Author: admin
ಕ್ರೀಯಾಶೀಲ ನ್ಯಾಯಾಂಗದಿಂದ ಸದೃಢ ಪ್ರಜಾಪ್ರಭುತ್ವ ಎಂದ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ ಸಂದೇಶ್ ಅವರು, ‘ಜಾತಿ ಮತ ಮೀರಿದ ಬಾಂಧವ್ಯ ಹಾಗೂ ಸಮಾನತೆಯೇ ದೇಶದ ಸುಭದ್ರತೆಯ ಅಡಿಪಾಯ’ ಎಂದು ಸಂದೇಶ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಪುತ್ತಿಗೆ ಶ್ರೀಮತಿ ವನಜಾಕ್ಷಿ ಶ್ರೀಪತಿ ಭಟ್ ಬೃಹತ್ ವೇದಿಕೆಯಲ್ಲಿ ಸೋಮವಾರ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ವೈವಿಧ್ಯತೆಯಲ್ಲಿ ಏಕತೆಯೇ ದೇಶದ ಸುಭದ್ರತೆ. ಈ ಸದೃಢತೆಗೆ ನ್ಯಾಯಾಲಯದ ಕ್ರೀಯಾಶೀಲ ಪಾತ್ರ ಬಹುಮುಖ್ಯ. ಕಾನೂನು ಉಲ್ಲಂಘನೆ, ಅರಾಜಕತೆ ಮತ್ತಿತರ ಸಂದರ್ಭಗಳಲ್ಲಿ ನ್ಯಾಯಾಲಯವು ಪ್ರಜಾಪ್ರಭುತ್ವ ಚಿಂತನೆ ಮೂಲಕ ಪ್ರತೀ ನಾಗರಿಕರ ಹಕ್ಕುಗಳ ರಕ್ಷಣೆಗೆ ಬದ್ಧವಾಗಿದೆ. ಪ್ರಜಾಪ್ರಭುತ್ವದ ಕಾವಲು ನಾಯಿಯಂತೆ ನ್ಯಾಯಾಲಯ ಎಚ್ಚರದಿಂದ ಕಾರ್ಯ ನಿರ್ವಹಿಸುತ್ತದೆ ಎಂದು ವಿವರಿಸಿದರು. ಸ್ವಾತಂತ್ರ್ಯದ ಸದ್ಬಳಕೆಯಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದ ಅವರು, ‘ಮಹಾತ್ಮ ಗಾಂಧೀಜಿ ಪ್ರತಿಪಾದಿಸಿದ ಸತ್ಯ ಮತ್ತು ಅಹಿಂಸೆ ನಮ್ಮ ಸ್ವಾತಂತ್ರ್ಯದ ಮೂಲ ಮಂತ್ರವಾಗಿದೆ. ಇದಕ್ಕೆ 1930ರಲ್ಲಿ ನಡೆದ ಉಪ್ಪಿನ ಸತ್ಯಾಗ್ರಹ ಹಾಗೂ 1942ರ ಕ್ವಿಟ್…
ಬ್ರಹ್ಮಾವರ: ಜಿ ಎಮ್ ವಿದ್ಯಾನಿಕೇತನ್ ಹಾಗೂ ಜಿ ಎಮ್ ಗ್ಲೋಬಲ್ ಸ್ಕೂಲ್ ಜಂಟಿಯಾಗಿ ೭೭ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ, ಶಿಸ್ತು ಹಾಗೂ ರಾಷ್ಟ್ರಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪ್ರೊ. ಸುರೇಂದ್ರನಾಥ ಶೆಟ್ಟಿ, ನಿವೃತ್ತ ಪ್ರಾಧ್ಯಾಪಕರು, ರಾಜ್ಯಶಾಸ್ತ್ರ ವಿಭಾಗ ಎಂ.ಜಿ.ಎo ಕಾಲೇಜು, ಉಡುಪಿ ಇವರು ಆಗಮಿಸಿ ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳಲ್ಲಿ ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮದು ಎನ್ನುವ ಹೆಮ್ಮೆಯೊಂದಿಗೆ ನಮ್ಮ ದೇಶದ ಶ್ರೇಷ್ಟ ಸಂಸ್ಕೃತಿ, ಹಿರಿಮೆ-ಗರಿಮೆ, ಏಕತೆ, ಶ್ರೇಷ್ಟ ಮೌಲ್ಯಗಳನ್ನು ಜವಾಬ್ದಾರಿಯುತ ಪ್ರಜೆಗಳಾದ ವಿದ್ಯಾರ್ಥಿಗಳು ತಮ್ಮಲ್ಲಿ ಅಳವಡಿಸಿಕೊಂಡು ಸ್ವಾವಲಂಬಿಗಳಾಗಿ ಜೀವನವನ್ನು ನಡೆಸಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ದೇಶದ ಪ್ರಜೆಗಳಾದ ನಾವು ಮೂಲಭೂತ ಜವಾಬ್ದಾರಿಗಳನ್ನು ಅರಿತುಕೊಂಡು ದೇಶದ ಅಭಿವೃದ್ಧಿಗಾಗಿ ಶ್ರಮಿಸಬೇಕೆಂದರು. ಗ್ಲೋಬಲ್ ಸ್ಕೂಲ್ನ ಪ್ರಾಂಶುಪಾಲೆಯಾದ ದೀಪ್ತಿ ಶೆಟ್ಟಿಯವರು ಗಣರಾಜ್ಯೋತ್ಸವದ ಶುಭ ಹಾರೈಸುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದರು. ಜಿ ಎಮ್ ವಿದ್ಯಾನಿಕೇತನ ಹಾಗೂ ಜಿ ಎಮ್ ಗ್ಲೋಬಲ್ ಸ್ಕೂಲ್ನ ವಿದ್ಯಾರ್ಥಿಗಳಿಂದ ನೃತ್ಯ, ಸಂಗೀತ, ಯಕ್ಷಗಾನ…
ನಮ್ಮ ಜೀವನ ವಿಧಾನವೇ ಸಂವಿಧಾನ. ಇದರ ಘನತೆ ಗೌರವವನ್ನು ಕಾಪಾಡಿಕೊಂಡು, ಅನುಷ್ಠಾನಗೊಳಿಸಿಕೊಂಡು ಹೋದಾಗ ಗಣರಾಜ್ಯ ದಿನಕ್ಕೆ ಅರ್ಥಬರಲು ಸಾಧ್ಯ. ಶಿಕ್ಷಣ ಕೇವಲ ಅಂಕ ಪಡೆಯುವುದಲ್ಲ. ಅದೊಂದು ಜವಾಬ್ದಾರಿ. ಉತ್ತಮ ನಾಗರಿಕನಾಗುವ ಸಂಕಲ್ಪ ತೊಟ್ಟಾಗ ನಮ್ಮ ದೇಶ ವಿಶ್ವಗುರುವಾಗಲು ಸಾಧ್ಯ ಎಂದು ಕಾರ್ಕಳ ರೋಟರಿ ಕ್ಲಬ್ಬಿನ ಅಂಗ ಸಂಸ್ಥೆ ಅನ್ಸ್ ಕಬ್ಬಿನ ಅಧ್ಯಕ್ಷೆಯಾಗಿರುವ ಶ್ರೀಮತಿ ಜಯಂತಿ ಎ ನಾಯಕ್ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಕ್ರೀಡಾಂಗಣದಲ್ಲಿ ಜರುಗಿದ ೭೭ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಇದೇ ಸಂದರ್ಭ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ,ಒ ದಿನೇಶ್ ಎಂ ಕೊಡವೂರ್, ಪಿ ಆರ್ ಒ. ಶ್ರೀಮತಿ ಜ್ಯೋತಿ ಪದ್ಮನಾಭ ಭಂಡಿ, ಉಪಪ್ರಾಂಶುಪಾಲ ಶ್ರೀ ಸಾಹಿತ್ಯ, ಪ್ರೌಢ ಶಾಲಾ ವಿಭಾಗದ ಉಪಪ್ರಾಂಶುಪಾಲೆ ಶ್ರೀಮತಿ ವಾಣಿ ಕೆ, ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಶ್ರೀ ಸಂತೋಷ್ ನೆಲ್ಲಿಕಾರು ಕಾರ್ಯಕ್ರಮ ನಿರ್ವಹಸಿ ವಂದಿಸಿದರು.
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ 16ನೆಯ ರಾಷ್ಟ್ರೀಯ ಮತದಾರರ ದಿನಾಚರಣೆ 2026 ರ ಅಂಗವಾಗಿ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಮತದಾನವು ಎಷ್ಟು ಮಹತ್ವವಾದದ್ದು ಎಂಬ ಅರಿವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಉಪಸ್ಥಿತರಿದ್ದರು. ಕನ್ನಡ ಭಾಷಾ ಮುಖ್ಯಸ್ಥರಾದ ಶ್ರೀ ಶಿವಕುಮಾರ್ ಪ್ರತಿಜ್ಞಾವಿಧಿ ಬೋಧಿಸಿದರು. ಉಪನ್ಯಾಸಕ ವರ್ಗದವರು, ಬೋಧಕೇತರ ವರ್ಗದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಕಳದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ 77 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಧ್ವಜಾರೋಹಣವನ್ನು ನೆರವೇರಿಸಿದರು. ದೇಶವು ಸ್ವಾತಂತ್ರ್ಯಗೊಂಡ ಬಳಿಕ ತನ್ನದೇ ಆದ ಆಡಳಿತ ವ್ಯವಸ್ಥೆಯನ್ನು ರೂಪಿಸಿಕೊಂಡದ್ದು ಸಂವಿಧಾನದ ರಚನೆಯಿಂದಾಗಿ. ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರು ನಮ್ಮ ದೇಶಕ್ಕೆ ಒಂದು ಉತ್ತಮ ಸಂವಿಧಾನವನ್ನು ರಚಿಸಿಕೊಟ್ಟರು. ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಭಾರತದ ಪ್ರಜೆಗಳಾದ ನಮ್ಮೆಲ್ಲರ ಆದ್ಯ ಕರ್ತವ್ಯ. ಜೀವನದಲ್ಲಿ ದೇಶಪ್ರೇಮವನ್ನು ಮೈಗೂಡಿಸಿಕೊಂಡು ಉತ್ತಮ ನಾಗರಿಕರಾಗಿ ಈ ಸಮಾಜದಲ್ಲಿ ಬಾಳಿ ಬದುಕಬೇಕು ಎಂದು ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಿರಿಯ ವಾಸ್ತುಶಿಲ್ಪಿಗಳಾದ ಪ್ರೊ. ವಸಂತ ಭಟ್ ದೇಶದ ಸ್ವಾತಂತ್ರ್ಯಕ್ಕಾಗಿ, ಭಾರತವನ್ನು ಗಣತಂತ್ರ ರಾಷ್ಟ್ರವನ್ನಾಗಿಸುವಲ್ಲಿ ತಮ್ಮನ್ನು ಅರ್ಪಿಸಿಕೊಂಡ ಹೋರಾಟಗಾರರ ಬಗ್ಗೆ ತಿಳಿಸುತ್ತಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಸಹಸಂಸ್ಥಾಪಕರಾದ ಶ್ರೀ ಅಶ್ವತ್ ಎಸ್ .ಎಲ್. ಹಿರಿಯ ವಾಸ್ತುಶಿಲ್ಪಿಗಳಾದ…
ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಕೊಡಾಜೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ನಕ್ಷತ್ರ ಸಭಾಭವನವನ್ನು ಜನವರಿ 22ರಂದು ಲೋಕಾರ್ಪಣೆಗೊಳಿಸಲಾಯಿತು. ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಸಚಿನ್ ರೈ ಮಾಣಿ ಗುತ್ತು ಅವರು ದೀಪ ಬೆಳಗಿಸುವುದರ ಮೂಲಕ ಸಭಾಭವನ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಮಾಣಿ ಮೈಸೂರು ರಸ್ತೆ ಮತ್ತು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸ್ಪಂದಿಸುವ ಮಾಣಿ ಗ್ರಾಮವು ಭವಿಷ್ಯದಲ್ಲಿ ಪ್ರಮುಖ ಕೇಂದ್ರವಾಗಲಿದೆ. ಇಂತಹ ಮಾಣಿ ಕೊಡಾಜೆ ಭಾಗದಲ್ಲಿ ನಿರ್ಮಿಸಿರುವ ನಕ್ಷತ್ರ ಸಭಾಭವನವು ಜನರಿಗೆ ಅನುಕೂಲವಾಗಲಿದೆ. ದಿಲೀಪ್ ಶೆಟ್ಟಿ ಅವರ ಉದ್ಯಮದ ಯಶಸ್ಸಿನ ಹಿಂದೆ ಅವರ ಪತ್ನಿ ಸುಲೋಚನಾ ಅವರ ಪಾತ್ರವಿದೆ ಎಂದರು. ಮಾಜಿ ಶಾಸಕ ರುಕ್ಮಯ ಪೂಜಾರಿ ಮಾತನಾಡಿ, ಸಾಮಾನ್ಯ ಜನರು ಸಣ್ಣ ಸಣ್ಣ ಕಾರ್ಯಕ್ರಮಗಳನ್ನು ನಡೆಸಲು ನಕ್ಷತ್ರ ಸಭಾಭವನ ಸೂಕ್ತವಾಗಿದೆ. ಸಭಾಭವನದ ಮಾಲೀಕ ದಿಲೀಪ್ ಶೆಟ್ಟಿ ಅವರು ಕಷ್ಟದ ಜೀವನವನ್ನು ಎದುರಿಸಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಜನಸಾಮಾನ್ಯರು…
ಆಳ್ವಾಸ್ ಪದವಿ ಸ್ವಾಯತ್ತಾ ಕಾಲೇಜಿನ 22 ಅಂತರ ಫೋರಂಗಳ ಸ್ಪರ್ಧೆ ‘ಇನಾಮು-2026’ರ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ ಆಳ್ವ, ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನದಲ್ಲಿ ಕಾಲೇಜು ಫೋರಂಗಳು ಅತ್ಯಂತ ಮಹತ್ವದ ಪಾತ್ರ ವಹಿಸುತ್ತವೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ಸಕ್ರಿಯವಾಗಿ ತೊಡಗಿಸುವುದು ಈ ಫೋರಂಗಳ ಮುಖ್ಯ ಉದ್ದೇಶ. ಇವು ವಿದ್ಯಾರ್ಥಿಗಳಲ್ಲಿನ ನಾಯಕತ್ವ, ಸಂವಹನ ಕೌಶಲ್ಯ, ಸಂಘಟನಾ ಸಾಮರ್ಥ್ಯ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ವೇದಿಕೆಗಳಾಗಿವೆ. ಈ ಹಿನ್ನೆಲೆಯಲ್ಲಿ ಆಳ್ವಾಸ್ ಸ್ವಾಯತ್ತಾ ಕಾಲೇಜು 22 ವಿವಿಧ ಫೋರಂಗಳನ್ನು ಹೊಂದಿರುವುದು ಹೆಮ್ಮೆಯ ವಿಷಯ ಎಂದರು. ಈ ಉದ್ಘಾಟನಾ ಕಾರ್ಯಕ್ರಮ ಕೇವಲ ಕಾರ್ಯಕ್ರಮಕ್ಕೆ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿ ನಾಯಕತ್ವವನ್ನು ಸ್ವೀಕರಿಸುವ, ಸಮಾಜಮುಖಿ ಚಿಂತನೆ ಬೆಳೆಸುವ ಮತ್ತು ಸಕ್ರಿಯ ಭಾಗವಹಿಸುವಿಕೆಗೆ ಪ್ರೇರಣೆಯಾಗಲಿ. ಸವಾಲುಗಳನ್ನು ಸ್ವೀಕರಿಸುವ ಮಾನಸಿಕತೆ ಬೆಳೆಸಿಕೊಳ್ಳಿ. ಸೋಲು, ಟೀಕೆ, ವಿಫಲತೆ ಇವೆಲ್ಲವೂ ಜೀವನದ ಭಾಗವೇ. ಅವುಗಳಿಂದ ಕುಗ್ಗದೆ ಎದ್ದು ನಿಲ್ಲುವ…
ಪುಣೆ ಬಂಟರ ಸಂಘದ ವಾರ್ಷಿಕೊತ್ಸವ ಸಮಾರಂಭವು ಜನವರಿ 26ರಂದು ಬಾಣೇರ್ ನಲ್ಲಿರುವ ಪುಣೆ ಬಂಟರ ಭವನ, ಓಣಿಮಜಲು ಜಗನ್ನಾಥ್ ಶೆಟ್ಟಿ ಸಾಂಸ್ಕ್ರತಿಕ ಕೇಂದ್ರ ಲತಾ ಸುಧೀರ್ ಶೆಟ್ಟಿ ವೇದಿಕೆಯಲ್ಲಿ ಅಪರಾಹ್ನ ಗಂಟೆ 2.30ರಿಂದ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮ, ವೈವಿಧ್ಯಮಯ ನೃತ್ಯ, ನಾಟಕ, ಸಭಾ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ. ಪುಣೆ ಬಂಟರ ಸಂಘದ ಗೌರವಾಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆಯವರ ಉಪಸ್ಥಿತಿಯಲ್ಲಿ ಅಧ್ಯಕ್ಷರಾದ ಅಜಿತ್ ಹೆಗ್ಡೆ ಕೆಂಜಾರು ಗುತ್ತುರವರ ಅದ್ಯಕ್ಷತೆಯಲ್ಲಿ ನಡೆಯಲಿರುವ ವಾರ್ಷಿಕೋತ್ಸವ ಸಂಭ್ರಮ ಸಭಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕಾಪು ಶ್ರೀ ಹೊಸ ಮಾರಿಗುಡಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರು ಮತ್ತು ಕಾಪು ಬಂಟರ ಸಂಘದ ಅಧ್ಯಕ್ಷರಾದ ವಾಸುದೇವ್ ಶೆಟ್ಟಿಯವರು ಆಗಮಿಸಲಿದ್ದಾರೆ. ಗೌರವ ಅತಿಥಿಗಳಾಗಿ ಬಜ್ಪೆ ಬಂಟರ ಸಂಘದ ಅಧ್ಯಕ್ಷರು, ಥಾಣೆ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ವೇಣುಗೋಪಾಲ್ ಎಲ್ ಶೆಟ್ಟಿ ಮತ್ತು ಮುಂಬಯಿಯ ಮೆರಿಟ್ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈ ಲಿಮಿಟೆಡ್ ನ ಸಿಎಂಡಿ…
ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಜಾತ್ರಾ ಮಹೋತ್ಸವದ ಶುಭಾವಸರದಲ್ಲಿ ರಥೋತ್ಸವದ ಪುಣ್ಯ ದಿನ ಜನವರಿ 21 ರಂದು ಪ್ರಖ್ಯಾತ ಹರಿದಾಸರು, ಸಂಘಟಕರು, ಭಜನಾ ಕೀರ್ತನಕಾರರು, ನಿರೂಪಕರು ಮತ್ತು ಅಂಕಣ ಬರಹಗಾರರಾದ ಶರತ್ ಶೆಟ್ಟಿ ಪಡುಪಳ್ಳಿಯವರ ತುಳು ಬರಹಗಳ ಗುಚ್ಚ “ಕಡ್ಲೆ ಬಜಿಲ್” ಎಂಬ ಪುಸ್ತಕವು ಕದ್ರಿ ದೇವಳದ ರಾಜಾoಗಣದಲ್ಲಿ ಬಿಡುಗಡೆ ಗೊಂಡಿತು. ಮಲ್ಲಿಕಾ ಕಲಾ ವೃಂದದ ಸಂಚಾಲಕರಾದ ಸುಧಾಕರ್ ರಾವ್ ಪೇಜಾವರ, ಹಿರಿಯ ಲೇಖಕಿ, ಲೇಖಕಿಯರ ವಾಚಕಿಯರ ಸಂಘದ ರೂಪಕಲಾ ಆಳ್ವ, ಪ್ರಸಿದ್ಧ ತುಳು ಸಾಹಿತಿ ಕುಶಾಲಾಕ್ಷಿ ವಿ ಕುಲಾಲ್ ಕಣ್ವತೀರ್ಥ ಮತ್ತಿತರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ತುಳು ಬರಹದ ಪುಸ್ತಕಕ್ಕೆ ಮುನ್ನುಡಿ ಬರೆದ ರೂಪಕಲಾ ಆಳ್ವರವರು ಇದರಲ್ಲಿನ ಲೇಖನಗಳ ಬಗ್ಗೆ ಮಾತಾಡುತ್ತಾ, ಇದು ನಮ್ಮ ತುಳುವರ ದಿನನಿತ್ಯದ ಕಷ್ಟ ಸುಖಗಳ ಬಗೆಗೆ, ಹಬ್ಬ ಹರಿದಿನಗಳ ಬಗೆಗೆ, ಊರಿನ ಜಾತ್ರೆ ಸಡಗರಗಳ ಬಗೆಗೆ ಮತ್ತು ಹಿಂದೆ ಕಳೆದ ಬಾಲ್ಯದ ಬಗೆಗಿನ ನೆನಪು ಹುಟ್ಟಿಸುವ ಉತ್ತಮ ವಿಚಾರಗಳನ್ನು ಹೊಂದಿದ ಒಂದು ಸಮಗ್ರ…
ಬೆಂಗಳೂರಿನ ಯೂನಿವರ್ಸಲ್ ಕೋಚಿಂಗ್ ಸೆಂಟರ್ 25ನೇ ವಾರ್ಷಿಕ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದು, ಆ ಪ್ರಯುಕ್ತ ಜನವರಿ 24ರಂದು ಸಂಜೆ 5:00 ಗಂಟೆಗೆ ಸಂಸ್ಥಾಪಕರ ದಿನ ಕಾರ್ಯಕ್ರಮ ಹಮ್ಮಿಕೊಂಡಿದೆ. ತಾವರಕೆರೆ ಹೋಬಳಿ ಕೊಲೂರಿನ ಗುರುರಾಯನಪುರದಲ್ಲಿನ ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಂಸದ ಯದುವೀರ ಒಡೆಯರ್ ಉದ್ಘಾಟಿಸಲಿದ್ದು, ಎಮ್.ಆರ್.ಜಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ| ಕೆ ಪ್ರಕಾಶ್ ಶೆಟ್ಟಿ, ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್, ಸಿಜಿಎಸ್ಟಿ ಆಯುಕ್ತ ಡಾ| ಎಂ ಕೊಟ್ರಸ್ವಾಮಿ, ಅನ್ನರ್ಕುಂಗಾ ಸೊಲ್ಯೂಷನ್ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಅಶೋಕ್ ಚನ್ನೇಗೌಡ, ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಬೆಂಗಳೂರು ಸಂಸ್ಥೆಯ ಅಧ್ಯಕ್ಷ ಆರ್ ಉಪೇಂದ್ರ ಶೆಟ್ಟಿ ಭಾಗವಹಿಸಲಿದ್ದಾರೆ. ಈ ಸಂಸ್ಥಾಪಕರ ದಿನಾಚರಣೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವುದರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಸಂಸ್ಥೆಯ ಸಾಧನೆ ಮತ್ತು ಬೆಳವಣಿಗೆಯನ್ನು ಇನ್ನಷ್ಟು ಬಲಪಡಿಸುವ ಮಹತ್ವದ ವೇದಿಕೆಯಾಗಲಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ.















