Author: admin
ಆಳ್ವಾಸ್ ಕಾಲೇಜಿನ ನಿರ್ವಹಣಾ ವಿಭಾಗವು (ಬಿಬಿಎ) ಕಾಲೇಜಿನ ಐಕ್ಯೂಎಸಿ ಅಡಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮವುವನ್ನು ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಂಡಿತ್ತು. ವಿಭಾಗದ ಹಿರಿಯ ವಿದ್ಯಾರ್ಥಿ ಹಾಗೂ ಉದ್ಯಮಿ ವರುಣ್ರಾಜು ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳು ಶೂನ್ಯ ಅನುಭವದಿಂದ ಆರಂಭಿಸುವುದು ಸಹಜ. ಆದರೆ ಶೂನ್ಯದಿಂದ ಆರಂಭಿಸುವುದು ಮುಖ್ಯವಲ್ಲ, ಮೌಲ್ಯಯುತ ಅನುಭವಗಳಿಂದ ಜೀವನ ರೂಪಿಸಿಕೊಳ್ಳುವುದು ಅಗತ್ಯ. 2015ರಲ್ಲಿ ನಾನು ಈ ಸಂಸ್ಥೆಗೆ ಸೇರಿದಾಗ ಸಂವಹನ ಕೌಶಲ್ಯವೂ ಸೇರಿದಂತೆ ಅನೇಕ ವಿಷಯಗಳಲ್ಲಿ ಆತ್ಮವಿಶ್ವಾಸದ ಕೊರತೆ ಇತ್ತು. ಆದರೆ ಅವಕಾಶಗಳನ್ನು ಸ್ವೀಕರಿಸಿ, ತೊಡಗಿಸಿಕೊಳ್ಳುವುದರ ಮೂಲಕ ಜೀವನಕ್ಕೆ ದೊಡ್ಡ ತಿರುವು ಲಭಿಸಿತು. ಅವಕಾಶಗಳನ್ನು ಕೈಬಿಟ್ಟರೆ, ನಾವು ಅದೇ ಸ್ಥಾನದಲ್ಲೇ ಉಳಿಯುತ್ತೇವೆ. ಆದರೆ ಅವಕಾಶಗಳನ್ನು ಸ್ವೀಕರಿಸಿ ತೊಡಗಿಸಿಕೊಂಡಾಗ, ಜೀವನಕ್ಕೆ ಹೊಸ ಅರ್ಥ ದೊರೆಯುತ್ತದೆ. ಅಲ್ಲಿ ಸವಾಲುಗಳಿರುತ್ತವೆ, ವೈಫಲ್ಯಗಳಿರುತ್ತವೆ, ಆದರೆ ಆ ವೈಫಲ್ಯಗಳೇ ಜೀವನಕ್ಕೆಅನುಭವ, ಅನುಭವವೇ ಜ್ಞಾನ, ಮತ್ತು ಜ್ಞಾನವೇ ಯಶಸ್ಸಿನ ಮಾರ್ಗ ತೋರಿಸುತ್ತದೆ ಎಂದರು. ಜರ್ಮನಿಯಲ್ಲಿ ಉದ್ಯೋಗದಲ್ಲಿರುವ ಇನ್ನೊರ್ವ ಹಿರಿಯ ವಿದ್ಯಾರ್ಥಿನಿ ವಂದನಾ ಮಾತನಾಡಿ, ಕಾರ್ಪೊರೇಟ್ ಜೀವನಕ್ಕೂ ವಿದ್ಯಾರ್ಥಿ ಜೀವನಕ್ಕೂ ಬಹಳಷ್ಟು…
ಯಕ್ಷಗಾನ ಕಲೆಯನ್ನು ಬೆಳೆಸುವ ನಿಟ್ಟಿನಲ್ಲಿ ಸಂರಕ್ಷಣೆ, ಸಂವರ್ಧನೆ ಮತ್ತು ವಿಸ್ತರಣೆ ಮಾಡಿ ಮುಂದಿನ ಜನಾಂಗಕ್ಕೆ ನೀಡುವ ಹೊಣೆಗಾರಿಕೆ ನಮ್ಮ ಮೇಲಿದೆ. ಯಕ್ಷಗಾನದ ಗುಣಮಟ್ಟ ಮತ್ತು ಸೌಂದರ್ಯವನ್ನು ವರ್ಧಿಸುವ ಕೆಲಸವನ್ನು ತಿರುಗಾಟಕ್ಕೆ ಹೊರಟ ಸೂಡ ಮೇಳ ನಡೆಸುತ್ತಿದ್ದು, ಕಲಾವಿದರಿಗೆ ಉತ್ತಮ ವೇದಿಕೆ ಒದಗಿಸಿ, ಜನರಿಗೆ ಕಲಾ ಸಂಸ್ಕಾರ ನೀಡುವ ಪ್ರಯತ್ನ ಮಾಡಿದೆ ಎಂದು ಪ್ರಸಿದ್ಧ ಯಕ್ಷಗಾನ ಅರ್ಥಧಾರಿ ಮತ್ತು ಬಹುಶ್ರುತ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಶಿ ಹೇಳಿದರು. ಸೂಡ ಮಯೂರ ವಾಹನ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ದಶಮ ಸಂಭ್ರಮ, ಸಪ್ತಾಹ ಮತ್ತು 10ನೇ ವರ್ಷದ ತಿರುಗಾಟ ಶುಭಾರಂಭ ಸಂದರ್ಭ ಸೂಡ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶಿರ್ವ ಕೋಡು ಜಯಶೀಲ ಹೆಗ್ಡೆ ಮೇಳದ ಸಂಚಾಲಕ ಮತ್ತು ಭಾಗವತ ಸೂಡ ಹರೀಶ್…
ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಾರ್ಷಿಕೋತ್ಸವ ಆವಿರ್ಭವವು “ಸಿಂದೂರ ಸಂಭ್ರಮ” ಪರಿಕಲ್ಪನೆಯಲ್ಲಿ ಡಿಸೆಂಬರ್ 4, 5, 6 ರಂದು ಅದ್ದೂರಿಯಾಗಿ ಜರುಗಿತು. 4 ಡಿಸೆಂಬರ್ 2025 ರಂದು ಕ್ರಿಯೇಟಿವ್ ಯಕ್ಷಾರಾಧನಮ್ ಹವ್ಯಾಸಿ ಕಲಾವಿದರಿಂದ ‘ಶ್ರೀರಾಮಾನುಗ್ರಹ ಸಿಂದೂರ ವಿಜಯ’ ಯಕ್ಷಗಾನ ಪ್ರದರ್ಶನ ನಡೆಯಿತು. 5 ಡಿಸೆಂಬರ್ 2025 ರಂದು ದಿ. ಎಚ್.ಎಸ್ ವೆಂಕಟೇಶಮೂರ್ತಿಯವರ ಸವಿ ನೆನಪಿನ ಕುರಿತ ‘ಭಾವ ನಮನ’ ಭಾವಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು. ಖ್ಯಾತ ನಿರೂಪಕ ಅವಿನಾಶ್ ಕಾಮತ್ ರವರು ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವಿವಿಧ ಸ್ಪರ್ಧಾವಳಿಗಳ ಬಹುಮಾನ ವಿತರಣಾ ಕಾರ್ಯಕ್ರಮ ಜರುಗಿತು. ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ರವರು ಪ್ರಾಸ್ತಾವಿಕ ನುಡಿಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು. ಉದ್ಘಾಟಕರಾಗಿ ಆಗಮಿಸಿದ ಡಾ| ಜಿ. ರಾಮಕೃಷ್ಣ ಆಚಾರ್, ಸ್ಥಾಪಕರು ಎಸ್.ಕೆ.ಎಫ್ ಎಲಿಕ್ಸರ್ ಇಂಡಿಯಾ ಮತ್ತು ಸಂಜೀವಿನಿ ಗೋಧಾಮ ಮುನಿಯಾಲು ಇವರು ಮಾತನಾಡಿ, ಕಾಲೇಜುಗಳು ಬರಿಯ ಪಠ್ಯದ ಅಭ್ಯಾಸ ನೀಡುವ ಸ್ಥಳವಲ್ಲ. ವಿದ್ಯಾರ್ಥಿಗಳ ಸಾಮರ್ಥ್ಯವನ್ನೆತ್ತಿ ಹಿಡಿಯುವ ವೇದಿಕೆಗಳಾಗಬೇಕು. ಅಂತಹ ವೇದಿಕೆಗಳನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿ ಕೊಡುತ್ತಿರುವ…
ಬಹರೈನ್ ಬಂಟರ ಸಂಘ ಹಾಗೂ ಕನ್ನಡ ಸಂಘದ ಸಹಯೋಗದಲ್ಲಿ ಹಿರಿಯ ಸದಸ್ಯ ದಿವಂಗತ ದಿನಕರ್ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಭೆ
ಕನ್ನಡ ಸಂಘ ಬಹರೈನ್ ನ ಹಿರಿಯ ಸದಸ್ಯ ದಿವಂಗತ ದಿನಕರ್ ಶೆಟ್ಟಿ ಯು.ಎಂ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಭೆ ನಡೆಯಿತು. ಅವರು ಕಳೆದ ನವೆಂಬರ್ 30 ರಂದು ಅಲ್ಪಕಾಲದ ಅಸೌಖ್ಯದಿಂದ ವಿಧಿವಶರಾದರು. ಈ ಸಂದರ್ಭ ಕನ್ನಡ ಸಂಘ ಮತ್ತು ಬಂಟರ ಸಂಘ ಅವರ ಸಹಯೋಗದಲ್ಲಿ ಕನ್ನಡ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಳೆದ ಶನಿವಾರ ಡಿಸೆಂಬರ್ 6, 2025 ರಂದು ಕನ್ನಡ ಭವನ ಕ್ರೀಡಾ ಕೇಂದ್ರದಲ್ಲಿ ದಿವಂಗತ ದಿನಕರ್ ಶೆಟ್ಟಿಗೆ ಗೌರವ ಸಲ್ಲಿಸಲಾಯಿತು. ಸಂಘದ ಸದಸ್ಯರು, ಆತ್ಮೀಯರು ಮತ್ತು ಸಮುದಾಯದ ಪ್ರಮುಖರು ಹಾಜರಾಗಿ ತಮ್ಮ ಶೋಕವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಸಂಘದ ಅಧ್ಯಕ್ಷ ಅಜಿತ್ ಬಂಗೇರ, ಬಂಟ್ಸ್ ಬಹರೈನ್ ಅಧ್ಯಕ್ಷ ಡಾ. ಮಿಥುನ್ ಭಂಡಾರಿ, ಕನ್ನಡ ಸಂಘದ ಮಾಜಿ ಅಧ್ಯಕ್ಷರುಗಳಾದ ಅಮರನಾಥ್ ರೈ, ಪ್ರದೀಪ್ ಕುಮಾರ್ ಶೆಟ್ಟಿ, ರಾಜೇಶ್ ಶೆಟ್ಟಿ, ಸದಸ್ಯರಾದ ನಾಗೇಶ್ ಶೆಟ್ಟಿ, ಕಮಲಾಕ್ಷ ಅಮೀನ್, ಪ್ರದೀಪ್ ಆರ್. ಶೆಟ್ಟಿ ಮತ್ತು ಉಪಾಧ್ಯಕ್ಷ ನಿತಿನ್ ಶೆಟ್ಟಿ ನುಡಿನಮನ ಸಲ್ಲಿಸಿದರು. ಹಿರಿಯ ಹಾಗೂ…
ಹೊಸ ಬಾಟಲಿಯಲ್ಲಿ ಹಳೆಯ ಮದಿರೆ (Old wine in a new bottle) ಅಂದರೆ ಹಳೆಯ, ಸಾಂಪ್ರದಾಯಿಕ ಅಥವಾ ಬದಲಾಗದ ಏನನ್ನಾದರೂ ತಾಜ, ಹೊಸ ರೀತಿಯಲ್ಲಿ ಪ್ರಸ್ತುತಪಡಿಸುವುದು. ಉದಾಹರಣೆಗೆ, ಪ್ರಸಿದ್ಧ ಐವತ್ತು ವರ್ಷಕ್ಕೂ ಮಿಕ್ಕಿದ ಸ್ನಾನದ ಸಾಬೂನಿನ ಹೊದಿಕೆ (wrapper) ಆಗಾಗ್ಗೆ ಮಾರ್ಕೆಟಿಂಗ್ ಅಥವಾ ಆಕರ್ಷಣೆಗಾಗಿ ಬದಲಿಸುತ್ತಾ ಬಂದಿದ್ದಾರೆ. ಆದರೆ ಮೂಲ ವಸ್ತು ಸಾಬೂನು ಮೊದಲಿನದ್ದೇ ಆಗಿರುತ್ತದೆ. ಈ ಮಾತಿಗೆ ವ್ಯತಿರಿಕ್ತವಾಗಿ, ಚಿತ್ರದಲ್ಲಿ ತೋರಿಸಿರುವುದು, ಹೊಸ ಮದಿರೆ, ಹೊಸ ಬಾಟಲಿಯಲ್ಲಿ. ಅದರೊಂದಿಗೆ ಕಸ್ತಾನ್ಯೆ (Castagne ಅಂದರೆ chestnut). ಹೊಸ ಮದಿರೆಯನ್ನು ನೋವೆಲ್ಲೋ (Novello, New) ಅನ್ನುತ್ತಾರೆ ಇಟಾಲಿಯನ್ ನಲ್ಲಿ. ಶರದ್ ಋತುವಿನ (autumn) ಮಧ್ಯಭಾಗದಲ್ಲಿ ಹೊಸ ಮದಿರೆಗಳು ಮಾರುಕಟ್ಟೆಗೆ ಬರುತ್ತವೆ. ಕೆಲವೇ ಕೆಲವು ಬಾಟಲಿಗಳಷ್ಟೇ, ಯಾಕೆಂದರೆ ಮದಿರೆ ವಿಶೇಷವಾಗಿ ಕೆಂಪು ಮದಿರೆ ಹಳೆಯದಾದಂತೆ ಅದರ ರುಚಿ ಚೆನ್ನಾಗಿರುತ್ತದೆ, ಬೆಲೆಯೂ ಏರುತ್ತದೆ. ಇದೇ ಕಾಲಕ್ಕೆ ಅಂದರೆ ಚಳಿಗಾಲಕ್ಕೆ ಮುನ್ನ ಈ ಕಸ್ತಾನ್ಯೆ ಇಲ್ಲಿನ ಹಾಡಿಗಳಲ್ಲಿ ಹೇರಳವಾಗಿ ಸಿಗುತ್ತವೆ. ಇದನ್ನು ನಾವು ಗೆಣಸು ಯಾ…
ಸವಣೂರು ಬೊಳ್ಳಿ ಬೊಲ್ಪು ತುಳುಕೂಟದ ಅಧ್ಯಕ್ಷ, ಹಿಂದೂ ಜಾಗರಣ ವೇದಿಕೆ ಪುತ್ತೂರು ನಗರದ ಮಾಜಿ ಗೌರವಾಧ್ಯಕ್ಷ, ಹಿರಿಯ ಧಾರ್ಮಿಕ ಮುಂದಾಳು ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು (72 ವ)ರವರು ಡಿಸೆಂಬರ್ 7 ರಂದು ನಿಧನರಾದರು. ಮೃತರು ಪತ್ನಿ ರಮಾ ಪ್ರಕಾಶ್ಚಂದ್ರ ರೈ, ಪುತ್ರ ಕೆಪಿಟಿಸಿಎಲ್ ನಲ್ಲಿ ಉನ್ನತ ಅಧಿಕಾರಿಯಾಗಿರುವ ಶಶಾಂಕ್ ರೈ, ಸೊಸೆ ಇಂಚರ ರೈ, ಸಹೋದರ ಕುಂಜಾಡಿ ಪ್ರಪುಲ್ಲಚಂದ್ರ ರೈ, ಸಹೋದರಿಯರಾದ ಸುಪ್ರಭಾ ರೈ, ಲತಾ ಶೆಟ್ಟಿ ಹಾಗೂ ಸುಧಾ ಶೆಟ್ಟಿ ಅವರನ್ನು ಅಗಲಿದ್ದಾರೆ.
ವಿದ್ಯಾರ್ಥಿಗಳಿಗೆ ಸ್ಪಷ್ಟವಾದ ಗುರಿ ಇರಬೇಕು. ಸ್ಪಷ್ಟತೆ ಇದ್ದಾಗ ಮಾತ್ರ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಹೇಳಿದರು. ಕುಂದಾಪುರದ ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿಪೂರ್ವ ಕಾಲೇಜಿನ ‘ಕಂಪ್ಯೂಟರ್ ಲ್ಯಾಬ್’ ಉದ್ಘಾಟಿಸಿ ಮಾತನಾಡಿದ ಅವರು, ಅತ್ಯುತ್ತಮ ವಿದ್ಯಾರ್ಥಿಯಾಗಬೇಕು ಎಂಬ ಛಲ ಇಟ್ಟುಕೊಳ್ಳಿ. ನಿಮ್ಮ ತಂದೆ ತಾಯಿಗೆ ಒಳ್ಳೆಯ ಮಕ್ಕಳಾಗಿ. ಶಾಲೆಗೆ ಕೀರ್ತಿ ತರುವಂಥ ವಿದ್ಯಾರ್ಥಿಗಳಾಗಿ. ಹಾಗೆಯೇ ದೇಶದ ಉತ್ತಮ ಪ್ರಜೆಗಳಾಗಿ ಎಂದು ಕಿವಿಮಾತು ನುಡಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಈ ಕಂಪ್ಯೂಟರ್ ಲ್ಯಾಬ್ ನ ಸದುಪಯೋಗಪಡಿಸಿಕೊಂಡು ಉತ್ತಮವಾದ ಭವಿಷ್ಯ ಕಟ್ಟಿಕೊಳ್ಳಬೇಕು ಎಂದು ಆಶಿಸಿದರು. ವೇದಿಕೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಟಿ.ಎ.ಪಿ.ಎಂ.ಎಸ್ ನ ಉಪಾಧ್ಯಕ್ಷ ಶರತ್ ಶೆಟ್ಟಿ, ಅಂಪಾರು ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಪ್ರದೀಪ್ ಶೆಟ್ಟಿ, ನಿರಮಯಾ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ…
ನೋಡಲಿಕ್ಕೆ ನಟಿಸುವರು, ನೀನೇ ಎನ್ನ ಆತ್ಮೀಯ ಬಂಧು, ಆದರೆ ಗೊತ್ತಿಲ್ಲದಂತೆ ನಮ್ಮನ್ನೇ ತಿವಿದು ಕೊಂದು. ತಿಳಿಯಬೇಕಾಗಿದೆ ನಿಜಾರ್ಥದಲ್ಲಿ ನಮಗೆ ನಾವೇ ಬಂಧು!. ಪ್ರಸಿದ್ಧ ಕವಿ ಶ್ರೀಯುತ ನಿಸಾರ್ ಅಹಮದ್ ಅವರ ಒಂದು ಹಾಡಿನ ಸಾಲು ಹೀಗಿದೆ… “ಒಳಗೊಳಗೆ ಬೇರು ಕೊಯ್ದು, ಲೋಕದೆದುರು ನೀರು ಹೊಯ್ದು, ನನ್ನ ಸಲಹುವ ನಿಮ್ಮ ಕಪಟ ಗೊತ್ತಿದ್ದರೂ ಗೊತ್ತಿಲ್ಲದಂತೆ ನಟಿಸಿ ಚಕಾರವೆತ್ತದೆ ನಿಮ್ಮೊಡನೆ ಕಾಫಿ ಹೀರಿ, ಪೇಪರ್ ಓದಿ ಹರಟಿ ಬಾಳ ತಳ್ಳುವುದಿದೆ ಅದು ಬಹಳ ಕಷ್ಟದ ಕೆಲಸ…” ಎಂದು. ಇದು ಇಂದಿನ ಹೆಚ್ಚಿನ ಎಲ್ಲರ ಬದುಕಿನ ಸಮಸ್ಯೆ. ಇದು ಮನೆ, ಆಫೀಸು, ಸಹೋದ್ಯೋಗಿ, ಶಾಲೆ, ಕಾಲೇಜು ಎಂದು ಭೇದವೇ ಇಲ್ಲದೆ ನಡೆಯುತ್ತಿದೆ. ಪರಸ್ಪರ ತಿಳಿದು ಮಿತ್ರತ್ವದಲ್ಲಿ ಒಪ್ಪಿ ನಡೆದರೆ ಅದು ಅವರ ವೈಯಕ್ತಿಕ ವಿಚಾರ. ಆದರೆ ಒತ್ತಾಯದಿಂದ, ಬಾಸಿಸಮ್ ತಂತ್ರದಿಂದ, ಬ್ಲ್ಯಾಕ್ ಮೇಲೆ ಮಾಡಿ, ಬೇರೆ ದಾರಿಯೇ ತೋಚದಂತೆ ಮಾಡಿ ಎಲ್ಲವನ್ನೂ ದೋಚಿ ಗೋಳೊಯಿಸಿಕೊಳ್ಳುವ ಕೆಲವಾರು ಮಂದಿ ಇಡೀ ಸಮಾಜದ ಸ್ವಾಸ್ಥ್ಯವನ್ನೇ ಕೆಡಿಸಿ ಸಾಕಷ್ಟು ಹನಿಟ್ರಾಪ್…
ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಮತ್ತು ಕನ್ನಡ ಭಾಷೆಯಲ್ಲಿ ಅತ್ಯಧಿಕ ಪ್ರದರ್ಶನ ಕಂಡಿದೆ. ಪ್ರಥಮ ದಿನವೇ 1020 ಪ್ರದರ್ಶನಗಳನ್ನು ಕಂಡು ದಾಖಲೆ ಬರೆದಿದ್ದು, ಅಲ್ಲದೇ 25 ದಿನಗಳನ್ನು ಪೂರೈಸಿದೆ. ಜೈ ಸಿನಿಮಾ ಡಿಸೆಂಬರ್ 14 ರಂದು ಮುಂಬಯಿಯಲ್ಲಿ ಪ್ರದರ್ಶನಗೊಳ್ಳಲಿದೆ. ಮುಂಬಯಿಯಲ್ಲಿ ಇತಿಹಾಸದಲ್ಲೇ ಅತೀ ದೊಡ್ಡ ತುಳು ಪ್ರೀಮಿಯರ್ ಒಂದೇ ದಿನ 9 ಟಾಕೀಸ್ ಗಳಲ್ಲಿ 25 ಕ್ಕೂ ಹೆಚ್ಚು ಶೋ ನಡೆಯಲಿದೆ. ಈಗಾಗಲೇ ಸಿನಿಮಾ ತೆರೆಕಂಡ ಎಲ್ಲಾ ಕಡೆ ಅದ್ಬುತ ಪ್ರದರ್ಶನ ಕಂಡು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಮಂಗಳೂರಿನಲ್ಲಿ ಸತತ ನಾಲ್ಕು ವಾರಗಳ ಪ್ರದರ್ಶನದಲ್ಲಿ ಉತ್ತಮ ಮೊತ್ತವನ್ನು ಕಲೆ ಹಾಕಿದೆ. ಸಿನಿಮಾದ ಡಬ್ಬಿಂಗ್ ರೈಟ್ಸ್, ಆಡಿಯೋ ರೈಟ್ಸ್ ಮತ್ತು ಪ್ರೀಮಿಯರ್ ಶೋ ಸೇರಿ ದೊಡ್ಡ ಮಟ್ಟದಲ್ಲಿ ಚಿತ್ರ ತಂಡಕ್ಕೆ ಹಣ ಸಂಗ್ರಹವಾಗಿದೆ. ಸಿನಿಮಾವನ್ನು ಜನರು ನೋಡಿ ಮೆಚ್ಚಿಕೊಂಡಿದ್ದಾರೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ಮನೆಮಂದಿ ಎಲ್ಲಾ ಇಷ್ಟ ಪಡುವುದರ ಜೊತೆಗೆ ಶಾಲಾ ಮಕ್ಕಳು ಕೂಡಾ…
ರಾಮಾಯಣ ಮಹಾಭಾರತಗಳಲ್ಲಿ ಬರುವ ಎರಡು ರಾಕ್ಷಸಿ ಪಾತ್ರಗಳಿವು. ಇವೆರಡರ ನಡುವಿನ ಸಾಮ್ಯತೆ ಇಬ್ಬರೂ ಪುರುಷಾಕರ್ಷಣೆಗೆ ಒಳಗಾದವರು. ಆದರೆ ಇಬ್ಬರಿಗೆ ಸಿಕ್ಕ ಫಲ ಬೇರೆ ಬೇರೆ. ಅದಕ್ಕೆ ಕಾರಣವೂ ಇಲ್ಲದ್ದಿಲ್ಲ. ಒಬ್ಬಾಕೆಯದು ಕಾಮವಾದರೆ ಇನ್ನೊಬ್ಬಳದು ನಿಜವಾದ ಪ್ರೇಮ. ಶೂರ್ಪನಖಿ ಮೊದಲು ರಾಮನನ್ನ ಬಯಸಿ ಆತ ತನ್ನ ಪತಿಯಾಗಬೇಕು ಅಂತ ಬಯಸುತ್ತಾಳೆ. ಬರಿಯ ಬಯಕೆ ಪ್ರೇಮವಾದೀತೇ? ಆದರೆ ಆಕೆ ರಾಮನ ಪತ್ನಿಯಾಗುವಲ್ಲಿ ಸೀತೆ ತನ್ನ ಪಾಲಿನ ಮುಳ್ಳಾದಾಗ ಅವಳನ್ನ ತನ್ನ ಮಾರ್ಗದಿಂದ ಸರಿಸಲು ಯೋಚಿಸುತ್ತಾಳೆ. ಅಲ್ಲಿಗೆ ಆಕೆಯ ಪ್ರೇಮ ಇನ್ನೊಂದು ಆಯಾಮ ಪಡೆದುಕೊಂಡಂತಾಗುತ್ತದೆ. ಪ್ರೇಮವೆಂದರೆ ಯಾಚಿಸಬೇಕು. ಯಾಚನೆಯೇ ಪ್ರಮುಖವಾಗಬೇಕಿತ್ತು. ಆದರೆ ತನ್ನ ಪಾಲಿನ ಮುಳ್ಳು ಅಂತೆಲ್ಲಾ ಯೋಚಿಸುವಲ್ಲಿ ಆಕೆಗೆ ರಾಮನನ್ನು ಪಡೆಯಲೇಬೇಕು ಎನ್ನುವ ಹಠವೇ ಪ್ರಾಮುಖ್ಯವಾಗಿ ಬಿಟ್ಟಿತು. ರಾಮನೋ ಇದನ್ನರಿತು ನನ್ನಂತೆ ಇರುವ ಲಕ್ಷ್ಮಣನನ್ನ ಕೇಳು ಅಂದಾಗ ಆಕೆ ಮರು ಮಾತಿಲ್ಲದೆ ಲಕ್ಷ್ಮಣನ ಬಳಿ ಸಾಗುತ್ತಾಳೆ. ಅಂದರೆ ರಾಮನೇ ಬೇಕಿಲ್ಲ. ಅವನಂತಿರುವ ಗಂಡು ಯಾರಾದರೂ ಆದೀತು. ಇದರ ಅರ್ಥ ಆಕೆಯದು ಪ್ರೇಮವಲ್ಲ ಕಾಮ. ಅದೂ…















