Author: admin

ಆಳ್ವಾಸ್ ಭಾರತೀಯ ಸಂವಿಧಾನದ ಮೌಲ್ಯಗಳನ್ನು ಅನುಸರಿಸಿ ವಿದ್ಯಾರ್ಥಿಗಳಲ್ಲಿ ಉತ್ತಮ ನಾಗರಿಕತ್ವವನ್ನು ಬೆಳೆಸುವ ಆದರ್ಶ ಶಿಕ್ಷಣ ಸಂಸ್ಥೆ ಎಂದು ಮಂಗಳೂರು ವಿವಿಯ ಕುಲಪತಿ ಡಾ| ಪಿ.ಎಲ್ ಧರ್ಮ ನುಡಿದರು. ಅವರು ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಚೊಚ್ಚಲ ಹಿರಿಯ ವಿದ್ಯಾರ್ಥಿಗಳ ಸಮಾವೇಶದಲ್ಲಿ ಮಾತನಾಡಿದರು. ಆಳ್ವಾಸ್ ಶಿಕ್ಷಣ ಸಂಸ್ಥೆಯು ಕೇವಲ ಶಿಕ್ಷಣ ನೀಡುವುದಲ್ಲ; ವಿದ್ಯಾರ್ಥಿಗಳಲ್ಲಿ ಮಾನವೀಯತೆ, ಶಿಸ್ತು, ರಾಷ್ಟ್ರೀಯತೆ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುತ್ತಿದೆ. ವಿವಿಧ ರಾಜ್ಯಗಳಿಂದ ಬಂದ ವಿದ್ಯಾರ್ಥಿಗಳು ಇಲ್ಲಿ ಒಂದೇ ಕುಟುಂಬದಂತೆ ಬೆರೆತು ಬದುಕುವುದು ಭಾರತದ ಏಕತೆಯ ಸಂಕೇತವಾಗಿದೆ ಎಂದರು. ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳ ಹೆಸರು ಹಲವರಿಗೆ ತಿಳಿದಿರದೇ ಇರಬಹುದು, ಆದರೆ ಡಾ. ಮೋಹನ್ ಆಳ್ವರ ಹೆಸರು ಎಲ್ಲರಿಗೂ ಪರಿಚಿತವಾಗಿದೆ. ಅದು ಅವರ ವ್ಯಕ್ತಿತ್ವದ ಮಹತ್ವವನ್ನು ತೋರಿಸುತ್ತದೆ. ಡಾ. ಆಳ್ವರು ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಕೊಡುಗೆ ನೀಡಿದ ಮಹನೀಯರು. ಅವರು ಸ್ಥಾಪಿಸಿದ ಆಳ್ವಾಸ್ ಶಿಕ್ಷಣ ಸಂಸ್ಥೆ ಇಂದು ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿರುವ ಜ್ಞಾನ ಮಂದಿರವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ…

Read More

ದೇಶದಾದ್ಯಂತ ಕೋಟ್ಯಾಂತರ ಯುವಕರ ಕನಸುಗಳನ್ನು ಹೊತ್ತು ಸಾಗುವ ಪರೀಕ್ಷೆಯೆಂದರೆ ಅದು ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್. ಬಡವನ ಮಗನಾಗಲಿ, ರೈತನ ಮಗಳಾಗಲಿ, ಮಧ್ಯಮ ವರ್ಗದ ವಿದ್ಯಾರ್ಥಿಯಾಗಲಿ ತಮ್ಮ ಬದುಕನ್ನು ಬದಲಾಯಿಸಿಕೊಳ್ಳಲು ವರ್ಷಗಳ ಕಾಲ ಹಗಲು-ರಾತ್ರಿ ದುಡಿದು ಈ ಪರೀಕ್ಷೆಗೆ ಸಿದ್ಧರಾಗುತ್ತಾರೆ. ಆದರೆ ಮೇ ಮೂರರಂದು ನಡೆದ ನೀಟ್ ಯುಜಿ 2026 ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯ ಕಾರಣಕ್ಕೆ ರದ್ದಾಗಿದೆ ಎನ್ನುವ ಸುದ್ದಿ ಕೇಳಿದಾಗ, ಕುಸಿದದ್ದು ಕೇವಲ ಪರೀಕ್ಷಾ ವ್ಯವಸ್ಥೆಯಲ್ಲ ಲಕ್ಷಾಂತರ ವಿದ್ಯಾರ್ಥಿಗಳ ಕನಸುಗಳು. ಸುಮಾರು ಇಪ್ಪತ್ತೆರಡು ಲಕ್ಷ ವಿದ್ಯಾರ್ಥಿಗಳು ಬರೆದ ಪರೀಕ್ಷೆಯನ್ನು ಮತ್ತೆ ಬರೆಯಬೇಕೆಂದರೆ ಅದು ಕೇವಲ ಆಡಳಿತಾತ್ಮಕ ನಿರ್ಧಾರವಲ್ಲ; ಅದು ವಿದ್ಯಾರ್ಥಿಗಳ ಮಾನಸಿಕ ಸ್ಥೈರ್ಯ, ಕುಟುಂಬಗಳ ಆರ್ಥಿಕ ಹೊರೆ ಮತ್ತು ಯುವಜನರ ಭವಿಷ್ಯದ ಮೇಲೆ ನಡೆಸುತ್ತಿರುವ ನಿರ್ದಯ ಪ್ರಯೋಗ. ಒಬ್ಬ ವಿದ್ಯಾರ್ಥಿ ನೀಟ್‌ಗೆ ಸಿದ್ಧವಾಗುವುದು ಎಂದರೆ ಕೇವಲ ಓದುವುದಲ್ಲ. ಅನೇಕರು ಮೊಬೈಲ್‌ ತ್ಯಜಿಸುತ್ತಾರೆ, ಹಬ್ಬ-ಹರಿದಿನ ಮರೆತು ಓದುತ್ತಾರೆ, ಸ್ನೇಹಿತರನ್ನು ದೂರವಿಡುತ್ತಾರೆ. ಕೆಲವರು ಕೋಚಿಂಗ್‌ಗಾಗಿ ಊರು ಬಿಟ್ಟು ನಗರಗಳಿಗೆ ಬರುತ್ತಾರೆ. ಕೆಲ…

Read More

ವಿಶಿಷ್ಟಚೇತನರು ಯಾರನ್ನೂ ಅವಲಂಬಿಸದೆ ಸ್ವಾವಲಂಬಿ ಬದುಕು ನಡೆಸಲು ಸಾಧ್ಯವಿದೆ ಎನ್ನುವುದನ್ನು ಹಲವಾರು ಮಂದಿ ಸಾಧಿಸಿ ತೋರಿಸಿದ್ದಾರೆ. ಅಂತಹ ಸಾಧಕರು ವಿಶಿಷ್ಟಚೇತನರಿಗೆ ಮಾತ್ರವಲ್ಲದೇ ಸಮಾಜಕ್ಕೂ ಕೂಡಾ ಪ್ರೇರಣೆಯಾಗಿದ್ದಾರೆ. ಎಂದು ನಿಟ್ಟೆ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಡಾ. ಎಂ. ಶಾಂತರಾಮ ಶೆಟ್ಟಿ ಹೇಳಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವಿಶಿಷ್ಟಚೇತನರ ಸಂಘದ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಹಾಗೂ ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಮಂಗಳೂರಿನ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ವಿಶಿಷ್ಟ ಚೇತನರ ಸಂಘದ 34ನೇ ವಾರ್ಷಿಕ ಸಮಾವೇಶ, ದಿವ್ಯಾಂಗರಿಗೆ ವೈದ್ಯಕೀಯ ನೆರವು, ವೈದ್ಯಕೀಯ ತಪಾಸಣೆ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮ ಉದ್ಘಾಟಿಸಿದ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಛೇರ್ಮನ್ ಸಿಎ ಶಾಂತರಾಮ ಶೆಟ್ಟಿ ಮಾತನಾಡಿ, ವಿವಿಧ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ ವಿಶಿಷ್ಟ…

Read More

ಬಂಟರ ಯಾನೆ ನಾಡವರ ಸಂಘ ಕೊಪ್ಪ (ರಿ) ಇದರ 41ನೇ ವಾರ್ಷಿಕೋತ್ಸವ ಸಮಾರಂಭವು ಇತ್ತೀಚಿಗೆ ಅನನ್ಯ ವಿಜಯ ಅಜಿಲ ಸ್ಮಾರಕ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರಗಿತು. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೊಪ್ಪ ಬಂಟರ ಸಂಘದ ಅಧ್ಯಕ್ಷ ಸುಬ್ರಮಣ್ಯ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶೃಂಗೇರಿ ಶಾಸಕ ಟಿಡಿ ರಾಜೇಗೌಡ, ಸುಧಾಕರ ಶೆಟ್ಟಿ ತುಮಾಖಾನೆ, ಮಾಜಿ ಶಾಸಕ ಸುಕುಮಾರ್ ಶೆಟ್ಟಿ, ಮೋಹನ್ ಶೆಟ್ಟಿ, ನರೇಂದ್ರ ಶೆಟ್ಟಿ, ಉದ್ಯಮಿ ವಿಜಯ ಹೆಗ್ಡೆ, ಶ್ರೀಮತಿ ಗೀತಾ ವಿಜಯ ಅಜಿಲ, ಸತೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Read More

ವೃತ್ತಿ, ಪ್ರವೃತ್ತಿ ಹಾಗೂ ಜೀವನದ ಜೊತೆಯಲ್ಲಿ ಸಮಾಜದ ಬಗ್ಗೆ ತುಡಿತವಿರುವ ಸಮಾಜಮುಖಿಗಳಾಗಿರುವುದೇ ಬದುಕಿನ ನಿಜವಾದ ಶ್ರೇಷ್ಠತನ ಎಂದು ಟೆಲಿಕಾಂ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿ ಶ್ರೀಧರ ಶೆಟ್ಟಿ ನುಡಿದರು. ಮೇ. 31 ರಂದು ಕೋಟೇಶ್ವರದ ಸಹನಾ ಕನ್ವೆನ್ಷನ್ ಹಾಲ್‌ನಲ್ಲಿ ನಡೆಯಲಿರುವ ಜಿ. ಕುಶಲ ಹೆಗ್ಡೆ ಜನ್ಮ ಶತಮಾನೋತ್ಸವ ಕಾರ್ಯಕ್ರಮ ‘ಕುಶಲ ಹೆಗ್ಡೆ 100’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ಸಮಾಜದ ಕಟ್ಟಕಡೆಯ ಮಕ್ಕಳಿಗೂ ಶಿಕ್ಷಣ ದೊರಕಬೇಕು ಎನ್ನುವ ಕಾಳಜಿಯಲ್ಲಿ ಸ್ಥಾಪನೆಗೊಂಡಿದ್ದ ಕುಂದಾಪುರದ ಬಂಟ್ಸ್ ಹಾಸ್ಟೆಲ್ ನಿರ್ವಹಣೆ ವೇಳೆ, ಸ್ವಂತಕ್ಕೆ ಬಂದಿದ್ದ ಗೇಣಿ ಅಕ್ಕಿಯನ್ನು ನಿಲಯವಾಸಿಗಳಿಗೆ ನೀಡುವ ಔದಾರ್ಯತೆ ಜಿ. ಕುಶಲ ಹೆಗ್ಡೆ ಅವರಿಗೆ ಇತ್ತು ಎಂದರು. ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಯು.ಎಸ್ ಶೆಣೈ ಪ್ರಾಸ್ತಾವಿಕವಾಗಿ ಮಾತನಾಡಿ, ದಶಕಗಳ ಕಾಲ ಕುಂದಾಪುರದ ನಿತ್ಯ ಕಾರ್ಯ ಕಲಾಪಗಳ ಅವಿಭಾಜ್ಯವಾಗಿದ್ದ ಕುಶಲ ಹೆಗ್ಡೆ ಅವರಲ್ಲಿ ಸಾಮಾಜಿಕ ಚಿಂತನೆಗಳಿದ್ದವು. ಶೈಕ್ಷಣಿಕ, ಧಾರ್ಮಿಕ,‌ ಸಹಕಾರಿ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ…

Read More

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಇವರ ಸಹಯೋಗದಲ್ಲಿ ನಡೆದ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕೃತಿ ಉತ್ಸವದಲ್ಲಿ ಯುವ ಉದ್ಯಮಿ, ಕ್ರೀಡಾ ಪೋಷಕ, ಚಿತ್ರನಟ ಹಾಗೂ ಸಮಾಜಸೇವಕರಾದ ಸಂದೀಪ್ ಪುರಂದರ ಶೆಟ್ಟಿಯವರಿಗೆ ‘ದತ್ತಿನಿಧಿ ಪ್ರಶಸ್ತಿ’ ಪ್ರದಾನ ನೀಡಿ ಗೌರವಿಸಿತು. ಮೇ 16 ರಂದು ನಡೆದ ಅಭೂತಪೂರ್ವ ಕಾರ್ಯಕ್ರವನ್ನು ಕರ್ನಾಟಕ ಸರಕಾರದ ಸಣ್ಣ ನೀರಾವರಿ ಸಚಿವರಾದ ಎನ್ ಎಸ್ ಭೋಸರಾಜು ಉದ್ಘಾಟಿಸಿದರೆ, ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅರಿಬೈಲು ಗೋಪಾಲ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಪುಷ್ಪರಾಜ ಶೆಟ್ಟಿ ಬಿ.ಎನ್, ಶ್ರೀನಿವಾಸ ನಾಯಕ್ ಇಂದಾಜೆ, ರಾಧಾಕೃಷ್ಣ ಕೆ ಉಳಿಯತ್ತಡ್ಕ, ಶಿವಾನಂದ ಕೋಟ್ಯಾನ್, ಶಿವ ರೆಡ್ಡಿ ಖ್ಯಾಡೆದ್, ಎನ್ ಚನಿಯಪ್ಪ ನಾಯ್ಕ, ಗಡಿ ಪ್ರದೇಶಾಭಿವೃದ್ಧಿ…

Read More

ಬಂಟರ ಸಂಘ ಪಳ್ಳಿ ನಿಂಜೂರು ವಲಯ (ರಿ) ವತಿಯಿಂದ ಕಾರ್ಕಳ, ಕಾಪು ಹಾಗೂ ಹೆಬ್ರಿ ತಾಲೂಕು ಬಂಟರ ಸಂಘಗಳ ಸಹಯೋಗದೊಂದಿಗೆ ಮೇ 16 ರಂದು ನಡೆದ ಹೊನಲು ಬೆಳಕಿನ ಬಂಟರ ಕ್ರೀಡೋತ್ಸವ -2026 ಕಾರ್ಯಕ್ರಮವನ್ನು ಮಾನ್ಯ ಶಾಸಕರಾದ ಮಂಜುನಾಥ ಭಂಡಾರಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಳ್ಳಿ ನಿಂಜೂರು ವಲಯ ಬಂಟರ ಸಂಘದ ಬಂಟರ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು, ಉಡುಪಿ ಜಿಲ್ಲಾ ಅತ್ಲೇಟಿಕ್ಸ್ ಸಂಸ್ಥೆಯ ಅಧ್ಯಕ್ಷ ಹರಿಪ್ರಸಾದ್ ರೈ, ಕಾರ್ಕಳ ಬಂಟರ ಸಂಘದ ಸಂಚಾಲಕ ವಿಜಯ ಶೆಟ್ಟಿ, ಅಂತಾರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲು, ಬೆಳ್ಮಣ್ ಬಂಟರ ಸಂಘದ ಅಧ್ಯಕ್ಷ ಶೋಧನ್ ಶೆಟ್ಟಿ, ಗೋವಾ ಬಂಟರ ಸಂಘದ ಸ್ಥಾಪಕಾಧ್ಯಕ್ಷ ಜಯಕರ ಶೆಟ್ಟಿ, ತುಳು ಕೂಟ ಗೋವಾದ ಅಧ್ಯಕ್ಷ ಗಣೇಶ್ ಶೆಟ್ಟಿ ಇರ್ವತ್ತೂರು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ…

Read More

ಕುಂದಾಪುರ ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೇ 16 ರಂದು ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮಂಡಳಿಯ ವತಿಯಿಂದ ನಡೆದ ‘ಸಂಸ್ಕೃತಿ’ ಸಾಂಪ್ರದಾಯಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪಂಜುರ್ಲಿ ಗ್ರೂಪ್ ಹೋಟೆಲ್ಸ್ ನ ಸಿಎಂಡಿ ರಾಜೇಂದ್ರ ವಿ ಶೆಟ್ಟಿ ದಂಪತಿಗಳನ್ನು ಸನ್ಮಾನಿಸಿ ಗೌರವಿಸಿದರು. ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ಡಾ| ಕೆ ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂಧರ್ಭ ಡಾ| ಚೇತನ್ ಶೆಟ್ಟಿ ಕೋವಾಡಿ, ರಕ್ಷಿತ್ ರಾವ್, ರೇಷ್ಮಾ ಶೆಟ್ಟಿ, ಆಕಾಶ್ ಬಿ ಶೆಟ್ಟಿ, ನಿರೀಕ್ಷಾ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Read More

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಸಹಕರಿಸಿದ ಸಮಾಜ ಸೇವಕ, ಆಸ್ಪೆನ್ ಕಂಪನಿ ಮುಖ್ಯಸ್ಥ ಹಾಗೂ ಉಡುಪಿ ಕುಂತಳನಗರ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿಯವರನ್ನು ಶ್ರೀ ಕ್ಷೇತ್ರ ಗುರುಪುರದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹಾಗೂ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ| ಕೆ ಪ್ರಕಾಶ್ ಶೆಟ್ಟಿಯವರು ಮತ್ತಿತರ ಗಣ್ಯರ ಸಮಕ್ಷಮ ಸನ್ಮಾನಿಸಿ ಅಭಿನಂದಿಸಿದರು. ಅಶೋಕ್ ಕುಮಾರ್ ಶೆಟ್ಟಿಯವರು ತಮ್ಮ ಆಸ್ಪೆನ್ ಸಂಸ್ಥೆಯಿಂದ 25 ಲಕ್ಷ ರೂ ದೇಣಿಗೆ ನೀಡಿದ್ದಲ್ಲದೇ, ಎಸ್.ಇ.ಝಡ್ ನ ವಿವಿಧ ಕಂಪನಿಗಳಿಂದ ಹಾಗೂ ಸ್ಟೀಲ್ ಸ್ಟ್ರಾಂಗ್ ಕಂಪನಿಯ ಸಿಎಂಡಿ ರಮೇಶ್ ಶೆಟ್ಟಿಯವರಿಂದ ರೂ. 5 ಲಕ್ಷ, ಜೈ ಹಿಂದ್ ಕಂಪನಿಯ ಎಂಡಿ ದಿವ್ಯ ಜೈನ್ ರವರಿಂದ ರೂ. 5 ಲಕ್ಷ, ಎಂ11 ಕಂಪನಿಯ ಅನಿಲ್ ಅವರಿಂದ ರೂ. 2 ಲಕ್ಷ ದೇಣಿಗೆ ಸಂಗ್ರಹಿಸಿ ದೇವಸ್ಥಾನಕ್ಕೆ ಹಸ್ತಾಂತರಿಸಿದ್ದಾರೆ.

Read More

ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ರಕ್ತದಾನ, ವಿಪತ್ತು ನಿರ್ವಹಣೆಯಂತಹ ಉದಾತ್ತ ಕಾರ್ಯಗಳಲ್ಲಿ ತೊಡಗಿರುವ ರೆಡ್ ಕ್ರಾಸ್ ಸಂಸ್ಥೆ ಮಾನವೀಯ ಸೇವೆಯಲ್ಲಿ ತೊಡಗಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮತ್ತು ಯುವ ಜನತೆಗೆ ಪ್ರೇರಣೆಯಾಗಿದೆ ಎಂದು ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದರು. ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ಯೂತ್ ರೆಡ್ ಕ್ರಾಸ್ ಮಂಗಳೂರು ವಿ.ವಿ ಸಹಯೋಗದಲ್ಲಿ ರೆಡ್ ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಛೇರ್ಮನ್ ಸಿಎ ಶಾಂತರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾದ ರೆಡ್ ಕ್ರಾಸ್ ವಿಚಾರ ಸಂಕಿರಣದಲ್ಲಿ ಸುರತ್ಕಲ್ ಎನ್ಐಟಿಕೆಯ ಸಹ ಪ್ರಾಧ್ಯಾಪಕಿ ಡಾ| ರಶ್ಮಿ ಸುಧೀರ್ ಉಚ್ಚಿಲ್ ಮತ್ತು ಡಿ ಅಡಿಕ್ಷನ್ ಸಮಲೋಚಕಿ ಡಾ| ಕುಸುಮ್ ತಂತ್ರಿ ಡೆಸಾ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ರೆಡ್ ಕ್ರಾಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ. ಬಿ ಸಚ್ಚಿದಾನಂದ…

Read More