Author: admin
ಯುಎಇ ಬಂಟ್ಸ್ ನ 48 ನೇ ವರ್ಷದ “ಭಾವೈಕ್ಯ” ಬಂಟರ ಮಹಾ ಸಮಾಗಮವು ಡಿಸೆಂಬರ್ 14ರಂದು ನಗರದ ಶೇಖ್ ಝಯೀದ್ ರಸ್ತೆಯ ಮಿಲೆನಿಯಂ ಪ್ಲಾಜಾ ಹೋಟೆಲ್ ಡೌನ್ ಟೌನ್ ಹೋಟೆಲ್ (ಹಳೆಯ ಕ್ರೌನ್ ಪ್ಲಾಜಾ) ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಯುಎಇ ಬಂಟರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ “ಬಂಟ ವಿಭೂಷಣ ಪ್ರಶಸ್ತಿ” ಪ್ರದಾನ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಯುಎಇ ಬಂಟ ಬಾಂಧವರಿಂದ ತುಳುನಾಡ ಮಣ್ಣ್ ದ ಮಹಿಮೆ, ಭಾರತದ ಸಂಸ್ಕೃತಿಯ ಪಯಣ, ಬಂಟೆರ್ನ ಐಸಿರ, ಕಿರುಚಿತ್ರ ಸ್ಪರ್ಧೆ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ. ಬಂಟ ವಿಭೂಷಣ ಪ್ರಶಸ್ತಿ ಪ್ರದಾನ : ವರ್ಷಂಪ್ರತಿ ಕೊಡಮಾಡುವ ಯುಎಇ ಬಂಟರ ಪ್ರತಿಷ್ಠಿತ ಬಂಟ ವಿಭೂಷಣ ಪ್ರಶಸ್ತಿಯನ್ನು ಮಂಗಳೂರು ಕಂಬಳದ ರೂವಾರಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ ನೀಡಿ ಗೌರವಿಸಲಾಗುವುದು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡ ಚಿತ್ರರಂಗದ ನಟ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ, ಬಾಲಿವುಡ್…
ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನದ ಹಿನ್ನೆಲೆಯಲ್ಲಿ ಯುನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ವತಿಯಿಂದ ಮಾನವ ಹಕ್ಕುಗಳ ಕುರಿತು ವಿಶೇಷ ಉಪನ್ಯಾಸ, ಜಿಡಿಪಿಯಲ್ಲಿ ಭಾರತ ಮುಂದಿದ್ದರೂ ಮಾನವ ಹಕ್ಕುಗಳಲ್ಲಿ ಹಿಂದಿನ ಸ್ಥಾನ ಪಡೆಯಲು ಕಾರಣವೇನು? ಕುರಿತ ಸಂವಾದವನ್ನು ಡಿಸೆಂಬರ್ 9 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಬ್ಬನ್ ಪಾರ್ಕ್ ನಲ್ಲಿರುವ ಕರ್ನಾಟಕ ಸರ್ಕಾರಿ ನೌಕರರ ಸಂಘದ ಕಟ್ಟಡದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಯು.ಆರ್ ಉಪೇಂದ್ರ ಶೆಟ್ಟಿ ವಹಿಸಲ್ಲಿದ್ದಾರೆ. ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಡಾ. ಅಶೋಕ್ ಬಿ ಹಿಂಚಿಗೇರಿ ಉಪಸ್ಥಿತರಿರುವರು. ಅತಿಥಿ ವಕ್ತಾರರಾಗಿ ಅಮ್ನೆಸ್ಟಿ ಇಂಟರ್ನ್ಯಾಷನಲ್ ಸೀನಿಯರ್ ಫೆಲೋ, ಮಿತ್ತಲ್ ದಕ್ಷಿಣ ಏಷ್ಯಾ ಸಂಸ್ಥೆಯ ನಿವೃತ್ತ ಮಹಾ ಕಾರ್ಯದರ್ಶಿ ಅಮ್ನೆಸ್ಟಿ ಸಲೀಲ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ. ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ ನಿರ್ದೇಶಕಿ ಡಾ| ಮೀರಾ ಕೃಷ್ಣಪ್ಪ ಉಪಸ್ಥಿತರಿರುವರು.
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಪ್ರಾಂತೀಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ ನವೆಂಬರ್ 25 ರಂದು ಮಂಗಳವಾರ ಸಂಜೆ 7.00 ಗಂಟೆಗೆ ಕುಂದಾಪುರದ ಜೆ.ಸಿ ಭವನದ ಸಭಾಂಗಣದಲ್ಲಿ ನಡೆಯಿತು. ಪ್ರಾಂತೀಯ ಅಧ್ಯಕ್ಷ ರಜತ್ ಕುಮಾರ್ ಹೆಗ್ಡೆ ಮಾತನಾಡಿ, 2019 ರಲ್ಲಿ ಸ್ಥಾಪಿತಗೊಂಡ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ 317c ಜಿಲ್ಲೆಯಲ್ಲೇ ಅತ್ಯದ್ಭುತ ಕ್ಲಬ್ ಆಗಿ ಮೂಡಿ ಬಂದಿದೆ. ಇಲ್ಲಿಯ ತನಕ ಸಾರಥ್ಯ ವಹಿಸಿದ ಕ್ಲಬ್ ನ ಎಲ್ಲಾ ಅಧ್ಯಕ್ಷರಿಗೆ ನನ್ನ ಕೃತಜ್ಞತೆಗಳನ್ನು ತಿಳಿಸುತ್ತಿದ್ದೇನೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲೆಯ ಮಾಜಿ ಜಿಲ್ಲಾ ಗವರ್ನರ್ ಲಯನ್ ವಿ.ಜಿ ಶೆಟ್ಟಿ ಮಾತನಾಡಿ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಕಾರ್ಯವೈಕರಿಯನ್ನು ಪ್ರಶಂಶಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಅಧ್ಯಕ್ಷರಾದ ಲಯನ್ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ವಹಿಸಿದ್ದರು. ಲಯನ್ಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಲ. ಭುಜಂಗ ಶೆಟ್ಟಿ ವರದಿ ವಾಚಿಸಿದರು. ಪ್ರಾಂತೀಯ ಕಾರ್ಯದರ್ಶಿ ಲ. ಏಕನಾಥ ಬೋಳಾರ್,…
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಮೂರನೆಯ ಅಧ್ಯಕ್ಷರಾಗಿದ್ದ ವಿಶ್ವನಾಥ ಯು. ಮಾಡ ಅವರ ನಿಧನಕ್ಕೆ ಸಮಿತಿಯ ವತಿಯಿಂದ ನುಡಿ ನಮನ ಸಲ್ಲಿಸಲಾಯಿತು. ಸಾಂತಾಕ್ರೂಜ್ ಪೂರ್ವದ ಪೇಜಾವರ ಮಠದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಯ ಬಗ್ಗೆ ಯಶಸ್ವಿಯಾಗಿ ಹೋರಾಟ ನಡೆಸುತ್ತಿರುವ ಏಕೈಕ ಸರ್ಕಾರೇತರ ಸಂಘಟನೆ, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಮಾಜಿ ಅಧ್ಯಕ್ಷ ವಿಶ್ವನಾಥ ಯು. ಮಾಡ ಅವರ ಸಂತಾಪ ಸಭೆಯಲ್ಲಿ ಗಣ್ಯರು ಮಾತನಾಡಿದರು. ತೋನ್ಸೆ ಜಯಕೃಷ್ಣ ಎ. ಶೆಟ್ಟಿ (ಸಮಿತಿಯ ಸಂಸ್ಥಾಪಕರು) ಮಾತನಾಡಿ, ಮಾಡ ಅವರ ಶಿಸ್ತಿನ ಜೀವನ ಪದ್ಧತಿ, ಕಠಿಣ ಪರಿಶ್ರಮ ಮತ್ತು ಅವರ ವ್ಯಕ್ತಿತ್ವವು ತಮ್ಮ ಸಾಧನೆಗೆ ಪ್ರೇರಣೆ ನೀಡಿದೆ. ಅವರಿಂದ ನಾವು ಬಹಳಷ್ಟು ಶಿಸ್ತಿನ ಅನುಭವ ಪಡೆದಿದ್ದೇವೆ. ಸಮಿತಿಗೆ ಅವರು ಮಾಡಿದ ಸೇವೆ ಪ್ರಯೋಜನಕಾರಿಯಾಗಿದೆ. ಅವರು ನಡೆದು ಬಂದ ದಾರಿ ಇತರರಿಗೂ ಮಾರ್ಗದರ್ಶನವಾಗಲಿ ಹಾಗೂ ಸಮಿತಿಯಲ್ಲಿ ಅವರ ಹೆಸರು ಸದಾ ಕಾಲ ಉಳಿಯುವಂತಾಗಲಿ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ…
ಕರ್ನಾಟಕ ಸರ್ಕಾರ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಾರ್ಕಳ, ಸರಕಾರಿ ಶುಶ್ರೂಷ ಮಹಾವಿದ್ಯಾಲಯ ಕಾರ್ಕಳ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಶಾಖೆ ಮತ್ತು ರೋಟರಿ ಕ್ಲಬ್ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ – 2025ರ ಅಂಗವಾಗಿ ಜನಜಾಗ್ರತಿ ಜಾಥಾ ಕಾರ್ಕಳದಲ್ಲಿ ಜರುಗಿತು. ಕಾರ್ಯಕ್ರಮದ ಭಾಗವಾಗಿ ಜಾಥಾ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಾರ್ಕಳದಿಂದ ಪ್ರಾರಂಭವಾಗಿ ಬಸ್ ಸ್ಟ್ಯಾಂಡ್ ಸರ್ಕಲ್ ನಂತರ ಅನಂತಶಯನ ಸರ್ಕಲ್ ಮೂಲಕ ಸಾಗುತ್ತಾ ಪುನಃ ಆಸ್ಪತ್ರೆ ಆವರಣಕ್ಕೆ ತಲುಪಿತು. ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿಗಳು, ಸ್ವಯಂಸೇವಕರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉತ್ಸಾಹಭರಿತವಾಗಿ ಭಾಗವಹಿಸಿದರು. ಕಾರ್ಯಕ್ರಮವನ್ನು ಶ್ರೀಮತಿ ಶರ್ಮಿಳಾ ಸಿ.ಎಸ್., ಗೌರವಾನ್ವಿತ ಹಿರಿಯ…
ಬಂಟರ ಸಂಘ ಕುವೈಟ್ ಆಯೋಜನೆಯಲ್ಲಿ ನಡೆದ ಬಂಟಾಯನ -2025 ಕಲಾ ಸಾಂಸ್ಕೃತಿಕ ಮಹೋತ್ಸವವು ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಜರುಗಿತು. ಇಂಡಿಯನ್ ಸೆಂಟ್ರಲ್ ಸ್ಕೂಲ್ ಅಬ್ಬಾಸಿಯಾದ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮವು ಕಲೆ, ನೃತ್ಯ ಮತ್ತು ಸಾಂಸ್ಕೃತಿಕ ವೈಭವದಿಂದ ಜನರ ಮನಗೆದ್ದಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕತಾರ್ ಬಂಟರ ಸಂಘದ ಅಧ್ಯಕ್ಷ ನವೀನ್ ಶೆಟ್ಟಿ ಇರುವೈಲು ವಿಶೇಷ ಆಹ್ವಾನಿತ ಅತಿಥಿಯಾಗಿ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಶೋಧನ್ ಶೆಟ್ಟಿ ನೆರೆದ ಗಣ್ಯರನ್ನು ಮತ್ತು ಅತಿಥಿಗಳನ್ನು ಗೌರವಪೂರ್ವಕವಾಗಿ ಸ್ವಾಗತಿಸಿದರು. ಬಂಟರ ಸಂಘ ಕುವೈಟ್ ವತಿಯಿಂದ ಗುರ್ಮೆ ಸುರೇಶ್ ಶೆಟ್ಟಿ ಮತ್ತು ನವೀನ್ ಶೆಟ್ಟಿ ಇರುವೈಲು ಅವರನ್ನು ಸಾಂಪ್ರದಾಯಿಕ ಗೌರವ ಮತ್ತು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿ ಗುರ್ಮೆ ಸುರೇಶ್ ಶೆಟ್ಟಿ ತಮ್ಮ ಭಾಷಣದಲ್ಲಿ ವಚನ ಸಾಹಿತ್ಯ ಮತ್ತು ಕಗ್ಗಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿದರು. ಭಾರತೀಯ ಕುಟುಂಬ ವ್ಯವಸ್ಥೆಯ ಉದ್ದೇಶ ಮತ್ತು ಉಪಯೋಗಗಳ ಬಗ್ಗೆ ವಿವರಿಸಿ,…
ಮಹಾರಾಷ್ಟ್ರದ ಮಣ್ಣಿನಲ್ಲಿ ಕನ್ನಡದ ಕಂಪನ್ನು ಪಸರಿಸುತ್ತಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿಣ್ಣರ ಬಿಂಬ ಚಾರಿಟೇಬಲ್ ಟ್ರಸ್ಟ್ನ ಡೊಂಬಿವಲಿ, ಕಲ್ವಾ, ಘೋಡಬಂದರ್, ನವಿ ಮುಂಬೈ ಪ್ರಾದೇಶಿಕ ಸಮಿತಿಗಳನ್ನೊಳಗೊಂಡ ಈಶಾನ್ಯ ವಲಯದ ಮಕ್ಕಳ ಉತ್ಸವದ ಸಮಾರೋಪ ಸಮಾರಂಭವು ನವೆಂಬರ್ 16 ರಂದು ಐರೋಲಿಯ ಜ್ಞಾನ ವಿಕಾಸ್ ಮಂಡಲ ಮೆಹ್ತಾ ಕಾಲೇಜ್ ನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕದ ಕಾರ್ಯನಿರತ ಪತ್ರಕರ್ತರ ಸಂಘ ಮಾಹಾರಾಷ್ಟ್ರ ಘಟಕದ ಅಧ್ಯಕ್ಷರಾದ ಡಾ| ಶಿವ ಮೂಡಿಗೆರೆಯವರು ಮಾತನಾಡುತ್ತಾ, ಚಿಣ್ಣರ ಬಿಂಬದಲ್ಲಿ ಕಲಿತ ಮಕ್ಕಳು ಉನ್ನತ ಹುದ್ದೆಯಲ್ಲಿ ಇರುವುದನ್ನು ಕಂಡು ತುಂಬಾ ಸಂತೋಷವಾಗುತ್ತದೆ. ಮಹಾರಾಷ್ಟ್ರ ಸರಕಾರವು ಚಿಣ್ಣರ ಬಿಂಬದ ಸಾಧನೆ ಗುರುತಿಸಿ ಗೌರವಿಸಿ ಸಹಕಾರ ನೀಡುವಂತಾಗಲಿ. ಹಾಗೆಯೇ ಸಂಸ್ಥೆಗೆ ಇನ್ನಷ್ಟು ಪ್ರಶಸ್ತಿ, ಪುರಸ್ಕಾರಗಳು ಲಭಿಸುತ್ತಿರಲಿ. ಅದಷ್ಟು ಬೇಗ ಮುಂಬಯಿಯಲ್ಲಿ ಚಿಣ್ಣರ ಭವನ ನಿರ್ಮಾಣವಾಗಲಿ ಎಂದು ಹಾರೈಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ನವಿ ಮುಂಬಯಿಯ ಮಾಜಿ ನಗರ ಸೇವಕ ಸಂತೋಷ್ ಡಿ. ಶೆಟ್ಟಿ ಮಾತನಾಡುತ್ತಾ, ಕಳೆದ 23 ವರ್ಷಗಳಿಂದ…
ಜಾಗತಿಕವಾಗಿ ಕರ್ನಾಟಕ ಸಂಸ್ಕೃತಿ ಮತ್ತು ಭಾಷೆಯನ್ನು ಪಸರಿಸುವಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ, ಕರ್ನಾಟಕ ಸಂಘ ಕತಾರ್ನ ಅಧ್ಯಕ್ಷರು ಹಾಗೂ ಎಟಿಎಸ್ ಗ್ರೂಪ್ನ ವ್ಯವಸ್ಥಾಪಕ ನಿರ್ದೇಶಕರಾದ ದೋಣಿಂಜೆಗುತ್ತು ಡಾ| ಮೂಡಂಬೈಲ್ ರವಿ ಶೆಟ್ಟಿಯವರಿಗೆ ಪ್ರತಿಷ್ಠಿತ ಕಲಾದರ್ಪಣ ಕನ್ನಡ ಕಣ್ಮಣಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ‘ಕಲಾದರ್ಪಣ ಕನ್ನಡ ಹಬ್ಬ’ ಹಾಗೂ ರಾಜ್ಯೋತ್ಸವ ಸಂಭ್ರಮದ ವೇದಿಕೆಯಲ್ಲಿ ಈ ಸನ್ಮಾನ ನೆರವೇರಿತು. ಡಾ| ರವಿ ಶೆಟ್ಟಿ ಮೂಡಂಬೈಲ್ ಅವರ ನಾಯಕತ್ವದಲ್ಲಿ ಕರ್ನಾಟಕ ಸಂಘ ಕತಾರ್ (KSQ) ತನ್ನ ರಜತ ವರ್ಷೋತ್ಸವ ಸಾಂಸ್ಕೃತಿಕ, ಸಾಮಾಜಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ 25 ವೈವಿಧ್ಯಮಯ ಮೈಲಿಗಲ್ಲು ಕಾರ್ಯಕ್ರಮಗಳ ಆಯೋಜನೆ ಮಾಡುವ ಮೂಲಕ ಯಶಸ್ವಿಯಾಗಿ ಪೂರೈಸಿದೆ. ನೂರಾರು ಜನರಿಗೆ ವಿದೇಶದಲ್ಲಿ ಉದ್ಯೋಗವನ್ನು ಕೊಡಿಸುವಲ್ಲಿ ಪ್ರಮುಖ ಪಾತ್ರವಹಿಸಿ ಅನೇಕರ ಮನೆಯನ್ನು ಬೆಳಗಿಸುವುದರ ಜೊತೆಗೆ ವಿದೇಶದಲ್ಲಿದ್ದರೂ ಸದಾ ಸ್ವದೇಶದಲ್ಲಿ ತಾನು ಬೆಳೆದ ಊರಿನ ಸರ್ವರಲ್ಲೂ ಉತ್ತಮ ಬಾಂಧವ್ಯ ಇರಿಸಿಕೊಂಡು ಸರ್ವರ ಮೆಚ್ಚುಗೆಗೆ ಪಾತ್ರರಾದ ಪುತ್ತೂರಿನ ಕಣ್ಮಣಿ ರವಿ ಶೆಟ್ಟಿಯವರು…
ಪ್ರಸ್ತುತ ದಿನಮಾನಗಳಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಗ್ನಿ ಅವಘಡ, ಪ್ರಕೃತಿ ವಿಕೋಪಗಳಿಂದ ಸಂಭವಿಸಬಹುದಾದ ದುರ್ಘಟನೆಗಳಿಂದ ನಾವು ಹೇಗೆ ಸುರಕ್ಷಿತರಾಗಿ ನಮ್ಮನ್ನು ಕಾಪಾಡಿಕೊಳ್ಳಬೇಕು ಎಂಬ ಅರಿವನ್ನು ಮೂಡಿಸುವಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ‘ಸುರಕ್ಷತೆ ಮೊದಲು’ ಎಂಬ ಜನಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ನವೆಂಬರ್ 29 ರಂದು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ವೃತ್ತಿಪರ ಅಗ್ನಿಶಾಮಕ ಮತ್ತು ಸುರಕ್ಷತಾ ಅಧಿಕಾರಿಯಾದ ಸತ್ಯರಾಜ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಾತ್ಯಕ್ಷಿಕೆಗಳ ಮೂಲಕ ಸುರಕ್ಷತೆಯ ಬಗ್ಗೆ ಅರಿವನ್ನು ಮೂಡಿಸಿದರು. ಬೆಂಕಿಯಿಂದ, ನೀರಿನಿಂದ ಅಪಘಾತಗಳು ಸಂಭವಿಸಿದಾಗ ಯಾವ ರೀತಿಯಾಗಿ ಪ್ರತಿಕ್ರಿಯಿಸಬೇಕು ಎಂಬುವುದನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿ ಭಯ ಮುಕ್ತರಾಗಿ ಅದನ್ನು ಎದುರಿಸುವಲ್ಲಿ ನಾವು ಹೇಗೆ ಸಿದ್ಧರಿರಬೇಕೆಂಬುದನ್ನು ತಿಳಿಯಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಹ ಸಂಸ್ಥಾಪಕರು ಮತ್ತು ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ರವರು ತುರ್ತು ಸಂದರ್ಭದಲ್ಲಿ ಸರಿಯಾಗಿ ಪ್ರತಿಕ್ರಿಯಿಸಿದ್ದಲ್ಲಿ ಮಾತ್ರ ಜೀವ ಉಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ನಮಗೆ ಮುಂಜಾಗೃತ ಕ್ರಮಗಳ ಬಗ್ಗೆ ತಿಳುವಳಿಕೆ ಇರಬೇಕೆಂದು…
ಕೊಡಗಿನ ಚಿತ್ರ ಶಿಲ್ಪ ಕಲಾವಿದ ಶ್ರೀ ಬಿ. ಕೆ. ಗಣೇಶ್ ರೈ ಯವರಿಗೆ ಮಡಿಕೇರಿಯಲ್ಲಿ “ಚಿತ್ರಶಿಲ್ಪ ಕಲಾ ತಪಸ್ವಿ” ಪ್ರಶಸ್ತಿ ಪ್ರದಾನ
ಕೊಡಗಿನ ಚಿತ್ರ ಶಿಲ್ಪ ಕಲಾವಿದ ಶ್ರೀ ಬಿ. ಕೆ. ಗಣೇಶ್ ರೈ ಯವರ ಶಿಲ್ಪಕಲಾ ವೃತ್ತಿ ಜೀವನದ ೫೦ನೇ ವರ್ಷ ಸುವರ್ಣ ಮಹೋತ್ಸವಕ್ಕೆ ಕಲಾನಗರ ಸಾಂಸ್ಕöÈತಿಕ ವೇದಿಕೆ ಮಡಿಕೇರಿ ಇವರಿಂದ ಹುಟ್ಟೂರ ಸನ್ಮಾನ, “ಚಿತ್ರಶಿಲ್ಪ ಕಲಾ ತಪಸ್ವಿ” ಬಿರುದು ಪ್ರದಾನ, ೫೦ ವರ್ಷಗಳ ಹೆಜ್ಜೆ ಗುರುತುಗಳನ್ನು ದಾಖಲಿಸಿರುವ “ಕಲಾದರ್ಪಣ” ಅಭಿನಂದನಾ ಗ್ರಂಥ ಸಮರ್ಪಣೆ… ಕೊಡಗಿನ ಮಡಿಕೇರಿಯವರಾಗಿರುವ ಚಿತ್ರ ಶಿಲ್ಪ ಕಲಾವಿದ ಹಾಗೂ ಕ್ರಿಯಾತ್ಮಕ ಕಲಾನಿರ್ದೇಶಕರಾಗಿರುವ ಶ್ರೀ ಬಿ.ಕೆ.ಗಣೇಶ್ ರೈ ಯವರು ತಮ್ಮ ಚಿತ್ರ ಶಿಲ್ಪ ಕಲಾ ವೃತ್ತಿಯನ್ನು ೧೯೭೪ರಲ್ಲಿ ಪ್ರಾರಂಭಿಸಿ, ೨೦೨೫ಕ್ಕೆ ತಮ್ಮ ವೃತ್ತಿ ಜೀವನದ ೫೦ನೇ ವರ್ಷದ ಸುವರ್ಣ ಸಂಭ್ರಮ. ಮಡಿಕೇರಿ ಸರ್ಕಾರಿ ಜೂನಿಯರ ಕಾಲೇಜಿನ ಮಹಧ್ವಾರದ ಎರಡು ಬದಿಗಳಲ್ಲಿ ಪುಷ್ಪಾಂಜಲಿ, ಆನೆಗಳು ಉಬ್ಬುಶಿಲ್ಪ ಮತ್ತು ಸಿಂಹಗಳ ವಿಗ್ರಹಗಳನ್ನು ಮಾಡುವಲ್ಲಿ ಕಲಾವಿದರಾಗಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದರು. ಮೈಸೂರಿನ ಚಾಮರಾಜೇಂದ್ರ ಟೆಕ್ನಿಕಲ್ ಸ್ಕೂಲ್ (ಕಾವಾ) ನಲ್ಲಿ ಚಿತ್ರಕಲೆ, ಶಿಲ್ಪಕಲೆ, ಫೋಟೊಗ್ರಫಿ ಯಲ್ಲಿ ಡಿಪ್ಲೋಮಾ ಪಡೆಯುದರ ಜೊತೆಗೆ ಆರ್ಟ್ ಮಾಸ್ಟರ್ ಪದವಿಯನ್ನು…















