Author: admin
ಕುಂದಾಪುರ ಪರಿಸರದಲ್ಲಿ ಶಿಕ್ಷಣ, ಕಲೆ, ಸಾಹಿತ್ಯ, ಸಾಂಸ್ಕೃತಿಕ ವಲಯದಲ್ಲಿ ಕ್ರಿಯಾಶೀಲವಾಗಿ ಗುರುತಿಸಿಕೊಂಡಿರುವ ಸಂಘಟನಾ ಚತುರ, ವಾಗ್ಮಿಗಳಾಗಿರುವ ಡಾ| ಚೇತನ್ ಶೆಟ್ಟಿ ಕೋವಾಡಿ ಅವರು ಕುಂದಾಪುರ ತಾಲೂಕಿನ ಪ್ರತಿಷ್ಠಿತ ಯುವ ಬಂಟರ ಸಂಘದ 2026 -28 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾಗಿ ರಾಜ್ಯಮಟ್ಟದ ಗಮನ ಸೆಳೆದವರು. ಇವರ ನಿರ್ವಾಹಕ ಸಂಪಾದಕತ್ವದ ಕಾಲೇಜಿನ ವಾರ್ಷಿಕ ಸಂಚಿಕೆ ‘ಶಿಖರ’ ಸತತ ನಾಲ್ಕು ವರ್ಷ ಪ್ರಥಮ ಸ್ಥಾನ ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ. ಇದುವರೆಗೆ 200ಕ್ಕೂ ಹೆಚ್ಚು ಸರಕಾರಿ ಮತ್ತು ಖಾಸಗಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಇವರು ರಾಜ್ಯ ಮತ್ತು ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ ಪ್ರಬಂಧ ಮಂಡಿಸಿ, ಅಧ್ಯಯನ ಗೋಷ್ಠಿಯ ಅಧ್ಯಕ್ಷತೆಯನ್ನು ನಿರ್ವಹಿಸಿದ್ದಾರೆ. ‘ಕರ್ನಾಟಕ ಕರಾವಳಿಯ ಪ್ರಾದೇಶಿಕ ಅಧ್ಯಯನದ ವಿಭಿನ್ನ ಪ್ರವೃತ್ತಿಗಳು’ ಎಂಬ ವಿಷಯದ ಕುರಿತು ಪ್ರಸಿದ್ಧ ಅಂಕಣಕಾರ ಡಾ|…
ಮಕ್ಕಳು ಬಂಟರ ಸಂಘದ ಚಟುವಟಿಕೆಗಳಲ್ಲಿ ಯಾವಾಗಲೂ ಬಾಗವಹಿಸಲು ಅಥವಾ ಉಪಸ್ಥಿತರಿರಲು ಸಾಧ್ಯವಾಗದೇ ಇದ್ದಲ್ಲಿ ಮಕ್ಕಳಿಗೆ ಅವರ ಹಿರಿಯರು ಯಾ ತಂದೆ ತಾಯಂದಿರು ಶಿಕ್ಷಣದ ಜೊತೆಗೆ ಬಂಟರ ಸಂಘದ ಚಟುವಟಿಕೆಗಳ ಬಗ್ಗೆ ಮಾಹಿತಿಯಿತ್ತಲ್ಲಿ ಮುಂದೆ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಮತ್ತು ಸಂಘಕ್ಕೆ ಸಹಾಯ ನೀಡಲು ಸಾಧ್ಯ ಎಂದು ಶತಮಾನದತ್ತ ಸಾಗುತ್ತಿರುವ ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ನುಡಿದರು. ಜೂನ್ 28ರಂದು ನಾಲಾಸೋಪಾರ ಪಶ್ಚಿಮ ಗೆಲಾಕ್ಸಿ ಹೋಟೇಲಿನ ಸಭಾಗೃಹದಲ್ಲಿ ಬಂಟರ ಸಂಘ ಮುಂಬಯಿಯ ವಸಾಯಿ ದಹಾಣು ಪ್ರಾದೇಶಿಕ ಸಮಿತಿಯ ಆಶ್ರಯದಲ್ಲಿ ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯಿಂದ ನಡೆದ ಸಮಾಜದಲ್ಲಿನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ, ವಿಧವೆಯರಿಗೆ ಹಾಗೂ ಪ್ರಾದೇಶಿಕ ಸಮಿತಿಯ ವ್ಯಾಪ್ತಿಯಲ್ಲಿ 10 ಹಾಗೂ 12 ನೇಯ ತರಗತಿಯಲ್ಲಿ ಅಧಿಕ ಅಂಕ ಗಳಿಸಿದ ಪರಿಸರದಲ್ಲಿರುವ ಸಮಾಜದ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಪ್ರತಿಯೊಂದು ಪ್ರಾದೇಶಿಕ ಸಮಿತಿಯು ನೂರು ಮಕ್ಕಳನ್ನು ಶೈಕ್ಷಣಿಕ ದತ್ತು…
1928ರ ಸೆಪ್ಟೆಂಬರ್ 23ರಂದು ಉಡುಪಿಯಲ್ಲಿ ಸ್ಥಾಪನೆಯಾಗಿ, 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ನ ಅಂತರರಾಷ್ಟ್ರೀಯ ಅಧ್ಯಕ್ಷರಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ನ ಹಿರಿಯ ಸಮಾಜಸೇವಕ, ಉದ್ಯಮಿ ಹಾಗೂ ಅನಿವಾಸಿ ತುಳುವ ಸಮುದಾಯದ ಪ್ರಮುಖ ಸಂಘಟಕರಾದ ಸರ್ವೋತ್ತಮ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಪರೀಕ ಗ್ರಾಮದವರಾದ ಸರ್ವೋತ್ತಮ ಶೆಟ್ಟಿ ಅವರು ಕಳೆದ 48 ವರ್ಷಗಳಿಂದ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಕನ್ನಡ ಮತ್ತು ತುಳು ಭಾಷೆ, ಕಲೆ ಹಾಗೂ ಸಂಸ್ಕೃತಿಯ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ. ಅಬುಧಾಬಿ ಕರ್ನಾಟಕ ಸಂಘ, ಯುಎಇ ಬಂಟ್ಸ್, ಯುಎಇ ತುಳು ಕೂಟ ಸೇರಿದಂತೆ ಹಲವು ಸಂಘಟನೆಗಳ ಸ್ಥಾಪನೆ ಮತ್ತು ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಅವರು, ಅನಿವಾಸಿ ತುಳುವರನ್ನು ಜಾಗತಿಕ ಮಟ್ಟದಲ್ಲಿ ಸಂಘಟಿಸುವ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದಾರೆ. 2016 ರಲ್ಲಿ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ಐದು ದಿನಗಳ ಕಾಲ ನಡೆದ ಐತಿಹಾಸಿಕ ‘ವಿಶ್ವ ತುಳುವೆರೆ ಆಯನೊ’ದ ಅಧ್ಯಕ್ಷರಾಗಿ ಯಶಸ್ವಿ…
ಒಂದು ನಾಗರಿಕತೆಯ ಶ್ರೇಷ್ಠತೆಯನ್ನು ಅದರ ಅರಮನೆಗಳು, ದೇವಾಲಯಗಳು ಅಥವಾ ಸಾಹಿತ್ಯದಿಂದ ಮಾತ್ರ ಅಳೆಯಲಾಗುವುದಿಲ್ಲ. ಆ ಸಮಾಜವು ಕಾಲವನ್ನು ಹೇಗೆ ಅರ್ಥ ಮಾಡಿಕೊಂಡಿತು? ಋತುಗಳನ್ನು ಹೇಗೆ ಗುರುತಿಸಿತು? ಕೃಷಿಯನ್ನು ಹೇಗೆ ಸಂಘಟಿಸಿತು? ಮತ್ತು ಪ್ರಕೃತಿಯ ಚಲನೆಯನ್ನು ಹೇಗೆ ವೈಜ್ಞಾನಿಕವಾಗಿ ಗಮನಿಸಿತು? ಎಂಬುವುದು ಅದರ ನಾಗರಿಕತೆಯ ಪ್ರಮುಖ ಮಾನದಂಡಗಳಾಗಿವೆ. ಆದ್ದರಿಂದಲೇ ಜಗತ್ತಿನ ಪ್ರತಿಯೊಂದು ಪ್ರಾಚೀನ ನಾಗರಿಕತೆಯು ತನ್ನದೇ ಆದ ಕಾಲಗಣನಾ ಪದ್ಧತಿಯನ್ನು ರೂಪಿಸಿಕೊಂಡಿದೆ. ಈಜಿಪ್ಟಿನವರು ನೈಲ್ ನದಿಯ ಪ್ರವಾಹವನ್ನು ಆಧರಿಸಿ ತಮ್ಮ ಕ್ಯಾಲೆಂಡರ್ ನಿರ್ಮಿಸಿದರು. ಮಾಯಾ ನಾಗರಿಕತೆಯು ಸೂರ್ಯ, ಚಂದ್ರ ಮತ್ತು ಗ್ರಹಗಳ ಚಲನೆಯನ್ನು ಆಧರಿಸಿದ ಅತ್ಯಂತ ನಿಖರ ಕಾಲಗಣನಾ ವ್ಯವಸ್ಥೆಯನ್ನು ರೂಪಿಸಿತು. ಭಾರತೀಯ ಉಪಖಂಡದಲ್ಲಿ ಸೌರಮಾನ ಮತ್ತು ಚಂದ್ರಮಾನ ಪರಂಪರೆಗಳು ಸಾವಿರಾರು ವರ್ಷಗಳಿಂದ ಬೆಳವಣಿಗೆಯಾದವು. ಈ ಹಿನ್ನೆಲೆಯಲ್ಲಿ ತುಳುನಾಡಿನಲ್ಲಿ ಇಂದಿಗೂ ಜೀವಂತವಾಗಿರುವ ತುಳು ಕ್ಯಾಲೆಂಡರ್ ಕೇವಲ ತಿಂಗಳುಗಳ ಹೆಸರಿನ ಪಟ್ಟಿಯಲ್ಲ. ಅದು ತುಳುನಾಡಿನ ಜನರ ಖಗೋಳ ಜ್ಞಾನ, ಪ್ರಕೃತಿ ಅರಿವು, ಕೃಷಿ ಜೀವನ, ಋತು ವಿಜ್ಞಾನ ಮತ್ತು ಸಾಂಸ್ಕೃತಿಕ ಸಂಘಟನೆಯ ಜೀವಂತ ದಾಖಲೆ.…
2028ರಲ್ಲಿ ಶತಮಾನೋತ್ಸವ ಆಚರಿಸಲಿರುವ ತುಳುವ ಮಹಾಸಭೆಯ ಕೇಂದ್ರೀಯ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ತುಳುವ ಮಹಾಸಭೆ ಇಂಟರ್ನ್ಯಾಷನಲ್ ಕೇಂದ್ರೀಯ ಸಮಿತಿಯ ಅಧ್ಯಕ್ಷರಾಗಿ ಡಾ. ಅವಿನ್ ಬಿ.ಆರ್ ಆಳ್ವ, ಪ್ರಧಾನ ಕಾರ್ಯದರ್ಶಿಯಾಗಿ ಅರವಿಂದ ಬೆಳ್ಚಡ ಹಾಗೂ ಪ್ರಧಾನ ಸಂಚಾಲಕರಾಗಿ ವಿಶ್ವನಾಥ ಆಚಾರ್ಯ ಪೆರ್ಡೂರು ಅವರನ್ನು ನೇಮಕ ಮಾಡಲಾಗಿದೆ. 2028ರಲ್ಲಿ ತುಳುವ ಮಹಾಸಭೆಗೆ 100 ವರ್ಷಗಳು ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಶತಮಾನೋತ್ಸವವನ್ನು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನೂತನ ಪದಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ತುಳುವ ಭಾಷೆಯ ಅಭಿವೃದ್ಧಿ, ಸಂವಿಧಾನಾತ್ಮಕ ಮಾನ್ಯತೆಗಾಗಿ ಪ್ರಯತ್ನ, ಸಂಶೋಧನೆ, ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆ ಹಾಗೂ ವಿಶ್ವದಾದ್ಯಂತ ತುಳುವ ಸಮುದಾಯವನ್ನು ಸಂಘಟಿಸುವ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮಹಾಸಭೆ ನೂತನ ಪದಾಧಿಕಾರಿಗಳು ತಿಳಿಸಿದ್ದಾರೆ.
ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನಲ್ಲಿ ನಡೆಯಲಿರುವ 20ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಂಚಾಲಕರಾಗಿ ಉದ್ಯಮಿ ಹಾಗೂ ಸಮಾಜಸೇವಕರಾದ ಜಯಶೀಲ ಅಡ್ಯಾಂತಾಯರವರು ಆಯ್ಕೆಯಾದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಪ್ರಧಾನ ಕಾರ್ಯದರ್ಶಿ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ, ಸಿದ್ಧಿವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣಪ್ರಸಾದ್ ರೈ, ಕಾರ್ಯಕಾರಿ ಸಮಿತಿ ಸದಸ್ಯರಾದ ಉಮೇಶ್ ರೈ ಮೇಗಿನಮನೆ, ಮನೀಶ್ ರೈ ಅಡ್ಯಾರ್, ವಸಂತ ಶೆಟ್ಟಿ ಜೆಪ್ಪು, ಜಗದೀಶ್ ಶೆಟ್ಟಿ ಬಿಜೈ, ಉಲ್ಲಾಸ್ ಶೆಟ್ಟಿ ಪೆರ್ಮುದೆ, ಎಂ ಸುಂದರ ಶೆಟ್ಟಿ, ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ದಿವಾಕರ ಸಾಮಾನಿ ಚೇಳ್ಯಾರು ಗುತ್ತು, ಮತ್ತಿತರರು ಉಪಸ್ಥಿತರಿದ್ದರು. ಜಯಶೀಲ ಅಡ್ಯಂತಾಯ ಅವರು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪೋಷಕರಾಗಿ, ಬಸ್ಸು ಮಾಲಕರ ಸಂಘದ ಮಾಜಿ ಅಧ್ಯಕ್ಷರಾಗಿ,…
ಶ್ರೀ ರಾಮಭಿವಂದ್ಯ ಯಕ್ಷ ಸೇವಾ ಬಳಗ ಮುಂಬಯಿ ವತಿಯಿಂದ ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಜಂಟಿ ಆಯೋಜನೆಯಲ್ಲಿ ಪ್ರಭು ಶ್ರೀ ರಾಮಚಂದ್ರ ದೇವರ ಅವತಾರದ ಆರಂಭದಿಂದ ಶ್ರೀ ದೇವರ ನಿರ್ಯಾಣದವರೆಗಿನ ಸಂಪೂರ್ಣ ಶ್ರೀರಾಮ ಚರಿತ್ರೆ ಶ್ರೀರಾಮಕಥಾ ಹೃದಯಂ ಪುಣ್ಯಪ್ರದ ಕಾರ್ಯಕ್ರಮದ ದಶಮ ಪ್ರಸ್ತುತಿ ಸೀತಾನ್ವೇಷಣೆ ತಾಳಮದ್ದಳೆ ಮತ್ತು ಸನ್ಮಾನ ಕಾರ್ಯಕ್ರಮವು ಜೂನ್ 28 ರಂದು ಅಪರಾಹ್ನ 2.15 ರಿಂದ ವಿದ್ಯಾವಿಹಾರ್ ಪಶ್ಚಿಮದ ಗಾಂವ್ದೇವಿ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾ ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ಸಮಾರಂಭದಲ್ಲಿ ಕಳೆದ ಹಲವಾರು ವರ್ಷಗಳಿಂದ ಮುಂಬಯಿ ಮಹಾನಗರದಲ್ಲಿ ಯಕ್ಷಗಾನ ಕಲಾವಿದರಾಗಿ ಯಕ್ಷಗಾನ ಗುರುವಾಗಿ ಸೇವೆ ಸಲ್ಲಿಸುತ್ತಿರುವ ನ್ಯಾಯವಾದಿ ಶ್ರೀಮತಿ ಆರ್.ಎಲ್ ಭಟ್, ಯಕ್ಷಗಾನ ಸಾಹಿತಿ, ಅರ್ಥದಾರಿ ಕೊಲ್ಯಾರು ರಾಜು ಶೆಟ್ಟಿ, ಶ್ರೀ ನಾರಾಯಣ ಗುರು ಯಕ್ಷಗಾನ ಮಂಡಳಿಯ ನೇಪಥ್ಯ ಕಲಾವಿದ ಕೃಷ್ಣ ಬಂಗೇರ, ತ್ರಿಭಾಷ ಪ್ರಸಂಗಕರ್ತ, ಕಲಾವಿದ ಎಂ.ಟಿ ಪೂಜಾರಿ ದಂಪತಿಗಳನ್ನು ಗೌರವಿಸಲಾಗುವುದು. ಮಂದಿರದ ಪ್ರಧಾನ ಅರ್ಚಕ ಹರಿದಾಸ ಭಟ್ ಪೆರ್ಣಂಕಿಲ ಅವರ ಅಧ್ಯಕ್ಷತೆ ಮತ್ತು…
ಶ್ರೀ ಕ್ಷೇತ್ರ ಕಟೀಲು ದೇವಾಲಯದಲ್ಲಿ ನಡೆದ ತುಳುವರ್ಲ್ಡ್ ಫೌಂಡೇಶನ್ನ ಆಡಳಿತ ಮಂಡಳಿ ಸಭೆಯಲ್ಲಿ 2026 -27ನೇ ಸಾಲಿನ ಅಧ್ಯಕ್ಷೆಯಾಗಿ ಭಾನುಮತಿ ಶೆಟ್ಟಿ ಕಕ್ವಗುತ್ತು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಸಂತ ರೈ ಕುತ್ತೆತ್ತೂರು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಜರ್ಮನಿಯ ಕೋಲೋನ್ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣ ಪಡೆದು, ಪ್ರವಾಸೋದ್ಯಮದಲ್ಲಿ ಡಿಪ್ಲೊಮಾ ಪಡೆದಿರುವ ಭಾನುಮತಿ ಶೆಟ್ಟಿ ಕಕ್ವಗುತ್ತು ಅವರು ಸುಮಾರು 39 ವರ್ಷಗಳ ಕಾಲ ಜರ್ಮನಿಯಲ್ಲಿ ನೆಲೆಸಿ ತಮ್ಮದೇ ಆದ ಟ್ರಾವೆಲ್ ಏಜೆನ್ಸಿಯನ್ನು ಯಶಸ್ವಿಯಾಗಿ ನಡೆಸಿದ್ದಾರೆ. ವಿದೇಶದಲ್ಲಿದ್ದರೂ ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯೊಂದಿಗೆ ನಿಕಟ ಸಂಪರ್ಕವನ್ನು ಉಳಿಸಿಕೊಂಡಿರುವ ಅವರು “ಅಟಿಲು ಮಲ್ಪುಲೆ ತುಳು ಕಲ್ಪುಲೆ” ಯೂಟ್ಯೂಬ್ ವಾಹಿನಿಯ ಮೂಲಕ ತುಳುನಾಡಿನ ಪರಂಪರೆಯನ್ನು ಜನರಿಗೆ ಪರಿಚಯಿಸುತ್ತಿದ್ದಾರೆ. ಇತ್ತೀಚೆಗೆ ಮುಲ್ಕಿಯಲ್ಲಿ “ಅಪ್ಪೆ ಬೇರ್ ದ ತುಳುನಾಡ್” ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಪ್ರಸ್ತುತ ಅವರು ಶಾಂಭವಿ ಸಂಜೀವಿನಿ ಒಕ್ಕೂಟ ಮೂಲ್ಕಿ ತಾಲೂಕು ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಮಹಿಳಾ ಸಬಲೀಕರಣ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ…
ಯಕ್ಷ ಕಲಾರಂಗ ಕಾರ್ಕಳ ಇವರು ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸಹಯೋಗದೊಂದಿಗೆ ಕಾರ್ಕಳ ತಾಲೂಕಿನ ವಿವಿಧ ಶಾಲಾ ಕಾಲೇಜುಗಳಲ್ಲಿ ಆಸಕ್ತಿಯ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ತರಬೇತಿ ನೀಡುವ ಯೋಜನೆಯ ಅಂಗವಾಗಿ ಕೊಳಕೆ ಇರ್ವತ್ತೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯರಾದ ಉದ್ಯಮಿ, ಎಸ್. ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕ ಭಾಸ್ಕರ ಕೋಟ್ಯಾನ್ ರವರು ದೀಪ ಬೆಳಗಿಸುವುದರೊಂದಿಗೆ ತರಗತಿ ಆರಂಭವಾಯಿತು. ಪಟ್ಲ ಫೌಂಡೇಶನ್ ನ ಟ್ರಸ್ಟ್ ಗೋವಾ ಘಟಕದ ಅಧ್ಯಕ್ಷ ಭಕ್ತವತ್ಸಲ ಗಣೇಶ ಶೆಟ್ಟಿಯವರು ಸಭಾದ್ಯಕ್ಷತೆ ವಹಿಸಿ ಮಕ್ಕಳ ಕಳೆದ ವರ್ಷದ ಯಕ್ಷಗಾನ ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಪಟ್ಲ ಸತೀಶ್ ಶೆಟ್ಟಿಯವರ ಈ ಒಂದು ಪ್ರಯತ್ನಕ್ಕೆ ನಾವೆಲ್ಲಾ ಬೆನ್ನೆಲುಬುಗಳಾಗಿದ್ದೇವೆ ಎಂದರು. ನಿವೃತ್ತ ಶಿಕ್ಷಕ, ಹವ್ಯಾಸಿ ಕಲಾವಿದ ರಮಾನಾಥ ಶೆಣೈ, ಉದಯ ಎಸ್ ಕೋಟ್ಯಾನ್ ಸಂದರ್ಭೋಚಿತವಾಗಿ ಮಾತಾನಾಡಿ, ಪಟ್ಲ ಫೌಂಡೇಶನ್ ಟ್ರಸ್ಟ್ ಮಾಡುತ್ತಿರುವ ಕಲಾ ಸೇವೆಯನ್ನು ತುಂಬು ಕಂಠದಿಂದ ಶ್ಲಾಘಿಸಿದರು. ಕಾರ್ಕಳ ಯಕ್ಷ ಕಲಾರಂಗದ ಅಧ್ಯಕ್ಷ ವಿಜಯ ಶೆಟ್ಟಿ, ಉಪಾದ್ಯಕ್ಷ ಬೇಬಿ…
ಸ್ತ್ರೀ ಎಂಬುದು ಪರಿಪೂರ್ಣತೆಯ ಸಂಕೇತ. ಆಕೆಯ ಅಂತರಂಗದ ಶಕ್ತಿ, ಸಂವೇದನೆ ಮತ್ತು ಚಿಂತನೆ ಅಕ್ಷರ ರೂಪದಲ್ಲಿ ಅಭಿವ್ಯಕ್ತಿಯಾದಾಗ ಅದು ಸಮಾಜದ ಮೌಲ್ಯಗಳನ್ನು ಶ್ರೀಮಂತಗೊಳಿಸುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ನುಡಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ನ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸೌಮ್ಯ ತಿಲಕ್ ಶೆಟ್ಟಿಯವರ ‘ಮಸಿಯ ಮಾತು’ ಕವನ ಸಂಕಲನವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಈ ಸಂಕಲನದಲ್ಲಿರುವ ಎಲ್ಲಾ ಕವನಗಳೂ ಕವಯಿತ್ರಿ ಸೌಮ್ಯರವರ ಹೆಸರಿನಂತೆಯೇ ಮೃದುತ್ವ, ಸಂಯಮ ಮತ್ತು ಸಂವೇದನಾ ಶೀಲತೆಯಿಂದ ಕೂಡಿವೆ. ಸಮತೆ, ಮಾನವೀಯತೆ ಮತ್ತು ಸಹಬಾಳ್ವೆಯ ತತ್ವವೇ ಈ ಕವನಗಳ ಜೀವಾಳವಾಗಿದೆ. ಆದ್ದರಿಂದ ಇಲ್ಲಿ ರೋಷ, ಆವೇಶ, ಸೇಡು ಅಥವಾ ದ್ವೇಷದ ಅಭಿವ್ಯಕ್ತಿಗಳಿಗೆ ಅವಕಾಶವಿಲ್ಲ, ಬದಲಾಗಿ ಪ್ರೀತಿ, ಕರುಣೆ, ಸಹಾನುಭೂತಿ ಮತ್ತು ಜೀವನದ ಸಕಾರಾತ್ಮಕ ದೃಷ್ಟಿಕೋನವೇ ಪ್ರಧಾನವಾಗಿ ಹರಿದು ಬರುತ್ತದೆ. ಕವನಗಳಲ್ಲಿ ಪ್ರತಿಫಲಿಸಿರುವ ಚಿಂತನೆಗಳು ಮೌಲ್ಯಾಧಾರಿತ ಬದುಕಿನತ್ತ ಓದುಗರನ್ನು ಕರೆದೊಯ್ಯುತ್ತವೆ. ಮಹತ್ವಾಕಾಂಕ್ಷೆಯ ಅಂಧ ಓಟಕ್ಕಿಂತ ಬದುಕಿನ ಸರಳತೆ,…















