Author: admin
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಉಡುಪಿ ಜಿಲ್ಲೆ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಭೌತಶಾಸ್ತç ಉಪನ್ಯಾಸಕರ ಕಾರ್ಯಾಗಾರ ನಡೆಯಿತು. ಉಡುಪಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ ವಿಭಾಗ)ಯ ಉಪನಿರ್ದೇಶಕರಾದ ಶ್ರೀ ಮಾರುತಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಗಿರೀಶ ಸಿ ಅಸಿಸ್ಟೆಂಟ್ ಡೈರೆಕ್ಟರ್ ಕಂಪ್ಯೂಟರ್ ಸೆಲ್ ಕೆಎಸ್ ಇ ಎ ಬಿ ಬೆಂಗಳೂರು ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಡಾ. ದಯಾನಂದ ಪೈ ವಹಿಸಿದ್ದರು. ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ರೂಪ ಎಲ್ ಭಟ್, ಆದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಶ್ರೀ ಸಂಜೀವ, ಕಾರ್ಕಳ…
ಪುಣೆ ಬಂಟರ ಸಂಘದ ಸಮಾಜ ಕಲ್ಯಾಣ, ಕಲ್ಪವೃಕ್ಷ, ಕ್ರೀಡಾದಾತ ಯೋಜನೆಯ ಅಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನದಂಗವಾಗಿ ಯೋಗ ದಿನಾಚರಣೆಯು ಜೂನ್ 21 ರಂದು ಬೆಳಿಗ್ಗೆ ಗಂಟೆ 9.00ರಿಂದ ಬಂಟರ ಭವನದ ಬ್ಯಾಂಕ್ವೇಟ್ ಹಾಲ್ ನಲ್ಲಿ ನಡೆಯಲಿದೆ. ಯೋಗ ತರಬೇತುದಾರೆ ಜ್ಯೋತಿ ಶೆಟ್ಟಿಯವರು ಯೋಗದಿಂದ ದೇಹಕ್ಕೆ ಆಗುವ ಪ್ರಯೋಜನಗಳ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಪುಣೆಯ ಶೆಟ್ಟಿ ಯೋಗ ಕ್ಲಾಸ್ ನ ನಿರ್ದೇಶಕಿ ಪ್ರಮೀಳಾ ಜೆ ಶೆಟ್ಟಿಯವರು ಈ ಯೋಗ ದಿನಾಚರಣೆಯನ್ನು ನಡೆಸಿಕೊಡಲಿದ್ದಾರೆ. ಬಂಟರ ಸಂಘ ಪುಣೆ, ಮಹಿಳಾ ವಿಭಾಗ, ಯುವ ವಿಭಾಗ ಹಾಗೂ ಪ್ರಾದೇಶಿಕ ಸಮಿತಿಗಳ ಸಂಯುಕ್ತ ಕೂಡುವಿಕೆಯಲ್ಲಿ ನಡೆಯಲಿರುವ ಈ ಯೋಗ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಸಮಾಜ ಬಾಂಧವರು ಪಾಲ್ಗೊಳ್ಳುವಂತೆ ಪುಣೆ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ಅಧ್ಯಕ್ಷರಾದ ಕೆ ಅಜಿತ್ ಹೆಗ್ಡೆ, ಉಪಾಧ್ಯಕ್ಷರುಗಳಾದ ವಿಶ್ವನಾಥ್ ಶೆಟ್ಟಿ, ರಾಮಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣಂಜಾರು, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಕ್ರೀಡಾ ವಿಭಾಗದ…
ವಸಾಯಿ ಕರ್ನಾಟಕ ಸಂಘದ ವತಿಯಿಂದ ಜೂನ್ 21 ರಂದು ಬೆಳಿಗ್ಗೆ ಗಂಟೆ 9.30 ರಿಂದ ಶ್ರೀಸ್ವಾಮಿ ನಾರಾಯಣ ಸಭಾಂಗಣ ಮೊದಲನೆಯ ಮಹಡಿ ಸಾಯಿನಗರ ವಸಾಯಿ ಪಶ್ಚಿಮ ಇಲ್ಲಿ ಅಧ್ಯಕ್ಷರಾದ ಕರ್ನೂರು ಶಂಕರ ಆಳ್ವ ಅವರ ಅಧ್ಯಕ್ಷತೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಯೋಜಿಸಲಾಗಿದೆ. ಯೋಗ ಗುರು ಮಿಲನ್ ಠಕ್ಕರ್ ಮತ್ತು ಮಲ್ಲಿಕಾ ಎಸ್ ಶೆಟ್ಟಿ ಮತ್ತು ಸಂಗಡಿಗರು ಮಾರ್ಗದರ್ಶನ ಮಾಡಲಿದ್ದಾರೆ. ಇವರು ಸುಮಾರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲದಿಂದ ಯೋಗಾಭ್ಯಾಸದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಯೋಗವು ವಿಶ್ವಕ್ಕೆ ಭಾರತದ ದೊಡ್ಡ ಕೊಡುಗೆಯಾಗಿದೆ. ಜೂನ್ 21 ರಂದು ವಿಶ್ವ ಯೋಗ ದಿನವನ್ನಾಗಿ ಆಚರಿಸಲಾಗುತ್ತಿದ್ದು, 190ಕ್ಕೂ ಹೆಚ್ಚು ದೇಶಗಳಲ್ಲಿ ಆಚರಿಸಲಾಗುತ್ತಿದೆ. ಆ ದಿನ ಅನೇಕ ಸ್ಥಳಗಳಲ್ಲಿ ಶಿಬಿರಗಳು ಸಾಮೂಹಿಕ ಯೋಗ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಆರೋಗ್ಯ ದೃಷ್ಟಿಯಿಂದ ಯೋಗವು ತುಂಬಾ ಲಾಭದಾಯಕವಾಗಿದೆ. ಆಧುನಿಕ ಜೀವನ ಶೈಲಿಯ ಒತ್ತಡದಿಂದ ಯುವ ಜನತೆಗೆ ಯೋಗವು ಶಾಂತಿ ಮತ್ತು ಏಕಾಗ್ರತೆಯನ್ನು ಒದಗಿಸುವ ಒಂದು ಶಕ್ತಿಶಾಲಿ ವಿಧಾನ ಎಂದು ಹೇಳಬಹುದು. ಅಂದು ನಡೆಯುವ…
ಜಗತ್ತಿನ ನಾನಾ ಮೂಲೆಗಳಲ್ಲಿ ನೆಲೆಸಿರುವ ಕನ್ನಡಿಗರು ಕನ್ನಡ ನಾಡು-ನುಡಿ, ಸಂಸ್ಕೃತಿ, ಪರಂಪರೆಗಾಗಿ ತಮ್ಮದೇ ಆದ ಕೊಡುಗೆಯನ್ನು ನೀಡುವ ಮೂಲಕ ತಮ್ಮ ವೃತ್ತಿ, ಉದ್ಯೋಗ, ವ್ಯವಹಾರಗಳ ನಡುವೆಯೂ ಅವರು ಕನ್ನಡದ ಬೇರುಗಳನ್ನು ಮರೆಯದೆ, ಹೊಸ ತಲೆಮಾರಿಗೆ ಭಾಷೆಯ ಮಹತ್ವವನ್ನು ಬೋಧಿಸುತ್ತ ಬಂದಿರುವುದನ್ನು ನಾವು ಕಾಣಬಹುದಾಗಿದೆ. ಇಂಥ ಸನ್ನಿವೇಶದ ನಡುವೆ ದುಬೈಯಂತಹ ಬಹುಭಾಷಾ, ಬಹುಸಂಸ್ಕೃತಿಯ ನಗರದಲ್ಲಿ ಕನ್ನಡ ಭಾಷೆಗೆ ತನ್ನದೇ ಆದ ವಿಶೇಷ ಕೊಡುಗೆ ನೀಡಿದವರು ಕ್ರಿಯಾತ್ಮಕ ಕಲಾ ನಿರ್ದೇಶಕರಾಗಿರುವ ಕೊಡಗಿನ ಬಿ.ಕೆ ಗಣೇಶ್ ರೈ ತಮ್ಮ ಕಲಾತ್ಮಕ ದೃಷ್ಟಿ, ಸಂಘಟನಾ ಕೌಶಲ್ಯ ಮತ್ತು ಭಾಷಾ ಪ್ರೀತಿ ಮೂಲಕ ಅವರು ವಿದೇಶ ನೆಲದಲ್ಲೂ ಕನ್ನಡದ ಧ್ವಜವನ್ನು ಎತ್ತಿಹಿಡಿದಿದ್ದಾರೆ. ವಿಜ್ಞಾನದ ಕ್ರಿಯಾರೂಪದ ಅಧುನಿಕ ನಗರ, ವಿಶ್ವ ದರ್ಜೆಯ ವಾಣಿಜ್ಯ ಕೇಂದ್ರ, ವಿಶ್ವದ ನಾನಾ ಕಡೆಗಳ 250ಕ್ಕೂ ಹೆಚ್ಚು ದೇಶವಾಸಿಗಳ ನಾಗರಿಕರು ಅನಿವಾಸಿ ಪ್ರಜೆಗಳಾಗಿ ಉದ್ಯೋಗಿಗಳಾಗಿ, ಉದ್ಯಮಿಗಳಾಗಿ ನೆಲೆಸಿರುವ ದುಬೈನಲ್ಲಿ, ಹಲವಾರು ವರ್ಷಗಳಿಂದ ಕನ್ನಡದ ಮೇಲಿನ ಪ್ರೀತಿ, ಅಭಿಮಾನಕ್ಕಾಗಿ ಬಿ.ಕೆ ಗಣೇಶ್ ರೈ ಅವರು ಮಾಡಿಕೊಂಡು ಬಂದಿರುವ…
ತಾನಾಯಿತು ತನ್ನ ಪಾಡಾಯಿತು ಎನ್ನುವ ಈ ಸ್ವಾರ್ಥಮಯ ಜಗದಲಿ, ಯಾವುದೇ ಪ್ರತಿಫಲದ ನಿರೀಕ್ಷೆಯಿಲ್ಲದೆ ನಿಸ್ವಾರ್ಥವಾಗಿ ದುಡಿಯುವ ಸಂದೀಪ್ ಶೆಟ್ಟಿಯವರ ವ್ಯಕ್ತಿತ್ವ ನಿಜಕ್ಕೂ ಅಪರೂಪದ್ದು. ಇತರರ ನೋವಿಗೆ ಸ್ಪಂದಿಸುವ ಮಾನವೀಯ ಹೃದಯ, ಸಮಾಜದ ಒಳಿತಿಗಾಗಿ ಸದಾ ತುಡಿವ ಸೇವಾ ಮನೋಭಾವ ಹಾಗೂ ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುವ ಸಂದೀಪ್ ಶೆಟ್ಟಿಯವರು ಬೆಳುವಾಯಿ ಗಿರೀಶ್ ಶೆಟ್ಟಿ ಹಾಗೂ ಬಂಟ್ವಾಳ ತಾಲೂಕಿನ ನಯನಾಡು ಪ್ರಭಾವತಿ ಜಿ ಶೆಟ್ಟಿಯವರ ಸುಪುತ್ರರಾಗಿ ಜನಿಸಿದರು. ಡಿಪ್ಲೋಮ ಇಂಜಿನಿಯರಿಂಗ್ ಪದವಿ ಮುಗಿಸಿ ಕಳೆದ 13 ವರ್ಷಗಳಿಂದ ‘ಸಮರ್ಥ ಬಿಲ್ಡರ್ಸ್’ ಎಂಬ ಸ್ವಂತ ಸಂಸ್ಥೆ ಸ್ಥಾಪಿಸಿ ಯಶಸ್ವೀ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಸದಾ ನಗುಮೊಗದೊಂದಿಗೆ ಎಲ್ಲರೊಂದಿಗೆ ಬೆರೆತು ಬಾಳುವ ವಿಶೇಷ ಗುಣ, ಸ್ನೇಹಪರ ವ್ಯಕ್ತಿತ್ವ ಹಾಗೂ ಸೇವಾ ಮನೋಭಾವದಿಂದ ಜನಮನ ಗೆದ್ದಿರುವ ಸಂದೀಪ್ ಶೆಟ್ಟಿಯವರು ಯುವ ಬಂಟರ ಸಂಘ ಮೂಡುಬಿದಿರೆಯ 2026-27 ರ ಸಾಲಿಗೆ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡಿದ್ದಾರೆ. ಜವಾಬ್ದಾರಿಯನ್ನು ಹೊತ್ತರೆ ಅದನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಛಲ ಮತ್ತು ಶ್ರಮ ಇವರ ವಿಶೇಷತೆಯಾಗಿದೆ. ಯುವ ಬಂಟರ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ| ಕೆ. ಪ್ರಕಾಶ್ ಶೆಟ್ಟಿಯವರು ತಮ್ಮ ಉದ್ಯಮ ಪಯಣದ ಮತ್ತೊಂದು ಮಹತ್ವದ ಮೈಲಿಗಲ್ಲಾಗಿ ಅಮೆರಿಕದಿಂದ ತರಿಸಲಾದ 14 ಆಸನಗಳ ‘ಎಂಬ್ರೇಯರ್ ಲೆಗಸಿ 650’ (Embraer Legacy 650) ಖಾಸಗಿ ವಿಮಾನವನ್ನು ಎಂಆರ್ಜಿ ಕುಟುಂಬಕ್ಕೆ ಸೇರ್ಪಡೆಗೊಳಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನ್ನಿಧ್ಯ ಹಾಗೂ ಆಶೀರ್ವಾದದೊಂದಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಕುಟುಂಬ ಸದಸ್ಯರು, ಆಪ್ತರು ಹಾಗೂ ಹಿತೈಷಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು. ಆತಿಥ್ಯ, ರಿಯಲ್ ಎಸ್ಟೇಟ್ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ದೇಶಾದ್ಯಂತ ತನ್ನದೇ ಆದ ಛಾಪು ಮೂಡಿಸಿರುವ ಎಂಆರ್ಜಿ ಸಮೂಹವನ್ನು ವಿನಯ, ಪರಿಶ್ರಮ ಮತ್ತು ದೂರದೃಷ್ಟಿಯೊಂದಿಗೆ ಬೆಳೆಸಿದ ಡಾ| ಪ್ರಕಾಶ್ ಶೆಟ್ಟಿ ಅವರು ಯಶಸ್ವಿ ಉದ್ಯಮಿಯಾಗಿರುವುದರ ಜೊತೆಗೆ ಸಮಾಜಮುಖಿ ಚಟುವಟಿಕೆಗಳು ಮತ್ತು ದಾನ ಧರ್ಮಗಳ ಮೂಲಕವೂ ಹೆಸರುವಾಸಿಯಾಗಿದ್ದಾರೆ. ವಿನಮ್ರ ಆರಂಭದಿಂದ ಆರಂಭವಾದ ಅವರ ಪಯಣ…
ಬಾಂಬೆ ಬಂಟ್ಸ್ ಅಸೋಸಿಯೇಶನ್ ಮುಂಬಯಿ ಮಹಾನಗರದಲ್ಲಿರುವ ಜಾತೀಯ ಸಂಘಟನೆಗಳಲ್ಲಿ ಮುಂಚೂಣಿಯಲ್ಲಿ ಇರುವ ಒಂದು ಸಂಸ್ಧೆ. ಇದರ ಮಹಿಳಾ ವಿಭಾಗದ ವತಿಯಿಂದ ಇದೇ ಬರುವ ಜೂನ್ 21 ರಂದು ಆದಿತ್ಯವಾರ ಸಾಯಂಕಾಲ 4.00 ಗಂಟೆಗೆ ಸರಿಯಾಗಿ ಅಧ್ಯಕ್ಷರಾದ ಅಡ್ವೋಕೇಟ್ ಡಿ.ಕೆ ಶೆಟ್ಚಿಯವರ ಅಧ್ಯಕ್ಷತೆಯಲ್ಲಿ ಬಂಟ್ಸ್ ಸೆಂಟರ್ ಜೂಯಿನಗರ ನವಿ ಮುಂಬಯಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಿದೆ. ಈ ಕಾರ್ಯಕ್ರಮದಲ್ಲಿ ಯೋಗ ಗುರುಗಳಾದ ಶ್ರೀಮತಿ ಸ್ವಾತಿ ಶೆಟ್ಟಿ, ಶ್ರೀಮತಿ ಸವಿತಾ ರತ್ನಾಕರ ಶೆಟ್ಟಿ ಹಾಗೂ ಸಮಾಜಸೇವಕಿ ಶ್ರೀಮತಿ ರತಿ ಶೆಟ್ಟಿಯವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶ್ರೀಮತಿ ಸ್ವಾತಿ ಶೆಟ್ಟಿಯವರು ಯೋಗಾಭ್ಯಾಸದ ಬಗ್ಗೆ ವಿವಿಧ ಸಾಮಾನ್ಯ ಮತ್ತು ಕಠಿಣ ಆಸನಗಳನ್ನು ಪ್ರಾಯೋಗಿಕವಾಗಿ ಸ್ವಯಂ ಪ್ರದರ್ಶಿಸಲಿದ್ದಾರೆ ಮತ್ತು ಶ್ರೀಮತಿ ಸವಿತಾ ಆರ್ ಶೆಟ್ಟಿಯವರು ಯೋಗಾಭ್ಯಾಸದ ಮಾಹಿತಿಯನ್ನು ವಿವರವಾಗಿ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಅಡ್ವೋಕೇಟ್ ಡಿ.ಕೆ ಶೆಟ್ಟಿ, ಉಪಾಧ್ಯಕ್ಷ ಐಕಳ ಕಿಶೋರ್ ಕೆ ಶೆಟ್ಟಿ, ಗೌ.ಪ್ರ ಕಾರ್ಯದರ್ಶಿ ನ್ಯಾ. ಶೇಖರ್ ಆರ್ ಶೆಟ್ಟಿ, ಗೌ. ಕೋಶಾಧಿಕಾರಿ ಸಿ.ಎ ವಿಶ್ವನಾಥ ಶೆಟ್ಟಿ,…
ರಾಜ್ಯದ ಮುಂಚೂಣಿಯ ಕ್ರೆಡಿಟ್ ಸಹಕಾರ ಸಂಘವಾದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿಯ ಪಡೀಲ್ ಶಾಖೆಯನ್ನು ದ.ಕ ಜಿಲ್ಲಾಧಿಕಾರಿ ಕಾರ್ಯಾಲಯ ಪ್ರಜಾ ಸೌಧಕ್ಕೆ ಜೂನ್ 17 ರಂದು ಸ್ಥಳಾಂತರ ಮಾಡಲಾಯಿತು. ಉದ್ಘಾಟಕರಾಗಿ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ದರ್ಶನ್ ಎಚ್.ವಿರವರು ಮಾತನಾಡುತ್ತಾ, ನಮ್ಮ ಕಛೇರಿ ಸಂಕೀರ್ಣದಲ್ಲಿ ಬ್ಯಾಂಕುಗಳ ಹಾಗೆಯೇ ಜನಸಾಮಾನ್ಯರಿಗೆ ಆರ್ಥಿಕ ಸವಲತ್ತುಗಳನ್ನು ನೀಡಿ ಜನರ ಆರ್ಥಿಕ ಅಭ್ಯುದಯಕ್ಕೆ ಕೊಡುಗೆಯನ್ನು ನೀಡುತ್ತಿರುವ ಸಹಕಾರ ಸಂಘಗಳಿಗೆ ಅವಕಾಶ ಕಲ್ಪಿಸಲಾಗಿದೆ. ಶ್ರೀ ರಾಮಕೃಷ್ಣ ಸೊಸೈಟಿಯು ಹೆಚ್ಚು ಹೆಚ್ಚು ವಹಿವಾಟುಗಳನ್ನು ಮಾಡಿ ಇನ್ನಷ್ಟು ಅಭಿವೃದ್ಧಿಯನ್ನು ಕಾಣಲಿ ಎಂದು ಹಾರೈಸಿದರು. ಸಭೆಯ ಮುಖ್ಯ ಅಭ್ಯಾಗತರಾದ ದಕ್ಷಿಣ ಕನ್ನಡ ಜಿಲ್ಲೆಯ ಅಪಾರ ಜಿಲ್ಲಾಧಿಕಾರಿ ರಾಜು ಕೆ. ರವರು ಮಾತನಾಡಿ, ರಾಜ್ಯದಲ್ಲಿ ಸಹಕಾರ ಚಳುವಳಿಯು ಗದಗದಲ್ಲಿ ಆರಂಭವಾಗಿದ್ದರೂ, ಅದು ಅತ್ಯುತ್ತಮವಾಗಿ ಪ್ರಗತಿಯನ್ನು ಹೊಂದಿ ಜನರ ವಿಶ್ವಾಸಕ್ಕೆ ಪಾತ್ರವಾಗಿರುವುದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ. ಇದಕ್ಕೆ ಪೂರಕವಾಗಿ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿಯು ಒಳ್ಳೆಯ…
ಯುವ ಬಂಟರ ಸಂಘ ಮೂಡುಬಿದಿರೆಯ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಸಮಾಜ ಸೇವಕ, ಧಾರ್ಮಿಕ ಮುಖಂಡ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಹಾಗೂ ಸಮರ್ಥ ಬಿಲ್ಡರ್ಸ್ ನ ಆಡಳಿತ ನಿರ್ದೇಶಕರಾದ ಬೆಳುವಾಯಿ ಸಂದೀಪ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉದ್ಯಮ ಕ್ಷೇತ್ರದ ಸಾಧನೆಗಾಗಿ 2025 ರ ಸಾಲಿನ ಶ್ರೀ ಯಕ್ಷದೇವ ಸಾಧನಾ ಪುರಸ್ಕಾರ ಪಡೆದ ಸಂದೀಪ್ ಶೆಟ್ಟಿಯವರು ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಯಶಸ್ವೀ ಸಂಘಟಕರಾಗಿಯೂ, ಸಮಾಜ ಸೇವಕರಾಗಿಯೂ ಗುರುತಿಸಿಕೊಂಡಿದ್ದಾರೆ.
ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ವತಿಯಿಂದ ಜೂನ್ 19 ರಂದು ಸಂಜೆ 4 ಗಂಟೆಗೆ ಇಂದಿರಾ ಗಾಜಿನ ಮನೆ ಹತ್ತಿರವಿರುವ ಆರ್.ಎನ್ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ‘ಬಂಟರ ಬಾಂಧವ್ಯ’ ಸಮಾರಂಭವನ್ನು ಆಯೋಜಿಸಲಾಗಿದೆ. ಬಂಟ ಸಮುದಾಯದ ಬಾಂಧವರನ್ನು ಒಗ್ಗೂಡಿಸುವ ಮತ್ತು ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಂಘದ ಸಂಸ್ಥಾಪಕರು, ಹಿರಿಯರು, ದಾನಿಗಳು ಹಾಗೂ ಮಾಜಿ ಅಧ್ಯಕ್ಷರುಗಳು ಸಮಾರಂಭ ಯಶಸ್ಸಿಗೆ ಕೈಜೋಡಿಸಿದ್ದಾರೆ ಎಂದು ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ಅಧ್ಯಕ್ಷ ರಾಜೇಂದ್ರ ಎ ಶೆಟ್ಟಿ ತಿಳಿಸಿದ್ದಾರೆ. ಸಂಜೆ 4 ರಿಂದ ಲಘು ಉಪಹಾರದೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಸಂಜೆ 4:3೦ ರಿಂದ ಬಂಟ ಸಮುದಾಯದ ಆಸಕ್ತ ಮಕ್ಕಳು, ಮಹಿಳೆಯರು ಮತ್ತು ಪುರುಷರಿಂದ ಸಾಂಸ್ಕೃತಿಕ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 5 ಕ್ಕೆ ಮದುವೆಯಾದ ನೂತನ ವಧು ವರರಿಗೆ ಹಿರಿಯರಿಂದ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆ. 5.30ಕ್ಕೆ ರಂಗಮಂಚದ ಕಾರ್ಯಕ್ರಮ ಮುಂದುವರಿಯಲಿದ್ದು, ಜೂನಿಯರ್ ರಾಜ್ಕುಮಾರ್, ಜೂನಿಯರ್ ಅಂಬರೀಶ್, ಜೂನಿಯರ್ ವಿಷ್ಣುವರ್ಧನ್ ಮತ್ತು ಜೂನಿಯರ್ ಕುಮಾರ್…















