Author: admin

ಒಂದು ಊರಿನಲ್ಲಿ ನಾಲ್ಕು ಜನ ಸೊಸೆಯಂದಿರು ಇದ್ದರು. ತನ್ನ ನಾಲ್ಕು ಮಕ್ಕಳು ಹೆಂಡತಿಯರ ಗುಲಾಂ ಎಂದು ಅರಿತುಕೊಂಡು ಒಂದು ದಿನ ಅಟ್ಟದ ಮೇಲಿರುವ ಒಂದು ಹಳೆಯ ಪೆಟ್ಟಿಗೆ ತಂದು ತನ್ನೆಲ್ಲಾ ವಸ್ತುಗಳನ್ನು ಪೆಟ್ಟಿಗೆಯೊಳಗೆ ಹಾಕಿ ಭದ್ರವಾಗಿ ಮುಚ್ಚಿ ಅದಕ್ಕೆ ಒಂದು ದೊಡ್ಡ ಬೀಗದ ಕೈ ಹಾಕಿ ಕೀಲಿ ಕೈ ತನ್ನ ಹತ್ತಿರ ಇಟ್ಟುಕೊಂಡು ಇರುತ್ತಿದ್ದಳು. ರಾತ್ರಿ ಮಲಗುವಾಗ ತನ್ನ ತಲೆಯ ಹತ್ತಿರವೇ ಪೆಟ್ಟಿಗೆ ಇಟ್ಟುಕೊಂಡು ಮಲಗುವುದು. ಇದನ್ನು ಕಂಡು ನಾಲ್ಕು ಜನ ಸೊಸೆಯಂದಿರು ಹೇಗಾದರೂ ಮಾಡಿ ಪೆಟ್ಟಿಗೆ ಒಳಗೆ ಏನಿದೆ ಎಂದು ತಿಳಿದುಕೊಳ್ಳಬೇಕೆಂದು ಹೊಂಚು ಹಾಕುತ್ತಿದ್ದರು. ಅವಳು ಆಕಡೆ ಈಕಡೆ ಹೋದರೆ ಸಾಕು ಪೆಟ್ಟಿಗೆ ಎತ್ತಿ ಎತ್ತಿ ನೋಡುವುದು. ಬಹಳ ಭಾರವಾಗಿತ್ತು. ಇದರಲ್ಲಿ ಏನಿದೆ ಎಂಬ ಕುತೂಹಲ ಬೇರೆ. ಭಾರವಾದ ಪೆಟ್ಟಿಗೆಯೊಳಗೆ ನಮ್ಮ ಅತ್ತೆ ಬಂಗಾರ ಬೆಳ್ಳಿ ಇಟ್ಟಿರಬಹುದೆಂದು ಆಕೆಯನ್ನು ಬಹಳ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಹೀಗಿರಲು ಒಂದು ದಿನ ಅತ್ತೆ ತೀರಿ ಹೋದರು. ಎಲ್ಲರಿಗೂ ಖುಷಿಯಾಯಿತು. ವಿಧಿ ವಿಧಾನಗಳನ್ನು ಮುಗಿಸಿದ ಬಳಿಕ…

Read More

2025- 26ನೇ ಸಾಲಿನಲ್ಲಿ ಬಂಟ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ಪಿಯುಸಿ ಉಚಿತ ಶಿಕ್ಷಣ ಮತ್ತು ವಸತಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈಗಾಗಲೇ 4 ವರ್ಷಗಳಿಂದ 200 ಕ್ಕೂ ಮಿಕ್ಕಿದ ಗ್ರಾಮೀಣ ಪ್ರತಿಭಾನ್ವಿತ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು ಮುನ್ನಡೆ ಸಾಧಿಸಿದ್ದಾರೆ. ಎಸ್ ಎಸ್ ಎಲ್ ಸಿಯಲ್ಲಿ ಶೇ 70 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಬಿಪಿಎಲ್ ಅಥವಾ ಅಂತ್ಯೋದಯ ಕಾರ್ಡ್ ಹೊಂದಿ ಪಿಯುಸಿ ಶಿಕ್ಷಣ ಪಡೆಯಲು ಇಚ್ಚಿಸುವ ಬಂಟ ವಿದ್ಯಾರ್ಥಿಗಳ ಆಯ್ಕೆಗಾಗಿ ಏಪ್ರಿಲ್ 27ರಂದು ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆ ಕೊಂಬೆಟ್ಟು ಇಲ್ಲಿ ಪರೀಕ್ಷೆ ನಡೆಯಲಿರುವುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ 9448912371 ಅಥವಾ 9945999255, 9844430362 ಈ ನಂಬರ್ ಅನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Read More

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯಗಳ ಪುರುಷರ ಖೋ-ಖೋ ಚಾಂಪಿಯನ್ಶಿಪ್‌ನ ಫೈನಲ್ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಮುಂಬೈ ವಿಶ್ವವಿದ್ಯಾನಿಲಯದ ವಿರುದ್ಧ 11-10 ಅಂಕಗಳು ಹಾಗೂ 5 ನಿಮಿಷಗಳ ಅಂತರದಿAದ ಗೆದ್ದು ಎರಡನೇ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿತು. ಮಂಗಳೂರು ವಿವಿ ಪ್ರತಿನಿಧಿಸಿದ ತಂಡದ ಒಟ್ಟು 15 ಆಟಗಾರರಲ್ಲಿ 13 ಆಟಗಾರರು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಅಂಗಣದಲ್ಲಿ ಆಡಿದ 9 ಜನ ಆಟಗಾರರಲ್ಲಿ ಎಲ್ಲಾ ಆಟಗಾರರು ಆಳ್ವಾಸ್ ವಿದ್ಯಾರ್ಥಿಗಳಾಗಿದ್ದರು ಎಂಬುದು ಗಮನಾರ್ಹ ಅಂಶ. ಮೊದಲಿಗೆ ನಡೆದ ಲೀಗ್ ಪಂದ್ಯಾಟದಲ್ಲಿ ದೆಹಲಿ ವಿಶ್ವವಿದ್ಯಾನಿಲಯ, ಹೇಮಚಂದ್ ವಿಶ್ವವಿದ್ಯಾನಿಲಯ ಹಾಗೂ ಸಾವಿತ್ರಿ ಬಾಯಿ ಪುಲೇ ವಿಶ್ವವಿದ್ಯಾನಿಲಯದೊಂದಿಗೆ ಜಯಗಳಿಸಿ ಕ್ವಾಟರ್ ಫೈನಲ್ ಹಂತಕ್ಕೆ ಅರ್ಹತೆಯನ್ನುಗಳಿಸಿತ್ತು. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ವಿಶ್ವವಿದ್ಯಾನಿಲಯದ ವಿರುದ್ಧ ಜಯಗಳಿಸಿ ಸೆಮಿಫೈನಲ್ ಪಂದ್ಯಕ್ಕೆ ಅರ್ಹತೆಯನ್ನು ಪಡೆಯಿತು. ನಂದೆಡ್‌ನ ಎಸ್‌ಆರ್‌ಟಿಎಂಯುನ ತಂಡವನ್ನು ಮಣಿಸಿ ಫೈನಲ್ ಪಂದ್ಯಕ್ಕೆ ತೇರ್ಗಡೆ ಹೊಂದಿ, ಫೈನಲ್…

Read More

ವಿದ್ಯಾಗಿರಿ: ಕಾಲೇಜುಗಳ ಸ್ವಾಯತ್ತ ಸ್ಥಾನಮಾನವು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿದ್ದು, ಆಳ್ವಾಸ್ (ಸ್ವಾಯತ್ತ) ಕಾಲೇಜು ವಿಶಿಷ್ಟವಾಗಿ ತನ್ನ ಶೈಕ್ಷಣಿಕ ಕಾರ್ಯಕ್ರಮಗಳನ್ನು ಪಠ್ಯಕ್ರಮ, ಉದ್ಯಮ ಹಾಗೂ ಕೌಶಲ ಆಧಾರಿತವಾಗಿ ವಿದ್ಯಾರ್ಥಿ ಹಾಗೂ ಸಮುದಾಯಿಕ ಅವಶ್ಯಕತೆಗೆ ತಕ್ಕಂತೆ ಅನುಗೊಳಿಸುತ್ತಿದೆ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜು ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು. ಕಾಲೇಜಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹುಶಿಸ್ತೀಯ ಅಧ್ಯಯನ ಹೊಂದಿದ ಕಾಲೇಜುಗಳಿಗೆ ಸರ್ಕಾರ ಸ್ವಾಯತ್ತ ಸ್ಥಾನಮಾನ ನೀಡುತ್ತಿದೆ. ಸ್ವಾಯತ್ತ ಎಂದರೆ ಕೇವಲ ಆಡಳಿತ ವ್ಯವಸ್ಥೆಯಲ್ಲಿ ಮಾತ್ರ ಬದಲಾವಣೆ ಅಲ್ಲ, ಅದು ಪಠ್ಯಕ್ರಮ ಸೇರಿದಂತೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಎಂದರು. ಪ್ರಸ್ತುತ ಕಾಲಮಾನಕ್ಕೆ ತಕ್ಕಂತೆ ಶೈಕ್ಷಣಿಕ ಪಠ್ಯಕ್ರಮ ಆಧರಿತ ವ್ಯವಸ್ಥೆಯನ್ನು ರೂಪಿಸಲಾಗಿದೆ. ಪದವಿ ಜೊತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ನೇರವಾಗಿ ಸಿದ್ಧರಾಗುತ್ತಾರೆ. ವಿದ್ಯಾರ್ಥಿಗಳ ಸೈದ್ಧಾಂತಿಕ (ಥಿಯರಿ) ಕಲಿಕೆ ಜೊತೆ ಪ್ರಾಯೋಗಿಕ ಕಲಿಕೆ ಹೆಚ್ಚಾಗಿದೆ. ಅಂತರಶಿಸ್ತೀಯ ಅಧ್ಯಯನದ ಮೂಲಕ ಆನ್ವಯಿಕವಾಗಿ ಕಲಿಯುವ ಕಾರಣ ಮಾರುಕಟ್ಟೆಯಲ್ಲಿ ಔದ್ಯಮಿಕ ಹಾಗೂ ಔದ್ಯೋಗಿಕ ಅವಕಾಶ ಹೆಚ್ಚಲಿದೆ ಎಂದರು. ಶೈಕ್ಷಣಿಕ ಕಾಲಪಟ್ಟಿ (ಕ್ಯಾಲೆಂಡರ್), ಅತ್ಯಾಧುನಿಕ…

Read More

ತುಳುವರ ಹೊಸ ವರ್ಷ ಬಿಸುವಿನ ಸಂಭ್ರಮದ ಬಗ್ಗೆ ಪ್ರಖ್ಯಾತ ಕವಿ, ವಾಗ್ಮಿ ಭಾಸ್ಕರ್ ರೈ ಕುಕ್ಕುವಳ್ಳಿ ಇವರ ಅದ್ಭುತ ಸಾಹಿತ್ಯದ ಬಿಸುವಿನ ಹಾಡು ”ಬಿಸುತ ದಿನ” ಏಪ್ರಿಲ್ ಹದಿಮೂರು ರಾತ್ರಿ ಎಂಟು ಗಂಟೆಗೆ ಝೂಮ್ ಡಿಜಿಟಲ್ ವೇದಿಕೆಯಲ್ಲಿ ಬಿಡುಗಡೆಯಾಗಲಿದೆ. ತುಳುನಾಡಿನ ಹೆಮ್ಮೆಯ ಚಲನ ಚಿತ್ರ ಸಂಗೀತ ನಿರ್ದೇಶಕ ವಿ ಮನೋಹರ್ ಅವರ ಸಂಗೀತ ಸಂಯೋಜನೆಯಲ್ಲಿ ಹಾಡು ಇಂಪಾಗಿ ಮೂಡಿ ಬಂದಿದ್ದು ಬಿಸುವಿನ ಪ್ರಾಕೃತಿಕ ಮತ್ತು ಸಾಂಸ್ಕೃತಿಕ ವೈಭವವನ್ನು ಭಾಸ್ಕರ ರೈ ಕುಕ್ಕುವಳ್ಳಿಯವರ ಸಾಹಿತ್ಯ ಎಲೆ ಎಳೆಯಾಗಿ ವಿವರಿಸಲಿದೆ. ಹಾಡನ್ನು ಖ್ಯಾತ ಹವ್ಯಾಸಿ ಹಿಂದೂಸ್ತಾನಿ ಸಂಗೀತ ಕಲಾವಿದ, ತಬಲಾ ವಾದಕ ವಿಪ್ರೊ ಸಂಸ್ಥೆಯ ಉನ್ನತ ಉದ್ಯೋಗಿ ಹರಿದಾಸ್ ಎಸ್ ಪಿ ಆಚಾರ್ಯ ಬಿಡುಗಡೆಗೊಳಿಸಲಿದ್ದು ಮನೋಹರ್ ನಿರ್ದೇಶನದಲ್ಲಿ ಮುಂಬೈಯ ಉದಯೋನ್ಮುಖ ಗಾಯಕಿ ಐಲೇಸಾ ತುಳು ಸಿರಿ ಪ್ರಶಸ್ತಿ ವಿಜೇತೆ ಶ್ರದ್ಧಾ ಬಂಗೇರಾ ಹಾಡಿದ್ದು, ಸುಮಾರು ಏಳು ಜನ ಸಮೂಹ ಗಾಯಕಿಯರಿಂದ ವಿಶಿಷ್ಟವಾಗಿ ಧ್ವನಿಗ್ರಹಿಸಲಾಗಿದೆ. ಬೆಂಗಳೂರಿನ ಅಶ್ವಿನಿ ರೆಕಾರ್ಡಿಂಗ್ ಮ್ಯೂಸಿಕ್ ಕಂಪೆನಿಯಲ್ಲಿ ಧ್ವನಿಗ್ರಹಣಗೊಂಡ ಈ ಹಾಡನ್ನು…

Read More

2024-25 ರ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಿಸಿ ರೋಡ್ ನಿವಾಸಿ ಸಂತ ಅಲೋಸಿಯಸ್ ಪದವಿಪೂರ್ವ ಕಾಲೇಜು ಕೊಡಿಯಾಲ್ ಬೈಲ್ ಮಂಗಳೂರು ಇಲ್ಲಿಯ ವಿದ್ಯಾರ್ಥಿನಿ ಶ್ರಾವ್ಯ ಎಸ್ ಶೆಟ್ಟಿಗೆ ವಿಜ್ಞಾನ ವಿಭಾಗದಲ್ಲಿ ಶೇ 96 ಅಂಕ ಲಭಿಸಿದೆ. ಈಕೆ ಉಡುಪಿ ಕರಂಬಳ್ಳಿ ಶ್ರೀ ‘ದುರ್ಗಾನುಗ್ರಹ’ ಶರದ್ ಚಂದ್ರ ಎನ್ ಶೆಟ್ಟಿ ಮತ್ತು ಕಾರ್ಕಳ ಕೌಡೂರು ರಂಗನಪಲ್ಕೆ ‘ಪುಷ್ಪಾ ನಿಲಯ’ದ ವಿದ್ಯಾ ಎಸ್ ಶೆಟ್ಟಿ ದಂಪತಿಗಳ ಪುತ್ರಿ.

Read More

ಬೈಂದೂರು ಬಂಟರ ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಶಶಿಧರ್ ಶೆಟ್ಟಿ ಅವರ ನೇತೃತ್ವದ ಪದಾಧಿಕಾರಿಗಳ ನಿಯೋಗವು 2024-25 ರ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 592 ಅಂಕ ಪಡೆದ ಕುಮಾರಿ ಸನ್ನಿಧಿ ಎಂ ಶೆಟ್ಟಿಯವರ ಸಾಧನೆ ಪರಿಗಣಿಸಿ ಅಭಿನಂದಿಸಿತು. ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ನಿತಿನ್ ಬಿ ಶೆಟ್ಟಿ, ಉಪಾಧ್ಯಕ್ಷ ಎನ್ ಕರುಣಾಕರ ಶೆಟ್ಟಿ, ಬಂಟರ ಭವನದ ಸಂಚಾಲಕ ವಾದಿರಾಜ ಶೆಟ್ಟಿ, ಪದಾಧಿಕಾರಿಗಳಾದ ಸಂತೋಷ್ ಶೆಟ್ಟಿ, ಗೌರವ್ ಗಾರ್ಮೆಂಟ್ಸ್ ನ ಮನೋಹರ್ ಶೆಟ್ಟಿ ಉಪ್ಪುಂದ, ಜಯರಾಮ್ ಶೆಟ್ಟಿ ಗಂಟೆಹೊಳೆ, ಉದಯ ಕುಮಾರ್ ಶೆಟ್ಟಿ ಬಿಜೂರು ಉಪಸ್ಥಿತರಿದ್ದು ಶುಭ ಹಾರೈಸಿದರು. ಸನ್ನಿಧಿ ಶೆಟ್ಟಿ ಕಾಲ್ತೋಡು ಗ್ರಾಮದ ಹಳೆ ಕಾಲ್ತೋಡು ನಿವಾಸಿ ವಿನೋದ ಮತ್ತು ಮಂಜುನಾಥ್ ಶೆಟ್ಟಿ ದಂಪತಿಗಳ ಪುತ್ರಿ.

Read More

2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಸತತ 4ನೇ ವರ್ಷವೂ ಶೇಖಡಾ 100 ಫಲಿತಾಂಶದೊಂದಿಗೆ ಸಾರ್ವತ್ರಿಕ ದಾಖಲೆ ಸೃಷ್ಟಿಸಿದೆ. ಪರೀಕ್ಷೆ ಬರೆದ ಎಲ್ಲಾ 692 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆಗೈದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಮೇಘನಾ ಯು. ವೈ 594 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ, ಅಮೃತ ಬಸವರಾಜ್ ಬಣಕಾರ್ 592 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ಸ್ಥಾನ, ಶ್ರೀನಿಧಿ ಡಿ 591 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ಸ್ಥಾನ, ಪ್ರಜ್ವಲ್ ಎಸ್. ಎನ್ 590 ಅಂಕಗಳೊಂದಿಗೆ ರಾಜ್ಯಕ್ಕೆ 10ನೇ ಸ್ಥಾನ, ತೇಜಸ್ ವಿ. ನಾಯಕ್ 590 ಅಂಕಗಳೊಂದಿಗೆ ರಾಜ್ಯಕ್ಕೆ 10ನೇ ಸ್ಥಾನ ಗಳಿಸಿದ್ದಾರೆ. ಒಟ್ಟು ಪರೀಕ್ಷೆಗೆ ಹಾಜರಾದ 692 ವಿದ್ಯಾರ್ಥಿಗಳಲ್ಲಿ 39 ವಿದ್ಯಾರ್ಥಿಗಳು 97% ಕ್ಕಿಂತ ಅಧಿಕ, 168 ವಿದ್ಯಾರ್ಥಿಗಳು 95%ಕ್ಕಿಂತ ಅಧಿಕ, 379 ವಿದ್ಯಾರ್ಥಿಗಳು 90% ಕ್ಕಿಂತ ಅಧಿಕ, ಹಾಗೂ 557 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ…

Read More

ತುಳುನಾಡಿನಲ್ಲಿ 1975ರ ಮೊದಲು ನಾಗಬೆರ್ಮೆರ ಶಾಸ್ತಾರವನ ಮತ್ತು ಗುಳಿಗ ಬನ (ವನ)ಗಳು ಮೂಲ ಸ್ವರೂಪದಲ್ಲೇ ಇದ್ದವು. ಇಲ್ಲಿನ ಎಲ್ಲಾ ಜಾತಿ ಸಮುದಾಯಸ್ಥರ ಕುಟುಂಬದಲ್ಲಿ ಹಿಂದೆರಡು ಬನಗಳು ತಮ್ಮ ಬಯಲಿನ ಬದಿಯಲ್ಲಿ ನೆಲೆಯಾಗಿದ್ದವು. ಕೇವಲ ವರ್ಷದಲ್ಲಿ ಒಂದೆರಡು ಸರ್ತಿ ಹಾಲು ಸೀಯಾಳದ ಅಭಿಷೇಕ ತಂಬಿಲಾದಿಗಳು ಕುಟುಂಬಸ್ಥರಿಂದಲೇ ನಡೆಯುತ್ತಿದ್ದವು. 70 ರ ದಶಕದಿಂದ ಇಲ್ಲಿನ ಜನರು ಕೃಷಿಯೇತರ ವೃತ್ತಿ ಮಾಡಿ ಅನ್ಯದಾರಿಯಲ್ಲಿ ಹಣ ಸಂಪಾದಿಸಿದರು. ಆಗ ಪ್ರಾರಂಭದಲ್ಲಿ ಇಲ್ಲಿನ ದೇವಸ್ಥಾನಗಳ ಜೀರ್ಣೋದ್ದಾರ ಕಾರ್ಯಗಳು ನಡೆದವು. ಅದರಂತೆ ಕುಟುಂಬದ ನಾಗದೈವ ಶಕ್ತಿಗಳ ಪುನರುತ್ಥಾನ ಚಿಂತನೆ ನಡೆಯಿತು. ಇಲ್ಲಿ ಮೂಲ ಪದ್ಧತಿ ಸಂಸ್ಕಾರವನ್ನು ತಿಳಿಯದೆ ವನಗಳನ್ನು ಕೆಡವಿ ನಾಗ ಬೆರ್ಮರಿಗೆ, ಗುಳಿಗ ದೈವಗಳಿಗೆ ಬನದ ಬದಲಾಗಿ ಕಟ್ಟೆ ಸಂಪ್ರದಾಯ ಪ್ರಾರಂಭದ ನಂತರದಲ್ಲಿ ಕೆಲವೇ ವರ್ಷಗಳಲ್ಲಿ ನಾಗದೈವಗಳು ಕೋಪಿಸಿಕೊಂಡಿದ್ದಾರೆಂದು ಹೆಚ್ಚಿನ ಕುಟುಂಬಸ್ಥರ ಕೂಗು. ಎಷ್ಟೋ ಪ್ರಶ್ನೆ ಚಿಂತನೆ ಪರಿಹಾರ ಮಾಡಿದರೂ ದಾರಿ ಕಾಣಲಿಲ್ಲ. ಇದಕ್ಕೆ ಕಾರಣ ತೌಳವ ನೆಲದ ಮೂಲ ಆರಾಧನಾ ಪದ್ದತಿಯನ್ನೇ ನಾಶ ಮಾಡಿದ್ದಾಗಿದೆ. ಅದು ಏನೇ…

Read More

ಮಂಗಳೂರು : ಅಗಲಿದ ಹಿರಿಯ ಯಕ್ಷಗಾನ ಕಲಾವಿದ, ಐತಿಹಾಸಿಕ ಕರ್ನಾಟಕ ಮೇಳದಲ್ಲಿ ಸುದೀರ್ಘ ತಿರುಗಾಟ ಮಾಡಿದ ನವರಸ ನಾಯಕ ಬೆಜ್ಜದಗುತ್ತು ದಿ. ಪುಳಿಂಚ ರಾಮಯ್ಯ ಶೆಟ್ಟರ ಸ್ಮರಣಾರ್ಥ ಮೂರು ವರ್ಷಕ್ಕೊಮ್ಮೆ ನೀಡಲಾಗುವ `ಪುಳಿಂಚ ಪ್ರಶಸ್ತಿ’ಗೆ ಈ ಬಾರಿ ಯಕ್ಷಗಾನದ ಮೂವರು ಪ್ರಸಿದ್ಧ ಕಲಾವಿದರು ಆಯ್ಕೆಯಾಗಿದ್ದಾರೆ. ತೆಂಕುತಿಟ್ಟಿನ ಹಿರಿಯ ಕಲಾವಿದರಾದ ಬೋಳಾರ ಸುಬ್ಬಯ್ಯ ಶೆಟ್ಟಿ, ಗೋಣಿಬೀಡು ಸಂಜಯಕುಮಾರ್ ಶೆಟ್ಟಿ ಮತ್ತು ಮಿಜಾರು ತಿಮ್ಮಪ್ಪ ಅವರುಗಳನ್ನು 2023-25ನೇ ಸಾಲಿನ ಪುಳಿಂಚ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪುಳಿಂಚ ಸೇವಾ ಪ್ರತಿಷ್ಠಾನ (ರಿ.) ಮಂಗಳೂರು ಇದರ ಅಧ್ಯಕ್ಷರಾದ ನ್ಯಾಯವಾದಿ ಪುಳಿಂಚ ಶ್ರೀಧರ ಶೆಟ್ಟಿ ಪ್ರಕಟಿಸಿದ್ದಾರೆ. ಇದೇ ಸಂದರ್ಭದಲ್ಲಿ ದಿ. ಬಂಟ್ವಾಳ ಜಯರಾಮ ಆಚಾರ್ಯರಿಗೆ ಮರಣೋತ್ತರ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದವರು ತಿಳಿಸಿದ್ದಾರೆ. ಬೋಳಾರ ಸುಬ್ಬಯ್ಯ ಶೆಟ್ಟಿ ಕಾಸರಗೋಡು ಜಿಲ್ಲೆಯ ಮೂಡಂಬೈಲಿನಲ್ಲಿ ದಿ. ತ್ಯಾಂಪಣ್ಣ ಶೆಟ್ಟಿ ಮತ್ತು ಮಾನಕ್ಕೆ ದಂಪತಿಗೆ 1940ರಲ್ಲಿ ಜನಿಸಿದ ಸುಬ್ಬಯ್ಯ ಶೆಟ್ಟರು ಮುಂದೆ ಹೊಟೇಲ್ ವ್ಯಾಪಾರಕ್ಕಾಗಿ ಮಂಗಳೂರಿನ ಬೋಳಾರದಲ್ಲಿ ನೆಲೆಸಿ ಬೋಳಾರ ತಿಮ್ಮಯ್ಯ…

Read More