Author: admin

ಬಂಟರ ಸಂಘ ಕುವೈಟ್ ಆಯೋಜನೆಯಲ್ಲಿ ನಡೆದ ಬಂಟಾಯನ -2025 ಕಲಾ ಸಾಂಸ್ಕೃತಿಕ ಮಹೋತ್ಸವವು ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಜರುಗಿತು. ಇಂಡಿಯನ್ ಸೆಂಟ್ರಲ್ ಸ್ಕೂಲ್ ಅಬ್ಬಾಸಿಯಾದ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮವು ಕಲೆ, ನೃತ್ಯ ಮತ್ತು ಸಾಂಸ್ಕೃತಿಕ ವೈಭವದಿಂದ ಜನರ ಮನಗೆದ್ದಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕತಾರ್ ಬಂಟರ ಸಂಘದ ಅಧ್ಯಕ್ಷ ನವೀನ್ ಶೆಟ್ಟಿ ಇರುವೈಲು ವಿಶೇಷ ಆಹ್ವಾನಿತ ಅತಿಥಿಯಾಗಿ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಶೋಧನ್ ಶೆಟ್ಟಿ ನೆರೆದ ಗಣ್ಯರನ್ನು ಮತ್ತು ಅತಿಥಿಗಳನ್ನು ಗೌರವಪೂರ್ವಕವಾಗಿ ಸ್ವಾಗತಿಸಿದರು. ಬಂಟರ ಸಂಘ ಕುವೈಟ್ ವತಿಯಿಂದ ಗುರ್ಮೆ ಸುರೇಶ್ ಶೆಟ್ಟಿ ಮತ್ತು ನವೀನ್ ಶೆಟ್ಟಿ ಇರುವೈಲು ಅವರನ್ನು ಸಾಂಪ್ರದಾಯಿಕ ಗೌರವ ಮತ್ತು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿ ಗುರ್ಮೆ ಸುರೇಶ್ ಶೆಟ್ಟಿ ತಮ್ಮ ಭಾಷಣದಲ್ಲಿ ವಚನ ಸಾಹಿತ್ಯ ಮತ್ತು ಕಗ್ಗಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿದರು. ಭಾರತೀಯ ಕುಟುಂಬ ವ್ಯವಸ್ಥೆಯ ಉದ್ದೇಶ ಮತ್ತು ಉಪಯೋಗಗಳ ಬಗ್ಗೆ ವಿವರಿಸಿ,…

Read More

ಮಹಾರಾಷ್ಟ್ರದ ಮಣ್ಣಿನಲ್ಲಿ ಕನ್ನಡದ ಕಂಪನ್ನು ಪಸರಿಸುತ್ತಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿಣ್ಣರ ಬಿಂಬ ಚಾರಿಟೇಬಲ್ ಟ್ರಸ್ಟ್‌ನ ಡೊಂಬಿವಲಿ, ಕಲ್ವಾ, ಘೋಡಬಂದರ್, ನವಿ ಮುಂಬೈ ಪ್ರಾದೇಶಿಕ ಸಮಿತಿಗಳನ್ನೊಳಗೊಂಡ ಈಶಾನ್ಯ ವಲಯದ ಮಕ್ಕಳ ಉತ್ಸವದ ಸಮಾರೋಪ ಸಮಾರಂಭವು ನವೆಂಬರ್ 16 ರಂದು ಐರೋಲಿಯ ಜ್ಞಾನ ವಿಕಾಸ್ ಮಂಡಲ ಮೆಹ್ತಾ ಕಾಲೇಜ್ ನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕದ ಕಾರ್ಯನಿರತ ಪತ್ರಕರ್ತರ ಸಂಘ ಮಾಹಾರಾಷ್ಟ್ರ ಘಟಕದ ಅಧ್ಯಕ್ಷರಾದ ಡಾ| ಶಿವ ಮೂಡಿಗೆರೆಯವರು ಮಾತನಾಡುತ್ತಾ, ಚಿಣ್ಣರ ಬಿಂಬದಲ್ಲಿ ಕಲಿತ ಮಕ್ಕಳು ಉನ್ನತ ಹುದ್ದೆಯಲ್ಲಿ ಇರುವುದನ್ನು ಕಂಡು ತುಂಬಾ ಸಂತೋಷವಾಗುತ್ತದೆ. ಮಹಾರಾಷ್ಟ್ರ ಸರಕಾರವು ಚಿಣ್ಣರ ಬಿಂಬದ ಸಾಧನೆ ಗುರುತಿಸಿ ಗೌರವಿಸಿ ಸಹಕಾರ ನೀಡುವಂತಾಗಲಿ. ಹಾಗೆಯೇ ಸಂಸ್ಥೆಗೆ ಇನ್ನಷ್ಟು ಪ್ರಶಸ್ತಿ, ಪುರಸ್ಕಾರಗಳು ಲಭಿಸುತ್ತಿರಲಿ. ಅದಷ್ಟು ಬೇಗ ಮುಂಬಯಿಯಲ್ಲಿ ಚಿಣ್ಣರ ಭವನ ನಿರ್ಮಾಣವಾಗಲಿ ಎಂದು ಹಾರೈಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ನವಿ ಮುಂಬಯಿಯ ಮಾಜಿ ನಗರ ಸೇವಕ ಸಂತೋಷ್ ಡಿ. ಶೆಟ್ಟಿ ಮಾತನಾಡುತ್ತಾ, ಕಳೆದ 23 ವರ್ಷಗಳಿಂದ…

Read More

ಜಾಗತಿಕವಾಗಿ ಕರ್ನಾಟಕ ಸಂಸ್ಕೃತಿ ಮತ್ತು ಭಾಷೆಯನ್ನು ಪಸರಿಸುವಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ, ಕರ್ನಾಟಕ ಸಂಘ ಕತಾರ್‌ನ ಅಧ್ಯಕ್ಷರು ಹಾಗೂ ಎಟಿಎಸ್ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕರಾದ ದೋಣಿಂಜೆಗುತ್ತು ಡಾ| ಮೂಡಂಬೈಲ್ ರವಿ ಶೆಟ್ಟಿಯವರಿಗೆ ಪ್ರತಿಷ್ಠಿತ ಕಲಾದರ್ಪಣ ಕನ್ನಡ ಕಣ್ಮಣಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ‘ಕಲಾದರ್ಪಣ ಕನ್ನಡ ಹಬ್ಬ’ ಹಾಗೂ ರಾಜ್ಯೋತ್ಸವ ಸಂಭ್ರಮದ ವೇದಿಕೆಯಲ್ಲಿ ಈ ಸನ್ಮಾನ ನೆರವೇರಿತು. ಡಾ| ರವಿ ಶೆಟ್ಟಿ ಮೂಡಂಬೈಲ್ ಅವರ ನಾಯಕತ್ವದಲ್ಲಿ ಕರ್ನಾಟಕ ಸಂಘ ಕತಾರ್ (KSQ) ತನ್ನ ರಜತ ವರ್ಷೋತ್ಸವ ಸಾಂಸ್ಕೃತಿಕ, ಸಾಮಾಜಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ 25 ವೈವಿಧ್ಯಮಯ ಮೈಲಿಗಲ್ಲು ಕಾರ್ಯಕ್ರಮಗಳ ಆಯೋಜನೆ ಮಾಡುವ ಮೂಲಕ ಯಶಸ್ವಿಯಾಗಿ ಪೂರೈಸಿದೆ. ನೂರಾರು ಜನರಿಗೆ ವಿದೇಶದಲ್ಲಿ ಉದ್ಯೋಗವನ್ನು ಕೊಡಿಸುವಲ್ಲಿ ಪ್ರಮುಖ ಪಾತ್ರವಹಿಸಿ ಅನೇಕರ ಮನೆಯನ್ನು ಬೆಳಗಿಸುವುದರ ಜೊತೆಗೆ ವಿದೇಶದಲ್ಲಿದ್ದರೂ ಸದಾ ಸ್ವದೇಶದಲ್ಲಿ ತಾನು ಬೆಳೆದ ಊರಿನ ಸರ್ವರಲ್ಲೂ ಉತ್ತಮ ಬಾಂಧವ್ಯ ಇರಿಸಿಕೊಂಡು ಸರ್ವರ ಮೆಚ್ಚುಗೆಗೆ ಪಾತ್ರರಾದ ಪುತ್ತೂರಿನ ಕಣ್ಮಣಿ ರವಿ ಶೆಟ್ಟಿಯವರು…

Read More

ಪ್ರಸ್ತುತ ದಿನಮಾನಗಳಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಗ್ನಿ ಅವಘಡ, ಪ್ರಕೃತಿ ವಿಕೋಪಗಳಿಂದ ಸಂಭವಿಸಬಹುದಾದ ದುರ್ಘಟನೆಗಳಿಂದ ನಾವು ಹೇಗೆ ಸುರಕ್ಷಿತರಾಗಿ ನಮ್ಮನ್ನು ಕಾಪಾಡಿಕೊಳ್ಳಬೇಕು ಎಂಬ ಅರಿವನ್ನು ಮೂಡಿಸುವಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ‘ಸುರಕ್ಷತೆ ಮೊದಲು’ ಎಂಬ ಜನಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ನವೆಂಬರ್ 29 ರಂದು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ವೃತ್ತಿಪರ ಅಗ್ನಿಶಾಮಕ ಮತ್ತು ಸುರಕ್ಷತಾ ಅಧಿಕಾರಿಯಾದ ಸತ್ಯರಾಜ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಾತ್ಯಕ್ಷಿಕೆಗಳ ಮೂಲಕ ಸುರಕ್ಷತೆಯ ಬಗ್ಗೆ ಅರಿವನ್ನು ಮೂಡಿಸಿದರು. ಬೆಂಕಿಯಿಂದ, ನೀರಿನಿಂದ ಅಪಘಾತಗಳು ಸಂಭವಿಸಿದಾಗ ಯಾವ ರೀತಿಯಾಗಿ ಪ್ರತಿಕ್ರಿಯಿಸಬೇಕು ಎಂಬುವುದನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿ ಭಯ ಮುಕ್ತರಾಗಿ ಅದನ್ನು ಎದುರಿಸುವಲ್ಲಿ ನಾವು ಹೇಗೆ ಸಿದ್ಧರಿರಬೇಕೆಂಬುದನ್ನು ತಿಳಿಯಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಹ ಸಂಸ್ಥಾಪಕರು ಮತ್ತು ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ರವರು ತುರ್ತು ಸಂದರ್ಭದಲ್ಲಿ ಸರಿಯಾಗಿ ಪ್ರತಿಕ್ರಿಯಿಸಿದ್ದಲ್ಲಿ ಮಾತ್ರ ಜೀವ ಉಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ನಮಗೆ ಮುಂಜಾಗೃತ ಕ್ರಮಗಳ ಬಗ್ಗೆ ತಿಳುವಳಿಕೆ ಇರಬೇಕೆಂದು…

Read More

ಕೊಡಗಿನ ಚಿತ್ರ ಶಿಲ್ಪ ಕಲಾವಿದ ಶ್ರೀ ಬಿ. ಕೆ. ಗಣೇಶ್ ರೈ ಯವರ ಶಿಲ್ಪಕಲಾ ವೃತ್ತಿ ಜೀವನದ ೫೦ನೇ ವರ್ಷ ಸುವರ್ಣ ಮಹೋತ್ಸವಕ್ಕೆ ಕಲಾನಗರ ಸಾಂಸ್ಕöÈತಿಕ ವೇದಿಕೆ ಮಡಿಕೇರಿ ಇವರಿಂದ ಹುಟ್ಟೂರ ಸನ್ಮಾನ, “ಚಿತ್ರಶಿಲ್ಪ ಕಲಾ ತಪಸ್ವಿ” ಬಿರುದು ಪ್ರದಾನ, ೫೦ ವರ್ಷಗಳ ಹೆಜ್ಜೆ ಗುರುತುಗಳನ್ನು ದಾಖಲಿಸಿರುವ “ಕಲಾದರ್ಪಣ” ಅಭಿನಂದನಾ ಗ್ರಂಥ ಸಮರ್ಪಣೆ… ಕೊಡಗಿನ ಮಡಿಕೇರಿಯವರಾಗಿರುವ ಚಿತ್ರ ಶಿಲ್ಪ ಕಲಾವಿದ ಹಾಗೂ ಕ್ರಿಯಾತ್ಮಕ ಕಲಾನಿರ್ದೇಶಕರಾಗಿರುವ ಶ್ರೀ ಬಿ.ಕೆ.ಗಣೇಶ್ ರೈ ಯವರು ತಮ್ಮ ಚಿತ್ರ ಶಿಲ್ಪ ಕಲಾ ವೃತ್ತಿಯನ್ನು ೧೯೭೪ರಲ್ಲಿ ಪ್ರಾರಂಭಿಸಿ, ೨೦೨೫ಕ್ಕೆ ತಮ್ಮ ವೃತ್ತಿ ಜೀವನದ ೫೦ನೇ ವರ್ಷದ ಸುವರ್ಣ ಸಂಭ್ರಮ. ಮಡಿಕೇರಿ ಸರ್ಕಾರಿ ಜೂನಿಯರ ಕಾಲೇಜಿನ ಮಹಧ್ವಾರದ ಎರಡು ಬದಿಗಳಲ್ಲಿ ಪುಷ್ಪಾಂಜಲಿ, ಆನೆಗಳು ಉಬ್ಬುಶಿಲ್ಪ ಮತ್ತು ಸಿಂಹಗಳ ವಿಗ್ರಹಗಳನ್ನು ಮಾಡುವಲ್ಲಿ ಕಲಾವಿದರಾಗಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದರು. ಮೈಸೂರಿನ ಚಾಮರಾಜೇಂದ್ರ ಟೆಕ್ನಿಕಲ್ ಸ್ಕೂಲ್ (ಕಾವಾ) ನಲ್ಲಿ ಚಿತ್ರಕಲೆ, ಶಿಲ್ಪಕಲೆ, ಫೋಟೊಗ್ರಫಿ ಯಲ್ಲಿ ಡಿಪ್ಲೋಮಾ ಪಡೆಯುದರ ಜೊತೆಗೆ ಆರ್ಟ್ ಮಾಸ್ಟರ್ ಪದವಿಯನ್ನು…

Read More

ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಡಿ. ೩ ರಂದು ಉಡುಪಿ ಹಾಗೂ ಮಂಗಳೂರು ಜಿಲ್ಲೆಗಳ ವಿವಿಧ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳ ಪ್ರಾಂಶುಪಾಲರಿಗೆ ಮಕ್ಕಳಲ್ಲಿ ಮೌಲ್ಯಾಧಾರಿತ ಕೌಶಲ್ಯಗಳನ್ನು ಪೋಷಿಸುವುದು ಈ ವಿಷಯದ ಕುರಿತು ಸಮ್ಮೇಳನವನ್ನು ಆಯೋಜಿಸಲಾಗಿದೆ. ಬ್ರಹ್ಮಾವರದ ಲಿಟ್ಲ್ರಾಕ್ ಇಂಡಿಯನ್ ಸ್ಕೂಲ್‌ನ ನಿರ್ದೇಶಕ ಫ್ರೋ. ಮ್ಯಾಥಿವ್ ಸಿ ನೈನನ್, ಸಮ್ಮೇಳನವನ್ನು ಉದ್ಘಾಟಿಸಿ ಮುಖ್ಯ ಭಾಷಣವನ್ನು ಮಾಡಲಿದ್ದಾರೆ. ಸಿಬಿಎಸ್‌ಇ ಮಾಜಿ ನಿರ್ದೇಶಕ ಜಿ ಬಾಲಸುಬ್ರಮಣಿಯನ್ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿದ್ದು, ತಿರುಪತಿಯ ಆದಿಶಂಕರ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಟಿ ಪಿ ಶಶಿಕುಮಾರ್ ‘ಎಜ್ಯುಕೇಟ್ ಟು ಎಲಿವೇಟ್’ (ಸಾಮರ್ಥ್ಯವುಳ್ಳ ಮನಸ್ಸುಗಳು ಮತ್ತು ಕರುಣಾಳು ಹೃದಯಗಳನ್ನು ಪೋಷಿಸುವುದು), ಅಂತಾರಾಷ್ಟ್ರೀಯ ಮಟ್ಟದ ಕ್ವಿಜ್ ಮಾಸ್ಟರ್ ಗ್ರೇ ಕ್ಯಾಪ್ಸ್ ಸಂಸ್ಥಾಪಕ ಶ್ರೀ ಗಿರಿ ಬಾಲಸುಬ್ರಮಣಿಯಮ್ ಪಿಕ್‌ಬ್ರೆöನ್ ‘ಫ್ಯೂಚರ್ ಸ್ಕೂಲ್ಸ್’ (ಪಠ್ಯಕ್ರಮದ ಹೊರತಾಗಿ ಜ್ಞಾನದ ಮಹತ್ವ) ಈ ವಿಷಯಗಳ ಕುರಿತು ಪ್ರಬಂಧ ಮಂಡಿಸಲಿದ್ದಾರೆ. ಉಭಯ ಜಿಲ್ಲೆಗಳ ೮೬ ಶಾಲೆಗಳು ನೋಂದಾಯಿಸಿಕೊoಡಿದ್ದು ಪ್ರತೀ ಶಾಲೆಯಿಂದ ಪ್ರಾಂಶುಪಾಲರು, ಉಪಪ್ರಾ0ಶುಪಾಲರು…

Read More

ರೋಟರಿ ಅಂತರಾಷ್ಟ್ರೀಯ ಜಿಲ್ಲೆ ವಲಯ -5 ರ ವತಿಯಿಂದ ನಡೆದ ವಲಯ ಮಟ್ಟದ ವಾರ್ಷಿಕ ಕ್ರೀಡಾಕೂಟದಲ್ಲಿ ರೋಟರಿ ಕ್ಲಬ್ ಕಾರ್ಕಳದ ಸದಸ್ಯರು ವಿವಿಧ ಕ್ರೀಡೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ವಲಯ ಮಟ್ಟದ ಕ್ರೀಡಾ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಕ್ಲಬ್‌ನ ಮಹಿಳಾ ಹಾಗೂ ಪುರುಷ ಸದಸ್ಯರು ಅತ್ಲೇಟಿಕ್ಸ್, ವಾಲಿಬಾಲ್, ಥ್ರೋ ಬಾಲ್, ಶಟಲ್ ಬಾಡ್ಮಿಂಟನ್, ಹಗ್ಗ ಜಗ್ಗಾಟ, ಕ್ರಿಕೆಟ್, ಗುಂಡು ಎಸೆತ, ಉದ್ದ ಜಿಗಿತ, ಚೆಸ್, ಕ್ಯಾರಮ್, ಸೇರಿದಂತೆ ಹಲವು ವಿಭಾಗಗಳಲ್ಲಿ ಭಾಗವಹಿಸಿ ಅನೇಕ ಪದಕಗಳನ್ನು ಕೈ ಸೇರಿಸಿಕೊಂಡರು. ಸಮಗ್ರ ಅಂಕದಲ್ಲಿ ಅಗ್ರಸ್ಥಾನ ಪಡೆದ ಕಾರ್ಕಳ ಕ್ಲಬ್ ಈ ಬಾರಿ ವಲಯ ಮಟ್ಟದಲ್ಲಿ ಅತ್ಯುತ್ತಮ ತಂಡವಾಗಿಯೂ ಹೆಸರು ಮಾಡಿದೆ. ಕ್ಲಬ್ ಅಧ್ಯಕ್ಷರಾದ ಕೆ ನವೀನ್ ಚಂದ್ರ ಶೆಟ್ಟಿ ಅವರು ಮಾತನಾಡಿ, ಈ ಜಯ ರೋಟರಿ ಸ್ಫೂರ್ತಿ, ಒಗ್ಗಟ್ಟು, ಶಿಸ್ತಿನ ಪ್ರತಿರೂಪ. ಸದಸ್ಯರ ತಯಾರಿ, ಕ್ರೀಡಾಸ್ಫೂರ್ತಿ ಹಾಗೂ ತಂಡಾತ್ಮಕತೆ ನಮ್ಮ ಕ್ಲಬ್‌ಗೆ ಈ ಗೌರವ ತಂದುಕೊಟ್ಟಿವೆ ಎಂದು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ವಲಯ ಅಧಿಕಾರಿಗಳು,…

Read More

ಯಕ್ಷಗಾನ ಕರಾವಳಿಯ ಶ್ರೀಮಂತ ಕಲೆ. ಹಿಂದಿನಿಂದಲೂ ಕಲಾವಿದರು, ಸಂಘಟಕರು ಹಾಗೂ ಕಲಾ ಸಂಸ್ಥೆಗಳ ಪರಿಶ್ರಮದಿಂದ ಅದು ಬೆಳೆದು ಬಂದಿದೆ. ಇಂದಿನ ಬಹು ಮಾಧ್ಯಮಗಳ ನಡುವೆ ತಾಂತ್ರಿಕ ಜಗತ್ತಿನ ಸವಾಲುಗಳನ್ನು ಎದುರಿಸಿಯೂ ಯಕ್ಷಗಾನ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಈ ದಿಸೆಯಲ್ಲಿ ಯಕ್ಷಾಂಗಣ ಸಂಸ್ಥೆ ಕಳೆದ ಹನ್ನೆರಡು ವರ್ಷಗಳಿಂದ ಯಕ್ಷಗಾನ ತಾಳಮದ್ದಳೆ ಪ್ರಕಾರಕ್ಕೆ ದೊಡ್ಡ ಮಟ್ಟದ ಕೊಡುಗೆ ನೀಡುತ್ತಾ ಬಂದಿದೆ ಎಂದು ದ.ಕ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ. ರವಿರಾಜ ಹೆಗ್ಡೆ ಹೇಳಿದರು. ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿ.ವಿ ಡಾ| ದಯಾನಂದ ಪೈ, ಶ್ರೀ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಮತ್ತು ಕರ್ನಾಟಕ ಯಕ್ಷ ಭಾರತಿ (ರಿ) ಪುತ್ತೂರು ಇವರ ಸಹಯೋಗದೊಂದಿಗೆ ನವೆಂಬರ್ 23 ರಿಂದ 29 ರವರೆಗೆ ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಜರಗಿದ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮದ ‘ಯಕ್ಷಗಾನ ತಾಳಮದ್ದಳೆ – 2025’ ಹದಿಮೂರನೇ ವರ್ಷದ…

Read More

ಸಿನಿಮಾದ ಟ್ರೇಲರ್ ನಂತೆ ಕೃತಿಯ ಸಮೀಕ್ಷೆ ಇರಬೇಕು. ಸಮೀಕ್ಷೆಯಿಂದ ಕೃತಿಯನ್ನು ಓದುವ ಕೂತೂಹಲ, ಇಡೀ ಪುಸ್ತಕವನ್ನು ಓದಿಯೇ ಬಿಡಬೇಕೆಂದು ಅನಿಸಬೇಕು. ಕೃತಿಯ ಭವಿಷ್ಯ ಪತ್ರಕರ್ತರ ಕೈಯಲ್ಲಿರುತ್ತದೆ. ಇಂತಹ ಕೃತಿ ಸಮೀಕ್ಷೆಗಳಿಂದ ಸಾಹಿತಿಗಳಿಗೆ ಪ್ರೊತ್ಸಾಹ ಕೊಟ್ಟಂತಾಗುತ್ತದೆ. ಅವರಿಂದ ಹೊಸ ಕೃತಿಗಳು ಬರಲು ಸಹಾಯಕವಾಗುತ್ತದೆ ಎಂದು ಸೃಜನಾ ಮುಂಬಯಿ ಕನ್ನಡ ಲೇಖಕಿಯರ ಬಳಗದ ಸಂಚಾಲಕಿ ಪದ್ಮಜಾ ಮಣ್ಣೂರ ಅವರು ಅಭಿಪ್ರಾಯ ಪಟ್ಟರು. ಅವರು ಸೃಜನಾ ಬಳಗದ ಆಶ್ರಯದಲ್ಲಿ ನವೆಂಬರ್ 29 ರಂದು ಮೈಸೂರು ಅಸೊಸಿಯೇಷನ್ ನ ಸಭಾಗೃಹದಲ್ಲಿ ಸಂಜೆ 5.30 ಕ್ಕೆ ಜರುಗಿದ ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ ಪ್ರಕಟಿಸಿದ ಒಂಬತ್ತು ಕೃತಿಗಳ ಸಮೀಕ್ಷಾ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಒಂಬತ್ತು ಲೇಖಕಿಯರು ಉತ್ತಮ ರೀತಿಯಲ್ಲಿ ಕೃತಿಗಳನ್ನು ಪರಿಚಯಿಸಿದರು. ಕಾರ್ಯಕ್ರಮವು ಸಾರ್ಥಕವಾದಂತೆ ಎನಿಸಿತು ಎಂದು ಸಂತೋಷ ಪಟ್ಟರು. ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನದ ಗೌ. ಕಾರ್ಯದರ್ಶಿ ವಿಶ್ವನಾಥ್ ದೊಡ್ಡಮನೆ ಮಾತನಾಡುತ್ತಾ, 23 ವರ್ಷದ ಸೃಜನಾ ಬಳಗ ಹಾಗೂ 16 ವರ್ಷದ ಮಯೂರವರ್ಮ ಪ್ರತಿಷ್ಠನಾ ಒಟ್ಟಾಗಿ ಮಾಡಿದ…

Read More

ಮಕ್ಕಳು ಕೇವಲ ಓದು ಮತ್ತು ಅಂಕಗಳು ಎಂದು ಕಳೆದು ಹೋಗದೇ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮದಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಬೇಕು. ಮಕ್ಕಳು ತಮ್ಮ ಪ್ರತಿಭೆಯನ್ನು ಹೊರ ಹಾಕಲು ಇದೊಂದು ಅತ್ಯುತ್ತಮ ವೇದಿಕೆಯಾಗಿದೆ ಎಂದು ಶಾಸಕ ಎ. ಕಿರಣ್ ಕುಮಾರ್‌ ಕೊಡ್ಗಿ ಅವರು ಹೇಳಿದರು. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ, ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ ಮತ್ಯಾಡಿಯ ಸಹಭಾಗಿತ್ವದಲ್ಲಿ ಇತ್ತೀಚೆಗೆ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ ನ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ ಮಾತನಾಡುತ್ತಾ, ಹಿಂದೆ ಪ್ರತಿಭೆ ಇದ್ದರೂ ಅವಕಾಶಗಳು ಸಿಗುತ್ತಿರಲಿಲ್ಲ. ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ತೋರಲು ಒಂದು ಅತ್ಯುತ್ತಮ ವೇದಿಕೆಯಾಗಿದೆ. ಇದನ್ನು ಮಕ್ಕಳು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಸ್ಪರ್ಧೆಯಲ್ಲಿ ಗೆಲ್ಲುವುದಕ್ಕಿಂತ ಭಾಗವಹಿಸುವಿಕೆ ತುಂಬಾ ಮುಖ್ಯ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಕುಂದಾಪುರದ…

Read More