Author: admin

ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಇದರ 29ನೇ ವಾರ್ಷಿಕ ಮಹಾಸಭೆಯು ನವೆಂಬರ್25 ರಂದು ಮಂಗಳವಾರ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ಇರುವ ಬಂಟರ ಯಾನೆ ನಾಡವರ ಮಾತೃ ಸಂಘದ ಶ್ರೀ ರಾಮಕೃಷ್ಣ ಕಾಲೇಜು ಮೈದಾನದಲ್ಲಿ ಸಂಘದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು. ಮೂರು ವರ್ಷಗಳ ಕಾಲಾವಧಿಗೆ ಪದಾಧಿಕಾರಿಗಳಾಗಿ ಆಯ್ಕೆಗೊಂಡ ಅವರ ಹೆಸರುಗಳನ್ನು ಚುನಾವಣೆ ಅಧಿಕಾರಿ ಪೃಥ್ವಿರಾಜ್ ರೈ ಸಭೆಗೆ ತಿಳಿಸಿದರು. ಅಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಆಯ್ಕೆಗೊಂಡರೆ, ಉಪಾಧ್ಯಕ್ಷರಾಗಿ ಕರ್ನಿರೆ ವಿಶ್ವನಾಥ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಜಯಕರ್ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿಯಾಗಿ ಮೋಹನದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಉಮಾ ಕೃಷ್ಣ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷರಾಗಿ ಗಿರೀಶ್ ಶೆಟ್ಟಿ ತೆಳ್ಳಾರ್, ಸಂಚಾಲಕರಾಗಿ ಕೊಲ್ಲಾಡಿ ಬಾಲಕೃಷ್ಣ ರೈಯವರು ಆಯ್ಕೆಗೊಂಡರು. ಐಕಳ ಹರೀಶ್ ಶೆಟ್ಟಿ ಅವರನ್ನು ಶ್ರೀ ಗುರುದೇವಾನಂದ ಸ್ವಾಮೀಜಿ…

Read More

‘ಕರ್ನಾಟಕ ಕಲಾವಿಹಾರ ಹಾಗೂ ಕುಂಡಾವು ಮೇಳಗಳಲ್ಲಿ ತಾನು ಬೆಟ್ಟಂಪಾಡಿ ಬಾಳಪ್ಪ ಶೆಟ್ಟರ ಒಡನಾಡಿಯಾಗಿದ್ದೆ. ಅವರು ಓರ್ವ ಸ್ವಾಭಿಮಾನಿ ಕಲಾವಿದ. ಹಾಸ್ಯ ಪಾತ್ರವನ್ನು ಎಂದೂ ಅಪಹಾಸ್ಯವಾಗಲು ಬಿಡುತ್ತಿರಲಿಲ್ಲ’ ಎಂದು ಯಕ್ಷಗಾನ ರಂಗದ ಹಿರಿಯ ಕಲಾವಿದ ದಶಾವತಾರಿ ಕೆ ಗೋವಿಂದ ಭಟ್ಟರು ಹೇಳಿದ್ದಾರೆ. ಅವರು ಮಂಗಳೂರು ವಿವಿ ಕಾಲೇಜಿನಲ್ಲಿ ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆ, ಮಂಗಳೂರು ವಿವಿಯ ಡಾ| ಪಿ ದಯಾನಂದ ಪೈ ಮತ್ತು ಶ್ರೀ ಪಿ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷಭಾರತಿ (ರಿ) ಪುತ್ತೂರು ಇವರ ಸಹಯೋಗದಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2025’ ಹದಿಮೂರನೇ ವರ್ಷದ ನುಡಿಹಬ್ಬ ತ್ರಯೋದಶ ಸರಣಿಯ ದ್ವಿತೀಯ ದಿನ ಯಕ್ಷಗಾನ ಹಾಸ್ಯಪಟು ದಿ| ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣಾ ಸಮಾರಂಭದಲ್ಲಿ ಬಾಳಪ್ಪ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ‘ಯಕ್ಷಗಾನದ ದುಡಿಮೆಯಿಂದ ಸಂತೃಪ್ತಿ ಇದೆ. ಒಂದು ಸಾವಿರಕ್ಕೂ…

Read More

ಅಕ್ಬರ್ ಬೊಕ್ಕ ಬೀರ್ ಬಲ್ಲ್ ಮೊಕಲೆನ ಅರ್ತಿಕುಸಲ್ ದ ಬಗೆಟ್ ಕೇಂದ್ ಇಪ್ಪರ್. ಅಂಚ ಒಂಜಿ ದಿನ ಅರಸು ಚಾವಡಿಡ್ ಅಕ್ಬರೆ ಪನ್ಪೆ “ಕೋಡೆ ರಾತ್ರೆಡ್ ಎಂಕ್ ಒಂಜಿ ಕನ ಕಟಿನಿ. ಯಾನ್ಲಾ ಬೀರ್ ಬಲ್ಲೆಲಾ ಇರ್ವೆರೇ ಕಾಡ ತಾದಿಡೆ ನಡತೊಂದು ಪೋವೊಂದು ಇತ್ತ. ಅಪಗ ಬಲ್ಲೆಡ್ದ್ ಒಂಜಿ ಪಿಲಿ ಲಕ್ ದ್ ಎಂಕಲೆನ್ ಗಿಡ್ತೊಂದು ಬತ್ತ್ಂಡ್. ಜೀವ ಕಯಿಟ್ ಪತೊಂದು ಬಲಿಪುನ ರಬಸೊಡು, ತೂಪ ತೂಪ ಬೀರಬಲ್ಲೆ ಪೋದು ಪೀತ ಗುರಿಕ್ ಬೂರಿಯೆ. ಯಾನ್ ಪೋದು ತಿಗತ ಗುರಿಕ್ ಬೂರಿಯೆ”. ಉಂದೆನ್ ಕೇಂಡಿನೇ ಆ ರಾಜ ಸಬೆಟ್, ಬೀರಬಲ್ಲನ ಮಿತ್ತ್ ನಂಜಿ ಕಾರೊಂದಿತ್ತಿನ ಮಸ್ತ್ ಜನ ಅಡ್ಡಡ್ಡ ಬೂರ್ದು ತೆಲಿಪರೆ ಪತಿಯೆರ್. ಅಪಗ ಬೀರಬಲ್ಲೆ ಅರಸುಡ ಕೇನುವೆ “ಬೊಕ್ಕ ದಾದಂಡ್?” ಐಕ್ ಅರಸು ಪನ್ಪೆ “ಬೊಕ್ಕ ಎಂಕ್ ಎಚ್ಚರ್ಗೆ ಆಂಡ್”. ಅಪಗ ಬೀರಬಲ್ಲೆ ಪನ್ಪೆ “ಎಂಕ್ ಲಾ ಅವ್ವೇ ಕನ ಕಟ್ ದ್ಂಡ್. ಐಡ್ದ್ ಬೊಕ್ಕ ಇರ್ವೆರಪ್ಪ ಗುರಿಡ್ದ್ ಮಿತ್ತ್…

Read More

ಪುಣೆ ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ವಿಶ್ವಸ್ಥ ಮಂಡಳಿಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ಮಹಾಸಭೆಯು ನವೆಂಬರ್ 21 ಶನಿವಾರದಂದು ದೇವಸ್ಥಾನದ ಪ್ರಾಂಗಣದಲ್ಲಿ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಶ್ರೀ ಸುಭಾಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ದೇವಸ್ಥಾನದ ಮುಂದಿನ ಮಹಾಪೂಜೆ ಮತ್ತು ವಾರ್ಷಿಕೋತ್ಸವದ ತಯಾರಿಯ ಬಗ್ಗೆ ಸಭೆಯಲ್ಲಿ ಚರ್ಚಿಸಿ ರೂಪುರೇಷೆಗಳನ್ನು ಸದಸ್ಯರಿಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಅಯ್ಯಪ್ಪ ಸೇವಾ ಸಂಘದ ವಿಶ್ವಸ್ಥ ಮಂಡಳಿಗೆ ಪೂರಕವಾಗಿ ಕಾರ್ಯಗೈಯುವ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಿ ಪ್ರಕಟಿಸಲಾಯಿತು. ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ ದೇವಸ್ಥಾನದ ಪ್ರಮುಖ ಸೇವಾಕರ್ತರಲ್ಲಿ ಒಬ್ಬರಾದ ಜಗದೀಪ್ ಎ ಶೆಟ್ಟಿಯವರನ್ನು ಸರ್ವನುಮತದಿಂದ ಆಯ್ಕೆ ಮಾಡಲಾಯಿತು. ಉಪ ಕಾರ್ಯಾಧ್ಯಕ್ಷರುಗಳಾಗಿ ವರದ ಕುಮಾರ್ ಎಂ ಶೆಟ್ಟಿ, ಗಣೇಶ್ ವಿ ಶೆಟ್ಟಿ, ಮಹೇಶ್ ಸಿ ಶೆಟ್ಟಿ, ಬಾಲಕೃಷ್ಣ ಕೆ ಶೆಟ್ಟಿ, ಪ್ರಕಾಶ್ ಐ ದೇವಾಡಿಗ, ಶಿವಪ್ರಸಾದ್ ಬಿ ಪೂಜಾರಿ, ದಿನೇಶ್ ಎಸ್ ಶೆಟ್ಟಿ ಅಂಜಾರು, ಆನಂದ್ ಎ ಶೆಟ್ಟಿ, ಕಾರ್ಯದರ್ಶಿಯಾಗಿ ಭಗವಾನ್…

Read More

ಶ್ರೀಮತಿ ನಾಗರತ್ನ ದಯಾನಂದ ಶೆಟ್ಟಿ ಇವರ ನೆನಪಿನಲ್ಲಿ ನವೆಂಬರ್ 21 ರಂದು ಹೇರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀಮತಿ ಮತ್ತು ಶ್ರೀ ಸಿಎ ಜೀವನ್‌ ಕುಮಾರ್‌ ಶೆಟ್ಟಿ ಪಟೇಲರ ಮನೆ ಹೇರೂರು ಇವರು ಸೇವಾ ರೂಪದಲ್ಲಿ ನೂತನವಾಗಿ ನಿರ್ಮಿಸಿರುವ “ಶ್ರೀಮತಿ ನಾಗರತ್ನ ದಯಾನಂದ ಶೆಟ್ಟಿ ಸಭಾಂಗಣ” ಇದರ ಉದ್ಘಾಟನೆಯನ್ನು ಶ್ರೀ ಕೆ ಜಯಪ್ರಕಾಶ್‌ ಹೆಗ್ಡೆ (ಮಾಜಿ ಸಚಿವರು ಕರ್ನಾಟಕ ಸರಕಾರ) ಹಾಗೂ ಶ್ರೀ ಎಚ್ ದಯಾನಂದ ಶೆಟ್ಟಿ ಪಟೇಲರ ಮನೆ ಹೇರೂರು ಇವರು ಜೊತೆಗೂಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಮತ್ತು ಶ್ರೀ ಸಿಎ ಜೀವನ್‌ ಕುಮಾರ್‌ ಶೆಟ್ಟಿ ದಂಪತಿಗಳು, ದೇವಸ್ಥಾನದ ಪ್ರಧಾನ ಅರ್ಚಕರಾದ ಆನಂದ ಭಟ್, ಅನುವಂಶಿಕ ಮೊಕ್ತೇಸರರಾದ ಮಂದರ ಶೆಟ್ಟಿ, ಸುನಿಲ್‌ ಸೂಡ ದೊಡ್ಡಮನೆ, ಆಡಳಿತ ಮಂಡಳಿ ಅಧ್ಯಕ್ಷ ಗಣೇಶ್‌ ಶೆಟ್ಟಿ ಬಡಾಮನೆ, ಉದ್ಯಮಿ ಶ್ರೀ ಚೇತನ್‌ ಕುಮಾರ್ ಶೆಟ್ಟಿ ಹೇರೂರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾವೇರಿ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ತಂಡ ಪ್ರಶಸ್ತಿಯನ್ನು ಪಡೆದುಕೊಂಡು, ಒಟ್ಟು 09 ಪದಕಗಳೊಂದಿಗೆ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಸ್ಪರ್ಧೆಯ ಫಲಿತಾಂಶ – ಆರ್ಟಿಸ್ಟಿಕ್ ಪೇರ್ : ಬಾಲಕರ ವಿಭಾಗದಲ್ಲಿ ಚಂದ್ರಶೇಖರ ಮತ್ತು ಪೃಥ್ವಿಚಾರ್ ಪ್ರಥಮ ಸ್ಥಾನ, ಆರ್ಟಿಸ್ಟಿಕ್ ಪೇರ್ : ಬಾಲಕಿಯರ ವಿಭಾಗದಲ್ಲಿ ಸಂಜನಾ ಮತ್ತು ಕವನ ದ್ವಿತೀಯ ಸ್ಥಾನ, ರಿದಮಿಕ್ ಪೇರ್ : ಬಾಲಕರ ವಿಭಾಗದಲ್ಲಿ ಪೃಥ್ವಿಚಾರ್ ಮತ್ತು ಕುಮಾರ್ ಪ್ರಥಮ ಸ್ಥಾನ, ರಿದಮಿಕ್ ಪೇರ್ : ಬಾಲಕಿಯರ ವಿಭಾಗದಲ್ಲಿ ಕವನ ಮತ್ತು ಅನನ್ಯ ಪ್ರಥಮ ಸ್ಥಾನ, ಆರ್ಟಿಸ್ಟಿಕ್ ಸಿಂಗಲ್ : ಬಾಲಕರ ವಿಭಾಗದಲ್ಲಿ ಕುಮಾರ್ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ಆಳ್ವಾಸ್‌ನ ಐವರು ಕ್ರೀಡಾಪಟುಗಳು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ವಿಜೇತರಾದ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ…

Read More

ಆಳ್ವಾಸ್ ನುಡಿಸಿರಿ, ವಿರಾಸತ್ ಕಾರ್ಕಳ ಘಟಕದ ಆಶ್ರಯದಲ್ಲಿ ನವೆಂಬರ್ 29ರಂದು ಶನಿವಾರ ಸಂಜೆ 5:45ಕ್ಕೆ ಕಾರ್ಕಳದ ಸ್ವರಾಜ್ ಮೈದಾನದಲ್ಲಿ ಅದ್ಧೂರಿ ಸಾಂಸ್ಕೃತಿಕ ವೈಭವ ಜರುಗಲಿದೆ. ಸಮಾರಂಭವನ್ನು ಖ್ಯಾತ ಉದ್ಯಮಿ ಬರೋಡ ಶಶಿಧರ ಶೆಟ್ಟಿ ಉದ್ಘಾಟಿಸಲಿದ್ದು, ಸಮಾರಂಭಕ್ಕೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ನುಡಿಸಿರಿ, ವಿರಾಸತ್ ಘಟಕದ ಗೌರವಾಧ್ಯಕ್ಷ ವಿ. ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಆಳ್ವಾಸ್ ವಿದ್ಯಾಸಂಸ್ಥೆಯ ಛೇರ್ಮನ್ ಡಾ. ಮೋಹನ್ ಅಳ್ವ ಉಪಸ್ಥಿತರಿರುವರು ಎಂದು ಕಾರ್ಯಕ್ರಮದ ಆಳ್ವಾಸ್ ನುಡಿಸಿರಿ ವಿರಾಸತ್ ಸಾಂಸ್ಕೃತಿಕ ವೈಭವದ ಕಾರ್ಕಳದ ಅದ್ಯಕ್ಷ ವಿಜಯ ಶೆಟ್ಟಿ ಹೇಳಿದರು. ಈ ವರ್ಷದ ನುಡಿಸಿರಿ, ವಿರಾಸತ್ ಸಾಂಸ್ಕೃತಿಕ ವೈಭವವನ್ನು ಕೀರ್ತಿಶೇಷ ಎಂ.ಕೆ. ವಿಜಯಕುಮಾರ್ ಅವರ ಸ್ಮರಣೆಗೆ ಅರ್ಪಿಸಲಾಗಿದೆ. ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500ಕ್ಕೂ ಹೆಚ್ಚು ವಿದ್ಯಾರ್ಥಿ ಕಲಾವಿದರು ವಿವಿಧ ಭಾರತೀಯ ಕಲಾ ಪ್ರಕಾರಗಳ ಮನಮೋಹಕ ಪ್ರದರ್ಶನ ನೀಡಲಿದ್ದಾರೆ. ಯೋಗ ದೀಪಿಕಾ, ಅಷ್ಟಲಕ್ಷ್ಮಿ ಶಾಸ್ತ್ರೀಯ ನೃತ್ಯ, ಬಡಗುತಿಟ್ಟು ಯಕ್ಷಗಾನ ‘ಶಂಕರಾರ್ಧ ಶರೀರಿಣಿ’, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್…

Read More

ಕಳೆದ 12 ವರ್ಷಗಳಿಂದ ಯಕ್ಷಗಾನ ತಾಳಮದ್ದಳೆ ಸಪ್ತಾಹದ ಮೂಲಕ ಯಕ್ಷಾಂಗಣ ಸಂಸ್ಥೆ ಯಕ್ಷ ಕಲೆ ಮತ್ತು ಕನ್ನಡ ಭಾಷೆಗೆ ವಿಶೇಷ ಕೊಡುಗೆ ನೀಡುತ್ತಾ ಬಂದಿದೆ. ಕಲಾವಿದರು ಮತ್ತು ಕಲಾ ತಂಡಗಳಿಗೆ ಅದು ನೀಡುತ್ತಿರುವ ಪ್ರೋತ್ಸಾಹ ಮತ್ತು ಗೌರವ ಅನನ್ಯವಾದುದು ಎಂದು ಕದ್ರಿ ಶ್ರೀ ಮಂಜುನಾಥ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಎಜೆ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ| ಎ.ಜೆ ಶೆಟ್ಟಿ ಹೇಳಿದರು. ಅವರು ಮಂಗಳೂರು ವಿವಿ ಕಾಲೇಜಿನಲ್ಲಿ ಯಕ್ಷಾಂಗಣ ಮಂಗಳೂರು, ಮಂಗಳೂರು ವಿವಿಯ ಡಾ| ಪಿ ದಯಾನಂದ ಪೈ ಮತ್ತು ಶ್ರೀ ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷಭಾರತಿ (ರಿ) ಪುತ್ತೂರು ಇವರ ಸಹಯೋಗದಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2025’ ಹದಿಮೂರನೇ ವರ್ಷದ ನುಡಿಹಬ್ಬ ತ್ರಯೋದಶ ಸರಣಿ ಕಾರ್ಯಕ್ರಮದಲ್ಲಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಂಗಳೂರು ವಿವಿ ಕುಲಸಚಿವರಾದ ಕೆ. ರಾಜು ಮೊಗವೀರ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29 ನೇ ವಾರ್ಷಿಕ ಮಹಾಸಭೆ, ಬಹಿರಂಗ ಅಧಿವೇಶನ ಮತ್ತು ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಯುಎಇ ಬಂಟ್ಸ್ ನ ನೂತನ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಂಗಳವಾರ ನಡೆದ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಯುಎಇ ಅಧ್ಯಕ್ಷರಾದ ವಕ್ವಾಡಿ ಪ್ರವೀಣ್ ಶೆಟ್ಟಿ ಮಾತಾಡಿ, “ನಾನು ಬಂಟರ ಸಂಘಕ್ಕೆ ಬರಲು ಐಕಳ ಹರೀಶ್ ಶೆಟ್ಟಿ ಅವರೇ ಕಾರಣ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನೂತನ ಪದಾಧಿಕಾರಿಗಳಿಗೆ ಅಭಿನಂದನೆಗಳು. ಹೊಸ ತಂಡ ಉತ್ಸಾಹದಿಂದ ಕಾರ್ಯ ನಿರ್ವಹಿಸುವ ಮೂಲಕ ಇಲ್ಲಿ ನಿರ್ಮಾಣ ಆಗಬೇಕಿರುವ ನೂತನ ಕಟ್ಟಡಕ್ಕೆ ಎಲ್ಲರೂ ಧನಸಹಾಯ ನೀಡಬೇಕು” ಎಂದರು. ವೇದಿಕೆಯಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಅಶೋಕ್ ಶೆಟ್ಟಿ ಬಿಲ್ಲಾಡಿ, ಉಮಾ ಕೃಷ್ಣ ಶೆಟ್ಟಿ, ಶಶಿಧರ್ ಶೆಟ್ಟಿ ಇನ್ನಂಜೆ, ಅಜಿತ್ ಹೆಗ್ಡೆ ಪುಣೆ, ಒಕ್ಕೂಟದ…

Read More

ಬೆಳ್ತಂಗಡಿಯ ಆರಂಬೋಡಿ ಗ್ರಾಮದ ಹಕ್ಕೇರಿ ಕಂಬಳದಡ್ಡ ದಿವಂಗತ ಲಿಂಗಪ್ಪ ಶೆಟ್ಟಿ ಮತ್ತು ಶ್ರೀಮತಿ ಸಂಪಾ ಶೆಟ್ಟಿಯವರ ಸುಪುತ್ರಿ ಕುಮಾರಿ ಸುರಕ್ಷಾ ಶೆಟ್ಟಿಯವರು ಚಾರ್ಟರ್ಡ್ ಅಕೌಂಟೆಂಟ್ (CA) ಅಂತಿಮ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ಇವರು ಪ್ರಸ್ತುತ ಬೆಂಗಳೂರಿನ CAGK ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಭವಿಷ್ಯದಲ್ಲಿ ಇನ್ನಷ್ಟು ಸಾಧನೆಯನ್ನು ಮಾಡಲಿ ಎಂದು ಹಾರೈಸೋಣ.

Read More