Author: admin
ಮೂಡುಬಿದಿರೆ: ಶಿಕ್ಷಣದಿಂದ ವ್ಯಕ್ತಿ ಹಾಗೂ ವ್ಯಕ್ತಿತ್ವ ನಿರ್ಮಾಣ ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ ಎಲ್ ಧರ್ಮ ನುಡಿದರು. ಅವರು ಬುಧವಾರ ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮ ‘’ಆಳ್ವಾಸ್ ಆಗಮನ 2024’’ ವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಕೌಶಲ್ಯ ಬಹಳ ಅವಶ್ಯಕ. ಅದರ ಜೊತೆ ಜೊತೆಗೆ ಇನ್ನೊಬ್ಬರನ್ನು ಪ್ರೀತಿಯಿಂದ ಕಾಣುವ ಮನಸ್ಥಿತಿ ಮೂಡಬೇಕು. ಈ ಆಗಮನ ಕಾರ್ಯಕ್ರಮದ ಮೂಲಕ ನಿಮ್ಮೊಳಗೆ ಹುದುಗಿರುವ ಆದಮ್ಯ ಚೇತನವನ್ನು ಉದ್ದೀಪನಗೊಳಿಸುವ ಕೆಲಸವಾಗಬೇಕಿದೆ. ಪ್ರತಿಯೊಬ್ಬರಲ್ಲೂ ಪ್ರತಿಭೆ ಅಡಗಿದೆ. ಈ ವೇದಿಕೆಯ ಮೂಲಕ ನಿಮ್ಮೊಳಗಿನ ಪ್ರತಿಭೆಯ ಅನಾವರಣದ ಜೊತೆಗೆ ಮಾನವೀಯ ಮೌಲ್ಯಗಳು ಇನ್ನಷ್ಟು ವೃದ್ಧಿಸಲಿ. ಧೈರ್ಯಶಾಲಿಗಳಾಗಿರಿ, ನಿಮ್ಮ ಸುತ್ತಮುತ್ತಲಿನವರನ್ನು ಪ್ರೀತಿಸಿ, ಹೆತ್ತ ತಂದೆ ತಾಯಿ, ಶಿಕ್ಷಕರನ್ನು ಗೌರವಿಸಿ. ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹತ್ವದ ಕೊಡುಗೆ ನೀಡುತ್ತಾ ಬಂದಿರುವ ಇಂಜಿನಿಯರಿಂಗ್ ಕ್ಷೇತ್ರ, ಕೇವಲ ಅವಿಷ್ಕಾರಕ್ಕೆ ಮಾತ್ರ ಸೀಮಿತವಾಗದೆ, ಒಬ್ಬ ಅದ್ಭುತ ಶಿಕ್ಷಕನನ್ನು ರೂಪಿಸುವ ಕೆಲಸವಾಗಬೇಕಿದೆ. ನಾನು ನನ್ನದು ಎಂಬ…
ಕರ್ನಾಟಕ ಸಂಘ ಕತಾರ್ ತನ್ನ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿಗಾಗಿ ‘ಶಿಕ್ಷಕರ ದಿನ’ವನ್ನು ದೋಹಾದ ವೈಬ್ರೆಂಟ್ ಇಂಡಸ್ಟ್ರಿಯಲ್ ಸೇಫ್ಟಿ ಸೆಂಟರ್ ನಲ್ಲಿ ಆಯೋಜಿಸಿತು. ಸಂಘ ಸ್ಥಾಪನೆಯ 25ನೇ ವರ್ಷಾಚರಣೆ ಹಿನ್ನಲೆಯಲ್ಲಿ 25 ಸದಸ್ಯ ಶಿಕ್ಷಕರನ್ನು ಗೌರವಿಸಲಾಯಿತು. ಸಂಘವು ಆಯೋಜಿಸಿದ ವಾರಾಂತ್ಯದ ಭಾಷಾ ತರಗತಿಗಳನ್ನು ಸ್ವಯಂ ಪ್ರೇರಿತವಾಗಿ ನಡೆಸುತ್ತಿರುವ ಕನ್ನಡ ಶಿಕ್ಷಕರನ್ನೂ ಇದೇ ವೇಳೆ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಇಂಡಿಯನ್ ಕಲ್ಚರಲ್ ಸೆಂಟರ್ ನ ಅಧ್ಯಕ್ಷ ಮಣಿಕಂಠನ್ ಎ.ಪಿ, ಬ್ರಿಲಿಯಂಟ್ ಇಂಡಿಯನ್ ಇಂಟರ್ನ್ಯಾಷನಲ್ ಸ್ಕೂಲ್ ನ ಪ್ರಾಂಶುಪಾಲೆ ಆಶಾ ಶಿಜು ಭಾಗವಹಿಸಿದ್ದರು. ಕೇಂದ್ರದ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು, ಸಲಹಾ ಮಂಡಳಿ ಅಧ್ಯಕ್ಷ ಮಹೇಶ್ ಗೌಡ, ಸಲಹಾ ಮಂಡಳಿ ಅಧ್ಯಕ್ಷರಾದ ಮನ್ನಂಗಿ ಅರುಣ್ ದೀಪಕ್ ಶೆಟ್ಟಿ ಮಧು, ಡಾ. ಸಂಜಯ್ ಕುದರಿ, ಕರ್ನಾಟಕ ಮೂಲದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಕತಾರ್ ನ ವಿವಿಧ ಅಂತರಾಷ್ಟ್ರೀಯ ಶಾಲೆಗಳ ಶಿಕ್ಷಕರು, ಕರ್ನಾಟಕ ಸಂಘದ ಸದಸ್ಯರು ಹಾಗೂ ಮತ್ತಿತರರು ಈ…
ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಸೆಪ್ಟೆಂಬರ್ 20 ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ, ಬೆಂಗಳೂರು ವಿ.ವಿ. ಗೌರವ ಡಾಕ್ಟರೇಟ್ ಪುರಸ್ಕೃತರಾದ ಡಾ| ಗುರುಕಿರಣ್ ಶೆಟ್ಟಿಯವರು ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಹಿರಿಯ ಛಾಯಾಚಿತ್ರಗ್ರಾಹಕ ಯಜ್ಞ ಮಂಗಳೂರು ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್ ಉಪಸ್ಥಿತರಿರುವರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲೈಫ್ ಇನ್ವೆಸ್ಟ್ ಮೆಂಟ್ ಪ್ಲಾನ್ ವಿಭಾಗ ಮಂಗಳೂರು ಇದರ ವತಿಯಿಂದ ಉತ್ತಮ ಕೈಗಾರಿಕಾ ಉದ್ಯಮಿ ಎಂಬ ಪುರಸ್ಕಾರವನ್ನು ಮುಂಬಯಿಯ ಖ್ಯಾತ ಉದ್ಯಮಿ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಅವರಿಗೆ ಉಡುಪಿಯ ಕಚೇರಿಯಲ್ಲಿ ನೀಡಲಾಯಿತು. ಎಸ್ ಬಿ ಐ ಲೈಪ್ ಕರ್ನಾಟಕ ವಲಯ ಬೆಂಗಳೂರು ಕೇಂದ್ರ ಕಚೇರಿ ರಿಜನಲ್ ಮ್ಯಾನೇಜರ್ ಪ್ರಕಾಶ್ ದುರ್ಗದಮಠ್, ಮಂಗಳೂರು ಕೇಂದ್ರ ಕಚೇರಿ ಡಿವಿಜನಲ್ ಮ್ಯಾನೇಜರ್ ಪ್ರಕಾಶ್ ಅಚಾರ್ಯ, ಎಲ್ ಎನ್ ಡಿ ಮ್ಯಾನೇಜರ್ ವನಿತಾ ರಾವ್, ವಿವೇಕ್ ಅಧಿಕಾರಿ ಆನಂದ್, ಅಶ್ವಿನಿ ಪಿ ಶೆಟ್ಟಿ ಮಧ್ಯ, ಪುಷ್ಷರಾಜ್ ಶೆಟ್ಟಿ ಮಧ್ಯ ಮುಂತಾದವರು ಉಪಸ್ಥಿತರಿದ್ದರು.
ಕ್ರಿಯಾಶೀಲ ಜನಪ್ರತಿನಿಧಿಗಳಿಂದ ಬದಲಾವಣೆ ಸಾಧ್ಯ ಎನ್ನುವುದಕ್ಕೆ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ನೇತೃತ್ವದಲ್ಲಿ ನಡೆಯುತ್ತಿರುವ ಬೈಂದೂರು ಉತ್ಸವ ಸಾಕ್ಷಿಯಾಗಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ನವೆಂಬರ್ 1ರಿಂದ 3ರ ವರೆಗೆ ಬೈಂದೂರಿನ ಗಾಂಧೀ ಮೈದಾನದಲ್ಲಿ ಆಯೋಜಿಸಿರುವ ಬೈಂದೂರು ಉತ್ಸವ 2024ರ ಅಧೀಕೃತ ಲಾಂಛನವನ್ನು ಸೋಮವಾರ ಬೈಂದೂರಿನ ಶ್ರೀ ಸೇನೇಶ್ವರ ದೇವಸ್ಥಾನದ ಆವರಣದಲ್ಲಿ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮೃದ್ಧ ಬೈಂದೂರು ಮೂಲಕ ಬೈಂದೂರು ಕ್ಷೇತ್ರದ ಭಾಷೆ, ಕಲೆ, ಸಂಸ್ಕೃತಿಯನ್ನು ಇಡೀ ಜಗತ್ತು ನೋಡಬೇಕು ಎನ್ನುವ ಕಾರಣಕ್ಕೆ ನಡೆಯುವ ಬೈಂದೂರು ಉತ್ಸವಕ್ಕೆ ಹೆಚ್ಚು ಮಹತ್ವ ಪಡೆದುಕೊಳ್ಳಲಿದೆ ಎಂದರು.ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಮಾತನಾಡಿ, ಬೈಂದೂರು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವ ಕ್ಷೇತ್ರ. ಬೈಂದೂರು ಉತ್ಸವದಲ್ಲಿ ರಾಜ್ಯದಲ್ಲಿಯೇ ಕುಗ್ರಾಮವಾಗಿದ್ದ ಬೈಂದೂರು ಕ್ಷೇತ್ರ ಕಳೆದ 15 ವರ್ಷಗಳಿಂದ ಅಭಿವೃದ್ಧಿಯತ್ತ ಸಾಗುತ್ತಿದೆ. ಕುಂದಾಪ್ರ ಭಾಷೆಗೆ ಕಿರೀಟವಿದ್ದಂತೆ ನಮ್ಮ ಗ್ರಾಮೀಣ ಕಲೆ, ಸಂಸ್ಕೃತಿಗಳನ್ನು ಪ್ರತಿಬಿಂಬಸುವುದಕ್ಕಾಗಿ ಬೈಂದೂರು ಉತ್ಸವ ಸಜ್ಜಾಗುತ್ತಿದೆ. ಈ ಕಾರ್ಯಕ್ರಮದ ಬೆನ್ನೆಲುಬಾಗಿ ಸಂಸದ ಬಿ.ವೈ. ರಾಘವೇಂದ್ರ ಅವರ…
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪದವಿ ಮಾನವಿಕ ವಿಭಾಗದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ತಂಡ ವಿಟ್ಲದ ಕನ್ಯಾನದ ಭಾರತ ಸೇವಾಶ್ರಮ ಟ್ರಸ್ಟ್ಗೆ ಭೇಟಿ ನೀಡಿದರು. ಭಾರತ ಸೇವಾಶ್ರಮ ಟ್ರಸ್ಟ್ನ ಮುಖ್ಯಸ್ಥ ಈಶ್ವರ್ ಭಟ್ ಮಾತನಾಡಿ, ಸೇವಾಹಿ ಪರಮೋ ಧಮರ್ಃ ಎಂಬ ಸಾಲು ಸೇವೆಯೇ ಧರ್ಮಗಳಲ್ಲಿ ಶ್ರೇಷ್ಠ ಎಂದು ಸಾರುತ್ತದೆ. ವಿದ್ಯಾರ್ಥಿಗಳಿಗೆ ಪಾಲಕರ ಮಹತ್ವವನ್ನು ವಿವರಿಸಿದ ಅವರು, ಎಂದೂ ಹೆತ್ತ ತಂದೆ ತಾಯಿಯನ್ನು ಅನಾಥರನ್ನಾಗಿಸಬೇಡಿ. ಕಳೆದ 60 ವರ್ಷಗಳಿಂದ ಭಾರತ ಸೇವಾಶ್ರಮವನ್ನು ನಡೆಸಿಕೊಂಡು ಬರುತ್ತಿದ್ದೇವೆ. ಈ ಆಶ್ರಮದಲ್ಲಿರುವ ಹೆಚ್ಚಿನ ವೃದ್ಧರ ಮಕ್ಕಳು ಉತ್ತಮ ಸ್ಥಿತಿವಂತರು. ಆದರೆ ತಮ್ಮ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿರುವುದು ದುರಾದೃಷ್ಟಕರ ಎಂದರು. ಈ ಆಶ್ರಮದಲ್ಲಿ ಅನಾಥ ಮಕ್ಕಳಿಗೆ, ಅನಾಥರಿಗೆ, ವೃದ್ಧರಿಗೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, 250ಕ್ಕೂ ಅಧಿಕ ಜನರಿಗೆ ಆಶ್ರಯ ನೀಡಲಾಗಿದೆ ಎಂದರು. ವಿದ್ಯಾರ್ಥಿಗಳಿಗೆ ಸೇವಾಶ್ರಮದ ಹುಟ್ಟಿನ ಬಗೆ, ಆಶ್ರಮ ಬೆಳೆದು ಬಂದ ಹಾದಿಯನ್ನು ತಿಳಿಸಿದರು. ನಿವಾಸಿಗಳ ಮನೊರಂಜನೆಗಾಗಿ ವಿದ್ಯಾರ್ಥಿಗಳು ವಿವಿಧ ಚಟುವಟಿಕೆ ಹಾಗೂ ನೃತ್ಯ, ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಿದರು.…
ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ 2024 ಆಳ್ವಾಸ್ ಸ್ಪೋಟ್ರ್ಸ್ ಕ್ಲಬ್ಗೆ 46 ಪದಕ
ಮೂಡುಬಿದಿರೆ: ಮೈಸೂರು ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ (ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್ನ ಕ್ರೀಡಾಪಟುಗಳಿಗೆ 22 ಚಿನ್ನ, 08 ಬೆಳ್ಳಿ, 16 ಕಂಚು ಒಟ್ಟು 46 ಪದಕಗಳು, 2 ನೂತನ ಕೂಟ ದಾಖಲೆ ಹಾಗೂ 2 ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದರಲ್ಲಿ ಆಳ್ವಾಸ್ ಸ್ಪೋಟ್ರ್ಸ್ ಕ್ಲಬ್ನ ಕ್ರೀಡಾಪಟುಗಳು ಮಹತ್ವದ ಕೊಡುಗೆಯನ್ನು ನೀಡಿರುತ್ತಾರೆ. ಆಳ್ವಾಸ್ ಸ್ಪೋಟ್ರ್ಸ್ ಕ್ಲಬ್ನಿಂದ ಒಟ್ಟು 87 ಕ್ರೀಡಾಪಟುಗಳು ಭಾಗವಹಿಸಿದ್ದರು. ಆಳ್ವಾಸ್ ಸ್ಪೋಟ್ಸ್ ಕ್ಲಬ್ ಕಳೆದ 16 ವರ್ಷಗಳಿಂದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡು ಬಂದಿರುತ್ತದೆ. ಸಮಗ್ರ ಚಾಂಪಿಯನ್ಸ್ ಪಟ್ಟ ಪಡೆದ ದಕ್ಷಿಣ ಕನ್ನಡ ಜಿಲ್ಲೆಯು 402 ಅಂಕಗಳಿಂದ ಪ್ರಥಮ ಸ್ಥಾನ ಪಡೆದರೆ, ಬೆಂಗಳೂರು ನಗರ 242 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆಯಿತು. ಆಳ್ವಾಸ್ನ ಆಕಾಶ ಹುಕ್ಕೇರಿ (80 ಮೀ ಅಡೆತಡೆ ಓಟ), ನಾಗೇಂದ್ರ ಅಣ್ಣಪ್ಪ ನಾಯ್ಕ…
ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಸುರತ್ಕಲ್ ಶಾಖೆಯ ನವೀಕೃತ ಶಾಖಾ ಕಛೇರಿಯನ್ನು ಹರುಷ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಕೆ. ಜೈರಾಜ್ ಬಿ. ರೈಯವರು ದಿನಾಂಕ 12.09.2024ರಂದು ಉದ್ಘಾಟಿಸಿ ಸಂಘದ ಅಭಿವೃದ್ಧಿಗೆ ಸಹಕರಿಸಿದ ಎಲ್ಲಾ ಸದಸ್ಯ ಗ್ರಾಹಕರಿಗೆ ಹೆಚ್ಚಿನ ಅನೂಕೂಲಗಳನ್ನು, ಸೌಲಭ್ಯಗಳನ್ನು ಒದಗಿಸುವುದು ಸಂಘದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸುರತ್ಕಲ್ ಶಾಖಾ ಕಛೇರಿಯನ್ನು ಆಧುನೀಕರಿಸಿ, ಹವಾನಿಯಂತ್ರಿತ ಸೌಲಭ್ಯಗಳೊಂದಿಗೆ ನವೀಕರಿಸಿ ಗ್ರಾಹಕರ ಸೇವೆಗೆ ಅರ್ಪಿಸಲಾಗಿದೆ. ಸಂಘವು ಸದಸ್ಯರ ಸಹಕಾರದಿಂದ ರೂ.1,000 ಕೋಟಿ ವ್ಯವಹಾರವನ್ನು ಈಗಾಗಲೇ ದಾಟಿದ್ದು, ಕಳೆದ ಆರು ವರ್ಷಗಳಿಂದ ಶೇ.25 ರಷ್ಟು ಡಿವಿಡೆಂಡನ್ನು ನೀಡುತ್ತಿದ್ದೇವೆ. ಸಂಘವು ಸಣ್ಣ ಮೊಬಲಗಿನ ರಿಟೇಲ್ ಸಾಲ ನೀಡುವಿಕೆಗೆ ಒತ್ತು ನೀಡುತ್ತಿದ್ದು, 40 ಸಾವಿರಕ್ಕಿಂತ ಹೆಚ್ಚು ಸಾಲಗಾರ ಗ್ರಾಹಕರಿದ್ದಾರೆ. ಸಾಲ ವಸೂಲಾತಿ ಅತ್ಯುತ್ತಮವಾಗಿದ್ದು, ಕಳೆದ 17 ವರ್ಷಗಳಿಂದ ನೆಟ್ ಎನ್.ಪಿ.ಎ. ಶೂನ್ಯ ಪ್ರಮಾಣದಲ್ಲಿದೆ. ಸಂಘದ ಈ ಎಲ್ಲಾ ಸಾಧನೆಗೆ ಸಹಕರಿಸುತ್ತಿರುವ ಎಲ್ಲಾ ಸದಸ್ಯ…
ಪುಣೆಯ ಪ್ರತಿಷ್ಠಿತ ಸಾಮಾಜಿಕ ಸೇವಾ ಸಂಸ್ಥೆಯ ಬಂಟರ ಸಂಘ ಪುಣೆಯು ಸುವರ್ಣ ಸಂಭ್ರಮವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಿದೆ. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ವಿಶ್ವದಲ್ಲಿನ ಅತ್ಯುತ್ತಮ ಬಂಟರ ಭವನಗಳ ಸಾಲಿನಲ್ಲಿ, ಅತ್ಯಂತ ಸುಂದರವಾದ ವಿನ್ಯಾಸದೊಂದಿಗೆ ಬಂಟರ ಭವನ ಪುಣೆ ಬಂಟರ ಪ್ರತಿಷ್ಠೆಯ ಪ್ರತೀಕದಂತೆ ಕಂಗೊಲಿಸುತ್ತಿದೆ. ಪುಣೆ ಬಂಟರ ಸಂಘ ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸಿದೆ. ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಸಂಘದ ಸುವರ್ಣ ಮಹೋತ್ಸವದ ಕಾರ್ಯಕ್ರಮಗಳು ಶ್ರೀನಿವಾಸ ಕಲ್ಯಾಣೋತ್ಸವದ ಮೂಲಕ ಪ್ರಾರಂಭವಾಗಿವೆ. ನವೆಂಬರ್ 30 ರಂದು ನಡೆಯಲಿರುವ ಸುವರ್ಣ ಮಹೋತ್ಸವ ಮಹಾ ಸಂಭ್ರಮ ಮತ್ತು ಅದಕ್ಕೆ ಪೂರಕವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಜನಪರ ಸೇವೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸುವ ಸಂಕಲ್ಪವನ್ನು ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಮತ್ತು ಸಮಿತಿಯ ಎಲ್ಲಾ ಪದಾಧಿಕಾರಿಗಳು ಮಾಡಿರುತ್ತಾರೆ. ಇದಕ್ಕಾಗಿ ಸುವರ್ಣ ಮಹೋತ್ಸವ ಸಮಿತಿಯನ್ನು ರಚಿಸಿ ಆ ಮೂಲಕ ಕಾರ್ಯಕ್ರಮಗಳು ನಡೆಯಲಿವೆ. ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಖ್ಯಾತ ಕೈಗಾರಿಕೊದ್ಯಮಿ, ಪುಣೆ ಕನ್ನಡ…
ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ನವ್ಯಾ ಶೆಟ್ಟಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಮತ್ತು ಸೈಂಟ್ ಜೋಸೆಫ್ ಶಾಲೆ ಆಯೋಜಿಸಿದ ತಾಲೂಕು ಮಟ್ಟದ ತ್ರೋ ಬಾಲ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವಳು ಪ್ರಭಾಕರ ಶೆಟ್ಟಿ ಮತ್ತು ಪ್ರೇಮ ದಂಪತಿಗಳ ಮಗಳಾಗಿದ್ದು ಪ್ರಸ್ತುತ 8ನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಇವಳನ್ನು ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ, ಟ್ರಸ್ಟ್ ನ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಶಾಲೆಯ ಮುಖ್ಯ ಶಿಕ್ಷಕ ಪ್ರದೀಪ್ ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿನಿಗೆ ಪ್ರಶಂಸಿಸಿ ಶುಭ ಹಾರೈಸಿದ್ದಾರೆ. ಶಾಲೆಯ ದೈಹಿಕ ಶಿಕ್ಷಣ ವಿಭಾಗದ ಶಿಕ್ಷಕರಾದ ಸತೀಶ್, ಸೂರ್ಯ ಹಾಗೂ ಜಯಲತಾ ವಿದ್ಯಾರ್ಥಿನಿಗೆ ಮಾರ್ಗದರ್ಶನ ಮಾಡಿರುತ್ತಾರೆ.