Author: admin
ಆಳ್ವಾಸ್ ನುಡಿಸಿರಿ, ವಿರಾಸತ್ ಕಾರ್ಕಳ ಘಟಕದ ಆಶ್ರಯದಲ್ಲಿ ನವೆಂಬರ್ 29ರಂದು ಶನಿವಾರ ಸಂಜೆ 5:45ಕ್ಕೆ ಕಾರ್ಕಳದ ಸ್ವರಾಜ್ ಮೈದಾನದಲ್ಲಿ ಅದ್ಧೂರಿ ಸಾಂಸ್ಕೃತಿಕ ವೈಭವ ಜರುಗಲಿದೆ. ಸಮಾರಂಭವನ್ನು ಖ್ಯಾತ ಉದ್ಯಮಿ ಬರೋಡ ಶಶಿಧರ ಶೆಟ್ಟಿ ಉದ್ಘಾಟಿಸಲಿದ್ದು, ಸಮಾರಂಭಕ್ಕೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ನುಡಿಸಿರಿ, ವಿರಾಸತ್ ಘಟಕದ ಗೌರವಾಧ್ಯಕ್ಷ ವಿ. ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಆಳ್ವಾಸ್ ವಿದ್ಯಾಸಂಸ್ಥೆಯ ಛೇರ್ಮನ್ ಡಾ. ಮೋಹನ್ ಅಳ್ವ ಉಪಸ್ಥಿತರಿರುವರು ಎಂದು ಕಾರ್ಯಕ್ರಮದ ಆಳ್ವಾಸ್ ನುಡಿಸಿರಿ ವಿರಾಸತ್ ಸಾಂಸ್ಕೃತಿಕ ವೈಭವದ ಕಾರ್ಕಳದ ಅದ್ಯಕ್ಷ ವಿಜಯ ಶೆಟ್ಟಿ ಹೇಳಿದರು. ಈ ವರ್ಷದ ನುಡಿಸಿರಿ, ವಿರಾಸತ್ ಸಾಂಸ್ಕೃತಿಕ ವೈಭವವನ್ನು ಕೀರ್ತಿಶೇಷ ಎಂ.ಕೆ. ವಿಜಯಕುಮಾರ್ ಅವರ ಸ್ಮರಣೆಗೆ ಅರ್ಪಿಸಲಾಗಿದೆ. ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500ಕ್ಕೂ ಹೆಚ್ಚು ವಿದ್ಯಾರ್ಥಿ ಕಲಾವಿದರು ವಿವಿಧ ಭಾರತೀಯ ಕಲಾ ಪ್ರಕಾರಗಳ ಮನಮೋಹಕ ಪ್ರದರ್ಶನ ನೀಡಲಿದ್ದಾರೆ. ಯೋಗ ದೀಪಿಕಾ, ಅಷ್ಟಲಕ್ಷ್ಮಿ ಶಾಸ್ತ್ರೀಯ ನೃತ್ಯ, ಬಡಗುತಿಟ್ಟು ಯಕ್ಷಗಾನ ‘ಶಂಕರಾರ್ಧ ಶರೀರಿಣಿ’, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್…
ಕಳೆದ 12 ವರ್ಷಗಳಿಂದ ಯಕ್ಷಗಾನ ತಾಳಮದ್ದಳೆ ಸಪ್ತಾಹದ ಮೂಲಕ ಯಕ್ಷಾಂಗಣ ಸಂಸ್ಥೆ ಯಕ್ಷ ಕಲೆ ಮತ್ತು ಕನ್ನಡ ಭಾಷೆಗೆ ವಿಶೇಷ ಕೊಡುಗೆ ನೀಡುತ್ತಾ ಬಂದಿದೆ. ಕಲಾವಿದರು ಮತ್ತು ಕಲಾ ತಂಡಗಳಿಗೆ ಅದು ನೀಡುತ್ತಿರುವ ಪ್ರೋತ್ಸಾಹ ಮತ್ತು ಗೌರವ ಅನನ್ಯವಾದುದು ಎಂದು ಕದ್ರಿ ಶ್ರೀ ಮಂಜುನಾಥ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಎಜೆ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ| ಎ.ಜೆ ಶೆಟ್ಟಿ ಹೇಳಿದರು. ಅವರು ಮಂಗಳೂರು ವಿವಿ ಕಾಲೇಜಿನಲ್ಲಿ ಯಕ್ಷಾಂಗಣ ಮಂಗಳೂರು, ಮಂಗಳೂರು ವಿವಿಯ ಡಾ| ಪಿ ದಯಾನಂದ ಪೈ ಮತ್ತು ಶ್ರೀ ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷಭಾರತಿ (ರಿ) ಪುತ್ತೂರು ಇವರ ಸಹಯೋಗದಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2025’ ಹದಿಮೂರನೇ ವರ್ಷದ ನುಡಿಹಬ್ಬ ತ್ರಯೋದಶ ಸರಣಿ ಕಾರ್ಯಕ್ರಮದಲ್ಲಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಂಗಳೂರು ವಿವಿ ಕುಲಸಚಿವರಾದ ಕೆ. ರಾಜು ಮೊಗವೀರ…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29 ನೇ ವಾರ್ಷಿಕ ಮಹಾಸಭೆ, ಬಹಿರಂಗ ಅಧಿವೇಶನ ಮತ್ತು ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಯುಎಇ ಬಂಟ್ಸ್ ನ ನೂತನ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಂಗಳವಾರ ನಡೆದ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಯುಎಇ ಅಧ್ಯಕ್ಷರಾದ ವಕ್ವಾಡಿ ಪ್ರವೀಣ್ ಶೆಟ್ಟಿ ಮಾತಾಡಿ, “ನಾನು ಬಂಟರ ಸಂಘಕ್ಕೆ ಬರಲು ಐಕಳ ಹರೀಶ್ ಶೆಟ್ಟಿ ಅವರೇ ಕಾರಣ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನೂತನ ಪದಾಧಿಕಾರಿಗಳಿಗೆ ಅಭಿನಂದನೆಗಳು. ಹೊಸ ತಂಡ ಉತ್ಸಾಹದಿಂದ ಕಾರ್ಯ ನಿರ್ವಹಿಸುವ ಮೂಲಕ ಇಲ್ಲಿ ನಿರ್ಮಾಣ ಆಗಬೇಕಿರುವ ನೂತನ ಕಟ್ಟಡಕ್ಕೆ ಎಲ್ಲರೂ ಧನಸಹಾಯ ನೀಡಬೇಕು” ಎಂದರು. ವೇದಿಕೆಯಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಅಶೋಕ್ ಶೆಟ್ಟಿ ಬಿಲ್ಲಾಡಿ, ಉಮಾ ಕೃಷ್ಣ ಶೆಟ್ಟಿ, ಶಶಿಧರ್ ಶೆಟ್ಟಿ ಇನ್ನಂಜೆ, ಅಜಿತ್ ಹೆಗ್ಡೆ ಪುಣೆ, ಒಕ್ಕೂಟದ…
ಕುಮಾರಿ ಸುರಕ್ಷಾ ಶೆಟ್ಟಿ ಚಾರ್ಟರ್ಡ್ ಅಕೌಂಟೆಂಟ್ (CA) ಅಂತಿಮ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣ
ಬೆಳ್ತಂಗಡಿಯ ಆರಂಬೋಡಿ ಗ್ರಾಮದ ಹಕ್ಕೇರಿ ಕಂಬಳದಡ್ಡ ದಿವಂಗತ ಲಿಂಗಪ್ಪ ಶೆಟ್ಟಿ ಮತ್ತು ಶ್ರೀಮತಿ ಸಂಪಾ ಶೆಟ್ಟಿಯವರ ಸುಪುತ್ರಿ ಕುಮಾರಿ ಸುರಕ್ಷಾ ಶೆಟ್ಟಿಯವರು ಚಾರ್ಟರ್ಡ್ ಅಕೌಂಟೆಂಟ್ (CA) ಅಂತಿಮ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ಇವರು ಪ್ರಸ್ತುತ ಬೆಂಗಳೂರಿನ CAGK ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಭವಿಷ್ಯದಲ್ಲಿ ಇನ್ನಷ್ಟು ಸಾಧನೆಯನ್ನು ಮಾಡಲಿ ಎಂದು ಹಾರೈಸೋಣ.
ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ 29ನೇ ವಾರ್ಷಿಕ ಮಹಾಸಭೆ ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಂಟ್ಸ್ ಹಾಸ್ಟೆಲ್ ಬಳಿಯ ಬಂಟರ ಯಾನೆ ನಾಡವರ ಮಾತೃ ಸಂಘದ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು, “ಸುಸಂಸ್ಕೃತ ಸಮಾಜಕ್ಕೆ ಇನ್ನೊಂದು ಹೆಸರೇ ನಮ್ಮ ಬಂಟ ಸಮಾಜ. ಲಕ್ಷ್ಮಿ, ಜ್ಞಾನ ಶಕ್ತಿ, ಕ್ರಿಯಾ ಶಕ್ತಿ ಎಲ್ಲವೂ ಒಗ್ಗೂಡಿದಾಗ ಸಮಾಜದ ಶ್ರೇಯಸ್ಸು ಸಾಧ್ಯ. ಬಂಟ ಸಮಾಜಕ್ಕೆ ರಾಜ್ಯವನ್ನು ಆಳುವ ಸಾಮರ್ಥ್ಯವಿದೆ. ನಮ್ಮ ಬಂಟರು ವಿಶ್ವದೆಲ್ಲೆಡೆ ಇದ್ದಾರೆ. ಅವರೆಲ್ಲಾ ಒಗ್ಗೂಡಿದರೆ ರಾಷ್ಟ್ರ ಸುಭದ್ರವಾಗುತ್ತದೆ“ ಎಂದರು. ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಮಾತಾಡಿ, “ಜಿಲ್ಲೆಯ ಬೇರೆಲ್ಲಾ ಸಂಘಗಳಿಗೆ ಮಾದರಿಯಾಗಿ ನಮ್ಮ ಜಿಲ್ಲೆಗೆ ಗೌರವ ತಂದ ಸಂಘ ಏನಾದರೂ ಇದ್ದರೆ ಅದು ಬಂಟರ ಸಂಘ. ಬಂಟ ಸಮಾಜದ ಜೊತೆಗೆ ಎಲ್ಲಾ ಸಮಾಜವನ್ನು ಜೊತೆಗೆ ಕೊಂಡೊಯ್ಯುವ ತಾಕತ್ತು ಈ ಸಂಘಕ್ಕಿದೆ. ಭಿನ್ನಾಭಿಪ್ರಾಯ ಇದ್ದಾಗ ಎಲ್ಲಾ…
ಕುಂದಾಪುರ ತಾಲೂಕು ಯುವ ಬಂಟರ ಸಂಘದ ನೂತನ ಆಡಳಿತ ಕಚೇರಿ ಉದ್ಘಾಟನೆ ನವೆಂಬರ್ 15ರ ಶನಿವಾರ ಬೆಳಿಗ್ಗೆ 10:00 ಗಂಟೆಗೆ ಆರ್ ಎನ್ ಶೆಟ್ಟಿ ಸಭಾಂಗಣದ ಎರಡನೇ ಮಹಡಿಯಲ್ಲಿ ಸಂಘದ ಮಹಾಪೋಷಕರಾದ ಗಿಳಿಯಾರು ಉದಯ್ ಕುಮಾರ್ ಹೆಗ್ಡೆಯವರು ರಿಬ್ಬನ್ ಕತ್ತರಿಸುವ ಮೂಲಕ ಕಚೇರಿಯನ್ನು ಉದ್ಘಾಟನೆ ಮಾಡಿದರು. ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು ಅಧ್ಯಕ್ಷತೆ ವಹಿಸಿದ್ದರು. ಸಂಘದ ಗೌರವ ಸಲಹೆಗಾರರು, ಬಂಟರ ಯಾನೆ ನಾಡವರ ಸಂಘದ ಮಾಜಿ ಅಧ್ಯಕ್ಷರಾದ ಬಿ ಅರುಣ್ ಕುಮಾರ್ ಶೆಟ್ಟಿ ದೀಪವನ್ನು ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಸಂಚಾಲಕರಾದ ಆವರ್ಸೆ ಸುಧಾಕರ ಶೆಟ್ಟಿ, ಸಂಘದ ಪೋಷಕ ಸದಸ್ಯರಾದ ಸಟ್ಟಾಡಿ ವಿಜಯ್ ಶೆಟ್ಟಿ, ಸಮತಾ ಮೋಟರ್ಸ್ ಮಾಲೀಕರಾದ ಜಡ್ಡಾಡಿ ವಿಜಯ ಶೆಟ್ಟಿ, ಪ್ರಥಮ ದರ್ಜೆಯ ಗುತ್ತಿಗೆದಾರರಾದ ಯಡಾಡಿ ಮತ್ಯಾಡಿ ಅರುಣ್ ಕುಮಾರ್ ಹೆಗ್ಡೆ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಭಾಪತಿ ಜಯಕರ ಶೆಟ್ಟಿ, ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ…
ಜಗತ್ತಿನ ಯಾವ ವೃತ್ತಿಯಲ್ಲೂ ‘ಕಡಿಮೆ ಶ್ರಮ ದೀರ್ಘ ಫಲ’ ಎಂಬ ಸಮೀಕರಣವಿಲ್ಲ. ಆದರೆ ಕೃಷಿಯಲ್ಲಿ ಮಾತ್ರ ಎರಡು ಮೂರು ತಿಂಗಳ ಶ್ರಮವೇ ಹನ್ನೆರಡು ತಿಂಗಳ ಜೀವನಕ್ಕೆ ಸಾಕಾಗುತ್ತದೆ ಎಂದು ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ನುಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನೂತನವಾಗಿ ಪ್ರಾರಂಭಿಸಲಾದ ಆಳ್ವಾಸ್ ಇನ್ಸ್ಟಿಟ್ಯೂಟ್ ಅಗ್ರಿಕಲ್ಚರಲ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ ಕಾಲೇಜನ್ನು ಉದ್ಘಾಟಿಸಿ ಮಾತನಾಡಿದರು. ಬೇರೆ ವೃತ್ತಿಗಳಲ್ಲಿ ಹೂಡಿಕೆಯಷ್ಟೇ ಅಪಾಯವೂ ಇರುತ್ತದೆ. ಆದರೆ ಕೃಷಿಯಲ್ಲಿ ಪ್ರಕೃತಿಯೊಡನೆ ತಕ್ಕಮಟ್ಟಿನ ಜಾಗರೂಕತೆ ಮತ್ತು ಸುಧಾರಿತ ವಿಧಾನಗಳು ಇದ್ದರೆ ನಷ್ಟಕ್ಕಿಂತ ಲಾಭವೇ ಹೆಚ್ಚು. ಇಂದು ಭಾರತ ಕೃಷಿಯ ಮೂಲಕ ದೇಶದ ಜಿಡಿಪಿಗೆ ಸುಮಾರು 18% ಕೊಡುಗೆಯನ್ನು ನೀಡುತ್ತಿದೆ. ಈ ಕೊಡುಗೆ 25–30%ಕ್ಕೆ ಏರಿದರೆ, ಭಾರತ ಕೇವಲ ಅಭಿವೃದ್ಧಿಶೀಲ ರಾಷ್ಟ್ರವಲ್ಲ, ವಿಶ್ವದ ನಂ.1 ಆರ್ಥಿಕ ಶಕ್ತಿಯಾಗುವ ಸಾಮರ್ಥ್ಯವನ್ನು ಸಾಧಿಸುತ್ತದೆ. ಕೃಷಿಯ ಬಲವರ್ಧನೆಯೇ ಭಾರತದ ಭವಿಷ್ಯ ಬಲಿಷ್ಠವಾಗುವ ಮೂಲ. ಮೋದಿಯವರ ಆಡಳಿತದಲ್ಲಿ ಕೃಷಿ ವಲಯವನ್ನು ಆಧುನಿಕ, ಲಾಭದಾಯಕ ಮತ್ತು ಸ್ಪರ್ಧಾತ್ಮಕಗೊಳಿಸುವ ಹಲವು ಮಹತ್ತರ ಕ್ರಮಗಳು…
ತಾಲೂಕು, ಜಿಲ್ಲೆ, ರಾಜ್ಯ ಹೀಗೆ ಒಂದಲ್ಲ ಒಟ್ಟು ಮೂರು ಹಂತದ ರಾಜ್ಯೋತ್ಸವ ಪ್ರಶಸ್ತಿಗೆ ಹತ್ತಾರು ಬಾರಿ ಅರ್ಜಿ ಹಾಕಿ ಹಾಕಿ ಹೈರಾಣಗೊಂಡ ನಡುವಯಸ್ಸಿನ ‘ಅಸಾಧಾರಣ ಸಾಧಕ’ರೊಬ್ಬರನ್ನು ಪ್ರಯಾಣದುದ್ದ ಪಕ್ಕದ ಸೀಟಲ್ಲಿ ಭೇಟಿಯಾಗುವ ಪ್ರಸಂಗವೊಂದು ಒದಗಿತು. ಯಾವುದೇ ಸಂಕೋಚ ನಾಚಿಕೆಯಿಲ್ಲದೆ, “ತಪ್ಪು ಸರ್ಕಾರದಲ್ಲ, ನನ್ನ ಅರ್ಜಿಯದ್ದೇ ಇರಬೇಕು” ಎಂದು ಅಳು ನುಂಗಿದ ಮುಖವಾಡದೊಂದಿಗೆ, “ಮುಂದಿನ ಸಲ ಅರ್ಜಿಗೊಮ್ಮೆ ನೀವು ಕಣ್ಣಾಡಿಸಬೇಕು” ಎಂದಾಗ ಸಹಜವಾಗಿಯೆ ನಾನು ಗಲಿಬಿಲಿಗೊಂಡೆ. ಸಮಾಜಕ್ಕೆ ಅವರು ಮಾಡಿದ ಸೇವೆಗಳೆಂದರೆ ಒಂದಷ್ಟು ಶಾಲಾ ಮಕ್ಕಳಿಗೆ ಫೀಸು ತುಂಬಿಸಿದದ್ದು, ಇವೆಲ್ಲವೂ ಸಂದೇಹವಿಲ್ಲದ ಸಹಕಾರವೇ. ಆದರೆ ಆ ಸತ್ಯದ ಮೇಲೆ ಒಣಮಳೆ ಸುರಿಸುತ್ತಿದ್ದ ಅವರ ಮತ್ತೊಂದು ನಿಜ ಈಗ ನನ್ನ ಕಿವಿಗೆ ಬಡಿದುಕೊಂಡಿತು. ಕಳೆದ ಆರೇಳು ವರ್ಷಗಳಿಂದ ಅವರ ಉದ್ಯಮ, ಗಳಿಕೆ, ಜನಪ್ರೀತಿ ಎಲ್ಲಕ್ಕಿಂತಲೂ ಹೆಚ್ಚಾಗಿ ಅವರೊಳಗಡೆ ಸಮಾನಾಂತರವಾಗಿ ಬೆಳೆಯುತ್ತಿದ್ದದ್ದು ‘ಪ್ರಶಸ್ತಿ ಭಾವನೆ’ ಎಂಬ ಒಂದು ಹೊಸಬೆಳೆ. ಸುಮಾರು ಮೂರು ದಶಕಗಳ ಹಿಂದಿನ ಒಂದು ಘಟನೆಯನ್ನು ನಾನು ಹೇಳಲೇಬೇಕು. ಕರಾವಳಿ ಕರ್ನಾಟಕದ ಪ್ರಸಿದ್ಧ ಶೈಕ್ಷಣಿಕ…
ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿ ವೇದಿಕೆ ‘ಅಭಿವ್ಯಕ್ತಿ’ಯ 2025ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಹಾಗೂ ಖ್ಯಾತ ನಿರೂಪಕ ರಾಜೇಶ್ ಡಿ’ಸೋಜಾ, ಯಶಸ್ಸಿನ ಮೂಲತತ್ತ್ವಗಳನ್ನು ವಿದ್ಯಾರ್ಥಿಗಳಿಗೆ ಮನದಟ್ಟುಗೊಳಿಸಿದರು. ಯಶಸ್ಸು ಕೇವಲ ಶ್ರಮದ ಪ್ರತಿಫಲವಲ್ಲ. ಅದು ನಾಲ್ಕು ‘ಪಿ’ಗಳಾದ ಪ್ಯಾಶನ್, ಪ್ರಿಪರೇಷನ್ ಪ್ರಸೆಂಟೇಶನ್ ಮತ್ತು ಪರ್ಪಸ್ನ ಸಮನ್ವಯದಿಂದ ಮೂಡಿಬರುವ ಸಮಗ್ರ ಸಫಲತೆ. ಪ್ರತಿಯೊಂದು ಕಾರ್ಯಕ್ಕೂ ಆಸಕ್ತಿ, ಸ್ಪಷ್ಟ ಗುರಿ, ಸಮಗ್ರ ತಯಾರಿ ಹಾಗೂ ಪರಿಣಾಮಕಾರಿ ಪ್ರಸ್ತುತಪಡಿಸುವಿಕೆಯ ಅಗತ್ಯವನ್ನು ಉದಾಹರಣೆಯೊಂದಿಗೆ ವಿವರಿಸಿದರು. ಜೊತೆಯಲ್ಲಿ ಸಮಯ ನಿರ್ವಹಣೆ, ಹಾಸ್ಯಪ್ರಜ್ಞೆ ಹಾಗೂ ಸಕಾಲದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ವ್ಯಕ್ತಿಯ ಬದುಕನ್ನು ಅಂದಗೊಳಿಸುವುದಲ್ಲದೆ ನಾಯಕತ್ವ ಗುಣಗಳನ್ನು ಬೆಳೆಸುತ್ತವೆ ಎಂದರು. ಈ ಸಂದರ್ಭದಲ್ಲಿ 2025–26ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿಗಳನ್ನು ನೀಡಲಾಯಿತು. ಮಂಜುಳಾ ಹಾಗೂ ವಿಧಿಶಾ ವಿದ್ಯಾರ್ಥಿ ವೇದಿಕೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಅಧಿಕಾರ…
ಜಾಗತಿಕ ಬಂಟರ ಸಂಘಗಳ ಒಕ್ಕೂಟ : ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ, ಪುಷ್ಪರಾಜ್ ಶೆಟ್ಟಿ ಬಿ.ಎನ್, ರಾಜೇಶ್ ಶೆಟ್ಟಿ, ಸತೀಶ್ ಇರಾ, ಅಶೋಕ್ ಶೆಟ್ಟಿ ಬಿ.ಎನ್. ಅವರಿಗೆ ಸನ್ಮಾನ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ ಮತ್ತು ಬಹಿರಂಗ ಅಧಿವೇಶನ ಸಮಾರಂಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀನಿವಾಸ ನಾಯಕ್ ಇಂದಾಜೆ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ ಬಿ.ಎನ್, ಉಪಾಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ಸತೀಶ್ ಇರಾ, ಕಾರ್ಯಕಾರಿ ಸಮಿತಿ ಸದಸ್ಯರಾದ ಅಶೋಕ್ ಶೆಟ್ಟಿ ಬಿ.ಎನ್. ಬ್ರಹ್ಮರಕೂಟ್ಲು ಅವರನ್ನು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಮಾತೃ ಸಂಘದ ಹೊರ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪುನರಾಯ್ಕೆಗೊಂಡ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಉಮಾಕೃಷ್ಣ ಶೆಟ್ಟಿ, ಪುಣೆ ಬಂಟರ ಸಂಘದ ಅಧ್ಯಕ್ಷ ಅಜಿತ್ ಹೆಗ್ಡೆ, ಮೋಹನ್ ದಾಸ್ ಶೆಟ್ಟಿ, ಶಶಿಧರ್ ಶೆಟ್ಟಿ ಇನ್ನಂಜೆ,…














