Author: admin

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಇತ್ತೀಚೆಗೆ ನಿಧನರಾದ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಎನ್ ವಿನಯ ಹೆಗ್ಡೆಯವರಿಗೆ ಶ್ರದ್ದಾಂಜಲಿ ಸಭೆ ಮತ್ತು ಪ್ರಾರ್ಥನಾ ಸಭೆ ಜನವರಿ 9 ರಂದು ಶುಕ್ರವಾರ ಸಂಜೆ 5 ಗಂಟೆಗೆ ಬಂಟ್ಸ್ ಹಾಸ್ಟೇಲ್ ಶ್ರೀ ರಾಮಕೃಷ್ಣ ಕಾಲೇಜು ಬಳಿ ಇರುವ ಶ್ರೀಮತಿ ಗೀತಾ ಎಸ್ ಎಂ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. ಡಾ| ಎನ್ ವಿನಯ ಹೆಗ್ಡೆ ಅವರು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ಗ್ರಾಮೀಣ ಪ್ರದೇಶವಾಗಿದ್ದ ನಿಟ್ಟೆಯನ್ನು ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸಿದ ಶಿಕ್ಷಣ ತಜ್ಞರು. ನಿಟ್ಟೆ ಯೂನಿವರ್ಸಿಟಿ ರೂವಾರಿಯಾಗಿದ್ದ ಅವರು ದಕ್ಷ ಆಡಳಿತಗಾರರಾಗಿದ್ದರು. ಅವರಿಗೆ ಶ್ರದ್ದಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದ್ದಾರೆ.

Read More

ಕೊಕ್ಕರ್ಣೆ ಶ್ರೀ ಅನಿತಾ ವಿದ್ಯಾ ಸಂಸ್ಥೆಯ ದುರ್ಗಾ ಆಂಗ್ಲ ಮಾಧ್ಯಮ ಶಾಲೆಯ ದಶಮಾನೋತ್ಸವ ಸಮಾರಂಭ ನೆರವೇರಿತು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಹುಬ್ಬಳ್ಳಿಯ ಚಾರ್ಟರ್ಡ್ ಅಕೌಂಟೆಂಟ್ ಎಸ್.ಬಿ ಶೆಟ್ಟಿ, ಹುಬ್ಬಳ್ಳಿಯ ಶೆಟ್ಟಿಸ್ ಕನ್ಸ್ಟ್ರಕ್ಷನ್ ನ ಎಂ.ಡಿ ಪ್ರಸನ್ನ ಶೆಟ್ಟಿ, ಉಡುಪಿ ಡಯಟ್ ಪ್ರಾಂಶುಪಾಲ ಡಾ| ಅಶೋಕ್ ಕಾಮತ್, ಬ್ರಹ್ಮಾವರದ ನ್ಯೂ ಕರ್ನಾಟಕ ಬಿಲ್ಡರ್ ಆಂಡ್ ಡೆವಲಪರ್ಸ್ ನ ಮಾಲಕ ಚೇತನ್ ಕುಮಾರ್ ಶೆಟ್ಟಿ, ಉಡುಪಿಯ ವೃತ್ತ ನಿರೀಕ್ಷಕ ರಮೇಶ್ ಕೆ, ಗ್ರಾಮ ಪಂಚಾಯತ್ ಅಧ್ಯಕ್ಷ ಜಯಂತ್ ಪೂಜಾರಿ, ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು, ರಕ್ಷಕ ಶಿಕ್ಷಕ ಸಂಘದ ಸದಸ್ಯರು, ಶಿಕ್ಷಕ ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿ ದಾನಿಗಳನ್ನು ಸನ್ಮಾನಿಸಲಾಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.

Read More

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಮೂಡುಬಿದಿರೆ ಹಾಗೂ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಧನ್ವಂತರಿ ಪೂಜಾ ಮಹೋತ್ಸವ, ಶಿಷ್ಯೋಪನಯನ ಸಂಸ್ಕಾರ, ಆಳ್ವಾಸ್ ಧನ್ವಂತರಿ ಪ್ರಶಸ್ತಿ ಪ್ರದಾನ ಮತ್ತು ಕಾಲೇಜು ವಾರ್ಷಿಕೋತ್ಸವ ಸಮಾರಂಭ ಬುಧವಾರ ಕಾಲೇಜಿನ ಆವರಣದಲ್ಲಿ ನಡೆಯಿತು. ನಾರಾವಿಯ ಪ್ರಸಿದ್ಧ ಆಯುರ್ವೇದ ವೈದ್ಯ ಡಾ. ಎನ್ ಶೀತಲ್‌ಕುಮಾರ್, ಬೆಂಗಳೂರಿನ ಭಾರತೀಯ ಆಯುರ್ವೇದ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯ ರಸಶಾಸ್ತ್ರ ಮತ್ತು ಭೈಷಜ್ಯ ಕಲ್ಪನಾ ವಿಭಾಗದ ಪ್ರಾಧ್ಯಾಪಕರು, ವಿಭಾಗ ಮುಖ್ಯಸ್ಥ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ. ಜಗದೀಶ್ ಕೋನರೆಡ್ಡಿ, ಕೇರಳದ ಕೊಟ್ಟಕ್ಕಲ್ ಆರ‍್ಯ ವೈದ್ಯ ಶಾಲೆಯ ಗುಣಮಟ್ಟ ಭರವಸೆ ವಿಭಾಗದ ವೈದ್ಯಾಧಿಕಾರಿ ಮತ್ತು ವಿಭಾಗ ಮುಖ್ಯಸ್ಥ ಡಾ. ಜಿತೇಶ್ ಎಂಕೆರಿಗೆ ಶಾಲು, ಹಾರ, ಪ್ರಶಸ್ತಿ ಫಲಕ ಹಾಗೂ ನಗದು ಹಣ ಹತ್ತು ಸಾವಿರದೊಂದಿಗೆ ಆಳ್ವಾಸ್ ಧನ್ವಂತರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಧನ್ವಂತರಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ನಾರಾವಿಯ ಪ್ರಸಿದ್ಧ ಆಯುರ್ವೇದ ವೈದ್ಯ…

Read More

ರಾಜ್ಯದ ಪ್ರತಿಷ್ಠಿತ ಕ್ರೆಡಿಟ್ ಸಹಕಾರ ಸಂಸ್ಥೆಗಳಲ್ಲೊಂದಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರ ಮಾಣಿಕ್ಯ ಪ್ರಶಸ್ತಿ ವಿಜೇತ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2025-26ನೇ ಸಾಲಿನ ವಿತ್ತೀಯ ವರ್ಷದ 3ನೇ ತ್ರೈಮಾಸಿಕ ಅವಧಿ ದಿನಾಂಕ 31.12.2025ಕ್ಕೆ ರೂ.660 ಕೋಟಿ ಠೇವಣಿ, ರೂ.558 ಕೋಟಿ ಸಾಲ, ರೂ.1218 ಕೋಟಿ (ಠೇವಣಿ ಮತ್ತು ಸಾಲ) ವ್ಯವಹಾರವನ್ನು ಹೊಂದಿದೆ. 2024ನೇ ಡಿಸೆಂಬರ್ 31ಕ್ಕೆ ಹೋಲಿಸುವಾಗ ಠೇವಣಿಯಲ್ಲಿ ರೂ.96 ಕೋಟಿ 17% ವೃದ್ಧಿ, ಹೊರಬಾಕಿ ಸಾಲದಲ್ಲಿ ರೂ.72 ಕೋಟಿ ಹೆಚ್ಚಳ 15% ವೃದ್ಧಿಯೊಂದಿಗೆ, ಒಟ್ಟು ವ್ಯವಹಾರದಲ್ಲಿ ರೂ.168 ಕೋಟಿ ವೃದ್ಧಿಯಿಂದ 16% ಹೆಚ್ಚಳವನ್ನು ಸಾಧಿಸಿದೆ. 31.12.2025ಕ್ಕೆ ನಿವ್ವಳ ಲಾಭವು ರೂ.10.22 ಕೋಟಿ ದಾಖಲಿಸಿದ್ದು, ಇದು ಕಳೆದ ವರ್ಷಕ್ಕಿಂತ ರೂ.1.39 ಕೋಟಿ ಹೆಚ್ಚಳವಾಗಿ 16% ವೃದ್ಧಿಯಾಗಿದೆ. ಸ್ಥಾಪನೆಯಾದಿನಿಂದ ನಿರಂತರ ಡಿವಿಡೆಂಡ್ ಅನ್ನು ನೀಡುತ್ತಾ ಬಂದ ಸೊಸೈಟಿ, 2024-25ನೇ ಸಾಲಿಗೆ ಶೇ.25 ಡಿವಿಡೆಂಡ್ ಅನ್ನು ನೀಡಿದ್ದು, ಕಳೆದ ಏಳು ವರ್ಷಗಳಿಂದ ಗರಿಷ್ಠ 25% ಡಿವಿಡೆಂಡ್…

Read More

ಬಂಟರ ಸಂಘವು ಒಂದು ದೇವಸ್ಥಾನವಿದ್ದಂತೆ. ಸಂಘವು ಅದರ ಎಲ್ಲಾ ಸದಸ್ಯರಿಗೆ ಸೇರಿದ್ದು, ಬಂಟರ ಸಂಘದ ಎಲ್ಲಾ ಮೂರು ಶಿಕ್ಷಣ ಸಂಸ್ಥೆಯಿಂದಾಗಿ ಮುಂದೆ ಸಂಘಕ್ಕೆ ದೊಡ್ಡ ಮಟ್ಟದ ಆದಾಯವಾಗಲಿದ್ದು, ಸಂಘವು ಮುಂದೆ ಆರ್ಥಿಕವಾಗಿ ಮತ್ತಷ್ಟು ಗಟ್ಟಿಯಾಗಲಿದೆ. ಸಂಘದ ಬೊರಿವಲಿ ಶಿಕ್ಷಣ ಸಂಸ್ಥೆಗೆ ಜೋಗೇಶ್ವರಿ ದಹಿಸರ್ ಪರಿಸರದ ಸಮಾಜ ಬಾಂಧವರ ಮಹತ್ವದ ಕೊಡುಗೆಯಿದೆ ಎಂದು ಬಂಟರ ಸಂಘ ಮುಂಬಯಿಯ ಉಪಾಧ್ಯಕ್ಷ, ಬಾಬಾಸ್ ಗ್ರೂಪ್ ಆಫ್ ಕಂಪನೀಸ್ ಇದರ ಸಿ.ಎಂ.ಡಿ ಮಹೇಶ್ ಎಸ್. ಶೆಟ್ಟಿ ನುಡಿದರು. ಜನವರಿ 3 ರಂದು ಬೊರಿವಲಿ ಪಶ್ಚಿಮದ ನ್ಯೂ ಲಿಂಕ್ ರೋಡ್ ಪಕ್ಕದ ಎಕ್ಸರ್ ಕ್ಲಬ್ ಸಮೀಪವಿರುವ ಕೆ. ಡಿವೈನ್ ಲಾನ್ಸ್ ಎಂಡ್ ಕನ್ವೆನ್ಶನ್ ನ ಸಭಾಗೃಹದಲ್ಲಿ ಬೋಳ ನಂದಳಿಕೆ ‘ಶ್ರೀ ಮಾತಾ’ ಸುಬ್ಬಯ್ಯ ವಿ. ಶೆಟ್ಟಿ ಸ್ಮಾರಕ ವೇದಿಕೆಯಲ್ಲಿ, ಸಂಘದ ಜೋಗೇಶ್ವರಿ ದಹಿಸರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರೇಮನಾಥ್ ಶೆಟ್ಟಿ ಕೊಂಡಾಡಿಯವರ ನೇತೃತ್ವದಲ್ಲಿ ಜರಗಿದ ಪ್ರಾದೇಶಿಕ ಸಮಿತಿಯ ಹದಿನೆಂಟನೆಯ ವರ್ಷದ ವಾರ್ಷಿಕೋತ್ಸವ ಅಷ್ಟಾದಶ ಸಂಭ್ರಮ ಸಮಾರಂಭದ ಸಭಾ ಕಾರ್ಯಕ್ರಮದ…

Read More

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕುಂದೂರು ಇಲ್ಲಿ 28 ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ನೇತ್ರ ತಪಾಸಣಾ ಶಿಬಿರದಲ್ಲಿ ದೃಷ್ಟಿ ದೋಷವಿರುವ ಫಲಾನುಭವಿಗಳಿಗೆ ನೀಡಿದ ಕನ್ನಡಕಗಳು ಸದುಪಯೋಗವಾಗಲಿ, ನಿಮ್ಮ ಬಾಳಿಗೆ ಬೆಳಕನ್ನು ನೀಡಲಿ ಎಂದು ಶುಭ ಹಾರೈಸಿದರು. ಕುಕ್ಕುಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾರವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಶಿಕಲಾ, ಕ್ಲಬ್ಬಿನ ಕಾರ್ಯದರ್ಶಿ ಚೇತನ್ ನಾಯಕ್, ಕ್ಷಯ ರೋಗ ಮೇಲ್ವಿಚಾರಕ ಶಿವಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರೋಟರಿ ಸಮುದಾಯ ಸೇವಾ ಚೇರ್ಮನ್ ವಸಂತ್ ಎಂ, ಕೃಷ್ಣ ಶೆಟ್ಟಿ, ಉದಯ ಕಡಂಬ, ನಕ್ರೆ ಗ್ರಾಮ ಪಂಚಾಯತ್ ಸದಸ್ಯರು, ಆರೋಗ್ಯ ಇಲಾಖಾ ಸಿಬ್ಬಂದಿ ಉಪಸ್ಥಿತರಿದ್ದರು. ಆಶಾ ಕಾರ್ಯಕರ್ತೆ ಸುನೀತಾ ಪ್ರಾರ್ಥಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕುಮುದಾವತಿ ಸ್ವಾಗತಿಸಿ ನಿರೂಪಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ವೈದ್ಯಾಧಿಕಾರಿ…

Read More

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ರೋಡ್ ನಿವಾಸಿ ಸಂಪತ್ ಶೆಟ್ಟಿ ಅವರು ಭೂ ವ್ಯವಹಾರ, ನಿವೇಶನ ಕುರಿತ ಉದ್ಯಮದಲ್ಲಿ ತೊಡಗಿಸಿಕೊಂಡ ಪ್ರಾಮಾಣಿಕ ಸಾಮಾಜಿಕ ಕಾರ್ಯಕರ್ತ. ಮೂಲತಃ ಬಹು ಪ್ರತಿಷ್ಠಿತ ಪಂಜದ ಗುತ್ತು ಮನೆತನದವರು. ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಇತಿಹಾಸದಲ್ಲಿ ಪಂಜದ ಗುತ್ತು ಇಲ್ಲಿನ ಉಲ್ಲೇಖ ಇದೆ. ಬಪ್ಪನಾಡು ದುರ್ಗಾಪರಮೇಶ್ವರಿ ದೇವಿ ಉತ್ಸವ ಸಂದರ್ಭದಲ್ಲಿ ಇಲ್ಲಿನ ಹಿರಿಯರ ಉಪಸ್ಥಿತಿ ಇರಬೇಕು. ಪಂಜದ ಗುತ್ತಿಗೆ ಒಂದು ಗತ್ತಿನ ಗುತ್ತು ಮನೆತನದ ಪರಂಪರೆ ಇದೆ. ಈ ಮನೆತನಕ್ಕೆ ಸಂಬಂಧ ಪಟ್ಟ ಸಂಪತ್ ಅವರು ತನ್ನ ಶಿಕ್ಷಣವನ್ನು ಹುಟ್ಟೂರಿನಲ್ಲಿ ಮುಗಿಸಿ ಮುಂದೆ ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿ ಕ್ಯಾಂಟೀನ್ ವ್ಯವಹಾರ ಸೇರಿದಂತೆ ಅನೇಕ ವ್ಯಾಪಾರ ವಹಿವಾಟುಗಳನ್ನು ನಡೆಸಿಕೊಂಡು ಉದ್ಯಮ ಕ್ಷೇತ್ರದಲ್ಲಿ ತನ್ನ ಅನುಭವವನ್ನು ಹೆಚ್ಚಿಸಿಕೊಂಡರು. ಕೆಲವು ವರ್ಷಗಳಿಂದ ಮೀರಾರೋಡ್ ನಲ್ಲಿ ವಾಸ್ತವ್ಯ ಹಾಗೂ ವ್ಯವಹಾರ ಹೊಂದಿದ ಸಂಪತ್ ಶೆಟ್ಟಿ ಓರ್ವ ಉತ್ತಮ ನಡೆ ನುಡಿಯ ಸಂಘಟಕನಾಗಿ, ಉದಾರ ದಾನಿಯಾಗಿ ಉತ್ತಮ ಮಟ್ಟದ ಸಮಾಜ ಸೇವಕನಾಗಿ ಪರಿಚಯಿಸಿಕೊಂಡರು.…

Read More

ಸುಂದರ ಕೊಡಗಿನ ಮುಖ್ಯಪಟ್ಟಣ ಮಂಜಿನ ನಗರಿ ಮಡಿಕೇರಿಯ ಹೃದಯ ಭಾಗದಲ್ಲಿರುವ ಶ್ರೀ ಓಂಕಾರೇಶ್ವರ ದೇವಾಲಯದ ಐತಿಹಾಸಿಕ ಚಿತ್ರಕಥಾ ಪುಸ್ತಕವು ಜನವರಿ 5 ರಂದು ಸೋಮವಾರ ಪೂರ್ವಾಹ್ನ ಮಡಿಕೇರಿಯಲ್ಲಿರುವ ಶ್ರೀ ಓಂಕಾರೇಶ್ವರ ದೇವರ ಸನ್ನಿಧಾನದಲ್ಲಿ ಪೂಜಾ ವಿದಿ ವಿಧಾನಗಳೊಂದಿಗೆ ಲೋಕಾರ್ಪಣೆಗೊಂಡಿತು. ಶ್ರೀ ಓಂಕಾರೇಶ್ವರ ದೇವಾಸ್ಥಾನ ಸಮಿತಿಯ ಅಧ್ಯಕ್ಷರು ಶ್ರೀ ಅಪ್ಪನೆರವಂಡ ಚುಮ್ಮಿ ದೇವಯ್ಯನವರು ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಮೂಡಿ ಬಂದಿರುವ ಚಿತ್ರಕಥಾ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಸರ್ವರಿಗೂ ಶುಭವನ್ನು ಹಾರೈಸಿದರು. ಮಡಿಕೇರಿ ಸಿಟಿ ಮುನ್ಸಿಪಲ್ ಕಾರ್ಪೊರೇಶನ್ ಮಾಜಿ ಅಧ್ಯಕ್ಷರು, ಮಡಿಕೇರಿ ಓಂಕಾರೇಶ್ವರ ದೇವಸ್ಥಾನ ಸಮಿತಿಯ ಪೂರ್ವ ಅಧ್ಯಕ್ಷರು ಶ್ರೀ ಕೊಂಗಂಡ ಎಸ್. ದೇವಯ್ಯನವರು ಗೌರವ ಅತಿಥಿಗಳಾಗಿ ಪಾಲ್ಗೊಂಡು ಪ್ರಥಮ ಕೃತಿಯನ್ನು ಸ್ವೀಕರಿಸಿದರು. ೧೬ನೇ ಶತಮಾನದಲ್ಲಿ ಕೊಡಗನ್ನು ಆಳಿರುವ ಹಾಲೇರಿ ವಂಶದ ರಾಜ ಮನೆತನದ ಶ್ರೀ ಲಿಂಗರಾಜೇಂದ್ರ ಒಡೆಯರ್-||, 1820ರಲ್ಲಿ ನಿರ್ಮಿಸಿರುವ ಶ್ರೀ ಓಂಕಾರೇಶ್ವರ ದೇವಾಲಯದ ಐತಿಹಾಸಿಕ ಚಿತ್ರಕಥೆ ಕೊಡಗಿನ ಚಿತ್ರ ಶಿಲ್ಪ ಕಲಾವಿದ ಬಿ. ಕೆ. ಗಣೇಶ್ ರೈಯವರ ಪರಿಕಲ್ಪನೆಯಲ್ಲಿ ಡಿಜಿಟಲ್ ಗ್ರಾಫಿಕ್ಸ್…

Read More

ಪುತ್ತೂರು ತಾಲೂಕು ಯುವ ಬಂಟರ ವಿಭಾಗದ ನೂತನ ಅಧ್ಯಕ್ಷರನ್ನಾಗಿ ಶ್ರೀ ಭಾಗ್ಯೇಶ್ ರೈ ಮತ್ತು 2025-26 ಕ್ರಿಕೆಟ್ ಟೂರ್ನಮೆಂಟ್ ಸಂಚಾಲಕರನ್ನಾಗಿ ಶ್ರೀ ಕಾರ್ತಿಕ್ ರೈ ಬೆಳಿಯೂರು ಕಟ್ಟೆ ಅವರನ್ನು ತಾಲೂಕು ಬಂಟರ ಸಂಘದ ಶಿಫಾರಸ್ಸಿನಂತೆ ಅಧ್ಯಕ್ಷರಾದ ಶ್ರೀ ಕಾವು ಹೇಮನಾಥ ಶೆಟ್ಟಿಯವರು ನೇಮಕ ಮಾಡಿರುತ್ತಾರೆ. ಕಳೆದ ಎರಡು ವರುಷಗಳಿಂದ ಯುವ ಬಂಟರ ಸಂಘವನ್ನು ಗ್ರಾಮ ಮಟ್ಟದಲ್ಲಿ ಕಟ್ಟಿ ಬೆಳೆಸಿ,ಯುವ ಸಮುದಾಯಕ್ಕೆ ಪ್ರೇರಣಾ ಶಕ್ತಿಯು ಅದೇ ರೀತಿ ಸಂಘದ ಬೆಳವಣಿಗೆ ಅದ್ಭುತ ಕೂಡುಗೆ ನೀಡಿದ ಯುವ ಉದ್ಯಮಿ ಶ್ರೀ ಹರ್ಷ ಕುಮಾರ್ ರೈ ಮಾಡವು ಇವರಿಂದ ತೆರವಾದ ಯುವ ಬಂಟರ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಮುಂದಿನ ಅವಧಿಗೆ ವಿದ್ಯಾಮಾತಾ ಅಕಾಡಮಿಯ ಮೂಲಕ ಯುವ ಜನರನ್ನು ಉದ್ಯೋಗಿಗಳನ್ನಾಗಿ ಮಾಡುವ 50 ವರ್ಷ ಹಳೆಯ ಜೆಸಿಐಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವಿ ಯುವ ನಾಯಕ ಭಾಗ್ಯೇಶ್ ರೈಯವರನ್ನು ನೇಮಕಗೊಳಿಸಲಾಗಿದೆ. ಅನೇಕ ವರುಷಗಳಿಂದ ನಡೆಯುವ ಪ್ರತಿಷ್ಠಿತ…

Read More

ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇವರ ಸಹಯೋಗದಲ್ಲಿ ಬಂಟರ ಕ್ರೀಡೋತ್ಸವ ಜನವರಿ 11 ರಂದು ಭಾನುವಾರ ಸುರತ್ಕಲ್ ಗೋವಿಂದ ದಾಸ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 8.30 ಕ್ಕೆ ನಡೆಯುವ ಬಂಟರ ಕ್ರೀಡೋತ್ಸವ ಕಾರ್ಯಕ್ರಮವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಸಂಚಾಲಕರಾದ ವಸಂತ ಶೆಟ್ಟಿ ಉದ್ಘಾಟಿಸಲಿದ್ದಾರೆ‌. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಬಾಳ ಜಗನ್ನಾಥ ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಕ್ಕಾರು ಬಂಟರ ಸಂಘದ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ಎಕ್ಕಾರು, ಉದ್ಯಮಿ ಹರೀಶ್ ಶೆಟ್ಟಿ ಪೆರ್ಮುದೆ, ಮಂಗಳೂರು ಯಥಾಥ್೯ ಸೋಶಿಯಲ್ ನ ಈಶ್ವರ್ ಪ್ರಸಾದ್ ಶೆಟ್ಟಿ ಭಾಗವಹಿಸಲಿದ್ದಾರೆ. ಸಂಘದ ಸ್ಥಾಪಕಾಧ್ಯಕ್ಷ ರೋಹಿತಾಕ್ಷ ರೈ ಕುಳಾಯಿಗುತ್ತು ಉಪಸ್ಥಿತರಿರುವರು. ಮಧ್ಯಾಹ್ನ 12 ಗಂಟೆಗೆ ನಡೆಯುವ ಅಭಿನಂದನಾ ಸಮಾರಂಭದಲ್ಲಿ 2025 ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ…

Read More