ ಸದಾಶಿವ ಶೆಟ್ಟಿ ಸಂಕೀರ್ಣದ ದ್ವಿತೀಯ ಹಂತದ ಕಾಮಗಾರಿ ಕುರಿತು ನಡೆದ ವಿಶೇಷ ಮಹಾಸಭೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಇನ್ನು ಏಳೆಂಟು ತಿಂಗಳಿನ ಒಳಗೆ ಸಭಾಭವನದ ನಿರ್ಮಾಣ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಸಮಾಜದಲ್ಲಿರುವ ದಾನಿಗಳು ನೆರವಿನ ಹಸ್ತ ನೀಡಬೇಕಾಗಿದೆ. ಅಲ್ಲದೇ ಸಮಾಜದ ಪ್ರತಿಯೋರ್ವರು ಈ ಒಂದು ಸಮಾಜದ ಕಾರ್ಯದಲ್ಲಿ ಕೈಜೋಡಿಸಬೇಕು. ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿಯವರ ಆಶಯ, ಆಶೀರ್ವಾದದಿಂದ ಹವಾನಿಯಂತ್ರಿತ ಸಭಾಭವನ ಸಮಾಜದ ಮಧ್ಯಮ ವರ್ಗದಿಂದ ಎಲ್ಲಾ ಜನರಿಗೂ ಇದರ ಪ್ರಯೋಜನ ದೊರೆಯಬೇಕೆಂದು ತಿಳಿಸಿದರು.…
ಮುಂಬಯಿಯ ಪ್ರತಿಷ್ಠಿತ ಬಂಟ ಬಾಂಧವರ ಸಂಸ್ಢೆಗಳಲ್ಲಿ ಒಂದಾದ ಬಾಂಬೆ ಬಂಟ್ಸ್ ಅಸೋಸಿಯೇಶನ್ ಇದರ ಮಹಿಳಾ ವಿಭಾಗದ ವತಿಯಿಂದ, ಅಸೋಸಿಯೇಶನ್ ಅಧ್ಯಕ್ಷ ಅಡ್ವೋಕೇಟ್ ಡಿ.ಕೆ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಮಹಿಳಾ ದಿನಾಚರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಮಾರ್ಚ್ 21 ರಂದು ಅಪರಾಹ್ನ 2.30 ಕ್ಕೆ ಸರಿಯಾಗಿ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹ ಬಂಟ್ಸ್ ಸೆಂಟರ್ ಜೂಯಿನಗರ ಇಲ್ಲಿ ಬಹಳ ಸಂಭ್ರಮ ಹಾಗೂ ವಿಜೃಂಭಣೆಯಿಂದ ವೈವಿದ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು. ಅಧ್ಯಕ್ಷರಾದ ಅಡ್ವೋಕೇಟ್ ಡಿ.ಕೆ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಸಭಾ ಕಾರ್ಯಕ್ರಮದಲ್ಲಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಶಾಂತ ಎನ್ ಶೆಟ್ಟಿ, ಮಹಿಳಾ ವಿಭಾಗದ ಪದಾಧಿಕಾರಿಗಳು ಹಾಗೂ ಮುಖ್ಯ ಅತಿಥಿಯಾಗಿ ಶ್ರೀಮತಿ ರೇಖಾ ಗುಣಕರ ಶೆಟ್ಟಿ ಮತ್ತು ಗೌರವ ಅತಿಥಿಗಳಾಗಿ ಶ್ರೀಮತಿ ಮೋಹಿನಿ ರಮೇಶ್ ಶೆಟ್ಟಿ (ಕಾರ್ಯಾಧ್ಯಕ್ಷೆ, ಥಾಣೆ ಬಂಟ್ಸ್), ಶ್ರೀಮತಿ ಶಾಲಿನಿ ಸತೀಶ್ ಶೆಟ್ಟಿ (ಸಮಾಜ ಸೇವಕಿ), ಶ್ರೀಮತಿ ಪ್ರವೀಣ ಪ್ರಕಾಶ್ ಶೆಟ್ಟಿ (ಮಾಜಿ ಕಾರ್ಯಾಧ್ಯಕ್ಷೆ ಭಿವಂಡಿ ಬದ್ಲಾಪುರ ಪ್ರಾದೇಶಿಕ ಸಮಿತಿ), ರೇಖೀ ತಜ್ಞೆ…
ಜೀವನದಲ್ಲಿ ನಿಜವಾದ ಯಶಸ್ಸು ಪದವಿ ಅಥವಾ ಪ್ರಶಸ್ತಿಗಳಿಗೆ ಮಾತ್ರ ಸೀಮಿತವಾಗಿರುವುದಿಲ್ಲ, ಕಂಡ ಕನಸುಗಳನ್ನು ಸಾಧಿಸುವುದರಲ್ಲಿದೆ ಎಂದು ಕಮೋಡೊರ್ ಬೆನ್ ಹೆಚ್ ಬೆರ್ಸನ್ ನುಡಿದರು. ಅವರು ಮಂಗಳವಾರ ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ನಡೆದ ಆಳ್ವಾಸ್ ಸ್ವಾಯತ್ತ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮಾತನಾಡಿದರು. ಮಾರ್ಟಿನ್ ಲೂಥರ್ ಕಿಂಗ್ ಜ್ಯೂರವರ ಮಾತುಗಳನ್ನು ಉಲ್ಲೇಖಿಸಿ, ಭವಿಷ್ಯ ರೂಪಿಸುವಲ್ಲಿ ದೂರದೃಷ್ಟಿ ಮತ್ತು ವ್ಯಕ್ತಿತ್ವದ ಮಹತ್ವವನ್ನು ವಿವರಿಸಿದರು. ವಾಲ್ಟ್ ಡಿಸ್ನಿ ಹಾಗೂ ಡಾ. ಸಾಸ್ರಂತವರು ಅನೇಕ ವಿಫಲತೆಗಳನ್ನು ಮೀರಿ ಸಾಧನೆ ಮಾಡಿದ ಉದಾಹರಣೆಗಳನ್ನು ನೀಡಿದರು. ತಮ್ಮ ಜೀವನ ಅನುಭವಗಳನ್ನು ಹಂಚಿಕೊಂಡ ಅವರು, ಬಾಲ್ಯದ ಮಾತಿನ ದೋಷ, ಕಾಲೇಜು ದಿನಗಳ ಹೋರಾಟ ಹಾಗೂ ಅಸಭ್ಯ ವರ್ತನೆಯ ಕಾರಣದಿಂದ ಕಾಲೇಜಿನಿಂದ ಹೊರಹಾಕುವ ಪರಿಸ್ಥಿತಿಯವರೆಗೆ ತಲುಪಿದ ಸನ್ನಿವೇಶವನ್ನು ವಿವರಿಸಿದರು. ಜೀವನದಲ್ಲಿ ದೊರೆತ ಎರಡನೇ ಅವಕಾಶವೇ ಅವರನ್ನು ಪುನಃ ರೂಪಿಸಿ ಭಾರತೀಯ ನೌಕಾಪಡೆಯಲ್ಲಿ ಗಣನೀಯ ಸೇವೆ ಸಲ್ಲಿಸಲು ನೆರವಾಯಿತು ಎಂದು ಹೇಳಿದರು. ಸಶಸ್ತ್ರ ಪಡೆಗಳನ್ನು ವೃತ್ತಿಯಾಗಿ ಆಯ್ಕೆ ಮಾಡಲು ವಿದ್ಯಾರ್ಥಿಗಳು ಮುಂದೆ ಬರಬೇಕು ಎಂದರು. ಆಳ್ವಾಸ್ ಸಂಸ್ಥೆ…
ರಕ್ತದಾನ ತುರ್ತು ಚಿಕಿತ್ಸೆ ಯ ಪರಿಸ್ಥಿತಿಯಲ್ಲಿರುವವರ ಅಮೂಲ್ಯ ವಾದ ಜೀವ ಉಳಿಸುವುದರ ಮೂಲಕ ಮಹತ್ತರ ಕೊಡುಗೆ ನೀಡುತ್ತದೆ – ನವೀನ್ ಚಂದ್ರ ಶೆಟ್ಟಿ
ರಕ್ತದಾನ ಮಾಡುವುದು ಜಾತಿ ಧರ್ಮಗಳನ್ನು ಮೀರಿದ ಮಾನವೀಯ ಸೇವೆಯಾಗಿದೆ. ರಕ್ತದಾನದ ಮೂಲಕ ಜೀವ ಉಳಿಸುವುದರ ಜೊತೆಗೆ ಒಂದು ಕುಟುಂಬದ ಜೀವನವನ್ನು ಅರಳಿಸುವ ಪುಣ್ಯದ ಕೆಲಸವು ರಕ್ತದಾನಿಯಿಂದ ಆಗುತ್ತದೆ. ಇಂತಹ ಕಾರ್ಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಇಲ್ಲಿಯ ಪ್ರಾಚಾರ್ಯ ಮಂಜುನಾಥ ಎ.ಕೋಟ್ಯಾನ್ ಹೇಳಿದರು. ಅವರು ಶ್ರೀ ಭುವನೇಂದ್ರ ಕಾಲೇಜು ವಿದ್ಯಾರ್ಥಿ ಪಾಲನಾ ಸಮಿತಿ, ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ವತಿಯಿಂದ ರೋಟರಿ ಕ್ಲಬ್ ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ, ಜೇಸಿಐ ಕಾರ್ಕಳ, ಕಾಲೇಜಿನ ರೆಡ್ ಕ್ರಾಸ್, ಎನ್.ಸಿ.ಸಿ, ಎನ್.ಎಸ್.ಎಸ್, ರೋವರ್ಸ್ ಮತ್ತು ರೆಂಜರ್ಸ್, ರೋಟರ್ಯಾಕ್ಟ್ ಕ್ಲಬ್ ಕಾರ್ಕಳ ಇವರ ಸಯೋಗದೊಂದಿಗೆ ನಡೆದ ರಕ್ತದಾನ ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರೋಟರಿ ಕ್ಲಬ್ ಕಾರ್ಕಳ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮಾತನಾಡಿ, ರಕ್ತದಾನವು ಅತ್ಯಂತ ಶ್ರೇಷ್ಠ ದಾನವಾಗಿದ್ದು, ತುರ್ತು ಪರಿಸ್ಥಿತಿಯಲ್ಲಿರುವವರ ಜೀವ ಉಳಿಸುವ ಮೂಲಕ ಅಮೂಲ್ಯ ಕೊಡುಗೆ…
ಅದಾನಿ ಗ್ರೂಪ್ ಕರ್ನಾಟಕದ ಕಾರ್ಯನಿರ್ವಾಹಕ ನಿರ್ದೇಶಕರು ಮತ್ತು ಅಧ್ಯಕ್ಷರಾದ ಕಿಶೋರ್ ಆಳ್ವ ಅವರು ದಿ ಅಸೋಸಿಯೇಟೆಡ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಆಫ್ ಇಂಡಿಯಾ (ASSOCHAM INDIA) ಸಂಸ್ಥೆಯ 2026 -27ರ ಸಾಲಿಗೆ ಕರ್ನಾಟಕ ರಾಜ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಕಿಶೋರ್ ಆಳ್ವ ಅವರು ಸಮಾಜಸೇವಕರಾಗಿ ಗುರುತಿಸಿಕೊಂಡಿದ್ದು, ಬಹು ರಾಷ್ಟ್ರೀಯ ಕಂಪನಿಗಳು, ಇಂಧನ ಮೂಲಸೌಕರ್ಯ ಮತ್ತು ಅಂತರಾಷ್ಟ್ರೀಯ ವ್ಯಾಪಾರ ಸಂಬಂಧಗಳು ಸಹಿತ ವಿವಿಧ ಕ್ಷೇತ್ರಗಳಲ್ಲಿ ಮೂರು ದಶಕಗಳಿಗಿಂತಲೂ ಹೆಚ್ಚು ಅನುಭವ ಹೊಂದಿದ್ದಾರೆ.
‘ಸುರತ್ಕಲ್ ಬಂಟ್ಸ್ ಕ್ರಿಕೆಟ್ ಲೀಗ್’ ಜೆರ್ಸಿ, ಟ್ರೋಫಿ ಅನಾವರಣ : ಯುವಕರು ಸಮಾಜಕ್ಕೆ ಮಾದರಿಯಾಗಬೇಕು – ಐಕಳ ಹರೀಶ್ ಶೆಟ್ಟಿ
ಸುರತ್ಕಲ್ ಬಂಟರ ಸಂಘದ ಯುವ ಘಟಕದ ವತಿಯಿಂದ ಏಪ್ರಿಲ್ 28, 29ರಂದು ನಡೆಯಲಿರುವ ಬಂಟ್ಸ್ ಕ್ರಿಕೆಟ್ ಲೀಗ್ ಪಂದ್ಯಾಕೂಟದ ಜೆರ್ಸಿ ಮತ್ತು ಟ್ರೋಫಿ ಅನಾವರಣ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದ ವಠಾರದಲ್ಲಿ ನಡೆಯಿತು. ಪಟ್ಲ ಫೌಂಡೇಶನ್ ಟ್ರಸ್ಟ್ ನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರು ಪಂದ್ಯಾಕೂಟದ ಟ್ರೋಫಿ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಕಲೆಗೆ ಜಾತಿ ಇಲ್ಲ. ಇಂತಹ ಕಾರ್ಯಕ್ರಮಗಳನ್ನು ಮಾಡುವುದು ಸುಲಭದ ಕೆಲಸವಲ್ಲ. ಎಲ್ಲರೂ ತನು, ಮನ, ಧನಗಳನ್ನು ಮನಸ್ಪೂರ್ತಿಯಾಗಿ ನೀಡಿ ಸಹಕರಿಸಬೇಕೆಂದು ಬಂಟ್ಸ್ ಕ್ರಿಕೆಟ್ ಲೀಗ್ ಗೆ ಶುಭ ಹಾರೈಸಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಮಾತನಾಡಿ, ಯಾವುದೇ ಸಮಾಜದ ನಾಯಕರು ಮುಂದಿನ ಪೀಳಿಗೆಗೆ ಮಾದರಿಯಾಗಿರಬೇಕು. ನಮ್ಮ ಶಕ್ತಿ ಬಂಟ ಸಮಾಜಕ್ಕೆ ಉಪಯೋಗವಾಗಬೇಕು. ಸಮಾಜದ ಪ್ರತಿಭೆಗಳಿಗೆ ನಾವೆಲ್ಲರೂ ಒಗ್ಗಟ್ಟಾಗಿ ಪ್ರೋತ್ಸಾಹಿಸಬೇಕಿದೆ. ನಮ್ಮ ಯುವ ಸಮುದಾಯ ಮುಂದಿನ ದಿನಗಳಲ್ಲಿ ಎಲ್ಲಾ ಸ್ತರಗಳಲ್ಲಿಯೂ ಬೆಳೆಯಬೇಕು. ಎಲ್ಲಾ ಸಮಾಜಗಳಿಗೂ ಮಾದರಿಯಾಗಬೇಕು ಎಂದು ನುಡಿದರು. ಜಾಗತಿಕ ಬಂಟರ…
ಕುಲಶೇಖರ ಪದವು ಶ್ರೀ ಶನೈಶ್ಚರ ದೇವಸ್ಥಾನ : ಬ್ರಹ್ಮಕಲಶೋತ್ಸವ ಮುಂಬೈ ಸಮಿತಿ ಅಧ್ಯಕ್ಷರಾಗಿ ಮಹೇಶ್ ಶೆಟ್ಟಿ ತೆಳ್ಳಾರ್
ಹಿಂದೂ ಯುವ ಸೇನೆ ಮಂಗಳೂರು ಇದರ ಪದವು ಶಾಖೆ ಸಂಚಾಲಿತ ಕುಲಶೇಖರ ಪದವು ಶ್ರೀ ಶನೈಶ್ಚರ ದೇವಸ್ಥಾನ ನಿರ್ಮಾಣ, ಬಿಂಬ ಪ್ರತಿಷ್ಠೆ, ಬ್ರಹ್ಮಕಲಶ ಸಮಾಲೋಚನಾ ಸಭೆಯು ಮಾರ್ಚ್ 17ರಂದು ಕಾಂದಿವಲಿ ಪೂರ್ವದ ಠಾಕೂರ್ ವಿಲೇಜ್ನಲ್ಲಿ ಮಹೇಶ್ ಶೆಟ್ಟಿ ತೆಳ್ಳಾರ್ ಅವರ ಆಡಳಿತದ ‘ಸೋರಾ ಬೈ ನೈನ್’ ಫ್ಯಾಮಿಲಿ ರೆಸ್ಟೋರೆಂಟ್ನಲ್ಲಿ ಶ್ರೀ ಶನೈಶ್ಚರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ದೇವಸ್ಥಾನ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಕದ್ರಿ ನವನೀತ ಶೆಟ್ಟಿಯವರು ದೇವಸ್ಥಾನದ ಸಮಗ್ರ ಮಾಹಿತಿಯನ್ನು ನೀಡಿ, ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಶ್ರೀ ಶನೈಶ್ಚರ ದೇವಸ್ಥಾನದಲ್ಲಿ ನವಗ್ರಹ ಸಹಿತ ಶ್ರೀ ಶನೈಶ್ಚರ, ಶ್ರೀ ಮಹಾಗಣಪತಿ ಹಾಗೂ ಶ್ರೀ ದುರ್ಗಾದೇವಿಯನ್ನು ಪ್ರತಿಷ್ಠಾಪಿಸಿ, ಈ ವರ್ಷ ಎಪ್ರಿಲ್ 23ರಂದು ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ, ಅಶ್ವತ್ಥ ವೃಕ್ಷ ಪ್ರತಿಷ್ಠೆ ನಡೆಸಬೇಕೆಂದು ಸಂಕಲ್ಪಿಸಲಾಗಿದೆ. ಅದರಂತೆ ಎಪ್ರಿಲ್ 18ರಿಂದ 24ರ ತನಕ ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶದ ಸಂಭ್ರಮ ನಡೆಯಲಿದೆ ಎಂದರು. ಈ…
ಜಸ್ಟೀಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆಯಲ್ಲಿ ಈಗಾಗಲೇ ಎರಡು ಹೆರಿಗೆ ಶಸ್ತ್ರಚಿಕಿತ್ಸೆ (LSCS) ಮಾಡಿಸಿಕೊಂಡಿರುವ ರೋಗಿಯೊಬ್ಬರಲ್ಲಿ ಪತ್ತೆ ಹಚ್ಚಿರುವ ದೊಡ್ಡ ಅಂಡಾಶಯದ ಸಿಸ್ಟ್ ಅನ್ನು ಯಶಸ್ವಿಯಾಗಿ ತೆಗೆದು ಹಾಕಲು 6.5 x 25.5 x 28.5 ಸೆಂ.ಮೀ ಅಳತೆಯ ದೊಡ್ಡ ಗಾತ್ರದ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ಲಾಪರೋಟಮಿ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಸುಮಾರು 8 ಕಿಲೋಗ್ರಾಂ 300 ಗ್ರಾಂ ತೂಕದ ದೊಡ್ಡ ಎಡ ಅಂಡಾಶಯ ಸಿಸ್ಟ್ ಅನ್ನು ತುಂಡಾಗದಂತೆ ತೆಗೆದು ಹಾಕುವುದರ ಜೊತೆಗೆ ಸಂಪೂರ್ಣ ಗರ್ಭಾಶಯ ಮತ್ತು ಬಲ ಅಂಡಾಶಯವನ್ನು ತೆಗೆದು ಹಾಕಲಾಯಿತು. ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಪ್ರೊಫೆಸರ್ ಡಾ. ವಿಜಯಾ ಎಂ ರೇವಣಕರ್ ಅವರ ಮಾರ್ಗದರ್ಶನದಲ್ಲಿ, ಡಾ. ಪೂರ್ವಿಕಾ ಆಚಾರ್ಯರ ಸಹಕಾರದೊಂದಿಗೆ, ಈ ಕ್ಲಿಷ್ಟಕರವಾದ ಸವಾಲಿನ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಅರಿವಳಿಕೆ ತಜ್ಞ ವಿಭಾಗದ ಡಾ. ಆತ್ಮಿಕ ಮತ್ತು ಆಪರೇಷನ್ ಥಿಯೇಟರ್ ಸಿಬ್ಬಂದಿ ನರ್ಸ್ ಮಿಸ್ ದಿಲ್ಜಾ ಶಸ್ತ್ರಚಿಕಿತ್ಸೆಯ ಯಶಸ್ಸಿಗೆ ಸಹಕರಿಸಿದರು. ಈ ಕಠಿಣ ಶಸ್ತ್ರಚಿಕಿತ್ಸೆಯ ಬಳಿಕ ರೋಗಿಯು…
ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಕುವೆಂಪು ಸಭಾಂಗಣದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಸಂಯುಕ್ತ ಆಶ್ರಯದಲ್ಲಿ ‘ಭಾಷಾ ವೈವಿಧ್ಯತೆ ಮತ್ತು ದಕ್ಷಿಣ ಭಾರತದ ಅಸ್ಮಿತೆ’ ಎಂಬ ಶೀರ್ಷಿಕೆಯಡಿ ನಡೆದ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವು ಭಾಷಾ ವೈವಿಧ್ಯತೆ, ನೀತಿ ಅಸಮತೋಲನ ಹಾಗೂ ದ್ರಾವಿಡ ಭಾಷೆಗಳ ಭವಿಷ್ಯದ ಕುರಿತ ಪ್ರಮುಖ ಚರ್ಚೆಗಳಿಗೆ ವೇದಿಕೆಯಾಯಿತು. ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಹಂಪಿ ಕನ್ನಡ ವಿವಿಯ ಕುಲಪತಿಗಳಾದ ಡಾ| ಡಿ.ವಿ ಪರಮಶಿವಮೂರ್ತಿ, ಭಾಷೆ ಭಾವನಾತ್ಮಕ ಹಾಗೂ ಸಾಂಸ್ಕೃತಿಕ ಬಂಧಗಳನ್ನು ಬೆಸೆಯುವ ಪ್ರಮುಖ ಸಾಧನವಾಗಿದ್ದು, ಅದು ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಮಾಡಬೇಕು. ಭಾಷೆಗಳು ಒಗ್ಗೂಡಿಸುವ ಬದಲು ಹಲವಾರು ಸಂದರ್ಭಗಳಲ್ಲಿ ಸಂಘರ್ಷಗಳಿಗೆ ಕಾರಣವಾಗುತ್ತಿರುವುದರ ಬಗ್ಗೆ ಅವರು ವಿಷಾದ ವ್ಯಕ್ತಪಡಿಸಿ, ‘ಭಾಷಾ ವೈವಿಧ್ಯತೆಯನ್ನು ಹೆಮ್ಮೆಯಿಂದ ಸ್ವೀಕರಿಸಬೇಕು, ಇರ್ಷ್ಯೆಯಿಂದಲ್ಲ’ ಎಂದು ಅಭಿಪ್ರಾಯಪಟ್ಟರು. ಭಾಷೆಯು ಜ್ಞಾನ ಮತ್ತು ಅರಿವಿನ ವಿಸ್ತರಣೆಗೆ ಪರಿಣಾಮಕಾರಿ ಸಾಧನವಾಗಿದ್ದು, ಮನುಷ್ಯತ್ವವನ್ನು ಉದ್ದೀಪನಗೊಳಿಸಿ,…
ಅಜೆಕಾರ್ ಪದ್ಮ ಗೋಪಾಲ್ ಎಜುಕೇಶನ್ ಟ್ರಸ್ಟ್ (ರಿ) ಇದರ ಐದನೇ ಅಂಗಸಂಸ್ಥೆ ಅಜೆಕಾರ್ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪದ್ಮನಗರ, ಅಜೆಕಾರು ಇದು ೨೦೨೬-೨೭ನೇ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ ಮಾಡಲು ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರದಿಂದ ಅನುಮೋದನೆಯನ್ನು ಪಡೆದಿರುತ್ತದೆ. ಅಜೆಕಾರಿನ ಪದ್ಮನಗರದಲ್ಲಿ ಟ್ರಸ್ಟ್ ನ ೪ನೇ ಕ್ಯಾಂಪಸ್ ನಿರ್ಮಾಣಗೊಂಡಿದ್ದು, ಟ್ರಸ್ಟಿನ ಸಮಾಜಸೇವಾ ಮತ್ತು ಶೈಕ್ಷಣಿಕ ಕಾಳಜಿಯ ಭಾಗವಾಗಿ ಅಜೆಕಾರಿನ ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ೯ನೇ ತರಗತಿಯಿಂದ ಉಚಿತ ಶಿಕ್ಷಣವನ್ನು ನೀಡುವುದಾಗಿ ನಿರ್ಧರಿಸಿರುತ್ತದೆ. ಟ್ರಸ್ಟ್ ಕಳೆದ ೧೫ ವರ್ಷಗಳಿಂದ ಮೌಲ್ಯಾಧಾರಿತ ಶಿಕ್ಷಣ ನೀಡುವುದರೊಂದಿಗೆ ಅನೇಕ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಿದ್ಯಾರ್ಥಿ ವೇತನಗಳನ್ನು ನೀಡುತ್ತಾ ಬಂದಿದೆ. ಇದರ ಮುಂದುವರಿದ ಭಾಗವಾಗಿ ಪ್ರಸ್ತುತ ಎಂಟನೇ ತರಗತಿ ಪೂರ್ಣಗೊಳಿಸಿ ೯ನೇ ತರಗತಿಗೆ ಅಜೆಕಾರ್ ಜ್ಞಾನಸುಧಾ ಸಂಸ್ಥೆಯಲ್ಲಿ ದಾಖಲಾತಿ ಬಯಸುವ ವಿದ್ಯಾರ್ಥಿಗಳು ಎಂಟನೇ ತರಗತಿಯ ಅಂಕಪಟ್ಟಿ, ಆಧಾರ್ ಕಾರ್ಡ್ ಪ್ರತಿ ಹಾಗೂ ಪೋಷಕರೊಂದಿಗೆ ಶಾಲಾ ಕಛೇರಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು…















